ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಫ್ಯಾನ್ಸ್‌ ವಾರ್‌ಗೆ ಬ್ರೇಕ್‌: ದರ್ಶನ್‌ಗೆ ಸದಾ ಒಳ್ಳೆಯದನ್ನೇ ಬಯಸುತ್ತೀನಿ ಎಂದ ಕಿಚ್ಚ ಸುದೀಪ್‌
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಫ್ಯಾನ್ಸ್‌ ವಾರ್‌ಗೆ ಬ್ರೇಕ್‌: ದರ್ಶನ್‌ಗೆ ಸದಾ ಒಳ್ಳೆಯದನ್ನೇ ಬಯಸುತ್ತೀನಿ ಎಂದ ಕಿಚ್ಚ ಸುದೀಪ್‌
Entertainment

ಫ್ಯಾನ್ಸ್‌ ವಾರ್‌ಗೆ ಬ್ರೇಕ್‌: ದರ್ಶನ್‌ಗೆ ಸದಾ ಒಳ್ಳೆಯದನ್ನೇ ಬಯಸುತ್ತೀನಿ ಎಂದ ಕಿಚ್ಚ ಸುದೀಪ್‌

Shivu
Last updated: 2025/12/25 at 7:59 PM
Shivu
Share
1 Min Read
SHARE

ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಚರ್ಚೆಯಾಗುತ್ತಿದ್ದ ಫ್ಯಾನ್ಸ್‌ ವಾರ್‌ಗೆ ನಟ ಕಿಚ್ಚ ಸುದೀಪ್‌ ಸ್ವತಃ ತೆರೆ ಎಳೆದಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದ್ದ ಮಾತಿನ ಯುದ್ಧ, ಆರೋಪ ಪ್ರತ್ಯಾರೋಪಗಳ ನಡುವೆಯೇ ಸುದೀಪ್‌ ಮಾಡಿದ ಒಂದು ಸಾಲಿನ ಟ್ವೀಟ್‌ ಎಲ್ಲ ಗದ್ದಲಕ್ಕೂ ಬ್ರೇಕ್‌ ಹಾಕಿದೆ. ದರ್ಶನ್‌ ಬಗ್ಗೆ ಅವರು ವ್ಯಕ್ತಪಡಿಸಿದ ನಿಲುವು ಇದೀಗ ಅಭಿಮಾನಿಗಳ ನಡುವೆ ವೈರಲ್‌ ಆಗಿದೆ.

ಕಿಚ್ಚ ಸುದೀಪ್‌ ನಟನೆಯ ‘ಮಾರ್ಕ್‌’ ಸಿನಿಮಾ ಡಿಸೆಂಬರ್‌ 25ರಂದು ತೆರೆಗೆ ಬರಲಿದ್ದು, ಇದರ ಹಿನ್ನೆಲೆಯಲ್ಲಿ ನಡೆದ ಹುಬ್ಬಳ್ಳಿ ಪ್ರೀ ರಿಲೀಸ್‌ ಕಾರ್ಯಕ್ರಮದಲ್ಲಿ ಸುದೀಪ್‌ ‘ಯುದ್ಧಕ್ಕೆ ಸಿದ್ಧ’ ಎಂಬ ಮಾತು ಹೇಳಿದ್ದರು. ಈ ಮಾತು ಪೈರಸಿ ವಿರೋಧದ ಅಭಿಯಾನಕ್ಕೆ ಸಂಬಂಧಿಸಿದದ್ದು ಎಂದು ಅವರು ಸ್ಪಷ್ಟಪಡಿಸಿದ್ದರೂ, ಕೆಲವರು ಇದನ್ನು ದರ್ಶನ್‌ ವಿರುದ್ಧದ ಸಂದೇಶ ಎಂದು ಅರ್ಥ ಮಾಡಿಕೊಂಡರು. ಇದರಿಂದ ಇಬ್ಬರು ನಟರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ತೀವ್ರಗೊಂಡಿತು.

ಈ ಮಧ್ಯೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರ ಹೇಳಿಕೆಗಳನ್ನೂ ಕೆಲವರು ಪರೋಕ್ಷ ಟಾಂಗ್‌ ಎಂದುಕೊಂಡು ಚರ್ಚೆಗೆ ಎಳೆದರು. ಪರಿಣಾಮವಾಗಿ ಫ್ಯಾನ್ಸ್‌ ವಾರ್‌ ದಿನೇ ದಿನೇ ಹೆಚ್ಚುತ್ತಾ ಹೋಗಿತ್ತು. ಈ ಹಿನ್ನಲೆಯಲ್ಲಿ ಕಿಚ್ಚ ಸುದೀಪ್‌ ಟ್ವಿಟರ್‌ನಲ್ಲಿ ‘ಆಸ್ಕ್‌ ಮಿ ಎನಿಥಿಂಗ್‌’ ಸೆಷನ್‌ ನಡೆಸಿದ್ದು, ಅಲ್ಲೇ ಎಲ್ಲ ಗೊಂದಲಕ್ಕೂ ತೆರೆ ಬಿದ್ದಂತಾಯಿತು.

ಸೆಷನ್‌ ವೇಳೆ ಒಬ್ಬ ಅಭಿಮಾನಿ ಸುದೀಪ್‌ ಹಾಗೂ ದರ್ಶನ್‌ ಜೊತೆಗಿನ ಹಳೆಯ ಫೋಟೋವೊಂದನ್ನು ಹಂಚಿಕೊಂಡು, “ಇವರ ಬಗ್ಗೆ ಒಂದು ಮಾತು ಹೇಳಿ” ಎಂದು ಪ್ರಶ್ನೆ ಹಾಕಿದರು. ಇದಕ್ಕೆ ಸುದೀಪ್‌ ಯಾವುದೇ ತಿರುಗುಬಾಣವಿಲ್ಲದೆ, ಸರಳವಾಗಿ “ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಬಯಸುತ್ತೀನಿ” ಎಂದು ಉತ್ತರಿಸಿದರು. ಈ ಒಂದು ಸಾಲಿನ ಪ್ರತಿಕ್ರಿಯೆ ಸಾಕಾಯಿತು, ಇಡೀ ವಿವಾದದ ತಾಪ ತಣ್ಣಗಾಗಲು.

ಕಿಚ್ಚ ಸುದೀಪ್‌ ಅವರ ಈ ನಿಲುವನ್ನು ಹಲವರು ಮೆಚ್ಚಿಕೊಂಡಿದ್ದು, ಸ್ಟಾರ್‌ಗಳ ನಡುವಿನ ಗೌರವ ಹಾಗೂ ಸ್ನೇಹವೇ ಮುಖ್ಯ ಎಂಬ ಸಂದೇಶ ಮತ್ತೊಮ್ಮೆ ಸಾಬೀತಾಗಿದೆ. ಫ್ಯಾನ್ಸ್‌ ನಡುವೆ ನಡೆಯುವ ಅನಗತ್ಯ ಸಂಘರ್ಷಕ್ಕೆ ಇಂತಹ ಹೇಳಿಕೆಗಳು ಬ್ರೇಕ್‌ ಹಾಕಬೇಕು ಎಂಬ ಮಾತುಗಳು ಈಗ ಎಲ್ಲೆಡೆ ಕೇಳಿಬರುತ್ತಿವೆ.

apvc-iconPost Views: 11

You Might Also Like

ಜನವರಿ 23ಕ್ಕೆ ಉಗ್ರಂ ಮಂಜು–ಸಾಯಿ ಸಂಧ್ಯಾ ಸರಳ ಮದುವೆ

ಟಾಕ್ಸಿಕ್ ಗೆ ಸೆಡ್ಡು ಹೊಡೆಯಲು ಐದಾರು ಸಿನಿಮಾಗಳು ಸಾಲುಗಟ್ಟಿ ಬರುತ್ತಿವೆ!

ಮಾರ್ಕ್’ ಟ್ರೈಲರ್ ರಿಲೀಸ್ ಆದ ಕೆಲ ಹೊತ್ತಲ್ಲೇ ದಾಖಲೆ

‘ದಿ ಡೆವಿಲ್’ ಮೂಲಕ ಗಲ್ಲಿ ಗಲ್ಲಿಯಲ್ಲೂ ಗಿಲ್ಲಿ ಹವಾ!

ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ

TAGGED: Break to the fan war, Darshan, Kichha Sudeep
Shivu December 25, 2025 December 25, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಚಿತ್ರದುರ್ಗ ಬಸ್ ದುರಂತ: ಅದೃಷ್ಟವಶಾತ್ ಪಾರಾದ ಸ್ಕೂಲ್ ಟ್ರಿಪ್ ವಾಹನ

Stay Connected

Facebook Like
Twitter Follow
Instagram Follow
Youtube Subscribe

Latest News

ಚಿತ್ರದುರ್ಗ ಬಸ್ ದುರಂತ: ಅದೃಷ್ಟವಶಾತ್ ಪಾರಾದ ಸ್ಕೂಲ್ ಟ್ರಿಪ್ ವಾಹನ
State December 25, 2025
ಬಿಸಿಲುನಾಡು ರಾಯಚೂರಿನಲ್ಲಿ ದಾಖಲೆ ಚಳಿ: ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಇಳಿಕೆ, ಐದು ದಿನ ತಂಪಿನ ಅಬ್ಬರ
Latest News December 23, 2025
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿ ಸುದ್ದಿ: 24ನೇ ಕಂತಿನ ಹಣ ಜಮಾ.?
Govt Schemes December 23, 2025
ಜಮೀನಿಗೆ ದಾರಿಬಳಕೆಗೆ ಅಡ್ಡಿ ಆರೋಪ – ತಹಶೀಲ್ದಾರ್‌ಗೆ ರೈತ ಕುಟುಂಬದ ಮನವಿ.
Latest News December 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube