ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ (ರಿ.) ವತಿಯಿಂದ ಕಲಬುರಗಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅದರಂತೆ ಆನಂದ್ ಪಿ. ಮಣ್ಣೂರ ಅವರನ್ನು ಅಧ್ಯಕ್ಷರಾಗಿ, ಚಂದ್ರಕಾಂತ್ ಹಾವನೂರ್ ಅವರನ್ನು ಉಪಾಧ್ಯಕ್ಷರಾಗಿ, ಹಾಗೂ ಶಿವಕುಮಾರ್ ತೋಟ್ನಲ್ಲಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಅವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

