Author: Satyakam NewsDesk

  • ರಾಜಾ ವೇಣುಗೋಪಾಲ್ ನಾಯಕರಿಗೆ ನಿಗಮ ಮಂಡಳಿ ಸ್ಥಾನ ನೀಡಿ: ರಂಗನಗೌಡ ಪಾಟೀಲ್ ಮನವಿ

    ರಾಜಾ ವೇಣುಗೋಪಾಲ್ ನಾಯಕರಿಗೆ ನಿಗಮ ಮಂಡಳಿ ಸ್ಥಾನ ನೀಡಿ: ರಂಗನಗೌಡ ಪಾಟೀಲ್ ಮನವಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಸುರಪುರ ವಿಧಾನಸಭಾ ಮತ ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದ ದಿ: ರಾಜಾ ವೆಂಕಟಪ್ಪನಾಯಕರ ಪುತ್ರರಾದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ್ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಕೆಪಿಸಿಸಿ ಹಿಂದುಳಿದ ವಿಭಾಗದ ರಾಜ್ಯ ಕಾರ್ಯದರ್ಶಿ ರಂಗನಗೌಡ ಪಾಟೀಲ್ ದೇವಕೇರಿ ಒತ್ತಾಯಿಸಿದ್ದಾರೆ. ‌

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಲ್ಯಾಣ ಕರ್ನಾಟಕ ಇತಿಹಾಸದಲ್ಲಿ ಪಕ್ಷ ನಿಷ್ಠೆಗೆ ಹೆಸರು ವಾಸಿಯಾದ ಕುಟುಂಬ ಅಂದರೆ ಅದು ರಾಜಾ ವೆಂಕಟಪ್ಪ ನಾಯಕರ ಕುಟುಂಬ ವೆಂಕಟಪ್ಪ ನಾಯಕರು 4 ಸಲ ಶಾಸಕರಾಗಿ ಸುರಪುರ ಮತ ಕ್ಷೇತ್ರದ ಅಭಿವೃದ್ಧಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತೆ ಕಳೆದ 2023ರ ಚುನಾವಣೆಯಲ್ಲಿ ಆಯ್ಕೆಯಾದ ಮೇಲೆ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆಯಾದರು ಆದರೆ ಅಧಿಕಾರ ವಹಿಸಿಕೊಂಡ ಸ್ವಲ್ಪ ದಿನದಲ್ಲೇ ನಿಧನವಾದರೂ 2024 ರ ಉಪ ಚುನಾವಣೆಯಲ್ಲಿ ಅವರ ಪುತ್ರರಾದ ರಾಜಾ ವೇಣುಗೋಪಾಲ್ ನಾಯಕ ಸ್ಪರ್ಧೆ ಮಾಡಿ ಅತಿ ಹೆಚ್ಚು ಅಂತರದಿಂದ ಶಾಸಕರಾದರು ಆದ್ದರಿಂದ ಹಿಂದುಳಿದ ಭಾಗದ ಅಭಿರುದ್ದಿ ವಿಚಾರವಾಗಿ ಸುರಪುರ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ್ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಹಾಗೂ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿಗಳಾದ ರಂಗನಗೌಡ ಪಾಟೀಲ್ ದೇವಿಕೇರಿ ಮನವಿ ಮಾಡಿಕೊಂಡಿದ್ದಾರೆ

  • ಮಾಜಿ ಶಾಸಕ ತೆಲ್ಕೂರ್ ಆರೋಪದಲ್ಲಿ ಹುರುಳಿಲ್ಲ : ಶಾಸಕ ಚನ್ನಾರಡ್ಡಿ ಪಾಟೀಲ್ ಸ್ಪಷ್ಟನೆ

    ಮಾಜಿ ಶಾಸಕ ತೆಲ್ಕೂರ್ ಆರೋಪದಲ್ಲಿ ಹುರುಳಿಲ್ಲ : ಶಾಸಕ ಚನ್ನಾರಡ್ಡಿ ಪಾಟೀಲ್ ಸ್ಪಷ್ಟನೆ

    ಸತ್ಯಕಾಮ ವಾರ್ತೆ ಯಾದಗಿರಿ:

    ನಗರದ ಡಿವೈಎಸ್ ಪಿ ಅಧಿಕಾರ ಸ್ಚೀಕಾರ ವಿಚಾರಕ್ಕೆ ಸಂಬಂಧಪಟ್ಟಂತೆಯೇ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಕಾಂಗ್ರೆಸ್ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಸ್ಪಷ್ಟಪಡಿಸಿದ್ದಾರೆ.

    ಇಲ್ಲಿನ ತಮ್ಮ ಕಚೇರಿಯಲ್ಲಿ ಶನಿವಾರ ವಡಗೇರಾ ತಾಲೂಕಿನ 12 ಗ್ರಾಮಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ನಂತರ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಖಾಲಿ ಇರುವ ಹುದ್ದೆಗೆ ರಾಜ್ಯ ಸರ್ಕಾರ, ಗೃಹ ಇಲಾಖೆ ಅಧಿಕಾರಿಗಳನ್ನು ವರ್ಗ ಮಾಡುವುದು ಸಹಜ ಕ್ರೀಯೆ. ಇಲ್ಲಿಗೆ ಪೊಸ್ಟಿಂಗ್ ಪಡೆದವರು ಯಾಕೆ ಇನ್ನೂ ಅಧಿಕಾರ ಸ್ಚೀಕರಿಸಿಲ್ಲ ಎಂಬ ಬಗ್ಗೆ ಇಲಾಖೆ ಮೇಲಾಧಿಕಾರಿಗಳು ಇಲ್ಲವೇ ಡಿವೈಎಸ್ ಪಿಯಾಗಿ ಬರಲಿರುವವರು ಹೇಳಬೇಕೆಂದರು. ಆದರೇ ಇದರಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದ ಶಾಸಕರು, ಈ ಹಿಂದೇ ತೆಲ್ಕೂರ್ ಅವರು ಶಾಸಕರಾಗಿ ಕೆಲಸ ಮಾಡಿದ್ದಾರೆ. ಶಾಸಕಾಂಗ, ಕಾರ್ಯಾಂಗ ವ್ಯವಸ್ಥೆ ಅವರಿಗೂ ಗೊತ್ತಿದೆ ಅಂತ ಭಾವಿಸುತ್ತೆನೆ. ಒಬ್ಬ ಶಾಸಕ ತನ್ನ ಮತಕ್ಷೇತ್ರದಲ್ಲಿ ಬೇಕು – ಬೇಡಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಒಂದು ದಿನ ಇಂತಹ ಯಾವುದೇ ವಿಷಯವನ್ನು ತಡೆಯಬಹುದು. ಅವರೇ ಹೇಳುವ ಹಾಗೇ 10-12 ದಿನಗಳಾದವು ಎಂದರೇ, ಇಷ್ಟು ಒತ್ತಡ ಸರ್ಕಾರದ ಮೇಲೆ ಹಾಕಿ ತಡೆಯುವ ಯಾವುದೇ ಬಯಕೆ ಮತ್ತು ಇಚ್ಛೆ ನನಗಿಲ್ಲ. ನಾವು ಆಡಳಿತದಲ್ಲಿವೆ, ಆರೋಪಿಸುವವರು ಪ್ರತಿಪಕ್ಷದಲ್ಲಿ ಇದ್ದಾರೆ. ಸಹಜವಾಗಿ ಇಂತಹ ಸುಳ್ಳು ಆರೋಪ ಮಾಡುತ್ತಾರೆ. ಇದೆಲ್ಲ ಸರ್ಕಾರದ ಮಟ್ಟದಲ್ಲಿ ನಡೆಯುವ ಕೆಲಸವೆಂದು ಶಾಸಕರು ಹೇಳಿದರು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಠ ಜಾತಿ ವಿಭಾಗದ ಅಧ್ಯಕ್ಷ ನೀಲಕಂಠ ಬಡಿಗೇರ್ ಇದ್ದರು.

    12 ಗ್ರಾಮಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ : ಶಾಸಕ ತುನ್ನೂರು

    ಯಾದಗಿರಿ: ಇಂದು ವಡಗೇರಾ ತಾಲೂಕಿನ ಸುಮಾರು 12 ಗ್ರಾಮ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಗಿದೆ. ಈ ಮೂಲಕ ಸಾರ್ವಜನಿಕರ ಕೆಲಸಗಳಿಗೆ ವೇಗ ಸಿಗಲಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ಹೇಳಿದರು. ತಮ್ಮ ಮತಕ್ಷೇತ್ರದಲ್ಲಿ ಈ ಮುಂಚೆ 17 ಲ್ಯಾಪ್ ಟಾಪ್ ವಿತರಿಸಲಾಗಿದೆ.

    ಇ – ಖಾತೆ ಕೆಲಸ ಸೇರಿದಂತೆಯೇ ವಿವಿಧ ಸಾರ್ವಜನಿಕರ ಕೆಲಸಗಳಿಗೆ ಅಧಿಕಾರಿಗಳು ಸ್ಪಂಧಿಸಬೇಕೆಂದರು.

    ವಡಗೇರಾ ತಹಸಿಲ್ದಾರ್, ಸೇರಿದಂತೆಯೇ ಇತರರಿದ್ದರು.

    —-

  • ತಾಯ್ನಾಡಿಗೆ ಮರಳಿದ ಹೊಟ್ಟಿಗೆ ಸನ್ಮಾನ

    ತಾಯ್ನಾಡಿಗೆ ಮರಳಿದ ಹೊಟ್ಟಿಗೆ ಸನ್ಮಾನ

    ಸತ್ಯಕಾಮ ವಾರ್ತೆ ಯಾದಗಿರಿ:
    ಇಂಗ್ಲೆಂಡನಲ್ಲಿ ಒಂದು ವಾರ ಕಾಲ ಆಯೋಜಿಸಿದ ಅಂತರಾಷ್ಟ್ರೀಯ ಸಹಕಾರ ಸಮಾವೇಶದಲ್ಲಿ ಭಾಗವಹಿಸಿ ವಿದೇಶಿ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ನವ ದೆಹಲಿಯ ನೆಪೇಡ್ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿದ್ದಪ್ಪ ಎಸ್ ಹೊಟ್ಟಿ ಅವರನ್ನು ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಯಾದಗಿರಿ ವತಿಯಿಂದ ಸನ್ಮಾನಿಸಲಾಯಿತು.

    ತಾಲೂಕು ಅಧ್ಯಕ್ಷರಾದ ವೆಂಕಟೇಶ ಕಲಕಂಭ ಮಾತನಾಡಿ ಕನ್ನಡದ ಏಳಿಗೆಗೆ ಸದಾ ಸಂಘಟನಾತ್ಮಕವಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಪ್ಪ ಹೊಟ್ಟಿ ಅವರ ಸಮಾಜ ಸೇವೆ ದೊಡ್ಡದು ಅವರು ಇನ್ನು ಹೆಚ್ಚಿನ ಸ್ಥಾನಮಾನಗಳನ್ನ ಪಡೆದುಕೊಂಡು ಕನ್ನಡದ ನಾಡು ನುಡಿ ಹಾಗೂ ಕೃಷಿ ಮತ್ತು ಸಹಕಾರ ಕ್ಷೇತ್ರದಲ್ಲಿ ಜನರ ಸೇವೆಯನ್ನು ಮಾಡಲೆಂದು ಆಶಿಸುತ್ತೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕರ. ಸೋಮಶೇಖರ್ ಮಣ್ಣೂರು. ಬಸವಂತ್ರಾಯಗೌಡ ಮಾಲಿಪಾಟೀಲ. ನೂರಂದಪ್ಪ ಲೇವಡಿ. ನಾಗೇಂದ್ರಪ್ಪ ಜಾಜಿ. ಚೆನ್ನಪ್ಪ ಠಾಣಗುಂದಿ. ದೇವಿಂದ್ರರಡ್ಡಿ ಯಡ್ಡಳ್ಳಿ. ಮಲ್ಲಿಕಾರ್ಜುನ ಹಳ್ಳಿಕಟ್ಟಿ. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಪಾಟೀಲ ಕಿಲ್ಲನಕೇರ ಸಂಘಟನಾ ಕಾರ್ಯದರ್ಶಿ, ಬಸನಗೌಡ ಪಾಟೀಲ ಕೋಶ್ಯಾಧ್ಯಕ್ಷರಾದ ವೀರಭದ್ರಯ್ಯ ಸ್ವಾಮಿ ಜಾಕಮಠ ಪ್ರತಿನಿಧಿ ರಮೇಶ್ ಈಟ್ಟೆ ಉಪಸ್ಥಿತರಿದ್ದರು.

  • ಗರ್ಭೀಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕುಸಿತ ಶಾಸಕ ಕಂದಕೂರ ಕಳವಳ

    ಗರ್ಭೀಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕುಸಿತ ಶಾಸಕ ಕಂದಕೂರ ಕಳವಳ

    ಸತ್ಯಕಾಮ ವಾರ್ತೆ ಯಾದಗಿರಿ :

    ಗುರುಮಠಕಲ್ ಮತಕ್ಷೇತ್ರದ ಹಲವು ಆಸ್ಪತ್ರೆಗಳಲ್ಲಿ ದಾಖಲಾದ ಗರ್ಭೀಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಶೇಕಡವಾರು ಅತ್ಯಂತ ಕಡಿಮೆ ಪ್ರಮಾಣದಲ್ಲಿ ೮,೯ ಹೀಗೆ ೧೦ರೊಳಗೆ ಇರುವುದನ್ನು ಕಂಡು ಶಾಸಕ ಶರಣಗೌಡ ಕಂದಕೂರ ಕಳವಳ ವ್ಯಕ್ತಪಡಿಸಿದರು.

    ಗುರುಮಠಕಲ್ ಮತಕ್ಷೇತ್ರದ ಪಿಹೆಚ್‌ಸಿ, ಸಿಹೆಚ್‌ಸಿ, ತಾಲೂಕು ಆರೋಗ್ಯ ಕೇಂದ್ರಗಳಿಗೆ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿದ ವಿಷಯ ಕಂಡು ಶಾಸಕರು ಹಿಮೋಗ್ಲೋಬಿನ್ ಹೆಚ್ಚಳಕ್ಕೆ ಶೀಘ್ರ ಕಾರಣ ಹುಡುಕು ಪಟ್ಟಿ ಮಾಡಿ ವರದಿ ಸಲ್ಲಿಸುವಂತೆ ತಾಲೂಕು ಆರೋಗ್ಯ ಅಧಿಕಾರಿ ಹಣಮಂತರೆಡ್ಡಿಯವರಿಗೆ ಸೂಚಿಸಿದರು.

    ಗುರುಮಠಕಲ್ ಮತಕ್ಷೇತ್ರದ ಪಿಹೆಚ್‌ಸಿ, ಸಿಹೆಚ್‌ಸಿ, ತಾಲೂಕು ಆರೋಗ್ಯ ಕೇಂದ್ರಗಳಿಗೆ ಶಾಸಕ ಶರಣಗೌಡ ಕಂದಕೂರ ಭೇಟಿ, ಮೂಲಸೌಕರ್ಯ ಕಲ್ಪಿಸಲು ಸೂಚನೆ
    ಗುರುಮಠಕಲ್ ಮತಕ್ಷೇತ್ರದ ಪಿಹೆಚ್‌ಸಿ, ಸಿಹೆಚ್‌ಸಿ, ತಾಲೂಕು ಆರೋಗ್ಯ ಕೇಂದ್ರಗಳಿಗೆ ಶಾಸಕ ಶರಣಗೌಡ ಕಂದಕೂರ ಭೇಟಿ, ಮೂಲಸೌಕರ್ಯ ಕಲ್ಪಿಸಲು ಸೂಚನೆ

    ಔಷಧಿನೇ ಇಲ್ಲಂದ್ರ ಆಸ್ಪತ್ರೆ ಹ್ಯಾಂಗ್ ನಡೆಸ್ತಿರಿ : 

    ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಕೆಲವು ಕಡೆ ತಜ್ಞ ವೈದ್ಯರಿಲ್ಲ, ವೈದ್ಯರಿದ್ದರೂ ಒಬ್ಬೊರಿಗೆ ಹಲವು ಆಸ್ಪತ್ರೆಗಳು ಪ್ರಭಾರ ಇರುವುದರಿಂದ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಯಾವುದೇ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯವಿಲ್ಲವೆಂದು ಜನರು ದೂರಿದರೆ, ನಾಯಿ ಕಡಿತಕ್ಕೆ ಕಳೆದ ೬ ತಿಂಗಳಿAದ ಲಸಿಕೆ ಲಭ್ಯವಿಲ್ಲ, ೪ ತಿಂಗಳಿAದ ಐವಿ ಪ್ಲೂಡ್ಸ್ ಸರಬರಾಜಿಲ್ಲ, ಕೆಲವೊಂದು ಔಷಧಿಗಳು ಆಸ್ಪತ್ರೆಯ ನಿರ್ವಹಣಾ ವೆಚ್ಚದಲ್ಲಿ ಖರೀದಿ ಮಾಡುತ್ತೇವೆ ಹೀಗೆ ಸಾಲು ಸಾಲು ಸಮಸ್ಯೆಗಳು ಗುರುಮಠಕಲ್ ಮತಕ್ಷೇತ್ರದ ಹಲವು ಆಸ್ಪತ್ರೆಗಳಲ್ಲಿ ಕಂಡು ಬಂದವು.

    ಕAಡು ಬಂದ ಹಲವು ದೃಶ್ಯಗಳನ್ನು ಕಂಡು ದಂಗಾದ ಶಾಸಕ ಇದೇ ರೀತಿ ಆಸ್ಪತ್ರೆಗಳಲ್ಲಿ ಔಷಧಿನೇ ಇಲ್ಲಂದ್ರ ಆಸ್ಪತ್ರೆ ಹ್ಯಾಂಗ್ ರೀ ನಡೆಸ್ತೀರಿ ಎಂದು ಡಿಹೆಚ್‌ಒ ಅವರನ್ನು ತರಾಟೆಗೆ ತೆಗೆದುಕೊಂಡರು.

    ಸಮಜಾಯಿಸಿ ನೀಡಲು ಬಂದ ತಾಲೂಕು ಆರೋಗ್ಯ ಅಧಿಕಾರಿ ಹಣಮಂತರಡ್ಡಿಯವರಿಗೆ ಸುಮ್ನೆ ಇರಪ್ಪ ನಾ ಬಂದಾಗ ಈ ಸಮಸ್ಯೆ ಗೊತ್ತಾಯಿತು. ಇಷ್ಟು ದಿನ ನಿವೆಲ್ಲ ಏನ್ರಿ ಮಾಡಿದ್ದೀರಿ, ಯಾವಗಾದರೂ ಬಂದು ಆಸ್ಪತ್ರೆಗೆ ವಿಸಿಟ್ ಮಾಡಿದ್ದೀರಾ, ಮಾಡಿದ್ದರೆ ಎಂದೋ ಈ ಸಮಸ್ಯೆ ಬಗೆ ಹರಿತಿತ್ತು. ಆಸ್ಪತ್ರೆಗಳಲ್ಲಿ ಇಷ್ಟೊಂದು ಸಮಸ್ಯೆ ಇದೆ ನೀವೇನ್ರಿ ಮಾಡ್ತಿರಿ ಎಂದು ಗದರಿದರು.

    ತದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಸೇರಿದಂತೆ ಹಲವು ಮೇಲಾಧಿಕಾರಿಗಳಿಗೆ ಸ್ಥಳದಿಂದಲೇ ಪೋನ್ ಸಂಪರ್ಕ ಮಾಡಿ ವಿಷಯದ ತೀವ್ರತೆ ಮತ್ತು ಸಮಸ್ಯೆಗಳ ಪರಿಹರಿಸುವಂತೆ ಕೋರಿದರು.

    ಕೋಟಗೇರಾ ಆಸ್ಪತ್ರೆಗೆ ಭೇಟಿ :

    ಮತಕ್ಷೇತ್ರದ ಕೋಟಗೇರಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಟಾಫ್ ನರ್ಸ್ಗಳ ವರ್ತನೆ, ಫಾರ್ಮಾಸಿಸ್ಟ್ ನಿರ್ಲಕ್ಷö್ಯ ಕಂಡು ಕೆರಳಿದ ಶಾಸಕರು ಕೂಡಲೇ ಇಬ್ಬರಿಗೆ ನೊಟಿಸ್ ನೀಡುವಂತೆ ಸೂಚಿಸಿದರು.

    ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್‌ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು. ನಂತರ ಆಸ್ಪತ್ರೆ ಸ್ವಚ್ಚತೆ ಕಾಪಾಡಬೇಕು, ಕಾಂಪೌಡ್ ಒಳಗೆ ಸಿಸಿ ರಸ್ತೆ, ಗಾರ್ಡ್ನ್ ನಿರ್ಮಿಸಲು ಕ್ರಮಕೈಗೋಳ್ಳಬೇಕು, ಜನರು ಆಸ್ಪತ್ರೆಗೆ ರೋಗ ವಾಸಿ ಮಾಡಿಕೊಳ್ಳಲು ಬರಬೇಕು ರೋಗ ಹಚ್ಚಿಕೊಂಡು ಹೋಗುವಂತಾಗಬಾರದು ಮತ್ತೊಮ್ಮೆ ಬರುವ ವೇಳೆಗೆ ಎಲ್ಲಾ ಸರಿಯಾಗಬೇಕು ಇಲ್ಲಂದ್ರ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.

     

    ಗಾಜರಕೋಟ್ ಆಸ್ಪತ್ರೆಗೆ ಭೇಟಿ :

    ಮತಕ್ಷೇತ್ರದ ಗಾಜರಕೋಟ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಯಿ ಕಡಿತ ಲಸಿಕೆ, ಐವಿ ಪ್ಲೂಡ್ಸ್ ಕೊರತೆ ಗಮನಕ್ಕೆ ಬಂದಿದ್ದು, ಕೂಡಲೇ ಕ್ರಮಕೈಗೊಳ್ಳುವಂತೆ ಡಿಹೆಚ್‌ಒಗೆ ಸೂಚನೆ ನೀಡಿದರು. . ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್‌ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು. ಆಸ್ಪತ್ರೆ ಸಿಬ್ಬಂದಿಗಳು ಜನರು ಆಸ್ಪತ್ರೆ ಕಾಂಪೌAಡ್ ಒಳಗೆ ಟ್ರಾಕ್ಟರ್ ನಿಲ್ಲಿಸುವುದು, ಮೂತ್ರ ವಿಸರ್ಜನೆ ಮಾಡುವುದು ಮಾಡುತ್ತಿದ್ದು ಕ್ರಮಕೈಗೊಳ್ಳಬೇಕೆಂದು ತಿಳಿಸಿದಾಗ ಸ್ಥಳದಲ್ಲಿದ್ದ ಪಿಡಿಒಗೆ ಕೂಡಲೇ ಪೊಲೀಸ್ ಸ್ಟೇಶನ್‌ಗೆ ಕಂಪ್ಲೆಟ್ ಕೊಟ್ಟು ಬಿಡಿ ಎಂದು ಸೂಚಿಸಿದರು.

     

    ಗುರುಮಠಕಲ್ ಆಸ್ಪತ್ರೆಗೆ ಭೇಟಿ :

    ಗುರುಮಠಕಲ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ . ಆಸ್ಪತ್ರೆಯಲ್ಲಿನ ರಜಿಸ್ಟರ್‌ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು. ಜನರು ಆಸ್ಪತ್ರೆ ಅವ್ಯವಸ್ಥೆ ಕುರಿತು ಹಲವು ದೂರುಗಳು ಬರುತ್ತಿದ್ದು, ಎಚ್ಚರದಿಂದ ಇರಿ, ಆಸ್ಪತ್ರೆಗೆ ಬಡವರು ರ‍್ತಾರೆ ಅವರನ್ನು ಮಾನವೀಯತೆ ಇಂದ ಕಾಣಿ, ನರ್ಸ್ಗಳು ಜನರೊಡನೆ ಸೌಜನ್ಯದಿಂದ ವರ್ತಿಸದಿದ್ದಲ್ಲಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು. ಆಸ್ಪತ್ರೆ ಸ್ವಚ್ಚತೆಗೆ ಹೆಚ್ಚಿನ ಗಮನ ನೀಡಬೇಕು, ಈ ಆಸ್ಪತ್ರೆಯನ್ನು ೧೦೦ ಬೆಡ್ ಆಸ್ಪತ್ರೆಗೆ ಏರಿಸಲು ಕ್ರಮವಹಿಸಲಾಗಿದ್ದು, ಈ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ನಿವಾರಣೆಯಾಗಲಿದೆ ಎಂದರು.

    ಸೈದಾಪುರ ಆಸ್ಪತ್ರೆಗೆ ಭೇಟಿ : ಸೈದಾಪೂರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಆಸ್ಪತ್ರೆ ಸ್ವಚ್ಚತೆ ಪರಿಶೀಲಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್‌ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು.

    ತದನಂತರ ಆಸ್ಪತ್ರೆ ಸಿಬ್ಬಂದಿಗಳ ಕ್ವಾಟರಸ್ ವೀಕ್ಷಿಸಿ ಈ ಭಾಗದಲ್ಲಿಯೇ ಇಷ್ಟೊಂದು ಅತ್ಯುತ್ತಮ ಕ್ವಾಟರಸ್ ನಮ್ಮ ಕೈಯಿಂದಲೇ ಮಾಡಿಸಿದ್ದೇನೆ, ನೀವು ಕೇವಲ ಜನರ ಸೇವೆ ಮಾಡಿ ಸಾಕು ನಿಮಗೇ ಯಾವ ರೀತಿಯ ಸೌಲಭ್ಯ ಬೇಕು ನಾವ್ ಕೊಡ್ತಿವಿ, ಜನರ ದೂರು ಬರದಂತೆ ಗಮನವಹಿಸಬೇಕು ಎಂದು ಸೂಚಿಸಿದರು.

    ಮಲ್ಹಾರ ಆಸ್ಪತ್ರೆಗೆ ಭೇಟಿ : ಮತಕ್ಷೇತ್ರದ ಮಲ್ಹಾರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಅಲ್ಲಿನ ಸ್ವಚ್ಚತೆಗೆ ಶಬ್ಬಾಸ್ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್‌ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು.

    ಜನರ ಸಮಸ್ಯೆ ಆಲಿಸಿ ಜನರು ಆಸ್ಪತ್ರೆ ಸಿಬ್ಬಂದಿ ವರ್ತನೆ ಸರಿ ಇಲ್ಲವೆಂದು ದೂರಿದಾಗ ಕೆರಳಿದ ಶಾಸಕರು ನೀವು ಎಷ್ಟೇ ಒಳ್ಳಯವರಾಗಿ ಕೆಲಸ ಮಾಡಿದರೂ ಜನರೊಗೆ ಉತ್ತಮ ನಡವಳಿಕೆ ಇಲ್ಲಂದ್ರ ನೀವು ಮಾಡಿದ ಕೆಲಸ ವ್ಯರ್ಥ, ಆಸ್ಪತ್ರೆಗೆ ಬರುವವರೊಮದಿಗೆ ಸೌಜನ್ಯದಿಂದ ವರ್ತನೆ ಮಾಡಬೇಕು ಎಂದರು. ನಂತರ ಆಸ್ಪತ್ರೆ ಹಳೆಯದಾಗಿರುವುದರಿಂದ ಹೊಸ ಆಸ್ಪತ್ರೆ ನಿರ್ಮಿಸಬೇಕಾ ಅಥವಾ ಹೆಚ್ಚುವರಿ ಕೋಣೆ ನಿರ್ಮಿಸಿಬೇಕಾ ವರದಿ ಕೊಡಿ ಎಂದು ಡಿಹೆಚ್‌ಒ ರವರಿಗೆ ಸೂಚಿಸಿದರು.

     

    ೯ ಆರೋಗ್ಯ ಕ್ಷೇಮ ಕೇಂದ್ರಗಳ ಸ್ಥಾಪನೆ

    ಗುರುಮಠಕಲ್ ಮತಕ್ಷೇತ್ರದ ಬಂದಳ್ಳಿ, ಬೆಳಗುಂದಿ, ಅಚ್ಚೋಲಾ, ಸೈದಾಪುರ, ಮಾಧ್ವಾರ, ಅಜಲಾಪೂರ, ವಂಕಸAಬ್ರ, ಮೊಗದಂಪೂರ, ಕಂದಕೂರ ಹೀಗೆ ೯ ಗ್ರಾಮಗಳಲ್ಲಿ ತಲಾ ೬೫ ಲಕ್ಷ ವೆಚ್ಚದಲ್ಲಿ ಆರೋಗ್ಯ ಕ್ಷೇಮ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ. ಈ ಎಲ್ಲಾ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಈ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.

    -ಶರಣಗೌಡ ಕಂದಕೂರ ಶಾಸಕರು, ಗುರುಮಠಕಲ್

     

    ೬ ತಿಂಗಳಿAದ ನಾಯಿ ಕಡಿತ ಲಸಿಕೆ ಸರಬರಾಜಿಲ್ಲ

    ನಾಯಿ ಕಡಿತವೆಂದು ಬರುವ ರೋಗಿಗಳಿಗೆ ಚಿಕಿತ್ಸೆಗಾಗಿ ಸರ್ಕಾರ ಕಳೆದ ೬ ತಿಂಗಳಿAದ ಲಸಿಕೆ ಸರಬರಾಜು ಮಾಡಿಲ್ಲವೆಂದರೆ ಏನ್ರಿ ಅರ್ಥ ನಾಯಿ ಕಡಿದು ಜನರು ಸತ್ತರೆ ಏನ್ರಿ ಮಾಡ್ತಿರಾ, ಅವರ ಜೀವಕ್ಕೆ ಯಾವ ಬೆಲೆ ಇಲ್ಲವಾ ಎಂದು ಶಾಸಕ ಶರಣಗೌಡ ಕಂದಕೂರ ಆಕ್ರೋಶ ವ್ಯಕ್ತಪಡಿಸಿದರು.

    ಗಾಜರಕೋಟ್ ಗ್ರಾಮದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಳಿ ಬಂದ ಸಮಸ್ಯೆಗೆ ಕೆರಳಿ ಕೆಂಡವಾದ ಶಾಸಕ ಕಂದಕೂರ ಆಸ್ಪತ್ರೆಯಿಂದಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ರವರಿಗೆ ಪೋನ್ ಮಾಡಿ ನಾಯಿ ಕಡಿತಕ್ಕೆ ಚಿಕಿತ್ಸೆ ಲಭ್ಯವಿಲ್ಲ, ಕಳೆದ ೬ ತಿಂಗಳಿAದ ಲಸಿಕೆ ಸರಬರಾಜಿಲ್ಲವೆಂದು ಗಮನಕ್ಕೆ ತಂದು ಕೂಡಲೇ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

    ಇದಕ್ಕೆ ಸ್ಪಂದಿಸಿದ ಹರ್ಷಗುಪ್ತ ಕೂಡಲೇ ಕ್ರಮಕೈಗೊಳ್ಳುವುದಾಗಿ ಶಾಸಕರಿಗೆ ಭರವಸೆ ನೀಡಿದರು.

     

     

    ಎಲ್ಲಾ ಆಸ್ಪತ್ರೆಗಳಿಗೆ ಆರ್‌ಒ ಪ್ಲಾಂಟ್

    ಗುರುಮಠಕಲ್ ಮತಕ್ಷೇತ್ರದ ಎಲ್ಲಾ ಆಸ್ಪತ್ರೆಗಳಿಗೆ ಸಿಸಿ ರಸ್ತೆ, ಕಾಂಪೌAಡ್, ಮೂಲಸೌಕರ್ಯ ಜೊತೆಗೆ ಆರ್‌ಒ ಪ್ಲಾಂಟ್‌ಗಳನ್ನು ನಿರ್ಮಿಸಿಕೊಡಲಾಗುವುದು, ಅವಶ್ಯಕತೆ ಇರುವ ಆಸ್ಪತ್ರೆಗಳ ಪಟ್ಟಿ ಮಾಡಿ ಕೊಡಬೇಕು, ಎಲ್ಲಾ ಆಸ್ಪತ್ರೆಗಳ ಅಭಿವೃದ್ಧಿಗೆ ಕೆಕೆಆರ್‌ಡಿಬಿಯಿಂದ ಸಾಕಷ್ಟು ಅನುದಾನ ನೀಡುವುದಾಗಿ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

     

    ಆಸ್ಪತ್ರೆಗಳಲ್ಲಿ ಐವಿ ಪ್ಲೂಡ್ಸ್ ಲಭ್ಯವಿಲ್ಲ

    ಕಳೆದ ೪ ತಿಂಗಳಿAದ ಆಸ್ಪತ್ರೆಗಳಲ್ಲಿ ಐವಿ ಪ್ಲೂಡ್ಸ್ ಲಭ್ಯವಿಲ್ಲ ಹಿಂಗಾದರೆ ಹೇಗೆ ಆಸ್ಪತ್ರೆ ನಡೆಸ್ತಿರಿ, ಇದರಿಂದ ಜನರಿಗೆ ಹೇಗೆ ನೀವು ಉತ್ತಮ ಆರೋಗ್ಯ ಸೇವೆ ನೀಡಲು ಸಾಧ್ಯವೆಂದು ಡಿಹೆಚ್‌ಒ ವಿರುದ್ದ ಶಾಸಕರು ಗರಂ ಆದರು. ಇದಕ್ಕೆ ಸಮಜಾಯಿಸಿ ನೀಡಿದ ಡಿಹೆಚ್‌ಒ ತಕ್ಷಣದಿಂದಲೇ ಮೇಲಾಧಿಕಾರಿಗಳ ಜೊತೆ ಮಾತನಾಡಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

     

    ಗುರುಮಠಕಲ್ ಕ್ಷೇತ್ರದ ನಸಲವಾಯಿ, ಬಾಡಿಯಾಳಕ್ಕೆ ಹೊಸ ಆಸ್ಪತ್ರೆ

    ಗುರುಮಠಕಲ್ ಮತಕ್ಷೇತ್ರದ ನಸಲವಾಯಿ ಮತ್ತು ಬಾಡಿಯಾಳ ಗ್ರಾಮದಲ್ಲಿ ಹೊಸ ಆಸ್ಪತ್ರೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಗೆ ಕ್ರಮಕೈಗೊಳ್ಳಲಾಗುವುದು, ಇದರ ಜೊತೆಗೆ ಗುರುಮಠಕಲ್ ಮತಕ್ಷೇತ್ರದ ಎಲ್ಲಾ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು ಪಣತೊಟ್ಟಿದ್ದು, ತಾಲೂಕಿನ ಎಲ್ಲಾ ಆಸ್ಪತ್ರೆಗಳ ಮೂಲಸೌಕರ್ಯಗಳ ಪಟ್ಟಿ ಮಾಡಿ ವರದಿ ನೀಡುವಂತೆ ತಾಲೂಕು ಆರೋಗ್ಯ ಅಧಿಕಾರಿ ಹಣಮಂತರೆಡ್ಡಿಯವರಿಗೆ ಸೂಚನೆ ನೀಡಿದರು.

     

    ಕೋಟಗೇರಾ ಫಾರ್ಮಾಸಿಸ್ಟ್ಗೆ ನೊಟೀಸ್

    ಮಕ್ಕಳ ನಿಯಂತ್ರಣ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಶಾಸಕರು ಕೇಳಿದಾಗ ಪ್ಯಾರಾಸೆಟಾಮಾಲ್ ಔಷಧಿ, ಕೊಡುವುದು, ಅವಧಿ ಮುಗಿಯುವ ಹಂತದಲ್ಲಿರುವ ಮಾತ್ರೆಗಳು ಆಸ್ಪತ್ರೆಗಳಲ್ಲಿಟ್ಟು ದಿನಾಂಕ ಗಮನಿಸದೇ ಮೇಲಾಧಿಕಾರಿಗಳಿಗೆ ವರ್ತಮಾನದ ಕುರಿತು ಮಾಹಿತಿ ನೀಡದೇ ನಿರ್ಲಕ್ಷö್ಯ ವಹಿಸಿದ ಕೋಟಗೇರಾ ಫಾರ್ಮಾಸಿಸ್ಟ್ಗೆ ನೊಟೀಸ್ ನೀಡುವಂತೆ ಶಾಸಕ ಕಂದಕೂರ ಸೂಚನೆ.

  • ಸಮಾಜದ ಏಳಿಗೆಗೆ ಶ್ರಮಿಸಿದ ಮಹಾಶರಣ ಅಪ್ಪಣ್ಣ : ದುರುಗಣ್ಣ ನಾಯಕ

    ಸಮಾಜದ ಏಳಿಗೆಗೆ ಶ್ರಮಿಸಿದ ಮಹಾಶರಣ ಅಪ್ಪಣ್ಣ : ದುರುಗಣ್ಣ ನಾಯಕ

    ಸತ್ಯಕಾಮ ವಾರ್ತೆ ಸಿರವಾರ : 

    ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ್ದರು ಎಂದು ಪಟ್ಟಣ ಪಂಚಾಯತಿ ಸದಸ್ಯ ಸೂರಿ ದುರುಗಣ್ಣ ನಾಯಕ ಹೇಳಿದರು.

    ಪಟ್ಟಣ ಪಂಚಾಯತಿ ಕಾರ್ಯಲಯದಲ್ಲಿ ಗುರುವಾರ ನಡೆದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗರವಾಗದಂತೆ ಕಾರ್ಯನಿರ್ವಹಿಸುತ್ತಿದ್ದರು. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದರು.

    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ವೈ ಭೂಪನಗೌಡ, ಪ.ಪಂ ಸದಸ್ಯರದ ಸೇನಅಲಿ, ಕೃಷ್ಣ ನಾಯಕ, ಮುಖಂಡರಾದ ಈಶಪ್ಪ ಹೂಗಾರ, ಚಂದ್ರಶೇಖರ ಹಡಪದÀ, ಬಸವರಾಜ ಹರವಿ, ಶರಣಪ್ಪ ನಾಗನೂರ, ಬಸವರಾಜ ಹೀರಾ, ಬಸವರಾಜ ಬೂದೂರು, ಭೀಮಣ್ಣ, ಮಲ್ಲಿಕಾರ್ಜುನ, ಅಮರೇಶ, ಮೌನೇಶ, ಆನಂದ ನವಲಕಲ್, ವೀರೇಶ, ಯಮುನಪ್ಪ, ಸಿಬ್ಬಂದಿಗಳಾದ ಹಂಪಯ್ಯ, ಚಾಂದ್‌ಸಾಬ್ ಇತರರು ಇದ್ದರು.

  • ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ

    ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ

    •  ಶಾಸಕ ಕಂದಕೂರ ಆದೇಶದ ಮೆರೆಗೆ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ
    • ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ ಲವೀಶ

    ಸತ್ಯಕಾಮ ವಾರ್ತೆ ಗುರುಮಠಕಲ್:

    ಪಟ್ಟಣದ ಪದವಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವಿಶ್ ಓರ್ಡಿಯಾ ಗುರುವಾರ ಭೇಟಿ ನೀಡಿ ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು.

    ಪಟ್ಟಣದ ಪದವಿ ಕಾಲೆಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಬುಧವಾರ ಜರುಗಿದ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಶರಣಗೌಡ ಕಂದಕೂರು ಅವರಿಗೆ ವಿದ್ಯಾರ್ಥಿಗಳು ವಸತಿ ನಿಲ್ಯಗಳಲ್ಲಿನ ಸಮಸ್ಯೆಗಳನ್ನು ಗಮನಕ್ಕೆ ತಂದಾಗ, ಜಿಲ್ಲಾ ಮುಖ್ಯಾಧಿಕಾರಿಗಳಿಗೆ ಮಾತನಾಡಿ ವೀಕ್ಷಿಸಲು ತಿಳಿಸಿದ ಪ್ರಯುಕ್ತ ಅಧಿಕಾರಿಗಳು ಇಂದು ದಿಡೀರ ಭೇಟಿ ನೀಡಿ ಪರಿಶೀಲಿಸಿದರು.

    ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಡಾ. ಬಿ. ಅರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಅಡುಗೆ ಕೋಣೆ, ಶೌಚಾಲಯಗಳು, ವಿದ್ಯಾರ್ಥಿಗಳ ಕೊಠಡಿಗಳು, ಗ್ರಂಥಾಲಯಗಳನ್ನು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಜೊತೆಗೆ ಕೂಲಂಕುಷವಾಗಿ ಸಮಾಲೊಚನೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ನೀಡಬೇಕು, ವಸತಿ ನಿಲಯದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮಕ್ಕಳ ವಿಧ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಾಣಮಾಡಿ ಎಂದು ವಸತಿ ನಿಲಯ ಮೇಲ್ವೀಚಾರಕರಿಗೆ ಸೂಚಿಸಿದರು.

    ಆಹಾರದಲ್ಲಿನ ರುಚಿಯ ಕೊರತೆ, ನೀರಿನ ಸಮಸ್ಯೆ, ಸೋಲಾರ ದೀಪದ ವ್ಯವಸ್ಥೆ, ವಿಧ್ಯಾರ್ಥಿಗಳಿಗೆ ವ್ಯಾಸಂಗ ಮಾಡುವ ಕೊಠಡಿ ಹಾಗೂ ಬಿಸಿನೀರಿನ ಸಮಸ್ಯೆ ಕುರಿತು ವಿಧ್ಯಾರ್ಥಿಗಳು ಬಗೆಹರಿಸುವಂತೆ ಹೇಳಿಕೊಂಡರು.

    ವಿಧ್ಯಾರ್ಥಿಗಳಿಗೆ ಊಟದ ಮೇಜು, ಸ್ಟಡಿ ಚೇರ್, ಸೋಲಾರ್ ಪ್ಯಾನೆಲ್, ಶೌಚಾಲಯ ದುರಸ್ಥಿಗೊಳಿಸುವಂತೆ ಮತ್ತುಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಂಟಿ ಬೆಳೆದಿದ್ದು ಸ್ವಚ್ಛವಾಗಿಡಲು ಪುರಸಭೆ ಮುಖ್ಯಾಧಿಕಾರಿಗೆ ತಿಳಿಸಿದರು. ಶಾಲೆಯ ಆವರಣದಲ್ಲಿ ಮಧ್ಯಪಾನದ ಬಾಟಲ್ ಹಾಗೂ ಪ್ಯಾಕೇಟ ಕಂಡು ರಾತ್ರಿವೇಳೆ ಪೋಲಿಸ್ ಗಸ್ತು ವ್ಯವಸ್ಥೆ ಮಾಡಿಸುತ್ತೇನೆ ಹಾಗೂ ಶಾಶ್ವತ ಪರಿಹಾರವಾಗಿ ಕಾಂಪೌAಡ್ ಗೋಡೆ ನಿರ್ಮಾಣ ಮಾಡಲು ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಅಂಬರೀಷ ಪಾಟೀಲ, ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಪುರಸಭೆ ಮುಖ್ಯಾಧಿಕಾರಿ ಭಾರತಿ, ಹಿಂದುಳಿದ ವರ್ಗಗಳ ಉಪ ನಿರ್ದೇಶಕ ಸದಾಶಿವ ನಾರಾಯಣಕರ, ತಾಲೂಕ ಹಿಂದುಳಿದ ವರ್ಗಗಳ ಅಧಿಕಾರಿ ಸಂತೋಷ ರೆಡ್ಡಿ, ಸಮಾಜ ಕಲ್ಯಾಣ ತಾಲೂಕಾಧಿಕಾರಿ ಬೇಬಿ, ಪುರಸಭೆ ಕಿರಿಯ ಅಭಿಯಂತರ ಅಬ್ದುಲ್ ಅಲೀಂ, ಹಾಸ್ಟೆಲ್ ವಾರ್ಡನ್ ಶ್ರೀದೇವಿ ಹಾಜರಿದ್ದರು.

  • ದೇಶದ ಪ್ರಗತಿಯಲ್ಲಿ ಅಂಕಿ ಅಂಶಗಳು ಬಹುಮುಖ್ಯ

    ದೇಶದ ಪ್ರಗತಿಯಲ್ಲಿ ಅಂಕಿ ಅಂಶಗಳು ಬಹುಮುಖ್ಯ

    • ಖ್ಯಾತ ಸಂಖ್ಯಾಶಾಸ್ತ್ರಜ್ಞ ಮಹಾಲ್ ನೋಬಿಸ್ ಜನ್ಮದಿನಾಚರಣೆ ಅಂಗವಾಗಿ ಸಾಂಖ್ಯಿಕ ದಿನಾಚರಣೆ
    • ದೇಶದ ಪ್ರಗತಿಯಲ್ಲಿ ಅಂಕಿ ಅಂಶಗಳು ಬಹುಮುಖ್ಯ: ನೈಜ ಅಂಕಿ ಅಂಶಗಳನ್ನು ಸಂಗ್ರಹಿಸಿ ನೆರವಾಗಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಖ್ಯಾತ ಸಂಖ್ಯಾಶಾಸ್ತ್ರಜ್ಞ ಶ್ರೀ ಪ್ರಶಾಂತ ಚಂದ್ರ ಮಹಾಲ್ ನೋಬಿಸ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸಾಂಖ್ಯಿಕ ದಿನಾಚರಣೆಯನ್ನು ನಗರದ ಜಿಲ್ಲಾ ಸಂಖ್ಯಾ ಸಂಗ್ರ ಹಣಾಧಿಕಾರಿಗಳ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

    ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಾಂತ ಚಂದ್ರ ಮಹಾಲ್ನೋಬಿಸ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಅರ್ಪಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಿವೃತ್ತ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸತ್ಕರಿಸುವ ಮೂಲಕ ಅರ್ಥಪೂರ್ಣವಾಗಿ ಈ ದಿನಾಚರಣೆ ಆಚರಿಸಲಾಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಮುಖ್ಯ ಯೋಜನಾಧಿಕಾರಿ ಕೆ .ಕುಮುಲಯ್ಯ ಅವರು,,ಆಡಳಿತ ಮತ್ತು ಅಭಿವೃದ್ಧಿಯಲ್ಲಿ ದೇಶವನ್ನು ಮುಂಚೂಣಿಗೆ ತರಲು ಅಂಕಿ ಅಂಶಗಳು ಪ್ರಮುಖ ಪಾತ್ರ ವಹಿಸುತ್ತವೆ. ಕೃಷಿ, ನೀರಾವರಿ,ಜನಗಣತಿ,ಕೈಗಾರಿಕಾ ಸಮೀಕ್ಷೆ ಹೀಗೆ ವಿವಿಧ ಅಂಕಿ ಅಂಶಗಳ ನೈಜ ಸಂಗ್ರಹಣೆ ಮುಖ್ಯ.ಅದರಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಆಯವ್ಯಯ ಮತ್ತು ಕೇಂದ್ರದಿಂದ ಗ್ರಾಮ ಪಂಚಾಯತ್ ವರೆಗಿನ ಅನುದಾನ ಹಂಚಿಕೆಯಲ್ಲಿ ಅಂಕಿ ಅಂಶಗಳು ಪ್ರಮುಖವಾಗಿವೆ.

    ಈ ಹಿನ್ನೆಲೆಯಲ್ಲಿ ಅಂಕಿ ಸಂಖ್ಯೆ ಇಲಾಖೆ ಅಧಿಕಾರಿಗಳು ನೈಜ, ವಾಸ್ತವಿಕ ಅಂಕಿ ಅಂಶಗಳನ್ನು ಸಂಗ್ರಹಿಸಿ ನೀಡಬೇಕು.ತಪ್ಪು ಮಾಹಿತಿಗಳು ಯೋಜನೆಗಳ ತಪ್ಪು ರೂಪುರೇಷೆಗೆ ಕಾರಣವಾಗುತ್ತವೆ ಎಂದು ಹೇಳಿ ಮಹಾಲ್ ನೋಬಿಸ್ ಅವರ ಕೊಡುಗೆ ಸ್ಮರಿಸಿದರು.

    ಪದವಿ ಕಾಲೇಜ್ ನ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀ ಪ್ರಹ್ಲಾದ ಜೋಶಿ ಅವರು ಸರ್ಕಾರದ ಯೋಜನೆಗಳು, ಸಾಮಾಜಿಕ, ಆರ್ಥಿಕ ನೀತಿ, ನಿಯಮಗಳಿಗೆ ಅಂಕಿ ಅಂಶಗಳು ಬೆನ್ನಲುಬಾಗಿ ನಿಂತಿವೆ.ಸರ್ಕಾರ ಹಾಗೂ ಸಂಸ್ಥೆಗಳಿಗೆ ಹಾಗೂ ಮನೆಯಿಂದ ಅರಮನೆವರೆಗೆ ಅಂಕಿ ಅಂಶಗಳು ಮುಖ್ಯವಾಗಿವೆ ಎಂದು ಹೇಳಿದರು.

    ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಉದಯಕುಮಾರ್ , ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು (ಪ್ರ) ಶ್ರೀ ಸುಲೈಮಾನ್ ನದಾಫ,

    ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಂಬರಾಯ ಸಾಗರ, ಸಹಾಯಕ ನಿರ್ದೇಶಕ ಎಂ.ಪ್ರಶಾಂತಕುಮಾರ್, ಉಪಸ್ಥಿತರಿದ್ದರು.

    ಹೊನ್ನಕ್ಕ ತಾಳಿ, ಲಕ್ಷ್ಮಿ ಪ್ರಾರ್ಥಿಸಿದರು. ಪ್ರಭಾರಿ ಸಹಾಯಕ ನಿರ್ದೇಶಕಿ ಕು.ಚೇತನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಸಾಂಖ್ಯಿಕ ಅಧಿಕಾರಿ ನಾಗರಾಜ್ ನಾಗೂರ್, ಪ್ರತಿಜ್ಞಾ ವಿಧಿ ಬೋಧಿಸಿ, ಕಾರ್ಯಕ್ರಮ ನಿರ್ವಹಿಸಿದರು. ನಿವೃತ್ತ ಅಧಿಕಾರಿಗಳಾದ ಚಂದ್ರಶೇಖರ್ ಭಂಡಾರಿ, ವೆಂಕಟಯ್ಯ, ವರದರಾಜ ರೆಡ್ಡಿ, ಅಧೀಕ್ಷಕ ಸಾಹೇಬಣ್ಣ ಚೂರಿ, ಫಕೃದ್ದೀನ್,ಇವರನ್ನು ಸನ್ಮಾನಿಸಲಾಯಿತು. ಕೊನೆಯಲ್ಲಿ ದತ್ತಾತ್ರೇಯ ಭಟ್ ವಂದಿಸಿದರು.

  • ಬಿಸಿ ಊಟಕ್ಕೆ ಕಳಪೆ ಆಹಾರ ಧಾನ್ಯ ಪೂರೈಕೆದಾರರ ವಿರುದ್ಧ ಕ್ರಮಕ್ಕೆ ಮಹೇಶರಡ್ಡಿ ಮುದ್ನಾಳ ಆಗ್ರಹ

    ಬಿಸಿ ಊಟಕ್ಕೆ ಕಳಪೆ ಆಹಾರ ಧಾನ್ಯ ಪೂರೈಕೆದಾರರ ವಿರುದ್ಧ ಕ್ರಮಕ್ಕೆ ಮಹೇಶರಡ್ಡಿ ಮುದ್ನಾಳ ಆಗ್ರಹ

    ಸತ್ಯಕಾಮ ವಾರ್ತೆ ಯಾದಗಿರಿ:

    ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲೆಗಳಿಗೆ ಜಿಲ್ಲಾಮಟ್ಟದ ಆಹಾರ ಧಾನ್ಯ ಏಜೆನ್ಸಿಗಳು ಕಳಪೆ ಮಟ್ಟದ ತೊಗರಿ ಬೇಳೆ ಮತ್ತು ಅಕ್ಕಿಯನ್ನು ಪೂರೈಕೆ ಮಾಡುತ್ತಿವೆ. ಅದರಲ್ಲಿ ತೊಗರಿ ಬೇಳೆ ತೀರ ಕಳಪೆಯಾಗಿದ್ದು ಇದರ ಬಗ್ಗೆ ಮೇಲಾಧಿಕಾರಿಗಳು ಗಮನ ಹರಿಸಬೇಕು ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಆಗ್ರಹಿಸಿದರು.

    ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರ ಧಾನ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರವು ಊಟದಲ್ಲಿ ತೊಗರಿಬೇಳೆ, ಸಂಸ್ಕರಿತ ತಾಳೆಎಣ್ಣೆ ಮತ್ತು ಕಡಲೆ ಬೇಳೆಗಳನ್ನೊಳಗೊಂಡ ಆಹಾರವನ್ನು ನಿರ್ಧರಿಸಿದೆ. ಸಾಮಾನ್ಯ ಅಕ್ಕಿ ಮತ್ತು ಕಡಲೇಬೇಳೆಗಳ ಗುಣಮಟ್ಟವನ್ನು ಅಳೆಯಲು ಸರ್ಕಾರಿ ಸಂಸ್ಥೆಗಳನ್ನು ಬಿಟ್ಟು ಮೂರನೇ ವ್ಯಕ್ತಿ ಆಯ್ಕೆ ಮಾಡಲಾಗಿದೆ.

    ಆದರೆ ಏಜೆನ್ಸಿ ಅವರು ಶಾಲೆಗಳಿಗೆ ಕಳಪೆ ಮಟ್ಟದ ತೊಗರಿ ಬೆಳೆ ಪೂರೈಕೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಬೇಕು ಮತ್ತು ಶಾಲೆಗಳಿಗೆ ಗುಣಮಟ್ಟದ ಬೇಳೆಯನ್ನು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು..

  • ತಡಬಿಡಿ ಗ್ರಾಮದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಿ – ಶ್ರೀಧರ ಸಾಹುಕಾರ

    ತಡಬಿಡಿ ಗ್ರಾಮದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಿ – ಶ್ರೀಧರ ಸಾಹುಕಾರ

    ಸತ್ಯಕಾಮ ವಾರ್ತೆ ಯಾದಗಿರಿ:

    ಮತಕ್ಷೇತ್ರದ ತಡಿಬಿಡಿ ಗ್ರಾಮದಲ್ಲಿ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಘಟನೆಯೊಂದು ತಡಿಬಿಡಿ ಗ್ರಾಮದ ವಾರ್ಡ್ ನಂ 4 ರಲ್ಲಿ ಸೃಷ್ಟಿಯಾಗಿದೆ.

    ವಡಿಗೇರಾ ತಾಲೂಕಿನ ತಡಿಬಿಡಿ ಗ್ರಾಮ ಪಂಚಾಯಿತಿಯಲ್ಲಿ ಬರುವ ವಾರ್ಡ್ ನಂ 4ರಲ್ಲಿ  ವಾಸವಾಗಿರುವ ಕುಟುಂಬಗಳು ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಗ್ರಾಮದಲ್ಲಿ ನೀರಿಗಾಗಿ ಆಹಾಕಾರ ಸೃಷ್ಟಿಯಾಗಿದೆ.  ಸಂಭಂದಪಟ್ಟ ಅಧಿಕಾರಿಗಳಿಗೆ ಗ್ರಾಮದ ಜನತೆ ಹಲವಾರು ಬಾರಿ ಮನವಿ ನೀಡಿದರೂ ಮನವಿಗೆ ಸ್ಪಂದಿಸದೆ ಬೇಜವಾಬ್ದಾರಿಯಾಗಿ ವರ್ತಿಸಿತ್ತಿರುವುದು ಖಂಡನೀಯ…

    ಮಾನ್ಯ ಸ್ಥಳೀಯ ಶಾಸಕರು ಇದರ ಬಗ್ಗೆ ಗಮನ ಹರಿಸಿ ಶೀಘ್ರದಲ್ಲಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು… ಕ್ಷೇತ್ರದ ಜನರಿಗೆ ಸಮರ್ಪಕವಾದ  ಕುಡಿಯುವ ನೀರು ಒದಗಿಸದ ಅತ್ಯಂತ ಬೇಜವಾಬ್ದಾರಿತನದ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಧರ ಸಾಹುಕಾರ ಅವರು ಆರೋಪಿಸಿದ್ದಾರೆ .

  • ಲಕ್ಷಾಂತರ ಭಕ್ತಸಮೂಹದ ಮದ್ಯ ರಥೋತ್ಸವ

    ಲಕ್ಷಾಂತರ ಭಕ್ತಸಮೂಹದ ಮದ್ಯ ರಥೋತ್ಸವ

    ವರದಿ: ಭೀಮನಗೌಡ ಬಿರಾದಾರ

    ಸತ್ಯಕಾಮ ವಾರ್ತೆ ತಾಳಿಕೋಟೆ:

    ಈ ಭಾಗದ ನಡೆದಾಡುವ ದೇವರು ಶ್ರೀ ಖಾಸ್ಗತೇಶ್ವರ ಮಹಾ ಶಿವಯೋಗಿಗಳ ಜಾತ್ರಾ ಉತ್ಸವ ಅಂಗವಾಗಿ ಲಕ್ಷಾಂತರ ಭಕ್ತಸಮೂಹದ ಮದ್ಯ ಮಂಗಳವಾರರಂದು ರಥೋತ್ಸವವು ವಿಜೃಂಬಣೆಯಿಂದ ಜರುಗಿತು.

    ಜಾತ್ರೋತ್ಸವ ಅಂಗವಾಗಿ ದಿನನಿತ್ಯ ಶ್ರೀ ಖಾಸ್ಗತೇಶ್ವರ ಗದ್ದುಗೆಗೆ ಮಹಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಹಾಗೂ ಮಹಾ ಮಂಗಳಾರತಿ ಕಾರ್ಯಕ್ರಮವನ್ನು ಶ್ರೀಮಠದ ವೇ|| ವಿಶ್ವನಾಥ ವಿರಕ್ತಮಠ ಅವರು ನಡೆಸಿಕೊಟ್ಟರು.

    ಮಂಗಳವಾರರಂದು ಜಾತ್ರೋತ್ಸವ ಅಂಗವಾಗಿ ಸಾಯಂಕಾಲ ಜರುಗಿದ ಶ್ರೀ ಖಾಸ್ಗತೇಶ್ವರ ರಥೋತ್ಸವವು ಶ್ರೀ ಮಠದಿಂದ ಪ್ರಾರಂಬಗೊಂಡು ಶ್ರೀ ಬಸವೇಶ್ವರ ದೇವಸ್ಥಾನದ ವರೆಗೆ ಜರುಗಿ ಮರಳಿ ಶ್ರೀ ಮಠಕ್ಕೆ ತಲುಪಿತು.

    ಶ್ರೀ ಖಾಸ್ಗತೇಶ್ವರ ಮಠದ ಶ್ರೀ ಸಿದ್ದಲಿಂಗ ದೇವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಜಾತ್ರಾ ಉತ್ಸವದಲ್ಲಿ ಶ್ರೀಮಠದ ಉಸ್ತುವಾರಿ ವೇ. ಮುರುಘೇಶ ವಿರಕ್ತಮಠ, ವೇ|| ವಿಶ್ವನಾಥ ವಿರಕ್ತಮಠ, ಅವರು ನೆತೃತ್ವ ವಹಿಸಿದ್ದರು.

    ತಾಳಿಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾಧಿಗಳು ಹಾಗೂ ಮುಂಬೈ, ಪುಣೈ, ಸಾಂಗ್ಲಿ, ಮಿರೇಜ್, ಸೋಲ್ಲಾಪೂರ, ಕೊಲ್ಲಾಪುರ, ರಾಜಸ್ಥಾನ, ಬೆಂಗಳೂರ, ಗೋವಾ ಹಾಗೂ ಹೈದ್ರಾಬಾದದಿಂದ ಲಕ್ಷಾಂತರ ಭಕ್ತರು ಆಗಮಿಸಿ ಈ ಜಾತ್ರೋತ್ಸವದಲ್ಲಿ ಪಾಲ್ಗೊಂಡು ಭಕ್ತಿಬಾವ ಮೆರೆದರು.