Category: Latest News

  • ನ್ಯಾಯ ವಂಚಿತ ತಾಲೂಕಕ್ಕೆ ನ್ಯಾಯವಾದಿಗಳಿಂದ ಹೋರಾಟಕ್ಕೆ ಸಜ್ಜು

    ನ್ಯಾಯ ವಂಚಿತ ತಾಲೂಕಕ್ಕೆ ನ್ಯಾಯವಾದಿಗಳಿಂದ ಹೋರಾಟಕ್ಕೆ ಸಜ್ಜು

    ನ್ಯಾಯವಾದಿಗಳ ಪೂರ್ವಭಾವಿ ಸಭೆ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ಪಟ್ಟಣವು ತಾಲೂಕು ಕೇಂದ್ರವಾಗಿ ದಶಕಗಳೇ ಕಳೆದರೂ ಇನ್ನು ಸಂಬಂಧ ಪಟ್ಟ ಇಲಾಖೆಗಳು ಹಾಗೂ ನ್ಯಾಯಾಲಯ ಬರದೇ ಇರುವದಕ್ಕೆ ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಸಿ. ಎಸ್. ಮಾಲಿಪಾಟೀಲ್ ವಿಷಾಧ ವ್ಯಕ್ತ ಪಡಿಸಿದರು.

     

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ಕಳೆದ 2012 ರಿಂದ ನ್ಯಾಯಾಲಯದ ಬೇಡಿಕೆಯಿಟ್ಟಿದ್ದೇವೆ, ಮಾನದಂಡದ ಪ್ರಕಾರ ತಾಲೂಕಿನಿಂದ 1200 ಪ್ರಕರಣಗಳು ಧಾಖಲಾಗುತ್ತಿದ್ದರು ಕುಂಠ ನೆಪ ಹೇಳಿ ಮುಂದೂಡುತ್ತಿರುವುದು ಸಹಿಸಲಾಗದು, ಪ್ರಯುಕ್ತ ಮುಂದಿನ ದಿನಗಳಲ್ಲಿ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ಮಾಡುತ್ತೇವೆ ಎಂದರು.

     

    ಇದೇ ಸಂಧರ್ಭದಲ್ಲಿ ವಕೀಲ ಆನಂದ ರಾವ್ ನೀರೇಟಿ ಮಾತನಾಡಿ, ಸುತ್ತಮುತ್ತಲಿನ ಗ್ರಾಮಗಳಿಂದ ನಯವಾಧಿಗಳು ಸೇರಿದಂತೆ ಅರ್ಜಿದಾರರು ದೂರದ ಯಾದಗಿರಿಗೆ ಅಲೆಡದಾಡಬೇಕಾಗಿದೆ, ಸಮಯ ಸೇರಿದಂತೆ ಆರ್ಥಿಕ ಹೊರೆಯಾಗುತ್ತಿದ್ದು, ಪುರಸಭೆ ಕಾರ್ಯಾಲಯವು ಬೇಡಿಕೆಗೆ ಸ್ಪಂಧಿಸಿ ಟೌನ್ ಹಾಲ್ ಅನ್ನು ಬಳಕೆಗೆ ನೀಡಿದ್ದು ರಾಜಕೀಯ ಹಿತಾಶಕ್ತಿಯಿಲ್ಲದೆ ತಾಲೂಕ ಕೇಂದ್ರದಲ್ಲಿ ನ್ಯಾಯಾಲಯ ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ. ಈ ಕೂಡಲೇ ಸಂಬಂಧ ಪಟ್ಟವರು ಮುತುವರ್ಜಿ ವಹಿಸದಿದ್ದರೆ ಅತೀ ಶೀಘ್ರದಲ್ಲಿ ಹೋರಾಟ ಮಾಡುತ್ತೇವೆ ಎಂದರು.

     

    ಈ ಸಂಧರ್ಭದಲ್ಲಿ ಖಜಾಂಚಿ ಸಾಬಣ್ಣ, ಕೃಷ್ಣ ಮೇಧಾ, ರಾಜ ರಮೇಶ ಗೌಡ, ಗುರುನಾಥ ರೆಡ್ಡಿ ಅನಪುರ, ದೇವಪ್ಪ ಎಮ್, ವಿಶ್ವನಾಥ ರೆಡ್ಡಿ, ಸಂಜೀವ ಕುಮಾರ ಚಂದಾಪುರ, ಮೋಹನ ಕುಮಾರ್ ಗಜಾರೆ, ನರಸಪ್ಪ ಧನವಾಡ, ಕೃಷ್ಣ ಪಂಚಾಲ, ಮೊಗುಲಪ್ಪ ಯಾದ್ಲಾಪುರ, ಮೌನೇಶ್ ಕೊಂಕಲ್, ವಿಜಯಕುಮಾರ್ ಉಪಸ್ಥಿತರಿದ್ದರು.

  • ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆ; ವೀರಣ್ಣ ಗೌಡ ಪಾಟೀಲ್

    ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆ; ವೀರಣ್ಣ ಗೌಡ ಪಾಟೀಲ್

    ಸತ್ಯಕಾಮ ವಾರ್ತೆ ಗುರುಮಠಕಲ್:

    ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆಯಾಗಿವೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್ ಅವರು ಅವರು ಹೇಳಿದ್ದಾರೆ.

    ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದ ಅಂಗನವಾಡಿ ಮಕ್ಕಳಿಂದ ಬಾಲಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್ ಅವರು ಮಾತನಾಡಿದರು
    ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದ ಅಂಗನವಾಡಿ ಮಕ್ಕಳಿಂದ ಬಾಲಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್ ಅವರು ಮಾತನಾಡಿದರು.

    ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹಾಗೂ ಕಲಿಕೆ ಟಾಟಾ ಟ್ರಸ್ಟ್ ಬೆಂಗಳೂರು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಾಲಮೇಳ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಶಿಕ್ಷಣಕ್ಕೆ ಬೇಕಾದ ಉತ್ತಮ ಅಡಿಪಾಯಯವನ್ನು ಕಲಿಕಾ ಚಟುವಟಿಕೆಗಳ ಮೂಲಕ ದೊರಕಿಸಿಕೊಡಲಾಗುತ್ತದೆ ಎಂದರು.

    ಬಾಲಮೇಳ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ಕೆಲಸ ಮಾಡುತ್ತಿದೆ. ಮಕ್ಕಳ ಅಭಿರುಚಿ ಗುರುತಿಸಿ ಪೋಷಕರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಹೇಳಿದರು.

    ಈ‌‌‌ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್,ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಷ ಪಾಟೀಲ್, ಸಿ. ಡಿ. ಪಿ. ಓ ಶರಣಬಸಪ್ಪ,ಗೌರಮ್ಮ, ಶಾಂತ, ಮುದ್ದೇಶ, ಸೇರಿದಂತೆ ಇತರರು ಇದ್ದರು.

  • ಒಳ ಮೀಸಲಾತಿ ನೀಡದಿದ್ದರೆ ಹೋರಾಟಕ್ಕೆ ಸಿದ್ಧ

    ಒಳ ಮೀಸಲಾತಿ ನೀಡದಿದ್ದರೆ ಹೋರಾಟಕ್ಕೆ ಸಿದ್ಧ

    ಸತ್ಯಕಾಮ ವಾರ್ತೆ ಗುರುಮಠಕಲ್:

    ಗ್ರಾಮೀಣ ಭಾಗದಲ್ಲಿ ಇಂದು ಸಂಘಟನೆಯ ಅವಶ್ಯವಿದೆ. ಎಲ್ಲರೊಂದಿಗೆ ಸಹೋದರತ್ವ ಭಾವನೆಯಿಂದ ಇದ್ದು ನ್ಯಾಯಕ್ಕಾಗಿ ಹೋರಾಟ ನಡೆಸಬೇಕು. ತಪ್ಪು ಮಾಡಿದವರ ವಿರುದ್ಧ ಹೋರಾಟ ಇರಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಗಣೇಶ್ ದುಪ್ಪಲ್ಲಿ ಸಲಹೆ ನೀಡಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಅವರು ಮಾತನಾಡಿದರು.

    ಮಾದಿಗ ದಂಡೋರದ ರಾಷ್ಟ್ರೀಯ ನಾಯಕ ಮಂದಕೃಷ್ಣ ಮಾದಿಗ ಅವರ 30 ವರ್ಷಗಳ ನಿರಂತರ ಹೋರಾಟದ ಪ್ರತಿಫಲವಾಗಿ ಕಳೆದ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಒಳ ಮೀಸಲಾತಿ ವರ್ಗೀಕರಣವನ್ನು ಆಯಾ ರಾಜ್ಯಗಳು ಅಂಗೀಕರಿಸಿ ಜಾರಿಗೊಳಿಸಬಹುದು ಎಂದು ತೀರ್ಪ ನೀಡಿದೆ. ಆದರೆ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯನ್ನು ತೀರ್ಪು ಬಂದು ಎರಡು ಮೂರು ತಿಂಗಳು ಕಳೆದರೂ ಮೀಸಲಾತಿಯನ್ನು ಅಂಗೀಕರಿಸಿ ಜಾರಿಗೊಳಿಸಿಲ್ಲ. ಒಳ ಮೀಸಲಾತಿ ಜಾರಿಗೆಯ ವಿಳಂಭ ದೋರಣೆಯು ಸಹಿಸಲಾಗದು ಎಂದರು.

    ಭೀಮಶಪ್ಪ ಗೂಡ್ಸೆ ಮಾತನಾಡಿ, ಮೀಸಲಾತಿ ವಿಚಾರವಾಗಿ ಹಳ್ಳಿಯಿಂದ ದಿಲ್ಲಿಗೆ ತೆರಳಿದ ನಾಯಕರು ಮಾತಾಡುತ್ತಿಲ್ಲ. ಅವರು ಹೇಳಿದರೆ ಆಗಿ ಬಿಡುತ್ತದೆ, ಇಂದು ದುರ್ಬಲರಿಗೆ ಮೀಸಲಾತಿ ಲಾಭ ಸಿಗಬೇಕು ಎಂದರು.

    ನೂತನ ಪದಾಧಿಕಾರಿಗಳು: ಅಧ್ಯಕ್ಷ ರವಿ ಎಮ್.ಟಿ.ಪಲ್ಲಿ, ಉಪಾಧ್ಯಕ್ಷ ಶರಣಪ್ಪ ಅಮ್ಮಪಲ್ಲಿ,ಗೌರವ ಅಧ್ಯಕ್ಷ ವೆಂಕಟೇಶ ಪುಟಪಾಕ್, ಪ್ರ.ಕಾರ್ಯದರ್ಶಿ ಮಹಾದೇವ ಗಾಜರಕೋಟ, ಕಾರ್ಯದರ್ಶಿ ನಿಲೇಶ್ ನಜರಾಪೂರ, ಸಹ ಕಾರ್ಯದರ್ಶಿ ನಾಗೇಶ್ ಚಂಡ್ರಿಕಿ, ಖಜಾಂಚಿ ನರಸಪ್ಪ ಹಿಮಲ್ಹಾಪೂರ, ನಗರ ಅಧ್ಯಕ್ಷ ಶ್ರೀನಿವಾಸ ಕಿಂದಿಂಟಿ, ನಗರ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸೈಧಪೋಳ್, ಕಾನೂನು ಸಲಹೆಗಾರ ಬುಗ್ಗಪ್ಪ ಕಾಕಲವಾರ, ಪ್ರಚಾರ ಸಮೀತಿಯ ಅಧ್ಯಕ್ಷ ಕಿಷ್ಣಪ್ಪ ಸೈಧಪೋಳ್, ನಗರ ಕಾರ್ಯದರ್ಶಿ ಅನಿಲ್ ಬಸ್ಸಪ್ಪೋಳ್ ಸಹಾಯಕ ಕಾರ್ಯದರ್ಶಿ ಭೀಮಶಪ್ಪ ಮಿನಿಂಟಿ ಅವರನ್ನು ಆಯ್ಕೆ ಮಾಡಲಾಯಿತು.

  • ತರಗತಿ ಬಹಿಷ್ಕರಿಸಿ ರಸ್ತೆಗಿ ಬಂದ ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು

    ತರಗತಿ ಬಹಿಷ್ಕರಿಸಿ ರಸ್ತೆಗಿ ಬಂದ ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು

    • ಶಹಾಪುರ ತಾಲೂಕು ಆಡಳಿತ ಕಚೇರಿ ಎದುರು ಧರಣಿ
    • ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೌಡು
    • ಅಮಾನತುಗೊಂಡ ಶಿಕ್ಷಕರೇ ಬೇಕೆಂದು ಪಟ್ಟು ಹಿಡಿದ ಮಕ್ಕಳು…!

    ಸತ್ಯಕಾಮ ವಾರ್ತೆ ಶಹಾಪುರ:

    ಇಲ್ಲಿನ ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಏಕಾಏಕಿ ತರಗತಿ ಬಹಿಷ್ಕರಿಸಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

     

    ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕ ಶಿವರಾಜ್ ಬೀರನೂರ ಮತ್ತು ಹಿಂದಿ ಶಿಕ್ಷಕ ಮುಬಾರಕ್ ಅವರನ್ನು ಅಮಾನತುಗೊಳಿಸಿ ಡಿ.2 ರಂದಷ್ಟೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

     

    ಅಮಾನತುಗೊಂಡ ಶಿಕ್ಷಕ ಶಿವರಾಜ್, ಪ್ರಾಂಶುಪಾಲರಿಗೆ ಶಾಲಾ ಆಡಳಿತ ಸುಗಮವಾಗಿ ನಡೆಸಲು ಬಿಡದೆ ತಡೆಯೊಡ್ಡುವುದು, ಪ್ರಾಂಶುಪಾಲ ವಿರುದ್ಧ ಮಕ್ಕಳನ್ನು ಎತ್ತಿಕಟ್ಟುವ ಕೆಲಸ, ಮಕ್ಕಳಲ್ಲಿ ಜಾತಿ ಭೇದ ಭಾವ ಮೂಡಿಸಿ ಶಾಲಾ ವಾತಾವರಣ ಹಾಳು ಮಾಡಿದ ಆರೋಪದ ಎದುರಿಸುತ್ತಿದ್ದಾರೆ. ಇನ್ನು ಮುಬಾರಕ್ ಸರಿಯಾಗಿ ಪಾಠ ಬೋಧಿಸದೇ ಮಕ್ಕಳಿಗೆ ಫೋನ್ ಕೊಡುವ ಆಮಿಷ ತೋರಿಸಿ ಸಿಬ್ಬಂದಿ ಕೋಣೆಗೆ ಕರೆಯಿಸುತ್ತಿದ್ದರು, ಈ ಬಗ್ಗೆ ಸಿಬ್ಬಂದಿಗಳು ತಿಳಿ ಹೇಳಿದ್ದರಿಂದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಸುಳ್ಳು ಹೇಳುವ ಸಂಚು ಮಾಡಿದ್ದು ಸೇರಿ ಹಲವು ಆರೋಪಗಳಿವೆ.

     

    ಈ ಕುರಿತು ಸೂಕ್ತ ಉತ್ತರ ನೀಡಲು ನವೆಂಬರ್ ತಿಂಗಳಲ್ಲಿ ಈರ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿತ್ತು.

     

    ಆದರೆ ಇದೀಗ ಪ್ರಕರಣ ಈಗ ಇನ್ನೊಂದು ತಿರುವು ಪಡೆದಿದ್ದು, ಪ್ರಾಂಶುಪಾಲ ಸಿದ್ದಭೀರಪ್ಪ ಮತ್ತು ನಿಲಯ ಪಾಲಕ ರಾವುತಪ್ಪ ಇಬ್ಬರ ಒಳ ಒಪ್ಪಂದದ ಮೇರೆಗೆ ನಿಲಯಕರು ಒಂದು ತಿಂಗಳು ಶಾಲಾಗೆ ಬರದೇ ಅನಧಿಕೃತವಾಗಿ ಗೈರಾಜರಾಗಿದ್ದರು. ಒಂದು ತಿಂಗಳ ರುಜು ಒಂದೇ ಬಾರಿ ಮಾಡಿ (ಆಗಸ್ಟ್ 24) ವೇತನವನ್ನು ಪಡೆದು ಕೊಂಡಿರುತ್ತಾರೆ ಎಂದು ಆರೋಪಗಳು ಕೇಳಿ ಬಂದಿವೆ.

     

    ನಿಲಯಪಾಲಕ ರಾವುತಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿದ್ಯಾರ್ಥಿಗಳಿಗೆ ಹೊಡೆಯಲು ಮುಂದಾಗಿರುವುದು ಬಯಲಾಗಿದೆ.

     

    ಗಂಡ – ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಪ್ರಾಂಶುಪಾಲ, ನಿಲಯ ಪಾಲಕ ಹಾಗೂ ಸಿಬ್ಬಂದಿಗಳ ಒಳಸಂಚಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎನ್ನುವುದು ಸತ್ಯ.

     

    ಸಮಾಜ ಕಲ್ಯಾಣ ಅಧಿಕಾರಿ ದೌಡು: ವಿದ್ಯಾರ್ಥಿಗಳ ಪ್ರತಿಭಟನೆ ವಿಷಯ ತಿಳಿದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆರಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ಸಂಪರ್ಕಿಸಿದಾಗ ಫೋನ್ ಕರೆಯ ಪ್ರತಿಕ್ರಿಯೆಗೆ ಸಿಕ್ಕಿಲ್ಲ.

    ವ್ಯವಸ್ಥೆ ಸರಿಯಿಲ್ಲ: ವಸತಿ ಶಾಲೆಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಅಂಶ ಈ ಹೋರಾಟದಿಂದ ಬೆಳಕಿಗೆ ಬಂದಿದೆ. ಸ್ಥಳೀಯ ಸಂಘಟನೆ ಪ್ರಮುಖರೊಬ್ಬರು ಮಾತನಾಡಿ ಇಲ್ಲಿನ ವ್ಯವಸ್ಥೆ ಬಗ್ಗೆ ಹಲವು ಬಾರಿ ದೂರು ನೀಡಿದ್ದೇವೆ. ತಂದೆ ತಾಯಿ ಬಿಟ್ಟು ಅಕ್ಷರ ಕಲಿಯಲು ಬಂದ ಮಕ್ಕಳಿಗೆ ಉತ್ತಮ ಭೋಧನೆ ಮಾಡಬೇಕು. ಈ ರೀತಿ ಮಕ್ಕಳನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

  • ಡಿ.5ರಂದು ವಕ್ಫಾಸುರನ ವಿರುದ್ಧ ಶಹಾಪೂರದಲ್ಲಿ ಬೃಹತ್ ಪ್ರತಿಭಟನೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ

    ಡಿ.5ರಂದು ವಕ್ಫಾಸುರನ ವಿರುದ್ಧ ಶಹಾಪೂರದಲ್ಲಿ ಬೃಹತ್ ಪ್ರತಿಭಟನೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ

    ಸತ್ಯಕಾಮ ವಾರ್ತೆ ಯಾದಗಿರಿ:

    ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರೈತರು, ಮಠಾಧೀಶರ ಜೊತೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಶಹಾಪೂರ ನಗರದಲ್ಲಿ ಡಿ. 5 ರಂದು ಬೆಳಗ್ಗೆ 11 ಕ್ಕೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಪ್ರಕಟಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯಲ್ಲಿ ವಕ್ಫ್ ಹೆಸರಿನಲ್ಲಿ ರೈತರ, ಮಠ ಮಾನ್ಯಗಳ ಸೇರಿದಂತೆ ಎಲ್ಲರ ಜಮೀನು ನುಂಗುವ ನಿಟ್ಟಿನಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಹಾಗೂ ಮುಡಾ ಹಗರಣ, ನಿಗಮಗಳ ಹಗರಣಗಳು ಸೇರಿದಂತೆ ಸರ್ಕಾರದ ವೈಫಲ್ಯದ ವಿರುದ್ಧವೂ ಪ್ರತಿಭಟನೆ ನಡೆಯಲಿದೆ.

    ಅಂದು ಬೆಳಗ್ಗೆ 11 ಕ್ಕೆ ಸಿಬಿ ಕಮಾನ್ ನಿಂದ ಹೊರಟು ಶ್ರೀ ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆದು ಅಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಲಿದೆ. ಇದರಲ್ಲಿ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಬೈರತಿ ಬಸವರಾಜ, ಪಿ. ರಾಜೀವ್ ಸೇರಿದಂತೆ ಜಿಲ್ಲೆಯ ರಾಜ್ಯಮಟ್ಟದ ನಾಯಕರು ಭಾಗಿಯಾಗಲಿದ್ದಾರೆ.

    4ನೇ ತಾರೀಖಿನಂದು ಬೀದರ ಕಲ್ಬುರ್ಗಿ ಪೂರ್ಣಗೊಳಿಸಿ 5 ರಂದು ಯಾದಗಿರಿ ರಾಯಚೂರಿನಲ್ಲಿ ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಂತರ ಮುಂದೆ ಸಾಗಿ ಬೆಳಗಾವಿಗೆ ಈ ನಿಯೋಗ ತೆರಳಲಿದೆ ಎಂದು ಅವರು ತಿಳಿಸಿದರು.

    ಮನವಿ: ಇದು ರೈತರ ಹಾಗೂ ಮಠ ಮಾನ್ಯಗಳ ಆಸ್ತಿಯನ್ನು ಅಕ್ರಮವಾಗಿ ನುಂಗುತ್ತಿರುವ ವಕ್ಫಾಸುರ ಕೃತ್ಯದ ವಿರುದ್ಧ ಇರುವುದರಿಂದ ರೈತರು, ಮಠಾಧೀಶರು, ಪ್ರಗತಿಪರರು,ರೈತ ಪರ ಸಂಘಟನೆಗಳು ಸೇರಿದಂತೆ ಎಲ್ಲರಿಗೂ ಮನವಿ ಮಾಡಿಕೊಂಡಿದ್ದು ಪ್ರತಿಯೊಬ್ಬರೂ ಭಾಗವಹಿಸಿ ಈ ಅಕ್ರಮದ ವಿರುದ್ಧ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್,ಯುವ ಮುಖಂಡ ಮಹೇಶರಡ್ಡಿಗೌಡ ಮುದ್ನಾಳ,ಅಲೆಮಾರಿ ನಿಗಮದ ಮಾಜಿ ಅದ್ಯಕ್ಷ ದೇವೇಂದ್ರನಾಥ ನಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಜಿಲ್ಲಾ ಖಜಾಂಚಿ ತಿರುಪತಿ ರಡ್ಡಿ,ನಗರ ಮಂಡಲ ಲಿಂಗಪ್ಪ ಹತ್ತಿಮನಿ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ ಇದ್ದರು.

  • ಹೆಚ್.ಐ.ವಿ ಕುರಿತು ಯುವ ಜನಾಂಗ ಎಚ್ಚರವಾಗಿರಿ: ನ್ಯಾ.ಮರಿಯಪ್ಪ

    ಹೆಚ್.ಐ.ವಿ ಕುರಿತು ಯುವ ಜನಾಂಗ ಎಚ್ಚರವಾಗಿರಿ: ನ್ಯಾ.ಮರಿಯಪ್ಪ

    ಅಪಾಯಕಾರಿ ಹೆಚ್.ಐ.ವಿ ಕುರಿತು ಯುವ ಜನಾಂಗ ಎಚ್ಚರವಾಗಿರಿ-ಏಡ್ಸದಿಂದಆಗುವ ಅಪಾಯದ ಬಗ್ಗೆ ಅರಿವು ಹೊಂದಿ ಹಿರಿಯ ಸಿವಿಲ್ ನ್ಯಾಯಾಧೀಶರು  ಮರಿಯಪ್ಪ
    ಸತ್ಯಕಾಮ ವಾರ್ತೆ ಯಾದಗಿರಿ :
    ಏಡ್ಸದಂತಹ ಮಾಹಾಮಾರಿಯಿಂದ ದೂರವಿರಲು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ  ಹಿರಿಯ ಸಿವಿಲ್  ನ್ಯಾಯಾಧೀಶರಾದ ಮರಿಯಪ್ಪ ಹೇಳಿದರು.

    ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಙIಒS) ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ "ವಿಶ್ವ ಏಡ್ಸ್ ದಿನ" ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಙIಒS) ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ವಿಶ್ವ ಏಡ್ಸ್ ದಿನ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಹೆಚ್.ಐ.ವಿಯಂತಹ ರೋಗಗಳಿಂದ ಯುವಕರು ಹೆಚ್ಚಾಗಿ ಇದಕ್ಕೆ ಬಲಿಯಾಗುತ್ತಿದ್ದಾರೆ. ಮೊಬೈಲ್ ಹಾವಳಿ ಯುವಕರಲ್ಲಿ ಅತಿಯಾಗಿದ್ದು, ಇದು ಅವರು ದಾರಿ ತಪ್ಪಲು ಕಾರಣವಾಗುತ್ತಿದೆ. ಅದಕ್ಕೆ ಹೆಚ್ಚು,ಹೆಚ್ಚು ಜಾಗೃತಿ ಮುಖ್ಯವೆಂದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್ ಬಿರಾದಾರ ಮಾತನಾಡಿ, ಏಡ್ಸ್ಗೆ ಚಿಕಿತ್ಸೆ ಸಾಧ್ಯ. ಆದರೆ ಸಂಪೂರ್ಣ ಗುಣಮುಖರಾಗಲು ಅಸಾಧ್ಯ. ಈ ಕಾರಣದಿಂದ ರೋಗಕ್ಕೆ ತುತ್ತಾಗದಂತೆ ಎಚ್ಚರ ವಹಿಸಬೇಕು. ಏಡ್ಸ್ ಕುರಿತು ಅರಿವು ಹೊಂದಬೇಕು. ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

    ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಸಂಜೀವಕುಮಾರ ಸಿಂಗ್ ರಾಯಚೂರಕರ್ ಮಾತನಾಡಿ, ಯುವಕ ಯುವಕರಲ್ಲಿ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದೆ. ಹಾನಿಕಾರಕ ಈ ರೋಗ ಸಂಪೂರ್ಣ ಗುಣಮುಖಕ್ಕೆ   ಲಸಿಕೆ ಲಭ್ಯವಾಗಿಲ್ಲ. ಆದರೆ ಇದನ್ನು ತಡೆಗಟ್ಟಲು ವಿಧಾನ ಸುಲಭ. ಅಸುರಕ್ಷಿತ ಲೈಂಗಿಕ ಪ್ರಕ್ರಿಯೆಯಿಂದ ಈ ರೋಗ ಬರುತ್ತದೆ. ನಿರ್ಲಕ್ಷದ ಸೂಜಿಗಳಿಂದ ರೋಗ ಬರುತ್ತದೆ. ತಾಯಿಯಿಂದ ಮಗುವಿಗೆ ಬರುತ್ತದೆ. ಇದನ್ನು ತಡೆಗಟ್ಟ ಬಹುದು.ಅಸುರಕ್ಷಿತ ಲೈಂಗಿಕ ಸಂಬAಧದಿAದ ಗ್ರಾಮೀಣ ಭಾಗದಲ್ಲಿಯೂ ಏಡ್ಸ್  ಹೆಚ್ಚಾಗುತ್ತಿದೆ. ಲೈಂಗಿಕ ಕ್ರಿಯೆಗಳು ಮದುವೆ ಮುಂಚೆ ನಡೆಯುತ್ತಿರುವುದು ಕಳವಳ ಸಂಗತಿ ಎಂದರು.

    ಲೈಂಗಿಕ ಸುರಕ್ಷಾ ಕ್ರಮಗಳು ಹಾಗೂ ಕಾಂಡಮ್ ಬಳಸುವುದರಿಂದ ಏಡ್ಸ್ ತಡೆಗಟ್ಟ ಬಹುದು. ಇಂದಿನ ಯುವ ಜನಾಂಗ ಏಡ್ಸ್ನಂತಹ ಭೀಕರ ಕಾಯಿಲೆಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿ. ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳದೆ ದೇಹ ಮತ್ತು ಮನಸ್ಸು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು’ ಎಂದು ಸಲಹೆ ನೀಡಿದರು.

    ಆರಂಭದಲ್ಲಿ ಗಾಂಧಿ ವೃತ್ತದಲ್ಲಿ ಏಡ್ಸ್ ಜಾಗೃತಿ ಜಾಥಾಕ್ಕೆ ಕಾನೂನು ಸೇವಾ ಪ್ರಾಧಿಕಾರದ  ಸದಸ್ಯ ಕಾರ್ಯದರ್ಶಿಗಳು  ಮರೆಪ್ಪ ಜಾಥಾಕ್ಕೆ ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಸಾಜೀದ್, ತಾಲೂಕು ಆರೋಗ್ಯಧಿಕಾರಿ ಡಾ. ಹನುಮಂತ ರೆಡ್ಡಿ, ಐಎಮ್ ಎ ಜಿಲ್ಲಾಧ್ಯಕ್ಷ ಡಾ.ಚಂದ್ರಕಾAತ ಪೂಜಾರಿ, ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲಾ ಸಿನ್ನೂರ್, ಡಾ.ಶರಣಬಸಪ್ಪ ಎಲ್ಹೇರಿ, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ , ತುಳಸಿರಾಮ, ಅಮರೇಶ ಬೋತಿ ಇದ್ದರು. ಇದೆ ಸಂದರ್ಭದಲ್ಲಿ ಹೆಚ್.ಐ.ವಿ ಸಮುದಾಯಕ್ಕೆ ಸಹಾಯ, ಸಹಕಾರ ಮತ್ತು ಹೆಚ್ ಐ.ವಿ ಪರೀಕ್ಷೆ ಮಾಡುವಲ್ಲಿ ಗುರಿ ಸಾಧನೆ ಮಾಡಿದ್ದಕ್ಕಾಗಿ  ಸಂಬAಧಿಸಿದ  ಸಿಬ್ಬಂದಿಗಳನ್ನು ಸನ್ಮಾನ ಮಾಡಲಾಯಿತು.

  • ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಲು ಶಾಸಕ ಕಂದಕೂರ ಸಲಹೆ

    ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಲು ಶಾಸಕ ಕಂದಕೂರ ಸಲಹೆ


    ಸತ್ಯಕಾಮ ವಾರ್ತೆ ಯಾದಗಿರಿ:

    ಅಂಗವಿಕಲರು, ವಿಶೇಷ ಚೇತನರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿ ಸೌಲಭ್ಯ ಒದಗಿಸುತ್ತಿದ್ದು, ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

    ಇಲ್ಲಿನ ಗುರುಮಠಕಲ್ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ವತಿಯಿಂದ ಶಾಸಕರ ಅನುದಾನದಲ್ಲಿ ನೀಡಲಾಗುವ ೧೯ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಪ್ರತಿಯೊಬ್ಬರೂ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು, ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳುವುದರ ಜೊತೆಗೆ ಗಾಡಿ ನಡೆಸುವಾಗ ನಮ್ಮ ಕುಟುಂಬದ ನೆನಪಿಟ್ಟುಕೊಂಡು ವಾಹನ ಚಲಾಯಿಸಬೇಕು ಎಂದು ಹೇಳಿದರು.

    ಅಂಗವಿಕಲರ ಬದುಕು ಸುಧಾರಣೆಗಾಗಿ ಶಾಸಕರ ಅನುದಾನದಲ್ಲಿ ತ್ರಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ತ್ರಿಚಕ್ರ ವಾಹನಗಳು ಅಂಗವಿಕಲರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿವೆ ಎಂದರು.

    ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಉಪ ನಿರ್ದೇಶಕ ಶರಣಪ್ಪ ಪಾಟೀಲ, ಕೃಷ್ಣಾಜೀ ಕುಲಕರ್ಣಿ, ಭೋಜನಗೌಡ ಯಡ್ಡಳ್ಳಿ, ಸೋಮನಗೌಡ ಬೆಳಗೇರಾ, ಅಜಯರಡ್ಡಿ ಎಲ್ಹೇರಿ, ರಾಮಣ್ಣ ಕೋಟಗೇರಾ, ಸಣ್ಣೆಪ್ಪ ಕೊಟಗೇರಾ, ಈಶ್ವರನಾಯಕ ಚಿಂತನಹಳ್ಳಿ, ಜಯಣ್ಣ ಎಂಪಾಡ, ಬಾಲು ದಾಸರಿ, ಬಾನು ಮೇಧಾ, ಬಂದಪ್ಪಗೌಡ ಲಿಂಗೇರಿ, ಬಸನಗೌಡ ಚಾಮನಳ್ಳಿ, ಶರಣಪ್ಪ ಮೋಟ್ನಳ್ಳಿ ಸೇರಿದಂತೆ ಇತರರಿದ್ದರು.

    ಸುರಕ್ಷತೆಗಾಗಿ ಹೆಲ್ಮೆಟ್ ವಿತರಣೆ

    ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆವತಿಯಿಂದ ನೀಡಲಾಗುವ ತ್ರಿಚಕ್ರ ವಾಹನಗಳ ಫಲಾನುಭವಿಗಳಿಗೆ ಹೆಲ್ಮೆಟ್ ನೀಡದಿರುವುದನ್ನು ಕಂಡು ಶಾಸಕ ಶರಣಗೌಡ ಕಂದಕೂರ ವೈಯಕ್ತಿಕವಾಗಿ ಎಲ್ಲಾ ಫಲಾನುಭವಿಗಳಿಗೆ ಹೆಲ್ಮೆಟ್ ನೀಡಿ ಕಡ್ಡಾಯವಾಗಿ ಧರಿಸಿ ವಾಹನ ಚಲಾಯಿಸುವಂತೆ ಸೂಚಿಸಿದರು.

    ಹೆಲ್ಮೆಟ್ ಧರಿಸುವುದರಿಂದ ನಮ್ಮ ಜೀವ ಉಳಿಯುವುದರ ಜೊತೆಗೆ ನಮ್ಮ ಕುಟುಂಬವನ್ನು ನಾವು ಉಳಿಸಿದಂತಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಫಲಾನುಭವಿಗಳಿಗೆ ಸೂಚಿಸಿದರು.

  • ಉತ್ತಮ ಆರೋಗ್ಯಕ್ಕೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ: ಸಚಿವ ದರ್ಶನಾಪುರ

    ಉತ್ತಮ ಆರೋಗ್ಯಕ್ಕೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ: ಸಚಿವ ದರ್ಶನಾಪುರ

    ಸತ್ಯಕಾಮ ವಾರ್ತೆ ಯಾದಗಿರಿ:

    ಪರಿಪೂರ್ಣ ವಿದ್ಯಾರ್ಥಿಯಾಗಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕ-ಮಾನಸಿಕ ಉತ್ತಮ ಆರೋಗ್ಯಕ್ಕೆ ಕಡ್ಡಾಯ ರೂಡಿ‌ ಮಾಡಿಕೊಳ್ಳಬೇಕೇಂದು ಜಿಲ್ಲಾ ಉಸ್ತುವಾರಿ‌ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಕ್ರೀಡಾಪಟುಗಳಿಗೆ ಕರೆ ನೀಡಿದರು.

    ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ‌ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸೋಮವಾರ ಆಯೋಜಿಸಿದ್ದ “ಕಲಬುರಗಿ ವಿಭಾಗ ಮಟ್ಟದ 14/17 ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಥ್ರೋಬಾಲ್ ಕ್ರೀಡಾಕೂಟ” ಉದ್ಘಾಟಿಸಿ ಅವರು ಮಾತನಾಡಿದರು.

    ಕ್ರೀಡೆಗಳಲ್ಲಿ ಸೋಲು,ಗೆಲುವು ಮುಖ್ಯವಲ್ಲ, ಭಾಗವಹಿಸಿ ಗುರಿ ಮುಟ್ಟುವ ಉದ್ದೇಶವಿರಬೇಕೆಂದರು. ಹಿಂದುಳಿದ‌ ಜಿಲ್ಲೆಯೆಂಬ ಹಣೆಪಟ್ಟಿ ಅಳಿಸಲು ವಿದ್ಯಾರ್ಥಿಗಳು ಓದು ಮತ್ತು ಕ್ರೀಡೆಗಳನ್ನು ಸಮನಾಗಿ ಸ್ವೀಕರಿಸಿದಾಗ ಮಾತ್ರ ಸಾಧ್ಯವಾಗುತ್ತದೆ.‌ ಇಂದು ಕ್ರೀಡಾಕ್ಷೇತ್ರ ವ್ಯಾಪಕವಾಗಿ ಬೆಳೆದಿದೆ. ಇಲ್ಲಿಯೂ ಸಾಧನೆ ಮಾಡುವ ಮೂಲಕ ತಮ್ಮ ಜೀವನ ರೂಪಿಸಿಕೊಂಡು ಜಿಲ್ಲೆಯ ಮತ್ತು ದೇಶದ ಕೀರ್ತಿ ವಿಶ್ವವ್ಯಾಪಿ ಪಸರಿಸಬಹುದೆಂದು ಸಚಿವರು ಬಹು ಮಾರ್ಮಿಕವಾಗಿ ಹೇಳಿದರು.

    ದೇಶಿ ಕ್ರೀಡೆಗಳಿಗೆ ಸರ್ಕಾರಗಳು ಈಗ ಹೆಚ್ಚು ಉತ್ತೇಜನ ನೀಡುತ್ತಿವೆ. ನಮ್ಮ ಭಾಗದ ಕ್ರೀಡೆಗಳಾದ ಕೋಕೋ, ಕಬ್ಬಡಿ, ಕುಸ್ತಿ, ಕೇರಂ, ಬಿಲ್ಲುಗಾರಿಗೆ, ವೇಗದ ಓಟ ಹೀಗೆ ಅನೇಕ ಕ್ರೀಡೆಗಳಲ್ಲಿ ಮಕ್ಕಳು ತಮ್ಮ ಸಾಧನೆ ಮೆರೆಯಬೇಕು.ಕ್ರೀಡಾ ಕ್ಷೇತ್ರದಲ್ಲಿ ಪರಿಪೂರ್ಣ ಪರಿಣತಿ ಹೊಂದಿದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸಚಿವರು ಹೇಳಿದರು.

    ಜಿಲ್ಲಾ ಕ್ರೀಡಾಂಗಣದಲ್ಲಿ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಇಲ್ಲಿನ‌ ಅಧಿಕಾರಿ ಕ್ರಮ‌ ತೆಗೆದುಕೊಳ್ಳಬೇಕು, ಕ್ರೀಡಾಗಳುಗಳಿಗೆ ಯಾವುದೇ ತೊಂದರೆಯಾಗದಂತೆಯೇ ಅಚ್ಚು ಕಟ್ಟಾದ ವ್ಯವಸ್ಥೆ ಮಾಡಬೇಕೆಂದು ಸಚಿವರು ಸೂಚಿಸಿದರು.

    ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ನಮ್ಮ ಜಿಲ್ಲೆಯ ವಿದ್ಯಾರ್ಥಿ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಸಾಧನೆ ಮೆರೆದಿದ್ದು ನಮಗೆಲ್ಲ ಹೆಮ್ಮೆ ಎಂದರು. ಆಟ ಆಡುವಾಗ ಸ್ಪರ್ಧಾ ಮನೋಭಾವನೆ ಇರಲಿ, ನಂತರ ಎಲ್ಲರೂ ಅಣ್ಣ,ತಮ್ಮ,ಅಕ್ಕ, ತಂಗಿಯರಂತೇ ಇರಬೇಕು, ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಅನಾವರಣ ಮಾಡಬೇಕು.ಸೋಲು ಗೆಲುವಿಗೆ ಮಹತ್ವ ನೀಡದೇ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಬೇಕು.ಸೋತಾಗ ಮನನೊಂದದೇ ಧೈರ್ಯದಿಂದ ಮುಂದಿನ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಶಾಸಕರು ಹೇಳಿದರು.

    ಆರಂಭದಲ್ಲಿ ಕ್ರೀಡಾಮಕ್ಕಳಿಂದ ಕವಾಯಿತು ನಡೆಯಿತು, ಕ್ರೀಡಾಜ್ಯೋತಿಗೆ ಸಚಿವರು, ಶಾಸಕರು, ಅಧಿಕಾರಿಗಳು ಸ್ವಾಗತಿಸಿಕೊಂಡರು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ, ಡಿಡಿಪಿಐ ಸಿ.ಎಸ್.ಮುದೋಳ್, ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿಗಳಾದ ರಾಜು ಬಾವಿಹಳ್ಳಿ, ಡಯಟ್ ಪ್ರಾಂಶುಪಾಲ ವೃಷಬೇಂದ್ರ, ಅನೀಲಕುಮಾರ ನಾಯಕ್, ಚಂದ್ರಶೇಖರಗೌಡ ಪಾಟೀಲ್, ಅಶೋಕ ಕೆಂಭಾವಿ, ಮುಖಂಡರಾದ ಬಸರೆಡ್ಡಿ ಅನಪೂರ, ಸಿದ್ದಲಿಂಗರಡ್ಡಿ, ಬಸವರಾಜ ಪಾಟೀಲ್ ಬಿಳ್ಹಾರ್ ಸೇರಿದಂತೆಯೆ ಇತರರಿದ್ದರು.

    ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು. ಕಲ್ಬುರ್ಗಿ ವಿಭಾಗದ
    ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಜಿಲ್ಲೆಗಳು ಸೇರಿದಂತೆಯೇ ಏಳು ಜಿಲ್ಲೆಗಳ ನೂರಾರು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟದ ತಂಡಕ್ಕೆ ಆಯ್ಕೆಯಾದ ಕೆ.ಹೊಸಳ್ಳಿ ಗ್ರಾಮ ದ ವಿದ್ಯಾರ್ಥಿ ಕೆ.ಸಿದ್ಧಾರ್ಥ ಅವರನ್ನು ಸಚಿವರು ಸನ್ಮಾನಿಸಿದರು.

  • ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ.ರಾಜೀವ್

    ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ.ರಾಜೀವ್

    ಸತ್ಯಕಾಮ ವಾರ್ತೆ ಯಾದಗಿರಿ:

    ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ಬೀದಿಗೆ ಬಂದಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.

    ಸರ್ಕಾರ ನಡೆಸುತ್ಯಿರುವ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆ ನೀಡುತ್ತಿದ್ದಾರೆ. ಆದರೆ, ಅದದರ ಸಾಲವನ್ನು ರಾಜ್ಯದ ಶ್ರೀಸಾಮಾನ್ಯ ತೆರಿಗೆ ಹಣದಿಂದಲೇ ಭರಿಸಬೇಕಿದೆ. ಪಡಿತರ ಅಕ್ಕಿಯನ್ನು ನೀಡಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಈ ಸರ್ಕಾರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

    ಮುಡಾದಲ್ಲಿ ಏನು ಅಕ್ರಮ ನಡೆದೇ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ, ವಕ್ಫ್ ಮಂಡಳಿಗೆ ಬಿಜೆಪಿ ಅವಧಿಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಹೊಸ ಕಥೆ ಕಟ್ಟಲಾಗುತ್ತಿದೆ. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಇಂಥ ಕೆಲಸ ನಾವು ಮಾಡಿಲ್ಲ. ಸಚಿವ ಜಮೀರ್ ಅಹ್ಮದ್ ಅವರು ವಕ್ಫ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸೂಚನೆ ಮೇರೆಗೆ ಈ ಸಭೆ ನಡೆಸಲಾಗಿದೆ ಎಂದು ನಡುವಳಿಯಲ್ಲಿ ಬರೆಸಿದ್ದಾರೆ. ಹೀಗಾಗಿ ಜಮೀರ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.

    ವಕ್ಫ್ ಹಗರಣವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿದ್ದು, ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೀದರ್ ನಿಂದ ಡಿ.04ರಂದು ಬೀದರ್ ಮತ್ತು ಕಲಬುರಗಿಯಲ್ಲಿ ಹೋರಾಟ ಮಾಡಲಿದ್ದಾರೆ. 5 ರಂದು ಬೆಳಗ್ಗೆ ಯಾದಗಿರಿಗೆ ಆಗಮಿಸಲಿದ್ದಾರೆ. ಸರ್ಕಾದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ನಾವು ಸದನದ ಹೊರಗೆ ಮತ್ತು ಒಳಗೆ ಹೋರಾಟ ನಡೆಸಲಿದ್ದೇವೆ ಎಂದರು.

    ಪಕ್ಷದಲ್ಲಿ ಯಾವುದೇ ಬಣ ರಾಜಕೀಯ ನಡೆದಿಲ್ಲ. ವಕ್ಫ್ ಹೋರಾಟಕ್ಕೆ ಬಿಜೆಪಿ ವರೀಷ್ಠರು ರಾಜ್ಯಾದ್ಯಂತ ಮೂರು ತಂಡ ರಚಿಸಿದ್ದಾರೆ. ಅದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ತಂಡವಿದೆ ಎಂದ ರಾಜೀವ್, ಬಿಜೆಪಿಯಲ್ಲಿ ಕೆಲ ಭಿನ್ನಮತ ನಡೆಯುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಠಿಸಿದೆ ಎಂದು ಒಪ್ಪಿಕೊಂಡರು.

    ಬೀದರ್ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಪಕ್ಷದ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜುಗೌಡ),ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ,ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ ಮತ್ತು ಶರಣು ತಳ್ಳಿಕೇರಿ,ಪ್ರಮುಖರಾದ ನಾಗರತ್ನ ಕುಪ್ಪಿ, ರಾಚನಗೌಡ ಮುದ್ನಾಳ,ಮಹೇಶರಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಮೇಲಪ್ಪ ಗುಳಗಿ,ಜಿಲ್ಲಾ ವಕ್ತಾರ ಹಣಮಂತ ಇಟಗಿ,ಎಚ್.ಸಿ.ಪಾಟೀಲ್, ನಗರಸಭೆ ಉಪಾಧ್ಯಕ್ಷೆ ರುಕೀಯ ಬೇಗಂ ಇದ್ದರು…

  • ವಿದ್ಯಾಥಿಗಳಲ್ಲಿ ಏಕಾಗ್ರತೆ ಬಹುಮುಖ್ಯ ಪಾತ್ರ ವಹಿಸುತ್ತದೆ : ಶಾಸಕ ತುನ್ನೂರ್

    ವಿದ್ಯಾಥಿಗಳಲ್ಲಿ ಏಕಾಗ್ರತೆ ಬಹುಮುಖ್ಯ ಪಾತ್ರ ವಹಿಸುತ್ತದೆ : ಶಾಸಕ ತುನ್ನೂರ್

    ಸತ್ಯಕಾಮ ವಾರ್ತೆ ಯಾದಗಿರಿ:
    ವಿದ್ಯಾರ್ಥಿಗಳು ಶ್ರದ್ಧಾ ಭಕ್ತಿಯಿಂದ ತಮ್ಮ ನಿತ್ಯ ದಿನಚರಿಗಳಲ್ಲಿ ತೊಡಗಿಸಿಕೊಂಡು, ಧ್ಯಾನ ಹಾಗೂ ವ್ಯಾಯಾಮಗಳಂತಹ ಕ್ರಿಯೆಗಳ ಮೂಲಕ ಏಕಾಗ್ರತೆಯಿಂದ ವೃದ್ಧಿಯಾಗಬೇಕು. ಸರ್ಕಾರದ ವತಿಯಿಂದ ಆಯುಷ್ ಇಲಾಖೆಯ ವಿದ್ಯಾರ್ಥಿ ಚೇತನ ವಿಶೇಷ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡು ಜಿಲ್ಲೆಯ ವಿದ್ಯಾರ್ಥಿಗಳು ಯಶಸ್ಸಿನ ಮೆಟ್ಟಿಲುಗಳನ್ನು ಹತ್ತಬೇಕೆಂದು ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ್ ಸಲಹೆ ನೀಡಿದರು.


    ತಾಲೂಕಿನ ಮುಂಡರಗಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸಮಾಜದ ಕಲ್ಯಾಣ ಇಲಾಖೆ, ಎಸ್.ಸಿ.ಎಸ್.ಪಿ ಮತ್ತು ಟಿಎಸ್.ಪಿ ಯೋಜನೆಯಡಿಯಲ್ಲಿ ಆಯೋಜಿಸಿದ ವಿದ್ಯಾರ್ಥಿ ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಯಶಸ್ಸು ಸಿಗಬೇಕಾದರೆ ಪರಿಶ್ರಮದ ದಾರಿಯೇ ಹೊರತು ಅಡ್ಡ ದಾರಿಯ ಮಾರ್ಗ ಎಂದಿಗೂ ಸಫಲವಾಗುವುದಿಲ್ಲ. ಸರ್ಕಾರದಿಂದ ಸಿಗುವ ಅನೇಕ ಯೋಜನೆಗಳನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಳಸಿಕೊಂಡು ವಿದ್ಯಾಭ್ಯಾಸವನ್ನು ಉತ್ತಮ ರೀತಿಯಿಂದ ನಡೆಸಿಕೊಂಡ ಸಾಗಬೇಕು ಎಂದು ಹೇಳಿದರು.

    ವಿದ್ಯಾರ್ಥಿಗಳು ಬೆಳಿಗ್ಗೆ ಬ್ರಾಹ್ಮಿ ಮೂಹುರ್ಥದಲ್ಲಿ ಎದ್ದು ಸೂರ್ಯ ನಮಸ್ಕಾರದ ಮೂಲಕ ದೇಹ ದಂಡಿಸಿ, ಓದಲು ಕೂರಬೇಕು. ಏಕಾಗ್ರತೆಗಾಗಿ ಧ್ಯಾನವನ್ನು ರೂಢಿಸಿಕೊಂಡು ತಮ್ಮ ದಿನಚರಿಗಳನ್ನು ಆರಂಭಿಸುವುದು ಉತ್ತಮ ವಿದ್ಯಾರ್ಥಿಯ ಲಕ್ಷಣವೆಂದರು.

    ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಾದ ಚನ್ನಬಸವ ಅವರು ಮಾತನಾಡಿ, ಇಂತಹ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ಏರ್ಪಡಿಸುತ್ತಿದ್ದು, ಆಯುಷ್ ಇಲಾಖೆಯ ವಿದ್ಯಾರ್ಥಿ ಚೇತನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಇದರ ಮಹತ್ವ ಅರಿಯಬೇಕೆಂದು ತಿಳಿಸಿದರು.

    ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ವಂದನಾ.ಜೆ ಅವರು ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ, ವಸತಿ ಶಾಲಾ ಮಕ್ಕಳನ್ನು ಗಮನದಲಿಟ್ಟುಕೊಂಡ ವಿದ್ಯಾರ್ಥಿ ಚೇತನ ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ವಿದ್ಯಾರ್ಥಿ ಚೇತನ ಕಾರ್ಯಕ್ರಮ ಮಹತ್ವ ಪೂರ್ಣವಾದದ್ದು, ಯೋಗ ತರಬೇತಿ ಸೇರಿದಂತೆ ದೈಹಿಕ ಚಟುವಟಿಕೆ, ವ್ಯಾಯಮಗಳನ್ನು ಸಹ ಮಾಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ವೈದ್ಯರಾದ ಡಾ.ಪ್ರಕಾಶ ಎಚ್.ರಾಜಾಪುರ ಅವರು ಪ್ರಾಸ್ತಾವಿಕ ಮಾತುಗಳಾಡಿದರು. ವಸತಿ ಶಾಲಾ ಮಕ್ಕಳಿಗೆ ದಿನಚರಿಯನ್ನು ವೈದ್ಯೆಧಿಕಾರಿಯಾದ ಡಾ.ಎಂ.ಬಿ.ಪಾಟೀಲ ನೀಡಿದರು. ಸಂಗಮೇಶ ಕೆಂಭಾವಿ ಅವರು ನಿರೂಪಿಸಿದರು.
     
    ವೇದಿಕೆ ಮೇಲೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರಾದ ಮಲ್ಲಣ್ಣ ಮಾಲೀಪಾಟೀಲ, ಡಾ.ರಮೇಶ ಸಜ್ಜನ್, ರವಿಕುಮಾರ ಪಾಟೀಲ, ಡಾ.ದೀಪಾ ರಾಠೋಡ, ಯೋಗ ತರಬೇತುದಾರ ಶಿವರೆಡ್ಡಿ, ಮಂಜುನಾಥ ಉಪಸ್ಥಿತರಿದ್ದರು.