ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: 20 ದಿನಗಳಲ್ಲಿ 750 ವಾಹನಗಳಿಗೆ ಆನ್ ಲೈನ್ ದಂಡ : ಎಸ್.ಪಿ ಪೃಥ್ವಿಕ್ ಶಂಕರ್ ಮಾಹಿತಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » 20 ದಿನಗಳಲ್ಲಿ 750 ವಾಹನಗಳಿಗೆ ಆನ್ ಲೈನ್ ದಂಡ : ಎಸ್.ಪಿ ಪೃಥ್ವಿಕ್ ಶಂಕರ್ ಮಾಹಿತಿ
ಯಾದಗಿರಿ

20 ದಿನಗಳಲ್ಲಿ 750 ವಾಹನಗಳಿಗೆ ಆನ್ ಲೈನ್ ದಂಡ : ಎಸ್.ಪಿ ಪೃಥ್ವಿಕ್ ಶಂಕರ್ ಮಾಹಿತಿ

Satyakam NewsDesk
Last updated: 2025/10/26 at 6:57 AM
Satyakam NewsDesk
Share
2 Min Read
SHARE

ಯಾದಗಿರಿ: ವಾಹನ ಸವಾರರು ಉಲ್ಲಂಘಿಸುವ ಸಂಚಾರ ನಿಯಮಗಳಿಗೆ ದಂಡ ಹಾಕುವ ಕೆಲಸ ಕಳೆದ ಅ.6 ರಿಂದ ನಗರದಲ್ಲಿ ಆರಂಭಿಸಿರುವ ಪೊಲೀಸರು ಕೇವಲ ಮೂರೇ ವಾರದಲ್ಲಿ ಸುಮಾರು 750 ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದ್ದಾರೆ.

ಶನಿವಾರ ತಮ್ಮ ಕಚೇರಿಯಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವ ಮತ್ತು ಮೂರು ಜನರು ಕುಳಿತು ವಾಹನಗಳನ್ನು ಚಲಾಯಿಸುವ ಸವಾರರಿಗೆ ಆನ್ ಲೈನ್ ದಂಡ ಹಾಕಲಾಗುತ್ತಿದೆ.‌ ಈ ಸಂಪರ್ಕ ರಹಿತ ದಂಡ ಹಾಕುವ ಉದ್ದೇಶವಿಷ್ಠೆ. ಮಂಡ್ಯದಲ್ಲಿ ಸಂಚಾರ ನಿಮಯ ಉಲ್ಲಂಘಿಸಿ ಹೋಗುತ್ತಿದ್ದ ಸವಾರರನ್ನು ಹಿಡಿಯಲು ಪೊಲೀಸರು‌ ಮುಂದಾದಾಗ ತಪ್ಪಿಸಿಕೊಳ್ಳಲು ಹೋಗಿ‌ ಜೀವ‌ ಕಳೆದುಕೊಂಡಿದ್ದರಿಂದ ನಮ್ಮ ನಗರದಲ್ಲಿ‌ ಸಂಪರ್ಕ ರಹಿತ ದಂಡ ವಿಧಿಸುವ ಕೆಲಸ ಮಾಡಲಾಗುತ್ತಿದೆ ಇದು‌ ಬರುವ ದಿನಗಳಲ್ಲಿ‌ ಜಿಲ್ಲೆಯ ಎಲ್ಲಡೆ ವಿಸ್ತರಿಸಲಾಗುವುದೆಂದರು.

ಜೀವಕ್ಕಿಂತ ದೊಡ್ಡದ್ದು ಏನು ಇಲ್ಲ. ಆದರೇ ನಗರ ಸೇರಿದಂತೆಯೇ ಜಿಲ್ಲೆಯಲ್ಲಿ‌ ಬಹುತೇಕ ವಾಹನ ಸವಾರರು ಸಂಚಾರಿ‌ ನಿಯಮಗಳನ್ನು ಉಲ್ಲಂಘಿಸಿಯೇ ಸಂಚರಿಸುತ್ತಾರೆ. ಇದು ಅವರ ಜೀವಗಳಿಗೆ ಅಪಾಯವಿದ್ದು, ಇದನ್ನು ತಡೆಗಟ್ಟಲು ದಂಡ ಹಾಕುವ ಮೂಲಕ ಅರಿವು‌ ಮೂಡಿಸುವ ಕೆಲಸ ನಡೆದಿದೆ. ಮುಂದೇ ಎಲ್ಲ ತರಹದ ಸಂಚಾರ ನಿಯಮಗಳನ್ನು‌ ಉಲ್ಲಂಘಿಸಿವವಿಗೂ ಈ ಆನ್ ಲೈನ್ ದಂಡ ಹಾಕಲಾಗುವುದೆಂದರು.

ಐಟಿಎಂಎಸ್ ಅಳವಡಿಕೆಗೆ ಜಿಲ್ಲೆಗೆ 2.40 ಕೋಟಿ ರೂ. ಅನುದಾನ

ಇಂಟಿಗ್ರೇಟೆಡ್‌ ಟ್ರಾಫಿಕ್ ಮ್ಯಾನೇಜ್‌ಮೆಂಟ್‌ ಸಿಸ್ಟಮ್ (ಐಟಿಎಂಎಸ್‌) ಅಳವಡಿಕೆಗೆ ರಾಜ್ಯ ಸರ್ಕಾರವು ಸಂಚಾರ ಮತ್ತು ರಸ್ತೆ ಸುರಕ್ಷತಾ ಕಮಿಷನರ್ (ಸಿಟಿಆರ್‌ಎಸ್‌) ಅಡಿ ಜಿಲ್ಲೆಗೆ 2.40 ಕೋಟಿ ಅನುದಾನ ನೀಡಿದೆ ಎಂದರು.

ಐಟಿಎಂಎಸ್‌ ಅಡಿ ಹೈ ಡೆಫಿನಿಷನ್‌ ಸಿ.ಸಿ.ಟಿ.ವಿ ಕ್ಯಾಮೆರಾ, ಅಟೊಮೇಟಿಕ್ ನಂಬರ್ ಪ್ಲೇಟ್‌ ರಿಕಗ್ನಿಷನ್ (ಎಎನ್‌ಪಿಆರ್‌), ರಸ್ತೆಗಳಲ್ಲಿ ವಾಹನಗಳ ವೇಗವನ್ನು ಮಾಪನ ಮಾಡಿ ಅಳೆಯುವ ಸ್ಪೀಡ್ ರಾಡಾರ್ ತಂತ್ರಜ್ಞಾನದ ಗನ್, ಕ್ಯಾಟ್ ಐಸ್ ಉಪಕರಣ, ಡಿಜಿಟಲ್ ಸೈನ್ ಬೋರ್ಡ್‌ಗಳಂತಹ ಸಾಧನಗಳನ್ನು ಒಳಗೊಂಡಿರಲಿದೆ. ಈ ಸಾಧನಗಳ ಮೂಲಕ ತ್ರಿಬಲ್ ರೈಡ್, ಮೊಬೈಲ್ ಬಳಸುತ್ತಾ ವಾಹನಗಳ ಚಾಲನೆ, ಮಿತಿಗಿಂತ ವೇಗವಾಗಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಸುಲಭವಾಗುತ್ತದೆ.

ಈ ಒಟ್ಟು ಅನುದಾನದಲ್ಲಿ 1.40 ಕೋಟಿ ರೂ. ಜಿಲ್ಲೆಯ ಏಳು ಕಡೆ ಐಟಿಎಂಎಸ್ ಅಳವಡಿಕೆಗೆ ಬಳಕೆಯಾಗಲಿದ್ದು. ಉಳಿದ ಒಂದು ಕೋಟಿ ರೂ.ದಲ್ಲಿ ಎಲ್ಲ ರೀತಿಯ ಸಂಚಾರಿ ಸಾಮಾಗ್ರಿಗಳನ್ನು ಖರೀದಿಸಲಾಗುವುದೆಂದು ಅವರು ಹೇಳಿದರು.

ಮಹಿಳೆಗೆ ಅವಮಾನ ಘಟನೆ – ಇಬ್ಬರ ಬಂಧನ: ಶಹಾಪುರ ತಾಲೂಕಿನ ಚಾಮನಾಳ ತಾಂಡಾ ಮಹಿಳೆಯೊಬ್ಬಳ ತಲೆಗೂದಲು ಕತ್ತರಿಸಿ ತಲೆಗೆ ಸುಣ್ಣ ಹಚ್ಚಿ ಅಮಾನುಷವಾಗಿ‌ ವರ್ತಿಸಿದ‌ ಘಟನೆಗೆ ಸಂಬಂಧಿಸಿದಂತೆಯೇ ಕೆಂಭಾವಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದ್ದಾರೆ.

apvc-iconTotal Visits: 8
apvc-iconAll time total visits: 30477

You Might Also Like

ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ 

ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ

ಗುಣಮಟ್ಟದ ಕೆಲಸದೊಂದಿಗೆ ನಿಗದಿತ ಅವಧಿಯಲ್ಲಿ ಮುಗಿಸಿ: ಶಾಸಕ ಪಾಟೀಲ್ ಸೂಚನೆ

ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

TAGGED: Online fines, Pruthvik Shankar, SP, Traffic fine, Vehicles, yadgir
Satyakam NewsDesk October 26, 2025 October 26, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಬೋಧಕ-ಸಿಬ್ಬಂದಿಗೆ ಸಂತಸದ ಸುದ್ದಿ-ತುಟ್ಟಿಭತ್ಯೆ ಶೇಕಡ 58ಕ್ಕೆ ಹೆಚ್ಚಿಸಿ ಅಧಿಕೃತ ಆದೇಶ
Next Article ಸಹಕಾರ ಕ್ಷೇತ್ರದ ಸಬಲೀಕರಣಕ್ಕೆ ಸಿಎಂ ಸೂಚನೆ: ರಾಜ್ಯದ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಮತ್ತು ಬೆಂಬಲ ಸೌಲಭ್ಯ

Stay Connected

Facebook Like
Twitter Follow
Instagram Follow
Youtube Subscribe

Latest News

ಜನರ ವಿಶ್ವಾಸ ಗೆಲ್ಲಲು ಪೊಲೀಸರಿಗೆ ಡಿಜಿಪಿ ಎಂ.ಎ.ಸಲೀಂ ಅವರ ಹೊಸ ಮಾರ್ಗಸೂಚಿ
Latest News October 26, 2025
RBI ಹೊಸ ಮಾರ್ಗಸೂಚಿ-ನ.01 ರಿಂದ ಜಾರಿಗೆ
Bank Updates Latest News October 26, 2025
ಸಹಕಾರ ಕ್ಷೇತ್ರದ ಸಬಲೀಕರಣಕ್ಕೆ ಸಿಎಂ ಸೂಚನೆ: ರಾಜ್ಯದ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಮತ್ತು ಬೆಂಬಲ ಸೌಲಭ್ಯ
Latest News October 26, 2025
ಬೋಧಕ-ಸಿಬ್ಬಂದಿಗೆ ಸಂತಸದ ಸುದ್ದಿ-ತುಟ್ಟಿಭತ್ಯೆ ಶೇಕಡ 58ಕ್ಕೆ ಹೆಚ್ಚಿಸಿ ಅಧಿಕೃತ ಆದೇಶ
Latest News October 25, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube