ಕಾಡಂಗೇರಾ(ಬಿ) ವಿದ್ಯಾರ್ಥಿನಿ ತನುಶ್ರೀ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಸತ್ಯಕಾಮ ವಾರ್ತೆ ವಡಗೇರಾ:

ಶಹಾಪೂರ ತಾಲೂಕು ಕ್ರೀಡಾಂಗಣದಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಾಡಂಗೇರಾ)ಬಿ) ಗ್ರಾಮದ ಇಂದಿರಾಗಾಂಧಿ ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ತನುಶ್ರೀ ತಂದೆ ಕಾಂತಿಲಾಲ್ 100 ಮೀಟರ್ ಓಟದ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.

ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿನಿ ಕು.ತನುಶ್ರೀ ಅವರು ಶಾಲೆಗೆ ಕೀರ್ತಿ ತಂದಿದ್ದಕ್ಕೆ ವಿದ್ಯಾರ್ಥಿನಿಯನ್ನು ಹಾಗೂ ಕ್ರೀಡಾಪಟುಗಳಿಗೆ ಶಾಲೆಯ ಪ್ರಾಂಶುಪಾಲ ನಾಗರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ರಾಜು ರಾಠೋಡ್ ಹಾಗೂ ಶಾಲೆಯ ಎಲ್ಲ ಸಿಬ್ಬಂದಿಗಳು ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿಯೂ ವಿಜೇತರಾಗಲಿ ಎಂದು ಹಾರೈಸಿದ್ದಾರೆ.

apvc-iconPost Views: 35

Comments

Leave a Reply

Your email address will not be published. Required fields are marked *