ಸತ್ಯಕಾಮ ವಾರ್ತೆ ಯಾದಗಿರಿ:
ಯಾದಗಿರಿ ನೂತನ ಜಿಲ್ಲಾಧಿಕಾರಿಗಳಾಗಿ ಹರ್ಷಲ್ ಭೋಯಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಜಿಲ್ಲಾಧಿಕಾರಿಗಳಾದ ಶ್ರೀ ಹರ್ಷಲ್ ಭೋಯಾರ್ ರವರು ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ವರದಾ ಇವರ ಜನ್ಮಸ್ಥಳವಾಗಿದೆ.
ಇವರು 2016ರ ಐ.ಎ.ಎಸ್ ಬ್ಯಾಚ್ ನವರಾಗಿದ್ದಾರೆ. ಸವನೂರ್, ಚಾಮರಾಜನಗರ,ವಿಜಯನಗರ, ಸಹಾಯಕ ಆಯುಕ್ತರಾಗಿ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ, ಅಟಲ್ ಜಿ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
- Advertisement -
ನಿರ್ಗಮಿತ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಕಲ್ಬುರ್ಗಿ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

