Category: Cultural

  • ಉತ್ತಮ ಶಿಕ್ಷಣದ ಜೊತೆಗೆ ಮೌಢ್ಯತೆಯ ಜಾಗೃತಿ ಅತ್ಯಗತ್ಯ – ಸಿಕಿಂದ ದೊಡ್ಮನಿ

    ಉತ್ತಮ ಶಿಕ್ಷಣದ ಜೊತೆಗೆ ಮೌಢ್ಯತೆಯ ಜಾಗೃತಿ ಅತ್ಯಗತ್ಯ – ಸಿಕಿಂದ ದೊಡ್ಮನಿ

    ಸತ್ಯಕಾಮ ವಾರ್ತೆ ಸಿರವಾರ:

    ತಳ ಸಮುದಾಯದ ಯುವಜನರಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ಮೌಢ್ಯ ಹೋಗಲಾಡಿಸಲು ಜಾಗೃತಿ ಅತ್ಯಗತ್ಯ ಎಂದು ಮಾನವ ಬಂಧುತ್ವ ವೇದಿಕೆಯ ಗ್ರಾಮ ಸಂಚಾಲಕ ಸಿಕಿಂದ ದೊಡ್ಡಮನಿ ಹೇಳಿದರು.

    ತಾಲೂಕಿನ ಅತ್ತನೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾನವ ಬಂದತ್ವ ವೇದಿಕೆಯಿಂದ ಬಸವ ಪಂಚಮಿ ಆಚರಣೆ ಮಾಡಲಾಯಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೌಢ್ಯದಿಂದ ಜ್ಞಾನದತ್ತ, ಕತ್ತಲಿಂದ ಬೆಳಕಿನೆಡೆಗೆ ಎನ್ನುವ ಮಹತ್ತರ ಯೋಜನೆಗಳು ವೇದಿಕೆಯ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ. ಯುವ ಪೀಳಿಗೆ ಶಿಕ್ಷಣ ಪಡೆದು ಮೌಢ್ಯ ಧಿಕ್ಕರಿಸಿ ಪ್ರಜ್ಞಾವಂತ ಸಮಾಜ ಕಟ್ಟಲು ಮುಂದಾಗಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಸಣ್ಣ ಈರಣ್ಣ, ಕೆ ದುರ್ಗಣ್ಣ, ಅಯ್ಯಪ್ಪ ಮ್ಯಾದರ್, ಗ್ರಾಮ ಪಂಚಾಯತ ಸದಸ್ಯ ಅಂಬರೀಶ ಜಗ್ಲಿ, ಬೆಟ್ಟಪ್ಪ, ಕಸ್ತೂರಿ, ಮಂಜುನಾಥ ನಾಯಕ, ಪಂಪಾಪತಿ ನಾಯಕ ಶಿಕ್ಷಕರಾದ ಮಂಜುನಾಥ, ಗುಂಡೇಶ ಹಾಗೂ ವಿದ್ಯಾರ್ಥಿಗಳಿದ್ದರು.

  • ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

    ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ:

    ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

    ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ. ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

    ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

    ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್.ಬಿ.ವಡವಡಗಿ (ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಜುಲೈ 30 ರಂದು ಕುಂಟೋಜಿಗೆ ಬಸವಣ್ಣ ಹಾಗೂ ಸಂಗಮೇಶ್ವರನ ತೇರು ಆಗಮನ 

    ಜುಲೈ 30 ರಂದು ಕುಂಟೋಜಿಗೆ ಬಸವಣ್ಣ ಹಾಗೂ ಸಂಗಮೇಶ್ವರನ ತೇರು ಆಗಮನ 

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ: 

    ಅಮರ ಶಿಲ್ಪಿ ಜಕಣಾಚಾರಿಯವರಿಂದ ನಿರ್ಮಿಸಲಾಗಿದೆ ಎಂದು ಪ್ರತೀತಿ ಹೊಂದಿರುವ ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಸಂಗಮೇಶ್ವರ ದೇವಸ್ಥಾನದ ಜಾತೆಯು ಪ್ರತಿ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ 5 ದಿನಗಳವರೆಗೆ ನಡೆಯುತ್ತಾ ಬಂದಿದೆ.

    ಈ ವರ್ಷ ಇಲ್ಲಿನ ಜಾತ್ರೆಯು ಬಹಳ ವಿಶೇಷವಾಗಿ ನಡೆಯಲಿದೆ. ಈ ದೇವಸ್ಥಾನಕ್ಕೆ ಈ ವರ್ಷದಿಂದ ಅಂದರೆ ಮೊಟ್ಟ ಮೊದಲಬಾರಿಗೆ ಕುಂಟೋಜಿ ಬಸವೇಶ್ವರ (ನಂದಿ) ಹಾಗೂ ಸಂಗಮೇಶ್ವರ ರಥೋತ್ಸವ ಜರುಗಲಿದೆ. ಕುಂಟೋಜಿ ಗ್ರಾಮದ ಮತ್ತು ಸುತ್ತಮುತ್ತಲಿನ ಊರುಗಳು, ನಗರ ಮತ್ತು ಬೇರೆ ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬಸವಣ್ಣನ ಭಕ್ತರು ಬಹಳ ಭಕ್ತಿಪೂರ್ವಕವಾಗಿ ದೇಣಿಗೆ ನೀಡಿ, ಕೊಪ್ಪಳದ ಜಕಣಾಚರ‍್ಯ ಮತ್ತು ಅಮೋಘವರ್ಷ ನೃಪತುಂಗ ಪ್ರಶಸ್ತಿ ವಿಜೇತರಾದ ರಥಶಿಲ್ಪಿ ಮಲ್ಲಪ್ಪ ಬಡಿಗೇರ ಇವರು ತಮ್ಮ ಎಂ.ಜಿ.ರಥಶಿಲ್ಪಿ ಕಲಾ ಕೇಂದ್ರದಲ್ಲಿ ಸಂಪೂರ್ಣ ಉಚಿತವಾಗಿ ನಿರ್ಮಿಸಿರುವ, ಸಾಗುವಾಣಿ ಮರದ ರಥವನ್ನು ಇದೇ ಜುಲೈ 30 ರಂದು ತಾಲೂಕಾ ಕೇಂದ್ರವಾದ ಮುದ್ದೇಬಿಹಾಳ ನಗರದ ಶ್ರೀದೇವಿ ಪಿಲೇಕೆಮ್ಮ ದೇವಿ ದೇವಸ್ಥಾನದಿಂದ ಕುಂಟೋಜಿ ಗ್ರಾಮದವರೆಗೆ ಭವ್ಯ ಮೆರವಣಿಗೆಯ ಮುಖಾಂತರ ಸ್ವಾಗತಿಸಲಿದ್ದಾರೆ.

    ಜುಲೈ 27 ರಂದು ರಥವನ್ನು ತರಲು ಕುಂಟೋಜಿಯಿAದ ಭಕ್ತರು ಮತ್ತು ದೇವಸ್ಥಾನ ಕಮೀಟಿಯವರು ಟ್ರಾö್ಯಕ್ಟರ್ ಮುಖಾಂತರ ಕೊಪ್ಪಳಕ್ಕೆ ತೆರಳಿಲಿದ್ದಾರೆ. ಜುಲೈ 29 ರಂದು ಬೆಳಿಗ್ಗೆ ಕೊಪ್ಪಳದಿಂದ ರಥವನ್ನು ತೆಗೆದುಕೊಂಡು ಹೊರಟು ಅಂದೇ ಸಂಜೆ ಮುದ್ದೇಬಿಹಾಳ ನಗರದ ಶ್ರೀ ದೇವಿ ಪಿಲೇಕೆಮ್ಮ ದೇವಾಸ್ಥಾನಕ್ಕೆ ಬಂದು ತಲುಪಲಿದೆ. ಮರುದಿನ 30 ರಂದು ಬೆಳಿಗ್ಗೆ ಪ್ರಥಮ ರಥವನ್ನು ಮತ್ತು ಅದರ ಜೊತೆಗೆ 21 ಕಿಲೋ ತೂಕದ ಬಸವಣ್ಣ ಮತ್ತು ಸಂಗಮೇಶ್ವರನ ಬೆಳ್ಳಿಯ ಮುಖವಾಡಗಳನ್ನು, ನಾಗರ ಹೆಡೆಯನ್ನು, ತೇರು ಎಳೆಯುವ ಹಗ್ಗ, ತೇರಿಗೆ ರುದ್ರಾಕ್ಷಿ ಮಾಲೆ, ಕಳಸ, ಇವುಗಳನ್ನು ಕುಂಟೋಜಿ ಮತ್ತು ಸುತ್ತಮುತ್ತಲ ಗ್ರಾಮಗಳ ಮಹಿಳಾ ಸಂಘಗಳ ನೇತೃತ್ವದಲ್ಲಿ ಸುಮಂಗಲೆಯರಿAದ ಭವ್ಯ ಕುಂಭ ಮೆರವಣಿಗೆ, ಮತ್ತು ಡೊಳ್ಳು, ಕರಡಿಮಜಲು, ಬೆಂಡುಬಾಜಿ, ಕೋಲಾಟ ನೃತ್ಯ ಸಂಗೀತಗಳ ಸಹಿತ ಸಾಂಪ್ರದಾಯಿಕ ವಾದನಗಳ ಭವ್ಯ ಮೆರವಣಿಗೆಯ ಜೊತೆಗೆ ಕುಂಟೋಜಿ ಗ್ರಾಮಕ್ಕೆ ಕರೆತರಲಾಗುತ್ತದೆ. ಮರುದಿನ ಜುಲೈ 31 ರಂದು ಬೆಳಿಗ್ಗೆ ಗೋಧೂಳಿ ಸಮಯದಲ್ಲಿ ಮುತೈದೆಯರಿಗೆ ಉಡಿ ತುಂಬುವ ಮೂಲಕ ರಥ ಜೋಡಿಸುವ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಎಂದು ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು.

    ಅವರು ಶನಿವಾರ ಬೆಳಿಗ್ಗೆ ಕುಂಟೋಜಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಜಾತ್ರಾ ಮಹೋತ್ಸವ ಹಾಗೂ ರಥವನ್ನು ತರುವ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ನಾಗಲಿಂಗಯ್ಯ ಮಠ, ರಥದ ಸ್ವಾಗತದ ಸಂದರ್ಭದಲ್ಲಿ ನಡೆಯವಬೇಕಾದ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿ ಮಾತನಾಡಿದರು.

    ಈ ಸಂದರ್ಭದಲ್ಲಿ ದೇವಸ್ಥನ ಕಮೀಟಿಯ ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೀಕಾರ, ರಾಮಣ್ಣ ಹುಲಗಣ್ಣಿ, ಮಲ್ಲಿಕಾರ್ಜುನ ಹುಲಬೆಂಚಿ, ಗುರುಪಾದಪ್ಪ ಹೆಬ್ಬಾಳ, ಅಶೋಕ ಕಾಟಿ, ಈರನಗೌಡ ಬಿರಾದಾರ, ಬಸಲಿಂಗಪ್ಪಗೌಡ ಬಿರಾದಾರ, ಶರಣಬಸಪ್ಪ ಪಲ್ಲೇದ, ಸಂಗಮೇಶ ಕುಂಬಾರ, ಸಂಗನಗೌಡ ಪಾಟೀಲ, ಗುರುಪಾದಪ್ಪ ಹೆಬ್ಬಾಳ, ಶಿವಲಿಂಗಪ್ಪ ಗಸ್ತಿಗಾರ, ಬಸಪ್ಪ ಹೂಗಾರ, ಪ್ರಕಾಶ ಹೂಗಾರ, ಸಂಗಯ್ಯ ಮಠ, ಮಮಾತೆಪ್ಪ ಯರಝರಿ, ಮಲ್ಲನಗೌಡ ಬಿರಾದಾರ, ರಾಚಯ್ಯ ಮಠ, ಸಂಗಯ್ಯ ಮಠ, ಪವಾಡೆಪ್ಪ ತಾಂಬ್ರಳ್ಳಿ, ಸಂತೋಷ ಬಿರಾದಾರ, ಶಿವಪ್ಪ ಕೋಲಕಾರ, ಅಂಬ್ರೇಶ ಕಾಟಿ, ಶರಣಬಸ್ಸು ಫಣೇದಕಟ್ಟಿ, ಶರಣಗೌಡ ಬಿರಾದಾರ, ಮಂಜೂ ಅಬ್ಬಿಹಾಳಮಠ, ಶಿವು ಅಂದೇಲಿ, ಸಂಗಮೇಶ ಯರಝರಿ ಮತ್ತೀತರರು ಇದ್ದರು.

  • ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

    ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

    ಸತ್ಯಕಾಮ ವಾರ್ತೆ ಶಹಾಪುರ:
    ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕಲೆಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಅವುಗಳನ್ನು ಮುನ್ನೆಲೆಗೆ ತರಲು ಸಂಘ ಸಂಸ್ಥೆಗಳು ಸಾಕಷ್ಟು ಶ್ರಮಿಸುತ್ತಿವೆ ಎಂದು ಗುಂಬಳಾಪುರ ಮಠದ ಯೋಗಿರತ್ನ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.

    ನಗರದ ಗುಂಬಳಾಪುರ ಮಠದ ಕಲ್ಯಾಣ ಮಂಟಪದಲ್ಲಿ ಪೂಜ್ಯ ಶ್ರೀ ಚನ್ನಬಸವ ಸಂಗೀತ ಮತ್ತು ಸಾಂಸ್ಕೃತಿಕ,ಸಾಹಿತ್ಯ,ಜನಪದ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಾದಗಿರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸಂಗೀತ ಮತ್ತು ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿಗೆ ಜಾಗೃತಿ ಮೂಡಿಸುವ ಬೀದಿ ನಾಟಕಕಲಾವಿದರು, ಹಾಗೂ ಟಿವಿ,ಧಾರವಾಹಿಗಳಿಂದ ಕಲೆ ಮತ್ತು ಕಲಾವಿದರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು,ಇಂಥಹ ಸಂದರ್ಭದಲ್ಲಿ ಹಲವಾರು ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸಿ ಕೊಡುವುದರ ಜೊತೆಗೆ ಕಲೆಯನ್ನು ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಈ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದರು.

    ವೀಡಿಯೊ: ಲಂಚ ಪಡೆಯುವ ಪಿಡಿಓಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್| Satyakam News

    ಈ ಸಮಾರಂಭದ ವೇದಿಕೆ ಮೇಲೆ ಇನ್ನೋರ್ವ ಅತಿಥಿಗಳು ಹಾಗು ಸಾಹಿತಿ,ಸಂಘಟಕ,ಪತ್ರಕರ್ತ, ಬಸವರಾಜ ಶಿಣ್ಣೂರ ಮಾತನಾಡಿ, ಸಂಗೀತಕ್ಕೆ ಅಘಾತವಾದ ಶಕ್ತಿ ಇದೆ, ಸಂಗೀತಕ್ಕೆ ಈ ಪ್ರಪಂಚದಲ್ಲಿ ತಲೆ ತೂಗದವರೇ ಇಲ್ಲ,ಸಂಗೀತ ಆಲಿಸುವುದರಿಂದ, ಮನಸ್ಸಿಗೆ ಮುದ ನೀಡುವುದರ ಜೊತೆಗೆ, ಪಾರ್ಶುವಾಯು ನಂತಹ ಮಹಾ ರೋಗಗಳು ವಾಸಿ ಆಗುತ್ತದೆ ಎಂಬುದನ್ನು ವಿಜ್ಞಾನಿಗಳೆ ಸ್ಪಷ್ಟಪಡಿಸಿದ್ದಾರೆ,ಎಂದು ಹೇಳಿದರು. ಆದ್ದರಿಂದ ಕಲೆಯನ್ನು ಪ್ರೋತ್ಸಾಹಿಸುವ ಕೆಲಸ ನಾವು ನೀವೆಲ್ಲರೂ ಮಾಡಬೇಕಾಗಿದೆ ಎಂದರು.

    ಈ ಸಮಾರಂಭದ ವೇದಿಕೆಯ ಮೇಲೆ.ಸುರಪುರ ಪತ್ರಿಮಠದ ಶಿವಕುಮಾರ, ಮೆಹಬೂಬ್ ಸಾಬ್ ತಡಬಿಡಿ, ರಂಗಭೂಮಿ ಕಲಾವಿದ ಶ್ರೀನಿವಾಸ್ ದೋರನಹಳ್ಳಿ, ಸಂಗೀತ ಕಲಾವಿದ ಗುರುಪಾದ ಹುಣಸಿಗಿಡ, ಡಿ ಜೂನ್ ನೃತ್ಯ ಅಕಾಡೆಮಿ ಅಧ್ಯಕ್ಷರ ಲಕ್ಷ್ಮಿ ಕುಂಬಾರ,ಚಿದಾನAದಯ್ಯ ಚಿಕ್ಕಮಠ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು, ಈ ಸಂಸ್ಥೆಯ ಅಧ್ಯಕ್ಷರಾದ ಬೂದಯ್ಯ ಸ್ವಾಮಿ ಹಿರೇಮಠ, ಇನ್ನಿತರರು ಹಾಜರಿದ್ದರು. ನಂತರ ನೀನಾಸಮ್ ತರಬೇತಿ ಪಡೆದು ವಿದ್ಯಾರ್ಥಿಗಳಿಂದ ಟ್ಯಾಬ್ಲೆಟ್ ಎಂಬ ಸುಂದರ ಸಾಮಾಜಿಕ ಹಾಗೂ ಜಾಗೃತಿ ಕಿರು ನಾಟಕ ಜರುಗಿತು, ನಂತರದಲ್ಲಿ ಹಲವಾರು ಸಂಗೀತ, ನೃತ್ಯ,ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

  • ನಮ್ಮ ಸೇವೆ ಜನರು ಮೆಚ್ಚುವಂತಿರಬೇಕು:

    ನಮ್ಮ ಸೇವೆ ಜನರು ಮೆಚ್ಚುವಂತಿರಬೇಕು:

    ಸತ್ಯಕಾಮ ವಾರ್ತೆ ಯಾದಗಿರಿ:
    ಸರಕಾರಿ ಅಧಿಕಾರಿಗಳಿಗೆ ಅಧಿಕಾರ ಶಾಶ್ವತವಲ್ಲ, ಆದರೇ, ಅಧಿಕಾರ ಅವಧಿಯಲ್ಲಿ ನಾವು ಪ್ರಾಮಾಣಿಕ, ನಿಷ್ಠೆಯಿಂದ ಮಾಡುವ ಸೇವೆ ಸಲ್ಲಿಸುವ ಜತೆ ಜನಮಾನಸದಲ್ಲಿ ಸದಾ ನೆನಪಿರುವ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್.ಆರ್.ಲಕ್ಷ್ಮಿಪತಿ ಅವರು ಹೇಳಿದರು.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ೬೫೯ ಸ್ಥಳೀಯ ಸಮಿತಿ ವತಿಯಿಂದ ನಗರದ ಹೊಸಳ್ಳಿ ರಸ್ತೆಯಲ್ಲಿ ಇರುವ ಕೆಇಬಿ ಸಭಾ ಭವನದಲ್ಲಿ ನಡೆದ ಸುರಕ್ಷತಾ ಕಾರ್ಯಗಾರ ಸಂಘಟನಾ ಸಭೆ ಹಾಗು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಿಸ್ವಾರ್ಥ, ಸೇವೆ, ಸರಳತೆ ಗುಣಗಳು ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ನಿವು ಬೆಳೆಸಿದಂತ ನಾಯಕ ಇಂದು ಬೃಹತ್ ಆಗಿ ನೌಕರರ ಸಂಘದಲ್ಲಿ ಬೆಳೆದ ಶ್ರೀನಿವಾಸ ಅವರ ವ್ಯಕ್ತಿತ್ವ, ಕೆಲಸದ ಮಾದರಿ ಕುರಿತು ಗುಣಗಾನ ಮಾಡಿದ ಅವರು, ಯಾವುದೇ ನಾಯಕ ಬೆಳೆಯಲು ಅವರಲ್ಲಿ ನಾಯಕತ್ವದ ಗುಣಗಳ ಜತೆ ನಿಸ್ವಾರ್ಥ, ಪ್ರಮಾಣಿಕತೆ ಇರಬೇಕು ಎಂದರು.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ವೇತನ ಪರಿಷ್ಕೃಕಣೆ ಮಾಡಿ ಕೊಡಲು ಹೋರಾಟ ಮಾಡಿದೆ. ಸಂಘ ಬಲಿಷ್ಠವಾಗಿದೆ ಹಿಡಿದ ಕೆಲಸ ಮಾಡಿಯೇ ತೀರುತ್ತಾರೆ. ಎಂಬ ನಂಬಿಕೆಯ ಹೆಸರು ನಮ್ಮ ಸಂಘಕ್ಕೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಆಸ್ತಿ, ನೌಕರಿ ಸಂಪಾದನೆ ಮಾಡಬಹುದು ಆದರೆ ಯಾದಗಿರಿ ಶ್ರೀನಿವಾಸ ಅವರು ಎಲ್ಲರನ್ನು ವಿಶ್ವಸಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರ ಮಾರ್ಗದರ್ಶನ ಇಲಾಖೆ ಎಲ್ಲಾ ಸಿಬ್ಬಂದಿಗೆ ಅಗತ್ಯವಾಗಿದೆ ಎಂದು ಹೇಳಿದರು.

    ವಿದ್ಯುತ್ ಕ್ಷೇತ್ರ ಅತ್ಯಂತ ಸಮಸ್ಯೆಯಿಂದ ಕೂಡಿದೆ. ಬದಲಾದ ಸಂಸ್ಕರಣೆ ಮೂಲಕ ವಿದ್ಯುತ್ ಅವಲಂಬನೆ ಹೆಚ್ಚಾಗಲಿದೆ. ಎದೆ ಗುಂದದೆ ಇಲಾಖೆ ಕೆಲಸ ಮಾಡುತ್ತಿದೆ. ವಿದ್ಯುತ್ ಅವಘಡದಿಂದ ಸಾವನ್ನಪ್ಪುತ್ತಾರೆ, ಅಂಗವಿಲರಾಗುತ್ತಾರೆ. ಆದರೂ, ಸಾರ್ವಜನಿಕ ಕೆಲಸ ಬಿಟ್ಟು ಹೋಗಿಲ್ಲ ಎಂದು ಸಿಬ್ಬಂದಿಗಳ ಕಾರ್ಯಕ್ಷಮತೆ ಸಮರ್ಥಿಸಿಕೊಂಡರು. ವಿದ್ಯುತ್ ಕಾಯ್ದೆಯ ಖಾಸಗಿಕರಣ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಹೋರಾಡಲು ನಾವು ಸಂಘಟಿತರಾಗಿ, ಸಿದ್ದರಾಗಬೇಕು ಎಂದು ಸಲಹೆ ನೀಡಿದರು.
    ಸಂಘದ ಉಪಾಧ್ಯಕ್ಷ ಬಾಬು ಕೊರೆ ಮಾತನಾಡಿ, ಸಂಘಟನೆಯ ಮೂಲಕ ಎಲ್ಲಾ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಹಕಾರವಾಗಿದೆ ಎಂದು ಹೇಳಿದರು.

    ಕಾರ್ಮಿಕ ಮುಖಂಡ ಹಾಗೂ ಸಂಘದ ಕಾರ್ಯಧ್ಯಕ್ಷ ಶ್ರೀನಿವಾಸ ಅವರ ವಯೋನಿವೃತ್ತಿ ಹೊಂದಿದ್ದು,. ಇಲಾಖೆಯಲ್ಲಿ ಅವರು ಸಲ್ಲಿಸಿದ ಸೇವೆ ಅತ್ಯಂತ ಸಂತಸದ ಸಂಗತಿ ಇಲಾಖೆಗೆ ಇಂತಹ ಅಧಿಕಾರಿಗಳ ಸೇವೆ ಇನ್ನೂ ಅವಶ್ಯಕತೆ ಇದೆ ಎಂದು ಹೇಳಿದರು.

    ರಾಜ್ಯ ಪ್ರಧಾನ ಕಾರ್ಯದರ್ಶಿ ಬಲರಾಮ ಮಾತನಾಡಿ, ಸಭಾ ಭವನಕ್ಕೆ ಶ್ರೀನಿವಾಸ ಅವರ ಕೋಡುಗೆ ಅಪಾರವಾಗಿದೆ. ಅವರು ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದಲ್ಲಿ ಸಿಬ್ಬಂದಿಗಳು ನಡೆಯಬೇಕು ಎಂದು ಹೇಳಿದರು.

    ಖಚಾಂಚಿ ಮಂಜುನಾಥ, ಸಂಘಟನೆ ಕಾರ್ಯದರ್ಶಿ ಹಣಮಂತ ರೆಡ್ಡಿ, ಸ್ಥಳಿಯ ಸಮಿತಿ ಅಧ್ಯಕ್ಷರಾದ ಯಮುನಪ್ಪ ತನಿಕೆದಾರ ಚಂದಪ್ಪ, ಸುರೇಖಾ, ಸಹಾಯ ಕಾರ್ಯನಿರ್ವಾಹ ಅಭಿಯಂತರ ಮರೆಪ್ಪ ಕಡೆಕರ್, ಸಹಾಯಕ ಕಾರ್ಯ ನಿವಾಹಕ ಚಂದ್ರಕಾಂತ, ಮಾರಖಂಡೇಶ್ವರ, ರಾಜು ಪತ್ತಾರ್, ಮಹಾದೇವಪ್ಪ. ಸಂತೋಷ ಯಾದವ, ಇದ್ದರು.

  • ಜೀವನದಲ್ಲಿ ತಂದೆಯ ಕೈ ಹಿಡಿದರೆ, ಜಗತ್ತಿನಲ್ಲಿ ಬೇರೆ ಯಾವ ವ್ಯಕ್ತಿಯ ಕಾಲು ಹಿಡಿಯುವ ಅವಶ್ಯಕತೆ ಬರುವುದಿಲ್ಲ : ಸಜ್ಜನ್

     

    ಕಲಬುರಗಿ ನಗರದ ಭವಾನಿ ನಗರದಲ್ಲಿ ಬಬಲಾದ ಮಠದಲ್ಲಿದಲ್ಲಿ ಮಾತನಾಡುತ್ತ ಮನುಷ್ಯನ ಒಬ್ಬರಿಗೊಬ್ಬರ ಸಂಬಂಧಗಳು ಯಾವ ರೀತಿ ಇರಬೇಕೆಂದು ಕಳೆದ ಕೋವಿಡ್ ಸಂದರ್ಭದಲ್ಲಿ ನಾವೆಲ್ಲರೂ ಪಾಠ ಕಲಿತಿದ್ದೇವೆ. ಹುಟ್ಟು ಸಹಜ ಸಾವು ಅನಿವಾರ್ಯ ಹುಟ್ಟು ಸಾವಿನ ಮಧ್ಯ ಉತ್ತಮವಾದ ಜೀವನ ಸಾಗಿಸಿ ಒಳ್ಳೆಯ ಸಮಾಜ ನಿರ್ಮಿಸುವ ಕಾರ್ಯ ಮಾಡಬೇಕೆಂದು ಮಾರ್ಮಿಕವಾಗಿ ಹೇಳಿದರು. ಮುಖ್ಯ ಅತಿಥಿಗಳಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯಲ್ಲಿ  ಸೇವೆಗೈಯಿತ್ತಿರುವ ಸಂಜೀವಕುಮಾರ ಖೇಳಗಿ ಆಗಮಿಸಿದರು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಹಣಮಂತರಾಯ ಅಟ್ಟೂರ, ಸಂಗಮೇಶ ನಾಗೂರ, ಮಾಣಿಕ್ ಮಿರ್ಕಲ್, ಶರಣು ಜವಳಗಾ, ಸಿದ್ದಣ್ಣ ವಾಡಿ, ಗುರುರಾಜ ಹಸರಗುಂಡಗಿ, ಜಗನ್ನಾಥ ಸಜ್ಜನ, ಶಿವಶರಣಪ್ಪ ಮಾಲಿಪಾಟೀಲ, ಮಹೇಶ್ವರಿ ನಾಗೂರ ಸೇರಿದಂತೆ ಅನೇಕ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಹಿಂಗುಲಾಂಬಿಕಾ ಸೊಸೈಟಿಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

    ಹಿಂಗುಲಾಂಬಿಕಾ ಸೊಸೈಟಿಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

    ಕಲಬುರಗಿ :— ಇಂದಿನ ಕಂಪ್ಯೂಟರ್ ಯುಗದಲ್ಲಿ ಮೊಬೈಲ್, ಕಂಪ್ಯೂಟರ್ ಗಳ ಬಳಕೆ ಅವಶ್ಯಕತೆಗಿಂತ ಜಾಸ್ತಿ ಉಪಯೋಗಿಸಿ ಅವುಗಳನ್ನೇ ಅವಲಂಬಿಸಿ, ಒಂದು ವೇಳೆ ಅವುಗಳಿಂದ ನಾವು ದೂರ ಉಳಿದರೆ ನಮ್ಮ ಸರ್ವಸ್ವವನ್ನೇ ಕಳೆದುಕೊಳ್ಳುತ್ತೇವೆ ಎಂಬ ಮಟ್ಟಿಗೆ ಅನೇಕ ಯುವಕ ಯುವತಿಯರು ಅದರಲ್ಲಿಯೂ ವಿದ್ಯಾರ್ಥಿಗಳು ತೀರ್ಮಾನಕ್ಕೆ ಬಂದಿದ್ದಾರೆ . ಇಂತಹ ಸಂದಿಗ್ಧ ಸ್ಥಿತಿಯಲ್ಲಿಯೂ ಕೆಲವು ವಿದ್ಯಾರ್ಥಿಗಳು ಇವುಗಳಿಂದ ದೂರ ಉಳಿದು ಕೇವಲ ತಮ್ಮ ವಿದ್ಯಾಭ್ಯಾಸದಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡು ಪಿಯುಸಿ ದ್ವಿತೀಯ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತಮಟ್ಟದ ಅಂಕಗಳನ್ನು ಪಡೆದು ರಾಜ್ಯ ,ಜಿಲ್ಲಾಮಟ್ಟದ ಹಾಗೂ ಶಾಲೆಗೆ ,ಸಮಾಜಕ್ಕೆ, ಹಾಗೂ ಕುಟುಂಬಕ್ಕೆ ಕೀರ್ತಿ ತಂದಿದ್ದಾರೆಂದು ಶ್ರೀ ಎಂ ಜಿ ಘನಾತೆ ಅಧ್ಯಕ್ಷರು ಶ್ರೀ ಹಿಂಗುಲಾಂಬಿಕಾ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಹಾಗೂ ಭಾವಸಾರ್ ಛತ್ರಿ ಸಮಾಜದ ಮುಖಂಡರು ಮಾತನಾಡುತ್ತಿದ್ದರು.

    ಅವರು ನಗರದ ಪ್ರತಿಷ್ಠಿತ ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆ ಏರ್ಪಡಿಸಿದ ಭಾವಸಾರ್ ಸಮಾಜದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ವಿಷಯ ವ್ಯಕ್ತಪಡಿಸಿದರು.
    ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಕುಮಾರಿ ಭೂಮಿಕಾ ಕಠಾರೆ 86. 83 ಪ್ರತಿಶತ ಅಂಕ ಪಡೆದು ಟಾಪ್ ಮಾಡಿದ ಅವಳಿಗೆ 5,000 ಕ್ಯಾಶ್ ಪ್ರೈಸ್, 79 ಪ್ರತಿಶತ ಅಂಕ ಪಡೆದ ದೀಕ್ಷಾಗೆ 2500 ರೂಪಾಯಿ ಹಾಗೂ ಶ್ರೇಯಸ್ ವೈಚೋಲೆ ಇವರಿಗೆ 1100 ಕ್ಯಾಶ್ ಪ್ರೈಸ್ ನೀಡಿ ಸನ್ಮಾನಿಸಲಾಯಿತು.
    ಅದೇ ತರಹ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟಾಪ್ ಮಾಡಿದ ಭಾವಸಾರ್ ಕ್ಷತ್ರಿಯ ಸಮಾಜದ ವಿವಿಧ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿದ್ದ ಟಾಪ್ ಮಾಡಿದ ಪ್ರಿಯಾಲ್ ನೌಲೇ 5000 ಕ್ಯಾಶ್ ಪ್ರೈಸ್, ದೀಕ್ಷಾ ಹಿಬಾರೆ 2500 ಹಾಗೂ ಕೃಪಾ ರಂಗದಾಳಗೆ 1100 ರೂಪಾಯಿ ಕ್ಯಾಶ್ ಪ್ರೈಸ್ ಹಾಗೂ ಭವ್ಯ ಸನ್ಮಾನ ಮಾಡಿ ಗೌರವಿಸಲಾಯಿತು.
    ವೇದಿಕೆಯಲ್ಲಿ ಹಿಂಗುಲಾಂಬಕಾ ಸಂಸ್ಥೆಯ ಉಪಾಧ್ಯಕ್ಷ ಲಕ್ಷ್ಮಿಕಾಂತ್ ರಂಗ ದಾಳ ನಿರ್ದೇಶಕರಾದ ನಂದ ಕಿಶೋರ್ ಚೌಹಾಣ ರಮೇಶ್ ರಂಗದಾಲ್ ನಂದಕುಮಾರ್ ಪುಕಾಳೆ ಸುನಿಲ್ ರಂಗ ದಾಳ ದೇವಿ ದಾಸ್ ಪಿಸ್ಸೆ ದತ್ತ ಕಠಾರೆ ರಾಜಕುಮಾರ್ ರಂಗ ದಾಳ ದಯಾನಂದ್ ಕಬಾಡೆ ಸುರೇಶ್ ತಲ್ವಾರ್ ಸುರೇಖಾ ಘನಾತೆ ಹಾಗೂ ಸದಸ್ಯರಾದ ವಿಠಾಬಾಯಿ ಹಿಬಾರಿ ಉಪಸ್ಥಿತರಿದ್ದರು.