ಅನೇಕ ಮಹನೀಯರ ತ್ಯಾಗದಿಂದ ನಮಗೆ ಸ್ವಾತಂತ್ರ್ಯ – ವಿಭೂತಿಹಳ್ಳಿ
ಯಾದಗಿರಿ:- ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತ್ಯಾಗ–ಬಲಿದಾನ ನೀಡಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದಿದ್ದಾರೆ. ಅವರ ಸ್ಮರಣಾರ್ಥವಾಗಿ ಸರ್ಕಾರ ಹರ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಕರೆ ನೀಡಿದರು.
ಬಿಜೆಪಿ ನಗರ ಮಂಡಲ ಯುವ ಮೋರ್ಚಾ ವತಿಯಿಂದ ವತಿಯಿಂದ ಹರ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ನಗರದ ಬಸವೇಶ್ವರ ಗಂಜ್ ಸರ್ಕಲ್ ಹತ್ತಿರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿಯಬೇಕು. ಹೋರಾಟಗಾರರ ತ್ಯಾಗ ಮುಂದಿನ ಪೀಳಿಗೆಗೆ ತಲುಪುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಮಾತನಾಡಿ ಅವರು ಸಮಾಜ ಅಭಿವೃದ್ಧಿಯಾಗಬೇಕು ಎಲ್ಲರೂ ಉತ್ತಮ ದಾರಿಯಲ್ಲಿ ಸಾಗಬೇಕು. ತಮ್ಮ ಮನೆಗಳ ಮೇಲೆ ಪಕ್ಷ ಭೇದ ಮರೆತು ರಾಷ್ಟ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ಮನೆ–ಮನೆಗೆ ತಿರಂಗಾ ಹಾರಿಸುವಂತೆ ನೀಡಿರುವ ಕರೆ ಕುರಿತು ವಿವರಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ ಮಾತನಾಡಿದ ಅವರು ಜಿಲ್ಲಾ ತುಂಬಾ ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಮೂಲಕ ಪ್ರತಿ ಜನರಲ್ಲೂ ರಾಷ್ಟ್ರಧ್ವಜದ ಜೊತೆಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ ಮತ್ತು ದೆವಿಂದ್ರಪ್ಪ ಕೊನೇರ, ಮಾರುತಿ ಕಲಾಲ್, ನಗರಸಭೆ ಉಪಾಧ್ಯಕ್ಷೆ ರುಕೀಯ್ ಬೇಗಂ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಅಜೇಯ್ ಮಡ್ಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್, ಶ್ರೀದೇವಿ ಶೆಟ್ಟಹಳ್ಳಿ,ಕೃಷ್ಣಮೂರ್ತಿ ಕುಲಕರ್ಣಿ,ಭೀಮಣ್ಣಗೌಡ ಖ್ಯಾತನಾಳ,ನಗರಸಭೆ ಸದಸ್ಯ ವಿಲಾಸ ಪಾಟೀಲ್ ಮತ್ತು ಸುರೇಶ್ ಅಂಬಿಗೇರ,ಸ್ವಾಮಿದೇವ ದಾಸನಕೆರಿ,ವಿಜಯಲಕ್ಷ್ಮಿ ನಾಯಕ,ಮೋನೇಶ ಬೆಳಿಗೇರಿ, ರಮೇಶ್ ದೊಡಮನಿ,ಲಕ್ಷ್ಮಿಪುತ್ರ ಮಾಲಿಪಾಟೀಲ,ಅಪ್ಪಣ್ಣ ಜೈನ್, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಗುತ್ತೆದಾರ ಮತ್ತು ಮಲ್ಲು ಕೊಲಿವಾಡ,ರಾಜು ಸ್ವಾಮಿ,ಮರಿಲಿಂಗ ಕರಾಟೆ,ಪವನ್ ಲಿಂಗೇರಿ, ಭೀಮ ಬಾಯಿ ಶೆಂಡಿಗಿ,ಶಕುಂತಲಾ ಜಿ,ರಾಜು ಉಪ್ಪಿನ್, ಕಾರ್ಯಾಲಯ ಕಾರ್ಯದರ್ಶಿ ಚನ್ನವೀರಯ್ಯ ಸ್ವಾಮಿ ಸೇರಿದಂತೆ ಯುವ ಮೋರ್ಚಾ ಪದಾಧಿಕಾರಿಗಳ ಕಾರ್ಯಕರ್ತರು ಭಾಗಿಯಾಗಿದರು…

