ಸಾಹಿತ್ಯ ಕ್ಷೇತ್ರಕ್ಕೆ ಎಚ್ಎಸ್ವಿ ಕೊಡುಗೆ ಅಪಾರ – ಶಿವಣ್ಣ ಇಜೇರಿ

ಸತ್ಯಕಾಮ ವಾರ್ತೆ ಶಹಾಪುರ:

ಹಿರಿಯ ಸಾಹಿತಿ,ಲೇಖಕ,ಕಾದಂಬರಿಕಾರ ಡಾ.ಎಚ್.ಎಸ್ ವೆಂಕಟೇಶಮೂರ್ತಿಯವರ ಕೊಡುಗೆ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ ಶಿವಣ್ಣ ಇಜೆರಿ ಹೇಳಿದರು

ನಗರದ ಮಾತೃ ಛಾಯಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ಆಯೋಜಿಸಿದ ಇತ್ತೀಚಿಗೆ ನಮ್ಮನ್ನು ಅಗಲಿದ ನಾಡಿನ ಹೆಸರಾಂತ ಹಿರಿಯ ಸಾಹಿತಿ,ಡಾ.ಎಚ್.ಎಸ್ ವೆಂಕಟೇಶಮೂರ್ತಿ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಸಿದ್ಧಲಿಂಗಣ್ಣ ಆನೆಗುಂದಿ ಮಾತನಾಡಿ ಡಾ. ಎಚ್.ಎಸ್. ವೆಂಕಟೇಶಮೂರ್ತಿಯವರು ಗ್ರಾಮೀಣ ಪ್ರದೇಶದಿಂದ ಬಂದಂತ ಪ್ರತಿಭೆ,ಅತಿ ಹೆಚ್ಚು ಗ್ರಾಮೀಣ ಸೊಗಡಿನ ಮತ್ತು ಪರಿಸರದ ಕಾಳಜಿ ಹೊಂದಿದ್ದರು ಅಲ್ಲದೆ ಸಾಹಿತ್ಯ ರಚನೆಯ ಜೊತೆಗೆ ಸಂಗೀತ ಕ್ಷೇತ್ರಕ್ಕೂ ಸಾಕಷ್ಟು ಶ್ರಮಿಸಿದ್ದಾರೆ ಎಂದು ನುಡಿದರು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಬಸವರಾಜ ಶಿಣ್ಣೂರ ಮಾತೃ ಛಾಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ತಿಪ್ಪಣ್ಣ ಖ್ಯಾತನಾಳ,ಸಂಶೋಧಕ,ಸಾಹಿತಿ ಸಾಯಿಬಾಬಾ ಅಣಬಿ,ಪರಮಣ್ಣ ಬಡಿಗೇರ್,ಮಲ್ಲಪ್ಪ ಕಾಂಬಳೆ,ಬಾಬುರಾವ್,ಶರಣು ಕಾಡಮಗೇರ ಹಾಗೂ ಶಾಲಾ ಸಿಬ್ಬಂದಿಗಳಾದ ದಾನೇಶ್ವರಿ,ಶರಣಮ್ಮ ಜೊತೆಗೆ ಇನ್ನಿತರರು ಉಪಸ್ಥಿತರಿದ್ದರು

apvc-iconPost Views: 35

Comments

Leave a Reply

Your email address will not be published. Required fields are marked *