Author: Satyakam NewsDesk

  • ಟ್ರಾನ್ಸ್ಫರ್ ಗೆ ಲಂಚ ತೋಗುತ್ತಾರ ಡಿಡಿಪಿಐ..? ಚರ್ಚೆಗೆ ಗ್ರಾಸವಾದ ಕೇಂದ್ರ ಸಚಿವರ ಭಾಷಣ

    ಟ್ರಾನ್ಸ್ಫರ್ ಗೆ ಲಂಚ ತೋಗುತ್ತಾರ ಡಿಡಿಪಿಐ..? ಚರ್ಚೆಗೆ ಗ್ರಾಸವಾದ ಕೇಂದ್ರ ಸಚಿವರ ಭಾಷಣ

    ಟ್ರಾನ್ಸಪರ್ ಗೆ ಕಾಸು ಇಸ್ಕೋಬೇಡ್ರಿ ಡಿಡಿಪಿಐ ಕೇಂದ್ರ ಸಚಿವ ಗರಂ..!

    ಚರ್ಚೆಗೆ ಗ್ರಾಸವಾದ ಕೇಂದ್ರ ಸಚಿವರ ಭಾಷಣ

    ಸತ್ಯಕಾಮ  ವಾರ್ತೆ ಯಾದಗಿರಿ:

    ಶಿಕ್ಷಕರ ವರ್ಗಾವಣೆ ಮಾಡಲು ಡಿಡಿಪಿಐ ಅವರು ಹಣ ಪಡೆಯುತ್ತಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದು, ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

    ಜಿಲ್ಲೆಯ ತಡಿಬಿಡಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಂಪೂರ್ಣತಾ ಅಭಿಯಾನ ಮೇಳ ಉದ್ಘಾಟಿಸಿ ಸಚಿವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ, ಏನ್ರೀ ಡಿಡಿಪಿಐ ಅವರೇ, ಟ್ರಾನ್ಸ್ಫರ್ ಮಾಡಲು ಕಾಸು ಇಸ್ಕೊತಿರಂತೆ ಎಂದು ಹೇಳಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

    ಯಾದಗಿರಿ ಜಿಲ್ಲೆಯೂ ಶಿಕ್ಷಣದಲ್ಲಿ ಕೊನೆಯ ಸ್ಥಾನದಲ್ಲಿದೆ ಎನು ಮಾಡುತ್ತಿರಿ ಶಿಕ್ಷಣ ಇಲಾಖೆಯಲ್ಲಿ 3 ಸಾವಿರ ಶಿಕ್ಷಕರಿಲ್ಲ ಇಲಾಖೆ ಮಾತ್ರ ಇದೆ ಎನು ಮಾಡತ್ತೀರಿ ರೀ ಡಿಡಿಪಿಐ ಹೋದ ಪುಟ್ಟ ಬಂದ ಪುಟ್ಟ ಎನ್ರೀ ಮಂಜುನಾಥ ಚಾಮರಾಜನಗರದಿಂದ ಯಾದಗಿರಿ ಬಂದಿದ್ದೂ ನಾಮಕಾವಸ್ಥೆ ಚಾಮರಾಜನಗರ ಅಂತಾ ಹೇಳಿದ್ರೆ ನನಗೆ ನಾಚಿಕೆಯಾಗುತ್ತೆ ಟ್ರಾನ್ಸಪರ್ ಗೆ ದುಡ್ಡು ತಗೋಬೇಡಿ ಹೀಗ ಕಾಲ ಮೊದಲಿನಂತಿಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಶಿಕ್ಷಣ ಇಲಾಖೆ ಅವ್ಯವಸ್ಥೆಯ ಕುರಿತು ಗರಂ ಆಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಅವರಿಗೆ ತರಾಟೆ ತೆಗೆದುಕೊಂಡರು.

    ವಿಡಿಯೋ: ಟ್ರಾನ್ಸಪರ್ ಗೆ ಕಾಸು ಇಸ್ಕೋಬೇಡ್ರಿ ಡಿಡಿಪಿಐ ಕೇಂದ್ರ ಸಚಿವ ಗರಂ..!

    ಜಿಲ್ಲೆಯ ಶಿಕ್ಷಣ ಇಲಾಖೆಯ ಅವ್ಯವಸ್ಥೆ ಹಾಗೂ ವರ್ಗಾವಣೆಗೆ ಹಣ ಪಡೆಯುತ್ತಾರೆ ಎಂಬ ಆರೋಪಗಳಿಗೆ ಕೇಂದ್ರ ರೇಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಗರಂ ಮಾತು ಮತ್ತಷ್ಟು ಬಲ ತಂದಿದೆ. ಇದರ ಕುರಿತು ತನಿಖೆ ಮಾಡುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹಗಳು ಕೇಳಿಬಂದವು.

  • ಅತಿವೃಷ್ಠಿಯಿಂದ ಆದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಸಚಿವ  ಶರಣಬಸಪ್ಪ ದರ್ಶನಾಪುರ

    ಅತಿವೃಷ್ಠಿಯಿಂದ ಆದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಸಚಿವ ಶರಣಬಸಪ್ಪ ದರ್ಶನಾಪುರ

    ಅತಿವೃಷ್ಠಿಯಿಂದ ಆದ ಹಾನಿಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಬಾಕಿ ಮನೆ ಹಾನಿ ಪರಿಹಾರ ಶೀಘ್ರ ವಿತರಿಸಿ: ಸಚಿವ ಶರಣಬಸಪ್ಪ ದರ್ಶನಾಪುರ

    ಸತ್ಯಕಾಮ ವಾರ್ತೆ ಯಾದಗಿರಿ;

    ಅತಿವೃಷ್ಠಿಯಿಂದಾದ ಬೆಳೆ ಹಾನಿ ಮತ್ತು ಮನೆ ಹಾನಿ ಕುರಿತಂತೆ ಪರಿಶೀಲನೆ ನಡೆಸಿ ಶೀಘ್ರ ವರದಿ ಸಲ್ಲಿಸುವುದರ ಜೊತೆಗೆ ಈ ಹಿಂದೆ ಮನೆ ಹಾನಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪರಿಹಾರವನ್ನು ಆಧ್ಯತೆ ಮೇಲೆ ವಿತರಿಸುವಂತೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಪ್ರಕೃತಿ ವಿಕೋಪದ ಅಡಿಯಲ್ಲಿ ಬೆಳೆ,ರಸ್ತೆ, ಮೂಲಸೌಕರ್ಯ ಹಾನಿಯಾದ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

    ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು. ಅದರಂತೆ ಮನೆ ಹಾನಿ,ರಸ್ತೆ ಮೂಲಸೌಕರ್ಯಗಳ ಹಾನಿ ಕುರಿತು ಶೀಘ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

    ಜಿಲ್ಲೆಯ ಸಿರವಾಳದಿಂದ ಅಣಬಿ ವರೆಗೆ ಹಾಗೂ ಶಹಾಪುರದಿಂದ ಶಿರವಾಳದವರೆಗೆ ಹಾಗೂ ಇಬ್ರಾಹಿಂಪುರದಿಂದ ಚಟ್ನಳ್ಳಿ ವರೆಗೆ ರಸ್ತೆ ಹಾನಿಯಾಗಿದೆ. ಈ ರಸ್ತೆಗಳ ಮಧ್ಯೆ ಭಾರತಮಾಲಾ, ರೈಲ್ವೆ ಕಾಮಗಾರಿ ನಡೆಯುತ್ತಿರುವುದರಿಂದ ಈ ಕುರಿತಂತೆ ಜಂಟಿ ಸಹಯೋಗದೊಂದಿಗೆ ಸಾಧ್ಯತೆ ಇದ್ದಲ್ಲಿ ರಸ್ತೆ ದುರಸ್ತಿ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ, ಅವಶ್ಯಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

    ಸಚಿವರು ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಆಗಿರುವ ಬಿತ್ತನೆ, ಬೆಳೆ ಹಾನಿ, ಭೀಮಾ, ಕೃಷ್ಣ ನದಿ ವ್ಯಾಪ್ತಿಯಲ್ಲಿ ಬೆಳೆ ಪರಿಸ್ಥಿತಿ, ರಸಗೊಬ್ಬರದ ಅವಶ್ಯಕತೆ, ಬೆಳೆವಿಮೆ ಪರಿಹಾರ ವಿತರಣೆ, ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿ ಆದ ಬೆಳೆ ಹಾನಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿ ಕುರಿತಂತೆ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರು ಸೇರಿದಂತೆ ಎಲ್ಲಾ ತಾಲೂಕಿನ ತಹಶೀಲ್ದಾರರ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು

    ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು

    ಅತಿವೃಷ್ಟಿ-ಪ್ರವಾಹ ಎದುರಿಸಲು ಸರ್ವ ರೀತಿಯಿಂದ ಅಧಿಕಾರಿಗಳು ಸನ್ನದ್ಧಗೊಳ್ಳಿ; ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

    ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು

    ಸತ್ಯಕಾಮ ವಾರ್ತೆ ಯಾದಗಿರಿ : 

    ಜಿಲ್ಲೆಯಲ್ಲಿ ನಿರಂತರ ಆಗುತ್ತಿರುವ ಮಳೆಯ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಕೃಷ್ಣ ಹಾಗೂ ಭೀಮಾ ನದಿಗಳಿಗೆ ಬರಬಹುದಾದ ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಸಾರ್ವಜನಿಕರು, ನದಿ ಪಾತ್ರದ ಜನರು ಹಾಗೂ ಜಾನುವಾರುಗಳಿಗೆ ತೊಂದರೆ ಯಾಗದಂತೆ ಅವಶ್ಯಕ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

     

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಆಲಮಟ್ಟಿ, ನಾರಾಯಣಪುರ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ, ಹೊರ ಹರಿವು ಹೆಚ್ಚು ಆದ ಸಂದರ್ಭದಲ್ಲಿ ತುರ್ತಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಅವರು ಸೂಚನೆ ನೀಡಿದರು.

    ಕೃಷ್ಣ ಮತ್ತು ಭೀಮಾ ನದಿ ತೀರಗಳ ವ್ಯಾಪ್ತಿಯಲ್ಲಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳು ಈಗಿನಿಂದಲೇ ಸನ್ನದ್ದರಾಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

     

    ಸದ್ಯ ಯಾವುದೇ ರೀತಿಯ ಪ್ರವಾಹದ ಭೀತಿ ಇಲ್ಲದಿದ್ದರೂ ಕೂಡ, ಮಳೆ ಪ್ರಮಾಣ ಹೆಚ್ವಾಗಿ ಕೃಷ್ಣ ಮತ್ತು ಭೀಮಾ ನದಿ ನೀರು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

    ಈ ಹಿಂದಿನ ವರ್ಷಗಳಲ್ಲಿ ಪ್ರವಾಹ ಸಂದರ್ಭಗಳಲ್ಲಿ ಬಾಧಿತವಾಗಿದ್ದ ಗ್ರಾಮಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕರ್ತವ್ಯಗಳೊಂದಿಗೆ ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ನಿಗಾ ಇಟ್ಟು ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

     

    ಜಿಲ್ಲೆಯ ಆಯಾ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ಅಭಿಯಂತರರು, ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅತಿವೃಷ್ಟಿ, ಹಾಗೂ ಪ್ರವಾಹ ದಿಂದ ಯಾವುದೇ ಮಾನವ ಜೀವ ಹಾನಿ ಹಾಗೂ ಜಾನುವಾರುಗಳ ಜೀವ ಹಾನಿ ಆಗದಂತೆ ಮುಂಜಾಗ್ರತೆವಹಿಸಬೇಕು. ಪ್ರತಿ ಹೋಬಳಿವಾರು ನೇಮಿಸಿದ ನೋಡಲ್ ಅಧಿಕಾರಿಗಳು ಕೂಡ ಕೃಷ್ಣ ಮತ್ತು ಭೀಮಾ ನದಿ ಪಾತ್ರದ ವ್ಯಾಪ್ತಿಯಲ್ಲಿ ಸೂಕ್ತ ನಿಗಾ ವಹಿಸಬೇಕು . ನಾರಾಯಣಪುರ ಹಾಗೂ ಸನ್ನತಿ, ಗುರಸಣಗಿ ಬ್ರಿಡ್ಜ್ ಕಂ ಬ್ಯಾರೇಜ್‌ಗಳ ನೀರು ನಿರ್ವಹಣೆ ಹಾಗೂ ನಿಗಾಕ್ಕೆ ನೇಮಿಸಿರುವ ನೋಡಲ್ ಅಧಿಕಾರಿಗಳು ಸೂಕ್ತ ಗಮನ ನೀಡುವಂತೆ ಅವರು ಸೂಚನೆ ನೀಡಿದರು.

     

    ಆಯಾ ತಹಸೀಲ್ದಾರರು, ನಗರಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು , ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಒಳ ಚರಂಡಿ ಗಳನ್ನು ಸ್ವಚ್ಛಗೊಳಿಸಬೇಕು, ನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿಗಳ ತ್ಯಾಜ್ಯ ಬೇರೆ ಕಡೆ ಸ್ಥಳಾಂತರಿಸಲು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ಓವರ್ ಫ್ಲೊವ್ ಆಗುವಂತಹ ಸೇತುವೆಗಳ ಹಾಗೂ ಸಿಡಿ ಗಳ ಬಗ್ಗೆ ಮಾಹಿತಿ ಕಲೆ ಹಾಕಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

     

    ಅಗ್ನಿಶಾಮಕ ಇಲಾಖೆ ವ್ಯಾಪ್ತಿಯ ಎಲ್ಲ ಬೋಟ್‌ಗಳನ್ನು, ಸಾಧನ ಸಲಕರಣೆಗಳನ್ನು, ವಾಹನಗಳನ್ನು ಸುಸ್ಥಿಯಲ್ಲಿ ಇಟ್ಟುಕೊಳ್ಳಬೇಕು. ಜೆಸ್ಕಾಮ್ ಅಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಪಿಡಿಓ ಗಳು ಮುನ್ನೆಚ್ಚರಿಕೆ ಯಾಗಿ ಆಯಾ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರ ಮೂಲಕ ಡಂಗುರಾ ಮೂಲಕ ಅರಿವಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

     

    ವಿವಿಧ ಆಸ್ಪತ್ರೆಗಳಲ್ಲಿ ಔಷಧಿ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಅವಶ್ಯಕ ಕ್ರಮ ಕೈಗೊಳ್ಳವ ಬಗ್ಗೆ ಸಿದ್ಧತೆಯಲ್ಲಿರಬೇಕು. ಪ್ರವಾಹದ ವೇಳೆ ಕುಡಿಯುವ ನೀರಿಗೆ ಕಲುಷಿತ ನೀರು ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರವಾಹದ ಸಂದರ್ಭದಗಳಲ್ಲಿ ಜಾನುವಾರುಗಳ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಬಗ್ಗೆ ಸೂಕ್ತ ಪ್ರದೇಶ ಗಳನ್ನು, ತಾತ್ಕಾಲಿಕ ಶೆಡ್‌ಗಳನ್ನು ಗುರುತಿಸಿ ಇಟ್ಟು ಕೊಳ್ಳುವಂತೆ ಅವರು ಸೂಚನೆ ನೀಡಿದರು.

     

    ಅದರಂತೆ ಇತ್ತೀಚಿಗೆ ಸುರಿದ ಮಳೆ ಯಿಂದಾದ ಮನೆಹಾನಿ ಮತ್ತು ಇತರೆ ಹಾನಿಗಳ ಬಗ್ಗೆ ಜಂಟಿ ತಪಾಸಣೆ ನಡೆಸಿ ಸೂಕ್ತ ವರದಿ ಸಲ್ಲಿಸಬೇಕು . ವಿಶೇಷವಾಗಿ ಅತಿವೃಷ್ಟಿ ಮತ್ತು ಪ್ರವಾಹ ಗಳಿಂದ ಮುಂದೆ ಆಗಬಹುದಾದ ಹಾನಿಗಳ ಬಗ್ಗೆ ವಾಸ್ತವ ವರದಿ ಸಲ್ಲಿಕೆಗೆ ಸಂಬಂಧಿಸಿದ ಇಲಾಖೆ ಗಳ ಅಭಿಯಂತರರು ವಾಸ್ತವಾಂಶ ವರದಿ ಸಲ್ಲಿಸಲು ಸೂಚಿಸಿದ ಅವರು, ಭೀಮಾ ಮತ್ತು ಕೃಷ್ಣ ನದಿ ತೀರಗಳಲ್ಲಿ ಬಾಧಿತವಾಗುವ ಗ್ರಾಮಗಳ ಬಗ್ಗೆ, ಮೂಲ ಸೌಕರ್ಯ ಕಲ್ಪಿಸುವ ಬಗ್ಗೆ, ಸಂಭವಿಸಬಹುದಾದ ಮಾನವ ಜೀವಹಾನಿ ಹಾಗೂ ಜಾನುವಾರು ಜೀವಹಾನಿ ತಡೆಯುವ ಬಗ್ಗೆ ಅಧಿಕಾರಿಗಳು ಸೂಕ್ತ ನಿಗಾ ಇಡಬೇಕು.

     

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತರು ಹಂಪಣ್ಣ ಸಜ್ಜನ, ಡಿವೈಎಸ್‌ಪಿ ಅರುಣಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ವಿದ್ಯುತ್ ಜೆಸ್ಕಾಂ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಸಹಾಯಕ ಇಲಾಖೆ ಉಪನಿರ್ದೇಶಕ ಪವನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ತಹಸೀಲ್ದಾರರು ಉಪಸ್ಥಿತರಿದ್ದರು.

  • ವಡಗೇರಾ ಪಡಿತರ ಚೀಟಿ ವಿತರಣೆಯಲ್ಲಿ ಹೆಚ್ಚಿನ ಹಣ ವಸೂಲಿ: ರೈತ ಸಂಘ ಆರೋಪ

    ವಡಗೇರಾ ಪಡಿತರ ಚೀಟಿ ವಿತರಣೆಯಲ್ಲಿ ಹೆಚ್ಚಿನ ಹಣ ವಸೂಲಿ: ರೈತ ಸಂಘ ಆರೋಪ

    ಸತ್ಯಕಾಮ ವಾರ್ತೆ ವಡಗೇರಾ:
    ಪಡಿತರ ಕಾರ್ಡ ವಿತರಣೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ವಡಗೇರಾ ತಾಲೂಕು ಅಧ್ಯಕ್ಷ ವಿದ್ಯಾಧರ ಜಾಕ ನೇತೃತ್ವದಲ್ಲಿ ವಡಗೇರಾ ತಹಸೀಲ್ದಾರರಿಗೆ ದೂರು ಸಲ್ಲಿಸಿದರು.

     

    ಈ ವೇಳೆ ಮಾತನಾಡಿದ ಅವರು ಪಡಿತರ ಚೀಟಿಗಾಗಿ ನೂತನವಾಗಿ ಅರ್ಜಿ ಸಲ್ಲಿಸಿ ಎರಡು ಮೂರು ವರ್ಷಗಳ ಕಳೆದರೂ ಕೂಡಾ ಪಡಿತರ ಚೀಟಿಗಳನ್ನು ನೀಡದೆ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

     

    ತಾಲೂಕಿನ ದೂರದ ಗ್ರಾಮಗಳಿಂದ ದಿನನಿತ್ಯ ನೂರಾರು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಅರ್ಜಿದಾರರು ಪಡಿತರ ಚೀಟಿ ಪಡೆದುಕೊಳ್ಳಲು ಅಲೆದಾಡಿ ಹೈರಾಣಗುತ್ತಿದ್ದಾರೆ ಬಹಳಷ್ಟು ಅರ್ಜಿದಾರರಿಗೆ ಆಸ್ಪತ್ರೆಯ ಚಿಕಿತ್ಸೆಯ ಕೆಲಸಕ್ಕೆ ಪಡಿತರೆ ಚೀಟಿಗೆ ಅವಶ್ಯಕತೆ ಇದೆ ಪಡಿತರ ಚೀಟಿ ಇಲ್ಲದಿರುವುದರಿಂದ ರೋಗಿಗಳು ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

     

    ಪಡಿತರ ಚೀಟಿ ಇಲ್ಲದ ರೋಗಿಗಳು ಖಾಸಗಿ ಆಸ್ಪತ್ರೆಗೆ ಹೋಗಿ ಲಕ್ಷಾನುಗಟ್ಟಲೆ ಹಣವನ್ನು ಸುರಿಯುತ್ತಿದ್ದಾರೆ ಆದರೆ ಆಹಾರ ಇಲಾ ಅಧಿಕಾರಿಗಳು ತೀವ್ರ ನಿರ್ಲಕ್ಷ ವಹಿಸಿ ಸರ್ವರ್ ನೆಪ ಹೇಳಿ ವಾಪಸ್ ಕಳಿಸುತ್ತಿದ್ದಾರೆ ಹೆಚ್ಚಿನ ದುಡ್ಡು ನೀಡಿದವರಿಗಷ್ಟೇ ಪಡಿತರ ಚೀಟಿ ವಿತರಣೆ ಮಾಡುತ್ತಿರುವುದು ಈಗಾಗಲೇ ನಮ್ಮ ರೈತ ಸಂಘದ ಗಮನಕ್ಕೆ ಬಂದಿದೆ ತಹಸೀಲ್ದಾರರು ತಪ್ಪಿಸ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬಾಕಿ ಉಳಿದಿರುವ ಪಡಿತರ ಚೀಟಿಗಳನ್ನು ಕೂಡಲೇ ವಿತರಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು.

     

    ಮನವಿಗೆ ಸ್ಪಂದಿಸಿದ ತಹಸೀಲ್ದಾರರು ಬಾಕಿ ಪಡಿತರ ಚೀಟಿಗಳ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಯಾರಾದರೂ ಹಣದ ಬೇಡಿಕೆ ಇಟ್ಟಿದ್ದು ಕಂಡುಬAದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

     

    ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರುಗಳಾದ ಶರಣು ಜಡಿ, ಸತೀಶ್ ಪೂಜಾರಿ, ನಿಂಗಪ್ಪ ಕುರ್ಕಳ್ಳಿ, ಅಶೋಕ್ ಚಿನ್ನಿ, ಹಳ್ಳೆಪ್ಪ ತೇಜೇರ, ನಾಗರಾಜ್ ಸ್ವಾಮಿ ಇನ್ನಿತರರು ಇದ್ದರು

  • ರೈತರ ಬದುಕಿನ ಜತೆ ಚೆಲ್ಲಾಟ ಬೇಡ; ಸರ್ಕಾರಕ್ಕೆ ದೇಸಾಯಿ ಅಭಿಮಾನಿಗಳ ಆಗ್ರಹ.!

    ರೈತರ ಬದುಕಿನ ಜತೆ ಚೆಲ್ಲಾಟ ಬೇಡ; ಸರ್ಕಾರಕ್ಕೆ ದೇಸಾಯಿ ಅಭಿಮಾನಿಗಳ ಆಗ್ರಹ.!

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ:

    ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಆರಂಭಿಸಲಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಸಿದ್ಧಸಿರಿ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯಾಚರಣೆಗೆ ಸಮ್ಮತಿ ಪತ್ರ ನೀಡುವಂತೆ ಹೈಕೋರ್ಟ್‌ ಆದೇಶಿಸಿದ್ದರೂ ರಾಜ್ಯದ ವಾಯುಮಾಲಿನ್ಯ ಇಲಾಖೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನಿಯ ಎಂದು ಮಾಜಿ ಜಿ.ಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

     

    ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸಕ್ಕರೆ ಕಾರ್ಖಾನೆ ರೈತರಿಗೆ ಕಬ್ಬು ನುರಿಅಲು ಅನುಕೂಲ ಆಗಲೆಂದು ಪ್ರಾರಂಭವಾಗಿದೆ. ಈ ಕಾರ್ಖಾನೆ ಆರಂಭ ಮಾಡಿದರೆ ಈ ಭಾಗದ ಹಲವು ನಿರುದ್ಯೋಗಿಗಳಿಗೆ ಉದ್ಯೋಗ ದೊರಕಲಿದೆ. ಇದರಿಂದ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಉತ್ತಮ ಬೆಂಬಲ ಬೆಲೆ ಸೇರಿ ಹಲವು ಅನುಕೂಲ ಆಗಲಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ವಾಯುಮಾಲಿನ್ಯದ ನೆಪ ಹೇಳಿ ಕಾರ್ಖಾನೆ ಬಂದ್ ಮಾಡಿಸಿದೆ. ಸಿದ್ಧಸಿರಿ ಕಾರ್ಖಾನೆಯಿಂದ ಮಾತ್ರ ಮಾಲಿನ್ಯ ಆಗುತ್ತಿದೆಯಾ? ಸಿಮೆಂಟ್ ಕಾರ್ಖಾನೆಗಳು, ಪವರ್ ಪ್ಲಾಂಟ್‌ಗಳು ಸೇರಿ ಇತರೆ ಕಂಪನಿಗಳಿಂದ ಮಾಲಿನ್ಯ ಆಗುತ್ತಿಲ್ಲವೇ ಎಂದು ದೇಸಾಯಿ ಅಭಿಮಾನಿಗಳು ಪ್ರಶ್ನಿಸಿದರು.

     

    ಕಾರ್ಖಾನೆ ಆರಂಭಿಸಿದರೆ 2 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ. ಸಾವಿರಾರು ರೈತರಿಗೆ ಲಾಭವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹೈಕೋರ್ಟ್ ಆದೇಶವಿದ್ದರೂ ಕಾರ್ಖಾನೆ ಮರು ಆರಂಭಕ್ಕೆ ಅನುಮತಿ ನೀಡುತ್ತಿಲ್ಲ. ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಿದೆ ಎಂದರು.

     

    ಇದು ಕೇವಲ ರಾಜಕೀಯ ಪ್ರೇರಿತ. ಕಾಂಗ್ರೆಸ್ ಸರ್ಕಾರದ ಈ ಧೋರಣೆಯನ್ನು ರೈತರು ಗಮನಿಸುತ್ತಿದ್ದಾರೆ. ಕಾರ್ಖಾನೆ ಬಂದ್ ಆದ ಪರಿಣಾಮ ಕಬ್ಬು ಬೆಳೆದ ರೈತರು ಕಂಗಾಲಾಗಿದ್ದಾರೆ. ಈ ಕೂಡಲೇ ವಾಯುಮಾಲಿನ್ಯ ಇಲಾಖೆ ಅಧಿಕಾರಿಗಳು ಕೋರ್ಟ್‌ನ ಆದೇಶ ಪಾಲಿಸಿ ಅನುಮತಿ ನೀಡಬೇಕು ಎಂದು ಪ್ರಭುಗೌಡ ದೇಸಾಯಿ ಅಭಿಮಾನಿಗಳು ಆಗ್ರಹಿಸಿದರು.

     

    ಸಿಎಂ ಸಿದ್ದರಾಮಯ್ಯ ಯಾರಿಗೂ ಬಗ್ಗದೆ, ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ನಿಮ್ಮ ಅಧಿಕಾರಿಗಳಿಗೆ ರಾಜಕೀಯ ಮಾಡುವುದನ್ನು ಬಿಟ್ಟು ಯತ್ನಾಳವರ ಕಾರ್ಖಾನೆ ಪ್ರಾರಂಭ ಮಾಡಲು ಸೂಚನೆ ನೀಡಿ, ಪ್ರಾರಂಭ ಮಾಡಲು ಅನುಮತಿ ನೀಡದೆ ಇದ್ದರೆ ನಿಮ್ಮ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುದ್ದೇಬಿಹಾಳ ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಭುಗೌಡ ದೇಸಾಯಿ ಅಭಿಮಾನಿಗಳ ನೇತೃತ್ವದಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ಪ್ರಕಾಶ್ ಗೌಡ ಪಾಟೀಲ್ ಶಿವು ದಡ್ಡಿ, ಶಶಿಧರ ಹಿರೇಮಠ, ಬಸಯ್ಯ ಹಿರೇಮಠ ಇದ್ದರು.

     

    ಯಾವುದೇ ಸರ್ಕಾರವಿರಲಿ, ಎಲ್ಲ ಸರ್ಕಾರಗಳು ರೈತರ ಹಿತಕ್ಕಾಗಿ ಇದೆ. ಆದರೇ ಅದೆಲ್ಲವನ್ನು ಬಿಟ್ಟು ರೈತರ ಕೃಷಿ ಜೀವನದ ಜತೆಗೆ ಆಟವಾಡುವಲ್ಲಿ ಸರ್ಕಾರ ಸಾಮಥ್ರ್ಯ ತೋರುತ್ತಿದೆ. ಪಕ್ಷಬೇಧ ಮರೆತು ಸರ್ಕಾರ ರೈತರ ಹಿತದೃಷ್ಟಿಯನ್ನು ಕಾಪಾಡಬೇಕೆಂದರೆ, ಸಿದ್ದಸಿರಿ ಇಥೆನಾಲ್ ಘಟಕ ಪ್ರಾರಂಭಗೊಳಿಸಿಬೇಕು.

    ಭೀಮನಗೌಡ ಟಕ್ಕಳಕಿ

  • ಬೃಹನ್ಮಠದ ಆಶಯದಂತೆ ಶ್ರೀಗಳಿಂದ ಬಸವತತ್ವ ಪ್ರಚಾರ:ಶಿವಾನಂದ ಕಳಸದ.

    ಬೃಹನ್ಮಠದ ಆಶಯದಂತೆ ಶ್ರೀಗಳಿಂದ ಬಸವತತ್ವ ಪ್ರಚಾರ:ಶಿವಾನಂದ ಕಳಸದ.

    ಸತ್ಯಕಾಮ ವಾರ್ತೆ ಗುರುಮಠಕಲ್:

    ಚಿತ್ರದುರ್ಗದ ಶ್ರೀ ಬೃಹನ್ಮಠದ ಅಶಯದಂತೆ ಬಸವತತ್ವ ಪ್ರಚಾರ ಗಡಿನಾಡಿನಲ್ಲಿ ಖಾಸಾಮಠದ ಶ್ರೀಗಳು ಬಸವತತ್ವ ಪ್ರಚಾರಕಾರ್ಯ ಶ್ಲಾಘನೀಯವಾಗಿದೆ ಎಂದು ಚಿತ್ರದುರ್ಗ ಬೃಹನ್ಮಠ ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ.ಸಿ.ಕಳಸದ ಹೇಳಿದರು.

     

    ಪಟ್ಟಣದ ಖಾಸಾಮಠ ಆವರಣದಲ್ಲಿ ಅನುಭಾವ ಶ್ರಾವಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ಯಾವುದೇ ಮಠ ಮಾನ್ಯಗಳು ಬೆಳೆಯಲು ಭಕ್ತರ ಸಹಕಾರ ಅತಿ ಮುಖ್ಯ,ಐತಿಹಾಸಿಕ ಮತ್ತು ಚಾರಿತ್ರಿಕ ಇತಿಹಾಸವುಳ್ಳ ಖಾಸಾಮಠವನ್ನು ಅಭಿವೃದ್ಧಿ ಗೊಳಿಸಲು ಶ್ರೀ ಮಠದ ಸದ್ಭಕ್ತರ ಸೇವೆ ಸಹಕಾರ ಅನನ್ಯವಾಗಿದೆ ಹೇಳಿದರು.

     

    ಮಾನವನ ಜೀವನವು ವಚನ ಸಾಹಿತ್ಯ ಎಂಬ ದರ್ಶನಗಳ ಮೇಲೆ ಅವಲಂಬಿತವಾಗಿದೆ.ಬಸವಾದಿ ಶರಣರ ಜೀವನ ಇಂದಿಗೂ ಪ್ರೇರಕವಾಗಿವೆ. ಯಾವುದೇ ಜಾತಿ ಬೇಧವಿಲ್ಲದೆ ಬಸವಾದಿ ಶರಣರ ಶರಣತತ್ವಚಿಂತನೆ, ದಾಸೋಹ,ಅಕ್ಷರ,ಶಿಕ್ಷಣ ಸೇರಿದಂತೆ ಪ್ರತಿ ಶ್ರಾವಣಮಾಸದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸಮಾಜಕ್ಕೆ ಪರಿಚಯಿಸುವ ಜೊತೆಗೆ ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ತಮ್ಮದೇ ಆದ ವಿಶಿಷ್ಟ ಕಾಯಕ ಸೇವೆ ಸಲ್ಲಿಸುತ್ತಿರುವ ಖಾಸಾಮಠದ ಶ್ರೀ ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮಿಗಳ ಕಾರ್ಯವೈಖರಿ ಬೃಹನ್ಮಠ ಆಡಳಿತ ಮಂಡಳಿಗೆ ತೃಪ್ತಿ ತಂದಿದೆ ಎಂದರು.

     

    ರಾಯಷೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಹಾಂತಗೌಡ ಪಾಟೀಲ್ ಭಾಗೋಡಿ ಮಾತನಾಡಿ,ಬಸವಾದಿ ಶರಣರ ವಚನ ಸಾಹಿತ್ಯದ ಅನುಭಾವವನ್ನು ಜೀವನದಲ್ಲಿ ಆಚರಿಸಿ ನಡೆದರೆ ಜೀವನದ ಏರು ತೊಡರು,ಕಷ್ಟಗಳನ್ನು ಸಲೀಸಾಗಿ ದಾಟಬಹುದು.ನನ್ನ ಜೀವನದಲ್ಲಿ ನಡೆದ ಅನೇಕ ಘಟನೆಗಳು ಸನ್ನಿವೇಶಗಳೇ ಸಾಕ್ಷಿಯಾಗಿದೆ. ಖಾಸಾಮಠದ ಶ್ರೀಗಳ ಮಾರ್ಗದರ್ಶನ ನಮಗೆಲ್ಲಾ ತುಂಬ ಪ್ರೇರಣೆ ನೀಡಿದೆ ಎಂದರು.

     

    ೧೧ ದಿನಗಳ ಅನುಭಾವ ಶ್ರಾವಣ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಸಹಕರಿಸಿದ ಭಕ್ತರನ್ನು ಸನ್ಮಾನಿಸಲಾಯಿತು.

     

    ಕಾರ್ಯಕ್ರಮದಲ್ಲಿ ಅಖಿಲ ಭಾರತ ಚೀರಶೈವ ಮಹಾಸಭಾ ಯಾದಗಿರಿ ಜಿಲ್ಲಾ ಅಧ್ಯಕ್ಷ ಚನ್ನಪ್ಪಗೌಡ ಮೋಸಂಬಿ,ಎಸ್ ಎಲ್ ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ನರೇಂದ್ರ ರಾಠೋಡ,ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ,ನಾಗಭೂಷಣ ಅವಂಟಿ,ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಸಂತೋಷ ಕುಮಾರ ನೀರಟ್ಟಿ,ಶ್ರಾವಣಮಾಸಾಚರಣೆ ಸಮೀತಿ ಅಧ್ಯಕ್ಷ ನರಸರೆಡ್ಡಿ ಪೊಲೀಸ್ ಪಾಟೀಲ್ ಗಡ್ಡೆಸೂಗೂರ,ಕಾರ್ಯಕ್ರಮ ನಿರೂಪಿಸಿದ ಶಿಕ್ಷಕ ಕರಿಬಸವರಾಜ ಸಜ್ಜನ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು,ಗಣ್ಯರು,ಮಹಿಳೆಯರು ಭಾಗವಹಿಸಿದ್ದರು.

  • ಕುಂಟೋಜಿ ಬಸವೇಶ್ವರ ಜಾತ್ರೆ ಆರಂಭ.!

    ಕುಂಟೋಜಿ ಬಸವೇಶ್ವರ ಜಾತ್ರೆ ಆರಂಭ.!

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ;

    ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ಐತಿಹಾಸಿಕ ದೇವಾಲಯವಾಗಿದ್ದು ಸಾವಿರಾರು ವರ್ಷಗಳ ಇತಿಹಾಸದಾಗಿದೆ ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಜಾತ್ರೆ ಜರುಗುತ್ತದೆ ಅದರಂತೆ ಸೆಪ್ಟೆಂಬರ್ 2 ಸೋಮವಾರದಿಂದ ಶುಕ್ರವಾರದವರೆಗೆ ಐದು ದಿನಗಳ ಕಾಲ ಅತಿ ವಿಜೃಂಭಣೆ ಜಾತ್ರೆ ಜರುಗಲಿದೆ ಎಂದು ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

    ಶನಿವಾರ ದೇವಸ್ಥಾನದ ಯಾತ್ರಾ ನಿವಾಸದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಸವೇಶ್ವರ ಜಾತ್ರಾ ಮಹೋತ್ಸವ ಸೆ.2 ರಿಂದ 6 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೋಮವಾರದಂದು ಬೆಳಿಗ್ಗೆ ಬಸವಣ್ಣನಿಗದ ಮಹಾಪೂಜೆ, ಮಧ್ಯಾಹ್ನ ಕಳಸದ ಮೆರವಣಿಗೆ ನಂತರ ಕಳಸ ಶಿಖರಕ್ಕೇರುವುದು. ಅಂದೇ ರಾತ್ರಿ ‘ಖಾನಾವಳಿ ಚನ್ನಿ’ ನಾಟಕ ಇರಲಿದ್ದು, ಕುಂಟೋಜಿ ಸಂಸ್ಥಾನ ಮಠದ ಗುರು ಚನ್ನವೀರ ಶಿವಾಚಾರ್ಯ ಸಾನಿಧ್ಯ, ಉದ್ಘಾಟನೆಯನ್ನು ಶಾಸಕ ಸಿ.ಎಸ್ ನಾಡಗೌಡ, ಬಸವೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.

    ಸೆ.3 ರಂದು ಬೆಳಿಗ್ಗೆ ಸಕಲ ವಾಧ್ಯ-ವೈಭವದೊಂದಿಗೆ ಪಲ್ಲಕ್ಕಿ ಉತ್ಸವದ ಬಳಿಕ ಸಂಗ್ರಾಣಿ ಕಲ್ಲು, ಚೀಲ, ಗುಂಡು, ಉಸುಕಿನ ಚೀಲ ಎತ್ತುವುದು. ಹಗ್ಗ ಜಗ್ಗುವ ಸ್ಪರ್ಧೆ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮ ಇರಲಿವೆ. ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಸಾನಿಧ್ಯವಹಿಸುವರು. ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ದೇವಸ್ಥಾನ ಕಮಿಟಿ ಉಪಾಧ್ಯಕ್ಷ ಆನಂದ ಗಸ್ತಿಗಾರ ವಹಿಸಲಿದ್ದಾರೆ.

    ಸೆ. 4 ರಂದು ಎತ್ತಿನಗಾಡಿ ರೇಸ್, ಪುಟ್ಟಿ ಗಾಡಿಯ ಸುತ್ತು ಗಾಡಿ ರೇಸ್, ಟ್ರ್ಯಾಕ್ಟರ್ ಇಂಜಿನ್ ಸ್ಪರ್ಧೆ ಹಾಗೂ ಕಲಾಚಿಂಚನ ಬಳಗದಿಂದ ರಸಮಂಜರಿ ಕಾರ್ಯಕ್ರಮ ಇರಲಿದ್ದು ಯಂಕಂಚಿ ಹಿರೇಮಠ ಸಂಸ್ಥಾನ ಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಸಾನಿಧ್ಯ ವಹಿಸಿದರೆ, ಉದ್ಘಾಟನೆಯನ್ನು ಎಂ.ಎನ್ ಮದರಿ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ರಾಮಣ್ಣ ಹುಲಗಣ್ಣಿ ವಹಿಸುವರು.

    ಸೆ.5 ರಂದು ಗಾಡಿ ರೇಸ್, ತೆರಬಂಡಿ ರೇಸ್, ಟ್ರ್ಯಾಕ್ಟರ್ ಹಿಂಬದಿಯ ಬಲ ಪ್ರದರ್ಶನ, ಪಗಡಿ ಸ್ಪರ್ಧೆ ಇರಲಿದೆ. ಅಂದೆ ರಾತ್ರಿ ‘ಮಗ ಹೋದರು ಮಾಂಗಲ್ಯ ಮುಖ್ಯ’ ನಾಟಕ ಇದೆ. ಜಾತ್ರೆ ನಡೆಯುವ ಐದು ದಿನಗಳು ಅನ್ನಸಂತರ್ಪಣೆ ಇರಲಿದೆ.

    ಈ ದೇವಸ್ಥಾನದ ಉತ್ತರಕ್ಕೆ ಅಲ್ಲಿಸಾಬ ದರ್ಗಾ, ದಕ್ಷಿಣಕ್ಕೆ ಗಂಗಪ್ಪಯ್ಯನ ಗುಡಿ, ಪಶ್ಚಿಮಕ್ಕೆ ಘನಮಠೇಶ್ವರ, ಪೂರ್ವಕ್ಕೆ ಮಳಿ(ಮಳೆ) ಬಸವೇಶ್ವರ ದೇವಸ್ಥಾನಗಳ ಮದ್ಯಭಾಗದಲ್ಲಿ ನೆಲೆಸಿರುವನೇ ಕುಂಟೋಜಿ ನಂದಿ ಬಸವಣ್ಣ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ದೇವಸ್ಥಾನಕ್ಕೆ ಕಲ್ಯಾಣ ಚಾಲುಕ್ಯ ಜಯಸಿಂಹ-2, ಸೋಮೇಶ್ವರ- ಮತ್ತು ಮಾದವಸಿಂಗನವರು ದಾನಧರ್ಮ ಮಾಡಿದ ಮಾಹಿತಿಯು “ಸೌತ್ ಇಂಡಿಯನ್ ಇನ್ಸಕ್ರೀಪ್ಸ್‌ಷನ್” ಬುಕ್ಕಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಇತಿಹಾಸ ತಜ್ಞರು ಹೇಳುತ್ತಾರೆ ಎಂದು ಜಾತ್ರಕಮಿಟಿಯ ಬಸವರಾಜ ಹುಲಗಣ್ಣಿ ಹೇಳಿದರು.

    ಪ್ರತಿ ವರ್ಷ ಶ್ರಾವನ ಮಾಸದ ಕೊನೆಯ ಸೋಮವಾರದಂದು ನಡೆಯುವ ಕುಂಟೋಜಿ ಗ್ರಾಮದ ನಂದಿ ಬಸವೇಶ್ವರ ದೇವಸ್ಥಾನದ ಜಾತ್ರೆ ದೊಡ್ಡ ಪ್ರಾಮಾಣದಲ್ಲಿ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಅದರಂತೆ ಎಲ್ಲಾ ಭಕ್ತರು ಬಂದು ಪಾಲ್ಗೊಂಡು ಬಸವಣ್ಣನ ಕೃಪೆಗೆ ಪಾತ್ರರಾಗಿ, ಜಾತ್ರೆ ನಡೆಯುವ ಐದು ದಿನವೂ ಉಪಹಾರ ವವ್ಯಸ್ಥೆ ಕಲ್ಪಿಸಲಾಗಿದೆ ಎಂದು ಜಾತ್ರಾ ಕಮಿಟಿ ಅಧ್ಯಕ್ಷ ತಿಳಿಸಿದರು.

    ಈ ಸಂದರ್ಭದಲ್ಲಿ ಜಾತ್ರಾ ಕಮಿಟಿ ಉಪಾಧ್ಯಕ್ಷ ಆನಂದ್ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೇಕಾರ, ಖಜಾಂಚಿ ಬಸನಗೌಡ ಬಿರಾದಾರ, ಸದಸ್ಯರಾದ ಸಂಗಯ್ಯ ಮಠ್, ನಾಗಳಿಂಗಯ್ಯ ಮಠ, ವೀರಭದ್ರ ಪತ್ತಾರ, ನಾಗೇಶ ಸಜ್ಜನ್, ಪ್ರಕಾಶ ಹೂಗಾರ್, ವೀರಬಸ್ಸು ಊರಾನ, ಬಸವರಾಜ ಮಡಿವಾಳರ, ಹುಚ್ಛೆಸಾಬ ನಾಲತವಾಡ, ಹಣಮಂತ ಕುಂಬಾರ, ಮುತ್ತು ಜಾವುರ, ಕುಮಾರ ಹಡಪದ, ಹಣಮಂತ ಭಜಂತ್ರಿ, ಹಣಮಂತ ನಾಯಕ, ಲಕ್ಷ್ಮಣ ಮುರಾಳ, ದುರ್ಗಪ್ಪ ಕವಡಿಮಟ್ಟಿ ಹಾಗೂ ಗುರುಪಾದಪ್ಪ ಹೆಬ್ಬಾಳ, ಸಿದ್ದಪ್ಪ ಹೂಗಾರ, ಮಾಜಿ ಸೈನಿಕ ಬಸಯ್ಯ್ ಮಠ, ಅಧ್ಯಕ್ಷರು ಡಿಜೆ ಮಲಿಕರು ಸಂಘ ಶಿವಪ್ಪ ಕೋಲಕರ, ಗಂಗಾಧರ್ ಹುಲಗಣ್ಣಿ, ಮಲ್ಲಿಕಾರ್ಜುನ ಹೆಬ್ಬಾಳ, ಸಂತೋಷ ಬಿರಾದಾರ್, ಬಸವರಾಜ ಹುಲಗಣ್ಣಿ ಇದ್ದರು.

  • ಹತ್ತಿಯಲ್ಲಿ ರಬ್ಬರ್ ಹುಳು ನಿಯಂತ್ರಿಸಲು ಕೀಟನಾಶಕ ಸಿಂಪಡಿಸಿ.

    ಹತ್ತಿಯಲ್ಲಿ ರಬ್ಬರ್ ಹುಳು ನಿಯಂತ್ರಿಸಲು ಕೀಟನಾಶಕ ಸಿಂಪಡಿಸಿ.

    ಸತ್ಯಕಾಮ‌ ವಾರ್ತೆ ವಡಗೇರಾ:
    ತಾಲೂಕಿನ ವಡಗೇರಾ ಹೋಬಳಿ ವ್ಯಾಪ್ತಿಯಲ್ಲಿ ಹತ್ತಿ ಬೆಳೆಯಲ್ಲಿ ಹತ್ತಿ ಕಾಯಿಕೊರಕ ರಬ್ಬರ ಹುಳುವಿನ ಹಾವಳಿ ಹೆಚ್ಚಾಗಿದ್ದು, ರೈತರು ಹುಳುಗಳನ್ನು ನಿಯಂತ್ರಿಸಲು ಕೀಟನಾಶಕ ಸಿಂಪರಣೆ ಮಾಡಿ ಎಂದು ವಡಗೇರಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಕ್ಲೋರಂಟ್ರಾನಿಲಿಪ್ರೋಲ್+ ಲ್ಯಾಂಬ್ಡಾ ಸೈಹಾಲೋಥ್ರೀನ್ ಕೀಟನಾಶಕ ಜೊತೆಗೆ ಬೇವಿನ ಎಣ್ಣೆಯನ್ನು ಸೇರಿಸಿ ಸಿಂಪರಣೆ ಮಾಡಬೇಕು. ಮತ್ತೆ ಹತ್ತು ದಿನಗಳ ನಂತರ, ಪ್ರೊಫೆನೊಪೊಸ್ +ಸೈಪರ್ಮೆಥ್ರಿನ್ ಜೊತೆಗೆ ಬೇವಿನ ಎಣ್ಣೆಯನ್ನು ಸೇರಿಸಿ ಸಿಂಪರಣೆ ಮಾಡಬೇಕು.ಅಸೆಟಾಮಿಪ್ರಿಡ್ + ಬೈಫೆಂತ್ರಿನ್ ಜೊತೆ ಬೇವಿನ ಎಣ್ಣೆಯನ್ನು ಸೇರಿಸಿ ಸಿಂಪರಣೆ ಮಾಡಬೇಕು ಮತ್ತೆ ಹತ್ತು ದಿನಗಳ ನಂತರ, ರೈತರು ಪ್ರತಿ ಎಕರೆಗೆ ಈ ಮೇಲ್ಕಂಡ ಕೀಟನಾಶಕವನ್ನು 200 ಮೀ.ಲೀ ಕಡ್ಡಾಯವಾಗಿ ಸಿಂಪರಣೆಯನ್ನು ಮಾಡಬೇಕು ಎಂದಿದ್ದಾರೆ, ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಿಳಿಸಿದ್ದಾರೆ.

  • “ಸ್ಫೂರ್ತಿ ಸಾಧನೆಯ ಮೊದಲ ಮೆಟ್ಟಿಲು”

    “ಸ್ಫೂರ್ತಿ ಸಾಧನೆಯ ಮೊದಲ ಮೆಟ್ಟಿಲು”

    ಸ್ಫೂರ್ತಿ ಎಂಬ ಎರಡಕ್ಷರದ ಅರ್ಥ ವಿಶಾಲವಾದದ್ದು. ಒಬ್ಬ ವ್ಯಕ್ತಿಯ ವ್ಯಕ್ತಿತ್ವ, ಬದ್ಧತೆ, ಪ್ರಾಮಾಣ ಕತೆ, ನಡತೆ, ಗುಣ, ಸಮಾಜಮುಖಿ ಚಿಂತನೆ, ಮಾನವೀಯತೆ, ವಿಶೇಷ ಸಾಧನೆಗಳ ಅನಾವರಣ ಅಥವಾ ದಿಕ್ಸೂಚಿಯೇ ಸ್ಫೂರ್ತಿ ಎಂಬ ಎರಕ್ಷರದಲ್ಲಿ ಅಡಗಿದೆ. ಸ್ಫೂರ್ತಿಯು ಆಂತರಿಕ ಸ್ಥಿತಿಯಾಗಿದ್ದು ಅದು ವ್ಯಕ್ತಿಗಳ ಗುರಿ ನಿರ್ದಿಷ್ಟ ನಡವಳಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತದೆ. ಇದು ಅನೇಕ ಕ್ಷೇತ್ರಗಳಿಗೆ ಸಂಬAಧಿಸಿದೆ. ಆ ಕ್ಷೇತ್ರಗಳಲ್ಲಿ ವಿವಿಧ ಗುರಿಯ ಸಾಧನೆಗಾಗಿ ಮನುಷ್ಯ ಮತ್ತೊಬ್ಬರಿಂದ ಪ್ರಭಾವಿತನಾಗಿ ಮೊಳಕೆ ಒಡೆದು ಹಾಗೂ ತನ್ನ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲದಿಂದ ಎಲ್ಲಾ ಕಷ್ಟ, ನೋವು, ನಲಿವು, ಸುಖ ಮತ್ತು ಅಡಚಣೆಗಳನ್ನು ದಾಟಿ ಮುನ್ನುಗ್ಗಿ ತನ್ನ ಗುರಿಯನ್ನು ಸಾಧಿಸುತ್ತಾನೆ. ಜೀವನದಲ್ಲಿ ನಡೆಯುವ ಕೆಲವು ಘಟನೆಗಳಿಂದ ಮಾನಸಿಕವಾಗಿ ಗಟ್ಟಿತನವನ್ನು ಅಳವಡಿಸಿಕೊಂಡು ಒಂದು ನಿರ್ದಿಷ್ಟ ನಿರ್ಧಾರಕ್ಕೆ ಬಂದು ಗುರಿ ಸಾಧನೆ ಮಾಡುವುದೂ ಕೂಡ ಒಂದು ರೀತಿಯ ಪ್ರೇರಕ ಶಕ್ತಿ ಎನ್ನಬಹುದು.
    ಸ್ಫೂರ್ತಿಯಿಂದ ತಾನು ವೈಯಕ್ತಿಕ ಅಭಿವೃದ್ಧಿಯನ್ನು ಹೊಂದಿ ಜೊತೆಗೆ ಇತರರ ಅಭಿವೃದ್ಧಿಗಾಗಿ ಅವರ ಸಂತೋಷಕ್ಕಾಗಿ ನಿಸ್ವಾರ್ಥ ಉದ್ದೇಶದಿಂದ ವಯಕ್ತಿಕ ಪ್ರತಿಫಲವನ್ನು ನಿರೀಕ್ಷಿಸದೆ ಸಹಾಯ ಮಾಡುವ ಬಯಕೆಯನ್ನು ಹೊಂದುವುದಾಗಿದೆ. ಒಬ್ಬ ವ್ಯಕ್ತಿ ಸಮಾಜಕ್ಕಾಗಿ ಮಾಡಿರುವ ತ್ಯಾಗ, ಇತರರ ಬದುಕಿಗೆ ಬೆಳಕಾಗಿ, ಮಾರ್ಗದರ್ಶಿಯಾಗಿ, ಸಮಾಜದ ಪರಿವರ್ತನೆಗೆ ತನ್ನ ಜೀವನವನ್ನೇ ಮೀಸಲಾಗಿಟ್ಟು, ಸಾಮಾಜಿಕ ಸಾಧನೆಯಲ್ಲಿ ಮೇರು ಶಿಖರವಾಗಿ ಬೆಳೆದು ತಾನು ಜನ್ಮ ತಾಳಿದ ದೇಶಕ್ಕೆ, ಅಷ್ಟೇ ಏಕೆ ಜಗತ್ತಿಗೆ ಮಾದರಿಯಾಗಿ ಜೀವನ ಸಾಗಿಸಿ ಇತರರಿಗೆ ಸ್ಫೂರ್ತಿದಾಯಕರಾಗಿರುವ ಮಹಾಪುರಷರ ಸಾಧನೆಗಳು ನಮ್ಮ ಮುಂದೆ ಜೀವಂತವಾಗಿರುವುದನ್ನು ನಾವು ಕಾಣುತ್ತೇವೆ. ಈ ವಿಶ್ವದಲ್ಲಿ ಅನೇಕ ಸಾಧಕರಿಂದ ಸ್ಫೂರ್ತಿ ಪಡೆಯುತ್ತೇವೆ. ಮಹಾಪುರುಷರು ಮಾಡಿರುವ ಸಾಧನೆಗಳನ್ನು ಓದುವುದರಿಂದ, ಗುರುಗಳ, ಮಾರ್ಗದರ್ಶಕರÀ, ಸಾಧಕರ ಜೀವನದಲ್ಲಿ ನಡೆದ ಕಹಿ ಘಟನೆಗಳಿಂದ, ಅವರು ಮೇಲೆದ್ದು ಛಲದಿಂದ ಸಾಧಕರ ಮೇಲ್ಪಂಕ್ತಿಯಲ್ಲಿರುವುದನ್ನು ತಿಳಿದು ನಮಗೆ ಸ್ಫೂರ್ತಿ ಎಂಬುದು ಒಡೆದು ಮೂಡುತ್ತದೆ. ಆ ಸ್ಫೂರ್ತಿಯೇ ನಮಗೆ ಗುರಿಯನ್ನು ಮುಟ್ಟುವ ಕಡೆಗೆ ಕರೆದೊಯ್ಯುತ್ತದೆ.
    ವಿಶ್ವದ ಸುಮಾರು ೮೦ ಭಾಗ ದೇಶಗಳು ಬುದ್ಧ ಧಮ್ಮವನ್ನು ಅಳವಡಿಸಿಕೊಂಡು ಅವರ ಮಧ್ಯಮ ಮಾರ್ಗದಲ್ಲಿ ಕರುಣೆ, ಪ್ರೀತಿ, ಶಾಂತಿ, ನೆಮ್ಮದಿ, ಮಾನವೀಯತೆಯನ್ನು ಬೆಳೆಸಿಕೊಂಡಿರುವುದು ನಮಗೆಲ್ಲಾ ತಿಳಿದಿದೆ. ಬುದ್ಧನ ನಂತರ ಬಸವ, ಬಾಬಾಸಾಹೇಬ್‌ಅಂಬೇಡ್ಕರ್, ಗಾಂಧಿಜೀ, ಸ್ವಾಮಿವಿವೇಕಾನಂದರು, ಸುಭಾಷ್‌ಚಂದ್ರಬೋಸ್, ನೆಲ್ಸನ್‌ಮಂಡೇಲಾ, ಮದರ್‌ತೆರೇಸಾ, ಅಬ್ದುಲ್‌ಕಲಾಂ, ಸಾವಿತ್ರಿಬಾಯಿಫುಲೆ, ನಾಲ್ವಡಿ ಕೃಷ್ಣರಾಜಒಡೆಯರ್ ರವರು ಇಡೀ ಜಗತ್ತಿಗೆ (ರೋಲ್‌ಮಾಡೆಲ್) ಸ್ಫೂರ್ತಿದಾಯಕರಾಗುತ್ತಾರೆ. ವಿಶ್ವದಲ್ಲಿ ಇನ್ನೂ ಅನೇಕ ಮಹಾಸಾಧಕರು ತಮ್ಮದೇ ಆದ ಸಾಧನೆಯನ್ನು ಮಾಡಿ ಇತರರಿಗೆ ಮಾದರಿಯಾಗಿರುವುದನ್ನು ನಾವು ಕಂಡಿದ್ದೇವೆ. ಹಾಗೆಯೇ ವಿಶ್ವದ ಮೊದಲಿನ ಸಾಲಿನಲ್ಲಿರುವ ಮಹಾಪುರುಷರ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಆದರೆ ಎರಡನೇ ಸಾಲಿನ ಸಾಧಕರ, ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂಬ ಭಾವನೆಯಿಂದ ಅವರ ಸಾಧನೆಗಳನ್ನು ಕುರಿತು ಈ ಅಂಕಣದಲ್ಲಿ  ಹೊರತರಲು ಬಯಸಿದ್ದೇನೆ.
    ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು ಎಂಬ ಛಲ, ಗುರಿಯನ್ನು ತಲುಪಬೇಕೆಂಬ ತವಕ, ಸಾಧಕರ ಸಾಲಿನಲ್ಲಿ ನಾನು ಒಬ್ಬನಾಗಬೇಕು ಎಂಬ ಕನಸು, ಜೀವನೋತ್ಸಾಹ, ಸಮಾಜದಲ್ಲಿ ಇತರರಿಗೆ, ಮಾದರಿಯಾಗಬೇಕು, ಸ್ಫೂರ್ತಿದಾಯಕರಾಗಬೇಕೆಂಬ ಬಯಕೆ, ತನ್ನನ್ನು ತಾನು ಜಯಿಸಬೇಕೆಂಬ ಅಚಲ ನಿರ್ಧಾರ ಎಂತಹ ಮನುಷ್ಯನನ್ನಾದರೂ ಸಾಧಕರ ಸಾಲಿನಲ್ಲಿ ನಿಲ್ಲಿಸುತ್ತದೆ. ಜೀವನದಲ್ಲಿ ಒಂದು ಸಣ್ಣ ಸಮಸ್ಯೆ ಎದುರಾದರು ಜೀವನವೇ ಬೇಡ ಎಂದು ತೀರ್ಮಾನಿಸುವ ಮನಸ್ಸಿನಂತಹವರ ಮಧ್ಯೆ, ಇಡೀ ವಿಶ್ವವೇ ತಿರುಗಿ ನೋಡುವಂತಹ ಸಾಧಕರ ಬಗ್ಗೆ ಮೆಲುಕನ್ನು ಹಾಕೋಣ.
    ಅಧ್ಯಕ್ಷರಾಗಿದ್ದ ಲಿಂಕನ್ ರವರು ತಮ್ಮ ಸೌಜನ್ಯ, ಸತ್ಕಾರ, ಮತ್ತು ಸಮಾನತೆಗೆ ಹೆಸರಾದವರು. ಅವರು ಎಂದೂ ಯಾರಿಗೂ ತಾರತಮ್ಯ ಮಾಡುತ್ತಿರಲಿಲ್ಲ. ಒಂದು ಬಾರಿ ಅವರ ಅಧಿಕಾರಿಯ ಜೊತೆ ಅಡ್ಡಾಡಲು ಹೊರಗೆ ಹೋದಾಗ ಒಬ್ಬ ನೀಗ್ರೋ ಭಿಕ್ಷÄಕ ಅಧ್ಯಕ್ಷರನ್ನು ನೋಡಿ ಸ್ವಾಗತಿಸಿದ. ಅಧ್ಯಕ್ಷರು ಪ್ರತಿಯಾಗಿ ತಮ್ಮ ಹ್ಯಾಟನ್ನು ತೆಗೆದು ಅವನಿಗೆ ನೀಡಿದರು. ಇದನ್ನು ನೋಡಿದ ಅಧಿಕಾರಿಯು ನಿಮ್ಮ ಹ್ಯಾಟನ್ನು ಕೊಳಕು ಬಟ್ಟೆಯ ಭಿಕ್ಷÄಕನಿಗೇಕೆ ನೀಡಿದಿರಿ? ಎಂದು ಕೇಳಿದರು. ಅದಕ್ಕೆ ಅವರು ನಗುತ್ತಾ ಹೇಳಿದರು ನನಗಿಂತ ಯಾರು ಹೆಚ್ಚು ಉದಾರಿಗಳಾಗಿರಬಾರದು ಎಂಬುದು ನನ್ನ ಅನಿಸಿಕೆ. ಏಕೆಂದರೆ ಉದಾರತೆಯು ಎಲ್ಲರ ಹೃದಯವನ್ನು ಗೆಲ್ಲುತ್ತದೆ. ಅದು ವಿನಮ್ರತೆಯು ಇದ್ದ ಕಡೆ ಅರಳುತ್ತದೆ. ವಿನಮ್ರತೆಯೇ ಮಹಾಪುರುಷರ ಹೆಗ್ಗುರುತು ಎಂದು ಹೇಳಿದರು. ಲಿಂಕನ್ ರವರ ಆದರ್ಶ ಇಂದಿನ ಸಮಾಜದಲ್ಲಿ ಎಲ್ಲರಲ್ಲೂ ಹಾಸು ಹೊಕ್ಕಾಗಲಿ ಎಂಬುದು ನಮ್ಮ ಆಶಯ. ಹೃದಯ ಮಿಡಿಯುವ ಮನಸ್ಸುಳ್ಳವರು ಸಮಾಜದಲ್ಲಿ ದೊಡ್ಡವರಾಗುತ್ತಾರೆ.
    ಮೂಲತಃ ತುಮಕೂರು ಜಿಲ್ಲೆ, ಕುಣ ಗಲ್ ತಾಲ್ಲೂಕು, ಚೌಡನಕುಪ್ಪೆ ಗ್ರಾಮದ ಹೊನ್ನಯ್ಯ ಮತ್ತು ಮುನಿಯಮ್ಮ ದಂಪತಿಗಳ ಮಗ ಕೆಂಪಹೊನ್ನಯ್ಯಾ ತಾನು ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಕಣ ್ಣನ ರೆಟಿನಾಪೊರೆ ಕಳಚಿ ಸಂಪೂರ್ಣ ದೃಷ್ಟಿ ಕಳೆದು ಕೊಂಡರು. ನಂತರ ಮೈಸೂರಿನ ಅಂಧ ಮಕ್ಕಳ ಪಾಠಶಾಲೆಯಲ್ಲಿ ತನ್ನ ವಿದ್ಯಾಭ್ಯಾಸವನ್ನು ಮುಂದುವರೆಸಿ ನಂತರ ಮಹಾರಾಜ ಕಾಲೇಜಿನಲ್ಲಿ ಪದವಿ ಗಳಿಸಿ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದು ಯು.ಪಿ.ಎಸ್.ಸಿ ಪಾಸಾಗಲು ಯಾವುದೇ ತರಬೇತಿ ಪಡೆಯದೇ ಸ್ವ-ಪ್ರಯತ್ನದಿಂದ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕರ್ನಾಟಕದಲ್ಲೇ ಅಂಧ ಅಭ್ಯರ್ಥಿ ಐ.ಎ.ಎಸ್ ಪಾಸುಮಾಡಿದವರು ಎಂಬ ಕೀರ್ತಿಗೆ ಕಾರಣರಾಗಿ ಇತಿಹಾಸ ನಿರ್ಮಿಸಿದ್ದಾರೆ. ಕೆಂಪಹೊನ್ನಯ್ಯಾರವರು ನನ್ನ ಹೆಂಡತಿಯೇ ನಿಜವಾದ ಐ.ಎ.ಎಸ್ ಆಫೀಸರ್ ಎಂದು ಹೇಳುತ್ತಾರೆ. ಏಕೆಂದರೆ ಇವರ ಸಾಧನೆಯ ಹಿಂದೆ ಆಕೆಯ ಪರಿಶ್ರಮವಿದೆ. ಆಕೆ ಅವರಿಗೆ ಓದಲು ಅನುಕೂಲವಾಗುವಂತೆ ಆಡಿಯೋ ಮತ್ತು ಟಿಪ್ಪಣ ಗಳನ್ನು ತಯಾರಿಸಿ ಕೊಡುತ್ತಿದ್ದರು. ಜೀವನದಲ್ಲಿ ಎಷ್ಟೇ ಅಡೆ ತಡೆ, ಕಷ್ಟ ನೋವು ಎದುರಾದರು ಅವುಗಳಿಗೆ ಎದೆಗುಂದದೆ ತಾಳ್ಮೆಯಿಂದ ಅವುಗಳನ್ನು ಮೆಟ್ಟಿನಿಂತು ಎದುರಿಸಿ ಮುನ್ನುಗಬೇಕು, ಆಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ. ಕಷ್ಟಗಳನ್ನು ಸವಾಲನ್ನಾಗಿ ಸ್ವೀಕರಿಸಿ ಆಗ ಯಶಸ್ಸು ತಾನಾಗಿಯೇ ನಿಮ್ಮನ್ನು ಅರಸಿಕೊಂಡು ಬರುತ್ತದೆ ಎಂದು ಇತರರಿಗೆ ಧೈರ್ಯ ತುಂಬುತ್ತಾರೆ. ಹಾಗಾಗಿ ಇಂತಹವರ ಸಾಧನೆ ನಮಗೆಲ್ಲಾ ಆದರ್ಶವಾಗಲಿ.
    ಸರ್ ಐಸಾಕ್ ನ್ಯೂಟನ್ ರವರು ಒಂದು ಡೈಮಂಡ್ ಎಂಬ ನಾಯಿಯನ್ನು ಸಾಕಿದ್ದರು. ಅದನ್ನು ತುಂಬಾ ಪ್ರೀತಿಸುತ್ತಿದ್ದರು. ಒಮ್ಮೆ ರಾತ್ರಿ ನ್ಯೂಟನ್ ರವರು ಮನೆಯಲ್ಲಿ ಇಲ್ಲದಿದ್ದಾಗ ಡೈಮಂಡ್ ಮೇಜಿನ ಮೇಲೆ ಉರಿಯುತ್ತಿದ್ದ ಮೇಣದ ಬತ್ತಿಯನ್ನು ಉರುಳಿಸಿದ ಪರಿಣಾಮ ಅವರ ಎಲ್ಲಾ ಪುಸ್ತಕಗಳು ಸುಟ್ಟು ಹೋದವು. ಅದು ಅವರ ಎಂಟು ವರ್ಷಗಳ ಪರಿಶ್ರಮದ ಫಲವಾಗಿತ್ತು. ನ್ಯೂಟನ್ ಮನೆಗೆ ವಾಪಸ್ಸಾದಾಗ ಆ ದುರಂತ ನೋಡಿ ಅವರು ಪ್ರತಿಕ್ರಿಯಿಸಿದರು. ಡೈಮಂಡನ್ನು ಹತ್ತಿರ ಕರೆದು ನೀನು ಮಾಲೀಕನಿಗೆ ಕೊಟ್ಟಿರುವ ತೊಂದರೆ, ಅದರ ಪರಿಶ್ರಮ ನಿನಗೆ ಸ್ವಲ್ಪವೂ ಗೊತ್ತಿಲ್ಲ ಎಂದು ಹೇಳಿದರು. ಅದನ್ನು ಅವರು ಮಹತ್ತರವಾದ ಕೆಲಸದ ನಷ್ಟ ಎಂದು ಭಾವಿಸಲಿಲ್ಲ ಮತ್ತೆ ಅದನ್ನು ಪ್ರಾರಂಭಿಸಿದರು. “ತಾಳ್ಮೆಯು ಯುಶಸ್ಸಿನ ಕೀಲಿ.” ಭಾವನಾತ್ಮಕವಾಗಿ ವ್ಯಕ್ತಿಗಳು ಸರಿಯಾದ ದೃಷ್ಟಿಯಲ್ಲಿ ವಿಷಯವನ್ನು ಅರಿಯಲು ವಿಫಲರಾಗುತ್ತಾರೆ. ಗಟ್ಟಿವ್ಯಕ್ತಿತ್ವದ ವ್ಯಕ್ತಿಯು ತನ್ನ ಭಾವನೆಯನ್ನು ನಿಯಂತ್ರಿಸಲು ಸಮರ್ಥನಾಗಿರುತ್ತಾನೆ. ಇಂತಹ ವ್ಯಕ್ತಿಗಳು ಸಂಕಷ್ಟದ ಸಮಯದಲ್ಲೂ ಶಾಂತರಾಗಿರುತ್ತಾರೆ. ಹೀಗಾಗಿ ವಾಸ್ತವದೊಂದಿಗೆ ತಮ್ಮ ಆದರ್ಶಗಳನ್ನು ಸೂಕ್ತವಾಗಿ ಹೊಂದಿಸಲು ಸಮರ್ಥರಾಗಿರುತ್ತಾರೆ. ಈ ರೀತಿಯಾದ ವ್ಯಕ್ತಿತ್ವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕೆಂಬುದೇ ನಮ್ಮ ಆಶಯವಾಗಿದೆ.
    ಥಾಮಸ್ ಎಡಿಸನ್ ರವರು ಬಲ್ಪ್ ಕಂಡುಹಿಡಿದು ಜಗತ್ತಿಗೆ ಬೆಳಕನ್ನು ನೀಡಿದ ವ್ಯಕ್ತಿ. ಇವರು ಒಂದು ಬಲ್ಟ್ ಕಂಡು ಹಿಡಿಯಲು ಸಾವಿರಕ್ಕೂ ಹೆಚ್ಚು ಬಾರಿ ವೈಫಲ್ಯವನ್ನು ಕಂಡರೂ, ಎದೆಗುಂದದೆ ಈ ಕಾರ್ಯದಲ್ಲಿ ಸೋತರೂ, ಹಿಂಜರಿಯದೆ ಸತತ ಪ್ರಯತ್ನದಿಂದ ಯಶಸ್ಸು ಪಡೆದು ಇಡೀ ಪ್ರಪಂಚಕ್ಕೆ ಬೆಳಕನ್ನು ಕೊಟ್ಟ ಮಹಾಸಾಧಕರಾಗಿ ಹಾಗೂ ಇತರರಿಗೆ ಸ್ಫೂರ್ತಿಯ ಚಿಲುಮೆಯಾಗಿ ಹೊರಹೊಮ್ಮಿದ್ದಾರೆ. “ಸೋಲು ಗೆಲುವಿನ ಮೆಟ್ಟಿಲು” ಎಂಬ ನುಡಿಯನ್ನು ನಾವು ಅರಿಯಬೇಕಾಗಿದೆ.
    ವಾಟ್ಸಪ್ ಬಳಸುವ ನಿಮಗೆಲ್ಲ ಜಾನ್‌ಕೋಮ್ ಗೊತ್ತಿರಬೇಕು. ಆತÀ ವಾಟ್ಸಪ್ ನ ಸಹಸಂಸ್ಥಾಪಕ. ಉಕ್ರೇನ್‌ನ ಸಣ್ಣ ಗ್ರಾಮದಲ್ಲಿ ಜನಿಸಿದ ಜಾನ್‌ಕೋಮ್ ಕಷ್ಟದಲ್ಲಿಯೇ ಜೀವನ ಅರಂಭಿಸಿದ. ಈತನಿಗೆ ಫೇಸ್ ಬುಕ್ ಕಂಪನಿಯು ಕೆಲಸ ನೀಡಲು ನಿರಾಕರಿಸಿತು. ಬಳಿಕ ಈತ ತನ್ನ ಸ್ನೇಹಿತ ಆಕ್ಟನ್ ಜೊತೆ ಸೇರಿಕೊಂಡು ವಾಟ್ಸಪ್ ಎಂಬ ಆಪ್ ಅನ್ನು ಅಭಿವೃದ್ಧಿಪಡಿಸಿದ. ಪ್ರತಿತಿಂಗಳು ವಾಟ್ಸಪ್ ಬಳಕೆದಾರರ ಸಂಖ್ಯೆ ೧.೨ ಶತಕೋಟೆ ಹೆಚ್ಚುತ್ತಾ ಹೋಯಿತು. ಈ ಆಪ್ ಅನ್ನು ಕೆಲವು ವರ್ಷಗಳ ಹಿಂದೆ ೧೯ ಶತಕೋಟಿ ಡಾಲರ್‌ಗೆ ಫೇಸ್ ಬುಕ್ ಕಂಪನಿಯು ಖರೀದಿಸಿತು. ಒಂದು ಸಮಯದಲ್ಲಿ ಉದ್ಯೋಗ ನೀಡಲು ನಿರಾಕರಿಸಿದ ಕಂಪನಿಯೇ ಈತ ಅಭಿವೃದ್ಧಿ ಪಡಿಸಿದ ಆಪ್ ಅನ್ನು ಖರೀದಿಸಿದರು, ಎಂತಹ ಸಾಧನೆ ನೋಡಿ. ಎಂತಹ ಅದ್ಭುತ ಚಾಲೆಂಜ್ ಎಂಬುದನ್ನು ನಾವು ಅರಿಯಬೇಕಾಗಿದೆ. ಇಂತಹ ಸಾಧನೆಗಳೆ ನಮಗೆ ಮಾದರಿಯಾಗಬೇಕು. ಇಂತಹ ನಿದರ್ಶನಗಳಿಂದ ನಾವೂ ಕೂಡ ಜೀವನದಲ್ಲಿ ಸಾಧಕರಾಗುವ ಕಡೆ ಮುನ್ನುಗ್ಗಬೇಕು.
    ಮನುಕುಲವನ್ನು ಪ್ರೀತಿಸಬೇಕು ಮತ್ತು ಸೇವೆ ಮಾಡಬೇಕು ಈ ರೀತಿಯ ಮನಸ್ಸುಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ. ಸಂಬAಧಗಳನ್ನು ಮಾಡುವುದು ದೊಡ್ಡದಲ್ಲ ಅದನ್ನು ಉಳಿಸಿಕೊಳ್ಳುವ ಜಾಣ್ಮೆಯು ನಮಗಿರಬೇಕು. ಸ್ವಾರ್ಥ ಬಿಟ್ಟು ಸಂತೋಷವನ್ನು ಕಾಣುವ ದಿಕ್ಕಿನಲ್ಲಿ ಸಾಗಬೇಕು. ಬೇರೆಯವರನ್ನು ನೂರಕ್ಕೆ ನೂರರಷ್ಟು ನಂಬಿದರೆ ಅವರು ಕೂಡ ಪ್ರಾಮಾಣ ಕರಾಗಿರುತ್ತಾರೆ. ಇಲ್ಲಿ ನಂಬಿಕೆ ಬಹಳ ಮುಖ್ಯ, ಅಪನಂಬಿಕೆ ಸಾವಿರ ಗೊಂದಲಗಳಿಗೆ ಕಾರಣವಾಗುತ್ತದೆ. ಸತÀತ ಪ್ರಯತ್ನ, ನಿರಂತರ ಶ್ರಮದಿಂದ ಮಹತ್ವವಾದುದನ್ನು ಸಾಧಿಸಬಹುದು. ನೀವು ಇತರರಿಗೆ ಸಹಾಯ ಮಾಡಿದರೆ ಪ್ರಕೃತಿ ನಿಮಗೆ ಬೇಕಾದಷ್ಟು ನೀಡುತ್ತದೆ. ನೀವು ಗಳಿಸುವುದಕ್ಕಿಂತ ಹೆಚ್ಚು ಸಹಾಯ ಮಾಡಿ ಅದಕ್ಕೆ ಹತ್ತರಷ್ಟು ನಿಮಗೆ ಲಭಿಸುತ್ತದೆ ಇದೇ ಪ್ರಕೃತಿಯ ನಿಯಮ! ಕ್ಷಮಾಗುಣ ನಮ್ಮನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುತ್ತದೆ. ಗೊಬ್ಬರ ಹಾಕಿದ ಹೊಲ ಊಟ ನೀಡಿದ ಮನೆ ಎಂದಿಗೂ ಕೆಡುವುದಿಲ್ಲ. ಕೊಡುವುದರಲ್ಲಿ ಇರುವ ಆನಂದ ಬೇರೆಲ್ಲೂ ಕಾಣಲು ಸಾಧ್ಯವಿಲ.್ಲ ನಿಮ್ಮ ಕಠಿಣ ಪರಿಶ್ರಮದಿಂದ ನೀವೇ ಇಂದು ಮತ್ತು ನಾಳೆಯಾಗಬೇಕು. ಏಕೆಂದರೆ ಅಭ್ಯಾಸವು ಪರಿಪೂರ್ಣತೆಯನ್ನು ನೀಡುತ್ತದೆ. ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ.
    ಬುದ್ಧನ ಮಧ್ಯಮ ಮಾರ್ಗವನ್ನು ಅನುಸರಿಸಿ ಜೀವನದಲ್ಲಿ ಯಾವಾಗಲೂ ನೆಮ್ಮದಿಯ ಜೀವನ ಸಾಗಿಸಬಹುದು. ನಿರಾಶಾವಾದಿಯಾಗಬೇಡಿ, ಆಶಾವಾದಿಯಾಗಿ ಬದುಕು ಸಾಗಿಸಬೇಕು. ಏಕೆಂದರೆ ನಿರಾಶಾವಾದ ನಿಮ್ಮನ್ನು ಏನನ್ನು ಸಾಧಿಸಲು ಬಿಡುವುದಿಲ್ಲ. ಇತರರನ್ನು ಪ್ರೀತಿಯಿಂದ ಮಾತನಾಡಿಸಿ ಒಂದು ದಯೆಯ ಮಾತು, ಪ್ರೀತಿಯ ಅಪ್ಪುಗೆ,  ನಿಷ್ಕಲ್ಮಶ ನಗುವು ಜೀವನವನ್ನು ಪೂರ್ಣವಾಗಿ ಬದುಕಿಸುವುದು ಮತ್ತು ಬಹಳ ಭಿನ್ನತೆಯನ್ನು ಉಂಟುಮಾಡುವುದು. ಬೇರೆಯವರ ಬದುಕಿನಲ್ಲಿ ಭಿನ್ನತೆಯನ್ನು ಉಂಟುಮಾಡುವ ಶಕ್ತಿ ನಮ್ಮಲ್ಲಿದೆ. ಅದನ್ನು ಸಾಧ್ಯವಾದಷ್ಟು ಬಾರಿ ಬಳಸಲು ನಾವು ಪಣತೊಡೋಣ. ಪ್ರೀತಿಯು ಎಲ್ಲಾ ಜಾತಿ, ದೇಶ ಜನಾಂಗ ಹಾಗೂ ಲಿಂಗವನ್ನು ಮೀರಿರುತ್ತದೆ. ಅದಕ್ಕೆ ದೇಶ, ಅಥವಾ ಜಾತಿ ಇಲ್ಲ ಅದು ಜನರನ್ನು ಅವರ ಸಾಮಾಜಿಕ ಅಂತಸ್ತಿನ ಪ್ರಕಾರ ಅಳೆಯುವುದಿಲ್ಲ. ಯಾವ ತಡೆಯಿಲ್ಲದೆ ನಾವು ಪ್ರೀತಿಯನ್ನು ಕಲಿಯಬಹುದು. ಈ ವಿಶ್ವದಲ್ಲಿ ಅವರ ಅಂತಸ್ತು, ದುಃಸ್ಥಿತಿ, ಬಡತನ, ರೋಗಿ, ಅನಾಥರೆಂದು ಕಡೆಗಣ ಸಬಾರದು. ಅಂತಹ ಜನರಿಗೆ ತುಂಬು ಹೃದಯದ ಪ್ರೀತಿ ಸುರಕ್ಷತೆಯ ಭಾವ ಹಾಗೂ ನೆರವು ನೀಡಿದರೆ ನಮಗೆ ಆನಂದ ಸಂತೃಷ್ತಿ ಹಗೂ ಸಂತೋಷ ದೊರಕುತ್ತದೆ. ಸಂತೋಷವೂ ಪ್ರೀತಿ ಹಾಗೂ ಸೇವೆಯ ನಿರ್ಣಾಯಕ ಪ್ರತಿಫಲ.
     ಹೀಗೆ ಮನುಷ್ಯರನ್ನು ಮನುಷ್ಯರನ್ನಾಗಿ ನೋಡುವ ಭಾವನೆ, ಮಾನವೀಯತೆಯ ಮೌಲ್ಯಗಳನ್ನು ತಮ್ಮದಾಗಿಸಿಕೊಳ್ಳಬೇಕು. ಕಠಿಣ ಪರಿಶ್ರಮ ನಿರಂತರವಾದ ಅಭ್ಯಾಸ ಸಾಮಾಜಿಕ ಬದ್ಧತೆ, ಸಾಧಿಸಬೇಕೆಂಬ ಛಲ, ಗುರಿಯ ಕಡೆ ಮುನ್ನುಗ್ಗುವ ದೂರ ದೃಷ್ಟಿ, ನಾನು ಸಾಧಿಸಿ ಸಮಾಜಕ್ಕಾಗಿ ಏನನ್ನಾದರೂ ನೀಡಬೇಕೆಂಬ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಈ ಜಗತ್ತಿನಲ್ಲಿ ಫಲಿತಾಂಶ ನೀಡುವವರ ಅನಿವಾರ್ಯತೆ ಇದೆ. ನಾವು ಫಲವನ್ನು ನೀಡಿದರೆ ನಮ್ಮ ಜಾತಿ, ಜನಾಂಗ, ಬಣ್ಣ ಮತ್ತು ವಿದ್ಯಾರ್ಹತೆ ಏನೇ ಇರಲಿ ಸಮಾಜದಲ್ಲಿ ಅಂಗೀಕರಿಸಲ್ಪಡುತ್ತದೆ. ಬದ್ಧತೆಯಿಂದ ಕೆಲಸ ಮಾಡುವವರಿಗಾಗಿ ಪ್ರಪಂಚ ಕಾಯುತ್ತಿದೆ. ಶ್ರಮ ಪಟ್ಟು ಹೆಚ್ಚು ಕೆಲಸ ಮಾಡಿದಷ್ಟು ಯಶಸ್ಸು ಕಟ್ಟಿಟ್ಟ ಬುತ್ತಿ. ನಿಜವಾದ ಸಮರ್ಪಣೆಯ ಭಾವ ಹಾಗೂ ಬದ್ಧತೆಗೆ ದೀರ್ಘಕಾಲದಲ್ಲಿ ಬೆಲೆದೊರಕುತ್ತದೆ. ಬದುಕಿನಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ದೃಢಪ್ರಯತ್ನವನ್ನು ನಿಮ್ಮ ಆಪ್ತ ಗೆಳೆಯನನ್ನಾಗಿ ಮಾಡಿಕೊಳ್ಳಿ.  ಅನುಭವವನ್ನು ನಿಮ್ಮ ಆಪ್ತ ಸಲಹೆಗಾರರನ್ನಾಗಿ, ಜಾಗರೂಕತೆಯನ್ನು ನಿಮ್ಮ ಹಿರಿಯಣ್ಣನಾಗಿ ಹಾಗೂ ಆಶಾಭಾವವನ್ನು ನಿಮ್ಮ ಸಂರಕ್ಷಕನಾಗಿ ಮಾಡಿಕೊಳ್ಳಿ. ದ್ವೇಷವು ನಮ್ಮನ್ನು ಬಂಧಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಉಂಟು ಮಾಡುತ್ತದೆ. ನಮ್ಮ ಸಾಮರ್ಥ್ಯವನ್ನು ಕುಗ್ಗಿಸುತ್ತದೆ ಹಾಗೂ ನಿನ್ನ ಅಧಃಪತನಕ್ಕೆ ಕಾರಣವಾಗುತ್ತದೆ. ಶತ್ರುಗಳನ್ನು ಕ್ಷಮಿಸಿದರೆ ನಮ್ಮಲ್ಲಿ ಶಾಂತಭಾವ ಉಂಟಾಗುತ್ತದೆ.
    ಮಸಾಣದಲ್ಲಿ ಸುಟ್ಟು ಬೂದಿಯಾಗುವ ಈ ಶರೀರಕ್ಕೆ ಏಕೆ ಬೇಕು ದ್ವೇಷ, ಅಸೂಯೆ ? ಕೆಡುಕನ್ನು ಉಂಟು ಮಾಡುವ ಸಣ್ಣತನವೇಕೆ? ಒಟ್ಟಾರೆ ಈ ಮಹಾಸಾಧಕರ ಮುಂದೆ ಕಿಂಚಿತ್ತಾದರೂ ನಾವು ಏನನ್ನಾದರೂ ಒಳ್ಳೆಯ ಕೆಲಸ ಮಾಡಬೇಕು, ಜನ್ಮ ನೀಡಿದ ಭಾರತಾಂಬೆಗೆ, ಹಾಗೂ ಭೂಮಿಗೆ ಏನನ್ನಾದರೂ ವಾಪಸ್ಸು ನೀಡಬೇಕು (ವಿ ಮಷ್ಟ್ ಪೇ ಬ್ಯಾಕ್ ಟು ದಿ ಸೊಸೈಟಿ) ಎಂಬ ತವಕ ಪ್ರತಿಯೊಬ್ಬರ ಹೃದಯದಲ್ಲಿ ಮನೆ ಮಾಡಬೇಕು. ಯಾವಾಗಲೂ ಸಾಧನೆ ಮಾತಾಡಬೇಕು, ಮಾತನಾಡುವುದೇ ಸಾಧನೆಯಾಗಬಾರದು. ಸ್ಫೂರ್ತಿಯಿಂದಲೇ ಸಾಧನೆ, ಸಾಧನೆಯೇ ಸ್ಫೂರ್ತಿ. ಜೀವನ ನಿಂತ ನೀರಾಗಬಾರದು, ಹರಿಯುವ ಮಹಾನದಿಯಾಗಬೇಕು. ಒಂದು ಕಹಿ ಘಟನೆಯಿಂದ ಛಲ ಹುಟ್ಟುತ್ತದೆ. ಈ ಛಲದಿಂದಲೇ ಏನನ್ನಾದರೂ ಸಾಧಿಸುವ ಮನಸ್ಸು ಮಾಡುವುದು ಹಾಗೂ ಸಾಧಿಸಿ ತೋರಿಸುವುದು. ದೊಡ್ಡ ಅನಾಹುತಗಳ ಪರಿಣಾಮವೇ ಮನುಷ್ಯ ಘಟ್ಟಿ ನಿರ್ಧಾರಮಾಡಿ ಸಾಧಕರಾಗಲು ಬಯಸುವುದು. ಒಂದು ಮುಕ್ತಾಯದಿಂದ ಹೊಸದೊಂದು ಹುಟ್ಟುವುದು, ಆ ಹುಟ್ಟಿನಿಂದಲೇ ಜೀವನ ಪರಿವರ್ತನೆ ಕಡೆಗೆ ಸಾಗುವುದು. ನೀನು ಜೀವಿಸು, ನನ್ನನ್ನು ಜೀವಿಸಲು ಬಿಡು ಎನ್ನುವ ಮನೋಭಾವನೆ, ಪರಿಶುದ್ಧ ಹೃದಯ ನಮ್ಮದಾಗಬೇಕು. “ತಾಳಿದವನು ಬಾಳಿಯಾನು” ಎಂಬ ನುಡಿಮುತ್ತಿನಂತೆ  ಸಾಧನೆಗಾಗಿ ಬದುಕಬೇಕು, ಬದುಕುವುದೇ ಸಾಧನೆಗಾಗಿ ಎಂಬ ಅಚಲ ನಿರ್ಧಾರವಿರಬೇಕು. ಇಂದಿನ ಯುವ ಸಮುದಾಯ, ಈ ದಿಕ್ಕಿನಲ್ಲಿ ಯೋಚಿಸಿ, ಪರಿವರ್ತನಗೆ ಒಳಗಾಗಬೇಕು. ಆಗ ಮಾತ್ರ ಸಮಾಜ ಪ್ರಗತಿಯನ್ನು ಕಾಣಲು ಸಾಧ್ಯವಾಗುತ್ತದೆ.
    -ಪ್ರೊ. ಸಿ. ಶಿವರಾಜು
    ಅಧ್ಯಕ್ಷರು, ಸಂಸ್ಕೃತ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು-೫೬.
  • ಸೆ.14 ರಂದು ರಾಷ್ಟೀಯ ಲೋಕ ಅದಾಲತ್

    ಸೆ.14 ರಂದು ರಾಷ್ಟೀಯ ಲೋಕ ಅದಾಲತ್

    ಸತ್ಯಕಾಮ ವಾರ್ತೆ ಯಾದಗಿರಿ:
    ಸೆ.14(SEP 14) ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್(LOK ADALAT) ನಡೆಯುತ್ತಿದ್ದು, ಬಾಕಿ ಇರುವ ವ್ಯಾಜ್ಯಗಳನ್ನು ಸಾರ್ವಜನಿಕರು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ  ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮರಿಯಪ್ಪ ಅವರು ಹೇಳಿದರು.
    ಶನಿವಾರ ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ನೆಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ಈ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾ‌ರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನ ಹೊರತು ಪಡಿಸಿ) ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
    ಇದುವರೆಗೆ ಜಿಲ್ಲೆಯ್ಯಾದಂತ ಒಟ್ಟು 4325 ಪ್ರಕರಣಗಳನ್ನು ಲೋಕ ಅದಾಲತನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಒಟ್ಟು 04 ಬೆಂಚ್‌ ಗಳನ್ನು, ಶಹಾಪೂರ 03 ಮತ್ತು ಸುರಪೂರದಲ್ಲಿ 03 ಬೆಂಚ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಬೆಂಚನಲ್ಲಿ ಒಬ್ಬರು ನ್ಯಾಯಾಧೀಶರು ಹಾಗೂ ಒಬ್ಬರು ವಕೀಲರು ಸಂಧಾನಕಾರರಾಗಿ ಭಾಗವಹಿಸುವರು, ಅವರ ಮುಖಾಂತರ ರಾಜೀ ಸಂಧಾನ ಮಾಡಿಸಲಾಗುವುದು ಎಂದು ಹೇಳಿದರು.
    ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ಸಾಕಷ್ಟು ಸಮಯ ಮತ್ತು ಹಣ ಉಳಿತಾಯ ಮಾಡಬಹುದಾಗಿದೆ. ಸಿವಿಲ್ ಪ್ರಕರಣಗಳಲ್ಲಿ ರಾಜೀ ಆದರೆ ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯ ಶುಲ್ಕ ಸಹ ವಾಪಸ್ಸಾಗುತ್ತದೆ. ಮತ್ತು ಇದರಿಂದ ಉಭಯ ಪಕ್ಷಗಾರರಲ್ಲಿ ದ್ವೇಷದ ಭಾವನೆ ಕಡಿಮೆಯಾಗಿ ಸಾಮರಸ್ಯ ಮೂಡುತ್ತದೆ. ಸಾರ್ವಹನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.