Category: Politics

Politics is the art of looking for trouble, finding it everywhere, diagnosing it incorrectly and applying the wrong remedies.

  • ಕೆಕೆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಶಾಸಕ ಕಂದಕೂರ ಆಗ್ರಹ

    ಕೆಕೆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಶಾಸಕ ಕಂದಕೂರ ಆಗ್ರಹ

    ಸತ್ಯಕಾಮ ವಾರ್ತೆ ಯಾದಗಿರಿ:
    ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ತಾವು ಕೊಟ್ಟ ಮಾತಿನಂತೆಯೇ ಕೂಡಲೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಶಾಸಕ ಶರಣಗೌಡ ಕಂದಕೂರ ಆಗ್ರಹಿಸಿದ್ದರು.
    ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಅವರು, ಕಳೆದ 2024 ರ ಸೆ.17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಬಂದಾಗ ಕೆಕೆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ನೀಡಿದ ಭರವಸೆ ಇಂದಿಗೂ ಈಡೆರಿಸಿಲ್ಲ. ಕೆಕೆಆರ್ ಡಿಬಿಗೆ 224 ಇಂಜಿನಿಯರಗಳ ಅವಶ್ಯಕತೆ ಇದೆ.‌ಆದರೇ ಕೇವಲ 22 ಇಂಜಿನಿಯರಗಳು ಮಾತ್ರ ಇದ್ದಾರೆ.‌ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಕಾರಣ ಕೂಡಲೇ ಸಚಿವಾಲಯ ಸ್ಥಾಪನೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದರು.
  • ಮಲ್ಲಿಕಾರ್ಜುನ ಖರ್ಗೆಗೆ ಭಾರತ ರತ್ನ ನೀಡಬೇಕೆಂದು ಒತ್ತಾಯ

    ಮಲ್ಲಿಕಾರ್ಜುನ ಖರ್ಗೆಗೆ ಭಾರತ ರತ್ನ ನೀಡಬೇಕೆಂದು ಒತ್ತಾಯ

    ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಹಕ್ಕುಗಳ ವಿಚಾರ ಮತ್ತೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ಹಿನ್ನೆಲೆಯಲ್ಲಿ, ದೀರ್ಘಕಾಲದ ಸಾರ್ವಜನಿಕ ಸೇವೆ, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ಪರ ನಿಸ್ವಾರ್ಥ ಹೋರಾಟ ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಷ್ಟ್ರ ರಾಜಕಾರಣದ ಪ್ರಮುಖ ಮುಖ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕೆಂಬ ಒತ್ತಾಯ ಮತ್ತೊಮ್ಮೆ ಕೇಳಿಬಂದಿದೆ.

    ವಿಧಾನ ಪರಿಷತ್‌ನಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಮಲ್ಲಿಕಾರ್ಜುನ ಖರ್ಗೆ ಅವರ ಸೇವೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅಪಾರವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನಕ್ಕೆ ಸೇರಿಸಲಾದ ಅನುಚ್ಛೇದ 371(ಜೆ) ಅವಿರೋಧವಾಗಿ ಅಂಗೀಕಾರವಾದುದನ್ನು ಸ್ಮರಿಸಿ, ಇದು ಖರ್ಗೆ ಅವರ ರಾಜಕೀಯ ದೃಷ್ಟಿ ಮತ್ತು ಬದ್ಧತೆಯ ಮಹತ್ವದ ಉದಾಹರಣೆಯಾಗಿದೆ ಎಂದರು.

    ಸಚಿವರಾಗಿದ್ದ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತಾತ್ಮಕ ಕಾರ್ಯಕ್ಷಮತೆ ಹಾಗೂ ಸಾಮಾಜಿಕ ಬದ್ಧತೆಯೊಂದಿಗೆ ಕೆಲಸ ಮಾಡಿದ್ದಾರೆ. ದೀನ-ದಲಿತರು, ಹಿಂದುಳಿದ ವರ್ಗಗಳ ಪರ ನಿಂತು ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕಲಬುರಗಿಯಲ್ಲಿ ಇಎಸ್‌ಐ ಆಸ್ಪತ್ರೆ ಸ್ಥಾಪನೆಯ ಮೂಲಕ ಕಾರ್ಮಿಕ ವರ್ಗಕ್ಕೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಿದುದು, ಉತ್ತರ ಕರ್ನಾಟಕದ ರೈಲು ಸಂಪರ್ಕವಿಲ್ಲದ ಪ್ರದೇಶಗಳಿಗೆ ರೈಲು ಮಾರ್ಗಗಳನ್ನು ಕಲ್ಪಿಸುವುದು ಅವರ ಅಭಿವೃದ್ಧಿ ದೃಷ್ಟಿಕೋನದ ಸ್ಪಷ್ಟ ಉದಾಹರಣೆಗಳಾಗಿವೆ.

    ಗಾಂಧೀಜಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಅಲಂಕರಿಸಿದ್ದ ಹುದ್ದೆಯನ್ನು ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಭರಿಸಿಕೊಂಡಿರುವುದು ಅವರ ದೀರ್ಘಕಾಲದ ರಾಜಕೀಯ ಹೋರಾಟ ಮತ್ತು ನೈತಿಕತೆಯ ಗೌರವವಾಗಿದೆ ಎಂದು ತಿಪ್ಪಣ್ಣಪ್ಪ ಕಮಕನೂರು ಹೇಳಿದರು. ಉತ್ತರ ಕರ್ನಾಟಕದ ಜನಜೀವನದಲ್ಲಿ ಶಾಶ್ವತ ಬದಲಾವಣೆ ತರುವ ನಿಟ್ಟಿನಲ್ಲಿ ಖರ್ಗೆ ಅವರು ಸಲ್ಲಿಸಿರುವ ಸೇವೆಯನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸಬೇಕು. ಹೀಗಾಗಿ ಅವರ ಅಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಅವರು ಸರ್ಕಾರವನ್ನು ಮನವಿ ಮಾಡಿದರು.

  • ಪವರ್ ಶೇರಿಂಗ್ ಗೊಂದಲದ ಮಧ್ಯೆ ಅಹಿಂದ ಕಾರ್ಡ್‌

    ಪವರ್ ಶೇರಿಂಗ್ ಗೊಂದಲದ ಮಧ್ಯೆ ಅಹಿಂದ ಕಾರ್ಡ್‌

    ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಒಳಾಂಗಣ ಪವರ್ ಶೇರಿಂಗ್ ಗೊಂದಲ ದಿನದಿಂದ ದಿನಕ್ಕೆ ತೀವ್ರವಾಗುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಂದ್ರಬಿಂದು ಮಾಡಿಕೊಂಡು ಮತ್ತೊಮ್ಮೆ ಅಹಿಂದ ರಾಜಕೀಯ ಸಕ್ರಿಯವಾಗುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಒಟ್ಟುಗೂಡಿಸಿದ ಅಹಿಂದ ಚಳವಳಿ ಮೂಲಕ ಸಿದ್ದರಾಮಯ್ಯ ತಮ್ಮ ರಾಜಕೀಯ ಬಲವನ್ನು ಮತ್ತೆ ಒತ್ತಿ ಹೇಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

    ಈ ಹಿನ್ನಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಆಪ್ತ ವಲಯವು ಬೆಂಗಳೂರಿನಲ್ಲಿ ಭಾರೀ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ಪಕ್ಷದ ಒಳಗಿನ ನಾಯಕತ್ವದ ಚರ್ಚೆ, ಮುಂದಿನ ರಾಜಕೀಯ ದಿಕ್ಕು ಹಾಗೂ ಸಿಎಂ ಸ್ಥಾನಕ್ಕೆ ಸಂಬಂಧಿಸಿದ ಊಹಾಪೋಹಗಳ ನಡುವೆ ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

    ಜನವರಿ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲೇ ಹಿಂದುಳಿದ ವರ್ಗಗಳ ಒಕ್ಕೂಟದ ನೇತೃತ್ವದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಸಮಾವೇಶದ ಮುಖ್ಯ ಅಜೆಂಡಾವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‘ಅಹಿಂದ ರತ್ನ’ ಎಂಬ ಗೌರವಪೂರ್ಣ ಘೋಷಣೆ ಮಾಡುವ ಸಿದ್ಧತೆ ನಡೆದಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

    ಈ ಅಹಿಂದ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ನೀಡುತ್ತದೆಯೇ? ಅಥವಾ ಹಾಸನ ಸಮಾವೇಶದಂತೆ ಈ ಬಾರಿ ಕೂಡ ಪಕ್ಷದ ಕೇಂದ್ರ ನಾಯಕತ್ವವೇ ವೇದಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

    ಪಕ್ಷದ ಹೈಕಮಾಂಡ್ ಸೂಚನೆಗಳನ್ನು ಮೀರಿ ಪ್ರತ್ಯೇಕ ಅಹಿಂದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರೇ? ಅಥವಾ ಹೈಕಮಾಂಡ್ ಜೊತೆ ಸಮನ್ವಯ ಸಾಧಿಸಿ ಈ ಶಕ್ತಿ ಪ್ರದರ್ಶನ ನಡೆಯಲಿದೆಯೇ ಎಂಬುದನ್ನು ಕಾದು ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

    ಒಟ್ಟಿನಲ್ಲಿ, ಅಹಿಂದ ಶಕ್ತಿ ಪ್ರದರ್ಶನ ಕಾಂಗ್ರೆಸ್ ಒಳರಾಜಕೀಯದಲ್ಲಿ ಯಾವ ರೀತಿಯ ತಿರುವು ತರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಪ್ರಮುಖ ಚರ್ಚೆಯ ವಿಷಯವಾಗಲಿದೆ.

  • ರಾಜಕೀಯ ವಲಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ

    ರಾಜಕೀಯ ವಲಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ

    ಕರ್ನಾಟಕ ರಾಜಕೀಯದ ವಾತಾವರಣ ಕಳೆದ ಕೆಲವು ವಾರಗಳಿಂದ ನಾಯಕತ್ವ ಬದಲಾವಣೆಯ ಚರ್ಚೆಯಿಂದ ಗದ್ದಲಗೊಂಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡುವಿನ ಅಧಿಕಾರ ಹಸ್ತಾಂತರದ ಪ್ರಶ್ನೆ ಹಲವು ಬಾರಿ ಸುದ್ದಿಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದರೂ, ಎರಡೂ ನಾಯಕರು ಈ ವಿಚಾರವನ್ನು ತಣ್ಣಗಾಗಿಸುವ ಪ್ರಯತ್ನ ನಡೆಸಿದ್ದರು. ಹೈಕಮಾಂಡ್‌ನಿಂದಲೂ ಸ್ಪಷ್ಟ ಸೂಚನೆಗಳು ಬಂದ ನಂತರ ಗಾಸಿಪ್‌ಗಳಿಗೆ ಕಡಿವಾಣಬಿದ್ದಂತೆ ಕಂಡಿತ್ತು. ಆದರೆ ಇದೀಗ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

    ನಾಯಕತ್ವ ಬದಲಾವಣೆ ಇಲ್ಲ ಹೈಕಮಾಂಡ್‌ ಹೇಳಿಕೆ ಸ್ಪಷ್ಟ: ಯತೀಂದ್ರ

    ಮಾಧ್ಯಮಗಳೊಂದಿಗೆ ಮಾತನಾಡಿದ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಕೂಡಾ ಅದನ್ನು ಸ್ಪಷ್ಟಪಡಿಸಿದೆ. ನನ್ನ ತಂದೆಯೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದ್ದಾರೆ.

    ಸಿಎಂ ಸಿದ್ದರಾಮಯ್ಯ ಸ್ವತಃ ಪಕ್ಷದ ಒಳಗಿನ ನಾಯಕರಿಗೆ ಹೈಕಮಾಂಡ್‌ ಹೇಳುವವರೆಗೆ ನಾನೇ ಸಿಎಂ ಎಂದು ಸೂಚನೆ ನೀಡಿದ್ದರೂ, ಈ ವಿಷಯದ ಮೇಲೆ ಮಾತನಾಡಬಾರದು ಎಂಬ ನಿರ್ದೇಶನ ನೀಡಲಾಗಿತ್ತು. ಆದರೆ ಪುತ್ರ ಯತೀಂದ್ರ ಅವರ ನೇರ ಹೇಳಿಕೆ ಮತ್ತೆ ರಾಜಕೀಯ ಚರ್ಚೆಗೆ ಹೊಸ ಆಯಾಮ ತಂದಿದೆ.

    ಬ್ರೇಕ್‌ಫಾಸ್ಟ್‌ ರಾಜಕೀಯ ಸಿಎಂ ಡಿಕೆಶಿ ಭೇಟಿ ಬಳಿಕ ಶಾಂತಿ ಕಂಡ ರಾಜಕೀಯ:

    ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಎರಡು ಬಾರಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದಿತ್ತು. ಈ ಭೇಟಿಯ ಬಳಿಕ ಇಬ್ಬರೂ ನಾಯಕರೂ ಒಂದೇ ವೇದಿಕೆಯಲ್ಲಿ ಬಂದು, ಸರ್ಕಾರ ಸ್ಥಿರವಾಗಿದೆ, ಹೈಕಮಾಂಡ್‌ ಹೇಳಿಕೆಯ ಮೇರೆಗೆ ಎಲ್ಲವೂ ನಡೆಯುತ್ತದೆ ಎಂದು ತಿಳಿಸಿದ್ದರು. ಆದರೆ ಈಗ ಯತೀಂದ್ರ ಅವರ ಹೊಸ ಹೇಳಿಕೆ ಮತ್ತೆ ಕೋಲಾಹಲಕ್ಕೆ ಕಾರಣವಾಗಿದ್ದು, ಕುರ್ಚಿ ಕಿತ್ತಾಟ ವಿಚಾರವನ್ನು ಮತ್ತೊಮ್ಮೆ ಸಾರ್ವಜನಿಕ ಚರ್ಚೆಗೆ ತಳ್ಳಿದೆ.

  • ಆರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ ಸರ್ಕಾರ

    ಆರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ ಸರ್ಕಾರ

    ಹಾಸನದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಸೇವೆಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿತು. ಜನಸಾಮಾನ್ಯರ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಗ್ಯಾರಂಟಿಗಳ ಸರಣಿಗೆ ಇದೀಗ ಆರನೇ ಗ್ಯಾರಂಟಿಯೂ ಸೇರ್ಪಡೆಗೊಂಡಿದೆ. ಈ ಬಾರಿ ಸರ್ಕಾರ ನೇರವಾಗಿ ಭೂಮಿ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಕಂಡುಕೊಂಡು, ಅದಕ್ಕೆ ‘ಭೂಮಿ ಗ್ಯಾರಂಟಿ’ ಎಂದು ಹೆಸರು ನೀಡಿದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಕೆಲಸದ ಧೋರಣೆಯನ್ನು ಒಂದೇ ವಾಕ್ಯದಲ್ಲಿ ವಿವರಿಸುವಂತೆ “ಮಾತು ಹೆಚ್ಚು ಮಾಡೋದು ನಮ್ಮ ಶೈಲಿ ಅಲ್ಲ, ಕೆಲಸವೇ ನಮ್ಮ ರಾಜಕೀಯ” ಎಂದು ಸ್ಪಷ್ಟಪಡಿಸಿದರು. ರಾಜ್ಯಾದ್ಯಂತ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೋಟ್ಯಂತರ ರೂಪಾಯಿ ಮೌಲ್ಯದ ಹೊಣೆಗಾರಿಕೆಯನ್ನು ಒಳಗೊಂಡಿದ್ದರೂ, ಅವುಗಳ ಪರಿಣಾಮ ಜನರ ಜೀವನದಲ್ಲಿ ನೇರವಾಗಿ ಗೋಚರಿಸುತ್ತಿದೆ ಎಂದು ಅವರು ಹೇಳಿದರು.

    ಈ ಹೊಸ ಭೂಮಿ ಗ್ಯಾರಂಟಿಯ ಮೂಲಕ, ವರ್ಷಗಳಿಂದ ಆಸ್ತಿ ದಾಖಲೆಗಳು ಸರಿಯಾಗದ ಕಾರಣ ಒದ್ದಾಡುತ್ತಿದ್ದ ಸಾವಿರಾರು ರೈತರು ಮತ್ತು ಮನೆಮಾಲೀಕರಿಗೆ ಶಾಶ್ವತ ಪರಿಹಾರ ಸಿಗಲಿದೆ. ಹಿಂದೆ ಒಂದು ಪೋಡಿ ಅಥವಾ ದರ್ಖಾಸ್ತು ದಾಖಲೆ ಪಡೆಯುವುದೇ ದೊಡ್ಡ ಕೆಲಸವಾಗಿತ್ತು. ಕಚೇರಿಗಳಲ್ಲಿ ಸುತ್ತಾಡುವುದು, ಮಧ್ಯವರ್ತಿಗಳ ಒತ್ತಡ, ಅನಗತ್ಯ ವೆಚ್ಚ ಇವೆಲ್ಲ ಸಾಮಾನ್ಯ. ಈಗ ಸರ್ಕಾರ ಈ ವ್ಯವಸ್ಥೆಯನ್ನು ಸರಳಗೊಳಿಸಿರುವುದಾಗಿ ಉಪ ಮುಖ್ಯಮಂತ್ರಿ ತಿಳಿಸಿದರು. ಅರ್ಜಿ ಹಾಕಿದವರ ಹೆಸರಿನಲ್ಲೇ ದಾಖಲೆಗಳನ್ನು ತಕ್ಷಣ ನೀಡುವ ವ್ಯವಸ್ಥೆ ಹಾಸನ ಸೇರಿದಂತೆ ಹಲವೆಡೆ ಈಗಾಗಲೇ ಪ್ರಾರಂಭವಾಗಿದೆ.

    ಕಂದಾಯ ಸಚಿವ ಕೃಷ್ಣ ಬೈರೇಗೌಡರ ಕಾರ್ಯವೈಖರಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಮೆಚ್ಚುಗೆ ಪಡೆಯಿತು. ಅವರ ನೇತೃತ್ವದಲ್ಲಿ ಸಾವಿರಾರು ಜನರಿಗೆ ಆಸ್ತಿ ದಾಖಲೆಗಳನ್ನು ಹಸ್ತಾಂತರಿಸಿರುವುದು ಸರ್ಕಾರ ಹೊಸ ಕ್ರಮದೊಂದಿಗೆ ಜನರಲ್ಲಿ ವಿಶ್ವಾಸ ಮೂಡಿಸಿದೆ. ಹಾಸನದ ಅಭಿವೃದ್ಧಿಗೆ ಸರ್ಕಾರ ಚಿತ್ತಸಿದ್ಧವಾಗಿದ್ದು, ಹಲವು ಇಲಾಖೆಗಳಿಂದ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ ಎಂಬುದೂ ಈ ಸಮಾರಂಭದ ಸಜೀವ ಚಿತ್ರಣವಾಗಿತ್ತು.

    ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯದಲ್ಲಿ ಟೀಕೆ ಪ್ರಶಂಸೆ ಸಾಮಾನ್ಯ. ಆದರೆ ಈ ಬಾರಿ ಉಪ ಮುಖ್ಯಮಂತ್ರಿ ಅದಕ್ಕೆ ವಿಭಿನ್ನ ಉತ್ತರ ನೀಡಿದರು. “ಜನರು ಕಣ್ಣಾರೆ ಕಾಣುವ ಕೆಲಸವೇ ನಂಬಿಕೆಗೆ ಹುದ್ದೆ. ಕೇಳಿದ ಮಾತಿಗೆ ಮೌಲ್ಯ ಕೊಡುವ ಕಾಲ ಹೋಗಿದೆ” ಎಂಬ ಸಂದೇಶವನ್ನು ಅವರು ಹಾಸ್ಯಮಿಶ್ರಿತ ಕಥಾ ಉದಾಹರಣೆಯಿಂದ ಹಂಚಿಕೊಂಡರು. ಸರ್ಕಾರದ ಯೋಜನೆಗಳು ಜನರ ಕೈಗೆ ತಲುಪುತ್ತಿರುವುದು ಮುಖ್ಯ.

    ಕಡೆಯಾಗಿ, ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಕೇವಲ ಚುನಾವಣಾ ಭರವಸೆಯಾಗಿ ನೋಡದೆ, ಜನರ ಬದುಕನ್ನು ಬದಲಾಯಿಸುವ ಸಾಧನಗಳಾಗಿ ಮುಂದುವರಿಸುತ್ತಿದೆ ಎಂಬ ನಿಲುವನ್ನು ಡಿಸಿಎಂ ಪುನರುಚ್ಚರಿಸಿದರು. “ಜನರು ನಂಬಿದ ದಾರಿಗೆ ನಾವು ಸತ್ಯನಿಷ್ಠೆಯಿಂದ ಸಾಗುತ್ತಿದ್ದೇವೆ. ನಮ್ಮ ಕೆಲಸವೇ ನಮ್ಮನ್ನು ತೋರಿಸುವ ಕನ್ನಡಕ” ಎಂದು ಅವರು ವೇದಿಕೆಯಿಂದ ಸಂದೇಶ ನೀಡಿದರು.

  • ಡಿಕೆಶಿ ಸಿಎಂ ಆಗಿಯೇ ಬಿಡ್ತಾರಾ: ಕೆ.ಎನ್. ರಾಜಣ್ಣ ಪ್ರಶ್ನೆ

    ಡಿಕೆಶಿ ಸಿಎಂ ಆಗಿಯೇ ಬಿಡ್ತಾರಾ: ಕೆ.ಎನ್. ರಾಜಣ್ಣ ಪ್ರಶ್ನೆ

    ಕರ್ನಾಟಕ ರಾಜಕೀಯದಲ್ಲಿ ಸಚಿವ ಸ್ಥಾನ ಹಂಚಿಕೆ, ನಾಯಕತ್ವದ ಅಸಮಾಧಾನ, ಮತ್ತು ಭವಿಷ್ಯದ ರಾಜಕೀಯ ಕುರಿತು ಚರ್ಚೆಗಳು ಮರುಕಳಿಸುತ್ತಿರುವ ಸಮಯದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸ್ಪಷ್ಟವಾದ ಅಭಿಪ್ರಾಯವನ್ನು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ತಮ್ಮನ್ನು ಒಳಪಡಿಸುವ ವಿಚಾರದ ಬಗ್ಗೆ ರಾಜಣ್ಣ ಅವರು ನೀಡಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಬೆಂಬಲಿಗ ಶಾಸಕರು ಪುನಃ ಸಚಿವ ಸ್ಥಾನ ಕೊಡಬೇಕೆಂದು ಒತ್ತಾಯಿಸುತ್ತಿರುವ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಮಂತ್ರಿಯಾಗಿರಲು ಇಷ್ಟಪಡುವುದಿಲ್ಲ. ಬೇರೆಯವರಿಗೆ ಅವಕಾಶ ಮಾಡಿಕೊಡಲಿ ಎಂದು ನೇರವಾಗಿ ತಿಳಿಸಿದ್ದಾರೆ.

    ಅಲ್ಲದೆ, ರಾಜಣ್ಣ ಅವರು ಈ ಹೇಳಿಕೆಯಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಹೇಳಿದ್ದು, ಡಿಕೆ ಶಿವಕುಮಾರ್ ಅವರ ಮುಂದಿನ ರಾಜಕೀಯ ದಾರಿಗೆ ಸಂಬಂಧಿಸಿದಂತೆ ಪ್ರಶ್ನೆ ಎತ್ತಿ ಅವರೇನು ಸಿಎಂ ಆಗಿಯೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಎಂದು ತಿರುಗೇಟು ನೀಡಿದರು.

    ನಾನು ಯಾವತ್ತೂ ಅಧಿಕಾರದ ಹಿಂದೆ ಹೋದವನಲ್ಲ. ನನಗೆ ಮತ್ತೇ ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸುತ್ತಿರುವ ಎಲ್ಲ ಬೆಂಬಲಿಗರು, ಸ್ನೇಹಿತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು. ರಾಜಣ್ಣ ಅವರ ಈ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದಲ್ಲಿ ಉಂಟಾಗುತ್ತಿರುವ ಅಸಮಾಧಾನದ ಧ್ವನಿಯನ್ನು ಮತ್ತಷ್ಟು ಒತ್ತಿ ಹೇಳಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಪಕ್ಷದ ಹಿರಿಯ ನಾಯಕರಿಂದ ಯಾವ ರೀತಿಯ ಪ್ರತಿಕ್ರಿಯೆ ಬರಲಿದೆ ಎಂಬುದರ ಕುರಿತ ಕುತೂಹಲ ಹೆಚ್ಚಿಸಿದೆ.

  • “ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ

    “ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ

    ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ. “ರಸ್ತೆ, ಬೀದಿ ಎಲ್ಲ ಕಡೆ ಕ್ಯಾಮೆರಾ ಹಾಕ್ತಿದ್ದೇವೆ. ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದ್ರೆ, ಆ ದೃಶ್ಯ ನೋಡಿ ಅವರ ಮನೆ ಮುಂದೆ ಕಸ ತಂದು ಹಾಕ್ತೀನಿ!” ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಸದ ಬಗ್ಗೆ ನಿರಂತರ ಟೀಕೆ ಮಾಡುತ್ತಿರುವ ನಾಗರಿಕರು ಮತ್ತು ಮಾಧ್ಯಮಗಳನ್ನು ಗುರಿಯಾಗಿಸಿ ಮಾತನಾಡಿದರು. “ಈ ಸಮಸ್ಯೆ ಬೆಂಗಳೂರು ಮಾತ್ರದಲ್ಲ, ಇನ್ನೂ ಅನೇಕ ನಗರಗಳಲ್ಲಿ ಇದೆ. ಆದ್ರೆ ಮಾಧ್ಯಮಗಳು ಇಲ್ಲಿ ಮಾತ್ರ ಹೆಚ್ಚು ತೋರಿಸ್ತಾರೆ. ಈಗ ಇದಕ್ಕೆ ಸ್ಪಷ್ಟ ಪರಿಹಾರ ಕೊಡ್ತಿದ್ದೀವಿ ನಗರಪಾಲಿಕೆಯಿಂದ ಹೊಸ ಕ್ಯಾಮೆರಾ ಜಾಲ ಹಾಕಲಾಗುತ್ತದೆ. ಯಾರೂ ಸಹ ರಸ್ತೆ, ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಿಗೆ ಕಸ ಹಾಕಬಾರದು” ಎಂದು ಹೇಳಿದರು.

    ಅವರು ಮುಂಬೈಗೆ ಭೇಟಿ ನೀಡಿದ ಸಂದರ್ಭದ ಘಟನೆ ಒಂದನ್ನು ಹಂಚಿಕೊಂಡು, “ಅಲ್ಲೂ ಕೆಲವರು ರಸ್ತೆಗೆ ಕಸ ಹಾಕಿದ್ದರು, ನಾವು ಹಿಂಬಾಲಿಸಿ ಅವರ ಮನೆ ಮುಂದೆಯೇ ಕಸ ಬಿಟ್ಟು ಬಂದಿದ್ದೇವೆ” ಎಂದು ಉದಾಹರಣೆ ನೀಡಿದ್ದಾರೆ. “ಕಸವನ್ನು ವಾಹನಗಳಲ್ಲಿ ಹಾಕಿ ಬೇರೆಡೆ ಬಿಸಾಡುವ ಏಜೆಂಟರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಸಿದರು.

    ಡಿಕೆಶಿ ನಾಗರಿಕರಿಗೆ ಕರೆ ನೀಡಿ, “ಪ್ರತಿ ಮನೆಯಲ್ಲೂ ಕಸದ ಡಬ್ಬಿ ಇಡಿ. ನಮ್ಮ ವಾಹನ ಮನೆ ಮನೆಗೆ ಬರುತ್ತದೆ, ಕಸವನ್ನು ಅದಕ್ಕೆ ನೀಡಿ. ಚಿತ್ರ ತೆಗೆದು ಟೀಕೆ ಮಾಡುವುದಕ್ಕಿಂತ ಸ್ವಚ್ಛತೆಗೆ ಸಹಕರಿಸಿ” ಎಂದು ಮನವಿ ಮಾಡಿದರು.

    ಕಾಂಟ್ರ್ಯಾಕ್ಟರ್‌ ಮಾದರಿ ನಿರ್ವಹಣೆ ನಗರದ ಮುಖ್ಯರಸ್ತೆಗಳು ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಸದ ನಿರ್ವಹಣೆ ಕಾಂಟ್ರ್ಯಾಕ್ಟರ್‌ಗಳಿಗೆ ಹಸ್ತಾಂತರಿಸುವ ಆಲೋಚನೆಯೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರರೆ. ಸ್ವಚ್ಛ ನಗರ ನಿರ್ಮಾಣಕ್ಕಾಗಿ ಕಠಿಣ ಕ್ರಮ ಕೈಗೆತ್ತಿಕೊಳ್ಳಲಿರುವುದಾಗಿ ಡಿಕೆಶಿ ಹೇಳಿದ್ದು, “ನಿಯಮ ಉಲ್ಲಂಘನೆ ಮಾಡಿದರೆ ಯಾರನ್ನೂ ಬಿಡಲ್ಲ” ಎಂದು ಎಚ್ಚರಿಕೆ ನೀಡಿದರು.

  • ಗ್ಯಾರಂಟಿ ಯೋಜನೆಗಳಿಂದ ಬೇರೆ ಅನುದಾನಗಳಿಗೆ ಅಡ್ಡಿಯಾಗುತ್ತಿದೆ- ಜಮೀರ್ ಅಹ್ಮದ್

    ಗ್ಯಾರಂಟಿ ಯೋಜನೆಗಳಿಂದ ಬೇರೆ ಅನುದಾನಗಳಿಗೆ ಅಡ್ಡಿಯಾಗುತ್ತಿದೆ- ಜಮೀರ್ ಅಹ್ಮದ್

    ಸತ್ಯಕಾಮ ವಾರ್ತೆ ವಿಜಯನಗರ:

    ವಿಜಯನಗರದ ಕೂಡ್ಲಿಗಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಸಾರಿಗೆ ಸಚಿವ ಜಮೀರ್ ಅಹಮದ್ ಖಾನ್ ಮಾಡಿದ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಜನರಿಗೆ ನೇರ ಲಾಭವಾಗುತ್ತಿದ್ದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಕಷ್ಟವಾಗುತ್ತಿದೆ ಎಂಬ ಮಾತುಗಳನ್ನು ಈಗ ಸಚಿವರೇ ಬಾಯ್ಬಿಟ್ಟಿದ್ದಾರೆ.

    ಸಭೆಯಲ್ಲಿ ಮಾತನಾಡಿದ ಜಮೀರ್‌ ಅಹಮದ್‌ ಖಾನ್ ಅವರು, ಪ್ರತಿ ವರ್ಷ ಗ್ಯಾರಂಟಿ ಯೋಜನೆಗಳಿಗೆ ಸುಮಾರು ₹55 ಸಾವಿರ ಕೋಟಿಯಿಂದ ₹60 ಸಾವಿರ ಕೋಟಿವರೆಗೆ ಅನುದಾನ ಬೇಕಾಗುತ್ತದೆ ಎಂದರು. ಈ ಮಹತ್ತರ ಮೊತ್ತವನ್ನು ಪೂರೈಸುವಲ್ಲಿ ಸರ್ಕಾರಕ್ಕೆ ಬರುವ ಒತ್ತಡವೇ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ತೊಂದರೆ ಉಂಟುಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

    ಇದೇ ಸಂದರ್ಭದಲ್ಲಿ, ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸರನ್ನು ಹೊಗಳಿದ ಸಚಿವರು, “ನಮ್ಮ ಶಾಸಕರು ತಮ್ಮ ಕ್ಷೇತ್ರದ ಜನರಿಗಾಗಿ ಯಾವ ಮಟ್ಟಕ್ಕೂ ಹೋಗ್ತಾರೆ. ಅನುದಾನಕ್ಕಾಗಿ ಕಾಲಿಗೆ ಬಿದ್ದು ಕೇಳ್ತಾರೆ. ಅಣ್ಣ, ನಮ್ಮ ಕ್ಷೇತ್ರದ ಸಮಸ್ಯೆ ಪರಿಹರಿಸ್ಬೇಕು ಅಂತ ಮನವಿ ಮಾಡ್ತಾರೆ” ಎಂದು ಹೇಳಿದರು. ಆದರೆ ಇದೇ ಮಾತಿನ ಮಧ್ಯೆ ಗ್ಯಾರಂಟಿ ಯೋಜನೆಗಳಿಂದ ಅನುದಾನ ತಡೆಯಾಗುತ್ತಿದೆ ಎಂಬ ಅಂಶವನ್ನೂ ಅವರು ಅನಿವಾರ್ಯವಾಗಿ ಒಪ್ಪಿಕೊಂಡರು.

    ಸಚಿವರ ಈ ಹೇಳಿಕೆ, ವಿಪಕ್ಷಗಳು ಹಲವು ದಿನಗಳಿಂದ ಮಾಡುತ್ತಿದ್ದ “ಗ್ಯಾರಂಟಿ ಯೋಜನೆಗಳ ಭಾರದಿಂದ ರಾಜ್ಯದ ಖಜಾನೆ ಬತ್ತಿದೆ, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ” ಎಂಬ ಆರೋಪಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಪಟುತೆ ಕುರಿತು ನಡೆಯುತ್ತಿದ್ದ ವಾದ ವಿವಾದಕ್ಕೆ ಇದೀಗ ಸರ್ಕಾರದ ಮಂತ್ರಿಯೇ ಬಲಪಡೆಯುವಂತಹ ಹೇಳಿಕೆ ಕೊಟ್ಟಿರುವುದು ವಿಶೇಷ.

    ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಜನಸಾಮಾನ್ಯರಲ್ಲಿ ಯೋಜನೆಗಳು ಜನಪ್ರಿಯವಾದರೂ, ಆಡಳಿತಾತ್ಮಕವಾಗಿ ಹಾಗೂ ಹಣಕಾಸು ನಿರ್ವಹಣೆಯ ದೃಷ್ಟಿಯಿಂದ ಹೊಸ ಸವಾಲುಗಳು ಎದುರಾದಂತಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಗಳು ರಾಜ್ಯದ ಅಭಿವೃದ್ಧಿ ಗತಿಯ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಅನ್ನುವುದನ್ನು ಕಾದು ನೋಡಬೇಕಿದೆ.

  • ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ

    ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ;

    ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರು ಸಿ.ಎಸ್ ನಾಡಗೌಡ ಅವರಿಗೆ ಬರುವ ಪುನರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೇಳಬಾರದು ಎಂದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಿಗಾಗಿ ನಾಡಗೌಡರಿಗೆ ಈಗ ಸಚಿವ ಸ್ಥಾನ ಕೇಳುವ ಹಕ್ಕಿಲ್ಲ ಎಂಬ ಇಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಹೇಳಿಕೆಗೆ ತೀಕ್ಷ್ಣವಾಗಿ ಶಾಸಕ ಸಿ.ಎಸ್ ನಾಡಗೌಡ ಅವರು ತಿರುಗೇಟು ನೀಡಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಯಶವಂತರಾಯಗೌಡ ಪಾಟೀಲ, ಶಿವಾನಂದ ಪಾಟೀಲ್, ಎಂ.ಬಿ ಪಾಟೀಲ್ ಅವರಿಗಾಗಲಿ ಎಲ್ಲಿಯೂ ನಾನು ಸಚಿವ ಸ್ಥಾನ ನೀಡಬೇಡಿ, ನೀಡಬೇಕು ಎಂಬ ಲಾಭಿ ಮಾಡಿಲ್ಲ. ಜಿಲ್ಲೆಯಲ್ಲಿ 1981 ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿದ್ದೇನೆ. ಜಿಲ್ಲೆಯಲ್ಲಿ ಹಿರಿಯ ಶಾಸಕ ಹೀಗಾಗಿ ನನ್ನ ಮೀಸಲಾತಿಯಲ್ಲಿ ಸಚಿವ ಸ್ಥಾನ ಕೇಳುತ್ತಿದ್ದೆನೆ. ನೀವು ಸಹ ಹೈಕಮಾಂಡ್ ಮಟ್ಟದಲ್ಲಿ ಲಾಭಿ ನಡೆಸಿ ಇದಕ್ಕೆ ನನ್ನದು ಯಾವುದೇ ತಕರಾರಿಲ್ಲ ಎಂದರು.

    ಯಶವಂತರಾಯಗೌಡ ಅವರನ್ನು ನನ್ನ ಸ್ವಂತ ಸಹೋದರ ರೀತಿ ಇಷ್ಟು ದಿನ ಕಂಡಿದ್ದೆ, ಈಗಲೂ ಸಹ ಅದೇ ಭಾವನೆವಿದೆ. ಅದೇ ಆತ್ಮೀಯತೆವಿದೆ. ಯಾವ ದೃಷ್ಟಿಯಿಂದ ಈ ರೀತಿ ಇಂಡಿ ಶಾಸಕರು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಪಕ್ಷಕ್ಕೆ ಇಟ್ಟಿರುವ ನಿಷ್ಠೆ, ಪಕ್ಷಕ್ಕೆ ಸಲ್ಲಿಸಿದ ಸೇವೆ ಹಿನ್ನಲೆಯಲ್ಲಿ ಪಕ್ಷ ನನ್ನನ್ನು ಗುರುತಿಸಬೇಕೆಂದು ಬೇಡಿಕೆ ಇಟ್ಟಿದ್ದೇನೆ. ಯಾವುದೇ ವ್ಯಕ್ತಿಗಾಗಲಿ ಸಚಿವ ಸ್ಥಾನ ನೀಡಬೇಡಿ, ನೀಡಬೇಕು ಎಂಬ ಹೇಳಿಕೆ ಹೈಕಮಾಂಡ್ ಮಟ್ಟದಲ್ಲಿ ಆಗಲಿ ಮಾಧ್ಯಮಗಳಲ್ಲಿಯಾಗಲಿ ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಶಾಸಕ ಸಿ.ಎಸ್ ನಾಡಗೌಡ ಸ್ಪಷ್ಟಪಡಿಸಿದರು.

    ಯಶವಂತರಾಯಗೌಡ ಅವರು ಸಚಿವ ಸ್ಥಾನಕ್ಕಾಗಿ ನಿಮ್ಮ ಪ್ರಯತ್ನ ನೀವು ಮಾಡಿ, ಇದಕ್ಕೆ ಅಡ್ಡಿ ಮಾಡಲ್ಲ. ಜಯಗಳಿಸಿದ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಒಗ್ಗೂಡಿ ಹೈಕಮಾಂಡ್ ಹತ್ತಿರ ಹೋಗೋಣ, ಯಾವ ವ್ಯಕ್ತಿಯನ್ನಾಗಲಿ ಸಚಿವ ಸ್ಥಾನ ನೀಡಿ ಎಂದೇಳಿ ಬರೋಣ, ಆಗ ಹೈಕಮಾಂಡ್ ಮಾಡಿದ ಮಂತ್ರಿ ಸ್ಥಾನಗಳಿಗೆ ನನ್ನ ಸಹಮತವಿದೆ.

    ಇನ್ನು ಸಿ.ಎಸ್‌. ನಾಡಗೌಡರು ಈಗಾಗಲೇ ಎರಡು ಬಾರಿ ಸಚಿವರಾಗಿದ್ದಾರೆ. ಅಲ್ಲದೇ ಈಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿದ್ದಾರೆ. ಈಗ ಸಚಿವ ಸ್ಥಾನ ಕೇಳುವುದರಲ್ಲಿ ಅರ್ಥವಿಲ್ಲ ಎಂಬ ಹೇಳಿಕೆಗೆ ಸಿಟ್ಟಾದ ಸಿ.ಎಸ್ ನಾಡಗೌಡರು ಆಗ ಸಚಿವ ಸ್ಥಾನಕ್ಕಾಗಿ ನಾನು ಅರ್ಜಿ ಹಾಕಿದವನಲ್ಲ. ಬಯಸಿದವನಲ್ಲ. ತಾನಾಗಿಯೇ ಒಮ್ಮೆ ಮಂತ್ರಿ ಸ್ಥಾನ ಒಲಿದು ಬಂದಿತ್ತು. ಈಗ ಸೋಪ್ ಮತ್ತು ಡಿಟರ್ಜಂಟ್ ನಿಗಮ ಅಧ್ಯಕ್ಷ ಸ್ಥಾನವನ್ನು ಬಿಡಬೇಕೆಂದು ಯಶವಂತರಾಯಗೌಡ ಅವರು ಆಗ್ರಹಿಸಿದರೆ ನಾಳೆಯೇ ಆ ಸ್ಥಾನದ ಪದತ್ಯಾಗ ಮಾಡುತ್ತೇನೆ. ಈ ಸ್ಥಾನವನ್ನು ನೀವು ಅಲಂಕರಿಸಬಹುದು. ನೀವು ಮಂತ್ರಿಯಾದರು ನನಗೆ ಸಂತೋಷ. ಈ ರೀತಿಯ ಬಾಲಿಷ ಹೇಳಿಕೆಯನ್ನು ನೀಡಿ ನಿಮ್ಮ ಘನತೆಯನ್ನು ಕಳೆದುಕೊಳ್ಳಬೇಡಿ ಎಂದು ನಾಡಗೌಡರು ಕಿವಿಮಾತ ಹೇಳಿದರು.

    ಈ ಹಿಂದೆ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದಾಗ ಯಶವಂತರಾಯಗೌಡ ಅವರಿಗೆ ಬೆಂಬಲವಾಗಿ ನಿಂತವರು ಯಾರು ಎಂಬುದನ್ನು ಒಮ್ಮೆ ಸ್ಮರಿಸಿಕೊಳ್ಳಬೇಕು. ರಾಜಕೀಯದಲ್ಲಿ ಬದ್ಧತೆ ರಾಜಕಾರಣಿ ಸಿಗುವುದು ಈಗ ಅಪರೂಪ. ಸಚಿವ ಸ್ಥಾನಕ್ಕೆ ಸಿಗುವ ಎಲ್ಲಾ ಸೌಕರ್ಯಗಳನ್ನು ಸಣ್ಣವನಿರುವಾಗಲೇ ನಾನು ಅನುಭವಿಸಿದ್ದೇನೆ. ಈಗ ಸಚಿವ ಸ್ಥಾನ ಸಿಕ್ಕರೆ ಮತಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂಬ ದೃಷ್ಟಿಯಲ್ಲಿ ಹೈಕಮಾಂಡ್ ಹತ್ತಿರ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದೇನೆ ಹೊರತು ಎಸಿ ಕಾರಿಗಲ್ಲ. ಬರುವ ಪುನರ್ ಸಚಿವ ಸಂಪುಟದಲ್ಲಿ ಹೈಕಮಾಂಡ್ ನನ್ನನ್ನು ಪರಿಗಣಿಸಿ ಮಂತ್ರಿ ಸ್ಥಾನ ನೀಡುತ್ತಾರೆ ಎಂಬ ಭರವಸೆವಿದೆ ಎಂದು ಶಾಸಕ ಸಿ.ಎಸ್ ನಾಡಗೌಡ ವ್ಯಕ್ತಪಡಿಸಿದರು.

  • ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್

    ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್

    ಸತ್ಯಕಾಮ ವಾರ್ತೆ ಯಾದಗಿರಿ:

    ಆರ್.ಎಸ್.ಎಸ್. ನಿಲುವುಗಳನ್ನು ಪ್ರಶ್ನಿಸಿ ಸಾರ್ವಜನಿಕ, ಸರ್ಕಾರದ ಪ್ರದೇಶಗಳಲ್ಲಿ ಶಾಖೆ ಪ್ರದರ್ಶನ ಮಾಡುವ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಸಲ್ಲಿಸಿದ ಮನವಿ ಪತ್ರದ ಬಗ್ಗೆ ವಿರೋಧಿಸಿ ಅನೇಕರು ಪ್ರಿಯಾಂಕ್ ಖರ್ಗೆ ಅವರಿಗೆ ಫೋನ್ ಕರೆ ಮೂಲಕ ಜೀವ ಬೆದರಿಕೆ, ಭಯ ಹುಟ್ಟಿಸುವ ಕಾರ್ಯ ಮಾಡುತ್ತಿರುವುದು ಖಂಡನೀಯ, ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

    ನಗರದ ಸರ್ಕೀಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ಟ್ವೀಟ್ ಹಲವರಿಗೆ ಜೀರ್ಣಿಸಿಕೊಳ್ಳಲು ಆಗದೆ ಅಡ್ಡ ಮಾರ್ಗದಿಂದ ವೈಯಕ್ತಿಕ ನಿಂದನೆ ಹೇಳುತ್ತಿರುವುದು ಅದು ಅವರ ಮನಸ್ಥಿತಿ ತೋರಿಸುತ್ತಿದೆ ಎಂದರು.

    ಈ ದೇಶದಲ್ಲಿ ಮಹಾತ್ಮ ಗಾಂಧಿಯನ್ನೆ ಕೊಂದ ಸಂತತಿ ಇವರದು, ಇತಿಹಾಸದಲ್ಲಿ ಒರಿಜಿನಲ್ ಹಿಂದೂಗಳ ಇವರ ಪರವಾಗಿ ಇರುವುದು ಯಾವ ಸಾಕ್ಷಿಯೂ ಇಲ್ಲ‌. ಒರಿಜಿನಲ್ ಹಿಂದೂಗಳು ಪ್ರಿಯಾಂಕ್ ಖರ್ಗೆ ಅವರ ಪರವಾಗಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.