ಸತ್ಯಕಾಮ ವಾರ್ತೆ ಯಾದಗಿರಿ:
5 ವರ್ಷದ ಪುಟ್ಟ ಬಾಲಕನ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸೀರೆಗೆ ಹಚ್ಚುವ ಪಿನ್ನಿನ ಪ್ಲಾಸ್ಟಿಕ್ ಕ್ಲಿಪ್ ವಸ್ತುವೊಂದನ್ನು ನಗರದ ನಾಯ್ಕೋಡಿ ಆಸ್ಪತ್ರೆಯ ಕಿವಿ ಮೂಗು ಗಂಟಲು ರೊಗ ತಜ್ಞ ಡಾ. ರಾಹುಲ್. ಎಸ್ ನಾಯ್ಕೋಡಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ಇಲ್ಲದೆ ಸ್ಕೋಪಿ ಮೂಲಕ ಪಿನ್ನಿನ ಪ್ಲಾಸ್ಟಿಕ್ ಕ್ಲಿಪ್ ಅನ್ನು ಯಶಸ್ವಿಯಾಗಿ ಹೊರ ತೆಗೆದು ಮಗುವಿನ ಪ್ರಾಣ ರಕ್ಷಿಸಿದ್ದಾರೆ.
ಈ ಕುರಿತ ಡಾ. ರಾಹುಲ್ .ಎಸ್ ನಾಯ್ಕೋಡಿ ಮಾತನಾಡಿ ನಮ್ಮ ಆಸ್ಪತ್ರೆಗೆ ತಾಲೂಕಿನ ಗಡ್ಡೆಸೂಗುರ ಗ್ರಾಮದ ಸಾಹೇಬರೆಡ್ಡಿ ಎಂಬುವರ ಐದು ವರ್ಷದ ಪುಟ್ಟ ಬಾಲಕ ಆಕಾಶ್ ಮನೆಯಲ್ಲಿ ಆಟವಾಡುವ ಸಮಯದಲ್ಲಿ ಪಿನ್ನಿನ ಪ್ಲಾಸ್ಟಿಕ್ ಕ್ಲಿಪ್ ನುಂಗಿದ್ದಾನೆ ಎಂದು ದಾಖಲಿಸಿದ್ದರು.
- Advertisement -

ನಾವು ಕೆಲವು ಪರೀಕ್ಷೆಗಳನ್ನು ಮಾಡುವ ಮೂಲಕ ಅದನ್ನು ಪತ್ತೆ ಹಚ್ಚಿದೆವು ಅದು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡ ಕಾರಣ ಮಗುವಿನ ಉಸಿರಾಟದ ತೊಂದರೆ ಉಂಟಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು ತಕ್ಷಣ ನಮ್ಮ ವೈದ್ಯರ ತಂಡ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಮಗುವನ್ನು ಪ್ರಾಣಪಾಯದಿಂದ ಪಾರು ಮಾಡಿದ್ದೇವೆ, ಪಾಲಕರು ಚಿಕ್ಕ ಮಕ್ಕಳ ಕೈಗೆ ಮತ್ತು ಅವರ ಮುಂದೆ ಸಣ್ಣಪುಟ್ಟ ವಸ್ತುಗಳು ನಾಣ್ಯಗಳನ್ನು ಕೊಡಬಾರದು ಮಕ್ಕಳ ಗಂಟಲಿನಲ್ಲಿ ಪ್ಲಾಸ್ಟಿಕ್ ಅಥವಾ ನಾಣ್ಯದಂತ ವಸ್ತುಗಳು ಸಿಕ್ಕಿಹಾಕಿಕೊಂಡಾಗ ಮಗುವಿನ ಪ್ರಾಣ ಹಾನಿ ಸಂಭವ ಹೆಚ್ಚು ಇರುತ್ತದೆ ಆದ್ದರಿಂದ ಪಾಲಕರು ಜಾಗೃತಿ ವಯಸುವಂತೆ ಹೇಳಿದರು.
ಈ ಒಂದು ಯಶಸ್ವಿ ಸ್ಕೋಪಿ ಚಿಕಿತ್ಸೆ ಕಾರ್ಯದಲ್ಲಿ ಡಾ. ರಾಹುಲ್ ಎಸ್.ನಾಯ್ಕೋಡಿ, ಅರವಳಿಕೆ ತಜ್ಞ ಡಾ. ಚೇತನ್ ಜೆವುರ, ಡಾ.ರಾಜೇಶ್ವರಿ ಆರ್. ನಾಯ್ಕೋಡಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಇದ್ದರು

