ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ನೂತನ ಆಯುಕ್ತರಾಗಿ ಬಿ. ವೆಂಕಟಸಿಂಗ್ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ರೈಲು ನಿಲ್ದಾಣ ಹತ್ತಿರದ ಮಹಲ್-ಎ-ಶಾಹಿ ಅತಿಥಿಗೃಹ ಆವರಣದಲ್ಲಿರುವ ಆಯೋಗದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದ ವತಿಯಿಂದ ಆಯುಕ್ತರನ್ನು ಸನ್ಮಾನಿಸಿ ಶುಭಕೋರಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗುರುರಾಜ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಹನುಮಂತ ಬೋಧಾನ್, ಸಹ ಕಾರ್ಯದರ್ಶಿ ರುಕ್ಮಿಶ್ ಭಂಡಾರಿ, ಸದಸ್ಯ ವಿಟ್ಟಲ್ ಚಿಕಣಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ ಹಾಗೂ ವಾರ್ತಾ ಇಲಾಖೆಯ ಗ್ರಂಥಪಾಲಕ ರವಿ ಮಿರಾಸ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

apvc-iconPost Views: 10

Comments

Leave a Reply

Your email address will not be published. Required fields are marked *