ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ
Latest NewsNational

ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ

Satyakam NewsDesk
Last updated: 2025/10/28 at 6:27 AM
By Satyakam NewsDesk
Share
2 Min Read
SHARE

ಶತಮಾನಗಳಿಂದ ಕೋಟ್ಯಂತರ ಭಕ್ತರ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ಮಂದಿರ ಇದೀಗ ಸಂಪೂರ್ಣ ರೂಪ ಪಡೆದುಕೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಟಿಸಿದ ಅಧಿಕೃತ ಮಾಹಿತಿಯ ಪ್ರಕಾರ, ಮುಖ್ಯ ಮಂದಿರ ಸೇರಿದಂತೆ ಆರು ಉಪಮಂದಿರಗಳ ನಿರ್ಮಾಣ ಕಾರ್ಯವೂ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ತಿಳಿಸಿದೆ.

ಟ್ರಸ್ಟ್ ತನ್ನ ಎಕ್ಸ್ ಖಾತೆಯ ಮೂಲಕ ಪ್ರಕಟಣೆ ನೀಡಿದ್ದು, “ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಪೂರ್ಣಗೊಂಡಿದೆ ಎಂದು ಪ್ರಭು ಶ್ರೀರಾಮನ ಭಕ್ತರಿಗೆ ತಿಳಿಸಲು ನಮಗೆ ಅಪಾರ ಸಂತೋಷವಾಗುತ್ತಿದೆ” ಎಂದು ಹೇಳಿದೆ. ಭಗವಾನ್ ಶ್ರೀರಾಮನ ಮುಖ್ಯ ಮಂದಿರದ ಜೊತೆಗೆ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಮಾ ಭಗವತಿ, ಮಾ ಅನ್ನಪೂರ್ಣ ಮತ್ತು ಶೇಷಾವತಾರ ಮಂದಿರಗಳಿಗೂ ಕಲಶ ಹಾಗೂ ಧ್ವಜಾರೋಹಣ ಕಾರ್ಯಗಳು ಯಶಸ್ವಿಯಾಗಿ ಮುಗಿದಿವೆ.

 

ಇದಷ್ಟೇ ಅಲ್ಲದೆ, ಋಷಿ ವಾಲ್ಮೀಕಿ, ಋಷಿ ವಶಿಷ್ಠ, ಋಷಿ ವಿಶ್ವಾಮಿತ್ರ, ಋಷಿ ಅಗಸ್ತ್ಯ, ನಿಷಾದರಾಜ, ಶಬರಿ ಮತ್ತು ದೇವಿ ಅಹಲ್ಯಾ ಅವರಿಗೆ ಸಮರ್ಪಿತವಾದ ಏಳು ಮಂಟಪಗಳೂ ಕೂಡ ನಿರ್ಮಾಣಗೊಂಡಿವೆ. ಭಕ್ತಕವಿ ತುಳಸಿದಾಸರ ಸ್ಮರಣಾರ್ಥ ನಿರ್ಮಿಸಲಾದ ಸಂತ ತುಳಸಿದಾಸ ಮಂದಿರವೂ ಅದ್ಧೂರಿಯಾಗಿ ಸಿದ್ಧವಾಗಿದೆ. ಅಲ್ಲದೆ ರಾಮಾಯಣದ ಅಮರ ಪಾತ್ರಗಳಾದ ಜಟಾಯು ಮತ್ತು ಅಳಿಲಿನ ಪ್ರತಿಮೆಗಳನ್ನು ಅಲಂಕರಿಸಲಾಗಿದ್ದು, ಸ್ಥಳದ ಆಧ್ಯಾತ್ಮಿಕ ಭಾವನೆಗೆ ಮತ್ತಷ್ಟು ತೇಜಸ್ಸು ನೀಡಿದೆ.

ಭಕ್ತರ ಸೌಲಭ್ಯಕ್ಕಾಗಿ ಟ್ರಸ್ಟ್ ಅನೇಕ ವ್ಯವಸ್ಥೆಗಳನ್ನು ಪೂರ್ಣಗೊಳಿಸಿದೆ. ರಸ್ತೆ ನಿರ್ಮಾಣ, ಕಲ್ಲಿನ ನೆಲಹಾಸು ಹಾಗೂ ಸುಸಜ್ಜಿತ ಸೌಕರ್ಯಗಳನ್ನು ಎಲ್ & ಟಿ ಕಂಪನಿ ನಿರ್ವಹಿಸುತ್ತಿದೆ. ಮಂದಿರದ ಸುತ್ತಮುತ್ತ ಹಸಿರುಮಯ ವಾತಾವರಣ ನಿರ್ಮಿಸಲು 10 ಎಕರೆ ವಿಸ್ತೀರ್ಣದ “ಪಂಚವಟಿ”ಯ ಅಭಿವೃದ್ಧಿ ಕಾರ್ಯವೂ ವೇಗವಾಗಿ ಸಾಗುತ್ತಿದೆ. ಶ್ರೀರಾಮ, ಸೀತೆ ಹಾಗೂ ಲಕ್ಷ್ಮಣರು ವನವಾಸದ ಸಮಯದಲ್ಲಿ ನೆಲೆಸಿದ್ದ ಪವಿತ್ರ ಸ್ಥಳದ ಸ್ಮರಣಾರ್ಥ ಈ ಪಂಚವಟಿ ಅಭಿವೃದ್ಧಿಗೊಳಿಸಲಾಗಿದೆ.

ಇನ್ನು 3.5 ಕಿಲೋಮೀಟರ್ ಉದ್ದದ ತಡೆಗೋಡೆ, ಟ್ರಸ್ಟ್ ಕಚೇರಿ, ಅತಿಥಿಗೃಹ ಮತ್ತು ಸಭಾಂಗಣಗಳ ನಿರ್ಮಾಣ ಕಾರ್ಯ ಮಾತ್ರ ಇನ್ನೂ ಮುಂದುವರಿದಿದೆ.

ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಆಗಮಿಸಿ, ಶ್ರೀರಾಮ ಮಂದಿರದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗಗಳಿಂದ ಸುಮಾರು 6,000 ರಿಂದ 8,000 ಮಂದಿ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಪ್ರಧಾನಿಯವರು ಮಂದಿರದ ಮೊದಲ ಮಹಡಿಯಲ್ಲಿ ನಿರ್ಮಿಸಲಾದ ರಾಮ ಪರಿವಾರದಲ್ಲಿ ಆರತಿ ನೆರವೇರಿಸಿ ದೇವಾಲಯದ ಧ್ವಜಾರೋಹಣ ಮಾಡುವರು ಎಂದು ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

apvc-iconTotal Visits: 44
apvc-iconAll time total visits: 33.4k

You Might Also Like

₹11,718 ಕೋಟಿ ಬಜೆಟ್ — 2027ರಲ್ಲಿ ಭಾರತದ ಮೊದಲ ಸಂಪೂರ್ಣ ಡಿಜಿಟಲ್ ಜನಗಣತಿ

ಹಾಸ್ಟೆಲ್ ಊಟ ಸೇವಿಸಿ 28ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮೆಟ್ರೋಕ್ಕೆ 96 ಹೊಸ ರೈಲು: 3 ನಿಮಿಷಕ್ಕೊಂದು ಮೆಟ್ರೋ

ತಿರುಪತಿ–ಶಿರಡಿ ನೇರ ರೈಲು ಸೇವೆಗೆ ಸೋಮಣ್ಣ ಹಸಿರು ನಿಶಾನೆ

‘ಶಕ್ತಿ’ ಯೋಜನೆ:NWKRTCಗೆ  ಹೊರಲಾರದ ಭಾರ!

TAGGED: Ayodhya, Ayodhya Sri Ram Mandir, construction, Narendra Modi
Satyakam NewsDesk October 28, 2025 October 28, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ
Next Article ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ

Stay Connected

Facebook Like
Twitter Follow
Instagram Follow
Youtube Subscribe

Latest News

ಸದನದಲ್ಲೇ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ!
State December 14, 2025
ಹೊಸ ಆರು ತಾಲೂಕುಗಳು ಸೇರ್ಪಡೆ ; ರೂಪುಗೊಳ್ಳಲಿದೆ ‘ಹೊಸ ಬೆಂಗಳೂರು’
State December 14, 2025
ಬೆಂಗಳೂರು ಮೆಟ್ರೋಗೆ ದೇಶದ ಮೊದಲ ‘ಮೇಡ್‌ಇನ್‌ಇಂಡಿಯಾ’ ಚಾಲಕರಹಿತ ರೈಲು
State Technology December 12, 2025
₹11,718 ಕೋಟಿ ಬಜೆಟ್ — 2027ರಲ್ಲಿ ಭಾರತದ ಮೊದಲ ಸಂಪೂರ್ಣ ಡಿಜಿಟಲ್ ಜನಗಣತಿ
National December 12, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube