ದೇವಾಲಯಗಳು ಶಾಂತಿ-ನೆಮ್ಮದಿ ನೀಡುವ ಪುಣ್ಯಸ್ಥಳಗಳು- ಸಿದ್ದಲಿಂಗ ಸ್ವಾಮೀಜಿ

ಸತ್ಯಕಾಮ ವಾರ್ತೆ ಗುರುಮಠಕಲ್ :

ದೇವಾಲಯಗಳು ಮನುಷ್ಯನಿಗೆ ಶಾಂತಿ, ನೆಮ್ಮದಿ ನೀಡುವ ಪುಣ್ಯಸ್ಥಳಗಳಾಗಿವೆ. ಊರಿಗೊಂದು ವನ ಹಾಗೂ ದೇವಾಲಯ ಇದ್ದರೆ, ಆ ಊರು ಸಂಪದ್ಭರಿತವಾಗುತ್ತದೆ ಎಂದು ನೇರಡಗಂನ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

 

ತಾಲೂಕಿನ ಬೋರಬಂಡಾದ ಶ್ರೀಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಕಲ್ಯಾಣೋತ್ಸವ ಹಾಗೂ ರಥೋತ್ಸವ ಉದ್ದೇಶಿಸಿ ಆಶೀರ್ವಚನ ನೀಡಿದ ಅವರರು, ಮಾನವ ಸಕಲ ಜೀವರಾಶಿಗಳನ್ನು ಶ್ರೇಷ್ಠ ಎನಿಸಿದ್ದಾನೆ. ಹೀಗಾಗಿ ಜೀವನದಲ್ಲಿ ಶ್ರದ್ಧಾಭಕ್ತಿಯಿಂದ ಕೈಗೊಂಡ ಧಾರ್ಮಿಕ ಕಾರ್ಯದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.

 

ದೇವರು ಕೊಟ್ಟಿರುವ ಅವಕಾಶವನ್ನು ಸರಿಯಾದ ರೀತಿ ಬಳಸಿಕೊಂಡು ಧರ್ಮ ಉಳಿಸುವ ಕೆಲಸ ಮಾಡಬೇಕಿದೆ ಎಂದರು. ದುಃಖ ದೂರಮಾಡಲು ದೇವರ ಪೂಜೆ ಮಾಡಬೇಕು. ಭಕ್ತನಿಗೂ ಮತ್ತು ಭಗವಂತನಿಗೂ ಸಂದಿಸುವ ಸ್ಥಳ ದೇವಾಲಯ. ಇಂಥ ಭವ್ಯ ದೇಗುಲವನ್ನು ನರೇಂದ್ರ ರಾಠೋಡ ನಿರ್ಮಾಣ ಮಾಡಿದ್ದಾರೆ. ಹೀಗೆ ಧಾಮಿರ್ಕ ಕಾರ್ಯಗಳನ್ನು ಹೆಚ್ಚೆಚ್ಚು ನಡೆಸಿ, ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಭಕ್ತಿಭಾವವನ್ನು ಹೆಚ್ಚಿಸಬೇಕು ಎಂದರು.

 

ಧಾರ್ಮಿಕ ಸೇವೆಯಲ್ಲಿ ತೊಡಗಿರುವ ದೇಗುಲ ವ್ಯವಸ್ಥಾಪಕ ನರೇಂದ್ರ ರಾಠೋಡ ಅವರ ಕುಟುಂಬ ಹಾಗೂ ಗ್ರಾಮಸ್ಥರು ವಿಜೃಂಭಣೆಯಿAದ ದೇವರ ಜಾತ್ರೆ, ದೀಪೋತ್ಸವ ಆಚರಿಸಿದ್ದು, ಸುತ್ತಲಿನ ಭಕ್ತರು ದರ್ಶನ ಪಡೆದು ಪಾವನರಾಗುತ್ತಿದ್ದಾರೆ. ಜೀವನದಲ್ಲಿ ಪರೋಪಕಾರಿ ಕಾರ್ಯದಿಂದ ಹೆಸರು ಅಮರವಾಗಲಿದೆ ಎಂದರು.

 

ಬೆಳಿಗ್ಗೆಯಿಂದಲೇ ಸುಪ್ರಭಾತ ಸೇವೆ, ಪಂಚಾಮೃತಾಭಿಷೇಕ, ಅಲಂಕಾರ ಸೇವೆ ಶ್ರೀಲಕ್ಷ್ಮೀ ತಿಮ್ಮಪ್ಪ ದೇವರ ಕಲ್ಯಾಣೋತ್ಸವ, ರಥೋತ್ಸವ ಹಾಗೂ ಉಂಜಿಲು ಸೇವೆ ಕಾರ್ಯಕ್ರಮ ನೆರವೇರಿತು.

 

ಮುರಾರಿ ಮಹರಾಜ, ಯು.ಪಿ.ಯ ಯೋಜಿ ಮಹೇಂದ್ರನಾಥ ಸ್ವಾಮಿ, ಅನೀಲ ಮಹರಾಜ, ಶಂಕರ್ ಮಹರಾಜ, ಸುರೇಶ ಮಹರಾಜ, ಸರಸ್ವತಿ ಮಾತೆ, ಶಾಂತಾ ಮಾತೆ, ಲಕ್ಷ್ಮೀಮಾತೆ, ಯಶೋಧಾ, ಧರ್ಮಿಣಿ ಮಾತೆ, ಪೂಜ್ಯ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿ, ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಸಂಗೀತಾ ಲಕ್ಷ್ಮಣ ಪವಾರ್ ಅಯ್ಯಪ್ಪ ದಾಸ್, ರಾಜು ರಾಠೋಡ, ಕರವೇ ಜಿಲ್ಲಾಧ್ಯಕ್ಷ ಭೀಮುನಾಯಕ, ಆನಂದ ಬೋಯಿನಿ, ಸಾಯಬಣ್ಣ ಹೂಗರ್, ಕಾಶಿನಾಥ್ ರಾಠೋಡ, ಶರಣು ಎಲ್ಲೇರಿ, ವಿಜಯ ಮಗ್ಗಂಪೂರ, ಮೋಹನ್, ಸುರೇಶ ಚಿನ್ನಾ ರಾಠೋಡ ಸೇರಿ ಪ್ರಮುಖರು ತಾಂಡಾ ನಿವಾಸಿಗಳು, ಸುತ್ತಮುತ್ತಲಿನ ಭಕ್ತರು ಇದ್ದರು.

apvc-iconPost Views: 16

Comments

Leave a Reply

Your email address will not be published. Required fields are marked *