Author: Satyakam NewsDesk

  • ತೆರಿಗೆ ಸಂಗ್ರಹಣೆಗೆ ಸಾರ್ವಜನಿಕರ ಸ್ಪಂದನೆ

    ತೆರಿಗೆ ಸಂಗ್ರಹಣೆಗೆ ಸಾರ್ವಜನಿಕರ ಸ್ಪಂದನೆ

    ತೆರಿಗೆ ವಸೂಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ನಿಶ್ಚಿತ ಗುರಿ ಸಾಧಿಸಿರುವುದು ಸ್ವಾಗತಾರ್ಹ ಕ್ರಮ

    ಯಾದಗಿರಿ :  ಜಿಲ್ಲೆಯಲ್ಲಿ ಕರವಸೂಲಾತಿಗೆ ಹಮ್ಮಿಕೊಂಡಿದ್ದ ಒಂದೇ ದಿನದಲ್ಲಿ ಕೋಟಿ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, 2025ರ ಆಗಸ್ಟ್ 12 ರಂದು 1,46,00,855 ಕೋ.ರೂ.ಗಳ ದಾಖಲೆಯ ತೆರಿಗೆ ಸಂಗ್ರಹವಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.

    ಯಾದಗಿರಿ ಜಿಲ್ಲೆಯಾದ್ಯಂತ ಒಂದೇ ದಿನ 1,46,00,855 ಕೋ.ರೂ.ಗಳ ದಾಖಲೆಯ ಹಿನ್ನೆಲೆ ಕಾಯಕವನ್ನು ಮಾಡುವಾಗ ಮನಸ್ಸು ಶುದ್ಧವಾಗಿರಬೇಕು, ಅಂದರೆ ಯಾವುದೇ ದುರುದ್ದೇಶವಿಲ್ಲದೆ, ಭಕ್ತಿಯಿಂದ ಮಾಡಿದ ಕೆಲಸಕ್ಕೆ ಯಶಸ್ಸು ಸಾಧ್ಯ ಎನ್ನುವಂತೆ ಇಂದಿನ ತೆರಿಗೆ ಸಂಗ್ರಹಣೆಯಲ್ಲಿ ನಿಷ್ಟೆಯಿಂದ, ಭಕ್ತಿಯಿಂದ ಕೆಲಸ ನಿರ್ವಹಿಸಿದ್ದಕ್ಕಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಾಯಿತು

    ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಿಸುವ ಮೂಲಕ ರಾಜ್ಯ ಮಟ್ಟದಲ್ಲಿ ತೆರಿಗೆ ಸಂಗ್ರಹಣೆಯಲ್ಲಿ ಸಾಧನೆಯ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಅಭಿಯಾನ ಪ್ರಾರಂಭಿಸಲಾಗಿತ್ತು. ಅದರಂತೆ, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎನ್.ಆರ್.ಎಲ್.ಎಮ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು ಮತ್ತು ಎಲ್ಲಾ ಸಿಬ್ಬಂದಿಗಳು ಸೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಮನವೊಲಿಸಿ ತೆರಿಗೆ ಸಂಗ್ರಹಣೆಗೆ ಸಹಕರಿಸುವಂತೆ ಕೋರಿ ಯಶಸ್ವಿಯಾಗಿದ್ದಾರೆ. ಒಂದೇ ದಿನದಲ್ಲಿ 1,46,00,855 ರೂ.ಗಳ ತೆರಿಗೆ ವಸೂಲಿಯಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ನಿಶ್ಚಿತ ಗುರಿ ಸಾಧಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ.

    2025ರ ಆಗಸ್ಟ್ 10 ರಂದು ಯಾದಗಿರಿ ಜಿಲ್ಲೆಯ ರಾಜ್ಯದ ಕರವಸೂಲಾತಿ ಪ್ರಗತಿಯಲ್ಲಿ ಕೊನೆಯ ಎರಡನೇ ಸ್ಥಾನದಲ್ಲಿತ್ತು ಆದರೆ 2025ರ ಆಗಸ್ಟ್ 12 ರಂದು ನಡೆದ ಕರವಸೂಲಾತಿಯಲ್ಲಿ ಕೋಟಿ ಅಭಿಯಾನ ಪ್ರಯುಕ್ತ ಯಾದಗಿರಿ ಜಿಲ್ಲೆ ರಾಜ್ಯದಲ್ಲಿ 20ನೇ ಸ್ಥಾನದಲ್ಲಿ ಬಂದಿರುತ್ತದೆ. ಒಟ್ಟಾರೆಯಾಗಿ ಯಾದಗಿರಿ ಜಿಲ್ಲೆಯಲ್ಲಿ ರೂ.18.74 ಕೋಟಿ ಚಾಲ್ತಿ ಬೇಡಿಕೆಗೆ ಎದುರಾಗಿ 2025ರ ಆಗಸ್ಟ್ 12 ರಂದು ಒಟ್ಟು ರೂ.4.35 (ಶೇ.23.22%) ಕೋಟಿ ತೆರಿಗೆ ವಸೂಲಿ ಮಾಡಲಾಯಿತು ಎಂದರು.

    ಯಾದಗಿರಿ ತಾಲೂಕಿ ಮುದ್ನಾಳ ಗ್ರಾಮ ಪಂಚಾಯತ 6,06,706 ರೂ.ಗಳ, ಹತ್ತಿಕುಣಿ ಗ್ರಾಮ ಪಂಚಯತ್ 5,08,571 ರೂ.ಗಳ, ಶಹಾಪೂರ ತಾಲೂಕಿನ ಉಕ್ಕಿನಾಳ 4,18,736 ರೂ.ಗಳ, ಖಾನಾಪೂರ ಗ್ರಾಮ ಪಂಚಾಯತ್3,92,257 ರೂ.ಗಳ, ಹುಣಸಗಿ ತಾಲೂಕಿನ ನಾರಾಯಣಪೂರ ಗ್ರಾಮ ಪಂಚಾಯತ್ 3,15,862 ರೂ.ಗಳ, ಕಾಮನಟಗಿ ಗ್ರಾಮ ಪಂಚಾಯತ್ 2,13,336 ರೂ.ಗಳ, ಸುರಪುರ ತಾಲೂಕಿನ ಏವೂರ ಗ್ರಾಮ ಪಂಚಾಯತ್ 3,07,768 ರೂ.ಗಳ, ಮಲ್ಲ ಬಿ 2,13,431 ರೂ.ಗಳ, ವಡಗೇರಾ ತಾಲೂಕಿನ ವಡಿಗೇರಾ 3,03,881 ರೂ.ಗಳ, ಬೆಂಡೆಬೆAಬಳಿ ಗ್ರಾಮ ಪಂಚಾಯತ್ 2,48,746 ರೂ.ಗಳ, ಗುರುಮಠಕಲ್ ತಾಲೂಕಿನ ಚಂದ್ರಿಕಿ ಗ್ರಾಮ ಪಂಚಾಯತ್ 1,73,920 ರೂ.ಗಳ, ಕಾಕಲ್ವರ್ ಗ್ರಾಮ ಪಂಚಾಯತ್ 1,71,233 ರೂ.ಗಳ, ಇದೆ. ಶಹಾಪೂರ, ಯಾದಗಿರಿ, ಸುರಪುರ, ಹುಣಸಗಿ, ವಡಗೇರಾ, ಗುರುಮಠಕಲ್ ತಾಲೂಕಿನಲ್ಲಿ ಒಟ್ಟು 1,46,11854.99 ಕೋ.ರೂ.ಗಳ ತೆರಿಗೆ ವಸೂಲಿ ಮಾಡಲಾಯಿತು.

    ಗ್ರಾಮ ಪಂಚಾಯತ್ ಅಭಿವೃದ್ಧಿಗೆ ತೆರಿಗೆಯ ಮೂಲ ಅತೀ ದೊಡ್ಡ ಶಕ್ತಿಯಾಗಿ ಪರಿಣಮಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಾರ್ವಜನಿಕರಲ್ಲಿ ತೆರಿಗೆಯ ಬಗ್ಗೆ ಮನವೊಲಿಸಿ ಯಾದಗಿರಿ ಜಿಲ್ಲೆಯು ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಬರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ತೆರಿಗೆ ಪಾವತಿಯಿಂದ ಗ್ರಾಮ ಪಂಚಾಯತಿಯ ವಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಅನುಕೂಲವಾಗುತ್ತದೆ. ಹೀಗಾಗಿ ಕೋಟಿ ಅಭಿಯಾನ ಹೆಸರಿನಲ್ಲಿ ಒಂದು ದಿನದಲ್ಲಿ ಕೋಟಿ ಸಂಗ್ರಹಣೆ ಮಾಡಿರುತ್ತಾರೆ. ವಿಶೇಷವೆಂದರೆ ತೆರಿಗೆ ವಸೂಲಿ ಮಾಡಲು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಕ್ಷಾಬಂಧನ ಹಬ್ಬದ ಪ್ರತೀಕರವಾಗಿ ಸಹೋದರರಿಗೆ ಕಾಣಿಕೆಯಾಗಿ ತೆರಿಗೆ ಪಾವತಿಸುವಂತೆ ಮನವೊಲಿಸಿದ್ದು ವಿಶೇಷವಾಗಿತ್ತು. ಅದರಂತೆ ತೆರಿಗೆ ಸಂಗ್ರಹಿಸಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

    ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

    ಗುರುಮಠಕಲ್: ತಾಲೂಕಿನ ಬೋರಾಬಂಡ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಅ.15 ಶುಕ್ರವಾರದಂದು ಎರಡನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್. ಎಲ್. ಟಿ ದೇವಸ್ಥಾನದ ವ್ಯವಸ್ಥಾಪಕ ನರೇಂದ್ರ ರಾಠೋಡ್ ಹೇಳಿದರು.

    ಪಟ್ಟಣದ ಎಸ್.ಎಲ್.ಟಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 5:30ಕ್ಕೆ ಸುಪ್ರಭಾತ ಸೇವೆ. 6:30ಕ್ಕೆ ಪಂಚಾಮೃತ ಹಾಗೂ ಅಲಂಕಾರ ಸೇವಾ ಮಹಾಪೂಜೆ, 9:30ಕ್ಕೆ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಾರಂಭ, 11.ಗಂ ರಥೋತ್ಸವ ನಂತರ ಮಹಾನೈವೇದ್ಯ, ಮಹಾ ಮಂಗಳಾರತಿ, ತದನಂತರದಲ್ಲಿ ತೀರ್ಥಪ್ರಸಾದವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

    ಶ್ರೀ ಕೃಷ್ಣ ಜನೋತ್ಸವ ಪ್ರಯುಕ್ತ ಅ. 17ರಂದು ಬೆಳಗ್ಗೆ 9-00ಕ್ಕೆ ಬೋಡಬಂಡ ಗ್ರಾಮದ ಶ್ರೀ ಹನುಮಾನ ದೇವಸ್ಥನದಿಂದ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದವರೆಗೆ ಶ್ರೀಕೃಷ್ಣ ದೇವರ ಪಲ್ಲಕ್ಕಿ ಉತ್ಸವ ಜೊತೆಗೆ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಮಹಾದ್ವಾರದ ಹತ್ತಿರ ಮೊದಲನೆಯ ಮೊಸರಿನ ಗಡಿಗೆ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನ ಸನ್ನಿಧಿಯಲ್ಲಿ ಎರಡನೇ ಮೊಸರಿನ ಗಡಿಗೆ ಹೊಡೆದು, ಬಣ್ಣದ ಓಕುಳಿ ಆಡಲಾಗುವುದು ಎಂದು ಅವರುತಿಳಿಸಿದರು.

    ಶ್ರೀ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ಮೋ.8885011111, 7021261844 ಸಂಖ್ಯೆಗೆ ಕರೆಮಾಡಿ ಹೆಸರನ್ನು ನೊಂದಾಯಿಸಬೇಕು ಹಾಗೂ ಕಡ್ಡಾಯವಾಗಿ ದಂಪತಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಅವರು ವಿನಂತಿಸಿಕೊಂಡರು.

    ಈ ಸಂಧರ್ಭದಲ್ಲಿ ಬಂಜಾರ ಸಮುದಾಯದ ಮುಖಂಡ ಕಾಶಿನಾಥ ರಾಠೋಡ್, ಶರಣಪ್ಪ, ಹಫೀಜ್ ಮಡ್ಕಿ ಉಪಸ್ಥಿತರಿದ್ದರು.

  • ನಶಾ ಮುಕ್ತ ಭಾರತಕ್ಕೆ ಎಲ್ಲರೂ ಸಹಕರಿಸಿ: ನ್ಯಾ. ಮರಿಯಪ್ಪ

    ನಶಾ ಮುಕ್ತ ಭಾರತಕ್ಕೆ ಎಲ್ಲರೂ ಸಹಕರಿಸಿ: ನ್ಯಾ. ಮರಿಯಪ್ಪ

    ಯಾದಗಿರಿ: ನಶಾ ಮುಕ್ತ ಭಾರತ ನಿರ್ಮಾಣ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಹೇಳಿದರು.
    ನಶಾ ಮುಕ್ತ ಭಾರತ ಅಭಿಯಾನ ಯೋಜನೆಯು 5 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬುಧವಾರ ಹಮ್ಮಿಕೊಂಡಿದ್ದ ನಶಾ ಮುಕ್ತ ಭಾರತ ಅಭಿಯಾನ ಹಾಗೂ ಸಾಮೂಹಿಕ ಪ್ರತಿಜ್ಞೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಇಂದು ಯುವಜನತೆ ಇದಕ್ಕೆ ಅತಿಯಾಗಿ ಅಂಟಿಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ ಅನೇಕ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಇದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ‌.ಈ ನಿಟ್ಟಿನಲ್ಲಿ‌ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ನ್ಯಾಯಧೀಶರು ಹೇಳಿದರು.
    ಇದೇ ಸಂದರ್ಭದಲ್ಲಿ ನಶಾಮುಕ್ತ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
    ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಜಿಲ್ಲಾ ಆಯುಷ್ ಅಧಿಕಾರಿ ವಂದನಾ ಗಾಳಿ,ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
  • ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

    ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

    ಜಗದ್ಗುರುಗಳ, ಸಮಾಜದ ಮುಖಂಡರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ಮಾಡಿದ ಸಾವಿರಾರು ಜನರು.

    ಯಾದಗಿರಿ:‌ ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂದುತ್ವಗಳನ್ನು ರದ್ದು ಪಡಿಸುವುದು ಸೇರಿದಂತೆಯೇ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘವು ಬುಧವಾರ ಕರೆ ನೀಡಿದ್ದ ಬೃಹತ್ ಪ್ರತಿಭಟನೆ ವಿರಾಟ ಸ್ವರೂಪ ಪಡೆದು ವಾಲ್ಮೀಕಿಗಳ ಕೂಗು  ಸರ್ಕಾರದ ಕಿವಿ ಗಡಚುವಂತೆಯೇ ಮಾಡಿತು.

    ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಈ ಎಲ್ಲ ಬೇಡಿಕೆಗಳಿಗೆ ಒತ್ತಾಯಿಸಲು ನೂರಾರು ಊರುಗಳಿಂದ ಬಂದಿದ್ದ ಸಾವಿರಾರು ವಾಲ್ಮೀಕಿ ಸಮುದಾಯ ಜನರು ಇಲ್ಲಿನ ತಹಸಿಲ್ ಕಚೇರಿ ಬಳಿ ಜಮಾಗೊಂಡರು.

    ಕೈ,ಕೊರಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಧ್ವಜ ಹಾಗೂ ಕರವಸ್ತ್ರ ಹಿಡಿದ ಅಪಾರ ಜನರು ಬೇಡಿಕೆಗಳಿಗೆ ಆಗ್ರಹಿಸಿ ನಿರಂತರ ಘೋಷಣೆ ಕೂಗಿ ಶಾಸ್ತ್ರಿ ಚೌಕ್ ಮೂಲಕ ಹಾದು ನೇತಾಜಿ ಸುಭಾಸಚಂದ್ರ ಬೋಸ್ ಸರ್ಕಲ್ ಗೆ ಆಗಮಿಸಿದಾಗ ಸಿಡಿದೆದ್ದ ವಾಲ್ಮಿಕಿಗರು ತಮಗಾದ ಅನ್ಯಾಯದ ವಿರುದ್ದ ಸರ್ಕಾರದ ವಿರುದ್ಧ ಭಾರಿ ಧ್ವನಿಯಲ್ಲಿ ಪ್ರತಿಭಟಿಸಿ ಹಕ್ಕುಗಳಿಗಾಗಿ ಒತ್ತಾಯಿಸಿದರು.ದಾವಣಗೇರಿ ಜಿಲ್ಲೆಯ ರಾಜನಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳ ಸಾನಿಧ್ಯದಲ್ಲಿ ಸಮಾಜದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷ ಮಾರೆಪ್ಪ ನಾಯಕ್ ಮಗ್ದಂಪುರ, ಜಿಲ್ಲಾಧ್ಯಕ್ಷ ಕೃಷ್ಣಪ್ಪಗೌಡ ಆಲ್ದಾಳ್, ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ  ಚಳುವಳಿ ರಾಜಣ್ಣ, ನಗರಸಭೆ ಸದಸ್ಯ ಹಣಮಂತ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಾಯಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಸಾವಿರಾರು ಇಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆ ಬಂದು ಡಿಸಿ ಕಚೇರಿ ದ್ವಾರದ ಬಳಿ ಸಮಾವೇಶಗೊಂಡರು.

     

    ಈ ವೇಳೆ ಮಾತನಾಡಿದ ಸಾನಿಧ್ಯ ವಹಿಸಿದ್ದ ಗುರುಗಳು ಮತ್ತು ನೇತೃತ್ವ ವಹಿಸಿದ್ದ ಮುಖಂಡರು ಮಾತನಾಡಿ, ಹಿಂದುಳಿದ ಪ್ರವರ್ಗ 1ರಲ್ಲಿ ಬರುವ ಅಂಬಿಗಾ, ಬೆಸ್ತಾ, ಕಬ್ಬಲಿಗಾ, ಮತ್ತು ಕೋಲಿ ಜನಾಂಗದ ವೃತ್ತಿ ಸೂಚಕ ತಳವಾರರನ್ನು ಹಿಂದುಳಿದ ಪ್ರವರ್ಗ 1ರ ಕ್ರಮ ಸಂಖ್ಯೆ 6 ರ ಬೆಸ್ತಾರ 38 ನೇ ಪದವಾಗಿ ಸೇರಿಸಬೇಕು, ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ, ಸಿಂದುತ್ವಗಳು ಪಡೆದುಕೊಳ್ಳುತ್ತಿರುವುದನ್ನು ತಡೆಯಬೇಕು ಮತ್ತು ಉಚ್ಛ ನ್ಯಾಯಾಲಯದ ಆದೇಶದಂತೆಯೇ  ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವ ತಹಸಿಲ್ದಾರ, ಸಿಬ್ಬಂದಿಗಳ ಹಾಗೂ  ಪಡೆದುಕೊಳ್ಳುತ್ತಿರುವವರ ಮೇಲೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಅವರು ಒತ್ತಾಯಿಸಿದರು.

     

    ಈ ಸಮಾಜದ ಕಾಲೇಜು,ಉನ್ನತ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ವಿದ್ಯಾರ್ಥಿವೇತನ,ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಈ ಇಲಾಖೆಗೆ ಕೂಡಲೇ ಸಚಿವರನ್ನು ನೇಮಿಸಬೇಕು, ಬುಡಕಟ್ಟು ವಿವಿ ಸ್ಥಾಪಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದರು.
    ಈ ಜನಾಂಗದ ಜನರ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿತಿ,ಗತಿ ಅಧ್ಯಯನಕ್ಕೆ ಅನುದಾನ ನೀಡಬೇಕು, ದೌರ್ಜನ್ಯ, ದಬ್ಬಾಳಿಕೆ, ಕೊಲೆ,ಅತ್ಯಾಚಾರ ಹೀಗೆ ವಿವಿಧ ಅಹಿತಕರ ಘಟನೆಗಳು ಈ ಸಮಾಜದ ಮೇಲೆ ನಿರಂತರವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ತಡೆಯಬೇಕೆಂದು ಅವರು ಆಗ್ರಹಿಸಿದರು.

     

    ನಿಖರ ಕಾರಣವಿಲ್ಲದೇ ಏಕಾಏಕಿ ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ತೆಗೆಯುವ ಮೂಲಕ ಸಮಸ್ತ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದ್ದು, ಕೂಡಲೇ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮತ್ತು ಕೆಕೆ ಭಾಗದ ಕಲಬುರಗಿ,ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ಟಿಎಸ್ ಪಿ ಅನುದಾನವನ್ನು ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಬಳಸದೇ ಬೇರೆ ಕಡೆ ಬಳಕೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಅಧ್ಯಕ್ಷ ಮತ್ತು ಪದಾಧಿಕಾರಿಗಳಾದ ಸಾಹೇಬಗೌಡ ಗೌಡಗೇರಾ,ಶ್ರವಣಕುಮಾರ ನಾಯಕ, ಮರೆಪ್ಪ ಪ್ಯಾಟಿ, ಭೀಮಣ್ಣಗೌಡ ಯಮನೂರು, ಬಸಣ್ಣಗೌಡ ಕಡದ್ರಾಳ, ಕಾಶಪ್ಪ ನಾಯಕ, ತಿಮ್ಮಣ್ಣ ನಾಯಕ್ ಸೇರಿದಂತೆಯೇ ಸಾವಿರಾರು‌ ಜನರು ಭಾಗವಹಿಸಿದ್ದರು. ಡಿಸಿ ಹರ್ಷಲ್ ಭೋಯರ್ ಅವರಿಗೆ ಶ್ರೀ ಸದ್ಗುರು ರಂಗಲಿಂಗೇಶ್ವರ ಮಠದ‌ ಪೀಠಾಧಿಪತಿ ಶ್ರೀ ತ್ರಿಶೂಲಪ್ಪ ಶರಣರು ಮುಡಬೂಳ ಶ್ರೀಗಳು ಸೇರಿದಂತೆಯೇ ಮುಖಂಡರು ಮನವಿ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಶ್ರೀ ತ್ರೀಶೂಲಪ್ಪ ಶರಣರು ಮುಡಬೂಳ. ಬೀದರ ಜಿಲ್ಲಾ ಅಧ್ಯಕ್ಷ ದಶರಥ ನಾಯಕ. ಬಳ್ಳಾರಿ ಜಿಲ್ಲಾ ಅಧ್ಯಕ್ಷ ಯರ್ರಿಸ್ವಾಮಿ. ವಿಜಯ ನಗರ ಜಿಲ್ಲಾ ಅಧ್ಯಕ್ಷ ಜಂಬಯ್ಯ ನಾಯಕ. ರಾಯಚೂರು ಜಿಲ್ಲಾ ಅಧ್ಯಕ್ಷ ರಘುವೀರ ನಾಯಕ ಹಾಗೂ ಶಾರದ ಹುಲಿನಾಯಕ. ಬಿಜಾಪೂರ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಕೌಲಗಿ. ಭೀಮರಾಯ ಠಾಣಗುಂದಿ. ಅಂಬುನಾಯಕ. ಟಿ ಎನ್ ಬೀಮುನಾಯಕ. ಸಾಬು ಬಗ್ಲಿ. ರಮೇಶ ದೊರೆ. ಗಂಗಾಧರ ನಾಯಕ. ವೆಂಕಟೇಶ ಬೇಟೆಗಾರ. ಹಣಮಂತ್ರಾಯ ದೊರೆ ವನದುರ್ಗಾ. ಶೇಖರ ದೊರೆ. ಪ್ರಭು ಹುಲಿನಾಯಕ. ವೆಂಕಟೇಶ ಬೈರಮಡಗಿ. ಚಂದ್ರಕಾಂತ ಕವಲ್ದಾರ. ನರಸಪ್ಪ ಬೂಡಯ್ಯನೋರ. ವಿಶ್ವನಾಥ ನಾಯಕ. ಹಣಮಂತ ನಾಯಕ. ಸಿದ್ದುನಾಯಕ ಹತ್ತಿಕುಣಿ.ದೊಡಯ್ಯ ನಾಯಕ ಹಳಿಗೇರ. ಹಣಮಂತ ನಾಯಕ ಖಾನಹಳ್ಳಿ. ಮಲ್ಲಮ್ಮ ಕೋಮರ. ರೇಣುಕಾ ಮೋನಪ್ಪ ಹಳಿಗೇರ ಸೇರಿದಂತೆಯೇ ಕಲ್ಯಾಣ ಕರ್ನಾಟಕದ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಯಾದಗಿರಿ ಜಿಲ್ಲೆಯ ವಾಲ್ಮೀಕಿ ಸಮುದಾಯದ ಮುಖಮಡರು ಸಮಾಜದ ಭಾಂದವರು ಉಪಸ್ಥಿತರಿದ್ದರು.
  • ಕಾರ್ಮಿಕರ ಕೊರತೆ: ಕೃಷಿ ಕ್ಷೇತ್ರದಲ್ಲಿ ತಲೆದೋರಿದೆ ಅಸ್ಥಿರತೆ

    ಕಾರ್ಮಿಕರ ಕೊರತೆ: ಕೃಷಿ ಕ್ಷೇತ್ರದಲ್ಲಿ ತಲೆದೋರಿದೆ ಅಸ್ಥಿರತೆ

    ರಾಯಚೂರು: ಕೃಷಿ ಕ್ಷೇತ್ರದಲ್ಲಿ ದಿನೇದಿನೇ ತೀವ್ರಗೊಳ್ಳುತ್ತಿರುವ ಕಾರ್ಮಿಕರ ಕೊರತೆ ಬಗ್ಗೆ ಲೋಕಸಭೆಯಲ್ಲಿ ಗಂಭೀರ ಚಿಂತನೆ ವ್ಯಕ್ತಪಡಿಸಿದ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ, ಇದು ರೈತರ ಜೀವನೋಪಾಯ ಹಾಗೂ ದೇಶದ ಆಹಾರ ಭದ್ರತೆಗೆ ದೊಡ್ಡ ಸವಾಲಾಗಿದೆ ಎಂದು ಎಚ್ಚರಿಸಿದರು.

    ಸಂಸದರು ತಿಳಿಸಿದಂತೆ, ಕಳೆದ ಐದು ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಕಾರ್ಮಿಕರ ತೊಡಗುವಿಕೆ ಸರ್ಕಾರದ ಅಂಕಿಅಂಶಗಳ ಪ್ರಕಾರ ಸ್ವಲ್ಪ ಮಟ್ಟಿಗೆ ಇಳಿದಿರುವುದಾದರೂ, ನೆಲಮಟ್ಟದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ವಿಶೇಷವಾಗಿ ಬಿತ್ತನೆ ಮತ್ತು ಕೊಯ್ಲಿನ ಹಂತಗಳಲ್ಲಿ, ಕರ್ನಾಟಕದ ಬಹುತೇಕ ಭಾಗಗಳಂತೆಯೇ ತಮ್ಮ ಕ್ಷೇತ್ರದಲ್ಲೂ ರೈತರು ಕಾರ್ಮಿಕರ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಉತ್ಪಾದಕತೆ ಹಾಗೂ ರೈತರ ಆದಾಯದ ಮೇಲೆ ನೇರವಾಗಿ ಕೆಟ್ಟ ಪರಿಣಾಮ ಬೀರುತ್ತಿದೆ.

    ಕೇಂದ್ರ ಸರ್ಕಾರ ಕೃಷಿ ಕಾರ್ಮಿಕರನ್ನು ಬಲಪಡಿಸಲು ಮತ್ತು ಶಾಶ್ವತ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಬದ್ಧವಾಗಿದೆ ಎಂದು ಸಂಸದರು ತಿಳಿಸಿದರು. ಇದಕ್ಕಾಗಿ ಕೌಶಲ್ಯಾಭಿವೃದ್ಧಿ, ಯಾಂತ್ರೀಕರಣಕ್ಕೆ ಬೆಂಬಲ, ಆರ್ಥಿಕ ಪ್ರೋತ್ಸಾಹ ಹಾಗೂ ಆಧುನಿಕ ತಂತ್ರಜ್ಞಾನ ಒದಗಿಸುವ ಹಲವು ಕಾರ್ಯಕ್ರಮಗಳು ಜಾರಿಯಲ್ಲಿವೆ. ಕೃಷಿ ಯಾಂತ್ರೀಕರಣ ಉಪಮಿಷನ್‌ (SMAM), ಕೃಷಿ ವಿಜ್ಞಾನ ಕೇಂದ್ರಗಳು (KVKs) ಮತ್ತು ಗುರಿ ಸಾಧಿಸುವ ಕೌಶಲ್ಯಾಭಿವೃದ್ಧಿ ಯೋಜನೆಗಳಂತಹ ಕ್ರಮಗಳನ್ನು ಅವರು ಸ್ವಾಗತಿಸಿದರೂ, ಇನ್ನಷ್ಟು ಬಲಿಷ್ಠ ಕ್ರಮಗಳ ಅಗತ್ಯವಿದೆ ಎಂದರು.

    ಸಂಸದರು ಸರ್ಕಾರಕ್ಕೆ ಒತ್ತಾಯಿಸಿದ್ದು, ಯಾಂತ್ರೀಕರಣವನ್ನು ವೇಗಗೊಳಿಸಿ, ಆರ್ಥಿಕ ಪ್ರೋತ್ಸಾಹಗಳನ್ನು ಸಮಯಕ್ಕೆ ತಕ್ಕಂತೆ ನೀಡುವುದು ಮತ್ತು ಆಧುನಿಕ ಕೃಷಿ ಉಪಕರಣಗಳನ್ನು ಸಣ್ಣ ಹಾಗೂ ಅಲ್ಪಭೂಸ್ವಾಮ್ಯ ರೈತರಿಗೆ ತಲುಪುವಂತೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು. ಜೊತೆಗೆ, ಗ್ರಾಮೀಣ ಯುವಕರಿಗೆ ಕೃಷಿ ಕ್ಷೇತ್ರವನ್ನು ಆಕರ್ಷಕ ಜೀವನೋಪಾಯವನ್ನಾಗಿಸಲು ಕೌಶಲ್ಯಾಭಿವೃದ್ಧಿ, ನವೀನತೆ ಮತ್ತು ಮೂಲಸೌಕರ್ಯ ಹೂಡಿಕೆಗಳ ಮೇಲೆ ಹೆಚ್ಚು ಗಮನ ಹರಿಸಬೇಕೆಂದು ಹೇಳಿದರು.

    ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿದ ರಾಯಚೂರು ಜಿಲ್ಲೆಗೆ ಈ ಯೋಜನೆಗಳಲ್ಲಿ ವಿಶೇಷ ಸ್ಥಾನಮಾನ ದೊರಕಬೇಕು ಎಂದು ಅವರು ಒತ್ತಾಯಿಸಿದರು. ಕಾರ್ಮಿಕರ ಕೊರತೆಯಿಂದ ನಮ್ಮ ರೈತರು ಹಿಂದುಳಿಯಲು ಅವಕಾಶ ನೀಡಲಾಗದು. ಶಾಶ್ವತ ಪರಿಹಾರ ದೊರೆಯುವವರೆಗೂ ನಾನು ಈ ವಿಚಾರವನ್ನು ಮುಂದುವರಿಸುತ್ತೇನೆ, ಎಂದು ಸಂಸದ ಜಿ. ಕುಮಾರ ನಾಯಕ ಸ್ಪಷ್ಟಪಡಿಸಿದರು.

  • ಯುವಕರು ನಶೆ ಮುಕ್ತರಾಗಿ ದೇಶಾಭಿಮಾನ ಬೆಳೆಸಿಕೊಳ್ಳಿ- ಸಿದ್ದರಾಮ 

    ಯುವಕರು ನಶೆ ಮುಕ್ತರಾಗಿ ದೇಶಾಭಿಮಾನ ಬೆಳೆಸಿಕೊಳ್ಳಿ- ಸಿದ್ದರಾಮ 

    ಸಿರವಾರ: ಹಲವು ಯುವಕರು ನಶೆ ಅಥವಾ ಮತ್ತು ಭರಿಸುವ ಅಪಾಯಕಾರಿ ಪದಾರ್ಥಗಳನ್ನು ಸೇವಿಸುವ ವ್ಯಸನಗಳಿಗೆ ಬಲಿಯಾಗಿದ್ದಾರೆ. ಇದರಿಂದ ಅವರ ಆರೋಗ್ಯ ಹಾಳಾಗುವುದಷ್ಟೇ ಅಲ್ಲ ದೇಶದ ಅಭಿವೃದ್ಧಿಯೂ ಕುಂಠಿತವಾಗುತ್ತಿದೆ. ಆದ್ದರಿಂದ ಯುವಕರು ನಶೆ ಮುಕ್ತರಾಗಿ ದೇಶಭಕ್ತಿ ಮತ್ತು ದೇಶಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಶಾಲಾ ಮುಖ್ಯ ಗುರು ಸಿದ್ಧರಾಮ ಹೇಳಿದರು.

    ತಾಲೂಕಿನ ತುಪ್ಪದೂರು ಕೆ. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಮಾದಕ ವ್ಯಸನಕ್ಕೆ ಬಲಿಯಾಗುತಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬ ಯುವಕರು ನಶಾಮುಕ್ತ  ಜಿಲ್ಲೆಗೆ ಕೈಜೋಡಿಸಿದಾಗ ಮಾತ್ರ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

    ಯುವಕರು ಚಿಕ್ಕ ವಯಸ್ಸಿನಲ್ಲಿ ನಶೆ ತರಿಸುವ ಚಟಗಳಿಗೆ ದಾಸರಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಪಂಜಾಬ ಮತ್ತಿತರ ರಾಜ್ಯಗಳಲ್ಲಿ ಇದು ಮಿತಿಮೀರುತ್ತಿದೆ. ಇದರಿಂದ ಸಮಾಜ ಮತ್ತು ದೇಶದ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ. ಯುವಕರೇ ದೇಶದ ಶಕ್ತಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಶಾಲೆಯ ಅತಿಥಿ ಶಿಕ್ಷಕರಾದ ನಾಗೇಶ ಭೋವಿ ಕುರುಡಿ, ಶಿವಪ್ಪ ನಾಯಕ ಕಲ್ಲೂರು, ಅಂಗನವಾಡಿ ಶಿಕ್ಷಕಿ ಸುಜಾತ ಮಾಚನೂರು, ಅಡುಗೆ ಸಿಬ್ಬಂದಿ ದೇವಮ್ಮ, ಬಸ್ಸಮ್ಮ, ಹುಲಿಗೆಮ್ಮ ಗ್ರಾಮದ ಯುವಕರಾದ ಹನುಮಂತ ನಾಯಕ, ರವಿ ನಾಯಕ, ಉರುಕುಂದ ನಾಯಕ, ಚೆನ್ನಯ, ಮಾರೆಪ್ಪ ನಾಯಕ, ಯಂಕಪ್ಪ ನಾಯಕ, ಯಲ್ಲಾಲಿಂಗ ನಾಯಕ, ಹುಲಿಗೇಶ ನಾಯಕ, ನಾಗರಾಜ, ಯಂಕಪ್ಪ , ದೇವಯ್ಯ ನಾಯಕ, ಯಲ್ಲಾಲಿಂಗ, ಮಹೇಶ್ ನಾಯಕ ಸೇರಿದಂತೆ ಇತರರಿದ್ದರು.

  • ಹರ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಬೈಕ್ ರ್ಯಾಲಿ

    ಹರ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಬೈಕ್ ರ್ಯಾಲಿ

    ಅನೇಕ ಮಹನೀಯರ ತ್ಯಾಗದಿಂದ ನಮಗೆ ಸ್ವಾತಂತ್ರ್ಯ – ವಿಭೂತಿಹಳ್ಳಿ

    ಯಾದಗಿರಿ:- ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತ್ಯಾಗ–ಬಲಿದಾನ ನೀಡಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದಿದ್ದಾರೆ. ಅವರ ಸ್ಮರಣಾರ್ಥವಾಗಿ ಸರ್ಕಾರ ಹರ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಕರೆ ನೀಡಿದರು.

    ಬಿಜೆಪಿ ನಗರ ಮಂಡಲ ಯುವ ಮೋರ್ಚಾ ವತಿಯಿಂದ ವತಿಯಿಂದ ಹರ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ನಗರದ ಬಸವೇಶ್ವರ ಗಂಜ್ ಸರ್ಕಲ್  ಹತ್ತಿರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು,  ಸ್ವಾತಂತ್ರ್ಯೋತ್ಸವದ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿಯಬೇಕು. ಹೋರಾಟಗಾರರ ತ್ಯಾಗ ಮುಂದಿನ ಪೀಳಿಗೆಗೆ ತಲುಪುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

    ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ  ಮಾತನಾಡಿ ಅವರು ಸಮಾಜ ಅಭಿವೃದ್ಧಿಯಾಗಬೇಕು ಎಲ್ಲರೂ ಉತ್ತಮ ದಾರಿಯಲ್ಲಿ ಸಾಗಬೇಕು. ತಮ್ಮ ಮನೆಗಳ ಮೇಲೆ ಪಕ್ಷ ಭೇದ ಮರೆತು ರಾಷ್ಟ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
    ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿ   ಪ್ರಧಾನಿ ನರೇಂದ್ರ ಮೋದಿಯವರು ಮನೆ–ಮನೆಗೆ ತಿರಂಗಾ ಹಾರಿಸುವಂತೆ ನೀಡಿರುವ ಕರೆ ಕುರಿತು ವಿವರಿಸಿದರು.

    ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ ಮಾತನಾಡಿದ ಅವರು ಜಿಲ್ಲಾ ತುಂಬಾ ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಮೂಲಕ ಪ್ರತಿ ಜನರಲ್ಲೂ ರಾಷ್ಟ್ರಧ್ವಜದ ಜೊತೆಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

    ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ ಮತ್ತು ದೆವಿಂದ್ರಪ್ಪ ಕೊನೇರ, ಮಾರುತಿ ಕಲಾಲ್, ನಗರಸಭೆ ಉಪಾಧ್ಯಕ್ಷೆ ರುಕೀಯ್ ಬೇಗಂ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಅಜೇಯ್ ಮಡ್ಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್, ಶ್ರೀದೇವಿ ಶೆಟ್ಟಹಳ್ಳಿ,ಕೃಷ್ಣಮೂರ್ತಿ ಕುಲಕರ್ಣಿ,ಭೀಮಣ್ಣಗೌಡ ಖ್ಯಾತನಾಳ,ನಗರಸಭೆ ಸದಸ್ಯ ವಿಲಾಸ ಪಾಟೀಲ್ ಮತ್ತು ಸುರೇಶ್ ಅಂಬಿಗೇರ,ಸ್ವಾಮಿದೇವ ದಾಸನಕೆರಿ,ವಿಜಯಲಕ್ಷ್ಮಿ ನಾಯಕ,ಮೋನೇಶ ಬೆಳಿಗೇರಿ, ರಮೇಶ್ ದೊಡಮನಿ,ಲಕ್ಷ್ಮಿಪುತ್ರ ಮಾಲಿಪಾಟೀಲ,ಅಪ್ಪಣ್ಣ ಜೈನ್, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಗುತ್ತೆದಾರ ಮತ್ತು ಮಲ್ಲು ಕೊಲಿವಾಡ,ರಾಜು ಸ್ವಾಮಿ,ಮರಿಲಿಂಗ  ಕರಾಟೆ,ಪವನ್ ಲಿಂಗೇರಿ, ಭೀಮ ಬಾಯಿ ಶೆಂಡಿಗಿ,ಶಕುಂತಲಾ ಜಿ,ರಾಜು ಉಪ್ಪಿನ್, ಕಾರ್ಯಾಲಯ ಕಾರ್ಯದರ್ಶಿ ಚನ್ನವೀರಯ್ಯ ಸ್ವಾಮಿ ಸೇರಿದಂತೆ ಯುವ ಮೋರ್ಚಾ ಪದಾಧಿಕಾರಿಗಳ ಕಾರ್ಯಕರ್ತರು ಭಾಗಿಯಾಗಿದರು…
  • ಒಳಮೀಸಲಾತಿ ವರದಿ ವಿರುದ್ಧ ಬಲಗೈ ಸಮುದಾಯದ ಬೃಹತ್ ಪ್ರತಿಭಟನೆ ನಾಳೆ

    ಒಳಮೀಸಲಾತಿ ವರದಿ ವಿರುದ್ಧ ಬಲಗೈ ಸಮುದಾಯದ ಬೃಹತ್ ಪ್ರತಿಭಟನೆ ನಾಳೆ

    ಯಾದಗಿರಿ: ನ್ಯಾ. ನಾಗಮೋಹನದಾಸ್ ಸಮಿತಿಯ ಒಳಮೀಸಲಾತಿ ವರದಿಯನ್ನು ಖಂಡಿಸಿ ಬಲಗೈ ಸಮುದಾಯವು ಆಗಸ್ಟ್‌ 14ರಂದು(ನಾಳೆ) ನಗರದ ಅಂಬೇಡ್ಕರ್‌ ನಗರದಿಂದ ಸುಭಾಷ್‌ಚಂದ್ರ ಬೋಸ್‌ ವೃತ್ತದವರೆಗೆ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

    ನಗರದ ಹಳೆ ಪ್ರವಾಸ ಮಂದಿರದಲ್ಲಿ ನಡೆದ ಸಭೆಯಲ್ಲಿ ಬಲಗೈ ಸಮುದಾಯದ 100ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ, ವರದಿಯಲ್ಲಿ ತಮ್ಮ ಸಮುದಾಯಕ್ಕೆ ಜನಸಂಖ್ಯೆಗೆ ತಕ್ಕ ಮೀಸಲಾತಿ ನೀಡದ ಮೂಲಕ ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು. ಈ ನಿರ್ಧಾರ ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಹಾನಿಕಾರಕವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

    “ವರದಿ ಜಾರಿಯಾಗಲು ಬಿಡುವುದಿಲ್ಲ” ಎಂದು ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದು, ನಾಳೆಯ ಪ್ರತಿಭಟನೆಯಲ್ಲಿ ಜಿಲ್ಲೆಯ ಸಾವಿರಾರು ಜನರು ಆಗಮಿಸಿ  ಭಾಗವಹಿಸುವಂತೆ ಕರೆ ನೀಡಿದರು.

    ಸಭೆಯಲ್ಲಿ ಹಿರಿಯ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.

  • ವಡಗೇರಾದಲ್ಲಿ ‘ಮನೆ ಮನೆಗೆ ಪೊಲೀಸ್’ ಅಭಿಯಾನ

    ವಡಗೇರಾದಲ್ಲಿ ‘ಮನೆ ಮನೆಗೆ ಪೊಲೀಸ್’ ಅಭಿಯಾನ

    ವಡಗೇರಾ: ಪೊಲೀಸ್‌ ವ್ಯವಸ್ಥೆ ಕುರಿತು ಜನರಲ್ಲಿ ಭಯ ದೂರಮಾಡಿ ಮನೆ ಬಾಗಿಲಿಗೆ ಪೊಲೀಸರು ಭೇಟಿ ನೀಡಿ ಸ್ಪಂದಿಸುವ ಸದುದ್ದೇಶದಿಂದ ಜಾರಿಗೊಳಿಸುತ್ತಿರುವ ಮನೆ ಮನಗೆ ಪೊಲೀಸ್ ಅಭಿಯಾನಕ್ಕೆ ಪಟ್ಟಣದಲ್ಲಿ ಪಿಎಸ್ಐ ಮೆಹಬೂಬ್‌ ಅಲಿ ಚಾಲನೆ ನೀಡಿದರು.
     
    ಪಟ್ಟಣದಲ್ಲಿನ  ಮನೆಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಪೊಲೀಸ್‌ ವ್ಯವಸ್ಥೆ ಬಗ್ಗೆ ಜನರಲ್ಲಿರುವ ಆತಂಕ ದೂರ ಮಾಡಲು ಸ್ಥಳೀಯ ಪೊಲೀಸ್‌ ಸಿಬ್ಬಂದಿ ಮನೆ ಮನೆಗೆ ಬಂದು ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು.
     
    ಇದೇ ವೇಳೆ ಕರಪತ್ರ, ಭಿತ್ತಿಪತ್ರ ಹಂಚಿ, ಕಾನೂನು ಬಾಹಿರ ಚಟುವಟಿಕೆಗಳು, ಮಕ್ಕಳಿಗೆ ತೊಂದರೆ, ಅಥವಾ ಶಂಕಾಸ್ಪದ ಘಟನೆಗಳ ಬಗ್ಗೆ ಮುಕ್ತವಾಗಿ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಲಾಯಿತು.
     

    ಸಾರ್ವಜನಿಕರಿಗೆ ಸೈಬರ್ ಅಪರಾಧ, ಮಾದಕ ವಸ್ತು ಡ್ರಗ್ಸ್, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಸೇರಿದಂತೆ ಸಾಮಾನ್ಯರು ಕಷ್ಟದ ಸಮಯದಲ್ಲಿ ಬಳಸಬಹುದಾದ ತುರ್ತು ಕರೆಗಳ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಿದರು.

    ಈ ಸಂಧರ್ಭದಲ್ಲಿ ವಡಗೇರಾ ಪೊಲೀಸ್ ಠಾಣೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • ಗೌರವಧನ ಹೆಚ್ಚಳಕ್ಕಾಗಿ ಆಶಾ ಕಾರ್ಯಕರ್ತೆಯರ  ಧರಣಿ

    ಗೌರವಧನ ಹೆಚ್ಚಳಕ್ಕಾಗಿ ಆಶಾ ಕಾರ್ಯಕರ್ತೆಯರ  ಧರಣಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಪ್ರತಿ ತಿಂಗಳು ಕನಿಷ್ಠ ₹10,000 ಗೌರವಧನ ನೀಡಬೇಕು ಮತ್ತು ಪ್ರೋತ್ಸಾಹಧನ ಸೇರಿಸಿ ಏಪ್ರಿಲ್ 2025ರಿಂದ ಜಾರಿಗೆ ತರಬೇಕು ಎಂಬ ಬೇಡಿಕೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ರಿ) ಯಾದಗಿರಿ ಜಿಲ್ಲಾ ಸಮಿತಿಯ ಆಶಾ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.

    ಜಿಲ್ಲಾಧ್ಯಕ್ಷೆ ಡಿ. ಉಮಾದೇವಿ ಮಾತನಾಡಿ, ಜನವರಿಯಲ್ಲಿ ಬೆಂಗಳೂರು ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹10,000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರೂ, ಅದು ಈವರೆಗೂ ಜಾರಿಯಾಗಿಲ್ಲವೆಂದು ಆರೋಪಿಸಿದರು. ಬಜೆಟ್ ನಲ್ಲೂ ಸಹ ಘೋಷಣೆ ಮಾಡದೆ ನಮಗೆ ಮೋಸ ಮಾಡಿದ್ದಾರೆ. ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಅದಕ್ಕಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಘೋಷಣೆ ಮಾಡಿದ ೧೦ ಸಾವಿರ ಗೌರವಧನವನ್ನು ಕೂಡಲೇ ಜಾರಿಗೆ ತರಬೇಕು, ಇಲ್ಲದಿದ್ದರೆ ತೀವ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು.

    ಕಾರ್ಯದರ್ಶಿ ದೇವಕ್ಕಿ ವನದುರ್ಗ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ಪುಷ್ಪಲತಾ, ನೀಲಮ್ಮ, ತಾಯಮ್ಮ, ಶಾಂತವ್ವ, ನಿಂಗಮ್ಮ, ಅಮೃತ, ದಾನಮ್ಮ, ಗೀತಾ, ಮೀನಾಕ್ಷಿ, ಗೌರಮ್ಮ, ಶಾರದಾದೇವಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಧರಣಿಯಲ್ಲಿ ಭಾಗವಹಿಸಿದರು.