Category: Latest News

  • ಅಧಿಕಾರಿಗಳು ತಾಲೂಕಿನ ಹಿರಿಮೆ ಹೆಚ್ಚುವ ಕಾರ್ಯ ಮಾಡಿದ್ದಾರೆ-ಶಾಸಕ ರಾಜುಗೌಡ

    ಅಧಿಕಾರಿಗಳು ತಾಲೂಕಿನ ಹಿರಿಮೆ ಹೆಚ್ಚುವ ಕಾರ್ಯ ಮಾಡಿದ್ದಾರೆ-ಶಾಸಕ ರಾಜುಗೌಡ

    ಸಂಪೂರ್ಣತಾ ಅಭಿಯಾನದ ಸನ್ಮಾನ ಸಮಾರಂಭ
    ಸತ್ಯಕಾಮ ವಾರ್ತೆ ತಾಳಿಕೋಟೆ:

    ಹಿಂದೂಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕುವಂತಹ ಕೆಲಸವನ್ನು ಅಧಿಕಾರಿಗಳು ಮಾಡಿರುವದು ಸಂತಸ ಪಡುವಂತಹದ್ದಾಗಿದೆ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಅವರು ಹೇಳಿದರು.

    ಮಂಗಳವಾರರಂದು ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್ ವಿಜಯಪುರ, ತಾಲೂಕಾಡಳಿತ ತಾಲೂಕಾ ಪಂಚಾಯತ್ ತಾಳಿಕೋಟೆ ಇವರ ಸಹಯೋಗದಲ್ಲಿ ಮಹಾತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮದಡಿ ಸಂಪೂರ್ಣತಾ ಅಭಿಯಾನ ಸನ್ಮಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ದೇಶದಲ್ಲಿ ಅತೀ ಹಿಂದೂಳಿದ ತಾಲೂಕುಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ದಿ ಪಡಿಸಬೇಕೆಂಬ ಇಚ್ಚೆಯೊಂದಿಗೆ ಕೇಂದ್ರ ಸರ್ಕಾರವು ನೀತಿ ಆಯೋಗದ ಮೂಲಕ ರಾಜ್ಯದ ೧೪ ತಾಲೂಕುಗಳನ್ನು ಗುರುತಿಸಿ ಅತೀ ಹಿಂದೂಳಿದ ತಾಲೂಕುಗಳಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಸೇರಿಸಿತ್ತು ಅದರಲ್ಲಿ ೩೯ ಸೂಚಂಕಗಳನ್ನು ಅಭಿವೃದ್ದಿ ಪಡಿಸುವದರಲ್ಲಿ ಕೇವಲ ೨ ವರ್ಷಗಳಲ್ಲಿ ೬ ಸೂಚಂಕಗಳನ್ನು ಶೇ.೧೦೦ ರಷ್ಟು ಅಭಿವೃದ್ದಿ ಪಡಿಸಿ ಬಂಗಾರದ ಪಧಕ ಪಡೆದುಕೊಳ್ಳುವಂತಹ ಕೆಲಸ ಅಧಿಕಾರಿಗಳು ಮಾಡಿರುವದು ಸಂತಸ ಪಡುವಂತಹದ್ದಾಗಿದೆ ಅಭಿವೃದ್ದಿ ಕಾರ್ಯಗಳಾಗಬೇಕಾದರೆ ಅಧಿಕಾರಿಗಳ ಸಾರ್ವಜನಿಕರ ಸಹಕಾರವೆಂಬುದು ಬಹುಮುಖ್ಯವಾಗಿ ಬೇಕಾಗುತ್ತದೆ ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಒಳಗೊಂಡು ೬ ಸೂಚಂಕಗಳನ್ನು ಶೇ.೧೦೦ ರಷ್ಟು ಅಧಿಕಾರಿಗಳು ಗುರಿಸಾದಿಸಿರುವದು ಮೆಚ್ಚುವಂತಹದ್ದಾಗಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀ ಯೋಜನೆಯನ್ನು ಅಧಿಕಾರಿಗಳು ಅಚ್ಚುಕ್ಕಟ್ಟಾಗಿ ಕೆಲಸ ಮಾಡುವದರ ಜೊತೆಗೆ ಈ ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಗೌರವಿಸುವಂತಹ ಕೆಲಸ ಮಾಡಿರುವದು ಶ್ಲಾಘನೀಯವಾಗಿದೆ ತಾಳಿಕೋಟೆ ತಾಲೂಕಿನಲ್ಲಿ ಅತೀ ಹೆಚ್ಚು ಹಳ್ಳಿಗಳು ಬರುವದು ದೇವರ ಹಿಪ್ಪರಗಿ ಮತಕ್ಷೇತ್ರಕ್ಕೆ ಒಳಪಡುತ್ತವೆ ಈ ತಾಲೂಕಿನ ಅಭಿವೃದ್ದಿಗೆ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆಂದರು.

    ಇನ್ನೋರ್ವ ಅಧ್ಯಕ್ಷತೆ ವಹಿಸಿದ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಮಾತನಾಡಿ ತಾಳಿಕೋಟೆ ನಗರವು ಐತಿಹಾಸಿಕ ನಗರವಾಗಿದೆ ಮತ್ತು ವ್ಯಾಪಾರಿಕರಣ ನಗರವಾಗಿ ದಿನದಿಂದ ದಿನಕ್ಕೆ ಬೆಳೆಯುತ್ತಾ ಸಾಗಿದೆ ಆದರೆ ಕೇಂದ್ರ ಸರ್ಕಾರವು ೩೯ ಮಾನದಂಡಗಳನ್ನು ಸೇರಿಸಿ ಅತೀ ಹಿಂದೂಳಿದ ತಾಲೂಕುಗಳ ಪಟ್ಟಿಯಲ್ಲಿ ಸೇರಿಸಿ ಅಭಿವೃದ್ದಿ ಕಾರ್ಯಗಳಿಗೆ ಮುನ್ನುಡಿಯನ್ನು ಬರೆದಿತ್ತು ಅದರಂತೆ ಅಧಿಕಾರಿಗಳು ಕೇವಲ ೨ ವರ್ಷಗಳಲ್ಲಿ ಶ್ರಮವಹಿಸಿ ೩೯ ಮಾನದಂಡಗಳಲ್ಲಿ ೬ ರಲ್ಲಿ ಶೇ.೧೦೦ ರಷ್ಟು ಸಾಧನೆ ಮಾಡಿ ಗೋಲ್ಡ್ ಮೇಡಲ್ ಪಡೆದುಕೊಂಡಿರುವದು ಸಂತೋಷ ಪಡುವಂತಹದ್ದಾಗಿದೆ ಈ ತಾಳಿಕೋಟೆ ತಾಲೂಕು ವಿಜಯಪುರ ಜಿಲ್ಲೆಯ ಕೊನೆಯ ತಾಲೂಕಾ ಕೇಂದ್ರವಾಗಿತ್ತು ಈ ತಾಲೂಕಿಗೆ ಹೈದ್ರಾಬಾದ ಕರ್ನಾಟಕವು ಸೇರಿಕೊಳ್ಳುತ್ತಿರುವದರಿಂದ ಸಹಜವಾಗಿಯೇ ಹಿಂದೂಳಿದ ಪಟ್ಟಿಯಲ್ಲಿ ಸೇರಿಕೊಂಡಿತ್ತು ಯಾವುದೇ ಕೆಲಸ ಮಾಡಬೇಕೆಂದರೆ ಆತ್ಮ ಸ್ಥೈರ್ಯ, ಆತ್ಮ ವಿಸ್ವಾಸವೆಂಬುದು ಬೇಕಾಗುತ್ತದೆ ಅಂತಹ ಆತ್ಮ ವಿಸ್ವಾಸವನ್ನು ಹೊಂದಿದ ಅಧಿಕಾರಿಗಳು ತಾಲೂಕಿನ ಜನರ ಸಹಕಾರದೊಂದಿಗೆ ೬ ಸೂಚಂಕಗಳಲ್ಲಿ ಶೇ. ೧೦೦ ರಷ್ಟು ಗುರಿ ಸಾಧಿಸಿ ರಾಜ್ಯದ ಹಿಂದೂಳಿದ ೧೪ ತಾಲೂಕುಗಳಲ್ಲಿ ತಾಳಿಕೋಟೆ ತಾಲೂಕು ಗೋಲ್ಡ ಮೇಡಲ್ ಪಡೆದುಕೊಂಡು ಮೊದಲನೇಯದಾಗಿ ಹೊರಬರಲು ಪ್ರಯತ್ನಿಸಿರುವದು ಹೆಮ್ಮೆ ಪಡುವಂತಹದ್ದಾಗಿದೆ ಇನ್ನೂ ೩೩ ಸೂಚಂಕಗಳನ್ನು ಪೂರೈಸಬೇಕಾಗಿದೆ ಅಧಿಕಾರಿಗಳು ಕೆಲಸ ಮಾಡುತ್ತಿರುವ ಪರಿಯನ್ನು ಲಕ್ಷೀಸಿದರೆ ನಮ್ಮಲ್ಲಿಯೂ ಆತ್ಮ ವಿಸ್ವಾಸವೆಂಬುದು ಹೆಚ್ಚಿಸುವಂತೆ ಮಾಡಿದೆ ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ಮುಟ್ಟಬೇಕಾಗಿದೆ ಇದರಿಂದ ಹಳ್ಳಿಯಿಂದ ತಾಲೂಕು, ಜಿಲ್ಲೆ ದೇಶ ಎಂದಿಗೂ ಬಡವಾಗುವದಿಲ್ಲಾ ಅಧಿಕಾರಿಗಳ ಆತ್ಮ ಸ್ಥೈರ್ಯದ ಜೊತೆಗೆ ನಿಲ್ಲುವಂತಹ ಕೆಲಸ ರಾಜಕಾರಣಿಗಳು ಸಹ ಮಾಡಬೇಕೆಂದರು.

    ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ ಕೇಂದ್ರ ಸರ್ಕಾರವು ೨೦೧೮ ರಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯೊಂದಿಗೆ ನಮ್ಮ ರಾಜ್ಯದ ೧೪ ತಾಲೂಕುಗಳನ್ನು ಗುರುತಿಸಿ ಹಿಂದೂಳಿದ ತಾಲೂಕುಗಳೆಂದು ಘೋಷಣೆ ಮಾಡಿತ್ತು ಅದರಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಒಳಗೊಂಡಿತ್ತು ಇದನ್ನು ಸವಾಲಾಗಿ ಅಧಿಕಾರಿಗಳು ತೆಗೆದುಕೊಳ್ಳಬೇಕೆಂದು ನಿರ್ಧರಿಸಿದ್ದರ ಪರಿಣಾಮ ೬ ಸೂಚಂಕಗಳಲ್ಲಿ ಶೇ.೧೦೦ ರಷ್ಟು ಸಾಧನೆ ಮಾಡಿದ್ದೇವೆ ಇನ್ನೂ ೩೩ ಸೂಚಂಕಗಳಿದ್ದು ಅವುಗಳನ್ನು ಸಾಧಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿವರ್ಗದವರು ಸಾಗಲಿದ್ದಾರೆಂದರು.

    ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎ.ಡಿ.ಅಲ್ಲಾಪೂರ ಅವರು ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯ ಬಗ್ಗೆ ತಿಳಿ ಹೇಳಿದರು. ತಾಪಂ ಇಓ ನಿಂಗಪ್ಪ ಮಸಳಿ ಪ್ರಾಸ್ಥಾವಿಕ ಮಾತನಾಡಿದರು.

    ಇದೇ ಸಮಯದಲ್ಲಿ ೬ ಸೂಚಂಕಗಳಲ್ಲಿ ಸಾಧನೆ ಮಾಡಿದ ಕೃಷಿ ಇಲಾಖೆಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ, ಆರೋಗ್ಯ ಇಲಾಖೆಯೊಳಗೊಂಡ ಅಧಿಕಾರಿವರ್ಗದವರನ್ನು ಹಾಗೂ ಗರ್ಭಿಣಿ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಈ ಸಮಯದಲ್ಲಿ ತಾಲೂಕಾಡಳಿತದ ಅಧಿಕಾರಿಗಳಾದ ತಾಲೂಕಾ ತಹಶಿಲ್ದಾರ ವಿನಯಾ ಹೂಗಾರ, ಶರಣಗೌಡ ಬಿಳಗಿ, ಡಾ.ಸತೀಶ ತಿವಾರಿ, ಶಿವಮೂರ್ತಿ ಕುಂಭಾರ, ಆರ್.ಎಸ್.ಹಿರೇಗೌಡರ, ಬಿ.ಎಸ್.ಸಾವಳಗಿ, ಮತ್ತು ಎಚ್.ಎಸ್.ಪಾಟೀಲ, ಪ್ರಭುಗೌಡ ಮದರಕಲ್ಲ, ಮಡುಸಾಹುಕಾರ ಬಿರಾದಾರ, ಸಿದ್ದನಗೌಡ ಪಾಟೀಲ(ನಾವದಗಿ), ಮೊದಲಾದವರು ಉಪಸ್ಥಿತರಿದ್ದರು.

    ಸಿಆರ್‌ಸಿ ರಾಜು ವಿಜಾಪೂರ ನಿರೂಪಿಸಿದರು. ತಾಪಂ ಸಹಾಯಕ ನಿರ್ದೇಶಕ ಬಿ.ಎಂ.ಸಾಗರ ವಂದಿಸಿದರು.

  • ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಸಿಂಗೆ

    ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಸಿಂಗೆ

    ಸತ್ಯಕಾಮ ವಾರ್ತೆ ಕಲಬುರಗಿ:

    ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಮಹಿಳೆಯರನ್ನು ಆರ್ಥಿಕ ಶೈಕ್ಷಣಿಕ ಶಕ್ತಿ ತುಂಬಿರುವ ಸರಕಾರದ ಗ್ಯಾರಂಟಿಗಳ ಪ್ರಚಾರ ಮಾಡಬೇಕು ಮತ್ತು ಪಕ್ಷವನ್ನು ಸಂಘಟಿಸಿ ಮತ್ತಷ್ಟು ಬಲಪಡಿಸಬೇಕೆಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ ಕರೆ ನೀಡಿದರು.

    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಪಂಚಗ್ಯಾರAಟಿ ಸದುಪಯೋಗ ಪಡಿಸಿ ಕೊಂಡು ಮಹಿಳೆಯರು ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಲು ಅನುಕೂಲ ಮಾಡಿದೆ ಇದರ ಪ್ರಚಾರ ಇನ್ನಷ್ಟು ಮಹಿಳೆಯರಿಗೆ ತಲುಪಿಸುವ ಕೆಲಸ ಮಹಿಳಾ ಕಾರ್ಯಕರ್ತರು ಮಾಡಬೇಕೆಂದರು.

    ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ ನಿಕಟಪೂರ್ವ ಜಿಲ್ಲಾಧ್ಯಕ್ಷೆ ಲತಾ ರಾಠೋಡ ಅವರು ನೂತನ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ರೇಣುಕಾ ಸಿಂಗೆ ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

    ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರು, ಮಾತನಾಡಿ ಸ್ವಂತ ಬಲದಮೇಲೆ ಬಿಜೆಪಿ ಭದ್ರಕೋಟೆಯನ್ನು ಛಿದ್ರಮಾಡಿ ಶಾಸಕಿಯಾಗಿ ಆಯ್ಕೆಯಾದ ಬಲಿಷ್ಠ ನಾಯಕಿ ಸೌಮ್ಯರೆಡ್ಡಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತಾ ಕಾಂಗ್ರೆಸ್ ಸರಕಾರ ಮಹಿಳೆಯಿರಿಗೆ ನೀಡಿರುವ ಶಕ್ತಿ ಮತ್ತು ಭಕ್ತಿಯ ಬಲದಿಂದ ಪಕ್ಷ ಬಲಿಷ್ಠಗೊಳಿಸಬೇಕೆಂದು ಹೇಳಿದರು.

    ಬಿಜೆಪಿ ಮನೆಯೊಡೆಯುವ ಕೆಲಸ ಮಾಡಿದರೆ ಕಾಂಗ್ರೆಸ್ ಮಹಿಳೆಯರಿಗೆ ಸೌಲಭ್ಯಗಳನ್ನು ಕೊಟ್ಟು ಮನೆ ನಡೆಸುವ ಮತ್ತು ಮನೆ ನಿರ್ವಹಣೆಗೆ ಕೆಲಸ ಮಾಡಿದೆ ಎಂದರು.

    ಈ ಸಂದರ್ಭದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಲ್ಲಂಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಜಗದೇವ್ ಗುತ್ತೇದಾರ್ ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

  • ಮಹಾನ್ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ರವರ 134ನೇ ಸ್ಮರಣಾ ದಿನಾಚರಣೆ.

    ಮಹಾನ್ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ರವರ 134ನೇ ಸ್ಮರಣಾ ದಿನಾಚರಣೆ.

    ಸತ್ಯಕಾಮ ವಾರ್ತೆ ಯಾದಗಿರಿ:

    ಮಹಾನ್ ಧರ್ಮನಿರಪೇಕ್ಷ- ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ರವರ 134ನೇ ಸ್ಮರಣ ದಿನ ವನ್ನು ಯಾದಗಿರಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ (ಟೌನ್) ವಸತಿ ನಿಲಯದಲ್ಲಿ ಹಾಗೂ ಯರಗೋಳ ಗ್ರಾಮದ ಬಸ್ ನಿಲ್ದಾಣದ ಬಳಿ ಆಚರಿಸಲಾಯಿತು.

    ಆಧುನಿಕ ಶಿಕ್ಷಣಕ್ಕೆ ನಾಂದಿ ಹಾಡಿದ, ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ, ವಿಧವಾ ಪುನರ್ ವಿವಾಹಕ್ಕಾಗಿ ದುಡಿದ ಮಹಾನ್ ಚೇತನ ಈಶ್ವರಚಂದ್ರ ವಿದ್ಯಾಸಾಗರರು ನಮ್ಮೆಲ್ಲರಿಗೂ ಆದರ್ಶವಾಗಬೇಕು. ಸಾರ್ವಜನಿಕ ಶಿಕ್ಷಣ ಉಳಿಸುವ ಹೋರಾಟಕ್ಕೆ ವಿದ್ಯಾಸಾಗರರು ನಮಗೆ ಸ್ಫೂರ್ತಿಯಾಗಬೇಕು ಎಂದು AIDSO ಜಿಲ್ಲಾ ಸಂಚಾಲಕರಾದ ಶಿಲ್ಪಾ ಬಿ ಕೆ ರವರು ಮಾತನಾಡಿದರು.

    ಕಾರ್ಯಕ್ರಮದಲ್ಲಿ AIDSO ಸದಸ್ಯರಾದ ದೇವೀಂದ್ರಮ್ಮ, ಲಕ್ಷ್ಮೀಕಾಂತ, ರೆಡ್ದೆಪ್ಪ, ರಂಜಿತಾ, ಶ್ರವಣಕುಮಾರ, ಮೆಹಬೂಬ್, ನಾಗಿಂದ್ರಮ್ಮ ಹಾಗೂ ಊರಿನ ನಾಗರೀಕರಾದ ಭೀಮರೆಡ್ಡಿ, ಯಂಕಾರೆಡ್ಡಿ ಇನ್ನಿತರರು ಪಾಲ್ಗೊಂಡಿದ್ದರು.

  • ನಾಳೆ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    ನಾಳೆ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    ಸತ್ಯಕಾಮ ವಾರ್ತೆ ಯಾದಗಿರಿ:
    ಲಯನ್ಸ್ ಕ್ಲಬ್, ಯಾದಗಿರಿ ಇವರ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 30, 2025 (ಬುಧವಾರ) ಸಂಜೆ 5 ಗಂಟೆಗೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ತಿಳಿಸಿದೆ.

    ನಾಳೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಓರಾಡಿಯಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪೃಥ್ವಿಕ್ ಶಂಕರ್ ಅವರು ವಿಶೇಷ ಅತಿಥಿಯಾಗಿದ್ದಾರೆ.

    ಪದಗ್ರಹಣಾಧಿಕಾರಿಯಾಗಿ ಎಲ್.ಎನ್. ಸಿಎ ಮನೋಜ್ ಕುಮಾರ್ ಪುರೋಹಿತ್ ಹಾಗೂ ಎಲ್.ಎನ್. ಸುರೇಶ್ ಜಂಗ್ನಾನಿ ಕಾರ್ಯನಿರ್ವಹಿಸಲಿದ್ದು, ಹರಿನಾರಾಯಣ ಭಟ್ಟಾಡ್ ಮತ್ತು ಸಿಎ ರಾಮು ಪರಿತಾಲಾ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

    ಕಾರ್ಯಕ್ರಮದ ನಿರೂಪಣೆಯನ್ನು ಎಲ್.ಎನ್. ಜಾನಾರ್ಧನ್ ಅವರು ನಿಭಾಯಿಸಲಿದ್ದಾರೆ.

    2025-26ನೇ ಸಾಲಿನ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳು

    ಅಧ್ಯಕ್ಷರಾಗಿ Ln. ಭೀಮಣ್ಣಗೌಡ ಕ್ಯಾತ್ನಳ, ಕಾರ್ಯದರ್ಶಿಯಾಗಿ Ln. ಡಾ. ಶಿವಪುತ್ರರೆಡ್ಡಿ ಪಾಟೀಲ ಚಟ್ನಳ್ಳಿ ಹಾಗೂ ಖಜಾಂಚಿಯಾಗಿ Ln. ವೆಂಕಟರೆಡ್ಡಿ ಪಾಟೀಲ ತಂಗಡಗಿ ಅವರನ್ನು ಆಯ್ಕೆ ಮಾಡಲಾಗಿದೆ.

    ಉಪಾಧ್ಯಕ್ಷರಾಗಿ ಮಲ್ಲಣ್ಣಗೌಡ ಹಳಿಮನಿ, ಸದಸ್ಯತ್ವದ ಮುಖ್ಯಸ್ಥ Ln. ಸಿದ್ದರಾಮರೆಡ್ಡಿ ತಿಪ್ಪರೆಡ್ಡಿ, ಜಂಟಿ ಕಾರ್ಯದರ್ಶಿಯಾಗಿ. ಇಂದೂಧರ್ ಶಿನ್ನೂರ, ಸೇವಾ ಕಾರ್ಯದರ್ಶಿಯನ್ನಾಗಿ ಮಲ್ಲಿಕಾರ್ಜುನ ಸಿರ್ಗೋಳ, ಟೇಮರ್ ಶರಣರೆಡ್ಡಿ ಹತ್ತಿಕುಣಿ, ಟೇಲ್ ಟ್ವಿಸ್ಟರ್ ವಿಜಯ ದಿಗ್ಗವಿ ಹಾಗೂ ಮಾರುಕಟ್ಟೆ ಸಂವಹನ ಮುಖ್ಯಸ್ಥೆಯಾಗಿ ಲೀಲಾ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ ಹಾಗೂ LCIF ಸಂಯೋಜಕರಾಗಿ ದೀಪಕ್ ಯಲಸತ್ತಿ ಮತ್ತು ಸಹ ಖಜಾಂಚಿಯಾಗಿ ವೀರೇಂದ್ರ ಪಾಟೀಲ ಮೊಸಂಬಿ ಅವರನ್ನು ನೇಮಕ ಮಾಡಲಾಗಿದೆ.

    ಜಿಲ್ಲಾ ಮಟ್ಟದ ಸೇವಾ ವಿಭಾಗಗಳಲ್ಲಿಯೂ ಯಾದಗಿರಿ ಸದಸ್ಯರು ನಾಮನಿರ್ದೇಶಿತರಾಗಿದ್ದು, ಆರೋಗ್ಯ, ಶಿಕ್ಷಣ, ಸ್ವಚ್ಛತಾ ಚಟುವಟಿಕೆ ಹಾಗೂ ಕ್ರೀಡಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

    ಕಾರ್ಯಕ್ರಮಕ್ಕೆ ಲಯನ್ಸ್ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಬೇಕೆಂದು ಕೋರಲಾಗಿದೆ.

  • ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿ – ಕಲ್ಲಿನಾಥ ಶ್ರೀಗಳು

    ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿ – ಕಲ್ಲಿನಾಥ ಶ್ರೀಗಳು

    ಸತ್ಯಕಾಮ ವಾರ್ತೆ ಶಹಾಪುರ:

    ಸಮಾಜದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಭೇದ ಭಾವ ಮರೆತು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಹೊರ್ತಿ ಕೋಲಾರದ ವಿಶ್ವಗಾಣಿಗ ಸಮಾಜದ ಜಗದ್ಗುರು ಪೂಜ್ಯ ಶ್ರೀ ಕಲ್ಲಿನಾಥ ಮಹಾ ಸ್ವಾಮಿಗಳು ಹೇಳಿದರು.

    ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ಹಮ್ಮಿಕೊಂಡಿರುವ ಗಾಣದೇವತೆ ವೃತ್ತದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು,ಬಡವರ ಹಾಗೂ ಅಸಹಾಯಕರ ನೆರವಿಗೆ ನಿಂತು ನ್ಯಾಯ ದೊರಕಿಸಿ ಕೊಡುವನೆ ನಿಜವಾದ ಗಾಣಿಗ, ಈ ನಾಡಿಗೆ ನಮ್ಮ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು.

    ವಕ್ಕಲಿಗೇರಿ ಹಿರೇಮಠದ ಮರುಳ ಮಹಾಂತ ಶಿವಾಚಾರ್ಯರು ಮಾತನಾಡಿ,ಗಾಣಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ,ಮುಖ್ಯ ವೇದಿಕೆಗೆ ತರುವಲ್ಲಿ ಶ್ರಮಿಸಿ ಉತ್ತಮ ಸಮಾಜ ಕಟ್ಟುವ ಕೆಲಸ ಮಾಡೋಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಕಿರಿಯರನ್ನ ನಾಡಿಗೆ ಪರಿಚಯಿಸುವ ಕೆಲಸ ಹೆಚ್ಚೆಚ್ಚು ಆಗಬೇಕು ಎಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಭೀಮರಾಯ ಸೇರಿ,ಪಿಡ್ಡಪ್ಪ ನಂದಿಕೋಲ, ಮಲ್ಲಣ್ಣವಮ್ಮಾ,ನಿಂಗಣ್ಣ ಮುದ್ದಾ,ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಸಿದ್ರಾ,ಶಿವಣ್ಣಗೌಡ ಗೌಡರ,ಅಮರೇಶ್  ನಂದಿಕೋಲ,ಮಹಾಂತಪ್ಪ ಕೂಡ್ಲೂರು,ಮಡಿವಾಳಪ್ಪ ಪಾಟೀಲ್,ಗಣೇಶ್ ಚಡಗುಂಡ ಸೇರಿದಂತೆ ನೂರಾರು ಸಮಾಜದ ಬಂಧುಗಳು ಹಾಜರಿದ್ದರು.

  • ಬಡವರ ಸೇವೆಯಲ್ಲಿ ವೈದ್ಯರು ದೇವರನ್ನು ಕಾಣಬೇಕು: ತಿಪ್ಪಣ್ಣಪ್ಪ ಕಮಕನೂರ

    ಬಡವರ ಸೇವೆಯಲ್ಲಿ ವೈದ್ಯರು ದೇವರನ್ನು ಕಾಣಬೇಕು: ತಿಪ್ಪಣ್ಣಪ್ಪ ಕಮಕನೂರ

    ಸತ್ಯಕಾಮ ವಾರ್ತೆ ಕಲಬುರಗಿ:

    ವೈದ್ಯರುಗಳು ಬಡವರ ಆರೋಗ್ಯ ಸೇವೆಯನ್ನು ಮಾಡಿ ದೇವರನ್ನು ಕಾಣಬೇಕು ರೋಗಿಗಳಿಗೆ ವೈದ್ಯರೆ ನಡೆದಾಡುವ ದೇವರು ಎಂದು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು ಹೇಳಿದರು.

    ನಗರದ ಜವಳಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊAಡ ಹರಿದಾಸ ಹಾರ್ಟ್ ಹಾಸ್ಪಿಟಲ್ ಜುಲೈ 28ರಂದು ಉದ್ಘಾಟನೆ ಮಾಡಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆಯಿಂದ ಸೋಲಾಪುರ ಬೆಂಗಳೂರಿಗೆ ರೋಗಿಗಳು ತೆರಳುತ್ತಿದ್ದ ಯುಗಕ್ಕೆ ಅಂತ್ಯ ಹಾಡಲು ತಜ್ಞ ವೈದ್ಯರು ಕಲಬುರಗಿಯಲ್ಲಿ ಆಸ್ಪತ್ರೆ ಪ್ರಾರಂಭಿಸುವುದರ ಮೂಲಕ ಈ ಭಾಗದ ಜನರ ಸೇವೆಗೆ ಮುಂದಾಗಿರುವುದು ಶ್ಲಾಘನೀಯ ವಿಷಯ ಎಂದು ಹೇಳಿದರು.

    ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಡಾ. ಅರುಣ್ ಕುಮಾರ್ ಹರಿದಾಸ್ ಜಗದ್ವಿಖ್ಯಾತ ವೈದ್ಯರು ಕಲಬುರಗಿಯಲ್ಲಿ ಸೇವೆಗೆ ಸಿಗುತ್ತಿರುವುದು ಈ ಭಾಗದ ದೊಡ್ಡ ಭಾಗ್ಯ. ಇಂತಹ ವೈದ್ಯರುಗಳಿಗೆ ಸರಕಾರ ಹಾಗೂ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಶುಭ ಹಾರೈಸಿದರು.

    ಈ ಭಾಗದ ಬಡ ರೋಗಿಗಳ ಸೇವೆಗಾಗಿ ಅತ್ಯಾಧುನಿಕ ಆಸ್ಪತ್ರೆ ತೆರೆಯಲಾಗಿದ್ದು ಕೈಗೆಟಕುವ ದರದಲ್ಲಿ ಸೇವೆ ಒದಗಿಸಲಾಗುವುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಅರುಣ್ ಕುಮಾರ್ ಹರಿದಾಸ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉದ್ಯಮಿಗಳಾದ ರಾಘವೇಂದ್ರ ಮೈಲಾಪುರ ಮಾತನಾಡಿ ಕಲಬುರಗಿಯಲ್ಲಿ ಹೃದ್ರೋಗ ಆಸ್ಪತ್ರೆ ಪ್ರಾರಂಭವಾಗಿರುವುದು ಹೆಮ್ಮೆಯ ಸಂಗತಿ ಹಾಗೂ ಡಾ. ಅರುಣ್ ಕುಮಾರ್ ಹರಿದಾಸ್ ಶ್ರೇಷ್ಠ ವೈದ್ಯರಾಗಿದ್ದು ಅವರ ಸೇವೆ ಈ ಭಾಗಕ್ಕೆ ದೊಡ್ಡ ಕೊಡುಗೆ ಎಂದು ಹೇಳಿದರು.

    ಹರಿದಾಸ್ ಹಾರ್ಟ್ ಆಸ್ಪತ್ರೆ ಸುಸಜ್ಜಿತವಾಗಿ ಎಲ್ಲ ಸೌಲಭ್ಯಗಳೊಂದಿಗೆ ಪ್ರಾರಂಭವಾಗಿರುವುದರಿAದ ಹೃದ್ರೋಗ ರಂಗದಲ್ಲಿ ದೊಡ್ಡ ಹೆಜ್ಜೆ ಇದಕ್ಕೆ ಎಲ್ಲ ರೀತಿಯ ನೆರವು ನೀಡಲು ಸಿದ್ದ ಎಂದು ಎಚ್ ಕೆ ಇ ಕೌನ್ಸಿಲ್ ನ ಮಾಜಿ ಸದಸ್ಯ ನಿತಿನ್ ಬಿ. ಜವಳಿ ಶುಭ ಹಾರೈಸಿದರು. ಉದ್ಯಮಿಗಳಾದ ವೆಂಕಟೇಶ ಕಡೇ ಚೂರ್ , ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ್, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ನಾಗವೇಣಿ ತಿಪ್ಪಣ್ಣಪ್ಪ ಕಮಕನೂರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಪ್ರಮೀಳಾ ಎಂ.ಕೆ, ಡಾ. ರಾಜೇಶ್ ಕಡೇಚೂರ್, ಶ್ರೀಮತಿ ಕೋಮಲೇಶ್ವರಿ ಅರುಣ್ ಕುಮಾರ್, ಅಂತರಾಷ್ಟ್ರೀಯ ಖ್ಯಾತಿಯ ಜಾದುಗಾರ ಕುದ್ರೋಳಿ ಗಣೇಶ್ ಇದ್ದರು. ಆಕಾಶವಾಣಿಯ ನಿವೃತ್ತ ಕಾರ್ಯಕ್ರಮಕ್ಕೆ ಸ್ವಾಗತಿಸಿ ನಿರೂಪಣೆ ಮಾಡಿದರು.

  • ರಸ್ತೆ ಮೇಲೆ ಕಸ ಹಾಕಿದ ಅಧಿಕಾರಿಗೆ ನಗರಸಭೆಯಿಂದ ದಂಡ

    ರಸ್ತೆ ಮೇಲೆ ಕಸ ಹಾಕಿದ ಅಧಿಕಾರಿಗೆ ನಗರಸಭೆಯಿಂದ ದಂಡ

    ಸತ್ಯಕಾಮ ವಾರ್ತೆ ಯಾದಗಿರಿ:

    ರಸ್ತೆ ಮೇಲೆ ಕಸ ಹಾಕಿದ್ದ ಖಜಾನೆ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ನಗರಸಭೆ ಅಧ್ಯಕ್ಷೆ ಕು.ಲಲಿತಾ ಮೌಲಾಲಿ ಅನಪೂರ ಅಧಿಕಾರಿಗೆ ದಂಡ ಹಾಕಿ ಮತ್ತೊಮ್ಮೆ ಕಸ ರಸ್ತೆ ಮೇಲೆ ಹಾಕದಂತೆ ಎಚ್ಚರಿಕೆ ನೀಡಿದರು.

    ಅರಣ್ಯ ಇಲಾಖೆ ವನಮಹೋತ್ಸವ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ನಗರದ ಸುಭಾಶ್ಚಂದ್ರ ಬೋಸ್ ವೃತ್ತದ ಬಳಿ ಇರುವ ಪಿಡಬ್ಲುಡಿ ಇಲಾಖೆ ಕಚೇರಿಯ ಬಳಿ ಇಲಾಖೆಯ ಸಿಬ್ಬಂದಿಗಳು ಮುಖ್ಯರಸ್ತೆ ಮೇಲೆ ಕಸದ ಗುಡ್ಡೆಯನ್ನು ಹಾಕಿದ್ದನ್ನು ಗಮನಿಸಿದ ಅಧ್ಯಕ್ಷರು, ಕಚೇರಿ ಸಿಬ್ಬಂದಿಗೆ ಕಸ ರಸ್ತೆ ಮೇಲೆ ಹಾಕದಂತೆ ಎಚ್ಚರಿಕೆ ನೀಡಿ ತೆರಳಿದ್ದರು.

    ಕಾರ್ಯಕ್ರಮ ಮುಗಿದ ಮೇಲೆ ಮತ್ತೇ ಅದೇ ಮುಖ್ಯರಸ್ತೇ ಮೇಲೆ ಬರುವಾಗಲೂ ಕೂಡ ಕಸ ಹಾಗೇಯೇ ಇರುವುದರಿಂದ ಕಾರಿನಿಂದ ಕೆಳಗಿಳಿದ ನಗರಸಭೆ ಅಧ್ಯಕ್ಷರು ಅಧಿಕಾರಿಗಳನ್ನು ಕರೆಯಿಸಿ, ನಗರಸಭೆ ಸಿಬ್ಬಂದಿಗಳಿಗೆ ಕರೆಯಿಸಿ ಪಿಡಬ್ಲುಡಿ ಅಧಿಕಾರಿಗೆ ದಂಡ ಹಾಕುವಂತೆ ಸೂಚಿಸಿದರು.

    ಸ್ಥಳಕ್ಕಾಗಮಿಸಿದ ನಗರಸಭೆ ಅಧಿಕಾರಿಗಳು ಪಿಡಬ್ಲುಡಿ ಅಧಿಕಾರಿಗೆ ೨೦೦ ರೂಪಾಯಿ ದಂಡ ರಸೀದಿ ನೀಡಿ ಮತ್ತೊಮ್ಮೆ ರಸ್ತೆ ಮೇಲೆ ಕಸ ಸುರಿಯದಂತೆ ಸೂಚನೆ ನೀಡಿದರು.

    ಸ್ಥಳದಲ್ಲಿಯೇ ದಂಡ ಪಾವತಿಸಿದ ಅಧಿಕಾರಿ ನಗರಸಭೆ ಅಧ್ಯಕ್ಷರಿಗೆ ಕ್ಷಮೆ ಕೋರಿ ಮತ್ತೊಮ್ಮ ಈ ರೀತಿ ತಪ್ಪು ಮಾಡುವುದಿಲ್ಲವೆಂದರು.

    ಈ ಸಂದರ್ಭದಲ್ಲಿ ನಗರಸಭೆ ಕಾನೂನು ಸಲಹೆಗಾರರಾದ ಶರಣಗೌಡ ಬಲಕಲ್, ಅಧಿಕಾರಿಗಳಾದ ಶಿವಪುತ್ರ ಸೇರಿದಂತೆ ಸಿಬ್ಬಂದಿಗಳು ಇದ್ದರು.
    ರಸ್ತೆ ಮೇಲೆ ಕಸ ಹಾಕಿದರೆ ದಂಡ ಗ್ಯಾರಂಟಿ

    ನಾವು ಸ್ವಚ್ಚ ಯಾದಗಿರಿ ನಗರಕ್ಕಾಗಿ ಪಣತೊಟ್ಟಿದ್ದೇವೆ ಅದಕ್ಕಾಗಿ ಕಸ ಕಂಡಲ್ಲಿ ಪೋಟೋ ಕಳಿಸಿ ಎಂಬ ಅಭಿಯಾನವನ್ನು ಕೂಡ ಮಾಡುತ್ತಿದ್ದೇವೆ, ಪೋಟೋ ಬಂದ ತಕ್ಷಣ ಅಲ್ಲಿ ನಮ್ಮ ನಗರಸಭೆ ಸಿಬ್ಬಂದಿ ಹಾಜರಾಗಿ ಅಲ್ಲಿನ ಕಸವನ್ನು ವಿಲೇವಾರಿ ಮಾಡಿ ಸ್ವಚ್ಚ ನಗರ ನಿರ್ಮಾಣ ಮಾಡುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದೇವೆ ಇದನ್ನು ಮರೆತು ಯಾರಾದರೂ ರಸ್ತೆ ಮೇಲೆ ಕಸ ಹಾಕಿದರೆ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ, ದಂಡ ಹಾಕುವುದರ ಜೊತೆಗೆ ಯಾವುದಾದರೂ ಇಲಾಖೆ ಅಥವಾ ಸಂಸ್ಥೆಯವರು ರಸ್ತೆ ಮೇಲೆ ಕಸ ಹಾಕಿದಲ್ಲಿ ಶಿಸ್ತುಕ್ರಮಕ್ಕಾಗಿ ಅವರ ಮೇಲಾಧಿಕಾರಿಗಳಿಗೆ ಪತ್ರ ಬರೆಯುತ್ತೇವೆ.
    -ಕು.ಲಲಿತಾ ಮೌಲಾಲಿ ಅನಪೂರ ನಗರಸಭೆ ಅಧ್ಯಕ್ಷರು, ಯಾದಗಿರಿ
  • ಒಳ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 01 ರಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ: ದೇವಿಂದ್ರ ನಾಥ್ ನಾದ

    ಒಳ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 01 ರಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ: ದೇವಿಂದ್ರ ನಾಥ್ ನಾದ

    ಸತ್ಯಕಾಮ ವಾರ್ತೆ ಯಾದಗಿರಿ:
    ಮೂರುವರೆ ದಶಕಗದಿಂದ ಹೋರಾಟ ನಡೆಸಿದರು ರಾಜ್ಯದಲ್ಲಿ ಮಾದಿಗರಿಗೆ ಒಳ ಮೀಸಲಾತಿ ರಾಜ್ಯ ಸರ್ಕಾರ ನೀಡುತ್ತಿಲ್ಲ ಪ್ರಸ್ತುತ ಸಿಎಂ ಸಿದ್ದರಾಮಯ್ಯ ಮಾದಿಗರಲ್ಲಿ ಗೊಂದಲ ಸೃಷ್ಟಿಸುತ್ತ ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತ ಇರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆ ವತಿಯಿಂದ ಆಗಸ್ಟ್ 1 ನಗರದಲ್ಲಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಸಮಾಜದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರಾಜ್ಯಮಾದಿಗ ಸಮಾಜದ ಮುಖಂಡರಾದ ದೇವಿಂದ್ರನಾಥ್ ನಾದ್ ತಿಳಿಸಿದರು.

    ಸೈದಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾಜದ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಮೊದಲ ಅಧಿವೇಶನದಲ್ಲಿಯೇ ಜಾರಿಗೆ ತರುತ್ತೇನೆ ಎಂದು ಸುಳ್ಳು ಹೇಳುತ್ತಾ ದಲಿತರಲ್ಲಿ ಜಗಳ ಹಚ್ಚುವ ಕೆಲಸ ಮೋಸ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬಂದಿವೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಆದೇಶ ನೀಡಿ ಆಗಸ್ಟ್ 1 ಆದೇಶ ನೀಡಿ ಒಂದು ವರ್ಷ ಗತಿಸಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡದೆ ಮಾದಿಗರಲ್ಲಿ ತಾಳ್ಮೆ ಕಟ್ಟೆ ಒಡೆದಿದೆ ಮುಂದೆ ಆಗುವ ಅನಾಹುತಗಳಿಗೆ ಸರಕಾರವೇ ಜವಾಬ್ದಾರಿ ಎಂದರು.

    ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಹಣಮಂತ ಇಟಗಿ, ನ್ಯಾಯವಾದಿಗಳಾದ ಚೆನ್ನಯ್ಯ ಮ್ಯಾಳಿಕೇರಿ, ನಿಂಗಪ್ಪ ವಡ್ನಳ್ಳಿ, ಆಂಜನೇಯ ಬಬಲಾದಿ, ಚಂದ್ರಶೇಖರ್ ಕಡೆಸೂರ್, ಸಂಜೀವಪ್ಪ, ರಾಜು ಕೂಡ್ಲೂರ್, ಭಿಮಾಸೆಪ್ಪ್, ನರಸಪ್ಪ ನೀಲಳ್ಳಿ, ಮಲ್ಲಿಕಾರ್ಜುನ್ ಕೊಡ್ಲೂರ್, ಸಾಗರ್, ಮೌನೇಶ್, ಸಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಕುಸಿದು ಬಿಳುತ್ತಿರುವ ಶಾಲಾ ಮೇಲ್ಚಾವಣಿ – ಮಕ್ಕಳ ಕಲಿಕೆಗೆ ಅಪಾಯ

    ಕುಸಿದು ಬಿಳುತ್ತಿರುವ ಶಾಲಾ ಮೇಲ್ಚಾವಣಿ – ಮಕ್ಕಳ ಕಲಿಕೆಗೆ ಅಪಾಯ

    ಸತ್ಯಕಾಮ ವಾರ್ತೆ ವಡಗೇರಾ :
    ಯಾದಗಿರಿ ಜಿಲ್ಲೆಯ ತಾಲ್ಲೂಕಿನ ರೊಟ್ನಡಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ಬಹಳ ತೀವ್ರವಾಗಿದೆ. ಶಾಲೆಯ ಹಳೆಯ ಕಟ್ಟಡದ ಗೋಡೆಗಳು ಸೀಳಿ ಹೋಗಿದ್ದು, ಮೇಲ್ಚಾವಣಿ ಯಾವಾಗ ಬೇಕಾದರೂ ಕುಸಿದು ಬೀಳುವ ಭೀತಿಯಲ್ಲಿದೆ.

    100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುವ ಈ ಶಾಲೆಯಲ್ಲಿ ಕೇವಲ ಒಬ್ಬ ಕಾಯಂ ಶಿಕ್ಷಕರಿದ್ದಾರೆ. ಉಳಿದವರು ಅತಿಥಿ ಶಿಕ್ಷಕರು. ಬೀಳುವ ಚಾವಣಿಯಿಂದ ಮಕ್ಕಳು ಅಪಾಯಕ್ಕೀಡಾಗುವ ಭೀತಿಯಿಂದ ಶಿಕ್ಷಕರು ಪಾಠವನ್ನು ಶಾಲಾ ಹೊರಾಂಗಣದಲ್ಲಿ ಮಾಡಲಾಗುತ್ತಿದೆ.

    ಇನ್ನೂ ಮಳೆ ಬಂದರೆ ಶಾಲೆ ಮಳೆ ನೀರಿನ ಸೋರಿಕೆಯಿಂದ ತುಂಬಿ ಹೋಗುತ್ತದೆ. ಅಲ್ಲದೇ ಶೌಚಾಲಯ ವ್ಯವಸ್ಥೆ, ನೀರಿನ ಕೊರತೆ ಮತ್ತು ಶಾಲೆಗೆ ತಡೆಗೋಡೆಯಿಲ್ಲದ ಪರಿಸ್ಥಿತಿ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ತಾಜಾಸುದ್ದಿಗಳಿಗಾಗಿ ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ

    ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲ್ಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಹಾಗೂ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಶಿವನಾಗಪ್ಪ ಈ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದನೆ ದೊರೆತಿಲ್ಲವೆಂದು ಗಂಭೀರ ಆರೋಪ ಮಾಡಿದ್ದಾರೆ.

    ಅಮೃತ ಯೋಜನೆಯಡಿ ಮಂಜೂರಾದ ₹5 ಲಕ್ಷ ಮೊತ್ತದ ಹೈಟೆಕ್ ಶೌಚಾಲಯವೂ ಬಾಗಿಲಿಲ್ಲದ ಕಳಪೆ ಕಾಮಗಾರಿ ಎನಿಸಿದೆ. ಇದರಿಂದ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಶಿಕ್ಷಕರು ಬಹಿರ್ದೆಸೆಗೆ ಹೋಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ತಕ್ಷಣವೇ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಬದಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೂತನ ಕಟ್ಟಡ ಮತ್ತು ಮೂಲಭೂತ ಸೌಕರ್ಯ ಒದಗಿಸದಿದ್ದರೆ, ಪಾಲಕರು ಮಕ್ಕಳೊಂದಿಗೆ ಬೀಗ ಜಡಿದು ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

  • ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

    ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ:

    ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

    ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ. ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

    ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

    ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್.ಬಿ.ವಡವಡಗಿ (ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.