Author: Satyakam NewsDesk

  • ಮಿನಿ ವಿಧಾನಸೌಧ ಸ್ಥಳಾಂತರಕ್ಕೆ ನಮ್ಮ ಕರ್ನಾಟಕ ಸೇನೆ ಒತ್ತಾಯ

    ಮಿನಿ ವಿಧಾನಸೌಧ ಸ್ಥಳಾಂತರಕ್ಕೆ ನಮ್ಮ ಕರ್ನಾಟಕ ಸೇನೆ ಒತ್ತಾಯ

    ಸತ್ಯಕಾಮ ವಾರ್ತೆ ಲಿಂಗಸುಗೂರು:
    ಲಿಂಗಸುಗೂರು ತಾಲ್ಲೂಕಿನ ನಮ್ಮಕರ್ನಾಟಕ ಸೇನೆಯ ವತಿಯಿಂದ ತಾಲ್ಲೂಕು ಸಹಾಯಕ ಆಯುಕ್ತರಿಗೆ ಮಿನಿ ವಿಧಾನಸೌಧ ಸ್ಥಳಾಂತರ ಮಾಡುವ ಕುರಿತು ಮನವಿ ಸಲ್ಲಿಸಲಾಯಿತು.

    ಮನವಿ ವೇಳೆ ತಾಲೂಕು ಅಧ್ಯಕ್ಷ ಶಿವರಾಜ ನಾಯಕ ಮಾತನಾಡಿ
    ಪ್ರಸ್ತುತ ಮಿನಿ ವಿಧಾನಸೌಧ ಪಟ್ಟಣದ ಹೊರವಲಯದಲ್ಲಿದ್ದು, ಗ್ರಾಮೀಣ ಭಾಗದ ಬಡ ಜನತೆ ಜಾತಿ, ಆದಾಯ ಹಾಗೂ ಇತರೆ ದಾಖಲೆಗಳಿಗಾಗಿ ತಹಶೀಲ್ದಾರ ಕಚೇರಿಗೆ ಹೋಗುವಾಗ ಬಹುಮಾನವೊಂದು ಕಷ್ಟವನ್ನು ಎದುರಿಸುತ್ತಿದ್ದಾರೆ.

    ಒಂದು ದಾಖಲೆಯ ಕೇವಲ ಪ್ರತಿ ಪಡೆಯಲು ಸಹ ನಾಗರಿಕರು ಪಟ್ಟಣಕ್ಕೆ ಬಂದು ಮತ್ತೆ ವಾಪಸು ಹೋಗಬೇಕಾಗಿ ಬರುವುದರಿಂದ ಸುಮಾರು ರೂ.100 ರಿಂದ ರೂ 200 ವರೆಗೆ ಖರ್ಚಾಗುತ್ತಿದೆ. ಅಲ್ಲದೇ ಕುಡಿಯುವ ನೀರು, ಶೌಚಾಲಯ ಮುಂತಾದ ಮೂಲಭೂತ ಸೌಲಭ್ಯಗಳ ಕೊರತೆಯೂ ಉಂಟಾಗಿದೆ ಎಂದರು.

    ಮಹಿಳೆಯರಿಗೆ ಈ ಸ್ಥಳದ ಅಗ್ರಸ್ಥಾನ ಹಾಗೂ ಎರಡು ವಿಭಿನ್ನ ಪ್ರದೇಶಗಳಲ್ಲಿ ವಿಭಾಗವಾಗಿ ಇರುವ ವ್ಯವಸ್ಥೆ ಭದ್ರತೆಯ ಅಭಾವದ ಭಯವನ್ನು ಉಂಟುಮಾಡಿದೆ. ಇದಲ್ಲದೆ, ಹಲವು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಬಾಡಿಗೆಯಾದರೂ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಹಣ ವ್ಯರ್ಥವಾಗುತ್ತಿದೆ ಸಹಾಯಕ ಆಯುಕ್ತರ ಕಚೇರಿ ಪಕ್ಕದಲ್ಲಿ ಹಾಗೂ ತಾಲೂಕ ಪಂಚಾಯತಿ ಕಟ್ಟಡದಲ್ಲಿ ಸಾಕಷ್ಟು ಕೊಠಡಿಗಳು ಖಾಲಿ ಇದ್ದು, ಈ ಕಟ್ಟಡಗಳಲ್ಲಿ ಮಿನಿ ವಿಧಾನಸೌಧವನ್ನು ಸ್ಥಳಾಂತರ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲವನ್ನು ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ರಾಜು ಪತ್ತಾರ, ಯಲ್ಲಪ್ಪ ಬೋವಿ, ಬಸವಲಿಂಗ ಯಲಗಲದಿನ್ನಿ, ಗುರುನಾಥ ದ್ಯಾಪೂರ, ಶಿವಲಿಂಗ, ಕೃಷ್ಣ ಬೋವಿ, ಕಂಠೆಪ್ಪ, ಮೌನೇಶ ನಾಯಕ ದವಲಗೌಡ, ನಾಗರಾಜ ಕರಡಕಲ್, ಮಾರುತಿ, ಮಹೇಂದ್ರ ಕುಮಾರ, ವೀರೇಶ ಐದನಾಳ, ಶರಣಬಸವನಗೌಡ, ಶಂಭುಗೌಡ, ವೀವೇಕಾನಂದ ನಾಯಕ, ವೆಂಕಟೇಶ ಗುತ್ತೇದಾರ ಸೇರಿದಂತೆ ಇನ್ನಿತರರು ಇದ್ದರು.

  • ಹದಗೆಟ್ಟ ರಸ್ತೆ: ಮೂರು ತಿಂಗಳಿಂದ ಕಾಮಗಾರಿ ನೆನೆಗುದಿಗೆ, ಸಾರ್ವಜನಿಕರ ಆಕ್ರೋಶ

    ಹದಗೆಟ್ಟ ರಸ್ತೆ: ಮೂರು ತಿಂಗಳಿಂದ ಕಾಮಗಾರಿ ನೆನೆಗುದಿಗೆ, ಸಾರ್ವಜನಿಕರ ಆಕ್ರೋಶ

    ವರದಿ: ರಮೇಶ ನಾಯಕ್ 

    ಸತ್ಯಕಾಮ ವಾರ್ತೆ ಲಿಂಗಸುಗೂರು: 

    ತಾಲ್ಲೂಕಿನ ಗ್ರಾಮ ಪಂಚಾಯತಿ ರೋಡಲಬಂಡ ಯುಕೆಪಿ ಗ್ರಾಮ್ ಪಂಚಾಯತ್ ವ್ಯಾಪ್ತಿ ಬರುವ ಜಂಗಿರಾಂಪೂರ ತಾಂಡಾ.ಅಂಜನೇಯ ದೇವಸ್ಥಾನದ ನಾರಾಯಣಪುರ ಮುಖ್ಯ ಕಾಲುವೆಗೆ ರಸ್ತೆ ಹದಗೆಟ್ಟಿದ್ದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ.

    ಕಳೆದ ನಾಲ್ಕು ತಿಂಗಳ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲಾಗಿತ್ತು. ರಸ್ತೆ ಸಂಪೂರ್ಣ ಅಗೆದು ಮೇಲೆ ಜಲ್ಲಿ ಕಂಕರ್ ಹರವಿದ್ದಾರೆ. ನಾಲ್ಕು ತಿಂಗಳಾದರೂ ಮೇಲೆ ಸಿಮೆಂಟ್ ಕಾಂಕ್ರೀಟ್ ಹಾಕಿ ಪಕ್ಕಾ ರಸ್ತೆ ಮಾಡುತ್ತಿಲ್ಲ. ಹಾಕಿರುವ ಜಲ್ಲಿ ಕಂಕರನಲ್ಲಿ ಬೈಕ್ ಉರುಳಿ ಸವಾರರು ಗಾಯಗೊಂಡಿದ್ದಾರೆ. ಸಾರ್ವಜನಿಕರ ಓಡಾಡಲು ಆಗುತ್ತಿಲ್ಲ. ಈ ಕುರಿತು ಲಿಂಗಸುಗೂರು ಕೆ ಆರ್ ಐ ಡಿ ಎಲ್ ಅಧಿಕಾರಿಗಳಿಗೆ ನಾಲ್ಕು ಬಾರಿ ತಿಳಿಸಿದರು ದುರಸ್ಥಿಗೊಳಿಸುವಂತೆ ಒತ್ತಾಯಿಸಿದ್ದೇವೆ. ಅವರು ಕ್ಯಾರೆ ಅನ್ನುತ್ತಿಲ್ಲ. ಕಾಮಗಾರಿಗೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇವರ ವಿರುದ್ಧ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಕೂಡಲೇ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಬೇಕು ಇಲ್ಲದಿದ್ದರೆ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಂಕರ ಪವಾರ, ಅಮರೇಶ ಕರಡಕಲ್ ತಾಂಡ, ಭೀಮಣ್ಣ ಮತ್ತಿತರರು ಎಚ್ಚರಿಕೆ ನೀಡಿದರು.

  • ಶಾಲಾ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ – ಸಾರ್ವಜನಿಕರ ಆಕ್ರೋಶ!

    ಶಾಲಾ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ – ಸಾರ್ವಜನಿಕರ ಆಕ್ರೋಶ!

    ಸತ್ಯಕಾಮ ವಾರ್ತೆ ಯಾದಗಿರಿ:

    ಅರಕೇರಾ ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಸ್ತೂರಿ ಭಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯರೊಬ್ಬರು ಈ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಶಾಲಾ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಇಂಥ ಕಾರ್ಯ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

    ಶೌಚಾಲಯ ತೊಳೆಸುವ ಕೆಲಸ ಮುಖ್ಯೋಪಾಧ್ಯಾಯ/ಶಿಕ್ಷಕರ ಜವಾಬ್ದಾರಿ, ಮಕ್ಕಳಿಂದ ತೊಳೆಯಿಸುವುದು ಮಾನವೀಯತೆಗೂ ವ್ಯತಿರಿಕ್ತ, ಮಕ್ಕಳಿಗೆ ಶಿಕ್ಷಣ ನೀಡಬೇಕೋ ಹೊರತು ಶೌಚಾಲಯ ತೊಳೆಯಲು ಒತ್ತಾಯಿಸಬಾರದು. ಇದು ನಮ್ಮ ಶಿಕ್ಷಣ ವ್ಯವಸ್ಥೆಗೆ ಕಳಂಕ. ಇಂತಹ ದೃಶ್ಯಗಳು ಸಾರ್ವಜನಿಕವಾಗಿ ಹರಡಿರುವುದು ಕೇವಲ ಸತ್ಯವನ್ನು ಬಿಚ್ಚಿಟ್ಟಿಲ್ಲ, ಶಿಕ್ಷಣ ವ್ಯವಸ್ಥೆಯ ನಿಷ್ಕ್ರಿಯತೆಯನ್ನು ಬೆಳಗಿಸಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ, ತಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

  • ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

    ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

    • ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಸಚಿವರು

    ಸತ್ಯಕಾಮ ವಾರ್ತೆ ರಾಯಚೂರು: 

    ಕರ್ನಾಟಕ ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.

    ಜುಲೈ 15ರಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿ ಅವರ ದರ್ಶನದ ಪಡೆದು, ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಸಭಾಂಗಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಮಂತ್ರಾಲಯಕ್ಕೆ ಪ್ರತಿ ದಿನ ಅಂದಾಜು 200 ಬಸ್ಸಗಳು ರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುತ್ತವೆ. ರೈಲಿನ ಮೂಲಕವು ಜನರು ಮಂತ್ರಾಲಯಕ್ಕೆ ಬರುತ್ತಾರೆ. ಆಂಧ್ರಕ್ಕೆ ಹೋಲಿಸಿದರೆ ಶೇ.60ರಷ್ಟು ಜನರು ಕರ್ನಾಟಕ ರಾಜ್ಯದಿಂದಲೇ ಮಂತ್ರಾಲಯಕ್ಕೆ ಆಗಮಿಸುತ್ತಾರೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದಾಗ, ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಸೂಕ್ತವಾದ ಜಾಗದ ವ್ಯವಸ್ಥೆ ಮಾಡಿಕೊಡುವುದಾಗಿ ಸ್ವಾಮೀಜಿ ಅವರು ಮಾತುಕೊಟ್ಟಿದ್ದಾರೆ ಎಂದು ಸಚಿವರು ತಿಳಿಸಿದರು.

    ಮಂತ್ರಾಲಯದಲ್ಲಿ ಈಗಿರುವ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಕಳಪೆ ಕಾಮಗಾರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕಳಪೆ ಕಾಮಗಾರಿ ನಡೆದಿದೆ ಎಂದು ಲೋಕಾಯುಕ್ತರಿಂದ ಸಾಬೀತಾದಲ್ಲಿ ಸಂಬAಧಿಸಿದ ಗುತ್ತಿಗೆದಾರರಿಂದಲೇ ಕಟ್ಟಡದ ದುರಸ್ತಿ ಮಾಡಿಸಲಾಗುವುದು. ಇಲ್ಲವಾದಲ್ಲಿ ಕಟ್ಟಡದಲ್ಲಿನ ನೂನ್ಯತೆಗಳ ಬಗ್ಗೆ ಪರಿಶೀಲಿಸಿ ಮಾಸ್ಟರ್ ಪ್ಲಾನ್ ರೂಪಿಸಿ ಕಟ್ಟಡವನ್ನು ಸರಿಪಡಿಸಲಾಗುವುದು ಎಂದು ಸಚಿವರು ಹೇಳಿದರು.

    ಆನಲೈನ್ ವ್ಯವಸ್ಥೆಗೆ ಕ್ರಮ: ಧಾರ್ಮಿಕ ದತ್ತಿ ಇಲಾಖೆಯಿಂದ ಮಂತ್ರಾಲಯದಲ್ಲಿ ನಿರ್ಮಾಣ ಮಾಡಿರುವ ಕರ್ನಾಟಕ ರಾಜ್ಯದ ವಸತಿ ಗೃಹದಲ್ಲಿ ಒಟ್ಟು 50 ಕೋಣೆಗಳಿವೆ. ಇವುಗಳನ್ನು ಕರ್ನಾಟಕದಿಂದ ಬರುವ ಭಕ್ತರಿಗೆ ಮೀಸಲಿರಿಸಿದೆ. ತಲಾ ನಾಲ್ಕು ಜನರು 12 ಗಂಟೆ ಸಮಯ ವಾಸ್ತವ್ಯ ಮಾಡಲು 500 ರೂಪಾಯಿ ದರ ನಿಗದಿಪಡಿಸಲಾಗಿದೆ. 12 ಗಂಟೆ ಮೀರಿದಾಗ 1000 ರೂ. ದರ ನಿಗದಿಪಡಿಸಲಾಗುತ್ತದೆ. ಒಟ್ಟು 50 ರೂಮುಗಳ ಪೈಕಿ 30 ರೂಮುಗಳನ್ನು ಆನಲೈನ್ ಮೂಲಕ ಹಾಗೂ ಇನ್ನುಳಿದ 20 ರೂಮುಗಳನ್ನು ನೇರವಾಗಿ ಹಣ ಪಾವತಿಸಿ ಬುಕ್ಕಿಂಗ್ ಮಾಡುವ ವ್ಯವಸ್ಥೆಗೆ ಕ್ರಮ ವಹಿಸುವುದಾಗಿ ಸಚಿವರು ತಿಳಿಸಿದರು.

    ಟೂರಿಸಂ ಇಲಾಖೆಗೆ ಉಸ್ತುವಾರಿ: ಕಲ್ಯಾಣ ಮಂಟಪ, ಛತ್ರ, ವಸತಿ ಗೃಹಗಳ ನಿರ್ಮಾಣ ಪ್ರಕರಣವು ನ್ಯಾಯಾಲಯದ ಅಂಗಳದಲ್ಲಿರುವುದರಿAದ ಕಟ್ಟಡದ ದುರಸ್ತಿಗೆ ತೊಡಕಾಗಿ ಪರಿಣಮಿಸಿದೆ. ಮಂತ್ರಾಲಯ, ಶ್ರೀಶೈಲಂ, ತಿರುಪತಿ ಸೇರಿದಂತೆ ನಾನಾ ಕಡೆಗಳಲ್ಲಿ ವಿವಾದದಿಂದ ಕೂಡಿರುವ ಜಾಗದ ಸಮಸ್ಯೆಯನ್ನು ಬೇಗನೆ ಇತ್ಯರ್ಥಪಡಿಸಬೇಕು ಎಂದು ಖುದ್ದು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಆಯಾ ದತ್ತಿ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ ಸಚಿವರು, ಉತ್ತಮ ದರ್ಜೆಯ ನಿರ್ವಹಣೆಗಾಗಿ ಮಂತ್ರಾಲಯದಲ್ಲಿರುವ ಕರ್ನಾಟಕ ವಸತಿ ಗೃಹಗಳ ಕಟ್ಟಡದ ನಿರ್ಹಹಣೆಯ ಉಸ್ತುವಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವ ಬಗ್ಗೆ ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ ಅವರೊಂದಿಗೆ ಮಾತನಾಡುವುದಾಗಿ ಸಚಿವರು ತಿಳಿಸಿದರು.

    ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾದ ವೆಂಕಟೇಶ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕುಮಾರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ ಶಾವಂತಗೇರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚAದ್ರಶೇಖರ, ಕರ್ನಾಟಕ ವಸತಿ ಗೃಹ ಕಟ್ಟಡದ ಅಧಿಕಾರಿ ಆಂಜನೇಯ ಸೇರಿದಂತೆ ಇನ್ನೀತರರು ಇದ್ದರು.

  • ಜಿಲ್ಲೆಯ ಜನರ ಗಂಭೀರ ರೀತಿಯ ಸಮಸ್ಯೆಳಿಗೆ ಅಧಿಕಾರಿಗಳು ಸ್ಪಂದಿಸಲಿ: ಸಂಸದ ಜಿ.ಕುಮಾರ್ ನಾಯಕ್

    ಜಿಲ್ಲೆಯ ಜನರ ಗಂಭೀರ ರೀತಿಯ ಸಮಸ್ಯೆಳಿಗೆ ಅಧಿಕಾರಿಗಳು ಸ್ಪಂದಿಸಲಿ: ಸಂಸದ ಜಿ.ಕುಮಾರ್ ನಾಯಕ್

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯಲ್ಲಿನ ಜನರ ಗಂಭೀರ ಸ್ವರೂಪದ ಸಮಸ್ಯೆಗಳಾದ ಕುಡಿಯುವ ನೀರು,ಅನಕ್ಷರತೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮರು ಸೇರ್ಪಡೆ ,ಜನರ ವಲಸೆ,ತಾಯಿ- ಶಿಶುಮರಣ ಪ್ರಮಾಣ ತಡೆ ಸೇರಿದಂತೆ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪ್ರಥಮ ಆದ್ಯತೆ ನೀಡುವಂತೆ ರಾಯಚೂರು ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾದ ಜಿ.ಕುಮಾರ್ ನಾಯಕ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿನ ಗಂಭೀರ ಸ್ವರೂಪದ ಸಮಸ್ಯೆಗಳಿಗೆ ಆದ್ಯತೆ ಮೇಲೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು.ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಮಧ್ಯೆ ಸಮನ್ವಯತೆ ಸಾಧಿಸಿ ,ಸಮಾಲೋಚಿಸಿ ಪರಿಹಾರ ಕಂಡುಕೊಳ್ಳುವಂತೆ ಅವರು ಸೂಚನೆ ನೀಡಿದರು.

    ಜಿಲ್ಲೆಯ ರೈತರಲ್ಲಿ ಯೂರಿಯಾ ಹಾಗೂ ಡಿಎಪಿ ಗೆ ಪರ್ಯಾಯವಾಗಿ ನೀಡಲಾಗುವ ನ್ಯಾನೋ ರಸಗೊಬ್ಬರ ಬಳಕೆ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು.ಸ್ಪ್ರೀಂಕ್ಲರ್, ಮಣ್ಣು ಪರೀಕ್ಷೆ,ಮಣ್ಣು ಪರೀಕ್ಷೆ ಕಾರ್ಡ್ ವಿತರಣೆ ಕುರಿತಂತೆ ಅವಶ್ಯಕ ಅರಿವು ಮೂಡಿಸಲು ಅವರು ಸೂಚಿಸಿದರು.

    ಜಿಲ್ಲೆಯಲ್ಲಿ ಸುಮಾರು 662 ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಆರ್ಡಿಪಿಆರ್ ಇಲಾಖೆಯಿಂದ ಸಮೀಕ್ಷೆ ಅನ್ವಯ ಗುರಿ ನೀಡಿದ್ದು,ಆಯಾ ಗ್ರಾಮ ಪಂಚಾಯತ್ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಎಸ್ ಡಿ ಎಮ್ ಸಿ ಹಾಗೂ ಗ್ರಾಮಸ್ಥರೊಂದಿಗೆ ಸಮನ್ವಯ ಸಾಧಿಸಿ ಸ್ಯಾಟ್ಸ ಆಧಾರಿತದಲ್ಲಿ ಪತ್ತೆ ಹಚ್ಚಿ ಶಾಲೆಗೆ ಸೇರಿಸಬೇಕು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ ಗರ್ಭಿಣಿ ತಾಯಿ -ಶಿಶುಮರಣ ಪ್ರಮಾಣ ತಡೆಯಲು ಪರಿಣಾಮಕಾರಿ ಆರೋಗ್ಯ ತಪಾಸಣೆ, ನಿವಾರಣಾ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆ ಸವಾಲಾಗಿ ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.ಸಾಮಾಜಿಕ ಕಳಕಳಿ, ಮಾನವೀಯ ನೆಲೆಯಲ್ಲಿ ಕ್ರಮಗಳನ್ನು ಕೈಗೊಂಡಾಗ ಮಾತ್ರ ಈ ಸಮಸ್ಯೆ ಮತ್ತು ತಾಯಿ-ಶಿಶು ಮರಣ ಪ್ರಮಾಣ ತಡೆಯಲು ಸಾಧ್ಯ ಎಂದು ಹೇಳಿದರು.

    ಜಿಲ್ಲೆಯ ಯಾದಗಿರಿ ಬೈಪಾಸ್ ರಸ್ತೆ, ಶಹಾಪುರ ಬೈಪಾಸ್ ರಸ್ತೆ, ರಾಮಸಮುದ್ರ ಹತ್ತಿರದಿಂದ ಗುರುಮಠಕಲ್ – ಹೈದರಾಬಾದ್ ರಸ್ತೆ, ಸೂರತ್- ಚೆನೈ ರಸ್ತೆಗಳ ವ್ಯಾಪ್ತಿಯ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಮಸ್ಯೆ ಪರಿಹರಿಸಬೇಕು. ಕೈಗೊಂಡ ಕ್ರಮದ ಬಗ್ಗೆ ವರದಿ ಸಹ ಸಲ್ಲಿಸುವಂತೆ ಅವರು ಸೂಚಿಸಿದರು.

    ಕಡೆಚೂರ-ಬಾಡಿಯಾಳ ಸಮೀಪದ ರೈಲ್ವೆ ಬೋಗಿ ಕಾರ್ಖಾನೆಗೆ ನೀರು ಪೂರೈಕೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸಮಸ್ಯೆಯಾಗಿ ಉಳಿದಿರುವ ರಾಷ್ಟ್ರೀಯ ಹೆದ್ದಾರಿನಡಿ ನೀರಿನ ಪೈಪ್ಲೈನ್ ಅಳವಡಿಕೆ ಸಮಸ್ಯೆಯನ್ನು ಕೆಐಎಡಿಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಮನ್ವಯತೆಯಿಂದ ಪರಿಹರಿಸಬೇಕು. ಯಾದಗಿರಿ ರೈಲ್ವೆ ನಿಲ್ದಾಣ ಕಾಮಗಾರಿಗಳು ಚುರುಕುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಅದರಂತೆ ಜಲಜೀವನ್ ಮಿಷನ್,ಜಲಧಾರೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಗುರಿಗೆ ತಕ್ಕಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

    ಪಶುಪಾಲನೆ ಇಲಾಖೆಯಿಂದ ಸರ್ಕಾರದ ನಿಯಮಾವಳಿಗಳ ಅನ್ವಯ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನಬದ್ಧವಾಗಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ವಿಪುಲ ಅವಕಾಶಗಳಿರುವದರಿಂದ ಅವಶ್ಯಕ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು, ಜಿಲ್ಲೆಯಲ್ಲಿ ತಾಯಿ-ಶಿಶುಮರಣ ಪ್ರಮಾಣ ಹೆಚ್ಚಲು ಕಾರಣ, ರೈಲ್ವೆ ಬೋಗಿ ಕಾರ್ಖಾನೆಗೆ ನೀರು, ವಿದ್ಯುತ್ ಪೂರೈಕೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಅಕ್ಕ ಕೆಫೆ ಹಾಗೂ ಇಂದಿರಾ ಕಾಂಟಿನೆಗಳಿಗೆ ಸ್ಥಳ ಗುರುತಿಸುವ ಮುನ್ನ ಆಯಾ ಶಾಸಕರ ಗಮನಕ್ಕೆ ತರಲು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಸಂಸದರ ಗಮನಕ್ಕೆ ತಂದರು.

    ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ ಅವರು ಜಲಜೀವನ್ ಮಿಷನ್, ಜಲಧಾರೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕೋರಿದರು. ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಬೋಗಿ ಕಾರ್ಖಾನೆಗೆ ನೀರು , ವಿದ್ಯುತ್ ಸಮಸ್ಯೆ,ಜಲಜೀವನ್ ಮಿಷನ್ ಯೋಜನೆಯಡಿಯ ಸಮಸ್ಯೆ ಪರಿಹರಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ,ಎಸ್,ಪಿ ಪೃಥ್ವಿಕ್ ಶಂಕರ್, ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

  • ಲೋಕದಾಲತ್ 2478 ಪ್ರಕರಣಗಳ ಇತ್ಯರ್ಥ

    ಲೋಕದಾಲತ್ 2478 ಪ್ರಕರಣಗಳ ಇತ್ಯರ್ಥ

    ಸತ್ಯಕಾಮ ವಾರ್ತೆ ಸುರಪುರ:
    ಇಲ್ಲಿಯ ನ್ಯಾಯಾಲಯದಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ನೇತೃತ್ವದಲ್ಲಿ ನಡೆದ ಲೋಕದಾಲತ್ ನಲ್ಲಿ ಬ್ಯಾಂಕ್ ವ್ಯಾಜ್ಯಗಳು ಸೇರಿ 2478 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.

    ಲೋಕ ಅದಾಲತ್‌ನಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮರುಳಸಿದ್ಧ ಆರಾಧ್ಯ ಅವರು ಪ್ರಕರಣ ಒಂದರ ಇತ್ಯರ್ಥದ ಸಂದರ್ಭದಲ್ಲಿ ಭಾಗವಹಿಸಿದ್ದರು.ಅಲ್ಲದೆ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯದ ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿ,ಸುರಪುರ ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಫಕಿರವ್ವ ಕೆಳಗೇರಿ,ದಿವಾಣಿ ನ್ಯಾಯಾಧೀಶರಾದ ಬಸವರಾಜ ಅವರು ಭಾಗವಹಿಸಿದ್ದರು.

    ಲೋಕ ಅದಾಲತ್‌ನಲ್ಲಿ ಒಟ್ಟು 4229 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.ಅವುಗಳಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ 7 ಪ್ರಕರಣಗಳು ತೆಗೆದುಕೊಂಡು 4 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಇವುಗಳಲ್ಲಿ 1 ಲಕ್ಷ 50 ಸಾವಿರ ಪರಿಹಾರವನ್ನು ಕೊಡಿಸಲಾಗಿದೆ.ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 1444 ಪ್ರಕರಣಗಳು ತೆಗೆದುಕೊಂಡು 675 ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ. 18 ಲಕ್ಷ 46 ಸಾವಿರ 725 ರೂಪಾಯಿಗಳ ಪರಿಹಾರ ಕೊಡಿಸಲಾಗಿದೆ.ಸಿವಿಲ್ ನ್ಯಾಯಾಲಯದಲ್ಲಿ 1437 ಪ್ರಕರಣಗಳನ್ನು ತೆಗೆದುಕೊಂಡು 928 ಪ್ರಕರಣಗಳನ್ನು ಇತ್ಯರ್ಥಗೊಳಿಸಿ,3 ಲಕ್ಷ 11 ಸಾವಿರ 824 ರೂಪಾಯಿಗಳ ಪರಿಹಾರ ಕೊಡಿಸಲಾಗಿದೆ.ಹೆಚ್ಚುವರಿ ನ್ಯಾಯಾಲಯದಲ್ಲಿ 1341 ಪ್ರಕರಣಗಳು ಕೈಗೆತ್ತಿಕೊಳ್ಳಲಾಗಿತ್ತು, ಇವುಗಳಲ್ಲಿ 865 ಪ್ರಕರಣಗಳು ಇತ್ಯರ್ಥಗೊಳಿಸಿ 7 ಲಕ್ಷ 72 ಸಾವಿರ 550 ರೂಪಾಯಿಗಳ ಪರಿಹಾರ ಕೊಡಿಸಲಾಗಿದೆ.ಅಲ್ಲದೆ ಬ್ಯಾಂಕ್ ವ್ಯವಹಾರದ 6 ಪ್ರಕರಣಗಳನ್ನು ಇತ್ಯರ್ಥಗೊಳಿಸಿ 19 ಲಕ್ಷ 96 ಸಾವಿರ ರೂಪಾಯಿಗಳ ತುಂಬಿಸಲಾಗಿದೆ.

    ಒಟ್ಟು 4229 ಪ್ರಕರಣಗಳಲ್ಲಿ 2472 ಪ್ರಕರಣಗಳು ಇತ್ಯರ್ಥಗೊಂಡು 2769275 ರೂಪಾಯಿಗಳ ಪರಿಹಾರವನ್ನು ಕೊಡಿಸಲಾಗಿದೆ.ಅಲ್ಲದೆ 6 ಬ್ಯಾಂಕ್ ವ್ಯವಹಾರದ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮರುಳಸಿದ್ಧ ಆರಾಧ್ಯ ಅವರು,ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿಯವರು,ಹಿರಿಯ ಸಿವಿಲ್ ನ್ಯಾಯಾಧೀಶರಾದ ಫಕೀರವ್ವ ಕೆಳಗೇರಿಯವರು,ದಿವಾಣಿ ನ್ಯಾಯಾಧೀಶರಾದ ಬಸವರಾಜ ಅವರು ಉಪಸ್ಥಿತರಿದ್ದರು. ವಕೀಲರಾದ ಹಿರಿಯ ನ್ಯಾಯವಾದಿ ನಿಂಗಣ್ಣ ಚಿಂಚೋಡಿ,ವಿನೋದ ಜೇವರ್ಗಿ,ಎಮ್.ಎಸ್.ಹಿರೇಮಠ ಸೇರಿದಂತೆ ಅನೇಕರು ಭಾಗವಹಿಸಿದ್ದರು.

    ಲೋಕ ಅದಾಲತ್‌ನಲ್ಲಿ ಪತಿ ಪತ್ನಿ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪ್ರಕರಣವೊಂದರಲ್ಲಿ ಪತ್ನಿಯೇ ಪತಿಗೆ ಒಂದಾಗಿ ಜೀವನ ಸಾಗಿಸುವ ಕುರಿತು ನ್ಯಾಯಾಧೀಶರ ಮುಂದೆ ಪತಿಗೆ ಮನವೊಲಿಸಿ ವಿಚ್ಛೇದನವನ್ನು ಕೈಬಿಟ್ಟು ನ್ಯಾಯಾಲಯದಲ್ಲಿ ಒಂದಾಗಿ ಹಾರ ಬದಲಾಯಿಸಿಕೊಂಡು ಎಲ್ಲ ನ್ಯಾಯಾಧೀಶರು ಹಾಗೂ ವಕೀಲರಿಗೆ ಸಿಹಿ ಹಂಚಿ ಒಂದಾಗಿ ನಡೆದ ಘಟನೆ ನಡೆಯಿತು.

  • ಗೌಡಾ ಪಡೆದ ರಮೇಶ ದೊರೆ ಅಭಿನಂದನಾ ಸಮಾರಂಭ

    ಗೌಡಾ ಪಡೆದ ರಮೇಶ ದೊರೆ ಅಭಿನಂದನಾ ಸಮಾರಂಭ

    ಸತ್ಯಕಾಮ ವಾರ್ತೆ ಸುರಪುರ:
    ಕಾಂಗ್ರೆಸ್ ಪಕ್ಷದ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಅವರಿಗೆ ತಾಲೂಕಿನ ಅವರ ಸ್ವಗ್ರಾಮ ಆಲ್ದಾಳ ಗ್ರಾಮದಲ್ಲಿ ಅಭಿನಂದನಾ ಸಮಾರಂಭ ನಡೆಸಲಾಯಿತು.ರಮೇಶ ದೊರೆಗೆ ಬೃಹತ್ ಗಾತ್ರದ ಹೂಮಾಲೆ ಹಾಕಿ ಸನ್ಮಾನಿಸಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ರಮೇಶ ದೊರೆ ಅವರು ಕಳೆದ ಎರಡು ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯನ್ನು ಮಾಡುತ್ತಾ ಬರುತ್ತಿದ್ದು,ಅವರ ಸೇವೆಯನ್ನು ಗುರುತಿಸಿ ಇಂದು ತಮಿಳುನಾಡಿನ ಏಷ್ಯಾ ಅಂತರಾಷ್ಟಿçÃಯ ಸಂಸ್ಕೃತಿ ಸಂಶೋಧನಾ ವಿವಿಯೂ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದ್ದು,ಇದರಿಂದಾಗಿ ನಮ್ಮ ಆಲ್ದಾಳ ಗ್ರಾಮಕ್ಕೆ ನಾಡಿನಲ್ಲಿ ಬಹುದೊಡ್ಡ ಕೀರ್ತಿ ಬಂದAತಾಗಿದೆ.ಅದಕ್ಕೆ ಕಾರಣರಾದ ರಮೇಶ ದೊರೆ ಅವರನ್ನು ಇಂದು ನಾವೆಲ್ಲರು ಅಭಿನಂದಿಸುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದರು.

    ಅಲ್ಲದೆ ಇನ್ನೂ ಹೆಚ್ಚೆಚ್ಚು ಜನರ ಸೇವೆ ಮಾಡುವ ಶಕ್ತಿ ದೇವರು ಅವರಿಗೆ ಕೊಡಲಿ,ಇನ್ನೂ ರಾಜ್ಯ,ರಾಷ್ಟç ಮಟ್ಟದ ಪ್ರಶಸ್ತಿಗಳು ಅವರಿಗೆ ಲಭಿಸಲಿ ಎಂದು ಹಾರೈಸಿದರು.

    ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾನಪ್ಪ ಸಾಹುಕಾರ,ನ್ಯಾಯವಾದಿ ಬಸವರಾಜ ಅನಸೂರ,ದುರಗಪ್ಪ ಮಾಸ್ತರ ಮಾತನಾಡಿದರು.

    ಗ್ರಾಮಸ್ಥರ ಸನ್ಮಾನ ಸ್ವೀಕರಿಸಿದ ರಮೇಶ ದೊರೆ ಮಾತನಾಡಿ, ನಾನು ಯಾವುದೇ ಪದವಿ,ಪ್ರಶಸ್ತಿಗಾಗಿ ಸಮಾಜ ಸೇವೆ ಮಾಡುತ್ತಿಲ್ಲ.ಆದರೆ ನಮ್ಮಿಂದಾದ ಸಹಾಯವನ್ನು ಜನರಿಗೆ ಮಾಡಬೇಕು,ಸಮಾಜದ ಅಭಿವೃಧ್ಧಿಗೆ ನಮ್ಮಿಂದಾದ ಕೆಲಸ ಮಾಡೋಣ ಎಂದು ಮಾಡುತ್ತಿರುವೆನು.ಮುಂದೆಯೂ ನನ್ನ ಸೇವೆ ಹೀಗೆಯೇ ಮುಂದುವರೆಯಲಿದೆ.ನನ್ನ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ನನ್ನ ಜವಬ್ದಾರಿಯನ್ನು ಹೆಚ್ಚಿಸಿದೆ.ಅಲ್ಲದೆ ನನಗೆ ಇನ್ನಷ್ಟು ಕೆಲಸ ಮಾಡಲು ಇಂದು ಅಭಿನಂದನೆ ಸಮಾರಂಭದ ಮೂಲಕ ಶಕ್ತಿ ತುಂಬಿರುವ ಇಡೀ ಗ್ರಾಮದ ಎಲ್ಲ ಮುಖಂಡರು ಮತ್ತು ಜನತೆಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿ,ಇನ್ನಷ್ಟು ಹೆಚ್ಚಿನ ಸೇವೆ ಮಾಡಲು ಭಗವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

    ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ್, ಕರವೇ ತಾ.ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ,ರಾಮಸ್ವಾಮಿ ಕಿಲ್ಲೇದಾರ,ನಿಂಗಯ್ಯ ಕಿಲ್ಲೇದಾರ,ಪ್ರಧಾನೆಪ್ಪ ಸಕ್ರಾಪೂರ,ವೈಜನಾಥ ಹುದ್ದಾರ, ಸಂಜೀವಪ್ಪ ಕಟ್ಟಿಮನಿ,ಬಸವರಾಜ ಜಂಬಲದಿನ್ನಿ,ನರಸಿAಗ ಜಮಾದಾರ,ಬಾಬು ಪಟೇಲ್,ಮಲ್ಲಣ್ಣ ರಾಜಾಪುರ,ಮಾನಪ್ಪ ಕಟ್ಟಿಮನಿ, ಲಕ್ಷಿö್ಮÃಪತಿ ದೊರೆ ಹಾಗೂ ನಾಗರಾಳ ಗ್ರಾಮದ ಭೀಮರಾಯ ಠಾಣಾಗುಂದಿ,ತಿಪ್ಪಣ್ಣ ಚೆನ್ನೂರ,ಮಾನಪ್ಪಗೌಡ,ತಿರುಪತಿ ಹುದ್ದಾರ,ಅಯ್ಯಣ್ಣ ಕಟ್ಟಿಮನಿ,ಯಂಕಪ್ಪ ಹುದ್ದಾರ,ಸೋಮು ಕಟ್ಟಿಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.ನಿವೃತ್ತ ಶಿಕ್ಷಕ ಭೀಮಣ್ಣ ಹುದ್ದಾರ ನಿರೂಪಿಸಿದರು,ನಿಂಗಯ್ಯ ಕಿಲ್ಲೆದಾರ ವಂದಿಸಿದರು.

  • ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು; ಗಬಸಾವಳಗಿ

    ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು; ಗಬಸಾವಳಗಿ

    ಸತ್ಯಕಾಮ ವಾರ್ತೆ ತಾಳಿಕೋಟೆ :

    ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು. ಹೊರಗಿನ ಆಕರ್ಷಣೆಗೆ ಮತ್ತು ಒತ್ತಡಗಳಿಗೆ ಒಳಗಾಗುತ್ತಿರುವ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಶಿಸ್ತಿನಡಿ ತರಬೇಕಾದರೆ ಶಾಲೆ ಮತ್ತು ಮನೆ ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಸಾಹೇಬಗೌಡ ಗಬಸಾವಳಗಿ ಹೇಳಿದರು.

    ತಾಲೂಕಿನ ಕೊಡಗಾನೂರ ಗ್ರಾಮದ ಬೇಲೂರು ಕ್ರಾಸ್ ಹತ್ತಿರ ಇರುವ ಜೆ ಎಸ್ ಎಸ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ “ಪಾಲಕರ ನಮನ” ಎಂಬ ಪಾಲಕರ ಸಭೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಪೂರ್ವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಈ ಎರಡು ಹಂತಗಳು ವಿದ್ಯಾರ್ಥಿಯ ಕಲಿಕಾ ಜೀವನದಲ್ಲಿ ಪ್ರಮುಖವಾದ ಘಟ್ಟ. ಈ ಹೊತ್ತಿನಲ್ಲಿ ಪಾಲಕರು, ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಒಟ್ಟಿಗೆ ಕೆಲಸ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಜತೆಗೆ ಒಳ್ಳೆಯ ಸಂಸ್ಕಾರ ನೀಡುವದು ಅನಿವಾರ್ಯತೆ ಇದೆ. ತಂದೆ ತಾಯಿ ಮಕ್ಕಳಿಗೆ ಜನ್ಮ ಕೊಟ್ಟರೆ,ಶಿಕ್ಷಕರು ಮಕ್ಕಳ ಜೀವನದಲ್ಲಿ ದಿಕ್ಕು ತೋರಿಸುವ ದೀಪದಂತೆ. ಅವರು ಮಕ್ಕಳಿಗೆ ಕೇವಲ ಪಾಠಗಳನ್ನು ಮಾತ್ರ ಕಲಿಸುವುದಿಲ್ಲ, ಬದಲಾಗಿ ಅವರ ಭವಿಷ್ಯವನ್ನು ರೂಪಿಸು ಕಾರ್ಯ ಮಾಡುತ್ತಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಿದ್ದನಗೌಡ ಗಬಸಾವಳಗಿ, ವಿಜಯಲಕ್ಷ್ಮಿ ಸಾಗಬಸಾವಳಗಿ, ಮಹದೇವ ತಳವಾರ,ವಿನಾಯಕ ಪಟಗಾರ,ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಅನೇಕ ಪಾಲಕರು ಉಪಸ್ಥಿತರಿದ್ದರು.

  • ಕೇಂದ್ರದ ನಿಲುವಿಗೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ವಿರೋಧ

    ಕೇಂದ್ರದ ನಿಲುವಿಗೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ವಿರೋಧ

    ಸತ್ಯಕಾಮ ವಾರ್ತೆ ಹುಣಸಗಿ:
    ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರದಾರರ ಸಂಘದಿಂದ ಕೇಂದ್ರ ಸರಕಾರವು ನಿವೃತ್ತ ನೌಕರದಾರರ ಪಿಂಚಣಿಯ ಕುರಿತ ನಿಲುವನ್ನು ವಿರೋಧಿಸಿ, ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

    ಸಂಘದ ತಾಲೂಕು ಅಧ್ಯಕ್ಷ ನಾಗಪ್ಪ ಹಡಿಕ್ಯಾಳ ಹಾಗೂ ಪದಾಧಿಕಾರಿ ಆರ್.ಎಲ್ ಸುಣಗಾರ ಮಾತನಾಡಿ, ಕೇಂದ್ರ ಸರಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಆರ್ಥಿಕ ಬಿಲ್‌ನ್ನು ಮಂಡಿಸುವ ವೇಳೆ ೮ನೇ ವೇತನ ಆಯೋಗದ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ಮೇಲೆ ದಿ.೧-೪-೨೦೨೬ ರ ನಂತರ ನಿವೃತ್ತಿಯಾಗುವವರಿಗೆ ಮಾತ್ರ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲಾಗುವುದು.

    ಆದರೆ ೧-೪-೨೦೨೬ರ ಪೂರ್ವದಲ್ಲಿ ನಿವೃತ್ತಿಯಾದವರಿಗೆ ಪರಿಷ್ಕರಿಸುವುದು ಕಷ್ಟಕರ ಎಂದು ಹೇಳಿರುವ ಮಾತಿನ ವಿಚಾರವು ದೇಶದ ಎಲ್ಲ ರಾಜ್ಯಗಳ ನಿವೃತ್ತ ನೌಕರರಿಗೆ ಸಂಕಷ್ಟ ತಂದೊಡ್ಡಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

    ಒಂದು ವೇಳೆ ಈ ಮಾತಿನಂತೆ ಕೇಂದ್ರ ಸರಕಾರವು ನಿರ್ಣಯ ಅಂಗೀಕರಿಸಿದಲ್ಲಿ ನಿವೃತ್ತ ನೌಕರದಾರರಿಗೆ ತುಂಬ ತೊಂದರೆಯಾಗಲಿದೆ. ವೃದ್ದಾಪ್ಯದಲ್ಲಿರುವ ಇವರಿಗೆ ಈ ಸರಕಾರದ ನಿಲುವು ವಿವಿಧ ರೀತಿಯ ಸಂಕಷ್ಟ ತರಲಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ ಅವರು ಸರಕಾರವು ಕೂಡಲೆ ಈ ವಿಚಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

    ನಂತರ ದೇಶದ ಪ್ರಧಾನಮಂತ್ರಿಯವರಿಗೆ ಬರೆದ ಮನವಿ ಪತ್ರವನ್ನು ಹುಣಸಗಿಯ ತಹಶೀಲ್ದಾರರ ಮುಖಾಂತರ ಸಲ್ಲಿಸಲಾಯಿತು.

    ಇದಕ್ಕೂ ಮುಂಚೆ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ದಾರರ ಕಚೇರಿಯವರೆಗೂ ನಿವೃತ್ತನೌಕರರು ಮೌನವಾಗಿ ಮೆರವಣಿಗೆ ನಡೆಸಿದರು.

    ಈ ಸಂದರ್ಭ ನಿವೃತ್ತ ನೌಕರದಾರರ ಸಂಘದ ಧನೇಶನಾಯಕ ರಾಠೋಡ್, ಬಸಣ್ಣ ಗೊಡ್ರಿ, ಶಿವಪ್ಪ ಅಂಗಡಿ, ಚಂದ್ರಶೇಖರಗೌಡ ಪೊಲೀಸ್ ಪಾಟೀಲ್, ಶಾಂತಗೌಡ ಪಾಟೀಲ್, ಜಗದೀಶ ಶಹಪುರ, ಪ್ರಾಣೇಶ ಕುಲಕರ್ಣಿ, ಹುಸೇನಸಾಬ್, ಬಸಣ್ಣ ಚಿಂಚೋಳಿ, ಈಶ್ವರ ಬಡಿಗೇರ, ಬಿ.ಎಸ್. ಗೂಡಲಮನಿ ಸೇರಿದಂತೆ ಇತರರಿದ್ದರು.

  • ಶಸ್ತ್ರ ಚಿಕಿತ್ಸೆ ಇಲ್ಲದೆ ಐದು ವರ್ಷದ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಹೊರ ತೆಗೆದ ವೈದ್ಯರು

    ಶಸ್ತ್ರ ಚಿಕಿತ್ಸೆ ಇಲ್ಲದೆ ಐದು ವರ್ಷದ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಹೊರ ತೆಗೆದ ವೈದ್ಯರು

    ಸತ್ಯಕಾಮ ವಾರ್ತೆ ಯಾದಗಿರಿ:

    5 ವರ್ಷದ ಪುಟ್ಟ ಬಾಲಕನ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸೀರೆಗೆ ಹಚ್ಚುವ ಪಿನ್ನಿನ ಪ್ಲಾಸ್ಟಿಕ್ ಕ್ಲಿಪ್ ವಸ್ತುವೊಂದನ್ನು ನಗರದ ನಾಯ್ಕೋಡಿ ಆಸ್ಪತ್ರೆಯ ಕಿವಿ ಮೂಗು ಗಂಟಲು ರೊಗ ತಜ್ಞ ಡಾ. ರಾಹುಲ್. ಎಸ್ ನಾಯ್ಕೋಡಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ಇಲ್ಲದೆ ಸ್ಕೋಪಿ ಮೂಲಕ ಪಿನ್ನಿನ ಪ್ಲಾಸ್ಟಿಕ್ ಕ್ಲಿಪ್ ಅನ್ನು ಯಶಸ್ವಿಯಾಗಿ ಹೊರ ತೆಗೆದು ಮಗುವಿನ ಪ್ರಾಣ ರಕ್ಷಿಸಿದ್ದಾರೆ.

    ಈ ಕುರಿತ ಡಾ. ರಾಹುಲ್ .ಎಸ್ ನಾಯ್ಕೋಡಿ ಮಾತನಾಡಿ ನಮ್ಮ ಆಸ್ಪತ್ರೆಗೆ ‌ತಾಲೂಕಿನ ಗಡ್ಡೆಸೂಗುರ ಗ್ರಾಮದ ಸಾಹೇಬರೆಡ್ಡಿ ಎಂಬುವರ ಐದು ವರ್ಷದ ಪುಟ್ಟ ಬಾಲಕ ಆಕಾಶ್ ಮನೆಯಲ್ಲಿ ಆಟವಾಡುವ ಸಮಯದಲ್ಲಿ ಪಿನ್ನಿನ ಪ್ಲಾಸ್ಟಿಕ್ ಕ್ಲಿಪ್ ನುಂಗಿದ್ದಾನೆ ಎಂದು ದಾಖಲಿಸಿದ್ದರು.

    ಡಾ. ರಾಹುಲ್ .ಎಸ್ ನಾಯ್ಕೋಡಿ
    ಡಾ. ರಾಹುಲ್ .ಎಸ್ ನಾಯ್ಕೋಡಿ

    ನಾವು ಕೆಲವು ಪರೀಕ್ಷೆಗಳನ್ನು ಮಾಡುವ ಮೂಲಕ ಅದನ್ನು ಪತ್ತೆ ಹಚ್ಚಿದೆವು ಅದು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡ ಕಾರಣ ಮಗುವಿನ ಉಸಿರಾಟದ ತೊಂದರೆ ಉಂಟಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು ತಕ್ಷಣ ನಮ್ಮ ವೈದ್ಯರ ತಂಡ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಮಗುವನ್ನು ಪ್ರಾಣಪಾಯದಿಂದ ಪಾರು ಮಾಡಿದ್ದೇವೆ, ಪಾಲಕರು ಚಿಕ್ಕ ಮಕ್ಕಳ ಕೈಗೆ ಮತ್ತು ಅವರ ಮುಂದೆ ಸಣ್ಣಪುಟ್ಟ ವಸ್ತುಗಳು ನಾಣ್ಯಗಳನ್ನು ಕೊಡಬಾರದು ಮಕ್ಕಳ ಗಂಟಲಿನಲ್ಲಿ ಪ್ಲಾಸ್ಟಿಕ್ ಅಥವಾ ನಾಣ್ಯದಂತ ವಸ್ತುಗಳು ಸಿಕ್ಕಿಹಾಕಿಕೊಂಡಾಗ ಮಗುವಿನ ಪ್ರಾಣ ಹಾನಿ ಸಂಭವ ಹೆಚ್ಚು ಇರುತ್ತದೆ ಆದ್ದರಿಂದ ಪಾಲಕರು ಜಾಗೃತಿ ವಯಸುವಂತೆ ಹೇಳಿದರು.

    ಈ ಒಂದು ಯಶಸ್ವಿ ಸ್ಕೋಪಿ ಚಿಕಿತ್ಸೆ ಕಾರ್ಯದಲ್ಲಿ ಡಾ. ರಾಹುಲ್ ಎಸ್.ನಾಯ್ಕೋಡಿ, ಅರವಳಿಕೆ ತಜ್ಞ ಡಾ. ಚೇತನ್ ಜೆವುರ, ಡಾ.ರಾಜೇಶ್ವರಿ ಆರ್. ನಾಯ್ಕೋಡಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಇದ್ದರು​