ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ ; ಪರಿಶೀಲನೆ
ಸತ್ಯಕಾಮ ವಾರ್ತೆ ಸಿರವಾರ:
ತಾಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ನೂಗಡೋಣಿ,ಎನ್ ಹೊಸೂರ, ಬಲ್ಲಟಗಿ,ಬಸವಣ್ಣ ಕ್ಯಾಂಪ್, ಮತ್ತು ಬಾಗಲವಾಡ ಗ್ರಾಮಗಳಲ್ಲಿನ ರಸಗೊಬ್ಬರ ಕೀಟನಾಶಕ ಮಾರಾಟ ಮಳಿಗೆಗಳಿಗೆ ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ಯರಗಲ್ ಭೇಟಿ ನೀಡಿ ದಾಸ್ತಾನು ಪರಿಶೀಲನೆ ಮಾಡಿದರು.
ರಸಗೊಬ್ಬರ ಅಗತ್ಯ ವಸ್ತುಗಳ ಕಾಯ್ದೆಯಡಿ ಬರುವುದರಿಂದ, ಹೆಚ್ಚಿನ ಧರಕ್ಕೆ ಮಾರಾಟ ಮಾಡುವುದು, ಅಕ್ರಮ ದಾಸ್ತಾನು ಮಾಡುವುದು ಕಾನೂನಿನ ಪ್ರಕಾರ ತಪ್ಪು. ಅವಧಿ ಮೀರಿದ, ಬೀಜ ಹಾಗೂ ಕೀಟನಾಶಕಗಳ ಮಾರಾಟ, ನಿಷೇಧಿತ ಬಯೋ ಕೀಟನಾಶಕಗಳ ಮಾರಾಟವನ್ನು ನಿಷೇಧಿಸಲಾಗಿದೆ. ನಿತ್ಯವೂ ದಾಸ್ತಾನು ಫಲಕ (ಸ್ಟಾಕ್ ಬೋರ್ಡ್) ಬರೆಯಬೇಕು. ತಪ್ಪದೇ ರೈತರಿಗೆ ಖರೀದಿಯ ರಶೀದಿ ನೀಡಬೇಕು ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೃಷಿ ವ್ಯವಸ್ಥಾಪಕ ನಾಗರಾಜ ಕಂಬಾರ್ ಮತ್ತು ಆಂಜನೇಯ ಕೃಷಿ ಮಿತ್ರರು ಹಾಗೂ ರೈತರು ಇದ್ದರು.

