ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ 

ಸತ್ಯಕಾಮ ವಾರ್ತೆ ಯಾದಗಿರಿ:

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿರುವ ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ ದಿಢೀರ್ ಭೇಟಿ ನೀಡಿ,  ಕಚೇರಿಯ ಕೆಲಸಕಾರ್ಯಗಳು ಸರಿಯಾಗಿ ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಲೋಕಾಯುಕ್ತ ಪಿಐ ರಾಜಶೇಖರ್ ಹಳಿಗೋಧಿ ಅವರ ನೇತೃತ್ವದಲ್ಲಿ ಈ ಪರಿಶೀಲನೆ ನಡೆದಿದೆ.

ಆ ಸಮಯದಲ್ಲಿ ಕಚೇರಿಯಲ್ಲಿದ್ದ ಬಾಕಿ ಉಳಿದ ಕಡತಗಳ ಪರಿಶೀಲನೆ ಕೈಗೊಳ್ಳಲಾಯಿತು. ಕೆಲ ದಾಖಲೆಗಳಲ್ಲಿ ವಿಳಂಬ ಹಾಗೂ ಅಪೂರ್ಣ ಮಾಹಿತಿಯಿರುವ ಕುರಿತು ಅಧಿಕಾರಿಗಳು ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ.

ಪರಿಶೀಲನೆ ವೇಳೆ ಸಿಬ್ಬಂದಿಗಳಾದ ಅಮರನಾಥ್, ಸಂತೋಷಮ್ಮ ಸೇರಿದಂತೆ ಇತರರು ಹಾಜರಿದ್ದರು.

apvc-iconPost Views: 163

Comments

Leave a Reply

Your email address will not be published. Required fields are marked *