Category: Politics

Politics is the art of looking for trouble, finding it everywhere, diagnosing it incorrectly and applying the wrong remedies.

  • ಮಾಜಿ ಪ್ರಧಾನಿ ಇಂದಿರಾ ಗಾಂಧಿ ರೆಕಾರ್ಡ್​​ ಬ್ರೇಕ್​ ಮಾಡಿದ ಮೋದಿ ಹೊಸ ದಾಖಲೆ ನಿರ್ಮಾಣ

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ರೆಕಾರ್ಡ್​​ ಬ್ರೇಕ್​ ಮಾಡಿದ ಮೋದಿ ಹೊಸ ದಾಖಲೆ ನಿರ್ಮಾಣ

    • ‘ದಕ್ಷ ಆಡಳಿತ ನೀಡುತ್ತಿರುವ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಕೈ ಯತ್ನ’

    ಸತ್ಯಕಾಮ ವಾರ್ತೆ ಯಾದಗಿರಿ:

    ದೇಶಧ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಆಡಳಿತ ಅವಧಿಯನ್ನು ಹಿಂದಿಕ್ಕಿ ಅತಿ ಹೆಚ್ಚು ಅವಧಿಯ ಎರಡನೇ ಪ್ರಧಾನ ಮಂತ್ರಿಗಳಾಗಿದ್ದುದು ದೇಶದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ವಕ್ತಾರ ಹಣಮಂತ ಇಟಗಿ ಹೇಳಿದ್ದಾರೆ.

    ಈ ಕುರಿತು ಹೇಳಿಕೆ ನೀಡಿರುವ ಅವರು, ಇಂದಿರಾಗಾAದಿಯವರ ಅಧಿಕಾರ ಅವಧಿಯ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಇಂದು ನಿರ್ಮಿಸಿದ್ದು, ನಾಗಾಲೋಟದಲ್ಲಿ ಮುಂದೆ ಸಾಗುತ್ತಿದ್ದಾರೆ. ಮೋದಿಜಿ ಅವರ ಆಡಳಿತಕ್ಕೆ ದೇಶದ ಜನತೆ ಹೆಮ್ಮೆ ಪಡುತ್ತಿದ್ದು, ಇನ್ನು ಹಲವು ದಾಖಲೆ ನಿರ್ಮಿಸಲಿ ಎಂದು ವಿಶ್ವದಾದ್ಯಂತ ಇರುವ ಭಾರತೀಯರು ಹಾರೈಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

    ದೇಶವನ್ನು ಅಭೂತಪೂರ್ವವಾಗಿ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಅವರ ಆಡಳಿತವನ್ನು ನೋಡಿ ವಿರೋಧ ಪಕ್ಷವಾದ ಕಾಂಗ್ರೆಸ್ ಹತಾಶಗೊಂಡು ನಿರಾಧಾರವಾದ ಆರೋಪಗಳನ್ನು ದಿನನಿತ್ಯ ಮಾಡುವುದನ್ನೇ ಒಂದು ಚಟವಾಗಿಸಿಕೊಂಡಿದೆ. ದೇಶದ ಅಭಿವೃದ್ಧಿಗಾಗಿ ಹಗಲು ರಾತ್ರಿ ಶ್ರಮಿಸುತ್ತ ಭಾರತ ದೇಶವನ್ನು ಪ್ರಪಂಚದ 4ನೇ ಅತಿದೊಡ್ಡ ಆರ್ಥಿಕತೆಯ ಸ್ಥಾನಕ್ಕೆ ಹೆಚ್ಚಿಸಿ ಎಲ್ಲರಂಗಗಳಲ್ಲಿಯೂ ಅಭಿವೃದ್ಧಿ ಪಥದಲ್ಲಿ ದೇಶ ಕೊಂಡೊಯ್ಯುತ್ತಿದ್ದಾರೆ.

    ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತು ಸ್ವಚ್ಛ ಭಾರತ ಅಭಿಯಾನದಂತಹ ದೂರದೃಷ್ಟಿಯ ಕಾರ್ಯಕ್ರಮಗಳು ನೀಡಿದ್ದಾರೆ.
    ರೈತರಿಗೆ ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಿದೆ. ರಾಜತಾಂತ್ರಿಕ ಪ್ರಯತ್ನಗಳು ಭಾರತಕ್ಕೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಇತರ ದೇಶಗಳೊಂದಿಗೆ ಬಲವಾದ ಸಂಬAಧಗಳAತಹ ಉಪಕ್ರಮಗಳೊಂದಿಗೆ ಜಾಗತಿಕ ವೇದಿಕೆಯಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿಕೊಟ್ಟಿವೆ. ಇಂದಿರಾಗಾAದಿಗಿAತಲೂ ಸಮರ್ಥವಾಗಿ ದೇಶವನ್ನು ಮುನ್ನಡೆಸುತ್ತಿರುವ ಮೋದಿಜಿ ಅವರ ನೇತೃತ್ವದ ಕೇಂದ್ರದ ಸುಸ್ಥಿರ ಸರ್ಕಾರದ ಕೂದಲು ಕೊಂಕಿಸಲು ಆಗದೆ ಇರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹತಾಶರಾಗಿದ್ದು, ಕ್ಷÄಲ್ಲಕ ಕಾರಣ ಮುಂದೆ ಮಾಡಿ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿಯ ವಿರುದ್ಧ ಇಲ್ಲಸಲ್ಲದ ಸುಳ್ಳುಗಳನ್ನು ಮುಂದೆ ಮಾಡಿ ತಾವು ಜೀವಂತ ಇದ್ದೇವೆ ಎಂದು ತೋರಿಸಿಕೊಳ್ಳಲು ಹೆಣಗುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸೇರಿದಂತೆ ಹತ್ತಾರು ಹಗರಣಗಳು ಮಾಡಿ ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದ್ದು, ಒಟ್ಟಾರೆ ದೇಶದಾದ್ಯಂತ ಸುಳ್ಳಿನ ಆಸರೆಯೊಂದಿಗೆ ಪ್ರಜಾಪ್ರಭುತ್ವ ಮತ್ತು ಕೇಂದ್ರದ ಉತ್ತಮ ಆಡಳಿತವನ್ನು ದುರ್ಬಲಗೊಳಿಸಲು ಇನ್ನಿಲ್ಲದಂತೆ ಹೆಣಗುತ್ತಿದೆ. ಆದರೆ ದೇಶದ ಹಾಗೂ ರಾಜ್ಯದ ಜನತೆ ಕಾಂಗ್ರೆಸ್ ನ ಸುಳ್ಳಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

  • ನರೇಂದ್ರ ಮೋದಿಜಿ ಪ್ರಧಾನಿಮಂತ್ರಿಯಾಗಿ ಅಪ್ರತಿಮ ಸಾಧನೆ: ಮಹೇಶರಡ್ಡಿ ಮುದ್ನಾಳ

    ನರೇಂದ್ರ ಮೋದಿಜಿ ಪ್ರಧಾನಿಮಂತ್ರಿಯಾಗಿ ಅಪ್ರತಿಮ ಸಾಧನೆ: ಮಹೇಶರಡ್ಡಿ ಮುದ್ನಾಳ

    ಸತ್ಯಕಾಮ ವಾರ್ತೆ ಯಾದಗಿರಿ:-
    ಪ್ರಧಾನಿ ನರೇಂದ್ರ ಮೋದಿಜಿ ಅವರು ದೇಶದ ಅಭಿವೃದ್ಧಿಗಾಗಿ 4,078 ದಿನಗಳ ಕಾಲ ದೇಶದ ಪ್ರಧಾನಿಯಾಗಿ ನಿರಂತರ ಸೇವೆ ಮಾಡುವುದರೊಂದಿಗೆ, ಮಾಜಿ ಪ್ರಧಾನಿ ಮಂತ್ರಿ ಇಂದಿರಾ ಗಾಂಧಿಯವರ ಸೇವಾವಧಿ (4077 ದಿನ) ಅನ್ನು ಹಿಂದಿಕ್ಕಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

    ದೇಶದ ಇತಿಹಾಸದಲ್ಲಿ ಎರಡನೇ ಅತಿ ದೀರ್ಘಾವಧಿಯ ಪ್ರಧಾನಮಂತ್ರಿ, ರಾಜಕೀಯ ಪಕ್ಷದ ನಾಯಕರಾಗಿ, ಸತತ ಆರು ಸಲ ವಿಜಯಗಳಿಸಿ ಸಾಂವಿಧಾನಿಕ ಹುದ್ದೆಯ ಜವಾವ್ದಾರಿ ನಿರ್ವಹಿಸಿರುವ ಹೆಗ್ಗಳಿಕೆ, ನೆಹರೂ ಹೊರತಾಗಿ ಸತತ ಮೂರು ಭಾರಿ ಪ್ರಧಾನಿ ಹುದ್ದೆಯ ಜವಾಬ್ದಾರಿ ಹಾಗೂ ದೀರ್ಘಾವಧಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ಹಾಗೂ ಹಿಂದಿಯೇತರ ಪ್ರಧಾನಿ ಎಂಬ ಕೀರ್ತಿಯೂ ಸನ್ಮಾನ್ಯ ಪ್ರಧಾನಿಗಳದ್ದಾಗಿದೆ.

    ಮೋದಿಜಿಯವರು ಸಿಎಂ ಮತ್ತು ಪ್ರಧಾನಿಯಾಗಿ ಸುಮಾರು 24 ವರ್ಷಗಳ ಸುದೀರ್ಘ ಆಡಳಿತದೊಂದಿಗೆ,  ರಾಷ್ಟ್ರದ ಪ್ರಗತಿಗೆ ದೃಢಸಂಕಲ್ಪ, ತ್ಯಾಗ ಮತ್ತು ಅವಿರತ ಬದ್ಧತೆಯ ಸಂಕೇತವಾಗಿ ಉಳಿದಿದ್ದಾರೆ. ಇದು ಮೋದಿಜೀಯವರು ನಿರ್ಮಿಸಿದ ಮೈಲಿಗಲ್ಲಿನ ಸಂಭ್ರಮಾಚರಣೆ ಮಾತ್ರವಲ್ಲ, ಪರಿವರ್ತನೆಯ ಯುಗ ಮತ್ತು ನಿರ್ಣಾಯಕ, ದೂರದೃಷ್ಟಿಯ ನಾಯಕತ್ವವನ್ನು ಆಚರಿಸುವ ಸಂಭ್ರಮದ ಕ್ಷಣವಾಗಿದೆ ಎಂದು ಹೇಳಿದರು.
  • ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

    ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

    ಸತ್ಯಕಾಮ ವಾರ್ತೆ ಬೀದರ್:

    ನಾವು ಸೋಲ್ತಿವೋ, ಗೆಲ್ತಿವೋ ಏನಾದರೂ ಕೂಡ ನಾವು ಜನಗಳ ಜೊತೆಗೆ ನಿಲ್ಲಬೇಕು. ನಿರಂತರವಾಗಿ ಜನರೊಂದಿಗೆ ಬೆರತು ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಹೇಳಿದರು.

    ಬೀದರ್ ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ನಲ್ಲಿ ಗುರುವಾರ ನಡೆದ ‘ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಪಕ್ಷದ ಮುಖಂಡರು, ಕಾರ್ಯಕರ್ತರು ಜನರೊಂದಿಗೆ ಬೆರೆತು,ಜನರೊಂದಿಗೆ ಇದ್ದು ಕೆಲಸ ಮಾಡಬೇಕು ಎಂದರು.

    ಮುAದಿನ ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆಗಳಲ್ಲಿ ಕೂಡ ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮ ಅಗತ್ಯವಾಗಿರುತ್ತದೆ. ಜನರೊಂದಿಗೆ ಜನತಾದಳ ಎಂಬ ಗುರಿಯೊಂದಿಗೆ ಸಾಗುತ್ತಿರುವ ನಾವು ನಿರಂತರವಾಗಿ ಜನರೊಂದಿಗೆ ಇರುವುದು ಅಗತ್ಯವಾಗಿರುತ್ತದೆ. ಸದಸ್ಯತ್ವ ನೋಂದಣಿ ಅಭಿಯಾನವನ್ನು ನಾವು ತುಮಕೂರು ಜಿಲ್ಲೆಯಿಂದ ಆರಂಭಿಸಿದ್ದೇವೆ. ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಈಗ
    ಐದನೇ ಜಿಲ್ಲೆಯಾಗಿ ಬೀದರ್ ನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಮಾಡ್ತಿದ್ದೇವೆ. ಇನ್ನೂ ಎರಡು ದಿನಗಳ ಕಾಲ ಕಲ್ಯಾಣ ಕರ್ನಾಟಕ ಭಾಗದಲ್ಲೇ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿರುತ್ತೇವೆ.  ನಾವು ಜನತಾದಳ ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಬೇಕಾಗಿದೆ. ನಿಮ್ಮ ಚುನಾವಣೆಗಳಲ್ಲಿ ನೀವು ಗೆಲುವು ಸಾಧಿಸುವುದು  ಅಗತ್ಯವಾಗಿರುತ್ತದೆ. ಆಗಾಗಿ ತಾ.ಪಂ, ಜಿ.ಪಂ ಚುನಾವಣೆಗಳ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು. ಕಲ್ಯಾಣ
    ಕರ್ನಾಟಕ ಭಾಗದಲ್ಲಿ ನಾವು ಹೆಚ್ಚೆಚ್ಚು ಸ್ಥಾನ  ಪಡೆದುಕೊಳ್ಳಬೇಕು ಎಂದರೇ ನಾವೆಲ್ಲರೂ ಶ್ರಮವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿರವರು ಮನವಿ ಮಾಡಿದರು.

    ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಪಕ್ಷ ಸಂಘಟನೆಯ ಕೆಲಸವನ್ನು ನಿಖಿಲ್ ಕುಮಾರಸ್ವಾಮಿರವರು ಮಾಡ್ತಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ಅವರು  ಮಾಡ್ತಿದ್ದಾರೆ. ನಾವು ಅವರೊಂದಿಗೆ ಕೈಜೋಡಿಸೋಣ ಎಂದರು.

    ನಾವು ರಾಜಕೀಯದಲ್ಲಿ ಜನರ ಹತ್ತಿರ ಇದ್ದು ಸೇವೆ ಮಾಡಿದಾಗ ಜನರೇ ನಮಗೆ ಅಧಿಕಾರ ಕೊಡ್ತಾರೆ. ನಾವು ಜನರೊಂದಿಗೆ ಇರೋಣ. ಗ್ಯಾರಂಟಿ ಮುಖ ತೋರಿಸಿ ಕಾಂಗ್ರೆಸ್ ಸರ್ಕಾರ ಏನ್ ಮಾಡ್ತಿದೆ ಎಂಬುದನ್ನು ಜನ ನೋಡ್ತಿದ್ದಾರೆ. ಅವರ ಗ್ಯಾರಂಟಿಗಳು ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಸಾಗ್ತಿವೆ ಎಂಬುದನ್ನು ಕೂಡ ರಾಜ್ಯದ ಜನರು ನೋಡ್ತಿದ್ದಾರೆ. ಗ್ಯಾರಂಟಿ ಹೆಸರಲ್ಲಿ ರಾಜ್ಯ ಸರ್ಕಾರ ದೋಖಾ ಮಾಡ್ತಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಿದ್ದಾರೆ. ಸರ್ಕಾರ ಬಂದು ಎರಡು ವರ್ಷವಾದ್ರು ಜಿ.ಪಂ, ತಾ.ಪಂ ಚುನಾವಣೆ ಮಾಡುವ ಧೈರ್ಯ ಅವರಿಗೆ ಇಲ್ಲದಾಗಿದೆ ಎಂದು ಬಂಡೆಪ್ಪ
    ಖಾಶೆAಪುರ್ ರವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

    ಮಾಜಿ ಶಾಸಕರಾದ ಸುರೇಶ್ ಗೌಡ, ಮಲ್ಲಿಕಾರ್ಜುನ ಖೂಬಾರವರು ಸೇರಿದಂತೆ ಅನೇಕರು ಮಾತನಾಡಿ, ಜೆಡಿಎಸ್ ಸದಸ್ಯತ್ವ ನೋಂದಣಿ ಬಗ್ಗೆ ಮಾಹಿತಿ
    ನೀಡಿದರು.

    ಈ ಸಂದರ್ಭದಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್, ಮಾಜಿ ಶಾಸಕರಾದ ಸುರೇಶ್ ಗೌಡ, ಮಲ್ಲಿಕಾರ್ಜುನ ಖೂಬಾ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್, ಸೋಲ್ಪೂರ್, ಪ್ರಮುಖರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಉಮಕಾಂತ್ ನಾಗಮಾರಪಳ್ಳಿ, ಬಸವರಾಜ ಪಾಟೀಲ್ ಹಾರೂರಗೇರಿ, ಶಾಂತಲಿAಗ ಸಾವಳಗಿ, ರಾಜಶೇಖರ ಜವಳೆ, ಅಶೋಕ್ ಕೊಡ್ಗೆ, ರಾಜು ಕಡ್ಯಾಳ, ಸುದರ್ಶನ್ ಸುಂದರರಾಜ್, ಸಿದ್ರಾಮಪ್ಪ ವಂಕ್ಕೆ, ಐಲಿಂಜಾನ್ ಮಠಪತಿ, ಬಸವರಾಜ ಪಾಟೀಲ್ ಹಾರೂರಗೇರಿ, ಮಲ್ಲಿಕಾರ್ಜುನ ನೆಳ್ಗೆ, ಅಭಿ ಕಾಳೆ, ಜಾಫೇಡ್ ಕಡ್ಯಾಳ, ಪ್ರಶಾಂತ್
    ವಿಶ್ವಕರ್ಮರವರು ಸೇರಿದಂತೆ ಅನೇಕರಿದ್ದರು.