Author: Satyakam NewsDesk

  • ವಡಗೇರಾ: ಗಣೇಶ ಹಬ್ಬ,ಈದ್ ಮಿಲಾದ್ ಶಾಂತಿ ಸಭೆ

    ವಡಗೇರಾ: ಗಣೇಶ ಹಬ್ಬ,ಈದ್ ಮಿಲಾದ್ ಶಾಂತಿ ಸಭೆ

    ವಡಗೇರಾ: ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಶಾಂತಿ ಸಭೆಯನ್ನು ವಡಗೇರಾ ಪೊಲೀಸ್ ಠಾಣಾ ಅವರಣದಲ್ಲಿ ಆಯೋಜಿಸಲಾಗಿತ್ತು.

    ತಾಲೂಕಿನ ಕಾಡಮಗೇರಾ (ಬಿ), ತುಮಕೂರು, ಐಕೂರು ಗ್ರಾಮಗಳ ಸಮುದಾಯ ಮುಖಂಡರು ಸಭೆಯಲ್ಲಿ ಭಾಗವಹಿಸಿದರು.

    ಪಿಎಸ್ಐ ಮಹಿಬೂಬ್ ಅಲಿ ಮಾತನಾಡಿ – ಗಣೇಶ ಪ್ರತಿಷ್ಠಾಪನೆಗೆ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಿಗೆ ಕಡ್ಡಾಯ, ಮೂರ್ತಿ ಪ್ರತಿಷ್ಠಾಪನೆ ಬಳಿಕ ಪ್ರತಿದಿನ ಮೂರ್ತಿಯನ್ನು ಕಾಯಲು 1–2 ಮಂದಿ ಕಡ್ಡಾಯವಾಗಿ ಇರತಕ್ಕದ್ದು, ವಿಸರ್ಜನೆ ವೇಳೆ ಕರ್ಕಶ ಡಿಜೆ ನಿಷೇಧ ಎಂದು ಸ್ಪಷ್ಟ ಸೂಚನೆ ನೀಡಿದರು.

    ಈದ್ ಮಿಲಾದ್ ಮೆರವಣಿಗೆಯೂ ಶಾಂತಿಯುತವಾಗಿರಬೇಕು, ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತ ರೀತಿಯಿಂದ ಯಾವುದೇ ಧರ್ಮಕ್ಕೆ ತೊಂದರೆಯಾಗದಂತೆ, ಹಿಂದೂ–ಮುಸ್ಲಿಂ ಸಹೋದರತ್ವ ಕಾಪಾಡಬೇಕು ಎಂದು ತಿಳಿಸಿದರು.

  • ಸೂಗಯ್ಯ ಸ್ವಾಮಿ ನಾಪತ್ತೆ ಪ್ರಕರಣ: ಚನ್ನಪಟ್ಟಣ ಶಾಂತಗೌಡ ಆರೋಪ ಗಂಭೀರ ಆರೋಪ

    ಸೂಗಯ್ಯ ಸ್ವಾಮಿ ನಾಪತ್ತೆ ಪ್ರಕರಣ: ಚನ್ನಪಟ್ಟಣ ಶಾಂತಗೌಡ ಆರೋಪ ಗಂಭೀರ ಆರೋಪ

    ಯಾದಗಿರಿ: 2022ರ ಜನವರಿಯಿಂದ ನಾಪತ್ತೆಯಾಗಿರುವ ಸುರಪುರ ತಾಲೂಕಿನ ರೈತ ಕುಟುಂಬದ ಸೂಗಯ್ಯ ಸ್ವಾಮಿ ಪ್ರಕರಣ (ಕೈಂ. ನಂ. 30/2022) ತನಿಖೆಯಲ್ಲಿ ಪೊಲೀಸ್ ಇಲಾಖೆ ಗಂಭೀರ ನಿರ್ಲಕ್ಷ್ಯ ವಹಿಸಿದ್ದು, ಅಧಿಕಾರಿಗಳು ರಾಜಕೀಯ ಮತ್ತು ಹಣಬಲಕ್ಕೆ ಮಣಿದಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯಾಧ್ಯಕ್ಷ ಚನ್ನಪಟ್ಟಣ ಶಾಂತಗೌಡ ಗಂಭೀರ ಆರೋಪ ಮಾಡಿದ್ದಾರೆ.

    ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೂಗಯ್ಯ ಸ್ವಾಮಿ ಅವರು ಯಾದಗಿರಿ ಜಿಲ್ಲೆಯ ಪ್ರಭಾವಿಶಾಲಿ ಜೈನ್ ಸಹೋದರರಿಗೆ 25 ವರ್ಷಗಳ ಕಾಲ ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಗ್ಯಾನಚಂದ್ ಜೈನ್ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ, ಜೈನ್ ಸಹೋದರರು ಸುಪಾರಿ ಕೊಟ್ಟು ಸೂಗಯ್ಯನನ್ನು ಕೊಲ್ಲಿಸಿದ ಶಂಕೆ ವ್ಯಕ್ತವಾಗಿದೆ.

    ಪ್ರಕರಣ ದಾಖಲಾಗಿ ಮೂರು ವರ್ಷವಾದರೂ, ತನಿಖೆಯಲ್ಲಿ ಯಾವುದೇ ಪ್ರಗತಿ ಇಲ್ಲ. ಶಾಂತಗೌಡ ಅವರ ದೂರಿನ ಪ್ರಕಾರ, ಇದೇ ಜೈನ್ ಸಹೋದರರ ವಿರುದ್ಧ 2019ರಲ್ಲಿ ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ (ಕ್ರೈಂ. ನಂ. 83/2019) ದಾಖಲಾದರೂ, ಕೇವಲ ಒಂದು ತಿಂಗಳಲ್ಲಿ ‘ಬಿ ಅಂತಿಮ ತರದಿ’ ಸಲ್ಲಿಸಿ ಮುಚ್ಚಲಾಗಿದೆ ಎಂದರು.

    ಇದಲ್ಲದೆ, ಸೂಗಯ್ಯ ಸ್ವಾಮಿಯ ಪತ್ನಿ ಅವರ ಹೆಸರಿನ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡು ಮಾರಾಟಕ್ಕೆ ಮುಂದಾಗಿರುವುದು, ಕುಟುಂಬದವರು ನಾಪತ್ತೆ ಪ್ರಕರಣದ ವಿಚಾರದಲ್ಲಿ ಆಸಕ್ತಿ ತೋರದಿರುವುದು — ಇವೆಲ್ಲವೂ ಹಣಬಲ ಮತ್ತು ರಾಜಕೀಯ ಬಲದ ಪ್ರಭಾವದ ಸೂಚನೆ ಎಂದು ಶಾಂತಗೌಡ ಆರೋಪಿಸಿದ್ದಾರೆ.

    ಸತ್ಯವನ್ನು ಬೆಳಕಿಗೆ ತರುವುದೇ ನನ್ನ ನೈತಿಕ ಕರ್ತವ್ಯ ಎಂದು ಶಾಂತಗೌಡ ಹೇಳಿದ್ದು, ಪ್ರಕರಣವನ್ನು ಗಂಭೀರವಾಗಿ ಪುನರ್‌ ತನಿಖೆ ಮಾಡಲು ಪೊಲೀಸರು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

    ಈ ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷೀಕಾಂತ ಪಾಟೀಲ್, ಯಾದಗಿರಿ ಜಿಲ್ಲಾಧ್ಯಕ್ಷ ಮಹಾವೀರ ಲಿಂಗೇರಿ, ಜಿಲ್ಲಾ ಉಪಾಧ್ಯಕ್ಷ ಸುಭಾಷ್ ನಡುವಿನಕೇರಿ, ತಾಲೂಕು ಅಧ್ಯಕ್ಷ ಮಹಿಪಾಲ ರೆಡ್ಡಿ ಕಟಗಿ ಶಹಾಪುರ, ಅಶೋಕ್ ನಾಯಕ, ಭಾಷಾ ಕುರಕುಂಧಿ, ಮಲ್ಲಿಕಾರ್ಜುನ, ರೆಡ್ಡಿ ಖಾನಾಪುರ ಸೇರಿದಂತೆ ಇನ್ನಿತರರು ಇದ್ದರು.

  • ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ

    ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ

    ಗುರುಮಠಕಲ್ : ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬೈಕ್ ರ್ಯಾಲಿ ಜರುಗಿತು.

    ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಸುದ್ದಿಗರರೊಂದಿಗೆ ಮಾತನಾಡಿದ ಯಾದಗಿರಿ ನಗರಸಭೆಯ ಅಧ್ಯಕ್ಷೆಯೂ ಆಗಿರುವ ಪಕ್ಷ ಮುಖಂಡೆ ಲಲಿತಾ ಅನಪುರ ಅವರು, ಆಗಸ್ಟ್ 15ರಂದು ಸ್ವಾತಂತ್ರ್ಯ ದಿನೋತ್ಸವದ ಹಿನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಆಯೋಜಿಸಿರುವುದಾಗಿ ಅವರು ತಿಳಿಸಿದರು.

    ಅಭಿಯಾನದಲ್ಲಿ ಪ್ರತಿ ಮನೆಯಲ್ಲೂ ಆಗಸ್ಟ್ 15ರಂದು ಬೆಳಿಗ್ಗೆ ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜಾರೋಹಣ ಮಾಡುವುದು ಮತ್ತು ಗೌರವ ಪೂರ್ವಕವಾಗಿ ಸಂಜೆ ವೇಳೆ ಅವರೋಹಣವನ್ನೂ ಮಾಡಬೇಕು. ಜತೆಗೆ ಧ್ವಜವನ್ನು ಅತ್ಯಂತ ಗೌರವದಿಂದ ಮನೆಯಲ್ಲಿ ಸಂರಕ್ಷಿಸಿಡಬೇಕು. ರಾಷ್ಟ್ರ ಧ್ವಜಕ್ಕೆ ಅವಮಾನವಾಗುವಂತೆ ಎಲ್ಲೆಂದರಲ್ಲಿ ಬಿಸುಡದಿರಿ ಎಂದು ಕೋರಿದರು.

    ಬಸವೇಶ್ವರ ವೃತ್ತದಲ್ಲಿ (ಹಳೇ ತಹಶೀಲ್ದಾರ್ ಕಚೇರಿ) ನಿಜಶರಣ ಅಂಬಿಗರ ಚೌಡಯ್ಯ ವೃತ್ತ, ಗಂಗಾಪರಮೇಶ್ವರ ವೃತ್ತ, ನಗರೇಶ್ವರ ದೇವಸ್ಥಾನ, ನಾರಾಯಣಪುರ ಬಡಾವಣೆ, ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆಯಲ್ಲಿ ಬಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಡಾ.ಬಾಬೂಜೀ ಮೂರ್ತಿಗಳಿಗೆ ಹೂಮಾಲೆ ಹಾಕುವ ಮೂಲಕ ಬೈಕ್ ರ್ಯಾಲಿ ಪೂರ್ಣಗೊಂಡಿತು.

    ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ನೀಲಪ್ಪ ಗುಳಿಗಿ, ಯುವ ಮೋರ್ಚಾ ಅಧ್ಯಕ್ಷ ಶ್ರೀಧರ, ಮಂಡಲ ಘಟಕದ ಅಧ್ಯಕ್ಷ ನರಸಿಂಹುಲು ನಿರೇಟಿ, ಕೆ.ದೇವದಾಸ, ವೆಂಕಟಪ್ಪ ಅವಾಂಗಪುರ, ಮಲ್ಲಿಕಾರ್ಜುನ ಹೊನಗೇರಾ, ಚಂದುಲಾಲ್ ಚೌದರಿ, ಜಗದೀಶ ಮೇಂಗಜಿ, ಮೌನೇಶ ಬೆಳಗೇರಾ, ವಿನಾಯಕರಾವ ಜನಾರ್ಧನ, ರಾಜೇಂದ್ರ ಕಲಾಲ್, ಮಲ್ಲೇಶಪ್ಪ ಬೇಲಿ, ರವೀಂದ್ರರೆಡ್ಡಿ ಪೋತುಲ್, ರಾಮುಲು, ಮರಿಲಿಂಗ, ಲಕ್ಷ್ಮಣ ಆಶನಾಳ, ಬಾಲಪ್ಪ, ಸುನೀಲ್ ಕಡೇಚೂರ ಚನ್ನಪ್ಪ ಕಾಕಲವಾರ. ರಮೇಶ್ ಕಾಕಲವಾರ ಉಪಸ್ಥಿತರಿದ್ದರು.

  • ವಾಲ್ಮೀಕಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ – ಮಗ್ದಂಪುರ

    ವಾಲ್ಮೀಕಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ – ಮಗ್ದಂಪುರ

    ಸತ್ಯಕಾಮ ವಾರ್ತೆ ಯಾದಗಿರಿ: 

    ವಾಲ್ಮೀಕಿ ಸಮಾಜದ ಪ್ರಮುಖ ಬೇಡಿಕೆಗಳು ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳು ತಡೆಯಲು ನಗರದ ತಹಶಿಲ್ದಾರರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಬೃಹತ್ ಪ್ರಮಾಣ ರ್ಯಾಲಿ ಮುಖಾಂತರ ಹೋರಾಟ ಮಾಡಲಾಗುತ್ತದೆ ಎಂದು ಉತ್ತರ ಕರ್ನಾಟಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಮಾರೆಪ್ಪ ನಾಯಕ ಮಗ್ದಂಪುರ ಹೇಳಿದರು.

    ಪತ್ರಿಕೆ ಹೇಳಿಕೆ ನೀಡಿ ಮಾತನಾಡಿದ ಅವರು ಈ ಬೃಹತ್ ಪ್ರಮಾಣದ ಹೋರಾಟವನ್ನು ದಾವಣಗೇರ ವಾಲ್ಮೀಕಿ ಗುರು ಪೀಠದ ಜಗದ್ಗುರು ಪ್ರಸನ್ನನಂದ ಸ್ವಾಮಿಜಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

    ಈ ಹೋರಾಟದಲ್ಲಿ ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಹಾಗೂ ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳ ವಾಲ್ಮೀಕಿ ಸಮಾಜದ ಭಾಂದವರು ಸುಮಾರು ಐದು ಸಾವಿರ ಜನರು ಈ ಹೋರಾಟದಲ್ಲಿ ಭಾಗವಸಲಿದ್ದಾರೆ ಎಂದರು.

    ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸಚಿವರನ್ನು ನೇಮಿಸದೆ ನಮ್ಮ ಸಮಾಜಕ್ಕೆ ಬರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಆಕಿ ತುಳಿತಕ್ಕೆ ಓಳಗಾದ ಸಮಾಜವನ್ನು ಮೂಲೆ ಗುಂಪು ಮಾಡುತ್ತಿರು ಸರ್ಕಾರದ ವಿರುದ್ಧ ಬೃಹತ್ ಹೋರಾಟವನ್ನು ಆಯೋಜಿಸಿದ್ದೇವೆ

    ಪರಿಶಿಷ್ಟ ಪಂಗಡದ ಸಮಾಜದ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಖಾಂತರ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.

  • ನೂತನ ಎಸ್.ಡಿ.ಎಮ್.ಸಿ ಅಸ್ತಿತ್ವಕ್ಕೆ

    ನೂತನ ಎಸ್.ಡಿ.ಎಮ್.ಸಿ ಅಸ್ತಿತ್ವಕ್ಕೆ

    ಗುರುಮಠಕಲ್: ಸರಕಾರಿ ಭಾಷಾ ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿ-ಎಂಸಿ) ಅಸ್ತಿತ್ವಕ್ಕೆ ತರಲಾಯಿತು. ಆಯಾಸ್ ಅಲಿ ತಂ ತಾಹೆರ್ ಅಲಿ -ಅಧ್ಯಕ್ಷರು, ವೆಂಕಟಮ್ಮ ತಂದೆ ನಾರಾಯಣ – ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

    ಸಮಿತಿಯು 18 ಸದಸ್ಯರನ್ನು ಒಳಗೊಂಡಿರುತ್ತದೆ. 8 ಪುರುಷ ಸದಸ್ಯರು ಮತ್ತು 8 ಜನ ಮಹಿಳಾ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮುಖ್ಯ ಗುರುಗಳಾದ ಅನುರಾಧ ತಿಳಿಸಿದ್ದಾರೆ.

    ಸಮೂಹ ಸಂಪನ್ಮೂಲ ವ್ಯಕ್ತಿ ಬಾಲಪ್ಪ ಸೇರಿದಂತೆ ಶಾಲೆಯ ಸಿಬ್ಬಂದಿ, ಎಲ್ಲ ಪಾಲಕ ಬಳಗ ಉಪಸ್ಥಿತರಿದ್ದರು.

  • ಮೈಕ್ ಡಿ.ಜೆ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಸಭೆ

    ಮೈಕ್ ಡಿ.ಜೆ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಸಭೆ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ಮುಂಜಾನೆ 6 ರಿಂದ ಸಾಯಾಂಕಾಲ 10 ಗಂಟೆಯೊಳಗೆ ಸೌಂಡ ಸಿಸ್ಟಮ್ ಆಳವಡಿಸುವದು. ಇದಕ್ಕೆ ಮೀರಿ ನಡೆದರೆ ಜೈಲು ಶಿಕ್ಷೆ ಮತ್ತು ಭಾರಿ ಜುಲ್ಮಾನೆಗೂ ಹೊಣೆಗಾರರಾಗಿರುತ್ತೀರಿ ಎಂದು ಗುರುಮಠಕಲ್ ಪಿ. ಐ. ಈರಣ್ಣ ದೊಡ್ಡಮನಿ ಹೇಳಿದರು.

    ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುಮಠಕಲ್ ವಲಯ ಸೌಂಡ್ ಮತ್ತು ಲೈಟಿಂಗ್ ಮಾಲೀಕರ ಕ್ಷೇಮಭಿವೃದ್ಧಿ ಸಂಘದ ಸದಸ್ಯರೊಂದಿಗೆ ಅವರು ಸಮಾಲೋಚನೆ ನಡೆಸಿ ಸರಕಾರದಿಂದ ಹೊರಡಿಸಿದ ನಡಾವಳಿ ಕುರಿತು ಮನವರಿಕೆ ಮಾಡಿದರು.

    ಗಣೇಶ ಹಬ್ಬದಲ್ಲಿ ಪ್ರತಿ ಬಡಾವಣೆ ಸೇರಿದಂತೆ ಮುಖ್ಯ ಬೀದಿಗಳಲ್ಲಿ ಗಣೇಶ ಕೂಡಿಸಿದ ಸಂಧರ್ಭದಲ್ಲಿ ಸರಕಾರದ ನಿಯಮಾವಳಿಯಂತೆ ಸಮಯ ಪಾಲನೆ ಮಾಡಿ ಸೌಂಡ್ ಬಳಸಬೇಕು.

    ಸಾರ್ವಜನಿಕರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಸೌಂಡ್ ಬಳಸದೆ ಹಾಗೂ ವಿಸರ್ಜನೆ ಸಮಯದಲ್ಲಿ ರಾತ್ರಿ 10-11 ಘಂಟೆಯ ಒಳಗೆ ಮೆರವಣಿಗೆ ಮುಗಿಯುವಂತೆ ನೋಡಿಕೊಳ್ಳಬೇಕು ಕಟ್ಟು ನಿಟ್ಟಾಗಿ ಹೇಳಿದರು.

    ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂಧಿ ಶಿವರಾಮ್ ರೆಡ್ಡಿ, ಮೈಕ್ ಸಂಘದ ಪಾಪಣ್ಣ ಎ ಅಧ್ಯಕ್ಷ, ಅಬ್ದುಲ್ ರೌಫ್ ಗೌ. ಉಪಾಧ್ಯಕ್ಷ, ಮಲ್ಲೇಶಪ್ಪ ಮಳಖೆಡ್ಕರ್, ಮೋಹನ್ ಕುಮಾರ್ ಬುರ್ಬುರೆ ಉಪಾಧ್ಯಕ್ಷ, ರಮೇಶ ಚಕ್ಕೊಲೆ ಖಜಾಂಚಿ, ನರಸಪ್ಪ ಕಾವಲಿ, ನರಸಿಂಹಲು ಗಂಗನೋಳ್, ರಮೇಶ ಅಲ್ಲಿಪುರ, ರಾಮು ಚಾವ್ಲ, ಸುರೇಶ ಸ್ವಾಮಿ ಕಾಕಲವಾರ, ವಿಜಯ ಬೆಟ್ಟದಹಳ್ಳಿ, ಮನೋಹರ ಟಪ್ಪ, ರವಿ ಡಿ. ಜೆ ಬುದುರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಕೆರೆ ತುಂಬಿಸುವ ಯೋಜನೆಗೆ ಕೊಳ್ಳಿ: ಅಧಿಕಾರಿಗಳ ವಿರುದ್ಧ ಮುದ್ನಾಳ್ ಆಕ್ರೋಶ

    ಕೆರೆ ತುಂಬಿಸುವ ಯೋಜನೆಗೆ ಕೊಳ್ಳಿ: ಅಧಿಕಾರಿಗಳ ವಿರುದ್ಧ ಮುದ್ನಾಳ್ ಆಕ್ರೋಶ

    ಕಿಲ್ಲನಕೇರಾ: ಒಣಬೇಸಾಯಕ್ಕೆ ಅನುಕೂಲವಾಗುವಂತೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಸರ್ಕಾರ ಜಾರಿಗೆ ತಂದಿದ್ದ ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಕಿಲ್ಲನಕೇರಾ ಗ್ರಾಮದಲ್ಲಿ ವಿಫಲವಾಗಿದೆ. ಸಣ್ಣ ನೀರಾವರಿ ಇಲಾಖೆಯ ಅವೈಜ್ಞಾನಿಕ ನಿರ್ಮಾಣದಿಂದಾಗಿ ಕಳೆದ ಎರಡು ವರ್ಷಗಳಿಂದ ಕೆರೆಗೆ ನೀರು ಸೇರದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ನೇತೃತ್ವದಲ್ಲಿ ರೈತರು ಕೆರೆಯ ತೀರದಲ್ಲಿ ಪ್ರತಿಭಟನೆ ನಡೆಸಿ, ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದರು. ಯೋಜನೆ ಇದ್ದೂ, ನೀರು ಬಂದಿಲ್ಲ; ಅಧಿಕಾರಿಗಳ ನಿರ್ಧಾರದಿಂದ ರೈತರ ಜೀವನ ಹಾಳಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಭರ್ಜರಿ ಮಳೆಯಿಂದ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಭೀಮಾ ನದಿಗಳು ತುಂಬಿ ಹರಿಯುತ್ತಿದ್ದರೂ, ಕಿಲ್ಲನಕೇರಾ ಗ್ರಾಮದ ಮೂರು ಕೆರೆಗಳು ಖಾಲಿಯಾಗಿವೆ. ಕೆರೆಗೆ ಪೈಪ್‌ಲೈನ್ ಇದ್ದರೂ, ಕೆಲವರ ಅರ್ಜಿಯ ಆಧಾರದಲ್ಲಿ ಇಲಾಖೆಯವರು ನೀರು ಬಿಡದೇ ತಡೆಹಿಡಿದಿರುವುದಾಗಿ ರೈತರು ಆರೋಪಿಸಿದರು.

    ಪ್ರತಿಭಟನೆಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷ ಮರೆಪ್ಪ ನಾಟೇಕಾರ ಸೇರಿದಂತೆ ಅನೇಕ ರೈತರು ಹಾಗೂ ಗ್ರಾಮಸ್ಥರು ಭಾಗವಹಿಸಿದರು.

  • ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ

    ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ

    ದೋರನಹಳ್ಳಿ:  ಆದಿ ಋಷಿ ಮುನಿಗಳು ಹೇಳಿದಂತೆ ಗಾಯತ್ರಿ ಮಂತ್ರವೇ ಮಹಾಮAತ್ರವಾಗಿದೆ.ಭಕ್ತಿಯಿAದ ಗಾಯತ್ರಿ ಮಂತ್ರವು ಪಠಣ ಮಾಡಿದರೆ ಜನ್ಮ ಪಾವನಮಯ ಎಂದು ಶಹಾಪುರ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾ ಸ್ವಾಮೀಜಿ ಹೇಳಿದರು.

    ದೋರನಹಳ್ಳಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನದಲ್ಲಿ ಶ್ರವಾಣ ಮಾಸದ ನೂಲ ಹುಣ್ಣಿಮೆ ಹಿನ್ನಲೆಯಲ್ಲಿ ವಿಶ್ವಕರ್ಮ ಸಮಾಜದಿಂದ ನಡೆದ ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಆಶಿರ್ವಚನ ನೀಡಿ ಮಾತನಾಡಿದರು.ಮನುಷ್ಯ ಹುಟ್ಟುವಾಗ ಸಂಸ್ಕಾರ ರಹಿತನಾಗಿ ಬರುತ್ತಾನೆ. ನಂತರ ಸಂಸ್ಕಾರ ಪಡೆದುಕೊಂಡು ಶ್ರೇಷ್ಠ ವ್ಯಕ್ತಿ ಆಗುತ್ತಾನೆ. ಹಾಗೆ ಸಂಸ್ಕಾರ ಪಡೆದು ಶ್ರೇಷ್ಠ ವ್ಯಕ್ತಿಯಾಗಿಸುವ ಶಕ್ತಿ ಗಾಯತ್ರಿ ಮಂತ್ರಕ್ಕಿದೆ. ಗಾಯತ್ರಿ ಮಂತ್ರ ಕಲಿಯುವ ಕಾಲಘಟ್ಟವೇ ಉಪನಯನ ಅಥವಾ ಬ್ರಹ್ಮಪದೇಶ. ಎಂಟನೇ ವರ್ಷಕ್ಕೆ ಉಪನಯನ ಮಾಡಬೇಕು, ಅದು ಸಾಧ್ಯ ಆಗದಿದ್ದಲ್ಲಿ ಎಂಟರಿAದ ಹದಿನಾರರ ಒಳಗೆ ಮಾಡಬೇಕು. ಅದು ಅವರ ಅನುಕೂಲ ಅಥವಾ ಬೌದ್ಧಿಕ ಮಟ್ಟ ಅವಲಂಬನೆ ಆಗಿದೆ. ಉಪನಯನ ಮಾಡುವಾಗ ಸಮ ವರ್ಷ ಅಥವಾ ವಿಷಮ ಪ್ರಶ್ನೆ ಇಲ್ಲ ಎಂದರು. ಗಾಯತ್ರಿ ಮಂತ್ರ ಬೋಧನೆ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಇದನ್ನು ಪಡೆದುಕೊಂಡು ಪಠಣ ಮಾಡುವ ವ್ಯಕ್ತಿ ಶ್ರೇಷ್ಠ ವ್ಯಕ್ತಿ ಆಗುತ್ತಾನೆ, ಗೆಲುವು ಪಡೆಯುತ್ತಾನೆ, ತೇಜಸ್ಸು ಪಡೆಯುತ್ತಾನೆ. ಅಂತಹ ಗಾಯತ್ರಿ ಮಂತ್ರದ ಮಹಿಮೆಯನ್ನು ವಿವರಿಸಿದರು.

    ಎಲ್ಲ ಧರ್ಮಗಳಲ್ಲೂ ಮಾನವೀಯ ಮೌಲ್ಯಗಳಿವೆ. ಅವುಗಳನ್ನು ತಿಳಿದುಕೊಂಡು ಬದುಕಿ, ಸಮಾಜದ ಶ್ರೇಯಸ್ಸಿಗೆ ಶ್ರಮಿಸಬೇಕು. ವಿಶ್ವಶಾಂತಿ ಬಯಸಿ, ಜಗತ್ತಿನ ಕಲ್ಯಾಣಕ್ಕಾಗಿ ಧಾರ್ಮಿಕ ಕಾರ್ಯ ಕಲಾಪ ಸತತವಾಗಿ ಸಾಗಬೇಕು ಎಂದರು. ಶ್ರಾವಣ ಮಾಸವು ವಿಶಿಷ್ಠ ಮಾಸವಾಗಿದ್ದು, ಪ್ರತಿ ದಿನವೂ ವೈಶಿಷ್ಟ್ಯವನ್ನು ಹೊಂದಿದೆ. ಶ್ರಾವಣದಲ್ಲಿ ಭಗವಂತನ ಪೂಜೆ, ಕೀರ್ತನೆ ಮತ್ತು ಶ್ರವಣದಿಂದ ಅಜ್ಞಾನ ನಶಿಸಿ, ಜ್ಞಾನವು ಸಿಗಲಿದೆ’ ಎಂದು ಹೇಳಿದರು.

    ವಿಶ್ವಕರ್ಮ ಸಮಾದ ಅಧ್ಯಕ್ಷ ಚಂದ್ರಶೇಖರ ಎಚ್.ಪತ್ತಾರ ಪ್ರಾಸ್ತಾವಿಕವಾಗಿ ಮಾತನಾಡಿದರು ದೇವಸ್ಥಾನದ ಅರ್ಚಕ ಮನೋಹರ ಪತ್ತಾರ ಅವರಿಂದ ಶ್ರೀಕಾಳಿಕಾದೇವಿ ಮೂರ್ತಿಗೆ ಪೂಜೆ, ಮಹಾಭಿಷೇಕ, ಕುಂಕುಮಾರ್ಚನೆ ,ಆರುತಿ, ಅಲಂಕಾರ ಪೂಜೆ, ತುಪ್ಪದಾರುತಿ, ಮಂಗಳಾರುತಿ ಸೇರಿದಂತೆ, ಘಂಟೆ- ಜಾAಗಟೆಗಳೊAದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು.ನಂತರ ವಿಶ್ವಕರ್ಮ ಸಮಾಜದ ಬಾಂಧವರು ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮವನ್ನು ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಜರುಗಿತು. ನಂತರ ಮಹಾ ಪ್ರಸಾದ ನೆರವೇರಿತು.

    ಈ ಸಂದರ್ಭದಲ್ಲಿವಿಶ್ವಕರ್ಮ ಸಮಾದ ಅಧ್ಯಕ್ಷ ಚಂದ್ರಶೇಖರ ಎಚ್.ಪತ್ತಾರ, ಉಪಾಧ್ಯಕ್ಷ ಮಹೇಶ ಡಿ.ಪತ್ತಾರ,ಮತ್ತು ಸಮಾಜದ ಹಿರಿಯ ಮುಖಂಡರಾದ ಕಾಳಪ್ಪ ಪತ್ತಾರ,ಮನೋಹರ ಪತ್ತಾರ,ಮಲಕಪ್ಪ ಕಂಚಗಾರ,ಮಲ್ಲೇಶಪ್ಪ ಕಂಬಾರ,ಚAದ್ರಶೇಖರ ಪತ್ತಾರ,ಕಾಳಪ್ಪ ಕಂಚಗಾರ,ಇAದ್ರಪ್ಪ ಕಂಚಗಾರ,ಮಾನಪ್ಪ ಕಂಬಾರ,ಗುರುನಾಥ ಕAಚಗಾರ, ಮಹೇಶ ಕಂಚಗಾರ,ವಿರೇಶ ಕಂಬಾರ,ಕಾಶಿನಾಥ ಕಂಚಗಾರ ಮುAತಾದ ಸಮಾಜದ ಬಂಧುಗಳು ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡಿದ್ದರು.

  • ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ

    ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ

    ಯಾದಗಿರಿ: ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯಲ್ಲಿ ವಿಳಂಬ ಉಂಟಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೃಷಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

    ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇಂದ್ರ ಸರ್ಕಾರ ಯೂರಿಯಾ ಮತ್ತು ಡಿಎಪಿ ರಸಗೊಬ್ಬರವನ್ನು ನಿರೀಕ್ಷೆಗೂ ಮೀರಿ ಪೂರೈಸಿದ್ದರೂ, ರಾಜ್ಯ ಸರ್ಕಾರವು ರೈತರಿಗೆ ಸಮಯಕ್ಕೆ ಸರಿಯಾಗಿ ವಿತರಣೆ ಮಾಡಲು ವಿಫಲವಾಗಿದ್ದೂ, ಸಿಎಂ ಸಿದ್ದರಾಮಯ್ಯನವರು ಕೇಂದ್ರದಿಂದ ಗೊಬ್ಬರ ಬಾರದಂತೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಗನೂರ ಆರೋಪಿಸಿದರು.

    ರಾಜ್ಯದಲ್ಲಿ ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ, ಏಕಕಾಲದಲ್ಲಿ ಬಿತ್ತನೆ ಪ್ರಾರಂಭವಾಗದೆ, ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಯೂರಿಯಾ ಮತ್ತು ಬೀಜಗಳ ಪ್ರಮಾಣವನ್ನು ಮುಂಚಿತವಾಗಿ ಅಂದಾಜು ಮಾಡಬೇಕಿತ್ತು. ಆದರೆ, ಗೋದಾಮುಗಳಲ್ಲಿ ಸರಿಯಾಗಿ ದಾಸ್ತಾನು ಮಾಡದೆ, ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಿದೆ.

    ಗ್ಯಾರಂಟಿ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವ ಸರ್ಕಾರ, ಎಲ್ಲೆಡೆ ಕಾರ್ಯಕ್ರಮಗಳನ್ನು ಆಯೋಜಿಸಿ ನಮ್ಮ ಸರ್ಕಾರ ಸಾಕಷ್ಟು ಸಾಧನೆ ಮಾಡಿದೆ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ, ರೈತರ ರಸಗೊಬ್ಬರದ ಸಂಕಷ್ಟ ಇವರಿಗೆ ಕಾಣಿಸುತ್ತಿಲ್ಲ.ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯದ ಫಲವನ್ನು ರೈತರು ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಕೃಷಿ ಸಚಿವರು ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳುವುದು ವಾಸ್ತವಿಕತೆಗೆ ದೂರವಾಗಿದೆ. ಜಿಲ್ಲೆಗಳ ಪರಿಸ್ಥಿತಿ ಅರಿತುಕೊಳ್ಳಲು ಅವರು ಎಲ್ಲಿಗೂ ಭೇಟಿ ನೀಡಿಲ್ಲ. ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸರ್ಕಾರದ ಗಮನಕ್ಕೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

    ರೈತರ ಕಣ್ಣಲ್ಲಿ ನೀರು ಬರಿಸಿದರೆ ಆ ಮುಖ್ಯಮಂತ್ರಿಗಳಿಗೆ ಒಳ್ಳೆಯದಾಗದು. ರೈತರನ್ನು ದುಸ್ಥಿತಿಗೆ ತಂದ ಕೃಷಿ ಸಚಿವರಿಗೂ ಒಳ್ಳೆಯದಾಗದು. ಹವಾಮಾನ ಇಲಾಖೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಟೀಕಿಸಿದರು.

    ಇದು ರೈತ ವಿರೋಧಿ ಸರಕಾರ, ಹಗರಣಗಳ ಸರಕಾರ. ರೈತರ ಕುರಿತು ಜವಾಬ್ದಾರಿಯಿಂದ ಮಾತನಾಡದೆ ಕೇಂದ್ರವನ್ನು ದೂಷಿಸಿದರೆ ಒಳ್ಳೆಯದಾಗದು ಎಂದ ಅವರು ಕೂಡಲೇ ರೈತರಿಗೆ ರಸಗೊಬ್ಬರದ ಸಮಸ್ಯೆಯನ್ನು ಪರಿಹರಿಸುವಲ್ಲಿ ಮುಂದಾಗಬೇಕು ಇಲ್ಲವಾದಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಕೃಷಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

  • ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

    ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

    ಸತ್ಯಕಾಮ ವಾರ್ತೆ ಯಾದಗಿರಿ:

    ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಠಾಣಾಧಿಕಾರಿ ಮಂಜನಗೌಡ ರಕ್ಷಾ ಬಂಧನ ಸ್ವೀಕರಿಸಿ ಮಾತನಾಡಿದ ಅವರು ಹಬ್ಬವು ಜಾತಿ,ಬೇಧ ಹೋಗಲಾಡಿಸಿ ಸಹೋದರತೆಯ ಭಾವವನ್ನು ಬಿಂಬಿಸುವುದಾಗಿದೆ. ನಮ್ಮ ದೇಶದಲ್ಲಿ ಸಂಬಂಧಗಳಿಗಿರುವ ಮಹತ್ವ ಜಗತ್ತಿನ ಯಾವ ದೇಶದಲ್ಲಿಯೂ ಕಂಡು ಬರುವುದಿಲ್ಲ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್ ಮಾತನಾಡಿ ಅಣ್ಣತಂಗಿಯರ ಹಬ್ಬ, ಅಕ್ಕತಮ್ಮಂದಿರ ಹಬ್ಬ. ಅಕ್ಕತಂಗಿಯರ ರಕ್ಷಣೆಗಾಗಿ ನಡುಕಟ್ಟಿ ನಿಲ್ಲುವ ಅಣ್ಣತಮ್ಮಂದಿರನ್ನು ಪ್ರೀತಿಯಿಂದ ಹರಸಿ ಹಾರೈಸುವ ಹಬ್ಬ. ದೇಶದಾದ್ಯಂತ ಈ ಹಬ್ಬವನ್ನು ಎಲ್ಲ ಅಕ್ಕತಂಗಿಯರು ತಮ್ಮ ಅಣ್ಣತಮ್ಮಂದಿರಿಗಾಗಿ ಆಚರಿಸುತ್ತಾರೆ. ಅಣ್ಣತಮ್ಮಂದಿರ ಕ್ಷೇಮ ಅವರ ಆರೋಗ್ಯ ಆಯಸ್ಸು ಚೆನ್ನಾಗಿರಲೆಂದು ಪ್ರಾರ್ಥಿಸುತ್ತಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವೀಣಾ ಮೋದಿ,ಪ್ರಧಾನ ಕಾರ್ಯದರ್ಶಿ ರಮಾದೇವಿ ಕಾವಲಿ, ಕಾರ್ಯದರ್ಶಿ ಶಕುಂತಲಾ ಗುಜನೂರು,ಉಪಾಧ್ಯಕ್ಷೆ ಮಂಜುಳಾ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು..