ಸತ್ಯಕಾಮ ವಾರ್ತೆ ಯಾದಗಿರಿ :
ನಗರದ ಹೊರ ವಲಯದ ಯರಗೋಳ ರಸ್ತೆ ಬಳಿಯ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಜು.5ರಂದು ನಡೆಯಲಿರುವ ಜನರೊಂದಿಗೆ ಜನತಾದಳ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಸುಭಾಷ್ ಚಂದ್ರ ಕಟಕಟಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯದ 110 ವಿಧಾನ ಸಭಾ ಕ್ಷೇತ್ರಗಳಲ್ಲಿ 58 ದಿನಗಳವರೆಗೆ ನಡೆಯಲಿದ್ದು, ಕಾರ್ಯಕ್ರಮ ನಂತರ ಶಹಾಪೂರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಶಾಸಕ ಶರಣಗೌಡ ಕಂದಕೂರ, ಮಾಜಿ ಸಚಿವರಾದ ಡಾ.ಎ.ಬಿ.ಮಾಲಕರಡ್ಡಿ, ಮಾಜಿ ಶಾಸಕರಾದ ಗುರು ಪಾಟೀಲ ಶಿರವಾಳ, ಜೆಡಿಎಸ್ ಜಿಲ್ಲಾ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದು ಎಲ್ಲಾ ಕಾರ್ಯಕರ್ತರು ಕಾರ್ಯಕ್ರಮ ದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ.
- Advertisement -

