Category: social media

  • ಒಳ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 01 ರಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ: ದೇವಿಂದ್ರ ನಾಥ್ ನಾದ

    ಒಳ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 01 ರಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ: ದೇವಿಂದ್ರ ನಾಥ್ ನಾದ

    ಸತ್ಯಕಾಮ ವಾರ್ತೆ ಯಾದಗಿರಿ:
    ಮೂರುವರೆ ದಶಕಗದಿಂದ ಹೋರಾಟ ನಡೆಸಿದರು ರಾಜ್ಯದಲ್ಲಿ ಮಾದಿಗರಿಗೆ ಒಳ ಮೀಸಲಾತಿ ರಾಜ್ಯ ಸರ್ಕಾರ ನೀಡುತ್ತಿಲ್ಲ ಪ್ರಸ್ತುತ ಸಿಎಂ ಸಿದ್ದರಾಮಯ್ಯ ಮಾದಿಗರಲ್ಲಿ ಗೊಂದಲ ಸೃಷ್ಟಿಸುತ್ತ ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತ ಇರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆ ವತಿಯಿಂದ ಆಗಸ್ಟ್ 1 ನಗರದಲ್ಲಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಸಮಾಜದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರಾಜ್ಯಮಾದಿಗ ಸಮಾಜದ ಮುಖಂಡರಾದ ದೇವಿಂದ್ರನಾಥ್ ನಾದ್ ತಿಳಿಸಿದರು.

    ಸೈದಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾಜದ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಮೊದಲ ಅಧಿವೇಶನದಲ್ಲಿಯೇ ಜಾರಿಗೆ ತರುತ್ತೇನೆ ಎಂದು ಸುಳ್ಳು ಹೇಳುತ್ತಾ ದಲಿತರಲ್ಲಿ ಜಗಳ ಹಚ್ಚುವ ಕೆಲಸ ಮೋಸ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬಂದಿವೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಆದೇಶ ನೀಡಿ ಆಗಸ್ಟ್ 1 ಆದೇಶ ನೀಡಿ ಒಂದು ವರ್ಷ ಗತಿಸಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡದೆ ಮಾದಿಗರಲ್ಲಿ ತಾಳ್ಮೆ ಕಟ್ಟೆ ಒಡೆದಿದೆ ಮುಂದೆ ಆಗುವ ಅನಾಹುತಗಳಿಗೆ ಸರಕಾರವೇ ಜವಾಬ್ದಾರಿ ಎಂದರು.

    ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಹಣಮಂತ ಇಟಗಿ, ನ್ಯಾಯವಾದಿಗಳಾದ ಚೆನ್ನಯ್ಯ ಮ್ಯಾಳಿಕೇರಿ, ನಿಂಗಪ್ಪ ವಡ್ನಳ್ಳಿ, ಆಂಜನೇಯ ಬಬಲಾದಿ, ಚಂದ್ರಶೇಖರ್ ಕಡೆಸೂರ್, ಸಂಜೀವಪ್ಪ, ರಾಜು ಕೂಡ್ಲೂರ್, ಭಿಮಾಸೆಪ್ಪ್, ನರಸಪ್ಪ ನೀಲಳ್ಳಿ, ಮಲ್ಲಿಕಾರ್ಜುನ್ ಕೊಡ್ಲೂರ್, ಸಾಗರ್, ಮೌನೇಶ್, ಸಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಆಡಂಬರದ ಹುಟ್ಟುಹಬ್ಬದ ಬದಲು ಸಮಾಜದ ಉಪಯೋಗಿ ಕಾರ್ಯಕ್ರಮ ಮಾಡುವುದು ಉತ್ತಮ

    ಆಡಂಬರದ ಹುಟ್ಟುಹಬ್ಬದ ಬದಲು ಸಮಾಜದ ಉಪಯೋಗಿ ಕಾರ್ಯಕ್ರಮ ಮಾಡುವುದು ಉತ್ತಮ

    ಸತ್ಯಕಾಮ ವಾರ್ತೆ ಯಾದಗಿರಿ:

    ಹುಟ್ಟುಹಬ್ಬದ ಅಂಗವಾಗಿ ಆಡಂಬರದ ಆಚರಣೆ ಮಾಡಿಕೊಳ್ಳುವವರ ಮದ್ಯೆ ಅನಾಥ ಮಕ್ಕಳಿಗೆ ನೆರವಾಗುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಮಾದರಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಮಾದರಿಯಾಗಿದೆ ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿಗೌಡ ಮುದ್ನಾಳ ಹೇಳಿದರು.

    ನಗರದ ನಮ್ಮ ಕರುನಾಡ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ವೇದಿಕೆ ಜಿಲ್ಲಾದ್ಯಕ್ಷ ರವಿ ಕೆ. ಮುದ್ನಾಳ 34 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಗುಳೆ ಹೋಗುವ ಕೂಲಿಕಾರರ ಮಕ್ಕಳ ಆಶ್ರಮದ ಮಕ್ಕಳಿಗೆ ನೊಟ್ ಬುಕ್ ಪೆನ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನಿಡಿ ಮಾತನಾಡಿದರು.

    ಹುಟ್ಟುಹಬ್ಬ ಆಚರಣೆ ನಮ್ಮ ಸಂಸ್ಕೃತಿ ಅಲ್ಲವಾದರೂ ಇದನ್ನು ಒಂದು ನೆಪವಾಗಿಸಿಕೊಂಡು ಸಮಾಜಕ್ಕೆ ಸಹಾಯವಾಗುವಂತಹ ಕಾರ್ಯ ಮಾಡಬೇಕು ಆ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಇತರರಿಗೆ ಮಾದರಿಯಗುತ್ತದೆ ಎಂದು ಅವರು ಅಬಿಪ್ರಾಯಪಟ್ಟರು.

    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೇವರಾಜ ನಾಯಕ ಉಳ್ಳೆಸುಗೂರು ಮಾತನಾಡಿ ಹುಟ್ಟುಹಬ್ಬದ ನೆಪದಲ್ಲಿ ಜನತೆಗೆ ಉಪಯೋಗವಾಗುವ ಮಾದರಿ ಕಾರ್ಯ ಮಾಡುವುದೇ ನಿಜವಾದ ಹುಟ್ಟುಹಬ್ಬದ ಆಚರಣೆಯಾಗಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಉಮಾರಡ್ಡಿಗೌಡ ನಾಯ್ಕಲ್, ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವಿಲಾಸ ಪಾಟೀಲ್, ಬಿಜೆಪಿ ನಗರಾಧ್ಯಕ್ಷ ನಿಂಗಪ್ಪ ಹತ್ತಿಮನಿ, ತಾಪಂ ಮಾಜಿ ಸದಸ್ಯ ಯಂಕಪ್ಪ ರಾಠೋಡ, ಟೆಂಟ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಖಾಸಿಮ್ ಸಾಬ್ ಗಡ್ಡೆಸುಗೂರು, ವೀರಶೈವ ಮಹಾಸಭೆ ಕೋಶಾಧ್ಯಕ್ಷ ಬಂದನಗೌಡ ಕನ್ಯಾಕೌಳೂರು ಸೇರಿದಂತೆ ವೇದಿಕೆ ಪದಾಧಿಕಾರಿಗಳಾದ ಶಂಕರಗೌಡ ಯಲ್ಸತ್ತಿ, ವಿಶ್ವನಾಥ ತಂಗಡಗಿ, ಅಶೋಕರಡ್ಡಿ ವಂಕಸAಭ್ರ, ಸಿದ್ದು ಸಾಹುಕಾರ ಮಾಧ್ವಾರ, ತಿಪ್ಪಯ್ಯ, ವಸಂತಕುಮಾರ ಯಲ್ಸತ್ತಿ, ವೆಂಕಟೇಶ ಚವ್ಹಾಣ, ಭೀಮುರಾಠೋಡ, ವೆಂಕಟೇಶ ಸೇರಿದಂತೆ ಅನೇಕರು ಪಾಲ್ಗೊಂಡರು.

  • ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಸತ್ಯಕಾಮ ವಾರ್ತೆ ಸುರಪುರ: 

    ಸೇನೆ, ಅರೆ ಸೇನಾಪಡೆ ಮತ್ತು ಮಾಜಿ ಸೈನಿಕರ ಸಂಘ ಸುರಪುರ ವತಿಯಿಂದ ಏರ್ಪಡಿಸಿದ್ದ 26ನೇ ಕಾರ್ಗಿಲ್ ವಿಜಯೋತ್ಸವ ಮತ್ತು ಆಪರೇಷನ್ ಸಿಂಧೂರ ಯಶಸ್ವಿ ಸಮಾರಂಭದಲ್ಲಿ ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಹಾಗೂ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮಿನಾರಾಯಣ ನಾಯಕ ಅವರು ಭಾಗಿಯಾಗಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಗರುಡಾದ್ರಿ ಕಲಾ ಮಂದಿರದ ವರೆಗೆ ನಡೆದ ವಿಜಯೋತ್ಸವ ಯಾತ್ರೆಗೆ ಚಾಲನೆ ನೀಡಿದರು.

    ನಂತರ ಗರುಡಾದ್ರಿ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸೈನಿಕರಿಗೆ ಸನ್ಮಾನಿಸಿ ಗೌರವಿಸಿ ವಿಜಯೋತ್ಸವ ಉದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಾಜಿ ಸೈನಿಕರುಗಳು ಹಾಗೂ ತಾಲೂಕು ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಗ್ಯಾರಂಟಿ ಯೋಜನೆ ಅಧ್ಯಕ್ಷರು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು

  • ಹೃದಯಾಘಾತದಿಂದ ಹಲ್ಕ್ ಹೊಗನ್ ವಿಧಿವಶ

    ಹೃದಯಾಘಾತದಿಂದ ಹಲ್ಕ್ ಹೊಗನ್ ವಿಧಿವಶ

    ಅಮೆರಿಕಾ: ವಿಶ್ವ ಪ್ರಸಿದ್ಧ ರೆಸಲಿಂಗ್, ನಟ ಹಾಗೂ ಪಾಪ್ ಕಲ್ಚರ್ ಐಕಾನ್‌ ಆಗಿದ್ದ ಹಲ್ಕ್ ಹೊಗನ್ (ಮೂಲ ಹೆಸರು ಟೆರಿ ಜೀನ್ ಬೋಲಿಯಾ) ಅವರು 71ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಫ್ಲೋರಿಡಾದ ಕ್ಲಿಯರ್‌ವಾಟರ್‌ನಲ್ಲಿ ತಮ್ಮ ನಿವಾಸದಲ್ಲಿದ್ದಾಗ ಇಂದು ಬೆಳಿಗ್ಗೆ ಅಸಹಜ ಆರೋಗ್ಯ ಸಮಸ್ಯೆ ಉಂಟಾಗಿ ತುರ್ತು ವೈದ್ಯಕೀಯ ಸಿಬ್ಬಂದಿಯನ್ನು ಕರೆಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ. ಸುಮಾರು 30 ನಿಮಿಷಗಳ ಕಾಲ CPR ನೀಡಿದ ಬಳಿಕ ಆಸ್ಪತ್ರೆಗೂ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರನ್ನು ಮೃತ ಘೋಷಿಸಿದರು.

    ಹಲ್ಕ್ ಹೊಗನ್ ಅವರು 1980ರ ದಶಕದಲ್ಲಿ “Hulkamania” ಮೂಲಕ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧರಾಗಿದ್ದು, WWE (ಹಿಂದಿನ WWF) ಯ ಚಾಂಪಿಯನ್‌ಶಿಪ್‌ ಗೆದ್ದಂತೆ ಹಲವು ಪಟಕಥೆಗಳಿಗೆ ಜೀವ ತುಂಬಿದ್ದರು. ಅವರು ಆರು ಬಾರಿ WWE ಚಾಂಪಿಯನ್ ಆಗಿದ್ದು, ಹಲವು ಪೀಳಿಗೆಗಳ ಅಭಿಮಾನಿಗಳಿಗೆ ಪ್ರೇರಣೆಯಾದರು.

    ಅವರನ್ನು 2005ರಲ್ಲಿ WWE Hall of Fameಗೆ ಸೇರಿಸಲಾಗಿದೆ. ಅವರು ನಟರಾಗಿ, ಟಿವಿ ಶೋಗಳಲ್ಲಿ ಭಾಗವಹಿಸಿ ಹಲವಾರು ವರ್ಷಗಳು ಪ್ರಭಾವ ಬೀರಿದ್ದರು.

    ಅಂತಿಮ ಕ್ಷಣಗಳು:
    ಕ್ಲಿಯರ್‌ವಾಟರ್‌ನಲ್ಲಿ ಬೆಳಿಗ್ಗೆ 9:51 ಕ್ಕೆ ತುರ್ತು ಸೇವೆಗಳಿಗೆ ಕರೆ ಬಂದಿತ್ತು. ಪೊಲೀಸರು ಹಾಗೂ ವೈದ್ಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ 30 ನಿಮಿಷ CPR ನೀಡಿದರೂ ಅವರು ಜೀವಿತರಾದಿಲ್ಲ. ಯಾವುದೇ ಅಪರಾಧ ಅಥವಾ ಅನುಮಾನಾಸ್ಪದ ಘಟನೆ ಇಲ್ಲ ಎಂಬುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

    ಕುಟುಂಬಸ್ಥರು: ಅವರು ತಮ್ಮ ಪತ್ನಿ ಸ್ಕೈ ಡೇಲಿ ಮತ್ತು ಮಕ್ಕಳು ಬ್ರುಕ್ ಹಾಗೂ ನಿಕ್ ಅವರನ್ನು ಅಗಲಿದ್ದಾರೆ.

    ಹಲ್ಕ್ ಹೊಗನ್ ಅವರ ನಿಧನದಿಂದ ರೆಸಲಿಂಗ್ ಪ್ರಪಂಚ ದುಃಖದಲ್ಲಿದ್ದು, ಹಲವು ತಾರೆಗಳು, ಅಭಿಮಾನಿಗಳು ತಮ್ಮ ಸಂತಾಪವನ್ನು ಸಾಮಾಜಿಕ ಮಾಧ್ಯಮದ ಮೂಲಕ ವ್ಯಕ್ತಪಡಿಸಿದ್ದಾರೆ.

    “ಆಹ್ ಬ್ರದರ್!” ಎಂದು ಆಳವಾದ ಧ್ವನಿಯಲ್ಲಿ ಹೇಳುತ್ತಿದ್ದ ಅವರ ನೆನಪಿನಲ್ಲಿ, ರೆಸಲಿಂಗ್ ಜಗತ್ತು ಶೋಕ ಸ್ಮರಣೆಯಲ್ಲಿದೆ.

  • “ಇನ್‌ಸ್ಟಾಗ್ರಾಮ್ ಬಳಕೆದಾರರು ಈಗ ಸಾರ್ವಜನಿಕ ರೀಲ್‌ಗಳನ್ನು ಡೌನ್‌ಲೋಡ್ ಮಾಡಬಹುದು”

    ಜೂನ್ 27, 2023 – ಇನ್‌ಸ್ಟಾಗ್ರಾಮ್‌ನ ಇತ್ತೀಚಿನ ವೈಶಿಷ್ಟ್ಯವು ಬಳಕೆದಾರರು ತಮ್ಮ ಸ್ನೇಹಿತರೊಂದಿಗೆ ರೀಲ್‌ಗಳನ್ನು ಹಂಚಿಕೊಳ್ಳುವುದನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ಇನ್‌ಸ್ಟಾಗ್ರಾಮ್ ಮುಖ್ಯಸ್ಥ ಆಡಮ್ ಮೊಸ್ಸೆರಿ ಅವರ ಪ್ರಸಾರ ಚಾನಲ್‌ನಲ್ಲಿ ಹಂಚಿಕೊಂಡಿರುವ ನವೀಕರಣದ ಪ್ರಕಾರ, US ನಲ್ಲಿನ ಬಳಕೆದಾರರು ಹಂಚಿಕೊಂಡಿರುವ ರೀಲ್‌ಗಳನ್ನು ಶೀಘ್ರದಲ್ಲೇ ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ ಸಾರ್ವಜನಿಕ ಖಾತೆಗಳ ಮೂಲಕ.