ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ
ಇದೀಗ ಬಂದ ಸುದ್ದಿ

ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

Satyakam NewsDesk
Last updated: 2024/07/18 at 11:46 AM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ :

ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದ ಹತ್ತಿರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಮುನ್ಸೂಚನೆ ನೀಡಲಾಗುತ್ತಿದೆ ಎಂದು ನಾರಾಯಣಪೂರ ಕೃ.ಭಾ.ಜ.ನಿ.ನಿ ಅಧೀಕ್ಷಕ ಅಭಿಯಂತರರು ಅವರು ತಿಳಿಸಿದ್ದಾರೆ.

2024-25ನೇ ಸಾಲಿನ ಮುಂಗಾರು ಪ್ರಾರಂಭವಾಗಿದ್ದು, ಮಹಾರಾಷ್ಟç ರಾಜ್ಯದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಪ್ರಾರಂಭವಾಗಿರುತ್ತದೆ. ಆಲಮಟ್ಟಿ ಜಲಾಶಯದಿಂದ ನಾರಾಯಪೂರ ಜಲಾಶಯಕ್ಕೆ 40,000 ಕ್ಯೂಸೆಕ್ಸ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದೆ. 2024ರ ಜುಲೈ 16 ರಂದು ನಾರಾಯಣಪೂರ ಜಲಶಯದ ನೀರಿನ ಮಟ್ಟ 490.18 ಮೀ.ಇದ್ದು, ಜಲಾಶಯದ ನೀರಿನ ಸಂಗ್ರಹಣೆ 24.675 ಟಿಎಂಸಿ ಇರುತ್ತದೆ ಹಾಗೂ ಜಲಾಶಯಕ್ಕೆ 40,000 ಕ್ಯೂಸೆಕ್ಸ್ ನೀರಿನ ಒಳಹರಿವು ಬರುತ್ತಿದೆ.

- Advertisement -

ನಾರಾಯಣಪೂರ ಜಲಾಶಯಕ್ಕೆ ಬರುವ ನಿರೀಕ್ಷಿತ ಒಳಹರಿವಿನ ಮಾಹಿತಿಯನ್ನು ಕೇಂದ್ರ ಜಲ ಆಯೋಗ ಮೂಲಕ ಪಡೆಯಲಾಗುತ್ತಿದೆ. ಅದೇ ರೀತಿ ನಾರಾಯಣಪೂರ ಜಲಾಶಯದ ಹಿಂಭಾಗದ ಜಲಾಶಯಗಳಾದ ಆಲಮಟ್ಟಿ ಜಲಾಶಯ ಹಾಗೂ ನವಿಲು ತೀರ್ಥ ಜಲಾಶಯಗಳಿಂದ ಬಿಡಬಹುದಾದ ಹೊರಹರಿವಿನ ಮಾಹಿತಿಯನ್ನು ಸಂಬAಧಪಟ್ಟ ಅಧಿಕಾರಿಗಳಿಂದ ಮುಂಜಾಗ್ರತಾ ಕ್ರಮಕ್ಕಾಗಿ ಪಡೆಯಲಾಗುತ್ತಿದ್ದು, ಪ್ರವಾಹ ನಿಯಂತ್ರಣ ಕಾರ್ಯಕ್ಕಾಗಿ ನಾರಾಯಣಪೂರ ಜಲಾಶಯವನ್ನು ಸನ್ನದ್ಧತೆಯಲ್ಲಿ ಇಟ್ಟುಕೊಳ್ಳಲಾಗಿದೆ.

ಆಲಮಟ್ಟಿ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆಗೊಳಿಸುವ ಸಾಧ್ಯವಿರುವ ಕಾರಣ ನಾರಾಯಣಪೂರ ಜಲಾಶಯಕ್ಕೆ ಹರಿದು ಬರುವ ಒಳಹರಿವು ಪ್ರಮಾಣಕ್ಕನುಗುಣವಾಗಿ ನಾರಾಯಣಪೂರ ಜಲಾಶಯದಿಂದ ಕೆಳಭಾಗದ ಕೃಷ್ಣಾ ನದಿ ಪಾತ್ರಕ್ಕೆ ಯಾವುದೇ ಕ್ಷಣದಲ್ಲಿ ಪ್ರವಾಹದ ನೀರನ್ನು ಹರಿಬಿಡುವ ಸಾಧ್ಯತೆ ಇರುತ್ತದೆ.

ನಾರಾಯಣಪೂರ ಜಲಾಶಯದ ಕೆಳಭಾಗದ ಕೃಷ್ಣಾ ನದಿ ಪಾತ್ರದ ಪ್ರದೇಶದಲ್ಲಿರುವ ಗ್ರಾಮಗಳ ಜನರು, ರೈತರು ಜಾಗ್ರತೆಯಿಂದ ಇರಲು ಹಾಗೂ ತಮ್ಮ ಜಾನುವಾರುಗಳು, ಪಂಪ್‌ಸೆಟ್ ಇತ್ಯಾದಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿಕೊಳ್ಳಲು ಹಾಗೂ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಪ್ರವಾಹದ ಮುನ್ಸೂಚನೆ ನೀಡಲು ಸಂಬAಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲು ತಿಳಿಸಿದೆ.

ಪ್ರವಾಹ ಮುನ್ನಚ್ಚರಿಕೆ ಕ್ರಮಗಳಿಗಾಗಿ ಮನವಿ 1,00,000 ಕ್ಯೂಸೆಕ್ಸ ವರೆಗೆ ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಸುರಕ್ಷತೆಗಾಗಿ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗ್ರತೆ ನೀಡುವುದು. 1,50,000 ಕ್ಯೂಸೆಕ್ಸ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು. 2,50,000 ಕ್ಯೂಸೆಕ್ಸ ಹೂವಿನಹೆಡಗಿ ಸೇತುವೆ (ದೇವದುರ್ಗಾ-ಕಲಬುರ್ಗಿ ರಾಜ್ಯ ಹೆದ್ದಾರಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು.

- Advertisement -

 

3,00,000 ಕ್ಯೂಸೆಕ್ಸ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮ ನಡುಗಡೆಯಾಗಬಹುದು. 3,90,000 ಕ್ಯೂಸೆಕ್ಸ ಗುರ್ಜಾಪುರ ಬ್ಯಾರೇಜ್ ಹಾಗೂ ಸೇತುವೆ ಮುಳುಗಡೆಯಾಗಬಹುದು. 3,90,000 ಕ್ಯೂಸೆಕ್ಸ ಮೇಲ್ಪಟ್ಟು ಕೃಷ್ಣಾ ನದಿ ಇಕ್ಕೆಲಗಳಲ್ಲಿ ಪ್ರವಾಹ ಉಕ್ಕಿ ಹರಿಯುವುದರಿಂದ, ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಸುರಕ್ಷತೆ ಕುರಿತು ಮುನ್ನೆಚ್ಚರಿಕೆಯಿಂದಿರಲು ಸೂಚಿಸುವುದು. 5,40,000 ಕ್ಯೂಸೆಕ್ಸ್ ಯರಗೋಡಿ ಸೇತುವೆ, ಜಲದುರ್ಗಾ ಸೇತುವೆ ಮತ್ತು ಗೂಗಲ್ ಗ್ರಾಮದ ಹತ್ತಿರ ಗೂಗಲ್ ಬ್ಯಾರೇಜ್ ಮುಳುಗಡೆಯಾಗಬಹುದು. 7,50,000 ಕ್ಯೂಸೆಕ್ಸ ಸುರಪುರ ತಾಲೂಕಿನ ರಾಷ್ಟಿçÃಯ ಹೆದ್ದಾರಿಯ ತಿಂಥಣಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

apvc-iconTotal Visits: 17
apvc-iconAll time total visits: 16102

You Might Also Like

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk July 18, 2024 July 18, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಆಯೆಷಾ ಖಾನಂ ಅವರಿಗೆ ಸನ್ಮಾನ
Next Article ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ, ಈಗೇನಿದ್ದರೂ ಬರೀ ಅವಕಾಶವಾದ

Stay Connected

Facebook Like
Twitter Follow
Instagram Follow
Youtube Subscribe

Latest News

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube