ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಉತ್ತಮ ಆರೋಗ್ಯಕ್ಕೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ: ಸಚಿವ ದರ್ಶನಾಪುರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಉತ್ತಮ ಆರೋಗ್ಯಕ್ಕೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ: ಸಚಿವ ದರ್ಶನಾಪುರ
Latest News

ಉತ್ತಮ ಆರೋಗ್ಯಕ್ಕೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ: ಸಚಿವ ದರ್ಶನಾಪುರ

Satyakam NewsDesk
Last updated: 2024/12/02 at 2:07 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ಪರಿಪೂರ್ಣ ವಿದ್ಯಾರ್ಥಿಯಾಗಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕ-ಮಾನಸಿಕ ಉತ್ತಮ ಆರೋಗ್ಯಕ್ಕೆ ಕಡ್ಡಾಯ ರೂಡಿ‌ ಮಾಡಿಕೊಳ್ಳಬೇಕೇಂದು ಜಿಲ್ಲಾ ಉಸ್ತುವಾರಿ‌ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ‌ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸೋಮವಾರ ಆಯೋಜಿಸಿದ್ದ “ಕಲಬುರಗಿ ವಿಭಾಗ ಮಟ್ಟದ 14/17 ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಥ್ರೋಬಾಲ್ ಕ್ರೀಡಾಕೂಟ” ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಗಳಲ್ಲಿ ಸೋಲು,ಗೆಲುವು ಮುಖ್ಯವಲ್ಲ, ಭಾಗವಹಿಸಿ ಗುರಿ ಮುಟ್ಟುವ ಉದ್ದೇಶವಿರಬೇಕೆಂದರು. ಹಿಂದುಳಿದ‌ ಜಿಲ್ಲೆಯೆಂಬ ಹಣೆಪಟ್ಟಿ ಅಳಿಸಲು ವಿದ್ಯಾರ್ಥಿಗಳು ಓದು ಮತ್ತು ಕ್ರೀಡೆಗಳನ್ನು ಸಮನಾಗಿ ಸ್ವೀಕರಿಸಿದಾಗ ಮಾತ್ರ ಸಾಧ್ಯವಾಗುತ್ತದೆ.‌ ಇಂದು ಕ್ರೀಡಾಕ್ಷೇತ್ರ ವ್ಯಾಪಕವಾಗಿ ಬೆಳೆದಿದೆ. ಇಲ್ಲಿಯೂ ಸಾಧನೆ ಮಾಡುವ ಮೂಲಕ ತಮ್ಮ ಜೀವನ ರೂಪಿಸಿಕೊಂಡು ಜಿಲ್ಲೆಯ ಮತ್ತು ದೇಶದ ಕೀರ್ತಿ ವಿಶ್ವವ್ಯಾಪಿ ಪಸರಿಸಬಹುದೆಂದು ಸಚಿವರು ಬಹು ಮಾರ್ಮಿಕವಾಗಿ ಹೇಳಿದರು.

ದೇಶಿ ಕ್ರೀಡೆಗಳಿಗೆ ಸರ್ಕಾರಗಳು ಈಗ ಹೆಚ್ಚು ಉತ್ತೇಜನ ನೀಡುತ್ತಿವೆ. ನಮ್ಮ ಭಾಗದ ಕ್ರೀಡೆಗಳಾದ ಕೋಕೋ, ಕಬ್ಬಡಿ, ಕುಸ್ತಿ, ಕೇರಂ, ಬಿಲ್ಲುಗಾರಿಗೆ, ವೇಗದ ಓಟ ಹೀಗೆ ಅನೇಕ ಕ್ರೀಡೆಗಳಲ್ಲಿ ಮಕ್ಕಳು ತಮ್ಮ ಸಾಧನೆ ಮೆರೆಯಬೇಕು.ಕ್ರೀಡಾ ಕ್ಷೇತ್ರದಲ್ಲಿ ಪರಿಪೂರ್ಣ ಪರಿಣತಿ ಹೊಂದಿದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸಚಿವರು ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಇಲ್ಲಿನ‌ ಅಧಿಕಾರಿ ಕ್ರಮ‌ ತೆಗೆದುಕೊಳ್ಳಬೇಕು, ಕ್ರೀಡಾಗಳುಗಳಿಗೆ ಯಾವುದೇ ತೊಂದರೆಯಾಗದಂತೆಯೇ ಅಚ್ಚು ಕಟ್ಟಾದ ವ್ಯವಸ್ಥೆ ಮಾಡಬೇಕೆಂದು ಸಚಿವರು ಸೂಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ನಮ್ಮ ಜಿಲ್ಲೆಯ ವಿದ್ಯಾರ್ಥಿ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಸಾಧನೆ ಮೆರೆದಿದ್ದು ನಮಗೆಲ್ಲ ಹೆಮ್ಮೆ ಎಂದರು. ಆಟ ಆಡುವಾಗ ಸ್ಪರ್ಧಾ ಮನೋಭಾವನೆ ಇರಲಿ, ನಂತರ ಎಲ್ಲರೂ ಅಣ್ಣ,ತಮ್ಮ,ಅಕ್ಕ, ತಂಗಿಯರಂತೇ ಇರಬೇಕು, ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಅನಾವರಣ ಮಾಡಬೇಕು.ಸೋಲು ಗೆಲುವಿಗೆ ಮಹತ್ವ ನೀಡದೇ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಬೇಕು.ಸೋತಾಗ ಮನನೊಂದದೇ ಧೈರ್ಯದಿಂದ ಮುಂದಿನ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಶಾಸಕರು ಹೇಳಿದರು.

ಆರಂಭದಲ್ಲಿ ಕ್ರೀಡಾಮಕ್ಕಳಿಂದ ಕವಾಯಿತು ನಡೆಯಿತು, ಕ್ರೀಡಾಜ್ಯೋತಿಗೆ ಸಚಿವರು, ಶಾಸಕರು, ಅಧಿಕಾರಿಗಳು ಸ್ವಾಗತಿಸಿಕೊಂಡರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ, ಡಿಡಿಪಿಐ ಸಿ.ಎಸ್.ಮುದೋಳ್, ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿಗಳಾದ ರಾಜು ಬಾವಿಹಳ್ಳಿ, ಡಯಟ್ ಪ್ರಾಂಶುಪಾಲ ವೃಷಬೇಂದ್ರ, ಅನೀಲಕುಮಾರ ನಾಯಕ್, ಚಂದ್ರಶೇಖರಗೌಡ ಪಾಟೀಲ್, ಅಶೋಕ ಕೆಂಭಾವಿ, ಮುಖಂಡರಾದ ಬಸರೆಡ್ಡಿ ಅನಪೂರ, ಸಿದ್ದಲಿಂಗರಡ್ಡಿ, ಬಸವರಾಜ ಪಾಟೀಲ್ ಬಿಳ್ಹಾರ್ ಸೇರಿದಂತೆಯೆ ಇತರರಿದ್ದರು.

ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು. ಕಲ್ಬುರ್ಗಿ ವಿಭಾಗದ
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಜಿಲ್ಲೆಗಳು ಸೇರಿದಂತೆಯೇ ಏಳು ಜಿಲ್ಲೆಗಳ ನೂರಾರು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟದ ತಂಡಕ್ಕೆ ಆಯ್ಕೆಯಾದ ಕೆ.ಹೊಸಳ್ಳಿ ಗ್ರಾಮ ದ ವಿದ್ಯಾರ್ಥಿ ಕೆ.ಸಿದ್ಧಾರ್ಥ ಅವರನ್ನು ಸಚಿವರು ಸನ್ಮಾನಿಸಿದರು.

apvc-iconTotal Visits: 23
apvc-iconAll time total visits: 25358

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk December 2, 2024 December 2, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ.ರಾಜೀವ್
Next Article ಸಿನಿಮಯ ರೀತಿಯಲ್ಲಿ ಕೊಲೆ ಆರೋಪಿಯ ಬಂಧನ

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube