Author: Satyakam NewsDesk

  • ಕಲಿಕೆಯ ಜೊತೆಗೆ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ – ಸಿದ್ದಪ್ಪ ಹೊಟ್ಟಿ

    ಕಲಿಕೆಯ ಜೊತೆಗೆ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ – ಸಿದ್ದಪ್ಪ ಹೊಟ್ಟಿ

    ಸತ್ಯಕಾಮ ವಾರ್ತೆ ಶಹಾಪುರ: 
    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನ್ಯ ಭಾಷೆಗಳ ಕಲಿಕೆಯ ಜೊತೆಗೆ ನಮ್ಮ ಕನ್ನಡದ ಭಾಷಾಭಿಮಾನ ಬೆಳೆಸಿಕೊಳ್ಳುವುದು ಅತ್ಯಗತ್ಯವಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಹೊಟ್ಟಿ ಹೇಳಿದರು.

    ತಾಲೂಕಿನ ರಸ್ತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿರುವ “ಮಾತೃ ಭಾಷೆ ಮತ್ತು ಶಿಕ್ಷಣ” ಎಂಬ ವಿಚಾರ ಸಂಕಿರಣ ಹಾಗೂ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು,ನಮ್ಮ ಮಾತೃಭಾಷೆ ಕನ್ನಡವಾಗಿರುವುದರಿಂದ ಸ್ವಾಭಿಮಾನಕ್ಕಾಗಿ ಇಂದು ನಾವು ನೀವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ನುಡಿದರು.

    ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ಕಡಿಮೆ:ಗಂಗಾಧರ ಸ್ವಾಮೀಜಿ ಅಭಿಮತ

    ಮಾತೃಭಾಷೆ ಮತ್ತು ಶಿಕ್ಷಣ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ ಡಾ. ಸುಭಾಷ್ ಚಂದ್ರ ಕೌಲಗಿ ಮಾತನಾಡುತ್ತಾ,ಪ್ರಾಥಮಿಕ ಹಂತದಲ್ಲಿ ಮಗುವಿಗೆ ಮಾತೃಭಾಷೆ ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕು,ಜಾಗತೀಕರಣದ ಪ್ರಭಾವಕ್ಕೆ ಕನ್ನಡವು ಸೇರಿದಂತೆ ಹಲವು ಭಾಷೆಗಳು ಕಣ್ಮರೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು,ಮಾತೃಭಾಷೆಯಲ್ಲಿ ಮಗುವಿಗೆ ಶಿಕ್ಷಣವನ್ನು ನೀಡಿದಾಗ ಬಹುಬೇಗ ವಿಷಯವನ್ನು ಗ್ರಹಿಸುವುದಲ್ಲದೆ ಕಲಿಕೆಯಲ್ಲಿ ಮುಂದುವರೆಯುವುದಕ್ಕೆ ಸಹಾಯವಾಗುತ್ತದೆ ಎಂದರು.

    VIDEO:ಯಾದಗಿರಿ:ಭಾರತೀಯ ವೈದ್ಯಕೀಯ ಸಂಘದಿಂದ ಜುಲೈ ೦೧ ರಂದು ವೈದ್ಯರ ದಿನಾಚರಣೆ ಕಾರ್ಯಕ್ರಮ|| ಡಾ.ಭಗವಂತ ಅನ್ವಾರ್||SATYAKAM

    ಕನ್ನಡ ಕಲಿಕೆಯನ್ನು ಮೈಗೂಡಿಸಿಕೊಂಡಿದ್ದೆ ಆದರೆ ನಮ್ಮೊಳಗೆ ಅಂತರಂಗದ ಅರಿವು ಉತ್ತಮಗೊಳ್ಳುವುದಲ್ಲದೆ, ಭಾವನಾತ್ಮಕ ಸಂಬಂಧಗಳು ಬೆಸೆಯುವುದರ ಜೊತೆಗೆ ವ್ಯಕ್ತಿತ್ವದ ವಿಕಾಸನಕ್ಕೆ ಪೂರಕವಾಗುತ್ತದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ: ರವೀಂದ್ರನಾಥ್ ಹೊಸಮನಿ ಮಾತನಾಡಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಶಂಕರ್ ರೆಡ್ಡಿ,ಸುರೇಶಕುಮಾರ,ದೈಹಿಕ ಶಿಕ್ಷಕ ಚಂದ್ರಶೇಖರ್ ವೈದ್ಯ,ಸೇರಿದಂತೆ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸತ್ಕರಿಸಲಾಯಿತು,

    ಬಡಜನರ ಸಮಸ್ಯೆ ಅಂತಃಕರಣದಿಂದ ಪರಿಹರಿಸಿ: ಜಿಲ್ಲಾಡಳಿತಕ್ಕೆ ಒತ್ತಾಯಿಸಿದ ನಟ

    ಈ ಸಮಾರಂಭದ ವೇದಿಕೆಯ ಮೇಲೆ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹನುಮಂತರಾಯ ಸೋಂಪುರ, ಸಗರ ವಲಯ ಕಸಾಪ ಅಧ್ಯಕ್ಷ ಡಾ: ದೇವೇಂದ್ರಪ್ಪ ಹಡಪದ,ಗೌರವ ಕಾರ್ಯದರ್ಶಿ ಸುರೇಶಬಾಬು ಅರುಣಿ, ಶ್ರೀಕಾಂತ ಜುಗೇರಿ, ಅಯ್ಯಾಳಪ್ಪ,ಚಂದ್ರಶೇಖರ್ ಪತ್ತಾರ,ಮುಂತಾದವರು ಉಪಸ್ಥಿತರಿದ್ದರು,ಶಾಲೆಯ ಮುಖ್ಯ ಗುರುಗಳಾದ ವಾಣಿಶ್ರೀ ಅಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.ರವಿಕಾಂತ್ ಸ್ವಾಗತಿಸಿದರು ಮಾನಪ್ಪ ನಿರೂಪಿಸಿದರು ಶರಣಬಸಪ್ಪ ವಂದಿಸಿದರು,

  • ಅರಣ್ಯ ಸಚಿವರ ಪ್ರವಾಸ

    ಅರಣ್ಯ ಸಚಿವರ ಪ್ರವಾಸ

    ಕಲಬುರಗಿ: ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಜುಲೈ 1 ರಂದು ಬೀದರ ನಿಂದ ರಸ್ತೆ ಮಾರ್ಗವಾಗಿ ಕಲಬುರಗಿ ನಗರಕ್ಕೆ ಮಧ್ಯಾಹ್ನ 2 ಗಂಟೆಗೆ ಆಗಮಿಸುವರು.

    ಅಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯ ಕೆ.ಕೆ.ಆರ್.ಡಿ.ಬಿ ಕಚೇರಿ ಸಭಾಂಗಣದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಭಾಗವಹಿಸುವ ಸಚಿವರು, ಸಂಜೆ 7 ಗಂಟೆಗೆ ರಸ್ತೆ ಮೂಲಕ ಹೈದ್ರಾಬಾದ್ ಗೆ ಪ್ರಯಾಣಿಸುವರು.

  • ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ಕಡಿಮೆ:ಗಂಗಾಧರ ಸ್ವಾಮೀಜಿ ಅಭಿಮತ

    ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ಕಡಿಮೆ:ಗಂಗಾಧರ ಸ್ವಾಮೀಜಿ ಅಭಿಮತ

    ಸತ್ಯಕಾಮ ವಾರ್ತೆ ಯಾದಗಿರಿ:
    ಆಧುನಿಕ ಯುಗದಲ್ಲಿ ಸಾಮೂಹಿಕ ವಿವಾಹಗಳು ನಡೆಯುತ್ತಿರುವುದು ವಿಶೇಷವಾಗಿದೆ ಇಂತಹ ವಿವಾಹಗಳು ಹೆಚ್ಚಾಗಿ ನಡೆಯುವದರಿಂದ  ಬಡತನ ಕುಟುಂಬಗಳಿಗೆ ಹಣ ಉಳಿತಾಯವಾಗಿ  ಸಾಲದ ಹೊರೆ ತಪ್ಪುತ್ತದೆ ಎಂದು ಗಂಗಾಧರ ಮಹಾಸ್ವಾಮಿಗಳು ಸದ್ಗುರು ವಿಶ್ವಾರಾಧ್ಯ ಮಹಾ ಸಂಸ್ಥಾನ ಮಠ ಅಬ್ಬೆ ತುಮಕೂರು ಶ್ರೀಗಳು ನುಡಿದರು.
    ನಗರದ ಹೈದರಾಬಾದ್ ರಸ್ತೆ ಸಮೀಪದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸವ್ಯಸಾಚಿ ಡಾ.ಜಿ.ಪರಮೇಶ್ವರ್ ಯುವ ಬ್ರಿಗೇಡ್ ಹಾಗೂ ಹರ್ಷವರ್ಧನ್ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಅಣಬಿ, ಇವರ ಸಂಯುಕ್ತಾಶ್ರಯದಲ್ಲಿ ನಡೆದ 21 ಜೋಡಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು ಇತ್ತೀಚಿನ ದಿನಗಳಲ್ಲಿ ಪೋಷಕರು ನಿಶ್ಚಯಿಸಿದ ಮದುವೆಗಳೇ ನಡೆಯುವುದೇ ಕಡಿಮೆಯಾಗಿದೆ ಅಂತದರಲ್ಲಿ ಸಾಮೂಹಿಕ ವಿವಾಹಗಳನ್ನು ಅದು ಉಚಿತವಾಗಿ ಏರ್ಪಡಿಸುವುದು ತುಂಬಾ ಜವಾಬ್ದಾರಿ ಕಾರ್ಯ ಮಾಡುವ ಅತ್ಯಂತ ಪುಣ್ಯದ ಕೆಲಸವಾಗಿದೆ ಎಂದು ನುಡಿದರು.
    ವೇದಿಕೆಯ ಮೇಲೆ ದಿವ್ಯ ಸಾನಿಧ್ಯ ವಹಿಸಿದ್ದ ಪರಮ ಪೂಜ್ಯ ಶ್ರೀ  ಶಾಂತ ವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು  ಖಾಸ ಮಠ ಗುರುಮಠಕಲ್ ಸಾಮೂಹಿಕ ವಿವಾಹ ಎಂದರೆ ಅದು ಸಾಮರಸ್ಯ ಸಾರುವ ವಿವಾಹವಾಗಿವೆ, ಇಂತಹ ವಿವಾಹ ಏರ್ಪಾಟುಗಳು ವಿರಳಾತಿ ವಿರಳವಾಗಿವೆ ವಿವಾಹ ಏರ್ಪಾಟುಗಳು ಉಚಿತವಾಗಿ ಏರ್ಪಡಿಸುವುದು ತುಂಬಾ ಶ್ಲಾಘನೀಯ ಕಾರ್ಯ ಎಂದು ನುಡಿದರು.
    ಮತ್ತೊರ್ವ ಶ್ರೀಗಳಾದ  ಶ್ರೀ ಜ್ಞಾನ ಪ್ರಕಾಶ ಸ್ವಾಮಿ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಮಠ ಮೈಸೂರು ಶ್ರೀಗಳು ರಾಜ್ಯದಲ್ಲಿ ಹಿಂದುಳಿದ ಪ್ರದೇಶಗಳ ಪೈಕಿ ಯಾದಗಿರಿ ಜಿಲ್ಲೆಯೂ ಒಂದಾಗಿದ್ದು ಇಂತಹ ಜಿಲ್ಲೆಯಲ್ಲಿ ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ಸಮಾನತೆ ಸಂದೇಶ ಸಾರುವ ಜೋತೆ ಜೋತೆಗೆ ಬಡತನ ನಿರ್ಮೂಲನೆ ಮಾಡುವ ಜೋತೆ ಜೋತೆಗೆ ಬಡ ಕುಟುಂಬಗಳಿಗೆ ಹಣದ ಉಳಿತಾಯವಾಗಿ ತಂದೆ ತಾಯಿಯರಿಗೆ ಇರುವ ಭಾರವನ್ನು ಇಳಿಸುವ ಮಹಾ ಕಾರ್ಯ  ಇಲ್ಲಿ ಆಯೋಜಿಸಿರುವ ತಂಡಕ್ಕೆ ಸಲ್ಲುತ್ತದೆ ಎಂದರು.
    ಶ್ರೀ ಸಿದ್ದರಾಮ ಶಿವಯೋಗಿಗಳು ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಮಠ ಮುಡುಕುತೊರೆ ಶ್ರೀ ಗಳು ನವ ವಿವಾಹಿತ ವಧು ವರರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರತಿ ಜೋಡಿಗಳಿಗೆ ಶುಭ ಹಾರೈಸಿ ಆಶೀರ್ವಾದ ನೀಡಿದರು.
    ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ಚಲನಚಿತ್ರ ನಟ ಚೇತನ್ ಅಹಿಂಸಾ,ಡಿ ಎಸ್ ರಾಜಗೋಪಾಲ್, ರಾಜ್ಯಾಧ್ಯಕ್ಷ ಭೀಮ ಆರ್ಮಿ ಭಾರತ ಏಕ್ತಾ ಮಿಶನ್ ಬೆಂಗಳೂರು, ಜಿಲ್ಲಾ ಗೌರವ ಅಧ್ಯಕ್ಷ ಚಂದ್ರಕಾಂತ ಮಾಸ್ಟರ್,ಸವ್ಯಸಾಚಿ ಡಾ.ಜಿ, ಪರಮೇಶ್ವರ್ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಬಸ್ಸು ನಾಟೇಕರ್, ಭೀಮ ಆರ್ಮಿ ಜಿಲ್ಲಾಧ್ಯಕ್ಷ ಪ್ರಭು ಬುಕ್ಕಲ್ ರಾಜು ಅಣಬಿ, ಹರ್ಷವರ್ಧನ್ ಗ್ರಾ,ಸೇ,ಸ. ಯುವ ಮುಖಂಡ ಅನೀಲ್ ಕುಮಾರ್ ಹೆಡಿಗಿಮದ್ರಾ, ಸೈದಪ್ಪ ಕೂಲುರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

    • ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್‌ ಪ್ರತಿಭಟನೆ

     

    ಸತ್ಯಕಾಮ ವಾರ್ತೆ ಯಾದಗಿರಿ:-

    ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಮಾತನಾಡಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ನೈತಿಕ ಹೊಣೆ ಹೊತ್ತು, ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ಈ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ ಹಿನ್ನೆಲೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ನವರ ತಲೆದಂಡವಾದರೆ ಸಾಲದು, ಈ ಹಗರಣದ ಕಿಂಗ್ ಪಿನ್ ಯಾರು ಎಂಬುದು ಬಯಲಾಗಬೇಕು, ಆತ್ಮಹತ್ಯೆ ಮಾಡಿಕೊಂಡ ಕಚೇರಿ ಅಧೀಕ್ಷಕ ಚಂದ್ರಶೇಖರ ಕುಟುಂಬಕ್ಕೆ ನ್ಯಾಯ ಸಿಗಬೇಕು, ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅನುಮಾನವಿದೆ, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

    ಕೇವಲ ಭ್ರಷ್ಟಾಚಾರ ಅಲ್ಲ ಇದು, ಬುಡಕಟ್ಟು ಸಮುದಾಯಗಳ ಹಣವನ್ನು ಕಳ್ಳತನ ಮಾಡಿದ ಸರ್ಕಾರವಿದು, ಇದರ ಕಿಂಗ್ ಪಿನ್ ಯಾರು ಎಂಬುದು ತನಿಖೆಯಾಗಬೇಕು ಎಂದಿದ್ದಾರೆ.

    ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಘವೇಂದ್ರ ಯಂಕ್ಷಿಂತಿ ಮಾತನಾಡಿದ ಅವರು ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಹೈದರಾಬಾದ್ ಮೂಲದ ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಲೋಕಸಭೆ ಚುನಾವಣೆಗೆ ಬಳಸಿದ್ದು ಹಣ ದುರುಪಯೋಗ ಆಗಿದೆ ಹಾಗೂ ಬಾರ್‌ನಲ್ಲಿ ಕುಳಿತು ಕುಡಿದ ಬಿಲ್ ನಿಗಮದ ಹಣ ನೀಡಿ ದುರುಪಯೋಗ ಮಾಡಿದ್ದಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕು.ಲಲಿತಾ ಅನಪುರ, ನಾಗರತ್ನ ಕುಪ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ,ಪರುಶುರಾಮ ಕುರಕುಂದಿ,ಮೆಲಪ್ಪ ಗುಳಗಿ,ದೆವಿಂದ್ರನಾಥ ನಾದ,ವೆಂಕಟರಡ್ಡಿ ಅಬ್ಬೆತುಮಕೂರು,ಬಸವರಾಜ ವಿಭೂತಿಹಳ್ಳಿ,ದೇವರಾಜ ನಾಯಕ, ನಗರಸಭೆ ಸದಸ್ಯ ವಿಲಾಸ ಪಾಟೀಲ್ ಮತ್ತು ಸ್ವಾಮಿದೇವ ದಾಸನಕೇರಿ, ಶ್ರೀದೇವಿ ಶೆಟ್ಟಿಹಳ್ಳಿ,ಮಂಜುನಾಥ ಜಡಿ, ವೀಣಾ ಮೋದಿ, ಶಂಕರ್ ಕರಣಗಿ,

    ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಶಹಾಪುರ ಮಂಡಲ ಅಧ್ಯಕ್ಷ ಚಂದ್ರಶೇಖರ ಕಂಬಾರ, ಮಲ್ಲಿಕಾರ್ಜುನ ಕಟ್ಟಿಮನಿ,ಕರಬಸಪ್ಪ ಬಿಳಾರ, ಗೋವಿಂದಪ್ಪ ಖಾನಾಪುರ, ಶಿವು ಕೊಂಕಲ,ರಾಜು ಸ್ವಾಮಿ ಅಲಂಪಲ್ಲಿ, ಪ್ರಭಾವತಿ ಕಲಾಲ,ಭೀಮಬಾಯಿ ಶೆಂಡಿಗಿ, ಮಲ್ಲು ಕೋಲಿವಾಡ,ಸಾಬು ಚಂಡ್ರಕಿ ಸೇರಿದಂತೆ ಅನೇಕರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

  • ಸೇಡಂ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಚಿವ ಡಾ.ಶರಣಪ್ರಕಾಶ ದಿಢೀರ್ ಭೇಟಿ

    ಸೇಡಂ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಚಿವ ಡಾ.ಶರಣಪ್ರಕಾಶ ದಿಢೀರ್ ಭೇಟಿ

    ಮನಸ್ಸಿಗೆ ಬಂದ ರೀತಿ ಆಡಬೇಡಿ : ಸಚಿವ ಪಾಟೀಲ್ ಗರಂ

    ಸತ್ಯಕಾಮ ವಾರ್ತೆ ಸೇಡಂ:

    ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಬುಧವಾರ ದಿಢೀರನೆ ಭೇಟಿ ನೀಡಿದರು.

    ಕಾಲೇಜಿನ ಅಧ್ಯಾಪಕರ ಹಾಜರಾತಿ ಪುಸ್ತಕ ಪರಿಶೀಲನೆ ನಡೆಸಿದ ಸಚಿವರು ಕಾಲೇಜಿಗೆ‌ ಮೋಜು, ಮಸ್ತಿ ಮಾಡಲು ಬರುತ್ತೀರಾ ಅಥವಾ ಮಕ್ಕಳಿಗೆ ಪಾಠ ಮಾಡಲು ಬರುವಿರಾ ಎಂದು ಕೋಪಗೊಂಡರು

    ಕಳೆದ ಮೂರು ದಿನಗಳಿಂದ ಹಾಜರಾತಿ ಪುಸ್ತಕದಲ್ಲಿ ಅಧ್ಯಾಪಕರ ಸಹಿ ಹಾಕದಿರುವುದನ್ನು ಗಮನಿಸಿದ ಸಚಿವರು ಪ್ರಾಂಶುಪಾಲರ ವಿರುದ್ಧ ಹರಿಹಾಯ್ದರು.

    ಪ್ರತಿ ದಿನವೂ ಹಾಜರಾತಿ ಪುಸ್ತಕ ಖಾಲಿ ಇದ್ದರೆ ದಾಖಲೆಗಳನ್ನು ಹೇಗೆ ನಿಭಾಯಿಸುವಿರಿ, ಪದೆ ಪದೆ ಈ ತರ ಅಪಸ್ವರ ಕೇಳಿ ಬರುತ್ತಿದೆ, ಹೀಗೆ ಮುಂದುವರೆದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪ್ರಾಂಶುಪಾಲರಾದ ಬಸವರಾಜ ಕೊನೇರಿ ಅವರಿಗೆ ಎಚ್ಚರಿಕೆ ನೀಡಿದರು.

    ಯಾವ ಕಾರಣಕ್ಕೆ ರಜೆ ಮೇಲೆ ತೆರಳಿದ್ದೀರಾ ಎನ್ನುವುದನ್ನು ಸಹ ಹಾಜರಾತಿ ಪುಸ್ತಕದಲ್ಲಿ ನಮೂದಿಸಿಲ್ಲ, ಈ ತರ ವ್ಯವಸ್ಥೆ ಮುಂದುವರೆದರೆ ನಿಜಕ್ಕೂ ನಾನಂತು‌ ಸುಮ್ಮನೆ ಕೂರುವುದಿಲ್ಲ, ಪ್ರಾಂಶುಪಾಲರೇ ಇದಕ್ಕೆ ನೇರ ಹೊಣೆ ಎಂದು ಹೇಳಿದರು.

    ಕಳೆದ ಒಂದು ವಾರದಿಂದ ಕಾಲೇಜಿನ ಬಗ್ಗೆ ದೂರುಗಳು ಬಂದಿವೆ, ಸರಿಪಡಿಸಿಕೊಳ್ಳಲು ಅವಕಾಶ ನೀಡಿದರೂ ಸಹ‌ ಆಡಳಿತದಲ್ಲಿ ಬದಲಾವಣೆ ಬರದೇ ಇರುವುದು ಸಚಿವರ ಕೆಂಗಣ್ಣಿಗೆ ಗುರಿಯಾದರು.

    ಮನಸ್ಸಿಗೆ ಬಂದಂತೆ ಬರಲು ಹೋಗಲು ಇದು ಮಾರುಕಟ್ಟೆ ಅಲ್ಲ, ಸರಕಾರಿ ಕಾಲೇಜಿದೆ, ಸಹಿ ಹಾಕದೇ ಕಾಲೇಜಿಗೆ ಬರುವುದು ಮನಸ್ಸಿಗೆ ಬಂದಂತೆ ಹೋಗುವುದು ಯಾರ ಜಹಾಗೀರು ಇಲ್ಲ ಎಂದು ಕೋಪಗೊಂಡರು.

    ಅನೇಕ‌ ವಿದ್ಯಾರ್ಥಿಗಳ ಕಂಪ್ಲೇಟ್ ಇದೆ, ಸರಿಯಾದ ಬೋಧನೆ ಮಢುವುದಿಲ್ಲ, ಒಂದು ಗಂಟೆಯಲ್ಲಿ ಕಾಲೇಜಿಗೆ ಇರಬೇಕು, ಪ್ರಾಂಶುಪಾಲರ ಸಮೇತ ಸಂಜೆ ಐದು ಗಂಟೆಯವರೆಗೂ ಕಾಲೇಜಿನಲ್ಲಿ ಇರಬೇಕು ಎಂದರು.

  • ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

    ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

    ಸತ್ಯಕಾಮ ವಾರ್ತೆ ಶಹಾಪುರ:
    ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕಲೆಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಅವುಗಳನ್ನು ಮುನ್ನೆಲೆಗೆ ತರಲು ಸಂಘ ಸಂಸ್ಥೆಗಳು ಸಾಕಷ್ಟು ಶ್ರಮಿಸುತ್ತಿವೆ ಎಂದು ಗುಂಬಳಾಪುರ ಮಠದ ಯೋಗಿರತ್ನ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.

    ನಗರದ ಗುಂಬಳಾಪುರ ಮಠದ ಕಲ್ಯಾಣ ಮಂಟಪದಲ್ಲಿ ಪೂಜ್ಯ ಶ್ರೀ ಚನ್ನಬಸವ ಸಂಗೀತ ಮತ್ತು ಸಾಂಸ್ಕೃತಿಕ,ಸಾಹಿತ್ಯ,ಜನಪದ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಾದಗಿರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸಂಗೀತ ಮತ್ತು ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿಗೆ ಜಾಗೃತಿ ಮೂಡಿಸುವ ಬೀದಿ ನಾಟಕಕಲಾವಿದರು, ಹಾಗೂ ಟಿವಿ,ಧಾರವಾಹಿಗಳಿಂದ ಕಲೆ ಮತ್ತು ಕಲಾವಿದರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು,ಇಂಥಹ ಸಂದರ್ಭದಲ್ಲಿ ಹಲವಾರು ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸಿ ಕೊಡುವುದರ ಜೊತೆಗೆ ಕಲೆಯನ್ನು ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಈ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದರು.

    ವೀಡಿಯೊ: ಲಂಚ ಪಡೆಯುವ ಪಿಡಿಓಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್| Satyakam News

    ಈ ಸಮಾರಂಭದ ವೇದಿಕೆ ಮೇಲೆ ಇನ್ನೋರ್ವ ಅತಿಥಿಗಳು ಹಾಗು ಸಾಹಿತಿ,ಸಂಘಟಕ,ಪತ್ರಕರ್ತ, ಬಸವರಾಜ ಶಿಣ್ಣೂರ ಮಾತನಾಡಿ, ಸಂಗೀತಕ್ಕೆ ಅಘಾತವಾದ ಶಕ್ತಿ ಇದೆ, ಸಂಗೀತಕ್ಕೆ ಈ ಪ್ರಪಂಚದಲ್ಲಿ ತಲೆ ತೂಗದವರೇ ಇಲ್ಲ,ಸಂಗೀತ ಆಲಿಸುವುದರಿಂದ, ಮನಸ್ಸಿಗೆ ಮುದ ನೀಡುವುದರ ಜೊತೆಗೆ, ಪಾರ್ಶುವಾಯು ನಂತಹ ಮಹಾ ರೋಗಗಳು ವಾಸಿ ಆಗುತ್ತದೆ ಎಂಬುದನ್ನು ವಿಜ್ಞಾನಿಗಳೆ ಸ್ಪಷ್ಟಪಡಿಸಿದ್ದಾರೆ,ಎಂದು ಹೇಳಿದರು. ಆದ್ದರಿಂದ ಕಲೆಯನ್ನು ಪ್ರೋತ್ಸಾಹಿಸುವ ಕೆಲಸ ನಾವು ನೀವೆಲ್ಲರೂ ಮಾಡಬೇಕಾಗಿದೆ ಎಂದರು.

    ಈ ಸಮಾರಂಭದ ವೇದಿಕೆಯ ಮೇಲೆ.ಸುರಪುರ ಪತ್ರಿಮಠದ ಶಿವಕುಮಾರ, ಮೆಹಬೂಬ್ ಸಾಬ್ ತಡಬಿಡಿ, ರಂಗಭೂಮಿ ಕಲಾವಿದ ಶ್ರೀನಿವಾಸ್ ದೋರನಹಳ್ಳಿ, ಸಂಗೀತ ಕಲಾವಿದ ಗುರುಪಾದ ಹುಣಸಿಗಿಡ, ಡಿ ಜೂನ್ ನೃತ್ಯ ಅಕಾಡೆಮಿ ಅಧ್ಯಕ್ಷರ ಲಕ್ಷ್ಮಿ ಕುಂಬಾರ,ಚಿದಾನAದಯ್ಯ ಚಿಕ್ಕಮಠ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು, ಈ ಸಂಸ್ಥೆಯ ಅಧ್ಯಕ್ಷರಾದ ಬೂದಯ್ಯ ಸ್ವಾಮಿ ಹಿರೇಮಠ, ಇನ್ನಿತರರು ಹಾಜರಿದ್ದರು. ನಂತರ ನೀನಾಸಮ್ ತರಬೇತಿ ಪಡೆದು ವಿದ್ಯಾರ್ಥಿಗಳಿಂದ ಟ್ಯಾಬ್ಲೆಟ್ ಎಂಬ ಸುಂದರ ಸಾಮಾಜಿಕ ಹಾಗೂ ಜಾಗೃತಿ ಕಿರು ನಾಟಕ ಜರುಗಿತು, ನಂತರದಲ್ಲಿ ಹಲವಾರು ಸಂಗೀತ, ನೃತ್ಯ,ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

  • ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

    ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

    ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಬಂದರೆ ಮಾತ್ರ ಪರೀಕ್ಷೆ ಕೇಂದ್ರದೊಳಗೆ ಅವಕಾಶ : ಜಿಲ್ಲಾಧಿಕಾರಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಜೂನ್ 30 ರಂದು 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ನಿಯೋಜಿತ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಈ ಪರೀಕ್ಷೆಯ ಮೊದಲ ಪತ್ರಿಕೆಗೆ 4002 ಹಾಗೂ ಮಧ್ಯಾಹ್ನ ಪತ್ರಿಕೆಗೆ 6026 ಸೇರಿ ಒಟ್ಟು 10,028 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.

    ಪರೀಕ್ಷಾ ಕೇಂದ್ರಗಳಲ್ಲಿ ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್-1 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಪೇಪರ್-2 ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರದ ಆವರಣದೊಳಗೆ ಅಭ್ಯರ್ಥಿಗಳ ಪ್ರವೇಶ, ಬೆಲ್ ಆಗುವ ಸಮಯ, ನಿಗದಿತ ವೇಳಾಪಟ್ಟಿಯಂತೆ ಮತ್ತು ಮಾರ್ಗಸೂಚಿ ಅನ್ವಯ ಪರೀಕ್ಷೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಬಂದರೆ ಮಾತ್ರ ಪರೀಕ್ಷೆ ಕೇಂದ್ರದೊಳಗೆ ಅವಕಾಶ ಕಲ್ಪಿಸಲಾಗುತ್ತದೆ. ಸಮಯ ಮೀರಿ ಬಂದರೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ಸೂಚಿಸಿದರು.

    ಯಾವುದೇ ರೀತಿಯ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ವಾಚ್‍ಗಳನ್ನು ಪ್ರವೇಶ ಕೇಂದ್ರಗಳೊಳಗೆ ನಿರ್ಬಂಧಿಸಬೇಕು. ಸೂಕ್ತವಾದ ಆಸನ ವ್ಯವಸ್ಥೆ, ಅಂಗವಿಕಲರಿಗೆ ಅನುಕೂಲಕರ ವ್ಯವಸ್ಥೆ ಮಾಡಬೇಕು. ಪರೀಕ್ಷೆಗೆ ಪೂರ್ವಭಾವಿಯಾಗಿ ಕೇಂದ್ರಗಳಿಗೆ ಸಂಬಂಧಿಸಿದ ಅಧಿಕಾರಿ ಗಳು ತೆರಳಿ, ಆಸನ ವ್ಯವಸ್ಥೆ, ಸಿಸಿ ಟಿವಿ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.

    ಪರೀಕ್ಷೆ ಶಾಂತಿಯುತವಾಗಿ ನಡೆಸಲು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳು ಪಡೆದು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ಸರಬರಾಜು ಮಾಡಲು ಪ್ರತಿ ಮಾರ್ಗಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕೆಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

    ಅಂದು ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳಿಗೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಸೆಕ್ಷನ್ 144 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವರೆಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಪರೀಕ್ಷಾ ಕೇಂದ್ರಗಳು

    ನಗರದ ಸಭಾ ಪಿಯು ಕಾಲೇಜು, ನ್ಯೂ ಕನ್ನಡ ಪ್ರೌಢಶಾಲೆ, ದೋಖಾ ಜೈನ್ ಸ್ಕೂಲ್, ಆರ್ ವಿ ಹೈಸ್ಕೂಲ್ ಹಾಗೂ ಪಿಯು ಕಾಲೇಜು, ಜವಾಹರ್ ಪ್ರೌಢಶಾಲೆ ಮತ್ತು ಪಿಯು ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಮತ್ತು ಮಹಿಳಾ ಪಿಯು ಹಾಗೂ ಹುಡುಗಿಯರ ಪ್ರೌಢಶಾಲೆ, ಡಾನ್ ಬಾಸ್ಕೋ ಪ್ರೌಢಶಾಲೆ ಹಾಗೂ ಪಿಯು ಕಾಲೇಜು, ಡಿಡಿಯು ಇಂಟರ್ ನ್ಯಾಷನಲ್ ಹೆಚ್ ಎಸ್, ನಿವೇದಿತಾ ಪಾಲಿಟೆಕ್ನಿಕ್ ಕಾಲೇಜು, ಆದರ್ಶ ವಿದ್ಯಾಲಯ, ಮಹತ್ಮಾ ಗಾಂಧಿ ಪ್ರೌಢಶಾಲೆ, ಚಿರಂಜೀವಿ ಪ್ರೌಢಶಾಲೆ, ಎಲ್.ಕೆ.ಇ.ಟಿ ಮಹಿಳಾ ಪಿಯು ಕಾಲೇಜು, ನವನಂದಿ ಹೈಸ್ಕೂಲ್, ಸ್ವಾಮಿ ವಿದ್ಯಾರಣ್ಯ ಹೆಚ್.ಪಿ.ಎಸ್ ಶಾಲೆ, ದಿವಂಗತ ತಿಮ್ಮಣ್ಣ ಹೆಡಗಿಮದ್ರಾ ಆಂಗ್ಲ ಮಾಧ್ಯಮ ಶಾಲೆ, ಸಪ್ತಗಿರಿ ಆಂಗ್ಲ ಮಾಧ್ಯಮ ಶಾಲೆ, ಸರಕಾರಿ ಮಹಿಳಾ ಪದವಿ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಡಿಡಿಪಿಐ ಮಂಜುನಾಥ, ಜಿಲ್ಲಾ ನೋಡಲ್ ಅಧಿಕಾರಿ ಬಸನಗೌಡ ಆಲ್ದಾಳ ಸೇರಿದಂತೆ ಪರೀಕ್ಷೆಗೆ ಜವಾಬ್ದಾರಿ ವಹಿಸಿದ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಸೋಮವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದಕ್ಕೂ ಮೊದಲು ಕಾರ್ಯಕ್ರಮದ ಉದ್ದೇಶ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಕ್ರಿಯೆ ಕುರಿತು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಎಂಎಲ್ಸಿ ರವಿ, ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಸಿಇಓ ದಿಗ್ವಿಜಯ್ ಸಿಂಗ್ ಬೋಡಕೆ, ಎಸ್ಪಿ ಕಾರ್ತಿಕ್ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

     

    ಭೂಮಿ, ಮನೆ, ನಿವೇಶನ ರಹಿತರು, ರೈತರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ; ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    ಚನ್ನಪಟ್ಟಣ, ಜೂನ್ 24: 

    “ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ” – ಇದು ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಒಟ್ಟು ಚಿತ್ರಣ.

    ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ವ್ಯಕ್ತವಾದ ಪ್ರಮುಖ ಸಮಸ್ಯೆಗಳಿಗೆ ಶಿವಕುಮಾರ್ ಅವರು ಸ್ಪಂದಿಸಿದ ರೀತಿ ಹೀಗಿತ್ತು:

    ಜೆ. ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ ಅವರು ದೂರು ನೀಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು “ಲಂಚ ಪಡೆಯುವ ಪಿಡಿಓ, ಗ್ರಾಮ ಲೆಕ್ಕಿಗರು ಬೇರೆ ಜಾಗ ಹುಡುಕಿಕೊಳ್ಳಿ. ನನ್ನ ಕ್ಷೇತ್ರದ ಜನರಿಗೆ ತೊಂದರೆ ಆಗಬಾರದು” ಎಂದರು.

    ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    “ಮುಂದಿನ 15 ದಿನಗಳಲ್ಲಿ ಲಂಚ ಪಡೆಯುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಈ ಬಗ್ಗೆ ದೂರುಗಳು ಬರಬಾರದು” ಎಂದು ಜಿಲ್ಲಾ ಪಂಚಾಯತಿ ಸಿಇಓ ದಿಗ್ವಿಜಯ ಬೋಡಕೆ ಅವರಿಗೆ ಖಡಕ್ ಸೂಚನೆ ನೀಡಿದರು.

    ಶ್ರವಣಯ್ಯನ ತೋಪಿನ ಸುಶೀಲ, ರತ್ನಮ್ಮ, ರಾಜಮ್ಮ, ಚಿಕ್ಕತಾಯಮ್ಮ ಸೇರಿದಂತೆ 21 ಕ್ಕೂ ಹೆಚ್ಚು ಜನ ಕಳೆದ 10 ವರ್ಷಗಳಿಂದ ಮನೆಗಳಿಗೆ ಹಕ್ಕುಪತ್ರ ನೀಡುತ್ತಿಲ್ಲ ಎಂದು ದೂರಿದಾಗ, “ಮುಂದಿನವಾರದೊಳಗೆ ಇವರಿಗೆ ಹಕ್ಕುಪತ್ರಗಳನ್ನು ನೀಡಬೇಕು” ಎಂದು ಹೇಳಿದರು. ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಮುಂದಿನವಾರ ಖುದ್ದಾಗಿ ನಾನೇ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದರು.

    ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ

    “ಅರ್ಜಿ ಎಲ್ಲಿ, ಏನು ಸಮಸ್ಯೆ” ಎಂದು ಡಿಸಿಎಂ ಅವರ ಪ್ರಶ್ನೆಗೆ ಉತ್ತರಿಸಿದ ಚನ್ನಪಟ್ಟಣದ ನಿವಾಸಿ ಶಿವಗಂಗಮ್ಮ, “ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಯಿಂದ ನನಗೆ ತುಂಬಾ ಒಳ್ಳೆಯದಾಗಿದೆ, ನನ್ನದು ಏನೂ ಸಮಸ್ಯೆ ಇಲ್ಲ. ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ” ಎಂದಾಗ ಡಿಸಿಎಂ ನಕ್ಕು ಹಿರಿಯ ಜೀವದ ಆಶೀರ್ವಾದ ಪಡೆದು “ನಿನ್ನಂತೆ ಎಲ್ಲರ ಸಮಸ್ಯೆಯು ಇಲ್ಲದಂತೆ ಆಗಲಿ ಕಣವ್ವ” ಎಂದರು.

    ಹುಣಸನಹಳ್ಳಿಯ ಬಿಸಿಲಮ್ಮ ದೇವಿ ದೇವಸ್ಥಾನದ ಮಾಳಿಗೆ ಸೋರುತ್ತಿದೆ, ಸೇವಾ ಸಮಿತಿಯನ್ನು ಅಭಿವೃದ್ಧಿ ಸಮಿತಿಯನ್ನಾಗಿ ಪರಿವರ್ತಿಸಲು ಅನುವು ಮಾಡಿಕೊಡಬೇಕು ಎನ್ನುವ ಮನವಿಗೆ, ” ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನಿನಲ್ಲಿ ಕಟ್ಟಿರುವ ತೆಂಗಿನ ನಾರಿನ ಕಾರ್ಖಾನೆಗೆ ಪರ್ಯಾಯ ಜಾಗ ಕಲ್ಪಿಸಿ ಅಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಹಾಗೂ ನಿಮ್ಮ ಎಲ್ಲಾ ಮನವಿಗಳಿಗೆ ಪರಿಹಾರ ನೀಡಲಾಗುವುದು” ಎಂದು ಭರವಸೆ ನೀಡಿದರು.

    ಕಾಲಿನ ಸ್ವಾಧೀನ ಕಳೆದುಕೊಂಡಿರುವ ಕರಲಹಳ್ಳಿಯ ವಿಕಲಚೇತನ ಪುಟ್ಟರಾಜು ಅವರಿಗೆ “ಸ್ವಂತ ಉದ್ಯೋಗ ಮಾಡಲು 1 ಲಕ್ಷ ಹಣ ಬರುವಂತೆ ಮಾಡುತ್ತೇನೆ. ಜಿಲ್ಲಾ ಕಾಂಗ್ರೆಸ್ ಪಕ್ಷದ ನಾಯಕರನ್ನು ಭೇಟಿಯಾಗು, ಅವರು ನನ್ನ ಪರವಾಗಿ ನಿನಗೆ ಸಹಾಯ ಮಾಡುತ್ತಾರೆ” ಎಂದರು. ಪುಟ್ಟರಾಜುವಿಗೆ ಸಹಾಯ ಮಾಡಬೇಕು ಎಂದು ಜಿಲ್ಲಾ ನಾಯಕರಿಗೆ ಸೂಚನೆ ನೀಡಿದರು.

    ಸರ್ಕಾರಿ ಕೆಲಸ ಕೊಡಿಸಲು ಆಗುವುದಿಲ್ಲ

    ಸರ್ಕಾರಿ ಕೆಲಸ ಕೊಡಿಸಿ ಎಂಬ ವೈ.ಟಿ. ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜು ಮನವಿಗೆ, “ಸರ್ಕಾರಿ ಕೆಲಸ ಕೊಡಿಸಲು ಆಗುವುದಿಲ್ಲ. ಏನಾದರೂ ಸ್ವಯಂ ಉದ್ಯೋಗ ಮಾಡು” ಎಂದು ಹೇಳಿದರು.

    ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಕರೆ ಮಾಡಿ ಪರಿಹಾರ ಸೂಚನೆ

    ಕೊಂಡಾಪುರ ಕೃಷ್ಣ, ಜಮೀನು ನನ್ನ ಹೆಸರಿಗೆ ಆಗಿ 5 ವರ್ಷಗಳು ಕಳೆದರೂ ಖಾತೆ ನೀಡುತ್ತಿಲ್ಲ ಎಂದು ಹೇಳಿದಾಗ, ಪಕ್ಕದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಡಿಸಿಎಂ ಸೂಚನೆ ಮೇರೆಗೆ ತಕ್ಷಣ ಕಂದಾಯ ಅಧಿಕಾರಿಗೆ ಕರೆ ಮಾಡಿ ಕೂಡಲೇ ದಾಖಲೆ ನೀಡುವಂತೆ ತಿಳಿಸಿದರು.

    ಚನ್ನಪಟ್ಟಣ ತಾಲ್ಲೂಕಿನ ಅಂಗನವಾಡಿ ಕಾರ್ಯಕಾರ್ಯಕರ್ತೆಯರು ಎಲ್ ಕೆಜಿ, ಯುಕೆಜಿ ಶಿಕ್ಷಕರಾಗಿ ನಮ್ಮನ್ನೇ ಮುಂದುವರೆಸಿ ಎಂದು ಮನವಿ ಮಾಡಿದಾಗ, “ಇದು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು” ಎಂದರು.

    ಅಂಬಾಡಳ್ಳಿಯ ರೇಣುಕಮ್ಮ, ಮಾದಾಪುರ ಗ್ರಾಮದ ಚಿಕ್ಕಮ್ಮ ಒಂದು ವರ್ಷ ಕಳೆದರೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಾಗ “ಮುಂದಿನ ತಿಂಗಳು ಬರುವಂತೆ ಮಾಡುತ್ತೇನೆ” ಎಂದು ಭರವಸೆ ನೀಡಿದರು.

    ಪೋಡಿ, ಪಹಣಿ, ಬಗರ್ ಹುಕುಂ, ವಸತಿ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮನವಿಗಳು ಸಲ್ಲಿಕೆಯಾದವು.

  • ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನ

    ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನ

    ಸತ್ಯಕಾಮ ವಾರ್ತೆ ಯಾದಗಿರಿ:

    ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ರಾಜು ಬಾವಿಹಳ್ಳಿ ಅವರು ತಿಳಿಸಿದ್ದಾರೆ.

    ಯುವಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಸಣ್ಣ ತರಬೇತಿ ಕೇಂದ್ರವನ್ನು ಆರಂಭಕ್ಕೆ ತರಬೇತಿ ಕೇಂದ್ರ ಖೇಲೋ ಇಂಡಿಯಾ ನಿಯಮಾನುಸಾರ ಈಜು ತರಬೇತುದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ರಾಷ್ಟç, ರಾಜ್ಯಮಟ್ಟದ ಈಜು ಕ್ರೀಡೆಯಲ್ಲಿ ಪದಕ ಪಡೆದ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯಿAದ ಈಜು ತರಬೇತಿ ಪ್ರಮಾಣ ಪತ್ರ ಹೊಂದಿರುವ ಆಸಕ್ತ ಈಜು ತರಬೇತುದಾರರು ತಮ್ಮ ದಾಖಲಾತಿಗಳನ್ನು ಸಿ.ವಿ (RESUME) ಯೊಂದಿಗೆ ಸಹಾಯಕ ನಿರ್ದೇಶಕರ, ಕಾರ್ಯಾಲಯ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಚಿತ್ತಾಪೂರ ರಸ್ತೆ, ಯಾದಗಿರಿ 2024ರ ಜುಲೈ 5ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

     

  • ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ

    ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ

    ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಶ್ಲಾಘನೀಯ ನಗರಸಭೆ ಸದಸ್ಯ ಎಂ.ಡಿ ಮಹೆಬೂಬ ಅಲಿ

     

     

    ಸತ್ಯಕಾಮ ವಾರ್ತೆ ಯಾದಗಿರಿ:

    ವಸತಿ ರಹಿತರಿಗೆ ಇರುವ ಉಚಿತ ಆಶ್ರಯ ಕೇಂದ್ರದಲ್ಲಿ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಶ್ಲಾಘನೀಯವಾಗಿದ್ದು ಈ ಕೇಂದ್ರಕ್ಕೆ ಮೂಲಸೌಕರ್ಯ ಒದಗಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ನಗರಸಭೆ ಸದಸ್ಯ ಎಂ.ಡಿ ಮಹೆಬೂಬ ಅಲಿ ಅವರು ಅಭಿಪ್ರಾಯಪಟ್ಟರು.

    ನಗರಸಭೆ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ( ಡೇ- ನಲ್ಮಾ) ಅಭಿಯಾನದಡಿಯಲ್ಲಿ ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ವಸತಿರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಸಸಿಗಳನ್ನು ನೆಟ್ಟು ಹಾಗೂ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಆರೋಗ್ಯವೇ ಭಾಗ್ಯ, ಆರೋಗ್ಯ ವಾಗಿದ್ದರೆ ಸುಖವಾಗಿ ಬಾಳಬಹುದ ಎಂದರು. ಎಲ್ಲರೂ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದರು.

    ಕೌಶಲ್ಯಾಭಿವೃದ್ದಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಮಾತನಾಡಿ, ನಗರದಲ್ಲಿ ಕಾರ್ಮಿಕರಾಗಿದ್ದು, ವಸತಿ ಇಲ್ಲದವರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವ ಉದ್ದೇಶದಿಂದ ಈ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ವಾಸ್ತವ್ಯ ಇರುವವರಿಗೆ ಊಟ, ತಿಂಡಿಯ ಅಗತ್ಯವಿದ್ದರೆ ಅದನ್ನು ಕೂಡ ಒದಗಿಸಿಕೊಡಲಾಗುತ್ತದೆ ಎಂದರು. ಆಶ್ರಯದಲ್ಲಿ ಇರುವವರು ಸ್ವಯಂ ಉದ್ಯೋಗಿಗಳಾಗಲು ಸರ್ಕಾರದ ಹಲವು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆಯಲು ಅಗತ್ಯ ಸಹಕಾರವನ್ನು ಇಲಾಖೆಯಿಂದ ನೀಡುತ್ತೇವೆ ಎಂದರು.

    ನಗರಸಭೆಯ ಮ್ಯಾನೇಜರ್ ಅಶ್ವಿನಿ ಅವರು ಮಾತನಾಡಿ, ವಸತಿರಹಿತ ನಿರಾಶ್ರಿತರಿಗೆ ಆಶ್ರಯ ನೀಡೋ ನಿಟ್ಟಿನಲ್ಲಿ ಸರ್ಕಾರಗಳು ಅನೇಕ ಯೋಜನೆಗಳನ್ನ ಜಾರಿಗೆ ತಂದಿವೆ. ಇಂತಹ ನಿರಾಶ್ರಿತರ ರಕ್ಷಣೆ ನಮ್ಮ ಕರ್ತವ್ಯ ಆಗಿದೆ ಎಂದರು.

    ಡಾ.ಮಹೇಶ ಅವರು ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು

    ಈ ಸಂದರ್ಭದಲ್ಲಿ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ವೈದ್ಯ, ನಗರಠಾಣೆಯ ಎಎಸ್ಐ ಹಸನ್ ಪಟೇಲ್, ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ದೊಡ್ಡಮನಿ, ನಗರಸಭೆಯ ಸಿಬ್ಬಂದಿಗಳಾದ ಪದ್ಮಾ, ಮಂಜುನಾಥ, ಶಿವಪುತ್ರ, ಸಿಆರ್ಪಿ ಗಳಾದ ಅವ್ವಮ್ಮ, ಪ್ರೇಮಾ ಸಂಸ್ಥೆಯ ವ್ಯವಸ್ಥಾಪಕರಾದ ಮೌನೇಶ ಇಟಗಿ, ಭೀಮಾಶಂಕರ ಕಟ್ಟಿಮನಿ, ಸೇವಕರಾದ ಬೀರಲಿಂಗಪ್ಪ ಕಿಲ್ಲನಕೇರಾ, ಕೇರಟೇಕರಗಳಾದ ಮಲ್ಲು ನಾಟೇಕಾರ, ದೇವಮ್ಮ, ಕೃಷ್ಣ ಸೇರಿದಂತೆ ನಿರಾಶ್ರಿತರು ಉಪಸ್ಥಿತರಿದ್ದರು.