Category: Cultural

  • ದೇವರ ಪೂಜೆಯ ಕಳಶ ತೆಂಗಿನಕಾಯಿಯ ಹಿಂದಿನ ದೈವೀ ರಹಸ್ಯ: ಬಳಸುವಾಗ ತಪ್ಪು ಮಾಡಬೇಡಿ!

    ದೇವರ ಪೂಜೆಯ ಕಳಶ ತೆಂಗಿನಕಾಯಿಯ ಹಿಂದಿನ ದೈವೀ ರಹಸ್ಯ: ಬಳಸುವಾಗ ತಪ್ಪು ಮಾಡಬೇಡಿ!

    ಭಾರತೀಯ ಸಂಸ್ಕೃತಿಯಲ್ಲಿ ದೇವರ ಪೂಜೆ, ಹೋಮ, ಹವನ, ಗೃಹಪ್ರವೇಶ ಅಥವಾ ಯಾವುದೇ ಮಂಗಳಕಾರ್ಯಗಳಲ್ಲಿ ಕಳಶ ಸ್ಥಾಪನೆ ಒಂದು ಅತ್ಯಂತ ಪವಿತ್ರ ಸಂಪ್ರದಾಯವಾಗಿದೆ. ಕಳಶವು ದೇವತೆಯ ಶಕ್ತಿ, ಶುದ್ಧತೆ ಮತ್ತು ಸೃಷ್ಟಿಯ ಮೂಲ ತತ್ವದ ಪ್ರತೀಕವೆಂದು ವೇದಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಕಳಶದ ಮೇಲೆ ಇಡುವ ತೆಂಗಿನಕಾಯಿ ಕೇವಲ ಅಲಂಕಾರವಲ್ಲ ಅದು ದೈವೀ ಶಕ್ತಿಯ ಆವರಣ ಎಂದು ಪರಿಗಣಿಸಲಾಗುತ್ತದೆ.

    ಆದರೆ ಅನೇಕರು ಪೂಜೆ ಮುಗಿದ ಬಳಿಕ ಈ ಕಳಶದ ತೆಂಗಿನಕಾಯಿಯನ್ನು ಏನು ಮಾಡಬೇಕು? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ತಿಳಿಯದೇ ಗೊಂದಲದಲ್ಲಿರುತ್ತಾರೆ. ಈ ಕುರಿತು ಜ್ಯೋತಿಷಿ ಎಲ್. ವಿವೇಕಾನಂದ ಆಚಾರ್ಯ ಅವರು ಶಾಸ್ತ್ರೋಕ್ತವಾಗಿ ನೀಡಿರುವ ಮಾಹಿತಿ ಹೀಗಿದೆ.

    ಕಳಶದಲ್ಲಿನ ತೆಂಗಿನಕಾಯಿಯ ದೈವೀ ಮಹತ್ವ: 

    ಕಳಶಕ್ಕೆ ಇಡುವ ತೆಂಗಿನಕಾಯಿ ದೇವರ ಸಾನಿಧ್ಯದಲ್ಲಿ ಇರಿಸುವುದರಿಂದ ಅದು ದೈವ ಸ್ವರೂಪ ಪಡೆಯುತ್ತದೆ. ಹೀಗಾಗಿ ಪೂಜೆ ಬಳಿಕ ಅದನ್ನು ನಿರ್ಲಕ್ಷ್ಯವಾಗಿ ಅಥವಾ ಸಾಮಾನ್ಯ ಉಪಯೋಗಕ್ಕಾಗಿ ಬಳಸಬಾರದು.

    ಮಾಂಸದ ಅಡುಗೆಯಲ್ಲಿ ಬಳಸಬಾರದು: 

    ಶಾಸ್ತ್ರಗಳಲ್ಲಿ ಉಲ್ಲೇಖವಾದಂತೆ, ದೇವರಿಗೆ ಅರ್ಪಿಸಿದ ತೆಂಗಿನಕಾಯಿಯನ್ನು ಮಾಂಸದ ಅಡುಗೆಗೆ ಬಳಸುವುದು ಅಪಶಕುನ ಎಂದು ಹೇಳಲಾಗಿದೆ. ಇಂತಹ ಪ್ರಯೋಗದಿಂದ ಪೂಜೆಯ ಪಾವಿತ್ರ್ಯ ಕಳೆದುಹೋಗುತ್ತದೆ.

    ಸಿಹಿ ಪದಾರ್ಥಕ್ಕೆ ಬಳಸುವುದು ಶ್ರೇಷ್ಠ:

    ಜ್ಯೋತಿಷಿ ವಿವೇಕಾನಂದ ಆಚಾರ್ಯರ ಪ್ರಕಾರ, ಕಳಶದ ತೆಂಗಿನಕಾಯಿಯನ್ನು ಸಿಹಿ ಪದಾರ್ಥಗಳು (ಉದಾ: ಪಾಯಸ, ಹೋಳಿಗೆ, ಲಾಡು ಮುಂತಾದವು) ತಯಾರಿಸಲು ಬಳಸುವುದು ಅತ್ಯಂತ ಶುಭಕರ. ತಯಾರಿಸಿದ ಸಿಹಿ ಪದಾರ್ಥಗಳನ್ನು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಗೆ ಹಂಚಿದರೆ ಶುಭಫಲ ದೊರೆಯುತ್ತದೆ.

    ತೆಂಗಿನಕಾಯಿ ಆಯ್ಕೆ ಮಾಡುವಾಗ ಎಚ್ಚರಿಕೆ:

    ಕಳಶಕ್ಕೆ ಇಡುವ ತೆಂಗಿನಕಾಯಿ ಪೂರ್ಣವಾಗಿ ಒಣಗಿರಬಾರದು. ಒಣ ತೆಂಗಿನಕಾಯಿ ಕಳಶದಲ್ಲಿ ಇಟ್ಟರೆ ಮನೆಯವರ ಜೀವನದಲ್ಲಿ ಸಂಕಷ್ಟಗಳು ಅಥವಾ ಅಡೆತಡೆಗಳು ಎದುರಾಗಬಹುದು ಎಂದು ಶಾಸ್ತ್ರ ನುಡಿಸುತ್ತದೆ.

    ಪೂಜೆಯ ಸಮಯದಲ್ಲಿ ತೆಂಗಿನಕಾಯಿ ಬಿದ್ದರೆ ಅಥವಾ ಬಿರುಕು ಬಿಟ್ಟರೆ ಏನಾಗುತ್ತದೆ?

    ಪೂಜೆಯ ಸಮಯದಲ್ಲಿ ತೆಂಗಿನಕಾಯಿ ಬಿದ್ದರೆ, ಅದು ಆರ್ಥಿಕ ನಷ್ಟ ಅಥವಾ ಹಣಕಾಸಿನ ತೊಂದರೆಯ ಸೂಚನೆ ಎಂದು ಪರಿಗಣಿಸಲಾಗುತ್ತದೆ.

    ತೆಂಗಿನಕಾಯಿಗೆ ಬಿರುಕು ಬಿದ್ದರೆ, ಮನೆಯ ಸದಸ್ಯರಿಗೆ ಅಪಘಾತ ಅಥವಾ ಅನಾರೋಗ್ಯ ಉಂಟಾಗುವ ಸಂಭವವಿದೆ ಎಂಬ ನಂಬಿಕೆಯೂ ಇದೆ.

    ನೀರಿಲ್ಲದ ತೆಂಗಿನಕಾಯಿ ಶಕುನ:

    ಕಳಶಕ್ಕೆ ಇಡುವ ತೆಂಗಿನಕಾಯಿಯಲ್ಲಿ ನೀರು ಇಲ್ಲದಿದ್ದರೆ, ಅದು ಸಂತಾನ ಭಾಗ್ಯ ಕುಂದಿಸುವ ಸೂಚನೆ ಎಂದು ಹೇಳಲಾಗಿದೆ. ಕೆಲವೆಡೆ ಇದನ್ನು ಮಕ್ಕಳು ದಾರಿ ತಪ್ಪುವ ಸಾಧ್ಯತೆ ಎಂದೂ ಅರ್ಥೈಸಲಾಗುತ್ತದೆ.

    ಅರ್ಚಕರಿಗೆ ಅಥವಾ ಅನ್ಯರಿಗೆ ನೀಡಬಾರದು: 

    ಪೂಜೆ ಮುಗಿದ ಬಳಿಕ ಕಳಶದ ತೆಂಗಿನಕಾಯಿಯನ್ನು ಅನ್ಯರಿಗೆ ಅಥವಾ ಅರ್ಚಕರಿಗೆ ನೀಡುವುದು ತಪ್ಪು ಎಂದು ಜ್ಯೋತಿಷಿ ಎಚ್ಚರಿಸುತ್ತಾರೆ. ಹೀಗೆ ಮಾಡಿದರೆ, ಪೂಜೆಯಿಂದ ಪಡೆದ ಪುಣ್ಯ ಫಲ ನಮ್ಮಿಂದ ದೂರವಾಗಿ, ಅದನ್ನು ಸ್ವೀಕರಿಸಿದವರಿಗೆ ತಲುಪುತ್ತದೆ ಎಂದು ನಂಬಿಕೆ ಇದೆ.

    ಕಳಶದ ತೆಂಗಿನಕಾಯಿ ಕೇವಲ ಪೂಜಾ ಸಾಮಗ್ರಿ ಅಲ್ಲ, ಅದು ದೇವರ ಕೃಪೆಯ ಪ್ರತೀಕ. ಅದನ್ನು ಗೌರವದಿಂದ ಬಳಸುವುದು, ಸಿಹಿ ಪದಾರ್ಥ ತಯಾರಿಸಿ ಹಂಚಿಕೊಳ್ಳುವುದು ಮತ್ತು ನಿರ್ಲಕ್ಷ್ಯವಾಗಿ ಉಪಯೋಗಿಸದಿರುವುದು ಶಾಸ್ತ್ರೋಕ್ತ ಶ್ರೇಷ್ಠ ಕ್ರಮ ಎಂದು ಪರಿಗಣಿಸಲಾಗಿದೆ.

  • ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

    ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

    ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯು ಕೇವಲ ಲೋಹವಲ್ಲ, ಅವು ಸಂಸ್ಕೃತಿ, ಪರಂಪರೆ, ಆರ್ಥಿಕತೆ ಹಾಗೂ ಭಾವನೆಗಳಿಗೂ ಮೇಳೈಸಿರುವ ಅಮೂಲ್ಯ ಸಂಪತ್ತು. ಹಬ್ಬ-ಹರಿದಿನಗಳಿಂದ ಹಿಡಿದು ಮದುವೆ, ಧಾರ್ಮಿಕ ಕಾರ್ಯಕ್ರಮಗಳು, ಹೂಡಿಕೆ ಹಾಗೂ ಭವಿಷ್ಯ ಭದ್ರತೆವರೆಗೆ ಚಿನ್ನ ಮತ್ತು ಬೆಳ್ಳಿ ಪ್ರಮುಖ ಪಾತ್ರ ವಹಿಸುತ್ತವೆ. ಪ್ರಾಚೀನ ಕಾಲದಿಂದಲೇ ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತಿದ್ದು, ಆರ್ಥಿಕ ಅಸ್ಥಿರತೆ ಅಥವಾ ದರ ಏರಿಕೆಯ ಸಮಯದಲ್ಲಿ ಜನರು ಚಿನ್ನ-ಬೆಳ್ಳಿಯತ್ತ ಮುಖ ಮಾಡುವುದು ಸಾಮಾನ್ಯ.

    2025ರ ಆರಂಭದಿಂದಲೇ ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳು ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಏರಿದವು. ದರ ಏರಿಕೆಯ ಪರಿಣಾಮವಾಗಿ ಮಧ್ಯಮ ವರ್ಗದ ಜನರಿಗೆ ಚಿನ್ನ ಖರೀದಿಸುವುದೇ ಕಷ್ಟವಾಗಿತ್ತು. ಆದರೆ ಈಗ ಮಾರುಕಟ್ಟೆಯ ಚಿತ್ರಣ ಬದಲಾಗುತ್ತಿದ್ದು, ತಜ್ಞರ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಗಣನೀಯ ಇಳಿಕೆ ಸಂಭವಿಸಬಹುದು ಎಂದು ಹೇಳಲಾಗುತ್ತಿದೆ.

    ಬೆಲೆ ಏರಿಕೆಯ ಬಳಿಕ ಇಳಿಕೆಯ ಎಚ್ಚರಿಕೆ:

    ಪೇಸ್ 360 ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಮುಖ್ಯ ಜಾಗತಿಕ ತಂತ್ರಜ್ಞಾನಿ ಅಮಿತ್ ಗೋಯಲ್ (Amit Goyal) ಅವರ ಪ್ರಕಾರ, ಇತ್ತೀಚಿನ ಚಿನ್ನದ ಬೆಲೆ ಏರಿಕೆಯು ಶಾಶ್ವತವಲ್ಲ. ಅವರ ಅಂದಾಜಿನ ಪ್ರಕಾರ, ಚಿನ್ನದ ಬೆಲೆ ಶೇಕಡಾ 30 ರಿಂದ 35ರಷ್ಟು ಇಳಿಯುವ ಸಾಧ್ಯತೆ ಇದೆ. ಇದರರ್ಥ, ಪ್ರತಿ 10 ಗ್ರಾಂ ಚಿನ್ನದ ದರವು ಸುಮಾರು ₹77,701 ಮಟ್ಟಕ್ಕೆ ಕುಸಿಯಬಹುದು.

    ಅದೇ ರೀತಿ ಬೆಳ್ಳಿಯ ಬೆಲೆಯಲ್ಲಿ ಶೇಕಡಾ 50ರಷ್ಟು ಕುಸಿತ ಸಾಧ್ಯವೆಂದು ಅವರು ತಿಳಿಸಿದ್ದಾರೆ. ಹೂಡಿಕೆದಾರರು ಹಾಗೂ ಖರೀದಿದಾರರು ಈ ಭವಿಷ್ಯವನ್ನು ಮನನ ಮಾಡಿಕೊಂಡು ತಮ್ಮ ಹಣಕಾಸು ತೀರ್ಮಾನಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ.

    ಚಿನ್ನದ ಬೆಲೆಯಲ್ಲಿ ಶೇಕಡಾ 30–35ರಷ್ಟು ಇಳಿಕೆಯ ನಿರೀಕ್ಷೆ:

    ಗೋಯಲ್ ಅವರ ವಿಶ್ಲೇಷಣೆಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಅಥವಾ ವಾರಗಳಲ್ಲಿ ಚಿನ್ನದ ಬೆಲೆ ಶೇಕಡಾ 30–35ರಷ್ಟು ಇಳಿಯುವ ಸಾಧ್ಯತೆ ಇದೆ. ಪ್ರತಿ 10 ಗ್ರಾಂ ಚಿನ್ನದ ದರವು ₹77,701 ರವರೆಗೆ ಕುಸಿಯಬಹುದು.

    ಬೆಳ್ಳಿಯ ಬೆಲೆಯು ಸಹ ಶೇಕಡಾ 50ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಮತ್ತು ₹77,450 ಮಟ್ಟ ತಲುಪಬಹುದು ಎಂದು ಅಂದಾಜಿಸಲಾಗುತ್ತಿದೆ. ಈ ಬದಲಾವಣೆಯು ಹೂಡಿಕೆ ಮಾರುಕಟ್ಟೆಗೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

    2025ರಲ್ಲಿ ಏರಿಕೆಯ ಹಾದಿಯಿಂದ ಇಳಿಕೆಯ ಹಾದಿಗೆ:

    2025ರ ಆರಂಭದಿಂದಲೇ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ನಿರಂತರ ಏರಿಕೆ ಕಂಡುಬಂತು. ಮಧ್ಯಮ ವರ್ಗದ ಜನರಿಗೆ ಚಿನ್ನದ ಖರೀದಿ ಅಸಾಧ್ಯವಾಗುವ ಮಟ್ಟಿಗೆ ದರ ಏರಿಕೆ ಕಂಡುಬಂದಿತ್ತು. ಆದರೆ ಈಗ ತಜ್ಞರ ಪ್ರಕಾರ ಈ ಏರಿಕೆಯು ಕೊನೆಯ ಹಂತವನ್ನು ತಲುಪಿದೆ.

    2007, 2008 ಮತ್ತು 2011 ರಲ್ಲಿಯೂ ಇದೇ ರೀತಿಯ ಸನ್ನಿವೇಶ ಕಂಡುಬಂದಿತ್ತು, ಆ ಸಮಯದಲ್ಲಿ ಚಿನ್ನದ ಬೆಲೆ ಏರಿಕೆಯ ನಂತರ ಶೇಕಡಾ 45ರಷ್ಟು ಕುಸಿತ ದಾಖಲಾಗಿತ್ತು. ಇದೇ ಮಾದರಿಯ ಪರಿಸ್ಥಿತಿ ಮತ್ತೆ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.

    ಬೆಳ್ಳಿಯ ಬೆಲೆ ಏರಿಕೆ:

    ಕಳೆದ ಹತ್ತು ತಿಂಗಳಲ್ಲಿ ಬೆಳ್ಳಿಯ ಬೆಲೆ ಎರಡು ಪಟ್ಟು ಏರಿರುವುದು ಗಮನಾರ್ಹ. ಚಿನ್ನಕ್ಕಿಂತಲೂ ಬೆಳ್ಳಿಯು ಹೂಡಿಕೆದಾರರಿಗೆ ಶೇಕಡಾ 37ರಷ್ಟು ಹೆಚ್ಚುವರಿ ಲಾಭ ನೀಡಿದೆ. ಇದರ ಹಿಂದಿರುವ ಪ್ರಮುಖ ಕಾರಣಗಳು, ಹಬ್ಬದ ಕಾಲದಲ್ಲಿ ಹೆಚ್ಚಿದ ಖರೀದಿ ಬೇಡಿಕೆ, ಕೈಗಾರಿಕಾ ಕ್ಷೇತ್ರದಲ್ಲಿ ಬೆಳ್ಳಿಯ ಹೆಚ್ಚಿದ ಬಳಕೆ ಮತ್ತು ಜಾಗತಿಕ ಪೂರೈಕೆಯ ಕೊರತೆ.

    ದೀಪಾವಳಿ ಮತ್ತು ಧನತ್ರಯೋದಶಿಯ ಸಂದರ್ಭದಲ್ಲಿ ಭಾರತದಲ್ಲಿ ಬೆಳ್ಳಿ ಖರೀದಿ ಹೆಚ್ಚಾಗುವ ನಿರೀಕ್ಷೆಯಿದೆ. ಜೊತೆಗೆ ಸೌರ ವಿದ್ಯುತ್ ಘಟಕಗಳು, ಎಐ (AI) ತಂತ್ರಜ್ಞಾನ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಬೆಳ್ಳಿಯ ಬಳಕೆ ವೇಗವಾಗಿ ಹೆಚ್ಚುತ್ತಿರುವುದರಿಂದ ಜಾಗತಿಕ ಬೇಡಿಕೆಯೂ ಏರಿದೆ.

    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಈ ಬೃಹತ್ ಬದಲಾವಣೆಗಳು ಹೂಡಿಕೆದಾರರಿಗೆ ಎಚ್ಚರಿಕೆಯ ಗಂಟೆ ಮೊಳಗಿಸುತ್ತಿವೆ. ಬೆಲೆ ನಿಗದಿ ವ್ಯವಸ್ಥೆಯ ಬದಲಾವಣೆಗಳು, ಜಾಗತಿಕ ಆರ್ಥಿಕ ಪರಿಸ್ಥಿತಿ ಹಾಗೂ ಬೇಡಿಕೆ–ಪೂರೈಕೆಯ ಅಸಮತೋಲನಗಳು ಮುಂದಿನ ಬೆಲೆ ಬದಲಾವಣೆಗಳಲ್ಲಿ ಪ್ರಮುಖ ಪಾತ್ರವಹಿಸಲಿವೆ.

    ಹೀಗಾಗಿ, ಹೂಡಿಕೆದಾರರು ಹಾಗೂ ಖರೀದಿದಾರರು ಮಾರುಕಟ್ಟೆಯ ಬೆಳವಣಿಗೆಗಳನ್ನು ಗಮನಿಸಿ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುವುದು ಅತ್ಯಂತ ಮುಖ್ಯ.

  • ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    ಯಾದಗಿರಿ: ಹಿರಿಯರಿಂದಲೇ ಎಲ್ಲರೂ ಎನ್ನುವ‌ ಸತ್ಯ ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ‌ ಪದವಿ ಮಹಾವಿದ್ಯಾಲಯದ‌ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಇಂದು ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಅಧಿಕವಾಗಿದೆ. ಅವರು ನಮ್ಮ ತಂದೆ,ತಾಯಿ, ಅಜ್ಜ,ಅಜ್ಜಿ ಅಲ್ಲದೆ ಪ್ರತಿ ಮನೆಯ ಹಿರಿಯ ಜೀವಿಗಳಾಗಿದ್ದಾರೆ. ಅಂತಹ ಅಮೂಲ್ಯ ಜೀವಗಳಿಗೆ ನಾವೆಲ್ಲರೂ ರಕ್ಷಕರಾಗಬೇಕೆಂದು ಶಾಸಕರು ಮಾರ್ಮಿಕವಾಗಿ ನುಡಿದರು.

    ಹಿರಿಯರು ಇದ್ದ ಮನೆ ತುಂಬಿದ ಕೊಡವಿದ್ದಂತೇ, ಅವರ ಮಾರ್ಗದರ್ಶನ, ಸಲಹೆ ಕಿರಿಯರಿಗೆ ಸದಾ ಬೇಕಾಗುತ್ತದೆ. ದಾರಿ ತಪ್ಪದಂತೆಯೇ ನಮ್ಮನ್ನು ತಿದ್ದಿ,ತೀಡಿ‌ ಸರಿ ದಾರಿಯಲ್ಲಿ ನಡೆಯುವಂತಹ ಮಾತುಗಳು ಹಿರಿಯರು ಹೇಳುತ್ತಾರೆ, ಆದರೇ ಅದನ್ನು ಪಾಸಿಟಿವ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ಮಾಡುವುದೇ ಹೆಚ್ಚಾಗಿದೆ. ಇದು ನಿಲ್ಲಬೇಕು, ಅವರೆಂದಿಗೂ ನಮ್ಮ ಜೊತೆಯಲ್ಲಿಯೇ ಇರುವಂತಹ ವಾತಾವರಣ ಮೂಡಿಸಬೇಕೆಂದು ಪ್ರಸಕ್ತ ಸನ್ನಿವೇಶವನ್ನು ಶಾಸಕ ಪಾಟೀಲ್ ವಿವರಿಸಿದರು.

    ಹಿರಿಯರೇ ಆಸ್ತಿ, ಆದರೇ ಇಂದು ಬಹಳಷ್ಟು ಜನರು ಅವರನ್ನು ಸಾಕಲು ಹಿಂದೆ,ಮುಂದೆ ನೋಡಿ ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತವಿದ್ದಾಗಲೇ ಒಂಟಿ ಮಾಡಿ ನೋವು ಕೊಡುತ್ತಿದ್ದೇವೆ. ಹೀಗೆ ಮಾಡುವವರು ಒಮ್ಮೆ ಆಲೋಚನೆ ಮಾಡಬೇಕು, ಮುಂದೆ ನಾವೂ ಕೂಡಾ ಹಿರಿಯರಾಗುತ್ತೇವೆ, ಆಗ ನಮ್ಮ ಮಕ್ಕಳು ನಮ್ಮನ್ನು ಅನಾಥರಾಗಿ ಮಾಡಿದರೇ ಪರಸ್ಥಿತಿ ಏನಾಗುತ್ತದೆ ಎಂಬುವುದನ್ನು ತಿಳಿದುಕೊಂಡು ಗೌರವದಿಂದ ನಡೆಸಿಕೊಳ್ಳಬೇಕೆಂದು‌ ಶಾಸಕ ಚನ್ನಾರಡ್ಡಿ ಮನಮುಟ್ಟುವಂತೆಯೇ ತಿಳಿಸಿದರು.

    ಕಾರ್ಯಕ್ರಮದಲ್ಲಿ‌ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

    ಜಿಲ್ಲಾ ಅಧಿಕಾರಿ‌ ಶರಣಪ್ಪ ಪಾಟೀಲ್ ಮಾತನಾಡಿ, ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

    ಹಿರಿಯರಾದ ಸಿ.ಎಮ್‌ ಪಟ್ಟೇದಾರ ಮಾತನಾಡಿದರು.

    ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯರಾದ ನಿವೃತ್ತ ಎಎಸ್ ಐ ಸಾಮೂವೆಲ್, ಕಂದಾಯ ಇಲಾಖೆ ಲಕ್ಷ್ಮಣ ದೇಗಲಮಡಿ, ನಿರಾವರಿ ಇಲಾಖೆ ಮಲ್ಲಿನಾಥ ಮಲಗೊಂಡ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ವಾಹೀದ್ ಮಿಯಾ,‌ ಶಿಕ್ಷಣ ಕ್ಷೇತ್ರ ಚಂದ್ರಾಮಪ್ಪ ಬಳಿಚಕ್ರ, ಸಮಾಜ ಸೇವಕ ಸಭಾಪತಿ ಮಹಾದೇವಪ್ಪ ಕಡ್ಡಿ ಅಬ್ಬೆತುಮಕೂರು, ಸಮಾಜ ಸೇವೆ ಶರಣಪ್ಪ ಜಾಕಾ, ನಿವೃತ್ತ ಶಿಕ್ಷಕರಾದ ಸಿದ್ದಪ್ಪ ಬಬಲಾದ, ಮಾಜಿ ನಗರಸಭೆ ಸದಸ್ಯರಾದ ಸಂಗಣ್ಣ ಬುಕಿಸ್ಟಗಾರ ಶಹಾಪುರ, ಸಮಾಜ ಸೇವೆ ನಿರ್ಮಲ್ ಕುಮಾರ ಜೈನ್, ಸಮಾಜ ಸೇವಕರಾದ ಬಿ.ಸಿ ಪಾಟೀಲ್, ನಿವೃತ್ತ ಶಿರಸ್ತೆದಾರ ನ್ಯಾಯಾಂಗ ಇಲಾಖೆ ಭೀಮರಾಯ, ಸಮಾಜ ಸೇವಕ ಮಾಣಿಕಮ್ಮ ಸೋಮಯ್ಯ ಸ್ವಾಮೀ, ಸಮಾಜ ಸೇವಕ ಶರಣಪ್ಪ ಆರ್ ಬಡಿಗೇರ್, ಸಮಾಜ ಸೇವಕ ಯಂಕೋಬಾ ಚಿಂತನಳ್ಳಿ ಅವರಿಗೆ ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರಾದ ಬಾಬುರಾವ ಕಾಡ್ಲೂರ್, ನಗರಠಾಣೆ ಪಿಎಸ್ ಐ ಮಂಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ಹಿರಿಯರಾದ ಚನ್ನಪ್ಪಗೌಡ ಮೋಸಂಬಿ, ಜಿಲ್ಲಾ ನಿವೃತ್ತ ಸಂಘದ ಬಂಡೆಪ್ಪ‌ ಆಕಳ, ಸಿ.ಎಮ್ ಪಟೇದಾರ್, ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ಸುಭಾಶ್ಚಂದ್ರ ಕೌಲಗಿ ಇದ್ದರು.

  • ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

    ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

    ಸತ್ಯಕಾಮ ವಾರ್ತೆ ಸುರಪುರ: 

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತವಾದ ರಂಗAಪೇಟಿಯ ಕನ್ನಡ ಸಾಹಿತ್ಯ ಸಂಘದ ೮೩ ನೇ ವರ್ಷದ ನಾಡ ಹಬ್ಬಕ್ಕೆ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ಭುವನೇಶ್ವರಿ ದೇವಿ ಮೂರ್ತಿಗೆ ಯಜ್ಙೇಶ್ವರ ಭಟ್ ಅವರು ನಾಡದೇವಿಗೆ ಪೂಜೆ ಸಲ್ಲಿಸಿದ ನಂತರ ಪ್ರಸಾದ ವಿತರಿಸಿದರು.

    ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗೂರೇಶ್ವರ ವಾರದ್, ಕಾರ್ಯಾಧ್ಯಕ್ಷ ಶ್ರೀರಂಗಯ್ಯ ಮಿರಿಯಾಲ,ಉಪಾಧ್ಯಕ್ಷರಾದ ಯಂಕಣ್ಣ ಗದ್ವಾಲ್, ಸೋಮರಾಯ ಶಖಾಪುರ,ಶರಣಗೌಡ ಎಂ. ಪಾಟೀಲ್ ಜೈನಾಪುರ, ಪ್ರಧಾನ ಕಾರ್ಯದರ್ಶಿ ಮುದ್ದಪ್ಪ ಅಪ್ಪಾಗೋಳ,ಸಹ ಕಾರ್ಯದರ್ಶಿಗಳಾದ ಸಿದ್ದಯ್ಯ ಮಠ, ಪ್ರಕಾಶ ಆಲಬನೂರ, ಸಂಘಟನಾ ಕಾರ್ಯದರ್ಶಿ ಮಹಾದೇವಪ್ಪ ಗುತ್ತೇದಾರ್, ಖಜಾಂಚಿ ರವಿಕುಮಾರ ತ್ರಿವೇದಿ, ಹಿರಿಯ ಪತ್ರಕರ್ತ ಮಲ್ಲು ಗುಳಗಿ,ವೆಂಕಟೇಶ ಟೊಣಪೆ, ದಿಲೀಪ್ ಗೆಜ್ಜೆಲ್, ಭೀಮರಾಯ ಭಜಂತ್ರಿ,ಭಾಗಣ್ಣ ಹಸನಾಪುರ ಸೇರಿದಂತೆ ಇತರರಿದ್ದರು.

  • ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

    ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

    ಸತ್ಯಕಾಮ ವಾರ್ತೆ ಯಾದಗಿರಿ:

    ಅನ್ನದಾತರನ್ನು ಆ ಭಗವಂತ ಗಣೇಶ ಕಾಪಾಡಲಿ, ಅತಿವೃಷ್ಠಿಯಿಂದ ಹಾನಿಗೀಡಾದ ಪರಿಹಾರ ನೀಡಲು ಸರ್ಕಾರಕ್ಕೆ ಗಣಪತಿ ದೇವ ಸದ್ಬುದ್ದಿ ಕೊಡಲಿ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

    ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಹಿರಿಯ ಸಹೋದರ ಮಲ್ಲಿಕಾರ್ಜುನ ರಡ್ಡಿ ಆಶಯದಂತೆ ನಮ್ಮ ಕುಟುಂಬದವರು ಗಣೇಶನಿಗೆ ಪ್ರತಿವರ್ಷ ವಿಶೇಷ ಪೂಜೆ ಸಲ್ಲಿಸುತ್ತೇವೆ. ಗಣಪತಿ ನಮ್ಮ ಜನರ ಎಲ್ಲಾ ಕಷ್ಟಗಳನ್ನು ಪರಿಹರಿಸಲಿ ಎಂದರು.

    ಹಿAದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಮಂಟಪವನ್ನು ಅಯೋಧ್ಯೆಯಂತೆ ವಾತಾವರಣ ನಿರ್ಮಾಣ ಮಾಡಿ, ಮಹಾಭಾರತದ ವಿಶೇಷ ಚಿತ್ರಗಳನ್ನು ಭಿತ್ತರಿಸಿರುವುದು ಎಲ್ಲರೂ ಭಕ್ತಿಯಿಂದ ಪುನಿತರಾಗುವಂತೆ ಮಾಡಲಾಗಿರುವುದು ಹಿಂದೂ ಕಾರ್ಯಕರ್ತರ ಭಕ್ತಿಗೆ ಸಾಕ್ಷಿಯಾಗಿದೆ ಎಂದರು.

    ಶನಿವಾರದAದು ಜರುಗುವ ಹಿಂದೂ ಮಹಾಗಣಪತಿಯ ವಿಸರ್ಜನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸಿ ಇದೊಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿಸಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ, ಪ್ರಮುಖರಾದ ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಶಿರವಾಳ, ಬಂದಪ್ಪ ಅರಳಿ, ಮಲ್ಲಣಗೌಡ ಹಳಿಮನಿ ಕೌಳೂರು, ಮಲ್ಲಣಗೌಡ ಹೊಸಳ್ಳಿ, ಮಲ್ಲಿಕಾರ್ಜುನ ಅರುಣಿ, ಸಾಹೇಬಗೌಡ ಗೌಡಗೇರಾ, ಈಶ್ವರನಾಯಕ ಸೇರಿದಂತೆ ಇತರರಿದ್ದರು.

  • ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

    ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

    ಯಾದಗಿರಿ: ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ದೆಹಲಿಯ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಸಿದ್ದಪ್ಪ ಎಸ್ ಹೊಟ್ಟಿ ಅವರಿಗೆ ಹೊಟ್ಟಿಯ ಆತ್ಮೀಯ ಬಳಗದ ವತಿಯಿಂದ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಲಯದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

    ಸನ್ಮಾನ ನೇರವೆರಿಸಿ ಮಾತನಾಡಿದ  ಸಹಕಾರ ಯೂನಿಯನ್ ಅಧ್ಯಕ್ಷ ವಿಶ್ವನಾಥರೆಡ್ಡಿ ದರ್ಶನಪೂರ ಗಿರಿ ಜಿಲ್ಲೆಯ ಸಹಕಾರ ಸಂಘದಲ್ಲಿ ಗುರಿತಿಕೊಂಡಿದ್ದ ಸಿದ್ದಪ್ಪ ಹೊಟ್ಟಿ ದೇಶದ ದೆಹಲಿಯಲ್ಲಿರುವ ನೆಪೆಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದು ನಮ್ಮ ಹಿಂದುಳಿದ  ಯಾದಗಿರಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

    ಸಹಕಾರ ಯುನಿಯನ್ ನಿರ್ದೇಶಕ ಕೆಂಚಪ್ಪ ನಗನೂರ ಮಾತನಾಡಿ ಸಿದ್ದಪ್ಪ ಎಸ್ ಹೊಟ್ಟಿ ಅವರು ದೆಹಲಿ ನೆಪೆಡ್ ಸಂಸ್ಥೆಯ ಮತ್ತ ನೂತನವಾಗಿ ಆಯ್ಕೆಯಾದ ಎನ್ ಎಚ್ ಆರ್ ಡಿ ಎಪ್ ಸಂಸ್ಥೆಯ ವತಿಯಿಂದ ಬರುವ ಸವಲತ್ತುಗಳನ್ನು ನಮ್ಮ ಗಿರಿ ಜಿಲ್ಲೆಗೆ ತರುವಂತಹ ಕೆಲಸ ಆಗಬೇಕು ನಮ್ಮ ಸ್ಥಳೀಯ ಸಹಕಾರ ಸಂಘಗಳಿಗೆ ಆರ್ಥಿಕ ಶಕ್ತಿ ತುಂಬುವಂತಹ ಕೆಲಸ ತಾವು ಮಾಡಬೇಕು ಎಂದು ಹೇಳಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿದ್ದಪ್ಪ ಎಸ್ ಹೊಟ್ಟಿ  ನಾನು ಸಹಕಾರ ಕ್ಷೇತ್ರದಲ್ಲಿ ಇಂದು ಈ ಮಟಕ್ಕೆ ಹೋಗಲು ದಿವಂಗತ ಸದಾಶಿವರೆಡ್ಡಿ ಕಂದಕೂರ ಅವರ ಆಶಿರ್ವಾದದಿಂದ ನಾನು ಸಹಕಾರ ಕ್ಷೇತ್ರದಲ್ಲಿ ಬೇಳೆಯಲು ಸಾದ್ಯವಾಗಿದೆ ಎಂದು ಹೇಳಿದರು.  ನಾನು ತಾಲೂಕು ಒಕ್ಕಲುತನ ಹುಟ್ಟವಳಿ ಮಾರಟ ಸಹಕಾರ ಸಂಘದ ಅಧ್ಯಕ್ಷರಾಗಿ ನಿರ್ದೇಶಕರಾಗಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ. ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ. ಇನ್ನೂ ಅನೇಕ ಸಂಘಗಳಲ್ಲಿ ಹುದ್ದೆಯನ್ನು ನಿಭಾಯಿಸಲು ನಿಮ್ಮೇಲ್ಲರ ಸಹಕಾರದಿಂದ ಸೇವೆ ಮಾಡುತ್ತಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ಕಲಬುರಗಿ ಹಾಗೂ ಯಾದಗಿರಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಪವನ ಕುಮಾರ. ಅಯ್ಯಣ್ಣ ಹುಂಡೇಕಾರ.ಪ್ರಕಾಶ ಅಂಗಡಿ ಕನ್ನೆಳ್ಳಿ. ಆರ್ ಮಾಹದೇವಪ್ಪಗೌಡ ಅಬ್ಬೆತುಮಕುರ. ಬಸವಂತ್ರಾಯ ಮಾಲಿಪಾಟೀಲ್. ಬಸವರಾಜ ಮೊಟ್ನಳ್ಳಿ. ಡಾ. ಭೀಮರಾಯ ಲಿಂಗೇರಿ.ಡಾ. ಎಸ್ ಎಸ್ ನಾಯಕ. ಚೆನ್ನಪ್ಪ ಠಾಣಗುಂದಿ, ಸೂಗಪ್ಪ ಪಾಟೀಲ್, ಅಮರಣ್ಣಗೌಡ ಗಡ್ಡೆಸೂಗೂರು, ವೈಜನಾಥ ತುಮಕೂರು, ನಾಗೇಂದ್ರ ಜಾಜಿ. ವಿ ಎಸ್ ಜಾಕಾಮಠ. ವೀರಭದ್ರಯ್ಯ ಮೋಟಾರ. ಶರಣಪ್ಪ ಗುಳಗಿ. ನಾಗಪ್ಪ ಸಜ್ಜನ. ಮಲ್ಲಿನಾಥ ಆಯರಕರ್. ಶೇಖರ ಅರಳಿ. ಲಕ್ಮೀನಾರಯಣ. ಅಯ್ಯಣ್ಣ ಗೌಡ ಕ್ಯಾಸಪನಳ್ಳಿ. ದೇವರಾಜ ವರ್ಕನಳ್ಳಿ,  ಸುಜಾತ ಮಠ.ರೇಖಾ ಮ್ಯಾಗೇರಿ. ಮಲ್ಲು ಸ್ವಾಮಿ,ಸಿದ್ದಪ್ಪ ಹೊಟ್ಟಿಯ ಆತ್ಮೀಯ ಬಳಗದಿಂದ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

  • ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

    ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

    ಗುರುಮಠಕಲ್: ತಾಲೂಕಿನ ಬೋರಾಬಂಡ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಅ.15 ಶುಕ್ರವಾರದಂದು ಎರಡನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್. ಎಲ್. ಟಿ ದೇವಸ್ಥಾನದ ವ್ಯವಸ್ಥಾಪಕ ನರೇಂದ್ರ ರಾಠೋಡ್ ಹೇಳಿದರು.

    ಪಟ್ಟಣದ ಎಸ್.ಎಲ್.ಟಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 5:30ಕ್ಕೆ ಸುಪ್ರಭಾತ ಸೇವೆ. 6:30ಕ್ಕೆ ಪಂಚಾಮೃತ ಹಾಗೂ ಅಲಂಕಾರ ಸೇವಾ ಮಹಾಪೂಜೆ, 9:30ಕ್ಕೆ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಾರಂಭ, 11.ಗಂ ರಥೋತ್ಸವ ನಂತರ ಮಹಾನೈವೇದ್ಯ, ಮಹಾ ಮಂಗಳಾರತಿ, ತದನಂತರದಲ್ಲಿ ತೀರ್ಥಪ್ರಸಾದವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

    ಶ್ರೀ ಕೃಷ್ಣ ಜನೋತ್ಸವ ಪ್ರಯುಕ್ತ ಅ. 17ರಂದು ಬೆಳಗ್ಗೆ 9-00ಕ್ಕೆ ಬೋಡಬಂಡ ಗ್ರಾಮದ ಶ್ರೀ ಹನುಮಾನ ದೇವಸ್ಥನದಿಂದ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದವರೆಗೆ ಶ್ರೀಕೃಷ್ಣ ದೇವರ ಪಲ್ಲಕ್ಕಿ ಉತ್ಸವ ಜೊತೆಗೆ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಮಹಾದ್ವಾರದ ಹತ್ತಿರ ಮೊದಲನೆಯ ಮೊಸರಿನ ಗಡಿಗೆ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನ ಸನ್ನಿಧಿಯಲ್ಲಿ ಎರಡನೇ ಮೊಸರಿನ ಗಡಿಗೆ ಹೊಡೆದು, ಬಣ್ಣದ ಓಕುಳಿ ಆಡಲಾಗುವುದು ಎಂದು ಅವರುತಿಳಿಸಿದರು.

    ಶ್ರೀ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ಮೋ.8885011111, 7021261844 ಸಂಖ್ಯೆಗೆ ಕರೆಮಾಡಿ ಹೆಸರನ್ನು ನೊಂದಾಯಿಸಬೇಕು ಹಾಗೂ ಕಡ್ಡಾಯವಾಗಿ ದಂಪತಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಅವರು ವಿನಂತಿಸಿಕೊಂಡರು.

    ಈ ಸಂಧರ್ಭದಲ್ಲಿ ಬಂಜಾರ ಸಮುದಾಯದ ಮುಖಂಡ ಕಾಶಿನಾಥ ರಾಠೋಡ್, ಶರಣಪ್ಪ, ಹಫೀಜ್ ಮಡ್ಕಿ ಉಪಸ್ಥಿತರಿದ್ದರು.

  • ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

    ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

    ಸತ್ಯಕಾಮ ವಾರ್ತೆ ಯಾದಗಿರಿ:

    ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಠಾಣಾಧಿಕಾರಿ ಮಂಜನಗೌಡ ರಕ್ಷಾ ಬಂಧನ ಸ್ವೀಕರಿಸಿ ಮಾತನಾಡಿದ ಅವರು ಹಬ್ಬವು ಜಾತಿ,ಬೇಧ ಹೋಗಲಾಡಿಸಿ ಸಹೋದರತೆಯ ಭಾವವನ್ನು ಬಿಂಬಿಸುವುದಾಗಿದೆ. ನಮ್ಮ ದೇಶದಲ್ಲಿ ಸಂಬಂಧಗಳಿಗಿರುವ ಮಹತ್ವ ಜಗತ್ತಿನ ಯಾವ ದೇಶದಲ್ಲಿಯೂ ಕಂಡು ಬರುವುದಿಲ್ಲ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್ ಮಾತನಾಡಿ ಅಣ್ಣತಂಗಿಯರ ಹಬ್ಬ, ಅಕ್ಕತಮ್ಮಂದಿರ ಹಬ್ಬ. ಅಕ್ಕತಂಗಿಯರ ರಕ್ಷಣೆಗಾಗಿ ನಡುಕಟ್ಟಿ ನಿಲ್ಲುವ ಅಣ್ಣತಮ್ಮಂದಿರನ್ನು ಪ್ರೀತಿಯಿಂದ ಹರಸಿ ಹಾರೈಸುವ ಹಬ್ಬ. ದೇಶದಾದ್ಯಂತ ಈ ಹಬ್ಬವನ್ನು ಎಲ್ಲ ಅಕ್ಕತಂಗಿಯರು ತಮ್ಮ ಅಣ್ಣತಮ್ಮಂದಿರಿಗಾಗಿ ಆಚರಿಸುತ್ತಾರೆ. ಅಣ್ಣತಮ್ಮಂದಿರ ಕ್ಷೇಮ ಅವರ ಆರೋಗ್ಯ ಆಯಸ್ಸು ಚೆನ್ನಾಗಿರಲೆಂದು ಪ್ರಾರ್ಥಿಸುತ್ತಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವೀಣಾ ಮೋದಿ,ಪ್ರಧಾನ ಕಾರ್ಯದರ್ಶಿ ರಮಾದೇವಿ ಕಾವಲಿ, ಕಾರ್ಯದರ್ಶಿ ಶಕುಂತಲಾ ಗುಜನೂರು,ಉಪಾಧ್ಯಕ್ಷೆ ಮಂಜುಳಾ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು..

  • ಕಲೆ ಸಂಸ್ಕೃತಿ ಬೆಳೆಸೋಣ: ಮಹಾವೀರ ಲಿಂಗೇರಿ

    ಕಲೆ ಸಂಸ್ಕೃತಿ ಬೆಳೆಸೋಣ: ಮಹಾವೀರ ಲಿಂಗೇರಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಸಂಸ್ಕೃತಿಯ ನಾಡೆಂದು ಹೆಸರು ವಾಸಿಯಾಗಿರುವ ಭಾರತ ಸಂಸ್ಕೃತಿ ನೆಲದಲ್ಲಿ ಜನಿಸಿದ ನಾವೆಲ್ಲರೂ ನಾಡಿನ ಕಲೆ ಸಂಸ್ಕೃತಿ ಸಾಹಿತ್ಯವನ್ನು ಬೆಳೆಸೋಣ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಜಿಲ್ಲಾಧ್ಯಕ್ಷ ಮಹಾವೀರ ಲಿಂಗೇರಿ ಹೇಳಿದರು.

     ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದ ಸಮನ್ವಯ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿರುವ ಜಾನಪದ ಜಾತ್ರೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು, ರೈತರ ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಪ್ರದರ್ಶಿಸಿ ಪ್ರದರ್ಶಿಸುವ ಒಂದು ಸುವರ್ಣ ವೇದಿಕೆ ಸಂಘ-ಸಂಸ್ಥೆಗಳು ಮಾಡಲ್ಪಟ್ಟಿವೆ ಹಾಗಾಗಿ ಪ್ರತಿಯೊಬ್ಬರೂ ನಾಡಿನ ಕಲೆ ಸಂಸ್ಕೃತಿಯನ್ನು ಎತ್ತಿ ಹಿಡಿಯುವಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದರು.
    ಸಮನ್ವಯ ಸೇವಾ ಸಂಸ್ಥೆ ಹಲವು ವರ್ಷದಿಂದ ಸಮಾಜ ಸೇವೆಯನ್ನು ಮಾಡುತ್ತಾ ಬಂದಿದೆ, ಕಲಾವಿದರನ್ನು ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯವಾಗಿದೆ, ಶಿಕ್ಷಣದ ಜೊತೆಗೆ ಕಲೆ ಸಂಸ್ಕೃತಿ ಬೆಳೆಸಲು ಇಂತಹ ಸಂಘ ಸಂಸ್ಥೆಗಳು ಜೀವಂತವಾಗಿವೆ, ಇಂತಹ ಸಂಸ್ಥೆಗಳಿಗೆ ಸರಕಾರದಿಂದ ಸಹಾಯ ಧನ ಪಡೆದುಕೊಂಡು ದೊಡ್ಡ ಮಟ್ಟದ ಸೇವೆಯನ್ನು ಮಾಡಲಿ ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಾಬು ಚೌಹಾನ್ ಪ್ರಾಸ್ತವಿಕ ನುಡಿಗಳು.

    ಈ ಸಂದರ್ಭದಲ್ಲಿ ರೈತ ಸೇನೆಯ ತಾಲೂಕು ಉಪಾಧ್ಯಕ್ಷ ತಾಯಪ್ಪ ನಾಯಕ, ಸಂಸ್ಥೆಯ ಅಧ್ಯಕ್ಷ ದೇವಿಂದ್ರ ಧೋತ್ರ, ಭೀಮಾ ಜ್ಯೋತಿ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಭೀಮಶಂಕರ ಎಂ.ಯರಗೋಳ, ಮುಖ್ಯ ಗುರು ಲಕ್ಷ್ಮಿಕಾಂತ್, ಚನಬಸಪ್ಪ, ನಿವೃತ್ತ ಮುಖ್ಯಗುರು ಚಂದ್ರಪ್ಪ ಗುಂಜಾನೂರ್, ಮುಖ್ಯ ಗುರು ಶ್ರೀಮತಿ ಕಲ್ಪನಾ, ಎಸ್‌.ಡಿ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದುರ್ಗಪ್ಪ ಪೂಜಾರಿ, ಸಾಬಣ್ಣ ಜೋಗಿ ಗ್ರಾ.ಪಂ.ಕಾರ್ಯದರ್ಶಿ ರವಿ ಮುಂತಾದವರಿದ್ದರು.

    ಈ ವೇಳೆ ವೇಳೆಯಲ್ಲಿ ಗೌತಮ್ ಬುದ್ಧ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ಹಾಗೂ ಭರತನಾಟ್ಯ, ಜಾನಪದ ಗೀತೆ, ಜಾನಪದ ಸಾಮೂಹಿಕ ನೃತ್ಯ, ಗೀತ ಗಾಯನ ಮುಂತಾದವು ಕಲೆಗಳನ್ನು ಪ್ರದರ್ಶಿಸಿದರು ನೋಡುಗರ ಗಮನ ಸೆಳೆದವು.
  • 14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ 

    14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ 

    ಸತ್ಯಕಾಮ ವಾರ್ತೆ ಯಾದಗಿರಿ:

    ತಾಲ್ಲೂಕಿನ ಮುಂಡರಗಿ ಗ್ರಾಮ ಹೊರವಲಯದ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯಿಂದ 14 ನೇ ವರ್ಷದ ಜಾತ್ರೆ ಜರುಗಿತು.

    ಮಠದ ಪೀಠಾಧಿಪತಿ ಶಿವ ಚಂದ್ರಶೇಖರ ಮುತ್ಯಾ ಮಾತನಾಡಿ ಪ್ರತಿವರ್ಷದಂತೆ ಮಠದಲ್ಲಿ ಜಾತ್ರೆ ನಡೆಯಲಿದ್ದು, ಸಾವಿರಾರು ಭಕ್ತರು ದೂರದ ಊರುಗಳಿಂದ ಆಗಮಿಸಿ ನಾಗಲಿಂಗೇಶ್ವರ ದರ್ಶನ ಮಾಡುವರು. ಜಾತ್ರೆಯ ಪೂರ್ವದಿನ ರಾತ್ರಿ ಭಜನೆ ಕಾರ್ಯಕ್ರಮ, ಬೆಳಿಗ್ಗೆ ಮುಂಡರಗಿ ಗ್ರಾಮದ ದ್ಯಾಮವ್ವ ದೇವಸ್ಥಾನಕ್ಕೆ ತೆರಳಿ ಉಡಿ ತುಂಬುವ ಕಾರ್ಯಕ್ರಮ, ಗಂಗಾ ಸ್ನಾನ, ನಾಗರ ಹುತ್ತಕ್ಕೆ ಪೂಜೆ, ಹಾಗೂ ನಿಜ ನಾಗರಕ್ಕೆ ಹಾಲುಣಿಸುವುದು ವಾಡಿಕೆ. ಜಾತ್ರೆಯಲ್ಲಿ ಹಲಗೆ ಕುಣಿತ, ಡೊಳ್ಳು ಕುಣಿತ, ಕೈ ಕುಸ್ತಿ ಪಂದ್ಯಗಳು ಜರುಗುತ್ತವೆ, ವಿಶೇಷ ಪೂಜೆಗಳು ನೆರವೇರುತ್ತವೆ ಎಂದರು.

    ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ್ ಮಾತನಾಡಿ ನಮ್ಮ ಸನಾತನ ಧರ್ಮವು ಮನುಷ್ಯನಿಗೆ ಭಯ, ಭಕ್ತಿ, ನಂಬಿಕೆ, ದಾನ, ಧರ್ಮ, ಸಂಸ್ಕೃತಿ, ಸಂಸ್ಕಾರ ಗಳು ಇದ್ದಾಗಲೇ ಮನುಷ್ಯನ ಜನ್ಮ ಸಾರ್ಥಕವಾಗುತ್ತದೆ, ನಾವು ಕೂಡ ಹಲವು ಜಾತ್ರೆಗಳಲ್ಲಿ ಪಾಲ್ಗೊಳ್ಳುತ್ತೇವೆ ವಿಶೇಷವಾಗಿ ನಾಗರ ಪಂಚಮಿ ಪ್ರಯುಕ್ತ ನಮ್ಮ ಭಾಗದ ಕಂದಕೂರು ಗ್ರಾಮದ ಬೆಟ್ಟದ ಕೊಂಡಮ್ಮಾಯಿ ಜಾತ್ರೆವೇಳೆಯಲ್ಲಿ ರಾಶಿಗಟ್ಟಲೇ ಸಾವಿರಾರು ಹಾವು, ಚೇಳುಗಳು ಹೊರಬಂದು, ಜನರೆಲ್ಲ ಅವುಗಳಿಂದ ಆಟವಾಡುವುದು ಸಾಮಾನ್ಯ ಮಾತಲ್ಲ. ಅಂತೆಯೇ ಹುತ್ತದಲ್ಲಿನ ನಿಜ ನಾಗರ ಹಾವನ್ನು ಹೊರತೆಗೆದು ಹಾಲುಣಿಸುವುದು ದೈವತ್ವದ ಮಾತು ಎಂದರು.

    ಕಾರ್ಯಕ್ರಮದಲ್ಲಿ ಹಳಿಗೇರ ಪೀಠದ ಹಣಮಂತ್ರಾಯ ಮುತ್ಯಾ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ರಮೇಶ್ ಕೋಟಿಮನಿ, ಶ್ರೀಧರ್ ಮಹಾಂತೇಶ್, ಅಶೋಕ್ ರೆಡ್ಡಿ ಎಲೇರಿ, ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಈ ವೇಳೆಯಲ್ಲಿ ಬಿಜೆಪಿ ಯುವ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ್ ಸ್ವಾಮಿಗಳಿಂದ ಆಶೀರ್ವಾದ ಪಡೆದರು.