ಶನಿವಾರ ಜಿಲ್ಲೆಗೆ ಗೃಹ ಸಚಿವರ ಆಗಮನ.?

*ಸತ್ಯಕಾಮ ವಾರ್ತೆ ಯಾದಗಿರಿ:*
ಕಳೆದ ವರ್ಷದಲ್ಲೇ ಉದ್ಘಾಟನೆಯಾಗಬೇಕಿದ್ದ ನಗರ ಪೊಲೀಸ್ ಠಾಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದೂ.?, ಇದೇ ಶನಿವಾರದಂದು ಡಾಕ್ಟರ್ ಜಿ ಪರಮೇಶ್ವರ್ ರವರು ನಗರದ ಗಾಂಧಿ ವೃತದಲ್ಲಿರುವ ನೂತನ ನಗರ ಪೊಲೀಸ್ ಠಾಣೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೂ.22ರಂದು ಜಿಲ್ಲೆಗೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಂದು ಸವ್ಯಸಾಚಿ ಡಾಕ್ಟರ್ ಜಿ ಪರಮೇಶ್ವರ್ ಯುವ ಬ್ರಿಗೇಡ್ ನ ನೂತನ ಕಛೇರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಗರ ಪೊಲೀಸ್ ಠಾಣೆಯನ್ನು ಉದ್ಘಾಟಿಸಲಿದ್ದಾರೆ, ತದನಂತರ ಗ್ರಾಮೀಣ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಗೃಹ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಬೆನ್ನಲ್ಲೇ ಬುಧವಾರ ತಡರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಾರ್ಯಕ್ರಮ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಬ್ಬಂದಿಗಳಿಗೆ ತಿಳಿಸಿದ್ದಾರೆಂದು ಮೂಲಗಳು ಖಚಿತಪಡಿಸಿವೆ..

ಇನ್ನು ಗೃಹ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಬಗ್ಗೆ ಯಾದಗಿರಿ ಪೊಲೀಸ್ ಇಲಾಖೆ ಅಧಿಕೃತವಾಗಿ ತಿಳಿಸಿಲ್ಲ.

apvc-iconPost Views: 668

Comments

Leave a Reply

Your email address will not be published. Required fields are marked *