Author: Satyakam NewsDesk

  • ಗೊರುಚ ಆಯ್ಕೆಗೆ ಜಿಲ್ಲಾ ಕಸಾಪ ಹರ್ಷ

    ಗೊರುಚ ಆಯ್ಕೆಗೆ ಜಿಲ್ಲಾ ಕಸಾಪ ಹರ್ಷ

    ಸತ್ಯಕಾಮ ವಾರ್ತೆ ಯಾದಗಿರಿ :

    ಮಂಡ್ಯದಲ್ಲಿ ಆಯೋಜಿಸುತ್ತಿರುವ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಾಕ್ಷರಾಗಿ ನಾಡಿನ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಅವರ ಆಯ್ಕೆಯಾಗಿರುವುದಕ್ಕೆ ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಎಸ್ ಹೊಟ್ಟಿ ಅವರು ಹರ್ಷ ವ್ಯಕ್ತಪಡಿಸಿದರು.

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಬುಧವಾರ ನಡೆದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮೋದಲನೇಯದಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿ ಮಾತನಾಡಿ ಈ ಸಭೆಯ ಮುಖ್ಯ ಉದ್ದೇಶ ಮಂಡ್ಯದಲ್ಲಿ ಆಯೋಜಿಸುತ್ತಿರುವ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯ ಕುರಿತು ಪ್ರಸ್ತಾಪಿಸಲಾಗುವುದು ಎಂದು ಸಭೆಗೆ ತಿಳಿಸಿದರು.

    ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಮಲೇಶಬಾಬು ಮಾತನಾಡಿ, ಸಮ್ಮೇಳನದ ಸರ್ವಾಧ್ಯಕ್ಷರನ್ನೂ ಹಿರಿಯ ಸಾಹಿತಿಗಳನ್ನು, ಸಾಹಿತ್ಯ ಕ್ಷೇತ್ರದಲ್ಲಿಯೇ ದುಡಿದವರನ್ನು ಪರಿಗಣಿಸಬೇಕು ಎಂದು ಪ್ರಸ್ತಾಪಿಸಿದರು.

    ತದನಂತರ ಯಾದಗಿರಿ ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಎಸ್ ಹೊಟ್ಟಿ ಸಭೆಯಲ್ಲಿ ಮಾತನಾಡಿ, ಮಂಡ್ಯದಲ್ಲಿ ಆಯೋಜಿಸಿದ ೮೭ ನೇ ಅಖಲಿ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಜನಪದ ವಿದ್ವಾಂಸರು ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಿ ಬೆಳಿಸಿದವರಾದ ಗೊ ರು ಚನ್ನಬಸಪ್ಪ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಿದರೆ ಈ ಸಮ್ಮೇಳನಕ್ಕೆ ಒಂದು ಶೋಭೆ ಬರಲಿದೆ ಎಂದು ಅವರು ಪ್ರಸ್ತಾಪಿಸಿದಾಗ ಎಲ್ಲಾ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರ ಒಪ್ಪಿಗೆ ಸೂಚಿಸಿ, ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಅಯ್ಯಣ್ಣ ಹುಂಡೇಕಾರ. ಡಾ. ಸುಭಾಷಚಂದ್ರ ಕೌಲಗಿ. ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ. ಭೀಮರಾಯ ಲಿಂಗೇರಿ. ಡಾ. ಸಿದ್ದರಾಜರೆಡ್ಡಿ. ಗೌರವ ಕೋಶ್ಯಾಧ್ಯಕ್ಷ ಬಸವರಾಜ ಅರಳಿ ಮೊಟ್ನಳಿ. ಬಸವಂತ್ರಾಯ ಗೌಡ ಮಾಲಿ ಪಾಟೀಲ. ಆರ್ ಮಹಾದೇವಪ್ಪಗೌಡ ಅಬ್ಬೆತುಮಕೂರ. ಸಿ ಎಮ್ ಪಟ್ಟೆದಾರ. ನಾಗೆಂದ್ರ ಜಾಜಿ. ಸೋಮಶೇಖರ್ ಮಣ್ಣೂರ. ನೂರಂದಪ್ಪ ಲೇವಡಿ. ಚೆನ್ನಪ್ಪ ಸಾಹು ಠಾಣಗುಂದಿ. ಡಾ. ಎಸ್ ಎಸ್ ನಾಯಕ. ಸ್ವಾಮಿದೇವ ದಾಸನಕೇರಿ. ಡಾ. ಗಾಳೆಪ್ಪ ಪೂಜಾರಿ ಜಿಲ್ಲೆಯ ಎಲ್ಲಾ ಕನ್ನಡ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದರು.

  • ಮಕ್ಕಳಲ್ಲಿ ಸೇವಾ ಮನೋಭಾವ ಬೆಳಸಿ: ಮಲ್ಲಿಕಾರ್ಜುನರೆಡ್ಡಿ ಕೌಳೂರು

    ಮಕ್ಕಳಲ್ಲಿ ಸೇವಾ ಮನೋಭಾವ ಬೆಳಸಿ: ಮಲ್ಲಿಕಾರ್ಜುನರೆಡ್ಡಿ ಕೌಳೂರು

    ಸತ್ಯಕಾಮ ವಾರ್ತೆ ಯಾದಗಿರಿ:

    ದೇಶದ ಸ್ವಾತಂತ್ರ್ಯ, ಐಕ್ಯತೆಗೆ ಪ್ರತೀಕವಾಗಿರುವ ಭಾರತ ಸೇವಾದಳವನ್ನು ಪ್ರತಿ ಶಾಲೆಯಲ್ಲಿ ಸಂಘಟಿಸಿ, ಶಿಕ್ಷಕರು ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಬೇಕು. ಮಾನವೀಯ ಮೌಲ್ಯಗಳ ಮಹತ್ವ ತಿಳಿಸಬೇಕು ಎಂದು ಭಾರತ ಸೇವಾದಳದ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನರೆಡ್ಡಿ ಕೌಳೂರು ಹೇಳಿದರು.

    ನಗರದ ಹೊರವಯದಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಯಾದಗಿರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿರವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕ/ ಶಿಕ್ಷಕಿಯರಿಗೆ ಒಂದು ವಾರದ ಜಿಲ್ಲಾ ಜಿಲ್ಲಾಮಟ್ಟದ ಸಹಾಯಕ ಶಿಕ್ಷಣ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಡಾ.ನಾ.ಸು.ಹರ್ಡಿಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವುದಕ್ಕಾಗಿ ಈ ಕಾರ್ಯಾಗಾರ ಏರ್ಪಡಿಸಲಾಗಿದೆ. ಇಲ್ಲಿ ತಾವು ಪಡೆದ ತರಬೇತಿ ಮಕ್ಕಳಿಗೆ ವರ್ಗಾವಣೆ ಆಗುವಂತೆ ನೋಡಿಕೊಂಡಾಗ ಮಾತ್ರ ಅದಕ್ಕೊಂದು ಬೆಲೆ ಸಿಗುತ್ತದೆ ಎಂದರು.

    ಉಪನಿರ್ದೇಶಕ ಕಾರ್ಯಾಲಯದ ವಿಷಯ ಪರಿವೀಕ್ಷಕರಾದ ಎಚ್ ಹಣಮಂತನವರು ಮಾತನಾಡಿ ಕರ್ನಾಟಕ ಗಾಂಧಿ ಹೆಸರಿನಿಂದ ಖ್ಯಾತಿ ಪಡೆದಿರುವ ನಾ.ಸು.ಹರ್ಡೀಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಶಿಸ್ತು, ಧೈರ್ಯ ಹಾಗೂ ತ್ಯಾಗ ಮನೋಭಾವನೆಯನ್ನು ಹಿಂದೂಸ್ತಾನಿ ಸೇವಾದಳದ ಮೂಲಕ ಪರಿಚಯಿಸಿ ಸ್ವಾತಂತ್ರ್ಯ ಸಂಗ್ರಾಮವನ್ನು ಚುರುಕುಗೊಳಿಸಿದ ಮಹನೀಯರಲ್ಲಿ ಪ್ರಮುಖರು, ಅವರ ಸ್ಥಾಪಿತದ ಸೇವಾದಳ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳುವ ಸಂಸ್ಥೆಯಾಗಿದ್ದು. ಎಲ್ಲಾ ಕಾಲದಲ್ಲೂ ಈ ಸಂಸ್ಥೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದ ಗೌರವಕ್ಕೆ ಪಾತ್ರವಾಗಿದೆ. ಮಕ್ಕಳಲ್ಲಿ ಸೇವಾದಳದ ಕುರಿತು ಅರಿವು ಮೂಡಿ ಬರಬೇಕು. ಶ್ರದ್ಧೆ, ಸಂಯಮ, ದೇಶಾಭಿಮಾನ ಹಾಗೂ ನಾಗರಿಕ ಪ್ರಜ್ಞೆಯನ್ನು ಸೇವಾದಳದ ಚಟುವಟಿಕೆಗಳಿಂದ ಬೆಳೆಯುತ್ತದೆ. ಶಿಕ್ಷಕರು ತಮ್ಮ ಕರ್ತವ್ಯದ ಜತೆ ಸೇವಾದಳದ ಚಟುವಟಿಕೆಗಳನ್ನು ರೂಢಿಸಿಕೊಂಡು ಮಕ್ಕಳಲ್ಲಿ ದೇಶಾಭಿಮಾನ ಬಿತ್ತಿ ಉತ್ತಮ ಪ್ರಜೆಗಳನ್ನಾಗಿ ನಿರ್ಮಿಸಬೇಕು, ಅಲ್ಲದೆ ಈ ಸೇವಾದಳ ರಾಷ್ಟ್ರಧ್ವಜದ ಕುರಿತು ಗೌರವ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

    ಸೇವಾದಳದ ವಿಶೇಷ ಆರು ದಿನಗಳ ಶಿಬಿರವನ್ನು ಕುರಿತು ಶಿಕ್ಷಕಿ ಆರ್.ಪಿ ಶರಣಮ್ಮ ಮಾತನಾಡಿ ಶಿಸ್ತು, ಸಮಯ ಪ್ರಜ್ಞೆ, ಉತ್ತಮ ನಡವಳಿಕೆ ಹೊಂದುವುದನ್ನು ಈ ಶಿಬಿರದಲ್ಲಿ ಕಲಿತ್ತಿದ್ದೇವೆ, ತರಬೇತಿಯು ಅತ್ಯುತ್ತಮವಾಗಿ ಮೂಡಿ ಬಂದಿದ್ದು ನಮ್ಮ ಶಾಲಾ ಮಕ್ಕಳಿಗೆ ಅನುಕೂಲಕರವಾಗಿರುವ ಹಲವು ವಿಚಾರಗಳನ್ನು ತಿಳಿದುಕೊಂಡಿದ್ದೇವೆ, ಅದನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ಉತ್ತಮ ಸಮಾಜದ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮುಂದಾಗುತ್ತೇವೆ ಎಂದರು.

    ನಂತರ ಶಿಕ್ಷಕಿ ಭೀಮವ್ವ ಮಾತನಾಡಿ ಸಾಮಾನ್ಯವಾಗಿ ನಾವೆಲ್ಲ ನಮ್ಮ ಶಾಲೆಗಳಲ್ಲಿ ಒಂದು ವಿಷಯಕ್ಕೆ ಸೀಮಿತವಾಗಿರುವ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತೇವೆ. ಆದರೆ ನಾವು ಎಲ್ಲಾ ವಿಷಯಗಳಲ್ಲೂ ಆಸಕ್ತಿಯುಳ್ಳ ವ್ಯಕ್ತಿತ್ವ ಹೊಂದಿರಬೇಕು ಹಾಗೂ ನೃತ್ಯ ಹಾಡುಗಾರಿಕೆ ಬರವಣಿಗೆ ಎಲ್ಲಾ ವಿಷಯಗಳನ್ನು ಬೋಧಿಸುವ ಅಭ್ಯಾಸ ಮಾಡಿಕೊಳ್ಳಬೇಕಿದೆ ಎಂಬುದು ಈ ಶಿಬಿರದಿಂದ ನನಗೆ ಅರ್ಥವಾಗಿದೆ. ಹಿರಿಯ ಶಿಬಿರರ್ಥಿಗಳ ಮಾರ್ಗದರ್ಶನದಿಂದ ಹಲವು ವಿಚಾರಗಳನ್ನು ಕಲಿತಿದ್ದೇವೆ ಎಂದರು ಹಾಗೂ ಇದೇ ಸಂದರ್ಭದಲ್ಲಿ ಶಿಬಿರಾವಧಿಯಲ್ಲಿ ತಮಗೆ ಹಿರಿಯ ತರಬೇತಿದಾರರು ನೀಡಿದ ಸಹಕರವನ್ನು ನೆನೆದರು.

    ಊಟದ ರೊಟ್ಟಿ ಬುತ್ತಿ ಅಳಸಬಹುದು ಆದರೆ ಜ್ಞಾನದ ಬಂಡಾರ ಎಂದಿಗೂ ಅಳಸುವುದಿಲ್ಲ ಎಂದು ಶಿಕ್ಷಕಿಯೊಬ್ಬರು ಅಭಿಪ್ರಾಯಪಟ್ಟರು.

    ಬಳಿಕ ಆರು ದಿನಗಳ ಶಿಬಿರದಲ್ಲಿ ಭಾಗವಹಿಸಿದ ಶಿಕ್ಷಕ/ ಶಿಕ್ಷಕಿಯರಿಗೆ, ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಸನ್ಮಾನಿಸಿ ಗೌರವಿಸಲಾಯಿತು.

    ಬಸವಂತಪುರ ಶಾಲೆಯ ದೈಹಿಕ ಶಿಕ್ಷಕರಾದ ತುಳಜಾರವರು ನಿರೂಪಿಸಿದರು. ದೈಹಿಕ ಶಿಕ್ಷಕರಾದ ಜೋಗಪ್ಪನವರ ಸ್ವಾಗತಿಸಿದರು, ಭಾ. ಸೇ. ದಳದ ಜಿಲ್ಲಾ ಸಂಘಟೀಕರಾದ ಸೈಯದ್ ಕಮರುದ್ದೀನ್, ವಂದಿಸಿದರು.

    ಈ ಸಂದರ್ಭದಲ್ಲಿ ಭಾ. ಸೇ. ದಳದ ರಾಜ್ಯ ಉಪಾಧ್ಯಕ್ಷರಾದ ಚೆನ್ನಾರೆಡ್ಡಿ ಗೌಡ ಬಿಲಾರ್, ಪ್ರಭಾರಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಅನೀಲ ಕುಮಾರ, ಸರ್ಕಾರಿ ಆದರ್ಶ ವಿದ್ಯಾಲಯದದ ಮುಖ್ಯಗುರುಗಳಾದ ಶಂಕರಮ್ಮ, ನಿ. ದೈಹಿಕ ಶಿಕ್ಷಕರು ಹಾಗೂ ಭಾರತ ಸೇವಾದಳದ ನಿವೃತ್ತ ತಾಲೂಕು ಸಂಘಟಿಕರಾದ ಮಲ್ಲಿಕಾರ್ಜುನ ಬಳೆ, ಭಾ.ಸೇ.ದಳದ ಕಲ್ಬುರ್ಗಿ ಜಿಲ್ಲಾ ಸಂಘಟಿಕರಾದ ಚಂದ್ರಶೇಖರ್ ಜಮಾದಾರ್, ಚಿತ್ತಾಪುರ ತಾಲೂಕಿನ ನಿವೃತ್ತ ಸಂಘಟಿಕರಾದ ಸೈಯದ್ ಮೈಚೋದ್ದೀನ್, ಪತ್ರಕರ್ತ ಕುದಾನ್ ಸಾಬ್, ಅಜೀವ ಸದಸ್ಯರಾದ ಉಪನ್ಯಾಸಕ ಎಲ್. ಎನ್ ರೆಡ್ಡಿ, ವಿರೂಪಕ್ಷಯ್ಯ ದಂಡಗಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • “ಸುರಕ್ಷಿತ ನೈರ್ಮಲ್ಯ-ಶುಚಿತ್ವ ಕುರಿತು ಅರಿವು ಮೂಡಿಸಿ,ಶೌಚಾಲಯ ನಿರ್ಮಾಣಕ್ಕೆ ಪ್ರೇರೇಪಿಸಿ”:ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

    “ಸುರಕ್ಷಿತ ನೈರ್ಮಲ್ಯ-ಶುಚಿತ್ವ ಕುರಿತು ಅರಿವು ಮೂಡಿಸಿ,ಶೌಚಾಲಯ ನಿರ್ಮಾಣಕ್ಕೆ ಪ್ರೇರೇಪಿಸಿ”:ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

    ಯಾದಗಿರಿ:ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ಜೊತೆಗೆ  ನಮ್ಮ ಶೌಚಾಲಯ-ನಮ್ಮ ಗೌರವ ಘೋಷ ವಾಕ್ಯದೊಂದಿಗೆ ಜಿಲ್ಲೆಯಾದ್ಯಂತ ಡಿಸೆಂಬರ್ 10 ರವರೆಗೆ ಜಾಗೃತಿ ಆಂದೋಲನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯತ್ ಸಿಇಓ ಕಾರ್ಯಾಲಯದಲ್ಲಿ “ವಿಶ್ವ ಶೌಚಾಲಯ ಹಾಗೂ ವಿಶ್ವ ಮಾನವ ಹಕ್ಕುಗಳ ದಿನಾಚರಣೆ” ಅಂಗವಾಗಿ ಇಂದಿನಂದ ಡಿಸೆಂಬರ್ 10 ರವರೆಗೆ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ  ಅಂದದ ಶೌಚಾಲಯ- ಆನಂದದ ಜೀವನ ಎಂಬ ಉದ್ದೇಶದೊಂದಿಗೆ ಶೌಚಾಲಯ ಬಳಸಲು ಪ್ರೇರೇಪಿಸುವ   ಈ ವಿಶೇಷ ಆಂದೋಲನ ಯಶಸ್ವಿಯಾಗಿ ಹಮ್ಮಿಕೊಳ್ಳುವ ಕುರಿತು  ಚರ್ಚಿಸಲು  ನಡೆದ ಜಿಲ್ಲಾ ಮತ್ತು  ನೈರ್ಮಲ್ಯ ಮಿಷನ್  ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು.

    ಈ ಆಂದೋಲನ ಅಂಗವಾಗಿ ವೈಯಕ್ತಿಕ ಗೃಹ ಶೌಚಾಲಯ  ಪರಿಶೀಲನೆ,ಸಮುದಾಯ ಶೌಚಾಲಯಗಳ ಪರಿವೀಕ್ಷಣೆ ನಡೆಸಬೇಕು.ಶೌಚಾಲಯ ರಹಿತ ಕುಟುಂಬಗಳನ್ನು  ಗುರುತಿಸಿ ಶೌಚಾಲಯ ನಿರ್ಮಾಣಕ್ಕೆ  ಪ್ರೇರೇಪಿಸುವಂತೆ ಅವರು ಸೂಚಿಸಿದರು.

    ಅದರಂತೆ ಈ ಆಂದೋಲನ ಅಂಗವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ  ಗೃಹ ಉತ್ತಮ ಶೌಚಾಲಯ ಸ್ಪರ್ಧೆ ಹಾಗೂ  ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆ ಆಯೋಜಿಸಬೇಕು.ಅದರಂತೆ  ವಿವಿಧ ಗ್ರಾಮ, ಶಾಲೆ, ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರಗಳಲ್ಲಿ ಸ್ಚಚ್ಛವಾದ ಶೌಚಾಲಯಗಳು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.  ಸಮುದಾಯ ಶೌಚಾಲಯಗಳ ನಿರ್ವಹಣೆ ಹಾಗೂ ನೀರಿನ ವ್ಯವಸ್ಥೆ, ಸುತ್ತಲೂ ಸ್ವಚ್ಛತೆ,ಇದಕ್ಕೆ ಸೂಕ್ತ ರಸ್ತೆಗಳು ಇರುವ ಬಗ್ಗೆ ಆಯಾ ಗ್ರಾಮ ಪಂಚಾಯತ್ ಅಧ್ಯಕ್ಷರು,  ಸದಸ್ಯರು ಹಾಗೂ ಪಿಡಿಓ ಗಳಿಂದ ಭೇಟಿ ಮಾಡಿಸಿ ಪರಿಶೀಲಿಸಬೇಕು. ನೀರು ಕಡ್ಡಾಯವಾಗಿ ಇರುವ ಬಗ್ಗೆ ಹಾಗೂ ನಿರ್ವಹಣಾ ಸಿಬ್ಬಂದಿ ಇರುವಂತೆ ನೋಡಿಕೊಳ್ಳಲು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಶೌಚಾಲಯ ಬಳಕೆ, ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ರೂಢಿಸುವ ನಿಟ್ಟಿನಲ್ಲಿ ವಿಶೇಷ ಗಮನ ನೀಡಿ, ಸೂಕ್ತ ಜಾಗೃತಿ ಮೂಡಿಸಬೇಕು.ವೈಯಕ್ತಿಕ ಶೌಚಾಲಯ  ನಿರ್ಮಿಸಿಕೊಳ್ಳುವ ಕುಟುಂಬಗಳಿಗೆ ಪ್ರೋತ್ಸಾಹಿಸುವಂತೆ  ಅವರು ಸೂಚಿಸಿದರು.

    ಇದೇ ಸಂದರ್ಭದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸಲು ಅವರು ಸೂಚಿಸಿದರು.

    ತಡಿಬಿಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಮಾರೆಡ್ಡಿ ಹಾಗೂ ದೋರಣಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಚಂದ್ರಕಲಾ ಅವರಿಗೆ ಶೌಚಾಲಯ ನಿರ್ಮಾಣದ ಕಾರ್ಯಾದೇಶ ನೀಡಲಾಯಿತು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್  ಒರಡಿಯಾ,ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಸಿ.ಬಿ.ದೇವರಮನಿ,ಸಹಾಯಕ ಕಾರ್ಯಕ್ರಮ ಅಧಿಕಾರಿ ಸಂತೋಷಕುಮಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಮ್.ಎಸ್ ಪಾಟೀಲ್,ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆನಂದ  ಸೇರಿದಂತೆ ಜಿಲ್ಲಾ ಪಂಚಾಯತ್ ,ಆರೋಗ್ಯ, ಶಿಕ್ಷಣ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

  • ವಕ್ಪ್‌ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ.21ರಂದು ಬಿಜೆಪಿ ಹೋರಾಟ.

    ವಕ್ಪ್‌ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ.21ರಂದು ಬಿಜೆಪಿ ಹೋರಾಟ.

    ಸತ್ಯಕಾಮ ವಾರ್ತೆ ಯಾದಗಿರಿ:

    ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಅಂಗವಾಗಿ ವರ್ಕ್ಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ. 21ರಂದು ಬಿಜೆಪಿ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ತಹಶೀಲ್ದಾರ ಕಚೇರಿಗಳ ಮುಂದೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ರಾಚಣ್ಣಗೌಡ ಮುದ್ನಾಳ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠ ಮಂದಿ ರ ಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಬೆಳಿಗ್ಗೆಯಿಂದ ಸಂಜೆ ತನಕ ವೇದಿಕೆಗೆ ಬರಮಾಡಿಕೊಂಡು ಅಹ ವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಪರಾಮರ್ಶೆ ಮಾಡುತ್ತೇವೆ ಎಂದರು.

    ಈಗಾಗಲೇ ಬಿಜೆಪಿ ಮೂರು ತಂಡಗಳನ್ನು ರಚಿಸಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷನಾಯಕ ಆ‌ರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ತಂಡಗಳು ಡಿಸೆಂಬ‌ರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ರೈತರು, ಸಾರ್ವಜನಿಕರ ಸಮಸ್ಯೆಗ ಳನ್ನು ಆಲಿಸಲಿದೆ. ಅವರ ಸಮಸ್ಯೆಗಳನ್ನು ಮುಂಬರುವ ಬೆಳಗಾವಿ ಅಧಿವೇಶದಲ್ಲಿ ಪ್ರಸ್ತಾಪಿ ಸಲಿದ್ದಾರೆ ಎಂದರು.

    ಕೇಂದ್ರ ಸಚಿವರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಡಿ.ವಿ. ಸದಾನಂದಗೌಡ, ಬಸವರಾಜ ಬೊಮಾಯಿ, ಜಗದೀಶ ಶೆಟ್ಟರ್ ಪ್ರಮುಖ ನಾಯಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.ವಕ್ಪ್‌ ಆಸ್ತಿ ಸಂಬಂಧ ಇಡೀ ರಾಜ್ಯ ದಲ್ಲಿ ಸಮಸ್ಯೆ ಎದುರಾಗಿದ್ದು, ಆ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಹೋರಾಟ ನಡೆಯಲಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದೇವಿಂದ್ರನಾಥ ನಾದ, ಮಹೇಶ ರೆಡ್ಡಿ ಮುನ್ನಾಳ, ಜಿಲ್ಲಾ ವಕ್ತಾರ ಮತ್ತು ನಗರಸಭೆ ಸದಸ್ಯ ಹಣಮಂತ ಇಟಗಿ, ಸಿದ್ದನಗೌಡ ಕಾಡಂನೋರ, ಚಂದ್ರಶೇಖರ ಕಡೇಸೂರ ಸೇರಿದಂತೆ ಇತರರಿದ್ದರು.
  • ಜಿಲ್ಲೆಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ

    ಜಿಲ್ಲೆಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ

    ಯಾದಗಿರಿ : ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿ ಎಂದು ಗೌರವಾನ್ವಿತ ನ್ಯಾಯಾಧೀಶರು ಹಾಗೂ ಸುರಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಬಸವರಾಜ ಅವರು ಹೇಳಿದರು.

         PAN-INDIA Rescue and Rehabilitation Campaign Program “A Step to Eradicate Child Labour” (PAN-INDIA  ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಅವರು ಮಾತನಾಡಿ,

    ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ,  PAN-INDIA Rescue and Rehabilitation Campaign Program A Step to Eradicate Child Labour (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ- ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ 2024ರ ಅಕ್ಟೋಬರ್ 21 ರಿಂದ 2024ರ ನವೆಂಬರ್ 20ರ ವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

         PAN-INDIA Rescue and Rehabilitation Campaign Program “A Step to Eradicate Child Labour” (PAN-INDIA  ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಉಪ ತಹಸೀಲ್ದಾರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

    ಹುಣಸಗಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸಣ್ಣ ನಾಯಕ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ, ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

    ನಗರದ ಬಸ್ ನಿಲ್ದಾಣದಿಂದ ಕೆಂಭಾವಿ ಮುಖ್ಯ ರಸ್ತೆಯವರೆಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜ್‌ಗಳು ಮತ್ತು ಹೊಟೇಲ್‌ಗಳಲ್ಲಿ ಹಠಾತ್ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಮಕ್ಕಳನ್ನು ನೇಮಿಸಿಕೊಳ್ಳದಂತೆ ಕರಪತ್ರ ಹಾಗೂ ಪೋಸ್ಟರ್‌ಳನ್ನು ನೀಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

    ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ  ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರÀಂತರವಾಗಿ ಜನ-ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕ ಮತ್ತು ಆಟೋ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

    ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಶಿವಪ್ಪ ಜಮಾದಾರ್ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ, 20,000 ರೂಗಳಿಂದ 50,000 ರೂ ಗಳವರೆಗೆ ದಂಡ ಮತ್ತು 6 ತಿಂಗಳಿAದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

    ಹಠಾತ್ ದಾಳಿ ಸಂದರ್ಭದಲ್ಲಿ ಹುಣಸಗಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸಣ್ಣ ನಾಯಕ, ಕಂದಾಯ ಇಲಾಖೆಯ ಉಪ ತಹಸೀಲ್ದಾರರಾದ ಶ್ರೀಶೈಲ ಮುದ್ನೂರು, ಪೋಲಿಸ್ ಇಲಾಖೆಯ ಪಿ.ಎಸ್.ಐ ಚಂದ್ರಶೇಖರ, ಆರ್.ಎಸ್.ಐ ಭಾಗಣ್ಣ, ಸಮಾಜ ಕಲ್ಯಾಣ ಇಲಾಖೆಯ ಬಸವರಾಜ ಸಜ್ಜನ್, ಡಾನ್ ಬಾಸ್ಕೋ ಸಂಸ್ಥೆಯ ನಿರ್ದೇಶಕರಾದ ಡಾ.ಶಾಬು ಪ್ರಾನ್ಸಿಸ್, ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ಅಧ್ಯಕ್ಷ ಶಿವು ರಾಠೋಡ, ನಾಗಯ್ಯ ಭೋವಿವಡ್ಡರ, ಮಾರ್ಗದರ್ಶಿ ಸಂಸ್ಥೆಯ ತಾಯಮ್ಮ ಎಸ್, ಚನ್ನಮ್ಮ.ಎಸ್, ಕಾರ್ಮಿಕ ಇಲಾಖೆಯ ಎಲ್,ಎನ್ ಚೌದ್ರಿ, ರಮೇಶ ಕೆಲ್ಲೂರು, ಬಾಲುನಾಯಕ ಉಪಸ್ಥಿತರಿದ್ದರು.

  • ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಂಸದ ಜಿ ಕುಮಾರ ನಾಯಕ ಭೇಟಿ

    ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಂಸದ ಜಿ ಕುಮಾರ ನಾಯಕ ಭೇಟಿ

    • ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಅಭಿಪ್ರಾಯ ಸಂಗ್ರಹ

    ಸತ್ಯಕಾಮ ವಾರ್ತೆ ಯಾದಗಿರಿ:

    ಮುಂಬರುವ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನ ಮಂತ್ರವನ್ನು ಜಪಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಗೊಳಿಸಿ, ಅತಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಹೇಳಿದರು.

     

    ಶನಿವಾರ ಇಲ್ಲಿನ  ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್‌ನ ಹಿರಿಯ ಮುಖಂಡರೊಡನೆ ಸಭೆ ನಡೆಸಿ  ಅವರು ಮಾತನಾಡಿದರು. ಬಳಿಕ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

    ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಅನಪೂರ್, ರಾಘವೇಂದ್ರ ಮಾನಸಗಲ್ ,ಡಾ ಭೀಮಣ್ಣ ಮೇಟಿ, ಸೇರಿದಂತೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷರು ಮಾಜಿ ಕಾಂಗ್ರೆಸ್ ಬ್ಲಾಕ್‌ ಅಧ್ಯಕ್ಷರು ಮಹಿಳಾ ಘಟಕದ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಮುಂಚೂಣಿ ಘಟಕದ ಅಧ್ಯಕ್ಷರುಗಳು ಸೇರಿದಂತೆ ಕಾಂಗ್ರೆಸ್‌ ಹಿರಿಯ ಮುಖಂಡರು ಕಾರ್ಯಕರ್ತರು ಹಾಜರಿದ್ದರು..

  • ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

    ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

    ಸತ್ಯಕಾಮ ವಾರ್ತೆ ಕಲಬುರಗಿ:

    ನಗರದ ದರ್ಗಾ ಏರಿಯಾದಲ್ಲಿರುವ ಇಂಡಿಯನ್ ಗೆಸ್ಟ್ ಹೌಸ್ ನಲ್ಲಿ ಸಾಧಿಕಾ ಮನಿಯಾರ್ (25) ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಪತಿ ಅಬ್ದುಲ್ ರಹೀಮ್ ಜೊತೆ ಕಲಬುರಗಿಯಲ್ಲಿರುವ ಖಾಜಾ ಬಂದೇ ನವಾಜ್ ದರ್ಗಾದ ಭೇಟಿ ನೀಡಲು ಕಲಬುರಗಿಗೆ ಆಗಮಿಸಿದ್ದರು

    ನಿನ್ನೆ ಸಂಜೆ ಪತ್ನಿಗೆ ಲಾಡ್ಜ್ ನಲ್ಲಿ ಬಿಟ್ಟು ಪತಿ ಅಬ್ದುಲ್ ರಹೀಮ್ ಅಧೋನಿಗೆ ತೆರಳಿದ್ದ, ಬೆಳಗಾಗುವಷ್ಟರಲ್ಲೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ

    ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸದರ ದರ್ವಾಜ ನಗರದ ನುಸ್ಸರ್ತ ತಂದೆ ಮೈಹಿಬೂಬ ಕುರೇಶಿ ಕಾಣೆಯಾದ ಮಹಿಳೆ 2024ರ ನವೆಂಬರ್ 12ರ ಮಂಗಳವಾರ ರಂದು ಬೆಳಿಗ್ಗೆ ಮನೆಯಿಂದ ಊಟ ಮಾಡಿ ಹೊರಗಡೆ ಹೋದವಳು ಮರಳಿ ಮನೆಗೆ ಬಂದಿರುವುದಿಲ್ಲ ಹಿನ್ನೆಲೆ ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ಯಾದಗಿರಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.

    ಮನೆಯಲ್ಲಿ ಊಟ ಮಾಡಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಮ್ಮ ಅಕ್ಕ ಶಮಿಬೇಗಂ ಇವರ ಮನೆಗೆ ಊಟಕೊಟು ಬರಲು ನಮ್ಮ ತಾಯಿ ಕಳಿಸಿದ್ದು, ಇನ್ನೂ ಸಂಜೆ 6 ಗಂಟೆಯಾದರು ಇನ್ನೂ ಮನೆಗೆ ಬಂದಿರುವುದಿಲ್ಲ, ಅಂತ ನಮ್ಮ ಅಕ್ಕ ಶಮೀಬೇಗಂ ಇವರಿಗೆ ಪೋನ್ ಮಾಡಿ ವಿಚಾರಿಸಲಾಗಿ ನುಸ್ಸರ್ತ ನಮ್ಮ ಮನೆಗೆ ಇವತ್ತು ಬಂದಿರುವುದಿಲ್ಲ, ಅಂತ ತಿಳಿಸಿದಳು. ಆಗ ನಾನು ನಮ್ಮ ಅಕ್ಕ ಶಮೀಬೇಗಂ ನಮ್ಮ ತಾಯಿ ಎಲ್ಲಾರು ಗಾಬರಿಯಾಗಿ ಯಾದಗಿರಿ ನಗರದಲ್ಲಿ ಹುಡುಗಾಡಲಾಗಿ ಸಿಗದ ಕಾರಣ ನಮ್ಮ ಸಂಬAಧಿಕರಿಗೆ ನುಸ್ಸರ್ತ ಇಮ್ಮಲ್ಲಿಗೆ ಬಂದಿರುವ ಬಗ್ಗೆ ವಿಚಾರಿಸಲಾಗಿ ಬಂದಿರುವುದಿಲ್ಲ ಅಂತ ತಿಳಿಸಿದರು, ನಾವು 2024ರ ನವೆಂಬರ್ 12 ರಿಂದ ಇಲ್ಲಿಯ ವರೆಗೆ ನುಸ್ಸರ್ತಳು ಹುಡಿಕಾಡಿಲಾಗಿ ಇರುವಿಕೆ ಬಗ್ಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ, ಇಂದು ತಡವಾಗಿ ಪೊಲೀಸ್ ಠಾಣೆಗೆ ಬಂದು ಫರ‍್ಯಾದಿ ಸಲ್ಲಿಸಿದ್ದು, ಇರುತ್ತದೆ.

    ಮಹಿಳೆಯ ಚಹರೆ ಪಟ್ಟಿ 25 ವರ್ಷ ಇದ್ದು, ಅಂದಾಜು 5 ಫೀಟ್ ಎತ್ತರ ಇದ್ದು, ನುಸ್ಸರ್ತ ಇವಳಿಗೆ ಮಾನಸಿಕ ಅಸ್ವಸಂತ್ತಾಳಾಗಿದ್ದಳು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಯಾದಗಿರಿ ನಗರ ಠಾಣೆಗೆ ಅಥವಾ ಯಾದಗಿರಿ ಮೊ.ನಂ.8147108970 ಕರೆ ಮಾಡಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಯಾದಗಿರಿ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ

    ಯಾದಗಿರಿ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾರವರೊಂದಿಗೆ ಜಿಲ್ಲೆಯ ಕೃಷಿ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆಯ ಸಂಬಂಧಪಟ್ಟಂತಹ ಇಲಾಖೆ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ ನಡೆಸಿದರು.

    ಈ ವೇಳೆ ಮಾತನಾಡಿದ ಸಂಸದ ಜಿ ಕುಮಾರ ನಾಯಕ ರೈತರು ಕೇವಲ ಕೃಷಿಗೆ ಸೀಮಿತವಾಗದೆ ರೈತರು ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯಗಳು ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡಿ ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ರೈತರ ಆರ್ಥಿಕತೆ ಹಾಗೂ ಬೆಳವಣಿಗೆಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಸೇರಿದಂತೆ ಜಿಲ್ಲೆಯ ಅನೇಕ ಅಧಿಕಾರಿಗಳು ಹಾಜರಿದ್ದರು.

  • ಜನಪರ ಚಿಂತಕ, ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರ ಬಾಪುಗೌಡರು: ಕೇದಾರಲಿಂಗಯ್ಯ ಹಿರೇಮಠ 

    ಜನಪರ ಚಿಂತಕ, ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರ ಬಾಪುಗೌಡರು: ಕೇದಾರಲಿಂಗಯ್ಯ ಹಿರೇಮಠ 

    ಸತ್ಯಕಾಮ ವಾರ್ತೆ ಶಹಾಪುರ: 

    ಕರ್ನಾಟಕದ ಅಪರೂಪದ ರಾಜಕೀಯ ಮುತ್ಸದ್ಧಿ, ದೀಮಂತ ನಾಯಕರಾಗಿದ್ದ ಬಾಪುಗೌಡ ದರ್ಶನಾಪುರ ಅವರು ಸತ್ಯ, ಪ್ರಾಮಾಣಿಕತೆ, ದಕ್ಷತೆಯ, ನೇರ ನಡೆನುಡಿಯ ಜನಪರ ಚಿಂತಕ ಹಾಗೂ ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರರಾಗಿ ಇಂದಿಗೂ ನಾಡಿನ ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿದ್ದಾರೆ ಎಂದು ರೈತ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾದ ಕೇದಾರಲಿಂಗಯ್ಯ ಹಿರೇಮಠ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

     

    ನಗರದ ಚರಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಚರಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ಜನಾನುರಾಗಿ ಬಾಪುಗೌಡ ದರ್ಶನಾಪುರ ಅವರ ೩೬ನೇ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು ಶಹಾಪುರ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಬಾಪುಗೌಡರ ವಿಚಾರಗಳಿಗೆ ಶಾಸನ ಸಭೆಗಳಲ್ಲಿ ತುಂಬಾ ಮಹತ್ವವಿತ್ತು. ಭೀಮರಾಯನಗುಡಿಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಮುಖ್ಯ ಕೇಂದ್ರ ಕಛೇರಿ ಸ್ಥಾಪಿಸಿ ಕಲ್ಯಾಣ ಕರ್ನಾಟಕದ್ಯಾಂತ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಿದರು. ವಸತಿ ಸೌಕರ್ಯಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದರು. ದೀನ-ದಲಿತರ, ಶೋಷಿತರ, ಹಿಂದುಳಿದ ವರ್ಗಗಳ ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದ ರಾಜಕೀಯ ಚೇತನರಾಗಿದ್ದಾರೆ ಎಂದು ಹಲವಾರು ನಿರ್ದೇಶನಗಳ ಮೂಲಕ ತಿಳಿಸಿದರು.

    ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣ ಕಮಕನೂರ ಅವರು ಮಾತನಾಡಿ ಬಹು ಅಂತಃಕರಣವುಳ್ಳ ರಾಜಕಾರಣಿಯಾಗಿದ್ದ ಬಾಪುಗೌಡರ ಸಾಮಾಜಿಕ ಕಳಕಳಿ, ಅಭಿವೃದ್ಧಿಯ ಚಿಂತನೆ, ಕೃಷಿ, ನೀರಾವರಿ, ಶೈಕ್ಷಣಿಕ ಅಭಿವೃದ್ಧಿಯ ಕಾರ್ಯಗಳು ಅವರನ್ನು ಕರ್ನಾಟಕದ ಅಪರೂಪದ ಸಜ್ಜನಿಕೆಯ ರಾಜಕಾರಣಿಯಾಗಿ ಮಾಡಿದವು. ತಂದೆಯ ಹಾದಿಯಲ್ಲಿ ಸಾಗಿರುವ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ರಾಜ್ಯ ರಾಜಕಾರಣದಲ್ಲಿ ಅಪರೂಪದ ಸರಳ ಸಜ್ಜನಿಕೆಯ ಮಾದರಿ ಜನನಾಯಕರಾಗಿ ಎಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗಿದ್ದಾರೆ. ನಾಡಿನ ಅಭಿವೃದ್ಧಿಯ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಬದ್ಧತೆಯ ಹೆಮ್ಮೆಯ ನಾಯಕರಾಗಿದ್ದಾರೆ. ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿಗಳಾದ ಬಸವರಾಜಪ್ಪಗೌಡ ದರ್ಶನಾಪುರ ಅವರ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

     

    ಚರಬಸವೇಶ್ವರ ಗದ್ದುಗೆ ಸಂಸ್ಥಾನದ ವೇದಾಮೂರ್ತಿ ಬಸವಯ್ಯ ಶರಣರು, ನಾಗನಟಿಗಿಯ ಸಿದ್ಧರಾಮೇಶ್ವರ ಸ್ವಾಮಿಜಿಯವರು ಸಾನಿಧ್ಯ ವಹಿಸಿದ್ದರು. ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ, ಕಲಬುರ್ಗಿ ದಕ್ಷಿಣಕ್ಷೇತ್ರದ ಶಾಸಕ ಅಲಮಪ್ರಭು ಪಾಟೀಲ, ಆರ್.ಎಚ್. ಪಾಟೀಲ, ಚರಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜಪ್ಪಗೌಡ ದರ್ಶನಾಪುರ, ಚಂದ್ರಶೇಖರ ಆರಬೋಳ, ಶಂಕ್ರಣ್ಣ ವಣಿಕ್ಯಾಳ, ಭೀಮರಡ್ಡಿ ಬೈರಡ್ಡಿ, ಶರಣಪ್ಪ ಸಲಾದಪುರ, ವಾಮನರಾವ ದೇಶಪಾಂಡೆ, ಸಿದ್ಧಲಿಂಗಣ್ಣ ಆನೆಗುಂದಿ, ಸಂತೋಷ ದೇವದುರ್ಗ, ಮಲ್ಲಿಕಾರ್ಜುನ ಪೂಜಾರಿ, ನೀಲಕಂಠ ಬಡಿಗೇರ, ಸಣ್ಣನಿಂಗಪ್ಪ ನಾಯ್ಕೋಡಿ, ಬಸವರಾಜ ಹಿರೇಮಠ, ಗುಂಡಪ್ಪ ತುಂಬಗಿ, ಬಸವರಾಜ ಹೇರುಂಡಿ, ಅಲ್ಲಾಪಟೇಲ ಮಕ್ತಾಪುರ, ಇಬ್ರಾಹಿಂ ಶಿರವಾಳ, ಇಸ್ಮಾಯಿಲ್ ಚಾಂದ್, ತಲತ್‌ಚಾಂದ್, ಮಲ್ಲಣ್ಣ ಉಳ್ಳುಂಡಗೇರಿ, ಆನಂದ ದೊಡ್ಡಮನಿ, ಬಾಪುಗೌಡ, ವಿಜಯಕುಮಾರ ಎದರಮನಿ, ಮಹಾದೇವಪ್ಪ ಸಾಲಿಮನಿ, ಗುರುಬಾಣತಿಹಾಳ, ಬಸವರಾಜ ಪಾಟೀಲ ಕೆಂಭಾವಿ, ಸಿದ್ಧಣ್ಣ ಗೌಡ, ಹಣಮಂತ್ರಾಯ ದೊರೆ, ಶಾಂತಗೌಡ ನಾಗನಟಗಿ, ಗೌಡಪ್ಪಗೌಡ ಆಲ್ದಾಳ, ಪ್ರೌಢಶಾಲೆಯ ಮುಖ್ಯಗುರು ತಿಪ್ಪಣ್ಣ ಜಮಾದಾರ, ಪಿ.ಯು. ಕಾಲೇಜಿನ ಪ್ರಾಂಶುಪಾಲ ಧರ್ಮಣ್ಣಗೌಡ ಬಿರಾದಾರ ಮುಂತಾದ ಅನೇಕ ರಾಜಕೀಯ ಮುಖಂಡರು ಹಾಗೂ ಬಾಪುಗೌಡ ದರ್ಶನಾಪುರ ಅವರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.

     

    ಈ ಸಂದರ್ಭದಲ್ಲಿ ಚರಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ ಅರುಣಕುಮಾರ ಜೇವರ್ಗಿ ನಿರೂಪಿಸಿದರು. ಶಿಕ್ಷಕ ಶರಣಯ್ಯಸ್ವಾಮಿ ಹಿರೇಮಠ ಸ್ವಾಗತಿಸಿದರು. ಪ್ರಾಂಶುಪಾಲ ಪ್ರೊ. ಶಿವಲಿಂಗಣ್ಣ ಸಾಹು ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸುರೇಶ ದೊರೆ ಮುಡಬೂಳ ವಂದಿಸಿದರು.

     

    ಸಂಗೀತ ಕಲಾವಿದರಾದ ಮಲ್ಲಯ್ಯಸ್ವಾಮಿ ಹಿರೇಮಠ, ಬಸವರಾಜ ವಿಶ್ವಕರ್ಮ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಜರುಗಿತು.