ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ಜುಲೈ 30 ರಂದು ಕುಂಟೋಜಿಗೆ ಬಸವಣ್ಣ ಹಾಗೂ ಸಂಗಮೇಶ್ವರನ ತೇರು ಆಗಮನ 
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ಜುಲೈ 30 ರಂದು ಕುಂಟೋಜಿಗೆ ಬಸವಣ್ಣ ಹಾಗೂ ಸಂಗಮೇಶ್ವರನ ತೇರು ಆಗಮನ 
ಸಾಂಸ್ಕೃತಿಕ

ಜುಲೈ 30 ರಂದು ಕುಂಟೋಜಿಗೆ ಬಸವಣ್ಣ ಹಾಗೂ ಸಂಗಮೇಶ್ವರನ ತೇರು ಆಗಮನ 

Satyakam NewsDesk
Last updated: 2025/07/20 at 4:41 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಮುದ್ದೇಬಿಹಾಳ: 

ಅಮರ ಶಿಲ್ಪಿ ಜಕಣಾಚಾರಿಯವರಿಂದ ನಿರ್ಮಿಸಲಾಗಿದೆ ಎಂದು ಪ್ರತೀತಿ ಹೊಂದಿರುವ ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಸಂಗಮೇಶ್ವರ ದೇವಸ್ಥಾನದ ಜಾತೆಯು ಪ್ರತಿ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ 5 ದಿನಗಳವರೆಗೆ ನಡೆಯುತ್ತಾ ಬಂದಿದೆ.

ಈ ವರ್ಷ ಇಲ್ಲಿನ ಜಾತ್ರೆಯು ಬಹಳ ವಿಶೇಷವಾಗಿ ನಡೆಯಲಿದೆ. ಈ ದೇವಸ್ಥಾನಕ್ಕೆ ಈ ವರ್ಷದಿಂದ ಅಂದರೆ ಮೊಟ್ಟ ಮೊದಲಬಾರಿಗೆ ಕುಂಟೋಜಿ ಬಸವೇಶ್ವರ (ನಂದಿ) ಹಾಗೂ ಸಂಗಮೇಶ್ವರ ರಥೋತ್ಸವ ಜರುಗಲಿದೆ. ಕುಂಟೋಜಿ ಗ್ರಾಮದ ಮತ್ತು ಸುತ್ತಮುತ್ತಲಿನ ಊರುಗಳು, ನಗರ ಮತ್ತು ಬೇರೆ ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬಸವಣ್ಣನ ಭಕ್ತರು ಬಹಳ ಭಕ್ತಿಪೂರ್ವಕವಾಗಿ ದೇಣಿಗೆ ನೀಡಿ, ಕೊಪ್ಪಳದ ಜಕಣಾಚರ‍್ಯ ಮತ್ತು ಅಮೋಘವರ್ಷ ನೃಪತುಂಗ ಪ್ರಶಸ್ತಿ ವಿಜೇತರಾದ ರಥಶಿಲ್ಪಿ ಮಲ್ಲಪ್ಪ ಬಡಿಗೇರ ಇವರು ತಮ್ಮ ಎಂ.ಜಿ.ರಥಶಿಲ್ಪಿ ಕಲಾ ಕೇಂದ್ರದಲ್ಲಿ ಸಂಪೂರ್ಣ ಉಚಿತವಾಗಿ ನಿರ್ಮಿಸಿರುವ, ಸಾಗುವಾಣಿ ಮರದ ರಥವನ್ನು ಇದೇ ಜುಲೈ 30 ರಂದು ತಾಲೂಕಾ ಕೇಂದ್ರವಾದ ಮುದ್ದೇಬಿಹಾಳ ನಗರದ ಶ್ರೀದೇವಿ ಪಿಲೇಕೆಮ್ಮ ದೇವಿ ದೇವಸ್ಥಾನದಿಂದ ಕುಂಟೋಜಿ ಗ್ರಾಮದವರೆಗೆ ಭವ್ಯ ಮೆರವಣಿಗೆಯ ಮುಖಾಂತರ ಸ್ವಾಗತಿಸಲಿದ್ದಾರೆ.

ಜುಲೈ 27 ರಂದು ರಥವನ್ನು ತರಲು ಕುಂಟೋಜಿಯಿAದ ಭಕ್ತರು ಮತ್ತು ದೇವಸ್ಥಾನ ಕಮೀಟಿಯವರು ಟ್ರಾö್ಯಕ್ಟರ್ ಮುಖಾಂತರ ಕೊಪ್ಪಳಕ್ಕೆ ತೆರಳಿಲಿದ್ದಾರೆ. ಜುಲೈ 29 ರಂದು ಬೆಳಿಗ್ಗೆ ಕೊಪ್ಪಳದಿಂದ ರಥವನ್ನು ತೆಗೆದುಕೊಂಡು ಹೊರಟು ಅಂದೇ ಸಂಜೆ ಮುದ್ದೇಬಿಹಾಳ ನಗರದ ಶ್ರೀ ದೇವಿ ಪಿಲೇಕೆಮ್ಮ ದೇವಾಸ್ಥಾನಕ್ಕೆ ಬಂದು ತಲುಪಲಿದೆ. ಮರುದಿನ 30 ರಂದು ಬೆಳಿಗ್ಗೆ ಪ್ರಥಮ ರಥವನ್ನು ಮತ್ತು ಅದರ ಜೊತೆಗೆ 21 ಕಿಲೋ ತೂಕದ ಬಸವಣ್ಣ ಮತ್ತು ಸಂಗಮೇಶ್ವರನ ಬೆಳ್ಳಿಯ ಮುಖವಾಡಗಳನ್ನು, ನಾಗರ ಹೆಡೆಯನ್ನು, ತೇರು ಎಳೆಯುವ ಹಗ್ಗ, ತೇರಿಗೆ ರುದ್ರಾಕ್ಷಿ ಮಾಲೆ, ಕಳಸ, ಇವುಗಳನ್ನು ಕುಂಟೋಜಿ ಮತ್ತು ಸುತ್ತಮುತ್ತಲ ಗ್ರಾಮಗಳ ಮಹಿಳಾ ಸಂಘಗಳ ನೇತೃತ್ವದಲ್ಲಿ ಸುಮಂಗಲೆಯರಿAದ ಭವ್ಯ ಕುಂಭ ಮೆರವಣಿಗೆ, ಮತ್ತು ಡೊಳ್ಳು, ಕರಡಿಮಜಲು, ಬೆಂಡುಬಾಜಿ, ಕೋಲಾಟ ನೃತ್ಯ ಸಂಗೀತಗಳ ಸಹಿತ ಸಾಂಪ್ರದಾಯಿಕ ವಾದನಗಳ ಭವ್ಯ ಮೆರವಣಿಗೆಯ ಜೊತೆಗೆ ಕುಂಟೋಜಿ ಗ್ರಾಮಕ್ಕೆ ಕರೆತರಲಾಗುತ್ತದೆ. ಮರುದಿನ ಜುಲೈ 31 ರಂದು ಬೆಳಿಗ್ಗೆ ಗೋಧೂಳಿ ಸಮಯದಲ್ಲಿ ಮುತೈದೆಯರಿಗೆ ಉಡಿ ತುಂಬುವ ಮೂಲಕ ರಥ ಜೋಡಿಸುವ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಎಂದು ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು.

- Advertisement -

ಅವರು ಶನಿವಾರ ಬೆಳಿಗ್ಗೆ ಕುಂಟೋಜಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಜಾತ್ರಾ ಮಹೋತ್ಸವ ಹಾಗೂ ರಥವನ್ನು ತರುವ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ನಾಗಲಿಂಗಯ್ಯ ಮಠ, ರಥದ ಸ್ವಾಗತದ ಸಂದರ್ಭದಲ್ಲಿ ನಡೆಯವಬೇಕಾದ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ದೇವಸ್ಥನ ಕಮೀಟಿಯ ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೀಕಾರ, ರಾಮಣ್ಣ ಹುಲಗಣ್ಣಿ, ಮಲ್ಲಿಕಾರ್ಜುನ ಹುಲಬೆಂಚಿ, ಗುರುಪಾದಪ್ಪ ಹೆಬ್ಬಾಳ, ಅಶೋಕ ಕಾಟಿ, ಈರನಗೌಡ ಬಿರಾದಾರ, ಬಸಲಿಂಗಪ್ಪಗೌಡ ಬಿರಾದಾರ, ಶರಣಬಸಪ್ಪ ಪಲ್ಲೇದ, ಸಂಗಮೇಶ ಕುಂಬಾರ, ಸಂಗನಗೌಡ ಪಾಟೀಲ, ಗುರುಪಾದಪ್ಪ ಹೆಬ್ಬಾಳ, ಶಿವಲಿಂಗಪ್ಪ ಗಸ್ತಿಗಾರ, ಬಸಪ್ಪ ಹೂಗಾರ, ಪ್ರಕಾಶ ಹೂಗಾರ, ಸಂಗಯ್ಯ ಮಠ, ಮಮಾತೆಪ್ಪ ಯರಝರಿ, ಮಲ್ಲನಗೌಡ ಬಿರಾದಾರ, ರಾಚಯ್ಯ ಮಠ, ಸಂಗಯ್ಯ ಮಠ, ಪವಾಡೆಪ್ಪ ತಾಂಬ್ರಳ್ಳಿ, ಸಂತೋಷ ಬಿರಾದಾರ, ಶಿವಪ್ಪ ಕೋಲಕಾರ, ಅಂಬ್ರೇಶ ಕಾಟಿ, ಶರಣಬಸ್ಸು ಫಣೇದಕಟ್ಟಿ, ಶರಣಗೌಡ ಬಿರಾದಾರ, ಮಂಜೂ ಅಬ್ಬಿಹಾಳಮಠ, ಶಿವು ಅಂದೇಲಿ, ಸಂಗಮೇಶ ಯರಝರಿ ಮತ್ತೀತರರು ಇದ್ದರು.

apvc-iconTotal Visits: 0
apvc-iconAll time total visits: 16312

You Might Also Like

ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

ನಮ್ಮ ಸೇವೆ ಜನರು ಮೆಚ್ಚುವಂತಿರಬೇಕು:

ಜೀವನದಲ್ಲಿ ತಂದೆಯ ಕೈ ಹಿಡಿದರೆ, ಜಗತ್ತಿನಲ್ಲಿ ಬೇರೆ ಯಾವ ವ್ಯಕ್ತಿಯ ಕಾಲು ಹಿಡಿಯುವ ಅವಶ್ಯಕತೆ ಬರುವುದಿಲ್ಲ : ಸಜ್ಜನ್

ಹಿಂಗುಲಾಂಬಿಕಾ ಸೊಸೈಟಿಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk July 20, 2025 July 20, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ನಲ್ ಜಲ್ ಮಿತ್ರ ಯೋಜನೆ ಸದುಪಯೋಗ ಪಡಿಸಿಕೊಳ್ಳಿ – ಸಿಇಒ ಲವೀಶ್ ಒರಾಡಿಯ

Stay Connected

Facebook Like
Twitter Follow
Instagram Follow
Youtube Subscribe

Latest News

ನಲ್ ಜಲ್ ಮಿತ್ರ ಯೋಜನೆ ಸದುಪಯೋಗ ಪಡಿಸಿಕೊಳ್ಳಿ – ಸಿಇಒ ಲವೀಶ್ ಒರಾಡಿಯ
ಇದೀಗ ಬಂದ ಸುದ್ದಿ July 20, 2025
ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.
ಇದೀಗ ಬಂದ ಸುದ್ದಿ July 19, 2025
ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ಜುಲೈ 30 ರಂದು ಕುಂಟೋಜಿಗೆ ಬಸವಣ್ಣ ಹಾಗೂ ಸಂಗಮೇಶ್ವರನ ತೇರು ಆಗಮನ ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube