ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಬೆರಳಚ್ಚಿನ ಗುರುತಿನ ಮೂಲಕ ಕುಖ್ಯಾತ ಖಧೀಮನ ಸೆರೆ ಹಿಡಿದ ಪೊಲೀಸ್ ಪಡೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಬೆರಳಚ್ಚಿನ ಗುರುತಿನ ಮೂಲಕ ಕುಖ್ಯಾತ ಖಧೀಮನ ಸೆರೆ ಹಿಡಿದ ಪೊಲೀಸ್ ಪಡೆ
Crime

ಬೆರಳಚ್ಚಿನ ಗುರುತಿನ ಮೂಲಕ ಕುಖ್ಯಾತ ಖಧೀಮನ ಸೆರೆ ಹಿಡಿದ ಪೊಲೀಸ್ ಪಡೆ

ತಾಲೂಕಿನ ಗೋಗಿ ಹಾಗೂ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ಹಾಗೂ ರಾತ್ರಿ ಮನೆಗಳ್ಳತನದ ವರದಿಗಳನ್ನು ಬೆನ್ನಟ್ಟಿ ಬೆರಳಚ್ಚು ಸೇರಿದಂತೆ ವಿವಿಧ ಆಯಾಮಗಳ ಮೂಲಕ ತನಿಖೆ ಕೈಗೊಂಡು ಪ್ರಕರಣ ಭೇದಿಸಿ ನಾಲ್ಕು ಲಕ್ಷ ಹದಿನೈದು ಸಾವಿರದ ಐದುನೂರು ರೂಪಾಯಿ ನಗದು ಸೇರಿ ಹನ್ನೊಂದು ತೊಲಿ ಬಂಗಾರದ ಆಭರಣ ಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಉಪ ಅಧೀಕ್ಷಕ ಜಾವೇದ್ ಇನಾಮದಾರ ಹೇಳಿದರು.

Satyakam NewsDesk
Last updated: 2025/08/04 at 7:24 PM
Satyakam NewsDesk
Share
2 Min Read
SHARE
  • ಹನ್ನೊಂದು ತೊಲಿ ಬಂಗಾರ ಸೇರಿ ರೂ 4,15,500 ನಗದು ವಶ

ಸತ್ಯಕಾಮ ವಾರ್ತೆ ಶಹಾಪುರ : 

ತಾಲೂಕಿನ ಗೋಗಿ ಹಾಗೂ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ಹಾಗೂ ರಾತ್ರಿ ಮನೆಗಳ್ಳತನದ ವರದಿಗಳನ್ನು ಬೆನ್ನಟ್ಟಿ ಬೆರಳಚ್ಚು ಸೇರಿದಂತೆ ವಿವಿಧ ಆಯಾಮಗಳ ಮೂಲಕ ತನಿಖೆ ಕೈಗೊಂಡು ಪ್ರಕರಣ ಭೇದಿಸಿ ನಾಲ್ಕು ಲಕ್ಷ ಹದಿನೈದು ಸಾವಿರದ ಐದುನೂರು ರೂಪಾಯಿ ನಗದು ಸೇರಿ ಹನ್ನೊಂದು ತೊಲಿ ಬಂಗಾರದ ಆಭರಣ ಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಉಪ ಅಧೀಕ್ಷಕ ಜಾವೇದ್ ಇನಾಮದಾರ ಹೇಳಿದರು.

ನಗರದ ಆರಕ್ಷಕ ವೃತ್ತ ನೀರಿಕ್ಷಕ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಇತ್ತೀಚಿಗೆ  ಗೋಗಿ ಹಾಗೂ ಭೀ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಗಲು ಹಾಗೂ ರಾತ್ರಿ ಮನೆಗಳ್ಳತನ ನಡೆದ ಕುರಿತು ವರದಿಯಾಗಿದ್ದು. ಈ ಪ್ರಕರಣಗಳನ್ನು ಬೇಧಿಸಲು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಪೃತ್ವಿಕ್ ಶಂಕರ ಹಾಗೂ ಕೆ ಎಸ್ ಪಿ ಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರಣೆಶ ಹಾಗೂ ಉಪ ಅಧೀಕ್ಷಕ ಸುರಪುರ ವಿಭಾಗದ  ಜಾವೇದ್ ಇನಾಮದಾರ ಅವರ ಮಾರ್ಗದರ್ಶನದಲ್ಲಿ  ನಗರದ ಸಿಪಿಐ ಶರಣಗೌಡ ನ್ಯಾಮನ್ನವರ ಗೋಗಿ ಹಾಗೂ ಭೀ ಗುಡಿ ಪಿ ಎಸ್ ಐಗಳಾದ ದೇವಿಂದ್ರರೆಡ್ಡಿ ಹಾಗೂ ಚಂದ್ರನಾಥ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಿ ವಿವಿಧ ಆಯಾಮಗಳ ಮೂಲಕ ತನಿಖೆ ಕೈಗೊಂಡು ಗೋಗಿ ಠಾಣೆಯ ಗುನ್ನ ಸಂಖ್ಯೆ 52/2024, 48/2025, 61/2025,ಭೀ ಗುಡಿ ಠಾಣೆಯ ಗುನ್ನ ಸಂಖ್ಯೆ 02/2025 ರಲ್ಲಿ ಒಟ್ಟು ನಾಲ್ಕು ಹಗಲು ಹಾಗೂ ರಾತ್ರಿ ವೇಳೆ ಮನೆ ಗಳ್ಳತನ ಪ್ರಕರಣಗಳನ್ನು  ಭೇದಿಸಿ  ವಿಜಾಪುರ ಜಿಲ್ಲೆಯ ಅದೇ ತಾಲೂಕಿನ ಹೊನ್ನಾಳಿ ಗ್ರಾಮದ ಸಂತೋಷ ತಂದೆ ಶಿವಣ್ಣ ನಂದ್ಯಾಳನನ್ನು ದಸ್ತಗಿರಿ ಮಾಡಿ ಹನ್ನೊಂದು ತೊಲಿ ಬಂಗಾರದ ಆಭರಣಗಳೊಂದಿಗೆ 4,15,500 ರೂ ನಗದು ವಶಪಡಿಸಿಕೊಂಡು ಕ್ರಮ ಜರುಗಿಸಲಾಗಿದೆ ಎಂದರು.

ಆರೋಪಿಯ ಬೆರಳಚ್ಚು ಗುರುತಿನ ಸಹಾಯದಿಂದ ಬೆನ್ನಟ್ಟಿ ಆತನ ಚಲನವಲನಗಳನ್ನು ಹಿಂಬಾಲಿಸಿ ರಭಕವಿ ಬನಹಟ್ಟಿ, ಲಿಂಗಸೂರು,  ಸುರಪುರು ಸೇರಿದಂತೆ ಬಸ್ ನಿಲ್ದಾಣಗಳಲ್ಲಿ ಯಾರದೋ ಬಳಸಿಕೊಂಡು ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಮಾತನಾಡಿದ ವಿವರ ಸಂಗ್ರಹಿಸಿ ಲಿಂಗಸೂರಿನಲ್ಲಿ ತನ್ನ ಪತ್ನಿಯ ಫೋನ್ ಕರೆಯಿಂದ ಬಾಡಿಗೆ ವಾಹನದಲ್ಲಿ ಶಾಪಿಂಗ್ ಮಹಲಿನಲ್ಲಿ ಸಂಚರಿಸಿದ್ದ ಸಿ ಸಿ ಟಿ ವಿಗಳಲ್ಲಿ ಸೆರೆ ಸಿಕ್ಕಿದ ಚಿತ್ರಣಗಳ ಸಹಾಯದಿಂದ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದರು.

ಸದರಿ ಕಳ್ಳತನ ಅಪಾರಧ ಪ್ರಕರಣಗಳನ್ನು ಪತ್ತೆ  ಮಾಡಿದ ತಂಡದ ಸಿ ಪಿ ಐ, ಪಿ ಎಸ್ ಐ, ಹಾಗೂ ಸಿಬ್ಬಂದಿಗಳಾದ ಗೋಗಿ  ಶ್ರೀಶೈಲ್ ಸಜ್ಜನ, ದೇವಿಂದ್ರಪ್ಪ, ಭೀಮನಗೌಡ, ಬಸನಗೌಡ, ನಾಗಪ್ಪ, ಹಾಗೂ ಸೋಮಯ್ಯ ರವರನ್ನು ಜಿಲ್ಲಾ ಪೊಲೀಸ್ ಅಧಿಕ್ಷಕರು ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
apvc-iconTotal Visits: 186
apvc-iconAll time total visits: 24904

You Might Also Like

ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು

ಸೈಬರ್ ವಂಚನೆ ಕೇಸ್: ವಕೀಲರ ಖಾತೆಯಿಂದ 3.37 ಲಕ್ಷ ರೂ. ಗುಳುಂ

ಬಾವಿಯಲ್ಲಿ ಬಿದ್ದು ಮೃತಪಟ್ಟ ಬಾಲಕನ ಶವ ಪರೀಕ್ಷೆ

ಬಲವಂತದ ದೇಣಿಗೆ ಬೇಡ: ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ

ಎರಡು ಗುಂಪುಗಳ ನಡುವೆ ಹೊಡೆದಾಟ: 25 ಮಂದಿ ವಿರುದ್ಧ ಪ್ರಕರಣ

Satyakam NewsDesk August 4, 2025 August 4, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಸಮಾಜದ ಶಾಂತಿಗೆ ಪೊಲೀಸರೊಂದಿಗೆ ಸಹಕಾರ ಅಗತ್ಯ : ಎಸ್.ಪಿ ಪೃಥ್ವಿಕ್ ಶಂಕರ್
Next Article ಸಿಎಂ ಅನ್ನಭಾಗ್ಯ’ಗೆ ಪರೋಕ್ಷವಾಗಿ ಆಹಾರ ಇಲಾಖೆ ಅಧಿಕಾರಿಗಳು ಕನ್ನ.?

Stay Connected

Facebook Like
Twitter Follow
Instagram Follow
Youtube Subscribe

Latest News

ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube