Category: Latest News

  • ಹತ್ತನೇ ತರಗತಿ ಪರೀಕ್ಷೆ ಬರೆದ ತಾಯಿ- ಮಗ

    ಹತ್ತನೇ ತರಗತಿ ಪರೀಕ್ಷೆ ಬರೆದ ತಾಯಿ- ಮಗ

    ಸತ್ಯಕಾಮ ವಾರ್ತೆ ಶಹಾಪುರ:
    ಎಸ್,ಎಸ್.ಎಲ್ ಸಿ.ಪರೀಕ್ಷೆಯ ಮೊದಲ ದಿನವಾದ ಸೋಮವಾರದಂದು ತಾಲೂಕಿನಾದ್ಯಂತ ಸುಗಮವಾಗಿ ನಡೆದಿದ್ದು.ಅದರಲ್ಲೂ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಇಂದು ತಾಯಿ ಹತ್ತನೇ ತರಗತಿಯ ಪರೀಕ್ಷೆ ಬರೆಯಲು ಆಗಮಿಸಿದ್ದು ವಿಶೇಷವಾಗಿತ್ತು.ಒಟ್ಟು ಈ ಪರೀಕ್ಷಾ ಕೇಂದ್ರದಲ್ಲಿ 17 ಬ್ಲಾಕ್ ಗಳಿದ್ದು 387 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು,14 ವಿದ್ಯಾರ್ಥಿಗಳು ಗೈರು ಹಾಜರಿದ್ದರು.

    33 ವರ್ಷದ ಗಂಗಮ್ಮ ಎಂಬ ಮಹಿಳೆ ಉತ್ಸಾಹದಿಂದ ಪರೀಕ್ಷೆ ಬರೆಯಲು ಆಗಮಿಸಿದ್ದರು, ಎಸ್.ಎಸ್,ಎಲ್,ಸಿ ಪರೀಕ್ಷೆ ಬರೆಯುವ ಮೂಲಕ ರಾಜ್ಯದಾದ್ಯಂತ ಗಮನ ಸೆಳೆದಿದ್ದಾರೆ,ನನಗೆ ಓದಬೇಕೆಂಬ ಬಯಕೆ ತುಂಬಾ ಇತ್ತು ಆದರೆ ಮನೆಯಲ್ಲಿ ಬಡತನ ಹಾಗೂ ನನಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಿಕೊಟ್ಟ ಕಾರಣದಿಂದಾಗಿ ನನಗೆ ವಿದ್ಯಾಭ್ಯಾಸ ಮೂಟಕು ಗೊಳಿಸಲು ಕಾರಣವಾಯಿತು,ಈಗ ನನಗೆ ಅವಕಾಶ ಸಿಕ್ಕಿದೆ,ಆದರೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಷ್ಟಪಟ್ಟು ಓದಿ 10ನೇ ತರಗತಿ ಪಾಸ್ ಮಾಡಿ ಯಾವುದಾದರೂ ಸರ್ಕಾರಿ ಹುದ್ದೆ ಪಡಿಯಬೇಕೆಂಬ ಆಸೆ ನನ್ನೊಳಗೆ ಚಿಗುರೊಡೆದ ಕಾರಣ ಇಂದು ನನ್ನ ಮಗ ಮಲ್ಲಿಕಾರ್ಜುನ ಜೊತೆಗೆ ನಾನು ಹತ್ತನೇ ತರಗತಿಯ ಪರೀಕ್ಷೆ ಬರೆಯುತ್ತಿದ್ದೇನೆ ಎಂದರು.

    ಮನೆಯಲ್ಲಿ ತನ್ನ ಮಗನೊಂದಿಗೆ ಸತತ ಅಭ್ಯಾಸ ಮಾಡಿ ತನಗಿಂತ ಹದಿನೈದು ವರ್ಷದ ಕಿರಿಯ ವಿದ್ಯಾರ್ಥಿಗಳ ಜೊತೆಗೆ ಇಂದು ಪರೀಕ್ಷೆ ಬರೆಯಲು ತುಂಬಾ ನನಗೆ ಖುಷಿ ನೀಡುತ್ತಿದೆ ಎಂದು ಮುಗುಳ್ನಕ್ಕರು ಕಾರಣ ಇಷ್ಟೇ. ನನ್ನಂತ ಅದೆಷ್ಟೋ ಜನ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ,ಅವರನ್ನೆಲ್ಲರನ್ನು ಪ್ರೇರೇಪಿಸುತ್ತಾ,ಶಾಲೆಗೆ ಕರೆ ತರುವುದೇ ನನ್ನ ಮುಖ್ಯ ಉದ್ದೇಶವಾಗಿದೆ.ಕಲಿಯುವವರಿಗೆ ಯಾವುದೇ ಸಮಯ ಹಾಗೂ ವಯಸ್ಸಿನ ಮಿತಿ ಇಲ್ಲ ಎಂಬ ಮಾತನ್ನು ಗಂಗಮ್ಮಳು ಮತ್ತೊಮ್ಮೆ ಸಾಬೀತು ಮಾಡಿದ್ದಾಳೆ.

    ಅಭ್ಯಾಸಕ್ಕೆ ವಯಸ್ಸಿನ ಹಂಗಿಲ್ಲ ಎಂಬ ಮಾತಿಗೆ ಗಂಗಮ್ಮಳೆ ಸಾಕ್ಷಿ, ಇಂಥ ವಯಸ್ಸಿನಲ್ಲೂ ಮಗನೊಂದಿಗೆ ಪರೀಕ್ಷೆ ಬರೆಯಲು ಮುಂದಾಗಿದ್ದು ನಿಜಕ್ಕೂ ಇವರ ಕಾರ್ಯ ಶ್ಲಾಘನೀವಾದದ್ದು,ಎಂದು ಗ್ರಾಮದ ನಾಗರಿಕರು,ಪ್ರಗತಿಪರ ಚಿಂತಕರು ಹರ್ಷ ಭಕ್ತ ಪಡಿಸಿದ್ದಾರೆ ಶಿಕ್ಷಣ ವಂಚಿತ ಮಹಿಳೆಯರಿಗೆ ಇವರೇ ಮಾದರಿ ಎಂಬುವುದು ತೋರಿಸಿಕೊಟ್ಟಿದ್ದಾರೆ.ಹಲವಾರು ಜವಾಬ್ದಾರಿಗಳ ನಡುವೆ ಶ್ರದ್ಧೆಯಿಂದ ಮಾಡಿದ ಸಾಧನೆ ನಮ್ಮ ಮಕ್ಕಳಿಗೆ ಮಾದರಿಯಾದರೆ ಎಷ್ಟೊಂದು ಒಳ್ಳೆಯದು ಎಂದೆನಿಸುತ್ತಿದೆ.

  • ಗುತ್ತಿಗೆದಾರರಿಂದ 14 ಸಾವಿರ ಹಣ ಪಡೆದ ದ್ವಿತೀಯ ದರ್ಜೆ ಸಹಾಯಕಿ

    ಗುತ್ತಿಗೆದಾರರಿಂದ 14 ಸಾವಿರ ಹಣ ಪಡೆದ ದ್ವಿತೀಯ ದರ್ಜೆ ಸಹಾಯಕಿ

    *ಸತ್ಯಕಾಮ ವಾರ್ತೆ ಯಾದಗಿರಿ:*
    ಶಹಾಪುರ ತಾಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕಿ ಮಿನಾಕ್ಷಿ ಎಂಬುವವರು ಗುತ್ತಿಗೆದಾರರಿಂದ 14ಸಾವಿರ ರೂ ಲಂಚವನ್ನು ರಾಜಾರೋಷವಾಗಿ ಪಡೆದಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗಗೊಂಡಿದೆ.

    ಕಳೆದ ನಾಲ್ಕೈದು ದಿನಗಳಯಿಂದಷ್ಟೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದೂ, ತಾಲೂಕು ಪಂಚಾಯಿತಿ ಕಚೇರಿಯೊಳಗೆ ದ್ವಿತೀಯ ದರ್ಜೆ ಸಹಾಯಕಿ ಗುತ್ತಿಗೆದಾರರು ಮಾತುಕತೆ ನಡೆಸಿ 14ಸಾವಿರ ರೂಪಾಯಿ ಹಣ ನೀಡಿರುವ 6ನಿಮಿಷ 50 ಸೆಕೆಂಡ್ ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಆ ವಿಡಿಯೋದಲ್ಲಿ ಸರ್ ಗೆ 3% ಎಂದು ಹೇಳಲಾಗಿದ್ದು ಆ ಸರ್ ಯಾರು ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ತಾ. ಪಂಚಾಯತಿಯಲ್ಲಿ ಕಾಮಗಾರಿ ಟೆಂಡರ್ ಪಡೆಯಬೇಕಾದರೆ 4% ಲಂಚ ಅಧಿಕಾರಿಗಳ ಜೇಬಿಗೆ ತುಂಬಿಸಬೇಕಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳತ್ತಿದ್ದಾರೆ.

  • ಕರ್ನಾಟಕದ ೨೦ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಘೋಷಣೆ: ೯ ಹಾಲಿ ಸಂಸದರಿಗೆ ಕೊಕ್​, ಜಾಧವ್ ಮತ್ತೆ ಕಣಕ್ಕೆ

    ಕರ್ನಾಟಕದ ೨೦ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಘೋಷಣೆ: ೯ ಹಾಲಿ ಸಂಸದರಿಗೆ ಕೊಕ್​, ಜಾಧವ್ ಮತ್ತೆ ಕಣಕ್ಕೆ


    ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ೨೮ ಲೋಕಸಭೆ ಕ್ಷೇತ್ರಗಳ ಪೈಕಿ ೨೦ ಕ್ಷೇತ್ರಗಳಿಗೆ ಟಿಕೆಟ್​ ಪ್ರಕಟಿಸಲಾಗಿದೆ. ಕೆಲ ಹಾಲಿ ಸಂಸದರಿಗೆ ಕೊಕ್ ಕೊಡಲಾಗಿದೆ. ಹೊಸಬರಿಗೆ ಅವಕಾಶ ನೀಡಲಾಗಿದೆ. ವಿರೋಧದ ನಡುವೆಯೂ ಕೆಲವರಿಗೆ ಮಣೆ ಹಾಕಲಾಗಿದ್ದು, ಬಿಜೆಪಿ ಸದಸ್ಯತ್ವ ಪಡೆಯದೇ ಇರುವ ಡಾ. ಮಂಜುನಾಥ್ ಅವರಿಗೂ ಟಿಕೆಟ್ ಪ್ರಕಟಿಸಲಾಗಿದ್ದು, ಕಲಬುರಗಿಯಿಂದ ಉಮೇಶ್ ಜಾಧವ್ ಮತ್ತೆ ಕಣಕ್ಕಿಳಿದಿದ್ದಾರೆ.
    ೨೦೧೯ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ೯೫,೪೫೨ ಮತಗಳಿಂದ ಖರ್ಗೆ ಅವರನ್ನು ಸೋಲಿಸಿದ್ದರು. “ಸೋಲಿಲ್ಲದ ಸರದಾರ” ಎಂದು ಜನಪ್ರಿಯವಾಗಿ ಕರೆಯಲ್ಪಡುವ (ಸೋಲದ ನಾಯಕ), ಇದು ಹಲವಾರು ದಶಕಗಳ ಕಾಲದ ಖರ್ಗೆಯವರ ರಾಜಕೀಯ ಜೀವನದಲ್ಲಿ ಮೊದಲ ಚುನಾವಣಾ ಸೋಲಾಗಿದ್ದುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
    ಕಟೀಲ್, ಪ್ರತಾಪ್, ಡಿವಿಎಸ್​ಗೆ ಕೊಕ್: ೨೦ ಕ್ಷೇತ್ರಗಳ ಪೈಕಿ ೯ ಜನ ಹಾಲಿ ಸಂಸದರಿಗೆ ಟಿಕೆಟ್​ ಕೈತಪ್ಪಿದೆ. ಇದರಲ್ಲಿ ಚಾಮರಾಜನಗರದ ವಿ ಶ್ರೀನಿವಾಸ್​ ಪ್ರಸಾದ್​, ತುಮಕೂರಿನ ಎಲ್​ ಬಸವರಾಜ್, ಹಾವೇರಿ ಶಿವಕುಮಾರ್ ಉದಾಸಿ ಈ ಹಿಂದೆ ಸ್ಪರ್ಧೆ ಮಾಡುವುದಿಲ್ಲವೆಂದು ಘೋಷಿಸಿದ್ದರು. ಅದರಂತೆಯೇ ಈ ಕ್ಷೇತ್ರಗಳಿಗೆ ಹೊಸಬರಿಗೆ ಮಣೆ ಹಾಕಲಾಗಿದೆ. ಹಾವೇರಿ ಕ್ಷೇತ್ರದಲ್ಲಿ ತಮ್ಮ ​ಪುತ್ರನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ನಿರಾಸೆ ಉಂಟಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕೆ ಇಳಿಸಲಾಗಿದೆ.
    ಮತ್ತೊಂದೆಡೆ ತುಮಕೂರಿನಲ್ಲಿ ಹಿರಿಯ ನಾಯಕ ವಿ ಸೋಮಣ್ಣ ಅವರಿಗೆ ಟಿಕೆಟ್​ ಘೋಷಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಮಣ್ಣ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋತಿದ್ದರು. ನಿರೀಕ್ಷೆಯಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಮೈಸೂರು ಸಂಸದ ಪ್ರತಾಪ್ ಸಿಂಹ, ಬೆಂಗಳೂರು ಉತ್ತರ ಕ್ಷೇತ್ರದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೆಟ್​ ನಿರಾಕರಿಸಲಾಗಿದೆ. ಮೈಸೂರಿನಲ್ಲಿ ಪ್ರತಾಪ್​ ಸಿಂಹ ಬದಲಿಗೆ ಯದುವೀರ್ ಒಡೆಯರ್ ಅವರಿಗೆ ಅವಕಾಶ ನೀಡಲಾಗಿದೆ.
    ಇದೇ ವೇಳೆ ವಿರೋಧದ ನಡುವೆಯೂ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಅವರನ್ನು ಕಣಕ್ಕೆ ಇಳಿಸಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಿಂದ ಕಟೀಲ್​ ಬದಲಿಗೆ ಬ್ರಿಜೇಶ್​ ಚೌಟ ಅವರಿಗೆ ಟಿಕೆಟ್​ ಘೋಷಿಸಲಾಗಿದೆ.
    ಬೆಂಗಳೂರು ಕೇಂದ್ರದಿAದ ಪಿ.ಸಿ.ಮೋಹನ್ ಅವರಿಗೆ ಟಿಕೆಟ್​ ಕೈ ತಪ್ಪಲಿದೆ ಎಂಬ ವದಂತಿ ನಡುವೆಯೂ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ರಮೇಶ್ ಕತ್ತಿ ಬಿಗಿ ಪಟ್ಟಿನ ನಡುವೆಯೂ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ಸಿಕ್ಕಿದೆ. ಬೆಂಗಳೂರು ಗ್ರಾಮೀಣ ಕ್ಷೇತ್ರದಿಂದ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಅವರಿಗೆ ಬಿಜೆಪಿ ಮಣೆ ಹಾಕಿದೆ.
    ಕ್ಷೇತ್ರವಾರು ಅಭ್ಯರ್ಥಿಗಳ ಮಾಹಿತಿ ಈ ಕೆಳಗಿನಂತಿದೆ.
    ಚಿಕ್ಕೋಡಿ – ಅಣ್ಣಾಸಾಹೇಬ್ ಜೊಲ್ಲೆ
    ಬಾಗಲಕೋಟೆ – ಪಿ.ಸಿ. ಗದ್ದಿಗೌಡರ್
    ವಿಜಯಪುರ – ರಮೇಶ ಜಿಗಜಿಣಗಿ
    ಕಲಬುರಗಿ – ಉಮೇಶ್ ಜಾಧವ್
    ಬೀದರ್ – ಭಗವಂತ್ ಖೂಬಾ
    ಕೊಪ್ಪಳ – ಡಾ. ಬಸವರಾಜ್ ಕ್ಯಾವತ್ತೂರು
    ಬಳ್ಳಾರಿ – ಬಿ. ಶ್ರೀರಾಮುಲು
    ಹಾವೇರಿ – ಬಸವರಾಜ ಬೊಮ್ಮಾಯಿ
    ಧಾರವಾಡ – ಪ್ರಹ್ಲಾದ್ ಜೋಶಿ
    ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್
    ಶಿವಮೊಗ್ಗ – ಬಿ.ವೈ. ರಾಘವೇಂದ್ರ
    ಚಿಕ್ಕಮಗಳೂರು – ಉಡುಪಿ – ಕೋಟ ಶ್ರೀನಿವಾಸ್ ಪೂಜಾರಿ
    ದಕ್ಷಿಣ ಕನ್ನಡ – ಬ್ರಿಜೇಶ್​ ಚೌಟ
    ತುಮಕೂರು – ವಿ. ಸೋಮಣ್ಣ

  • ಮಾದಕ  ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ

    ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ

    ನವ ದೆಹಲ್ಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾದಕವಸ್ತು ವ್ಯಾಪಾರ ಮತ್ತು ಅದರ ದುಷ್ಪರಿಣಾಮಗಳನ್ನು ಎದುರಿಸುವಲ್ಲಿ ಮೋದಿ ಸರ್ಕಾರದ ಯಶಸ್ಸಿನ ಕುರಿತು ಮೂರು ವೀಡಿಯೊಗಳನ್ನು ಬಿಡುಗಡೆ ಮಾಡಿದರು. ದೇಶದಲ್ಲಿ ಡ್ರಗ್ಸ್ ಪತ್ತೆ, ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ಮಾದಕ ವ್ಯಸನಿಗಳ ಪುನರ್ವಸತಿ ಮೂಲಕ, ಮಾದಕ ದ್ರವ್ಯ ಮುಕ್ತ ಭಾರತದ ಗುರಿಯನ್ನು ಸಾಧಿಸುವತ್ತ ಮೋದಿ ಸರ್ಕಾರ ವೇಗವಾಗಿ ಸಾಗುತ್ತಿದೆ. ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಮಾದಕ ದ್ರವ್ಯ ಮುಕ್ತ ಭಾರತವು ಮುಂಬರುವ ಪೀಳಿಗೆಗೆ ಬಹುದೊಡ್ಡ ಕೊಡುಗೆಯಾಗಲಿದೆ.

    ಸ್ವಾತಂತ್ರ್ಯದ ಸುವರ್ಣ ಯುಗದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಕಟ್ಟುನಿಟ್ಟಿನ ಧೋರಣೆ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ಮಾದಕ ದ್ರವ್ಯ ವ್ಯಾಪಾರವನ್ನು ತಡೆಗಟ್ಟಲು ಸಿದ್ಧತೆಗಳು ಭರದಿಂದ ನಡೆಯುತ್ತಿವೆ, ಈ ಕ್ರಮಗಳ ಮೂಲಕ ಮಾದಕ ದ್ರವ್ಯಗಳ ಜಫ್ತಿ ಮತ್ತು ಬಂಧನಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. ಶಾ ಅವರ ನಿಷ್ಠುರ ನೀತಿಗಳಿಂದಾಗಿ, ಸರ್ಕಾರಗಳು ಮತ್ತು ಏಜೆನ್ಸಿಗಳ ನಡುವಿನ ಸಮನ್ವಯ, ಸಹಕಾರ ಮತ್ತು ಸಹಯೋಗದ ಮೂಲಕ, ಮಾದಕವಸ್ತು ವಶಪಡಿಸಿಕೊಳ್ಳುವಿಕೆಯಲ್ಲಿ ಮತ್ತು ಪ್ರಕರಣಗಳ ದಾಖಲೆಗಳಲ್ಲಿ ವೃದ್ಧಿಯಾಗಿದೆ.
    ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ಸಚಿವಾಲಯವು ಅಕ್ರಮ ಮಾದಕ ದ್ರವ್ಯದ ವ್ಯಾಪಾರವನ್ನು ತಡೆಯಲು ನಡೆಸಿದ ಬಹುಮುಖ ಪ್ರಯತ್ನಗಳಿಂದ, ವಶಪಡಿಸಿಕೊಂಡ ಮಾದಕವಸ್ತುಗಳ ಪ್ರಮಾಣವು ಸುಮಾರು 100% ಹೆಚ್ಚಾಗಿವೆ ಮತ್ತು ಅದನ್ನು ವ್ಯವಹರಿಸುವವರ ವಿರುದ್ಧ ದಾಖಲಾಗುವ ಪ್ರಕರಣಗಳು 152% ಹೆಚ್ಚಾಗಿವೆ.

    ಅಂಕಿಅಂಶಗಳ ಪ್ರಕಾರ, 2006 ರಿಂದ 2013 ರ ಅವಧಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 1257 ಇತ್ತು, ಇದು 2014-2023 ರ ಅವಧಿಯಲ್ಲಿ 3 ಪಟ್ಟು ಏರಿಕೆಯಾಗಿ 3755 ಕ್ಕೆ ತಲುಪಿದೆ. 2006-13 ರ ಅವಧಿಯಲ್ಲಿ 1363 ಬಂಧನಗಳಾಗಿದ್ದವು, ಇವು 4 ಪಟ್ಟು ಹೆಚ್ಚಿ 2014-23 ಅವಧಿಯಲ್ಲಿ ಬಂಧನಗಳ ಸಂಖ್ಯೆ 5745 ಕ್ಕೆ ತಲುಪಿದೆ. 2006-13ರಲ್ಲಿ ವಶಪಡಿಸಿಕೊಂಡಿದ್ದ 1.52 ಲಕ್ಷ ಕೆಜಿ ಡ್ರಗ್ಸ್ ಪ್ರಮಾಣ ಮೋದಿ ಆಡಳಿತದಲ್ಲಿ ದ್ವಿಗುಣಗೊಂಡು 3.95 ಲಕ್ಷ ಕೆಜಿಗೆ ತಲುಪಿದೆ. 2006-13ರ ಅವಧಿಯಲ್ಲಿ ವಶಪಡಿಸಿಕೊಂಡ ಡ್ರಗ್ಸ್ ಮೌಲ್ಯವು ರೂ.768 ಕೋಟಿಯಿತ್ತು, ಇದು ಮೋದಿ ಸರ್ಕಾರದ ಅವಧಿಯಲ್ಲಿ 30 ಪಟ್ಟು ಹೆಚ್ಚಾಗಿ ರೂ.22,000 ಕೋಟಿಗೆ ತಲುಪಿದೆ.

    ಮೋದಿಯವರ ನಾಯಕತ್ವ ಮತ್ತು ಶಾ ಅವರ ದೂರದೃಷ್ಟಿಯಿಂದಾಗಿ, ಮಾದಕ ದ್ರವ್ಯ ವಿರೋಧಿ ಸಂಸ್ಥೆಗಳು 12,000 ಕೋಟಿ ರೂಪಾಯಿ ಮೌಲ್ಯದ 12 ಲಕ್ಷ ಕಿಲೋಗ್ರಾಂಗಳಷ್ಟು ಡ್ರಗ್ಸ್ಅನ್ನು ನಾಶಪಡಿಸುವ ಅಭೂತಪೂರ್ವ ಕೆಲಸವನ್ನು ಮಾಡಿವೆ. ಮಾದಕ ದ್ರವ್ಯ ಮುಕ್ತ ಭಾರತದ ಕನಸನ್ನು ನನಸಾಗಿಸಲು ಕೇಂದ್ರ ಮತ್ತು ರಾಜ್ಯ ಮಾದಕ ದ್ರವ್ಯ ಕಾನೂನು ಜಾರಿ ಸಂಸ್ಥೆಗಳ ನಡುವೆ ಉತ್ತಮ ಒಗ್ಗಟ್ಟು ಮತ್ತು ಹೊಂದಾಣಿಕೆಗಾಗಿ 2019 ರಲ್ಲಿ ನಾಲ್ಕು ಹಂತದ NCORD ಕಾರ್ಯವಿಧಾನವನ್ನು ಬಲಪಡಿಸಲಾಯಿತು.

    ಮೋದಿ ಸರಕಾರದಲ್ಲಿ, ಮಾದಕ ವ್ಯಸನ ಮುಕ್ತ ನವ ಭಾರತ ನಿರ್ಮಾಣಕ್ಕೆ ಅಮಿತ್ ಶಾ ಅವರ ತಂತ್ರಗಾರಿಕೆಗಳು ಫಲ ನೀಡುತ್ತಿರುವುದಕ್ಕೆ ಕೇವಲ ನಮ್ಮ ದೇಶವಲ್ಲದೇ ಜಗತ್ತಿನಾದ್ಯಂತದ ಜನರು ಸಾಕ್ಷಿಯಾಗಿದ್ದಾರೆ.

  • ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

    ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

    *ಸತ್ಯಕಾಮ ವಾರ್ತೆ ಬೆಂಗಳೂರು*
    ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.

    ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಕೊನೆಯುಸಿರೆಳಿದಿದ್ದಾರೆ.ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಅವರು,ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಈವರೆಗೆ ನಾಲ್ಕು ಶಾಸಕರಾಗಿದ್ದರು.

    2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್​ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್​ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಈ ಬಾರಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಆದ್ರೆ, ಹೈಕಮಾಂಡ್​ ರಾಜಾ ವೆಂಕಟಪ್ಪ ನಾಯಕ ಅವರಿಗೆ ಉಗ್ರಾಣ ನಿಗಮ ನೀಡಲಾಗಿತ್ತು. ಅದರಂತೆ ಮೊನ್ನೇ ಅಷ್ಟೇ ಅವರು ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

  • ಪ್ರಸ್ತುತ ವರ್ಷವನ್ನೇ ಮರೆತ ಅಧಿಕಾರಿಗಳು

    ಪ್ರಸ್ತುತ ವರ್ಷವನ್ನೇ ಮರೆತ ಅಧಿಕಾರಿಗಳು

    *ಸತ್ಯಕಾಮ ವಾರ್ತೆ ಯಾದಗಿರಿ:*
    Lkg ಮಕ್ಕಳನ್ನು ಪ್ರಸ್ತುತ ವರ್ಷ ಯಾವುದೆಂದು ಕೇಳಿದರೆ 2024 ಎಂದು ಉತ್ತರಿಸುತ್ತಾರೆ. ಆದರೆ ಈ ಇಲಾಖೆಯ ಅಧಿಕಾರಿಗಳಿಗೆ ಪ್ರಸ್ತುತ ವರ್ಷ ಯಾವುದೆಂದೆ ಗೊತ್ತಿಲ್ಲ, ಇಂತಹ ಅಧಿಕಾರಗಳಿಂದ ಜಿಲ್ಲೆ ಅಭಿವೃದ್ಧಿ ಹೇಗೆ ಕಾರ್ಯಗತವಾಗುತ್ತೆಂದು ಸಾರ್ವಜನಿಕರು ಮಾತನಾಡಿಕೊಳ್ಳುವಂತೆ ಈ ಅಧಿಕಾರಿಗಳು ಮಾಡಿದ್ದಾರೆ.

    ಹೌದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ, ಶಿಕ್ಷಣಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿಯಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತಕ್ಕೆ ಸಂಬಂಧಿಸಿದಂತೆ, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ PCPNDT ( ಲಿಂಗ ಆಯ್ಕೆಯ ನಿಷೇಧ ಅಧಿನಿಯಮ,1994)ರ ಕುರಿತು ಜಿಲ್ಲೆಯ ಎಲ್ಲಾ ಸ್ಕಾನಿಂಗ್ ಸೆಂಟರ್ ಹೊಂದಿರುವ ವೈದ್ಯರು ಹಾಗೂ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಆರೋಗ್ಯ ಇಲಾಖೆಯ ಸಿಬ್ಬಂದಿಯವರೆಗೆ ತರಬೇತಿ ಕಾರ್ಯಗಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಇರುವ ಹಲವು ಲೋಪದೋಷಗಳು ಓದುಗರನ್ನು ಪೇಚಿಗೆ ಸಿಲುಕಿದ ಪ್ರಸಂಗ ಜರುಗಿದೆ.

    ಫೆ.16 ರಿಂದ ಮತ್ತು 17 ರಂದು ನಡೆಯುತ್ತಿರುವ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಕಾರ್ಯಕ್ರಮದ ಸಿಬ್ಬಂದಿಯವರೆಗೆ ತರಬೇತಿ ಕಾರ್ಯಗಾರದ ಆಮಂತ್ರಣ ಪತ್ರಿಕೆಯಲ್ಲಿ ಪ್ರಸುತ್ತ ವರ್ಷವನ್ನೇ ಬದಲಾಯಿಸಲಾಗಿದೆ, ಆಮಂತ್ರಣವನ್ನು ಒಮ್ಮೆ ಗಮನಿಸಿದರೆ, ಅಧಿಕಾರಿಗಳು ಇನ್ನೂ 2023ನೇ ವರ್ಷದಲ್ಲೆ ಇದ್ದಂತೆ ಕಾಣುತ್ತದೆ, ಅಷ್ಟೇ ಅಲ್ಲದೇ ಮುಖ್ಯ ಅತಿಥಿಗಳು ಪಟ್ಟಿಯಲ್ಲಿ ಶ್ರೀಮತಿ ಸಂಗೀತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಯಾದಗಿರಿ ಜಿಲ್ಲಾ ಪಂಚಾಯತ್ ಎಂದು ಮುದ್ರಿಸಿಲಾಗಿದೆ,

    ಅಧಿಕಾರಿಗಳೇ ಈ ರೀತಿ ಮಾಡಿದರೆ ಹೇಗೆ ಎಂದು ಪ್ರಜ್ಞಾವಂತರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
    ಇನ್ನುಮುಂದಾದರೂ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಮುದ್ರಿಸುವ ಮೊದಲು ಇಲಾಖೆ ಅಧಿಕಾರಿಗಳು, ಪರಿಣಿತಿ ಹೊಂದಿರುವ ನುರಿತ ಕನ್ನಡ ಪಂಡಿತರಲ್ಲಿ ವಿಷಯ ಬರೆಯಿಸಿಕೊಂಡು ಪ್ರಕಟಣೆ ಅಥವಾ ಆಮಂತ್ರಣ ಪತ್ರಿಕೆಗಳನ್ನು ಮುದ್ರಣ ಮಾಡಿಸಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

    *ಬಾಕ್ಸ್:*
    *ಆಮಂತ್ರಣ ಪತ್ರಿಕೆಯಲ್ಲಿರುವ ತಪ್ಪುಗಳು*

    *ಪ್ರಸ್ತುತ ಸಾಲಿನ ವರ್ಷ 2024 ರ ಬದಲಿಗೆ 2023

    * ಯಾದಗಿರಿ ಜಿಲ್ಲೆಯ ಹೆಸರನ್ನು ಯಾದಗಿರಿರಿ

    * ಫೆಬ್ರವರಿ ಬದಲಿಗೆ ಪೇಬ್ರವರಿ

    *ತಾರತಮ್ಯ ಬದಲಿಗೆ ತಾರತಮ್ಮ

    *ಸ್ವಾಗತ ಬದಲಿಗೆ ಸಾಗತ ಎಂದು ಮುದ್ರಿಸಲಾಗಿದೆ.

  • ಸರಕಾರಿ ಜಾಲತಾಣದಲ್ಲಿ ತನ್ನ ವೈಯಕ್ತಿಕ ಪ್ರಚಾರಕ್ಕೆ ದುರ್ಬಳಕೆ

    ಸರಕಾರಿ ಜಾಲತಾಣದಲ್ಲಿ ತನ್ನ ವೈಯಕ್ತಿಕ ಪ್ರಚಾರಕ್ಕೆ ದುರ್ಬಳಕೆ

    ತಪ್ಪು ಹ್ಯಾಶ್ ಟ್ಯಾಗ್ : ಸಾರ್ವಜನಿಕರಲ್ಲಿ ಗೊಂದಲ

    ಮೇಲಧಿಕಾರಿಗಳಿಗಿಂತ ಈತನೇ ದೊಡ್ಡವನಾ.?

    ಕಲಬುರ್ಗಿ: ಸರ್ಕಾರಿ ನೌಕರರು ಇತ್ತಿಚೀನ ದಿನಗಳಲ್ಲಿ ಸರ್ಕಾರದ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಪೋಸ್ಟಗಳಲ್ಲಿ ತಮ್ಮ ವೈಯಕ್ತಿಕ ಹ್ಯಾಶ್ ಟ್ಯಾಗ್ ಬಳಸುವುದರಿಂದ ಸಾರ್ವಜನಿಕರಿಗೆ ಯಾವ ರೀತಿಯ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ.

    ಹೌದು ಇದಕ್ಕೆ ಸಾಕ್ಷಿ ಎಂಬಂತೆ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ರಚಿಸಲಾಗಿರುವ DIPR Kalaburgi ಪೇಜ್ ನಲ್ಲಿ ಸರ್ಕಾರಿ ಕಾರ್ಯಕ್ರಮಗಳ ಮಾಹಿತಿಯನ್ನು ಅಪ್ಲೋಡ್ ಮಾಡುವ ವೇಳೆ ಇಲಾಖೆಯ ಸಿಬ್ಬಂದಿ ರವಿ ಮೀರಾಸ್ಕಾರ್ ತಮ್ಮ ವೈಯಕ್ತಿಕ ಹ್ಯಾಶ್ ಟ್ಯಾಗ್ ಬಳಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಉದ್ಭವಗೊಂಡಿದೆ.

    ಅದೇನೆಂದರೆ ರವಿ ಮಿರಾಸ್ಕರ್ DIPR Kalaburgi ಪೇಜ್ ನಲ್ಲಿ ದಿನ ನಿತ್ಯ ಅಪ್ಲೋಡ್ ಮಾಡುವ ಪೋಸ್ಟ್ ನಲ್ಲಿ ರವಿ ಮೀರಾಸಕರ್ ಪ್ರಾದೇಶಿಕ ಆಯುಕ್ತರು ಕಲಬುರ್ಗಿ ವಿಭಾಗ ಎಂಬ ಹ್ಯಾಶ್ಟ್ಯಾಗ್ ಕಾಣಿಸುತ್ತದೆ, ಇದು ನೋಡುಗರಿಗೆ ಬೇರೆ ರೀತಿಯ ಸಂದೇಶವನ್ನೇ ರವಾನಿಸುತ್ತದೆ,

    ಹಾಗಾದ್ರೆ ಕಲಬುರಗಿ ಇಲಾಖೆಯ ಪ್ರಾದೇಶಿಕ ಆಯುಕ್ತರಾದ್ರು ಯಾರು.?

    ಸಿಬ್ಬಂದಿಗಳು ಈ ರೀತಿಯಾಗಿ ತಮ್ಮ ಹೆಸರನ್ನು ಬಳಸಿ ಇಲಾಖೆಯ ಮೇಲಾಧಿಕಾರಿಗಳ ಹ್ಯಾಶ್ಟ್ಯಾಗ್ ಬಳಸಿದಾಗ DIPR ಕಲಬುರಗಿ ವಿಭಾಗದ ಆಯುಕ್ತರು ಇವರೇನಾ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ, ಇದ್ದರಿಂದ ಇಲಾಖೆಗೆ ಅರ್ಜಿ ಬರೆಯುವವರಿಗೆ ಇದು ತಪ್ಪು ಮಾಹಿತಿ ತಿಳಿಸುತ್ತದೆ ಅಲ್ಲದೆ ದೇಶದ ಯಾವುದೇ ಮೂಲೆಯಲ್ಲಿ ಕುಳಿತು ನೋಡುವರಿಗೂ ಕೂಡ ಇಂತಹ ಹ್ಯಾಶ್ಟ್ಯಾಗ್ ತಪ್ಪು ಮಾಹಿತಿ ನೀಡುತ್ತದೆ.

    ರವಿ ಮಿರಾಸ್ಕರ್ ಎಂಬತಾ ಪೋಸ್ಟ್ ಮಾಡುವ ವೇಳೆ ಹ್ಯಾಶ್ಟ್ಯಾಗ್ ನಲ್ಲಿ ಅಲ್ಪವಿರಾಮ ಚಿಹ್ನೆ ಬಳಸದೆ ಇಲಾಖೆಯ ಮುಖ್ಯಸ್ಥರ ಸ್ಥಾನದ ಹ್ಯಾಶ್ಟ್ಯಾಗ್ ಬಳಸಿರುವುದರಿಂದ ಈ ಪ್ರಶ್ನೆ ಉದ್ಭವವಾಗಿದೆ.

    ಇಲ್ಲಿ ಮತ್ತೊಂದು ವಿಷಯವೇನೆಂದರೆ ಸಚಿವರು ಹೆಸರಿನ ಮುಂದೆಯೇ ಮೇಲಾದಿಕಾರಿಗಳ ಹೆಸರು ಬಳಸಬೇಕೆಂಬ ಪರಿಜ್ಞಾನತೆ ಇವರಿಗಿಲ್ವಾ. ಹಾಗಾದ್ರೆ ಮೇಲಾದಿಕಾರಿಗಳಿಗಿಂತ ಇವರೇ ದೊಡ್ಡವರಾ.?

    ಓರ್ವ ಸರ್ಕಾರಿ ನೌಕರನು ಸಮಾಜದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಸರ್ಕಾರಿ ನೌಕರರು ಅಂತರ್ಜಾಲದ ವೆಬ್‌ಸೈಟ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಿಯಮಗಳ ಅವಕಾಶಗಳನ್ನು ಮೀರಿ ಸರ್ಕಾರ ಮತ್ತು ಇತರೆ ಸರ್ಕಾರಿ ನೌಕರರಿಗೆ ಮುಜುಗರ ಉಂಟುಮಾಡುವಂತೆ ವ್ಯಕ್ತಪಡಿಸುವುದು ಕಂಡುಬರುತ್ತಿದೆ.

    ಮಾಹಿತಿ ಮತ್ತು ಸಂವಹನ ತಂತ್ರ ಜ್ಞಾನವನ್ನು ಸದ್ಬಳಕೆ ಮಾಡಿ ಕೊಂಡು ಫೇಸ್‌ಬುಕ್, ಟ್ವಿಟರ್, ಯೂ ಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲ ತಾಣಗಳ ಮೂಲಕ ಸಾರ್ವಜನಿಕರಿಗೆ ಕ್ಷಣಕ್ಷಣದ ಮಾಹಿತಿ ನೀಡಲು ವಾರ್ತಾ ಇಲಾಖೆ ಮುಂದಾಗಿದೆ. ಆದ್ರೆ ಸಿಬ್ಬಂದಿಗಳು ತಮ್ಮ ವೈಯಕ್ತಿಕ ಹ್ಯಾಶ್ ಟ್ಯಾಗ್ ಬಳಸಿ ಮುಂದೆ ಇಲಾಖೆಯ ಹ್ಯಾಶ್ ಟ್ಯಾಗ್ ಬಳಸಿದರೆ ಮೇಲಾಧಿಕಾರಿಗಳಿಗೆ ಇರುವ ಬೆಲೆಯಾದರು ಏನು?

  • ಮಾಜಿ ಶಾಸಕ ಕಂದಕೂರ ಇನ್ನಿಲ್ಲ

    ಮಾಜಿ ಶಾಸಕ ಕಂದಕೂರ ಇನ್ನಿಲ್ಲ

    ಯಾದಗಿರಿ : ಗುರುಮಠಕಲ್ ಮತಕ್ಷೇತ್ರದ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರದ ತಂದೆ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿಗಳಾದ ನಾಗನಗೌಡ ಕಂದಕೂರ ಅವರು ತೀವ್ರ ಹೃದಯಾಘಾತದಿಂದ ಇಂದು ( ರವಿವಾರ ) ವಿಧಿವಶರಾಗಿದ್ದಾರೆ.

    ನಾಗನಗೌಡ ಕಂದಕೂರ ಅವರಿಗೆ 79 ವರ್ಷ ವಯಸ್ಸಾಗಿತ್ತು ಎದೆ ನೋವು ಕಾಣಿಸಿಕೊಂಡ ತಕ್ಷಣ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನೊಪ್ಪಿದ್ದಾರೆ.
    ನಾಗನಗೌಡ ಕಂದಕೂರ್ ಅವರು 2018ರಲ್ಲಿ ಯಾದಗಿರಿ ಜಿಲ್ಲೆ ಗುರುಮಠಕಲ್‌ ಶಾಸಕರಾಗಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ ಮೊದಲ ಬಾರಿಗೆ ನಾಗನಗೌಡ ಕಂದಕೂರ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

    ಕಳೆದ ೫೦ ವರ್ಷಗಳಿಂದ ರಾಜಕೀಯ ಜೀವನದಲ್ಲಿ ಸೋಲು ಗೆಲುವುಗಳನ್ನು ಕಂಡು ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್ ಪಕ್ಷದ ಹಿರಿಯ ಅನುಭವಿ ರಾಜಕಾರಣಿ ಯಾಗಿದ್ದ ಇವರ ಅಗಲಿಕೆ ಪಕ್ಷಕ್ಕೆ ಹಾಗೂ ಕಂದಕೂರ ಕುಟುಂಬದ ಅಭಿಮಾನಿ ಬಳಗಕ್ಕೆ ತುಂಭಲಾರದ ನಷ್ಟವನ್ನು ಉಂಟು ಮಾಡಿದೆ.

  • ರೈತರ ಬದುಕಿಗೆ ಕೊಳ್ಳಿಯಿಟ್ಟ ಸರ್ಕಾರ | 22ನೇ ದಿನಕ್ಕೆ ಮುಂದುವರೆದ ಧರಣಿ: ರೈತ ಹನುಮಂತ ತಂದೆ ಮಾನಪ್ಪ ಪೂಜಾರಿ ಮದ್ರಿಕಿ ವಿಷ ಸೇವಿಸಲು ಪ್ರಯತ್ನ

    ರೈತರ ಬದುಕಿಗೆ ಕೊಳ್ಳಿಯಿಟ್ಟ ಸರ್ಕಾರ | 22ನೇ ದಿನಕ್ಕೆ ಮುಂದುವರೆದ ಧರಣಿ: ರೈತ ಹನುಮಂತ ತಂದೆ ಮಾನಪ್ಪ ಪೂಜಾರಿ ಮದ್ರಿಕಿ ವಿಷ ಸೇವಿಸಲು ಪ್ರಯತ್ನ

    *ಕೆಬಿಜೆಎನ್‌ಎಲ್ ಕಚೇರಿ ಮುಂದೆ ನೀರಿಗಾಗಿ ಪ್ರತಿಭಟನೆ*

    ರೈತರೊಂದಿಗೆ ಮಾತನಾಡದೆ ಹೊರಟು ಹೋದ ಜಿಲ್ಲಾಧಿಕಾರಿ

    *ಜಿಲ್ಲಾಧಿಕಾರಿ ನಡೆಗೆ ಆಕ್ರೋಶಗೊಂಡ ರೈತರು ತಹಶೀಲ್ದಾರ್‌ಗೆ ಘೇರಾವ:*

    *ರೈತರ ಕಣ್ಣೀರು, ನಿಟ್ಟುಸಿರು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ: ಸತ್ಯಂಪೇಟೆ*

    *ಸತ್ಯಕಾಮ ವಾರ್ತೆ ಶಹಾಪುರ:*
    ರೈತರು ಬೆಳೆದ ಕೋಟ್ಯಾಂತರ ರೂಪಾಯಿ ಮೌಲ್ಯದ ಮೆಣಸಿನಕಾಯಿ ಬೆಳೆ ದಿನಗಳೆದಂತೆ ಕಮರುತಿದ್ದು, ಈ ಕುರಿತು ರೈತ ಸಂಘದ ಹೋರಾಟ 22ನೇ ದಿನಕ್ಕೆ ಕಾಲಿಟ್ಟರು ಸರ್ಕಾರ ಹೋರಾಟವನ್ನು ಹಗುರವಾಗಿ ತೆಗೆದುಕೊಂಡಿದ್ದು, ರೈತರ ಸಹನೆ ಕಟ್ಟೆಯೊಡೆದು ಹೋಗಿದ್ದು ಶುಕ್ರವಾರ ರೈತರು ಮಾಡು ಇಲ್ಲವೇ ಮಡಿ ಎನ್ನುವ ಸ್ಥಿತಿಗೆ ಮುಟ್ಟಿತ್ತು. ಆಳುವ ಸರ್ಕಾರ ನಮ್ಮ ಪಾಲಿಗೆ ಸತ್ತು ಹೋಗಿದೆ, ಬೆಳೆಗೆ ನೀರು ಬಿಡಿ ಎಂದರು ಮುಖ್ಯಮಂತ್ರಿಯಿಂದ ತಹಶೀಲ್ದಾರರವರೆಗೆ ಹಾರಿಕೆ ಉತ್ತರಗಳು ಬರುತ್ತಿವೆ, ರೈತರ ಕಣ್ಣೀರು, ನಿಟ್ಟುಸಿರು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲವೆಂದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

    ಸಮೀಪದ ಭೀಮರಾಯನಗುಡಿ ಕೆಬಿಜೆಎನ್‌ಎಲ್ ಆಡಳಿತ ಕಚೇರಿ ಎದುರು ಶುಕ್ರವಾರ ಬೆಳಗ್ಗೆ ಪ್ರಾರಂಭವಾದ ಹೋರಾಟದಲ್ಲಿ ಜಿಲ್ಲಾಧಿಕಾರಿಗಳು ಪಾಲ್ಗೊಂಡು, ಸರ್ಕಾರದ ನಿರ್ಧಾರ ತಿಳಿಸುವ ಬಗ್ಗೆ ಕಾಯುವಂತೆ ತಿಳಿಸಿ, ರೈತರನ್ನು ಕೂಡಿಸಿ ತಾವು ಹೇಳದ ಕೇಳದೆ ಹೊರಟು ಹೋದದ್ದು, ಇದೆಂಥ ನ್ಯಾಯ? ರೈತರ ನೋವು ಹತಾಶೆ, ಸಂಕಟ ಅರ್ಥವಾಗದಿರುವುದು ಎಂತಹ ವಿಪರ್ಯಾಸ? ಜಿಲ್ಲಾಧಿಕಾರಿಗಳ ಸಮಕ್ಷಮದಲ್ಲೇ ಹನುಮಂತ ತಂದೆ ಮಾನಪ್ಪ ಪೂಜಾರಿ ಮದ್ರಿಕಿ ವಿಷ ಸೇವಿಸಲು ಪ್ರಯತ್ನಿಸಿದ್ದು ಕ್ಷಣದಲ್ಲಿ ದುರಂತ ತಪ್ಪಿದೆ, ಇಷ್ಟಾದರೂ ಸರಕಾರ ರೈತರ ಸ್ಥಿತಿಯ ಗಂಭೀರ ಅರಿತುಕೊಳ್ಳುತ್ತಿಲ್ಲವೆಂದು ಆರೋಪಿಸಿದರು.

    ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು ಮುಖ್ಯಮಂತ್ರಿಗಳಿಗೆ ಮಾತನಾಡಿದ್ದು, ನೀರಾವರಿ ಎಮ್.ಡಿ ಅವರಿಂದ ಸಲಹೆ ಪಡೆದಿದ್ದು, ನೀರಾವರಿ ಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಬ ಭರವಸೆಯು ರೈತರ ಪ್ರತಿಭಟನೆಯ ಕಾವು ಸ್ವಲ್ಪ ತಣ್ಣಗಾಗಿತ್ತು.

    ಆದರೆ ಸಂಜೆಯಾಗುತ್ತಲೇ ಎಲ್ಲಾ ಅಧಿಕಾರಿಗಳು ಉತ್ತರ ನೀಡದೆ ಹೋಗಿದ್ದು, ರೈತರ ಸಹನೆ ಕೆಣಕಿದ್ದು, ತಹಶೀಲ್ದಾರರಲ್ಲಿ ಘೇರಾವು ಹಾಕಿ ಪ್ರತಿಭಟಿಸಿದರು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೋಲಿಸರ ಮನವರಿಕೆಯಿಂದ ಸ್ವಲ್ಪಮಟ್ಟಿಗೆ ಶಾಂತವಾಯಿತು.

    *ಸರ್ಕಾರದ ಹಠ ಸರಿಯಲ್ಲ:* 22 ದಿನಗಳಿಂದ ಪ್ರತಿಭಟನೆ ನಡೆದರೂ ಸರ್ಕಾರದ ಮೊಂಡತನ ರೈತರ ಬದುಕಿಗೆ ಸಂಕಟ ತಂದಿದೆ, ಲಕ್ಷಾಂತರ ರೂ ಮೆಣಸಿನಕಾಯಿ ಬೆಳೆ ಹಾಳಾಗುತ್ತಿದ್ದು, ರೈತರನ್ನು ರೊಚ್ಚಿಗೇಳಿಸುತ್ತಿದೆ, ಇನ್ನಾದರೂ ಸಕಾರಾತ್ಮಕ ನಿಲುವು ತೆಗೆದುಕೊಂಡು ರೈತರ ನೆರವಿಗೆ ಸರ್ಕಾರ ಬರಬೇಕಾಗಿದೆ.

    ಈ ಸಂದರ್ಭದಲ್ಲಿ ರೈತ ಮುಖಂಡರಾದ ಶರಣು ಮಂದ್ರವಾಡ, ನಾಗರತ್ನ ಪಾಟೀಲ್, ಮಲ್ಲಣ್ಣ ಪರಿವಾಣ, ಮಹೇಶ ಸುಬೇದಾರ ಸೇರಿದಂತೆ ನೂರಾರು ರೈತರು ಇದ್ದರು.

  • ಪ್ರಧಾನ ಮಂತ್ರಿ ಜನೌಷದಿ ಕೇಂದ್ರಕ್ಕೆ ಬೀಗ

    ಪ್ರಧಾನ ಮಂತ್ರಿ ಜನೌಷದಿ ಕೇಂದ್ರಕ್ಕೆ ಬೀಗ

    *ಸತ್ಯಕಾಮ ವಾರ್ತೆ ಶಹಾಪುರ*
    *ವರದಿ:ಕುದಾನ್ ಸಾಬ್*
    ಶಹಾಪುರ : ನಗರದ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷದಿ ಕೇಂದ್ರಕ್ಕೆ ಬೆಳ್ಳಗೆ 10ಗಂಟೆಯಾದರು ಬೀಗ ಹಾಕಿರುವುದು ಕಂಡು ಬಂದಿದೆ,

    ಬೆಳ್ಳಗೆ 9 ಗಂಟೆಗೆ ತೆರಯಬೇಕಾದ ಈ ಜನೌಷಧ ಕೇಂದ್ರ ಬೆಳ್ಳಗೆ 10ಗಂಟೆಯಾದರು ತೆರೆದಿಲ್ಲಾ, ಇದ್ದರಿಂದ್ದಾಗಿ ಔಷದಿ ಪಡೆಯಲು ಬಂದಿದ್ದ ರೋಗಿಗಳು ಸಂಕಷ್ಟ ಅನುಭವಿಸಿದರು.

    ದುಬಾರಿ ಬೆಲೆತೆತ್ತು ಖರೀದಿಸಲು ಸಂಕಷ್ಟ ಎದುರಿಸುತ್ತಿದ್ದ ಬಡ ಜನರಿಗೆ ಅಗ್ಗದ ಬೆಲೆಯಲ್ಲಿ ಮಾತ್ರೆ-ಔಷಧಗಳು ದೊರೆಯಲೆಂದು ಕೇಂದ್ರ ಸರಕಾರವು ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರಗಳನ್ನು ತೆರೆದಿದೆ.