Category: Politics

Politics is the art of looking for trouble, finding it everywhere, diagnosing it incorrectly and applying the wrong remedies.

  • ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

    ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

    ಗುರುಮಠಕಲ್ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇಂದು ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ರಾಜ್ಯದ ಜನತೆ ಲಾಭ ಪಡೆಯುತ್ತಿದ್ದಾರೆ, ಇದರಿಂದ ಜನ ಸಂತೃಪ್ತರಾಗಿದ್ದಾರೆ ಎಂದು ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ ಚಿಂಚನಸೂರ ಹೇಳಿದರು.

    ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ, 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಡವರ ಪಾಲಿನ ಅನ್ನರಾಮಯ್ಯರಾಗಿದ್ದಾರೆ.

    ವಿಡಿಯೋ ನೋಡಿ : ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಕೂರಿಸಿಕೊಂಡು ಕಾರ್ಯಕ್ರಮ ಜರುಗಿಸಿ ಶಿಷ್ಟಚಾರ ಉಲ್ಲಂಘಿಸುತ್ತಾ ಬಂದಿದ್ದಾರೆ,

    ಗುರುಮಠಕಲ್ ಮತಕ್ಷೇತ್ರದ ಕುರಿತು ರಾಷ್ಟ್ರೀಯ ನಾಯಕರು ನಿರಂತರ ಮಾಹಿತಿ ಪಡೆಯುತ್ತಲೇ ಇದ್ದಾರೆ, ಇಂದು ಹೊಟ್ಟೆಕಿಚ್ಚಿಗೆ ಈ ರೀತಿ ಘಟನೆ ಜರುಗಿದ್ದು ಜನರ ಅಭಿವೃದ್ಧಿಯೆ ನನ್ನ ಕರ್ತವ್ಯ, ಇಂದಿನಿಂದ ಶಿಷ್ಠಚಾರದ ಪ್ರಕಾರ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಹಾಗೂ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸೇವೆ ಮಾಡುವೆ ಎಂದರು.

    ಇದೇ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಶರಣಪ್ಪ ಮನೆಗಾರ ಮಾತನಾಡಿ, ಇಂದು ಜೆಡಿಎಸ್ ಶಾಸಕರು ಸರಕಾರದ ಕಾರ್ಯಕ್ರಮಗಳಲ್ಲಿ ತಮ್ಮ ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಕೂರಿಸಿಕೊಂಡು ಕಾರ್ಯಕ್ರಮ ಜರುಗಿಸಿ ಶಿಷ್ಟಚಾರ ಉಲ್ಲಂಘಿಸುತ್ತಾ ಬಂದಿದ್ದಾರೆ, ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದೇವೆ ಎಂದರು.

    ರಾಜ್ಯ ಸರಕಾರ ಇಂದು ಬಾಬುರಾವ ಚಿಂಚನಸೂರು ಅವರ ಮೇಲಿನ ಗೌರವ, ಅನುಭವ ಹಾಗೂ ಹಿರಿಯ ನಾಯಕತ್ವ ಕಂಡು ಸಂಪುಟ ಸ್ಥಾನಮಾನ ಹಾಗೂ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಿದ್ದಾರೆ ಆದರೆ ಇಂದು ಅಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ ಎಂದರು.

    ಇದೇ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಕೃಷ್ಣ ಚಪೆಟ್ಲಾ ಉಪಸ್ಥಿತರಿದ್ದರು. (more…)

  • RSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯ

    RSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯ

    ಯಾದಗಿರಿ : ಆರ್ ಎಸ್ ಎಸ್ ಗೀತೆ ಹಾಡಿದರೇ ಮುಖ್ಯಮಂತ್ರಿ ಸ್ಥಾನ ಸಿಗುವಂಗ ಇದ್ದರೇ ನಾನು ಶಾಸಕ ಚನ್ನಾರಡ್ಡಿ ಪಾಟೀಲ್ ಇಬ್ಬರು ಹಾಡುತ್ತೆವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವ್ಯಂಗ್ಯವಾಡಿದರು.

    ಇಲ್ಲಿನ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಂಸ್ಕ್ರತ ಭಾಷೆ ಚನ್ನಾಗಿ ಬಲ್ಲವರಾಗಿದ್ದಾರೆ. ಸಂಧರ್ಭಕ್ಕೆ ಅನುಸಾರವಾಗಿ ಅಧಿವೇಶನದಲ್ಲಿ ಹಾಡಿದ್ದಾರೆ ಅಷ್ಠೆ, ಬಿಜೆಪಿ ನಾಯಕ ಬಿ.ಎಲ್. ಸಂತೋಷ ಅವರನ್ನು ಟೀಕಿಸಿದ ಮಹೇಶ ತಿಮುರುಡಿ ಅವರನ್ನು ಒದ್ದು ಒಳಗೆ ಹಾಕಿದ್ದವೆ ಎಂಬ ಮಾತು ಕೂಡಾ ದೂರು ಬಂದ ಹಿನ್ನಲೆಯಲ್ಲಿ ಹೇಳಿದ್ದಾಗಿದೆ. ಈ ಎರಡನ್ನು ಬೇರೆ ರೀತಿಯಲ್ಲಿ ಹೊಲಿಕೆ ಮಾಡುವುದು ಸರಿಯಲ್ಲ ಎಂದರು.

    ಮುಂದಿನ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕ್ರಾಂತಿ ನಡೆಯುತ್ತಾ ಎಂಬ ಪ್ರಶ್ನೆಗೆ ಅಂತಹದ್ದು ಏನು, ಅದೆಲ್ಲ ಪಕ್ಷದ ಕೇಂದ್ರ ಸಮಿತಿಗೆ ಬಿಟ್ಟಿದ್ದು ಎಂದರು. ಮಾಜಿ ಸಚಿವ ರಾಜಣ್ಣ ಅವರು ದೆಹಲಿಗೆ ಹೋಗಿ ನಾಯಕರನ್ನು ಭೇಟಿ ಮಾಡಿ ಆಗಿರುವ ಘಟನೆ ವಿವರಿಸುತ್ತಾರೆ, ಮುಂದಿನದು ಹೈಕಮಾಂಡಗೆ ಬಿಟ್ಟಿದ್ದು ಎಂದರು. ವಾಲ್ಮೀಕಿ ಸಮುದಾಯವನ್ನು ತುಳಿಯುವ ಕೆಲಸ ಈ ಸರ್ಕಾರ ಮತ್ತು ಪಕ್ಷದಿಂದ ನಡೆಯುತ್ತಿದೆ ಎಂಬುವುದು ಸುಳ್ಳು ಎಂದರು.

    ಬೇರೆಯವರಂತೆಯೇ ನಮ್ಮ ನಾಯಕ ರಾಹುಲ್ ಗಾಂಧಿ ಅವರು ರಿವೆಂಜ್ ಪಾಲಿಟಿಕ್ಸ್ ಮಾಡುವವರಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಬುರುಡೆ ಚಿನ್ನಯ್ಯ ಅರೆಸ್ಟ್ ಆದ ಬಗ್ಗೆ ಕೇಳಿದ ಪ್ರಶ್ನೆಗೆ ಧರ್ಮಸ್ಥಳ ಒಂದು ಊರು. ಅದೇನು ರಾಜ್ಯ, ರಾಷ್ಟ್ರದ ಸಮಸ್ಯೆ ಅಲ್ಲ. ಕೋರ್ಟ್ ಆದೇಶದಂತೆಯೇ ಸರ್ಕಾರ ತನಿಖೆ ನಡೆಸಿದೆ. ಅದರಿಂದ ಏನೇನು ಹೊರಬರಬೇಕು ಅದು ಬರುತ್ತದೆ. ನೀವೇ ಅದು ದೊಡ್ಡದಾಗಿ ನಿತ್ಯ ಬಿಂಬಿಸುತ್ತಿದ್ದಿರಿ ಎಂದು ಮಾಧ್ಯಮದವರ ಕಡೆ ಸಚಿವರು‌ ಬೊಟ್ಟು ಮಾಡಿದರು.

    ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಇದ್ದರು.

    ಬೆಳೆ ಹಾನಿ: ಸಮೀಕ್ಷೆ ವರದಿ ನಂತರ ಪರಿಹಾರ ವಿತರಣೆ.

    ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆ ಬಗ್ಗೆ ಜಿಲ್ಲಾಡಳಿತ ಸಮೀಕ್ಷೆ ನಡೆಸಿ ವರದಿ ಕೊಟ್ಟ ನಂತರ ಪರಿಹಾರ ವಿತರಣೆಯಾಗುತ್ತದೆ. ಈ ಸರ್ಕಾರದಲ್ಲಿ ಇದುವರೆಗೂ ಒಂದು ಬ್ರೀಜ್ ನಿರ್ಮಿಸಿಲ್ಲ. ಈಗ ಆ ಕೆಲಸ ಶುರು ಮಾಡುತ್ತವೆ. ಹೊಸ ಸೇತುವೆಗಳ ನಿರ್ಮಾಣ, ಶಿಥಿಲಗೊಂಡ ಸೇತುವೆಗಳ ದುರಸ್ತಿ ಕೆಲಸ ಕೈಗೊಳ್ಳಲಾಗುವುದು.
    ನಕಲಿ ಜಾತಿ ಪ್ರಮಾಣ‌ ನೀಡುವುದನ್ನು ಜಿಲ್ಲಾಧಿಕಾರಿಗಳು ತಡೆಯುತ್ತಾರೆ ಎಂದು ಸಚಿವ ಜಾರಕಿಹೊಳಿ ಹೇಳಿದರು.

  • ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ

    ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ

    ಯಾದಗಿರಿ: ಕರ್ನಾಟಕ ಅಧಿವೇಶನದಲ್ಲಿ ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಕಲ್ಯಾಣ ಕರ್ನಾಟಕದ ಧ್ವನಿಯಾಗಿ ಅಭಿವೃದ್ದಿ ಬಗ್ಗೆ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವುದನ್ನು ಪ್ರಶ್ನಿಸಿದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ ನೀವು ಯಾವ ಪಕ್ಷದಲ್ಲಿ ಇರುತ್ತೀರಿ ಅಂತ ನಿಮಗೆ ಗೊತ್ತಿಲ್ಲಾ ಎಂದು ಜೆಡಿಎಸ್ ಯಾದಗಿರಿ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಪ್ರಶ್ನಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭೆ ಚುನಾವಣೆಯ ನಂತರ ಹಲವು ದಿನಗಳಿಂದ ನಾಪತ್ತೆಯಾಗಿರುವ ನೀವು ಈಗ ಯಾವ ಪಕ್ಷದಲ್ಲಿದ್ದೀರಿ, ಒಂದ್ ವರ್ಷ ಬಿಜೆಪಿ, ಒಂದ್ ವರ್ಷ ಕಾಂಗ್ರೆಸ್ ಅಂತ ತಿರುಗುವ ನೀವು ಮೊದಲು ಯಾವ ಪಕ್ಷದಲ್ಲಿದ್ದೀರಿ ಎಂದು ಜನತೆಗೆ ತಿಳಿಸಿ, ಆ ನಂತರ ನೀವು ನಮ್ ಶಾಸಕರ ಬಗ್ಗೆ ಹೇಳಿಕೆ ನೀಡಿ, ಶಾಸಕರ ಬಗ್ಗೆ ಹಗುರವಾಗಿ ಮಾತನಾಡುವ, ಹೇಳಿಕೆ ನೀಡುವ ಚಾಳಿಬಿಟ್ಟು ಅಭಿವೃದ್ಧಿ ಪರ ಮಾತನಾಡುವ ಶಾಸಕರಿಗೆ ಬೆಂಬಲ ಕೊಡುವುದನ್ನು
    ಕಲಿಯಿರಿ ಎಂದು ತಿಳಿಹೇಳಿದ್ದಾರೆ.

    ಅಧಿವೇಶನದ ಸಂದರ್ಭಗಳಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ನಮ್ ಶಾಸಕರ ಕೆಲಸ ಅದನ್ನು ಅವರು ಸರಿಯಾಗಿ ಮಾಡುತ್ತಿದ್ದಾರೆ, ಕಳೆದ ಹಲವು ದಶಕಗಳವರೆಗೆ ಗುರುಮಠಕಲ್ ಕ್ಷೇತ್ರದಿಂದಲೇ
    ಆಯ್ಕೆಯಾಗಿ ಹೋದವರು ಇಲ್ಲಿಯ ವರೆಗೂ ಯಾರು ಅಧಿವೇಶನದಲ್ಲಿ ಧ್ವನಿ ಎತ್ತಿಲ್ಲಾ ಎನ್ನುವುದು ನಿಮಗೆ ನೆನಪಿರಲಿ ಎಂದಿದ್ದಾರೆ.

    ಹತ್ತಿಕುಣಿ ಮತ್ತು ಸೌದಾಗರ ಜಲಾಶಯಗಳ ಬಗ್ಗೆ ಸದನದಲ್ಲಿ ರೈತರ ಪರವಾಗಿ ಧ್ವನಿ ಎತ್ತಿ ಆ ಡ್ಯಾಂಗಳ ಅಭಿವೃದ್ಧಿಗಾಗಿ ಸರ್ಕಾರದ ಗಮನ ಸೆಳೆದರೆ ತಮಗೇಕೆ ಸಿಟ್ಟು ಆ ಭಾಗದ ಜನರ ಅಭಿವೃದ್ಧಿ ನಿಮಗೆ ಬೇಡವೆ ಇದನ್ನಿಟ್ಟುಕೊಂಡು ನೀವು ಹೇಳಿಕೆ ನೀಡಿದ್ದೀರಿಲ್ಲ
    ಜನರ ಅಭಿವೃದ್ಧಿಗಾಗಿ ಸದನದಲ್ಲಿ ಧ್ವನಿ ಎತ್ತಿರುವುದರಲ್ಲಿ ತಪ್ಪೇನಿದೆ ಎಂಬುದು ನೀವೇ ಹೇಳಬೇಕು ಎಂದಿದ್ದಾರೆ.

    ವಿಧಾಸಭೆ ಅಧಿವೇಶನದಲ್ಲಿ ನಮ್ಮ ಭಾಗದ ಧ್ವನಿಯಾಗಿ ನಮ್ ಶಾಸಕರು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ದೃಷ್ಠಿಕೋನವನ್ನಿಟ್ಟುಕೊಂಡು ಮಾತನಾಡುತ್ತಾರೆ, ಅದರಲ್ಲಿ ನಮ್ಮ ಗುರುಮಠಕಲ್ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಅವರ ಅಭಿವೃದ್ಧಿ ಸಹಿಸದ ನೀವು ಇಲ್ಲ ಸಲ್ಲದ ಹೇಳಿಕೆ ನೀಡುತ್ತಾ ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಾ ಕಾಲಹರಣ ಮಾಡುತ್ತಿರುವ ನೀಮ್ಮಿಂದ ನಮ್ ಶಾಸಕರು ಕಲಿಯಬೇಕಾಗಿಲ್ಲಾ, ನಮ್ ಶಾಸಕರು ಸದನದಲ್ಲಿ ಮಾತನಾಡಿದಾಗ ಪಕ್ಷಾತೀತವಾಗಿ ರಾಜ್ಯದ ಹಲವು ಶಾಸಕರು ಬೆಂಬಲ ನೀಡುತ್ತಿದ್ದಾರೆ ಅಂತದರಲ್ಲಿ ನೀವು ಯಾದಗಿರಿ ಜಿಲ್ಲೆಯವರಾಗಿ ವಿರೋಧ ಹೇಳಿಕೆ ನೀಡುತ್ತಿದ್ದೀರಿಲ್ಲ ಇದರಲ್ಲೆ ತಿಳಿಯುತ್ತೆ ನಿಮ್ಮ ಮೂರ್ಖತನದ ಬುದ್ದಿ. ನೀವು ಇದೆ ರೀತಿ ಮುಂದುವರೆಸಿದರೆ ನಾವು ನಿಮ್ಮ ಭಾಷೆಯಲ್ಲಿ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

  • ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ

    ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ

    ಯಾದಗಿರಿ : ವಾಯುಭಾರ ಕುಸಿತದಿಂದಾಗಿ ಒಂದು ವಾರದವರೆಗೂ ಸುರಿದ ಸತತ ಮಳೆಗೆ ಜಿಲ್ಲೆಯ ರೈತರು ಬಿತ್ತಿದ ಹೆಸರು, ತೊಗರಿ ಮತ್ತು ಹತ್ತಿ ಇತರೆ ಬೆಳೆಗಳು ಹಾಳಾಗಿದ್ದು, ಈಗ ಆರಂಭಿಸಲಿರುವ ಸಮೀಕ್ಷೆ ಬೇಗನೆ ಮುಗಿಸಿ ಹಾನಿಗೊಳಗಾದ ರೈತರಿಗೂ ಹಾಗೂ ಮನೆಗಳು ಕುಸಿದು ಸೂರು ಕಳೆದಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಶುಕ್ರವಾರ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ಬೆಳೆಗಳು ರಾಶಿ ಹಂತಕ್ಕೆ ಬಂದಿದ್ದವು, ಇದಕ್ಕೆ ಸಿದ್ದರಾಗಿದ್ದ ರೈತರಿಗೆ ಈ ಮಳೆ ಬರಸಿಡಿಲು ಬಡಿದಂತೆಯೇ ಆಗಿದೆ.

    ಹೆಸರು ರೈತರ ಮಿತ್ರ ಬೆಳೆ. 40 ದಿನಗಳಲ್ಲಿ ಕೈಸೇರುವ ಇದು ಮಾರಿ ಮುಂದಿನ ಬೆಳೆ ಬಿತ್ತನೆಗೆ ರೈತರು ಸಜ್ಜಾಗುತ್ತಿದ್ದರು. ಆದರೇ ಅವರ ಕನಸು ನುಚ್ಚುನೂರಾಗಿದೆ. ಕಾರಣ ರೈತರು ಉಳಿದರೇ ಎಲ್ಲರೂ ಉಳಿದಂತೇ. ಕಾರಣ ತ್ವರಿತಗಯಲ್ಲಿ ಸಮೀಕ್ಷೆ ನಡೆಸಿ ಪರಿಹಾರ ವಿತರಿಸುವ ಆಗಬೇಕೆಂದು ಶಾಸಕರು ಸಭಾಧ್ಯಕ್ಷರ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಜಿಲ್ಲೆಯ ಆರು ತಾಲೂಕುಗಳಲ್ಲಿ ಮಳೆಯಿಂದ ಮನೆಗಳು ಕುಸಿದಿವೆ. ಇದರಿಂದ ಬಡವರ ಬದುಕು ಬೀದಿಗೆ ಬಂದಿದೆ. ಕಾರಣ, ಸಂಬಂಧಪಟ್ಟ ಅಧಿಕಾರಿಗಳಿಂದ ಇದರ ಸಮೀಕ್ಷೆ ಕೂಡಾ ನಡೆಸಿ ಪರಿಹಾರ ನೀಡಬೇಕೆಂದು ತುನ್ನೂರು ಮನವಿ ಮಾಡಿದ್ದಾರೆ.

  • ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು

    ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು

    ಗುರುಮಠಕಲ್: ಭಾರತ ಸ್ವಾತಂತ್ರದ ನಂತರ ಹಲವಾರು ದಶಕಗಳ ವರೆಗೂ ಸಣ್ಣಪುಟ್ಟ ರಾಷ್ಟ್ರಗಳೊಂದಿಗೆ ಹೋಲಿಕೆ ಆಗುತ್ತಿತ್ತು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಲಾಢ್ಯ ರಾಷ್ಟ್ರಗಳ ಜೊತೆ ಸರಿಸಮವಾಗಿ ಜಾಗತಿಕ ಮಟ್ಟದಲ್ಲಿ ಎಲ್ಲಾ ರಂಗದಲ್ಲಿ ಸ್ಪರ್ಧೆ ನೀಡುವಂತಾಗಿದ್ದೇವೆ ಎಂದು ಶಾಸಕ ಶರಣು ಗೌಡ ಕಂದಕೂರು ಹೇಳಿದರು.

    ಪಟ್ಟಣದ ಜವಾಹರಲಾಲ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವತಂತ್ರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಯೋತ್ಪಾದಕರ ಕುತಂತ್ರಕ್ಕೆ 27 ಜನ ಭಾರತೀಯರು ಬಲಿಯಾಗಿರುವ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಚರಣೆ ವಿರೋಧಿಗಳಿಗೆ ನಿದ್ದೆಗೆಡಿಸಿದೆ. ಭಾರತದ ವಿದೇಶಾಂಗ ನೀತಿಯು ಹಿಂದೆ ರಕ್ಷಣಾತ್ಮಕವಾಗಿತ್ತು. ಈಗ ತೀಕ್ಷವಾಗಿದ್ದು, ಕೊರೋನಾ ಕಾಲದಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ಕಂಡು ದೊಡ್ಡ ದೇಶಗಳು ಕೂಡ ಬೆರಗಾಗಿವೆ ಎಂದು ಅವರು ಬಣ್ಣಿಸಿದರು.

    ಅಧ್ಯಕ್ಷ ಭಾಷಣಕ್ಕೂ ಮುಂಚೆ ಕಲಬುರಗಿ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧೀಪತಿಗಳಾದ ಡಾ||ಶರಣಬಸಪ್ಪ ಅವರಿಗೆ ಸಂತಾಪ ಸೂಚಿಸಿದರು, ವೇದಿಕೆ ಮೇಲಿದ್ದ ಪುರಸಭೆ ಮುಖ್ಯಾಧಿಕಾರಿಗಳಿಗೆ ಮತ್ತು ತಾಲೂಕ ದಂಡಾಧಿಕಾರಿಗಳಿಗೆ ಶಿಸ್ತು ಮತ್ತು ಸಮಯ ಪರಿಪಾಲನೆ ಮಾಡುವಂತೆ ಎಚ್ಚರಿಕೆ ನೀಡಿದರು.

    ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಿದ ಚಂದ್ರಶೇಖರ್ ಪಾಟೀಲ್, ಅಜ್ಞಾತ ಸ್ವಾತಂತ್ರ ವೀರರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸೋಣ ಕೇವಲ ಒಂದು ವ್ಯಕ್ತಿಯಿಂದ ಸ್ವಾತಂತ್ರ ನಮಗೆ ಬಂದಿಲ್ಲ, ಸಾವಿರಾರು ದೇಶಭಕ್ತರು ದೇಶಕ್ಕಾಗಿ ಹುತಾತ್ಮರಾಗಿರುವ ಪ್ರಯುಕ್ತ ನಮಗೆ ದೇಶ ಸ್ವಾತಂತ್ರ ಸಿಕ್ಕಿದೆ ಜಲಿಯನ್ ವಾಲಿಬಾಲ್ ಹತ್ಯಾಕಾಂಡ ಹಾಗೂ ದೇಶಭಕ್ತ ಉದಂ ಸಿಂಗ್ ಅವರ ಕುರಿತು ವಿವರಿಸಿ ಮಕ್ಕಳಲ್ಲಿ ದೇಶಭಕ್ತಿ ಮೂಡಿಸಿದರು.

    ಇದಕ್ಕೂ ಮುಂಚೆ ತಾಲೂಕ ದಂಡಾಧಿಕಾರಿ ಹಾಗೂತಹಸೀಲ್ದಾರ ಶಾಂತಗೌಡ ಬಿರಾದಾರ ಧ್ವಜಾರೋಹಣ ನೆರವೇರಿಸಿ ಪ್ರಾಸ್ಥಾವಿಕ ನುಡಿ ಹೇಳಿದರು.

    ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಿದ್ದರು.

    ಈ ವೇಳೆ ವೇಧಿಕೆಮೇಲೆ ಜಯಶ್ರೀ ಪೊ.ಪಾಟೀಲ್ ಪುರಸಭೆ ಅಧ್ಯಕ್ಷರು, ರೇಣುಕಾ ವಿ.ಪಡಿಗೆ ಉಪಾಧ್ಯಕ್ಷರು, ಅಂಬ್ರೇಶ್ ಪಾಟೀಲ್ ತಾ.ಪಂ ಇ. ಓ, ಭಾರತಿ.ಸಿ.ದಂಡೋತಿ ಪುರಸಭೆ ಮುಖ್ಯಾಧಿಕಾರಿ, ವೀರಣ್ಣ.ಎಸ್. ದೊಡ್ಡಮನಿ ಆರಕ್ಷಕ ನಿರೀಕ್ಷಕರು, ನರಸಿಂಹಸ್ವಾಮಿ ಉಪ ತಹಶೀಲ್ದಾರ್ ಸೇರಿದಂತೆಮುಖಂಡರುಗಳು ಸಾರ್ವಜನಿಕಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  • ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ

    ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ

    ಗುರುಮಠಕಲ್ : ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬೈಕ್ ರ್ಯಾಲಿ ಜರುಗಿತು.

    ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಸುದ್ದಿಗರರೊಂದಿಗೆ ಮಾತನಾಡಿದ ಯಾದಗಿರಿ ನಗರಸಭೆಯ ಅಧ್ಯಕ್ಷೆಯೂ ಆಗಿರುವ ಪಕ್ಷ ಮುಖಂಡೆ ಲಲಿತಾ ಅನಪುರ ಅವರು, ಆಗಸ್ಟ್ 15ರಂದು ಸ್ವಾತಂತ್ರ್ಯ ದಿನೋತ್ಸವದ ಹಿನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಆಯೋಜಿಸಿರುವುದಾಗಿ ಅವರು ತಿಳಿಸಿದರು.

    ಅಭಿಯಾನದಲ್ಲಿ ಪ್ರತಿ ಮನೆಯಲ್ಲೂ ಆಗಸ್ಟ್ 15ರಂದು ಬೆಳಿಗ್ಗೆ ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜಾರೋಹಣ ಮಾಡುವುದು ಮತ್ತು ಗೌರವ ಪೂರ್ವಕವಾಗಿ ಸಂಜೆ ವೇಳೆ ಅವರೋಹಣವನ್ನೂ ಮಾಡಬೇಕು. ಜತೆಗೆ ಧ್ವಜವನ್ನು ಅತ್ಯಂತ ಗೌರವದಿಂದ ಮನೆಯಲ್ಲಿ ಸಂರಕ್ಷಿಸಿಡಬೇಕು. ರಾಷ್ಟ್ರ ಧ್ವಜಕ್ಕೆ ಅವಮಾನವಾಗುವಂತೆ ಎಲ್ಲೆಂದರಲ್ಲಿ ಬಿಸುಡದಿರಿ ಎಂದು ಕೋರಿದರು.

    ಬಸವೇಶ್ವರ ವೃತ್ತದಲ್ಲಿ (ಹಳೇ ತಹಶೀಲ್ದಾರ್ ಕಚೇರಿ) ನಿಜಶರಣ ಅಂಬಿಗರ ಚೌಡಯ್ಯ ವೃತ್ತ, ಗಂಗಾಪರಮೇಶ್ವರ ವೃತ್ತ, ನಗರೇಶ್ವರ ದೇವಸ್ಥಾನ, ನಾರಾಯಣಪುರ ಬಡಾವಣೆ, ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆಯಲ್ಲಿ ಬಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಡಾ.ಬಾಬೂಜೀ ಮೂರ್ತಿಗಳಿಗೆ ಹೂಮಾಲೆ ಹಾಕುವ ಮೂಲಕ ಬೈಕ್ ರ್ಯಾಲಿ ಪೂರ್ಣಗೊಂಡಿತು.

    ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ನೀಲಪ್ಪ ಗುಳಿಗಿ, ಯುವ ಮೋರ್ಚಾ ಅಧ್ಯಕ್ಷ ಶ್ರೀಧರ, ಮಂಡಲ ಘಟಕದ ಅಧ್ಯಕ್ಷ ನರಸಿಂಹುಲು ನಿರೇಟಿ, ಕೆ.ದೇವದಾಸ, ವೆಂಕಟಪ್ಪ ಅವಾಂಗಪುರ, ಮಲ್ಲಿಕಾರ್ಜುನ ಹೊನಗೇರಾ, ಚಂದುಲಾಲ್ ಚೌದರಿ, ಜಗದೀಶ ಮೇಂಗಜಿ, ಮೌನೇಶ ಬೆಳಗೇರಾ, ವಿನಾಯಕರಾವ ಜನಾರ್ಧನ, ರಾಜೇಂದ್ರ ಕಲಾಲ್, ಮಲ್ಲೇಶಪ್ಪ ಬೇಲಿ, ರವೀಂದ್ರರೆಡ್ಡಿ ಪೋತುಲ್, ರಾಮುಲು, ಮರಿಲಿಂಗ, ಲಕ್ಷ್ಮಣ ಆಶನಾಳ, ಬಾಲಪ್ಪ, ಸುನೀಲ್ ಕಡೇಚೂರ ಚನ್ನಪ್ಪ ಕಾಕಲವಾರ. ರಮೇಶ್ ಕಾಕಲವಾರ ಉಪಸ್ಥಿತರಿದ್ದರು.

  • ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ

    ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ

    ಯಾದಗಿರಿ: ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯಲ್ಲಿ ವಿಳಂಬ ಉಂಟಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೃಷಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

    ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇಂದ್ರ ಸರ್ಕಾರ ಯೂರಿಯಾ ಮತ್ತು ಡಿಎಪಿ ರಸಗೊಬ್ಬರವನ್ನು ನಿರೀಕ್ಷೆಗೂ ಮೀರಿ ಪೂರೈಸಿದ್ದರೂ, ರಾಜ್ಯ ಸರ್ಕಾರವು ರೈತರಿಗೆ ಸಮಯಕ್ಕೆ ಸರಿಯಾಗಿ ವಿತರಣೆ ಮಾಡಲು ವಿಫಲವಾಗಿದ್ದೂ, ಸಿಎಂ ಸಿದ್ದರಾಮಯ್ಯನವರು ಕೇಂದ್ರದಿಂದ ಗೊಬ್ಬರ ಬಾರದಂತೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಗನೂರ ಆರೋಪಿಸಿದರು.

    ರಾಜ್ಯದಲ್ಲಿ ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ, ಏಕಕಾಲದಲ್ಲಿ ಬಿತ್ತನೆ ಪ್ರಾರಂಭವಾಗದೆ, ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಯೂರಿಯಾ ಮತ್ತು ಬೀಜಗಳ ಪ್ರಮಾಣವನ್ನು ಮುಂಚಿತವಾಗಿ ಅಂದಾಜು ಮಾಡಬೇಕಿತ್ತು. ಆದರೆ, ಗೋದಾಮುಗಳಲ್ಲಿ ಸರಿಯಾಗಿ ದಾಸ್ತಾನು ಮಾಡದೆ, ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಿದೆ.

    ಗ್ಯಾರಂಟಿ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವ ಸರ್ಕಾರ, ಎಲ್ಲೆಡೆ ಕಾರ್ಯಕ್ರಮಗಳನ್ನು ಆಯೋಜಿಸಿ ನಮ್ಮ ಸರ್ಕಾರ ಸಾಕಷ್ಟು ಸಾಧನೆ ಮಾಡಿದೆ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ, ರೈತರ ರಸಗೊಬ್ಬರದ ಸಂಕಷ್ಟ ಇವರಿಗೆ ಕಾಣಿಸುತ್ತಿಲ್ಲ.ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯದ ಫಲವನ್ನು ರೈತರು ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಕೃಷಿ ಸಚಿವರು ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳುವುದು ವಾಸ್ತವಿಕತೆಗೆ ದೂರವಾಗಿದೆ. ಜಿಲ್ಲೆಗಳ ಪರಿಸ್ಥಿತಿ ಅರಿತುಕೊಳ್ಳಲು ಅವರು ಎಲ್ಲಿಗೂ ಭೇಟಿ ನೀಡಿಲ್ಲ. ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸರ್ಕಾರದ ಗಮನಕ್ಕೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

    ರೈತರ ಕಣ್ಣಲ್ಲಿ ನೀರು ಬರಿಸಿದರೆ ಆ ಮುಖ್ಯಮಂತ್ರಿಗಳಿಗೆ ಒಳ್ಳೆಯದಾಗದು. ರೈತರನ್ನು ದುಸ್ಥಿತಿಗೆ ತಂದ ಕೃಷಿ ಸಚಿವರಿಗೂ ಒಳ್ಳೆಯದಾಗದು. ಹವಾಮಾನ ಇಲಾಖೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಟೀಕಿಸಿದರು.

    ಇದು ರೈತ ವಿರೋಧಿ ಸರಕಾರ, ಹಗರಣಗಳ ಸರಕಾರ. ರೈತರ ಕುರಿತು ಜವಾಬ್ದಾರಿಯಿಂದ ಮಾತನಾಡದೆ ಕೇಂದ್ರವನ್ನು ದೂಷಿಸಿದರೆ ಒಳ್ಳೆಯದಾಗದು ಎಂದ ಅವರು ಕೂಡಲೇ ರೈತರಿಗೆ ರಸಗೊಬ್ಬರದ ಸಮಸ್ಯೆಯನ್ನು ಪರಿಹರಿಸುವಲ್ಲಿ ಮುಂದಾಗಬೇಕು ಇಲ್ಲವಾದಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಕೃಷಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

  • ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

    ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

    ಸತ್ಯಕಾಮ ವಾರ್ತೆ ಯಾದಗಿರಿ:

    ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಯಾದಗಿರಿಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಇದೇ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ರಾಜ್ಯದಲ್ಲಿ ಕಳೆದ ೨ ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರ ರಾಜ್ಯದ ರೈತರ ಸಮಸ್ಯೆಗೆ ಮತ್ತು ಮಳೆ ಹಾನಿ ಹಾಗೂ ನೆರೆ ಹಾವಳಿಯಿಂದ ಹಾಗೂ ಮಳೆ ಕೊರತೆಯಿಂದ ಭಾಧೀತವಾದ ರೈತರ ಮತ್ತು ನೊಂದ ಸಂತ್ರಸ್ಥರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಳೆದ ೨ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರ ಲಂಚಗುಳಿತನ, ದುರಾಡಳಿತ ಮತ್ತು ವೈಫಲ್ಯತೆಯಿಂದ ರಾಜ್ಯದ ಜನತೆ ಆಕ್ರೋಶದಿಂದ ಬೇಸತ್ತು ಬಸವಳಿದಿದ್ದಾರೆ. ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರುನಲ್ಲಿ ಉತ್ತಮ ಮಳೆಯಾಗಿದ್ದು, ರಾಜ್ಯದ ರೈತರು ತಮ್ಮ ಬಹುತೇಕ ಕೃಷಿ ವಿಸ್ತೀರ್ಣದಲ್ಲಿ ಕೃಷಿ ಚಟುವಟಿಕೆ ಪ್ರಾರಂಭಿಸಿ ಬಿತ್ತನೆಯಲ್ಲಿ ತೊಡಗಿದ್ದಾರೆ ಹಾಗೂ ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಹಾಗೂ ಕೆರೆ ಕಟ್ಟೆಗಳು ಭರ್ತಿಗೊಂಡಿದ್ದು, ನೀರಾವರಿ ಅಚ್ಚುಕಟ್ಟಿನಲ್ಲಿ ರೈತರು ಸಾಗುವಳಿ ಪ್ರಾರಂಭಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ರೈತರಿಗೆ ಅಗತ್ಯವಿರುವ ರಸ ಗೊಬ್ಬರವನ್ನು ಪೂರೈಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸದರು.

    ಮಳೆ ಮತ್ತು ನೆರೆ ಹಾವಳಿಯಿಂದ ಫಸಲು ನಷ್ಟಕ್ಕೆ ಮತ್ತು ಮಳೆ ಅಭಾವದಿಂದ ಹಾಳಾದ ಬೆಳೆ ನಷ್ಟಕ್ಕೆ ಸಂಬAಧಿಸಿದ ಫಸಲು ವಿಮಾ ಕಂಪನಿಗಳಿAದ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಎಲ್ಲಾ ವೈಫಲ್ಯಗಳಿಂದ ರಾಜ್ಯದಲ್ಲಿರುವ ಕಾಂಗ್ರೇಸ್ ಸರ್ಕಾರ ಆಡಳಿತ ನಡೆಸಲು ನೈತಿಕವಾಗಿ ಅಧಿಕಾರ ಕಳೆದುಕೊಂಡಿದೆ. ಗೌರವಾನ್ವಿತ ರಾಜ್ಯಪಾಲರು, ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನವಿತ್ತು ಎಚ್ಚರಿಕೆ ನೀಡಿ, ರೈತರ ಸಮಸ್ಯೆ ಹಾಗೂ ನೆರೆ ಹಾವಳಿಯಿಂದ ನೊಂದ ಸಂತ್ರಸ್ತರಿಗೆ ಹಾಗೂ ಮಳೆ ಅಭಾವದಿಂದ ಫಸಲನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

    ಒಂದು ವೇಳೆ ರಾಜ್ಯ ಸರ್ಕಾರ ಸಂವಿಧಾನ ರೀತಿ ಕಾರ್ಯನಿರ್ವಹಿಸದಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಚನ್ನಪ್ಪಗೌಡ ಮೊಸಂಬಿ, ನವಾಜರೆಡ್ಡಿ ಚಪೇಟ್ಲಾ, ರಾಮಣ್ಣ ಕೋಟಗೇರಾ, ಬಸವರಾಜಪ್ಪಗೌಡ ಗೊಂದಡಗಿ, ಬಸವರಾಜ ಕಣೇಕಲ್, ಈಶಪ್ಪ ರಾಖಾ, ರಾಜೇಶ ಉಡುಪಿ ಸೈದಾಪೂರ, ದೇವಿಂದ್ರಪ್ಪ ಸುರಪೂರ, ಶಿವು ಮೊಟಗಿ ಶಹಾಪೂರ, ಶಿವಣ್ಣ ಸುರಪೂರ, ವಿಶ್ವನಾಥ ಶಿರವಾಳ, ಬಂದಪ್ಪ ಅರಳಿ, ನರಸಪ್ಪ ಕವಡೆ, ಶರಣು ಆವಂಟಿ, ಪ್ರಕಾಶ ನೀರಟ್ಟಿ, ಬಸ್ಸಣ್ಣ ದೇವರಹಳ್ಳಿ, ರವಿ ಪಾಟೀಲ್ ಗುರುಮಿಠಕಲ್, ಮಲ್ಲಣ್ಣಗೌಡ ಕೌಳೂರು, ಬಸ್ಸುಗೌಡ ಚಾಮನಹಳ್ಳಿ, ಬಸರಡ್ಡಿ ಹೆಗ್ಗಣಗೇರಾ ಚಂದ್ರಾಯಗೌಡ ಹತ್ತಿಕುಣಿ, ಶರಣಗೌಡ ಚಾಮನಹಳ್ಳಿ, ರವಿ ಪಾಟೀಲ್ ಹತ್ತಿಕುಣಿ, ಮಲ್ಲಿಕಾರ್ಜುನ ಅರುಣಿ, ಈಶ್ವರ ನಾಯಕ,ಜಯೇಂದ್ರ ಚವ್ಹಾಣ, ಪರಮರೆಡ್ಡಿ ಕಂದಕೂರ, ದೊಡ್ಡಣ್ಣಗೌಡ ಅರಕೇರಾ (ಬಿ), ಮಾರ್ಥಂಡ ಮಾನೇಗಾರ, ನಿಂಗಾರೆಡ್ಡಿ ಯಡ್ಡಳ್ಳಿ, ತಾಯಪ್ಪ ಬದ್ದೇಪಲ್ಲಿ, ಅನಂತಪ್ಪ ಮುಕಡಿ, ಶರಣು ಗಾಡಿ ಮೋಟ್ನಳ್ಳಿ, ಲಕ್ಷ್ಮಣನಾಯಕ ಕುಡ್ಲೂರ, ಅಲ್ಲಾವುದ್ದೀನ್ ನೀಲಹಳ್ಳಿ ಸೇರಿದಂತೆ ಇತರರಿದ್ದರು.
    ರಾಜ್ಯ ಸರ್ಕಾರ ಕೇಳಿದ್ದಕ್ಕಿಂತ ಹೆಚ್ಚಿಗೆ ಕೊಟ್ಟಾರಲ್ರಿ

    ಕಾಳಸಂತೆಕೋರರು ಸಾಕಷ್ಟು ಪ್ರಮಾಣದಲ್ಲಿ ಶೇಖರಣೆ ಮಾಡಿ ವಿತರಿಸದೇ ಇರುವುದರಿಂದ ರೈತರು ಪರದಾಡುತ್ತಿದ್ದಾರೆ. ಈ ರಸ ಗೊಬ್ಬರಗಳು ಕಾಳಸಂತೆಯಲ್ಲಿ ವರ್ತಕರು ಮನಸೋ ಇಚ್ಚಾ ಬಂದ ಧರದಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ರಾಜ್ಯಕ್ಕೆ ಕೊರತೆ ಇರುವ ರಸ ಗೊಬ್ಬರಗಳನ್ನು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಸಂಪರ್ಕಿಸಿ ಪಡೆಯಲು ವಿಫಲವಾಗಿದೆ. ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ೬.೩೧೦೦೦ ಮೆಟ್ರಿಕ ಟನ್ ರಸ ಗೊಬ್ಬರ ಬೇಡಿಕೆ ಇಟ್ಟಿರುತ್ತಾರೆ. ಆದರೂ ಕೇಂದ್ರ ಸರ್ಕಾರ ನಿರೀಕ್ಷೆಗೆ ಮೀರಿ ೮.೭೩೦೦೦ ಮೆಟ್ರಿಕ ಟನ್ ರಸಗೊಬ್ಬರ ಪೂರೈಸಿದ್ದಾರೆ. ಈ ಪೈಕಿ ಕೇವಲ ೫.೨೭ ಲಕ್ಷ ಟನ್ ರಸ ಗೊಬ್ಬರ ನೀಡಿರುವುದಾಗಿ ರಾಜ್ಯ ಸರ್ಕಾರ ಆಪಾದನೆ ಮಾಡುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದತ್ತ ಕೈಮಾಡಿ ತೋರಿಸಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.


    ಸುಭಾಶ್ಚಂದ್ರ ಕಟಕಟಿ ಜೆಡಿಎಸ್ ಜಿಲ್ಲಾಧ್ಯಕ್ಷರು, ಯಾದಗಿರಿ
  • ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

    ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ:

    ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

    ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ. ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

    ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

    ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್.ಬಿ.ವಡವಡಗಿ (ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಸತ್ಯಕಾಮ ವಾರ್ತೆ ಸುರಪುರ: 

    ಸೇನೆ, ಅರೆ ಸೇನಾಪಡೆ ಮತ್ತು ಮಾಜಿ ಸೈನಿಕರ ಸಂಘ ಸುರಪುರ ವತಿಯಿಂದ ಏರ್ಪಡಿಸಿದ್ದ 26ನೇ ಕಾರ್ಗಿಲ್ ವಿಜಯೋತ್ಸವ ಮತ್ತು ಆಪರೇಷನ್ ಸಿಂಧೂರ ಯಶಸ್ವಿ ಸಮಾರಂಭದಲ್ಲಿ ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಹಾಗೂ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮಿನಾರಾಯಣ ನಾಯಕ ಅವರು ಭಾಗಿಯಾಗಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಗರುಡಾದ್ರಿ ಕಲಾ ಮಂದಿರದ ವರೆಗೆ ನಡೆದ ವಿಜಯೋತ್ಸವ ಯಾತ್ರೆಗೆ ಚಾಲನೆ ನೀಡಿದರು.

    ನಂತರ ಗರುಡಾದ್ರಿ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸೈನಿಕರಿಗೆ ಸನ್ಮಾನಿಸಿ ಗೌರವಿಸಿ ವಿಜಯೋತ್ಸವ ಉದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಾಜಿ ಸೈನಿಕರುಗಳು ಹಾಗೂ ತಾಲೂಕು ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಗ್ಯಾರಂಟಿ ಯೋಜನೆ ಅಧ್ಯಕ್ಷರು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು