Category: Latest News

  • ಅಗಲಿದ ಹಿರಿಯ ಪತ್ರಕರ್ತ ಪಿ.ಎಂ.ಮಣ್ಣೂರ ಸೆರಿ ಐವರು ಚೇತನಗಳಿಗೆ ಕೆಯುಡಬ್ಲ್ಯೂಜೆ ನುಡಿ ನಮನ

    ಅಗಲಿದ ಹಿರಿಯ ಪತ್ರಕರ್ತ ಪಿ.ಎಂ.ಮಣ್ಣೂರ ಸೆರಿ ಐವರು ಚೇತನಗಳಿಗೆ ಕೆಯುಡಬ್ಲ್ಯೂಜೆ ನುಡಿ ನಮನ

    ಬೆಂಗಳೂರು: ಸುದ್ದಿ ಮನೆಯಲ್ಲಿ ಸುದೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದ ಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್ , ಗುಡಿಬಂಡೆ ನರಸಿಂಹಮೂರ್ತಿ, ಟಿ.ಎಸ್.ರಾಜಾರಾವ್ ಅವರುಗಳಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನುಡಿ ನಮನ ಸಲ್ಲಿಸಿ, ಅವರೆಲ್ಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

    ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಚೇತನಗಳ ಸ್ಮರಣಾರ್ಥ ಎರಡು ನಿಮಿಷ ಮೌನ ಪ್ರಾರ್ಥನೆ ನಡೆಸಲಾಯಿತು.

    ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನುಡಿನಮನ ಕಾರ್ಯಕ್ರಮಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಅಗಲಿದ ಹಿರಿಯ ಪತ್ರಕರ್ತರರುಗಳು ಕೆಯುಡಬ್ಲ್ಯೂಜೆ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು ಹಾಕಿದರು.

    ಜಿನ್ನಾರ್ ಪತ್ರಿಕೋದ್ಯಮದಲ್ಲಿ
    ಶಿಸ್ತಿನ ಸಿಪಾಯಿ: ಬಿ.ಕೆ ರವಿ

    ಹಿರಿಯ ಪತ್ರಕರ್ತ ಜಿ.ಎನ್. ರಂಗನಾಥ್ ರಾವ್ ಅವರ ಬಗ್ಗೆ ಮಾತಾಡಿದ ಕೊಪ್ಪಳ ವಿ.ವಿ ಕುಲಪತಿ ಪ್ರೊ.ಬಿ.ಕೆ.ರವಿ, ಕನ್ನಡ ಭಾಷಾ ಬೆಳವಣಿಗೆಯಲ್ಲಿ ಜಿ.ಎನ್.ರಂಗನಾಥ್ ರಾವ್ ಅವರ ಕೊಡುಗೆ ಅನನ್ಯ. ಪ್ರಜಾವಾಣಿ ಪತ್ರಿಕೆಯಲ್ಲಿ ಸಾಹಿತ್ಯ ಸಾಪ್ತಾಹಿಕವನ್ನು ಅವರು ವಿಭಿನ್ನವಾಗಿ ರೂಪಿಸಿದರಲ್ಲದೆ, ಪತ್ರಿಕೋದ್ಯಮದಲ್ಲಿ ಅವರು ಶಿಸ್ತಿನ ಸಿಪಾಯಿಯಾಗಿಯೂ ಜನಪ್ರಿಯರಾದರು ಎಂದು ತಮಗೆ ಮಾರ್ಗದರ್ಶನ ನೀಡಿದ ನೆನಪನ್ನು ಮೆಲುಕು ಹಾಕಿದರು. ಅಗಲಿದ ಹಿರಿಯರ ನೆನಪಿನಲ್ಲಿ ಕೆಯುಡಬ್ಲ್ಯೂಜೆ ಕಾರ್ಯಕ್ರಮ ರೂಪಿಸಿ ಮಾದರಿ ಹೆಜ್ಜೆ ಇಟ್ಟಿದೆ ಎಂದು ಶ್ಲಾಘಿಸಿದರು. ಸಚ್ಚಿದಾನಂದಮೂರ್ತಿ ಅವರು ದೆಹಲಿಯಲ್ಲಿ ಮೂರು ದಶಕಗಳ ಕಾಲ ಪತ್ರಕರ್ತನಾಗಿ ಉತ್ತಮ ಸೇವೆ ಸಲ್ಲಿಸಿದರು ಎಂದರು.

    ಸಚ್ಚಿ ಅವರ ಪ್ರತಿಭೆ ಅನನ್ಯ:
    ಎಚ್. ಬಿ. ದಿನೇಶ್:

    ದೆಹಲಿ ಪತ್ರಿಕೋದ್ಯಮದಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಚ್ಚಿದಾನಂದ ಮೂರ್ತಿ ಸದಾ ಸ್ನೇಹಪರರಾಗಿದ್ದರು. ರಾಜ್ಯದ ಅಭಿವೃದ್ಧಿ ಯೋಜನೆಗೆ ದೆಹಲಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದರು ಎಂದು ವಾರ್ತಾ ಇಲಾಖೆಯ ನಿವೃತ್ತ ಹಿರಿಯ ಜಂಟಿ ನಿರ್ದೇಶಕ ಎಚ್.ಬಿ. ದಿನೇಶ್ ಹೇಳಿದರು.

    ಸಿ.ಆರ್.ಕೆ. ಚಳುವಳಿಗಳ ನೇತಾರ: ಸಿದ್ಧನಗೌಡ ಪಾಟೀಲ್

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿ ಹುದ್ದೆ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಸಿ.ಆರ್.ಕೃಷ್ಣರಾವ್ ಅವರು ಚಳುವಳಿಗಳ ನೇತಾರ ಆಗಿದ್ದರು ಎಂದು ನವಕರ್ನಾಟಕ ಪಬ್ಲಿಕೇಶನ್ಸ್ ನ “ಹೊಸತು” ಮಾಸಿಕದ ಸಂಪಾದಕ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಪಟ್ಟರು. ಸಿ.ಆರ್.ಕೆ. ರಾವ್ ಅವರು ಪತ್ರಕರ್ತರ ಮತ್ತು ಪತ್ರಿಕಾ ಸಂಸ್ಥೆಗಳ‌ ಕೊಂಡಿಯಾಗಿ ಪ್ರಧಾನ ಪಾತ್ರ ವಹಿಸಿಕೊಂಡಿದ್ದರು ಎಂದೂ ಗುಣಗಾನ ಮಾಡಿದರು.

    ಮಣೂರ ಅವರ ಪತ್ರಿಕಾ ರಂಗದ ಸೇವೆ ಅನನ್ಯ: ಬಿ.ವಿ.ಮಲ್ಲಿಕಾರ್ಜುನಯ್ಯ

    ಹಿರಿಯ ಪತ್ರಕರ್ತರಾಗಿದ್ದ ಪಿ.ಎಂ.ಮಣೂರ ಅವರು ಬಹಳಷ್ಟು ಪತ್ರಕರ್ತರನ್ನು ಬೆಳೆಸುವ ಮೂಲಕ, ಪತ್ರಿಕೋದ್ಯಮದಲ್ಲಿ ಅಜಾತಶತ್ರುವಾಗಿದ್ದರು ಎಂದು ಐ.ಎಫ್.ಡಬ್ಲ್ಯೂ.ಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಹೇಳಿದರು.
    ವಿವಿಧ ವಿಷಯಗಳಲ್ಲಿ ಪ್ರಭುತ್ವ ಹೊಂದಿದ್ದ ಮಣೂರರವರ ಪತ್ರಿಕಾ ಸೇವೆ ನಿಜಕ್ಕೂ ಸ್ಮರಣೀಯ ಎಂದರು.

    ಕೆ.ಪ್ರಹ್ಲಾದರಾವ್ ಉತ್ತಮ ಸಂಘಟಕರಾಗಿದ್ದರು: ಪಿ.ಶೇಷಚಂದ್ರಿಕಾ
    ಕೋಲಾರವು ಹಿರಿಯ ಪತ್ರಕರ್ತರಾಗಿದ್ದ ಕೆ.ಪ್ರಹ್ಲಾದರಾವ್ ಅವರ ಕರ್ಮಭೂಮಿ ಆಗಿದ್ದರೂ, ಜಿಲ್ಲಾ ಮಟ್ಟದ ಪತ್ರಕರ್ತರ ಕಷ್ಟಗಳನ್ನು ಪರಿಹರಿಸುವಲ್ಲಿ ಅವರು ಸರ್ಕಾರ ಅಧಿಕಾರಿಗಳ ಬಳಿಗೆ ಹೋಗುವ ಮೂಲಕ ಉತ್ತಮ ಸಂಘಟಕರೂ ಆಗಿದ್ದರು ಎಂದು ಹಿರಿಯ ಪತ್ರಕರ್ತ ಪಿ.ಶೇಷಚಂದ್ರಿಕಾ ನುಡಿದರು.

    ಹಿರಿಯ ಪತ್ರಕರ್ತರಾದ ಈಶ್ವರ ದೈ ತೋಟ ಅವರು ಮಾತನಾಡಿ, ತಾವು ಬೆಂಗಳೂರುಬಂದ ಸಂದರ್ಭದಲ್ಲಿ ಇವರೆಲ್ಲರ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು ಹಾಕಿದರು.
    ಹಿರಿಯ ಪತ್ರಕರ್ತರಾದ ಕಂ.ಕ.ಮೂರ್ತಿ, ಧಾರವಾಡ ಕರ್ನಾಟಕ ವಿವಿ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರೊ.ಜೆ.ಎಂ.ಚಂದುನವರ, ಸಾಗ್ಗರೆ ರಾಮಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗಲಿದ ಚೇತನಗಳ ಗುಣಗಾನ ಮಾಡಿದರು.

    ವಿತರಕರಿಬ್ಬರ ಸಾವಿಗೆ ಸಂತಾಪ:
    ಾಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಾದ ಕುಮಾರ್ ಮತ್ತು ಮನೋಜ್ ಅವರಿಗೆ ಸಭೆಯಲ್ಲಿ ಸಂತಾಪ ವ್ಯಕ್ತಪಡಿಸಲಾಯಿತು. ಅವರುಗಳ ಬಗ್ಗೆ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಕೆ.ಯೂ.ಡಬ್ಲ್ಯೂ.ಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಉಪಾಧ್ಯಕ್ಷ ಕೆ.ಎಂ.ಜಿಕ್ರಿಯಾ, ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ್ ಸೇರಿದಂತೆ ಸಂಘದ ಹಲವಾರು ಸದಸ್ಯರು ನುಡಿನಮನ ಕಾರ್ಯಕ್ರಮದಲ್ಲಿ ಹಾಜರಿದ್ದರು .

    ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಸಂಘದ ಖಜಾಂಚಿ ವಾಸುದೇವ ಹೊಳ್ಳ ಅವರು ವಂದನಾರ್ಪಣೆ ಮಾಡಿದರು.

  • ಕನ್ನಡ ರಾಜ್ಯೋತ್ಸವದ ಮೆರೆವಣಿಗೆ ವೇಳೆ ತಪ್ಪಿದ ಭಾರಿ ಅನಾಹುತ | ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

    ಕನ್ನಡ ರಾಜ್ಯೋತ್ಸವದ ಮೆರೆವಣಿಗೆ ವೇಳೆ ತಪ್ಪಿದ ಭಾರಿ ಅನಾಹುತ | ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

    ವಡಗೇರಾ:68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಸಂಘಟನೆ ಹಾಗೂ ಖಾಸಗಿ ಶಾಲೆಗಳ ವತಿಯಿಂದ ವಡಗೇರಾ ಪಟ್ಟಣ್ಣದಲ್ಲಿ ಮೆರವಣಿಗೆ ನಡೆಸಲಾಯಿತು, ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷದಿಂದಾಗಿ ಕೂದಲೆಳೆ ಅಂತರದಲ್ಲಿ ಶಾಲೆ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ನಡೆಯಲಿದ್ದ ಘೋರ ದುರಂತವೊಂದು ತಪ್ಪಿದಂತಾಗಿದೆ.

    ಪಟ್ಟಣ್ಣದಲ್ಲಿ ಮೆರವಣಿಗೆ ಮುಗಿಸಿಕೊಂಡು ಕಾರ್ಯಕ್ರಮದತ್ತ ತೆರಳುತ್ತಿದ್ದ ವೇಳೆ ಪಟ್ಟಣ್ಣದ ವಾಲ್ಮೀಕಿ ವೃತ್ತದ ಬಳಿ ಇದ್ದ ವಿದ್ಯುತ್ ಕಂಬದ ವಿದ್ಯುತ್ ತಂತಿ ಹರಿದು ಟ್ರ್ಯಾಕ್ಟರ್ ಟ್ರಾಲಿಯಲ್ಲಿದ ಭುವನೇಶ್ವರಿ ತಾಯಿ ಭಾವಚಿತ್ರದ ಕಟ್ಟಿಗೆಯ ಮೇಲೆ ಬಿದ್ದಿದ್ದೆ, ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ಕೈದು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದು, ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಕೆಳಕ್ಕಿಳಿಸಿ ರಕ್ಷಿಸುವ ಮೂಲಕ ಕೆಇಬಿಯವರಿಗೆ ಕರೆ ಮಾಡಿ ವಿದ್ಯುತ್ ಕಂಬದ ಪವರ್ ತೆಗೆಯುವಂತೆ ತಿಳಿಸಿದ್ದಾರೆ.

    ಒಂದು ವೇಳೆ ಆ ವಿದ್ಯುತ್ ತಂತಿ ವಿದ್ಯಾರ್ಥಿಗಳ ಮೇಲೆ ಬಿದ್ದು, ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗಿದ್ದರೆ ಇದಕ್ಕೆಲ್ಲಾ ಯಾರು ಹೊಣೆಯಾಗುತ್ತಿದ್ದರು? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು,

    ಟ್ರ್ಯಾಕ್ಟರ್ ನಲ್ಲಿದ್ದ ಮಕ್ಕಳು ಸ್ವಾಮಿ ವಿವೇಕಾನಂದ ಶಾಲೆ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದ್ದೂ, ಟ್ರ್ಯಾಕ್ಟರ್ ಚಾಲಕ ವಿದ್ಯುತ್ ಕಂಬದ ತಂತಿಗಳು ಮೇಲೆ ಇರುವುದನ್ನು ಗಮನಿಸದೆ ಚಾಲನೆ ಮಾಡಿರುವುದರಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

  • ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರಿಗೆ ಪೊಲೀಸರಿಂದ ಹಿಗ್ಗಾಮುಗ್ಗ ಥಳಿತ| ಪ್ರಯಾಣಿಕರ ಆಕ್ರೋಶ

    ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರಿಗೆ ಪೊಲೀಸರಿಂದ ಹಿಗ್ಗಾಮುಗ್ಗ ಥಳಿತ| ಪ್ರಯಾಣಿಕರ ಆಕ್ರೋಶ

    ಯಾದಗಿರಿ: ನಗರದ ರೈಲ್ವೆ ನಿಲ್ದಾಣದಲ್ಲಿ ಮದ್ಯ ಸೇವಿಸಿ ಮಲಗಿದ್ದ ಪ್ರಯಾಣಿಕರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

    ರೈಲ್ವೆ ನಿಲ್ದಾಣದಲ್ಲಿ ಕುಡಿದು ಮಲಗಿದ್ರೆ ಬೇರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ ಎಂದು ಮೊದಲಿಗೆ ರೈಲ್ವೆ ಪೋಲಿಸರು ಬುದ್ದಿ ಮಾತು ಹೇಳಿದ್ದಾರೆ, ಆದರೂ ಪೊಲೀಸರ ಮಾತು ಕೇಳದೇ ಅಲ್ಲೇ ಮಲಗಿದ್ದ ಪ್ರಯಾಣಿಕರನ್ನು ಕಂಡು ಸಿಟ್ಟಿಗೆದ್ದ ಆರ್‌ಪಿಎಫ್ ಪೊಲೀಸರು ಕುಡಿದು ಮಲಗಿದ್ದ ಪ್ರಯಾಣಿಕರನ್ನು ಕರೆದುಕೊಂಡು ಹೋಗಿ ಕಚೇರಿಯ ಕೊಠಡಿಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಹೇಳಲಾಗುತ್ತಿದೆ,

    ಇದರಿಂದ ರೊಚಿಗೆದ್ದ ಪ್ರಯಾಣಿಕರು ಆರ್‌ಪಿಎಫ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದಲ್ಲದೆ ಪರಿಸ್ಥಿತಿ ತಿಳಿಗೊಳಿಸಲು ಹೋದ ಇನ್ನೊಬ್ಬ ಆರ್‌ಪಿಎಫ್ ಪೊಲೀಸ್ ಪೇದೆಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ರೋಮ್ ನಲ್ಲಿ ಕೊಡಿ ಹಾಕಿ ಹೊಡೆಯಲು ಕಾರಣವೇನು? ಕಾಲಿಗೆ ಬಿದ್ದರೂ ಬಿಡಲಿಲ್ಲ, ಅಂತಹ ತಪ್ಪು ನಾವೇನು ಮಾಡಿದ್ದೇವೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

  • ಕೆಕೆಆರ್‌ಟಿಸಿ ಬಸ್ ಗೆ ಬೆಂಕಿ ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಲಿಕ ಸ್ಥಗಿತ

    ಕೆಕೆಆರ್‌ಟಿಸಿ ಬಸ್ ಗೆ ಬೆಂಕಿ ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಲಿಕ ಸ್ಥಗಿತ

    ಕಲಬುರಗಿ,ಅ.30
    ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ತಿಳಿಸಿದ್ದಾರೆ

    ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

    ಸ್ಥಳೀಯ ಪೊಲೀಸರ ನೆರವಿನಿಂದ
    ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಬಸ್ ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡೀಪೋ ಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

  • ಮನೆಯ ಮುಂದೆ ರಂಗೋಲಿ, ದೀಪ ಹಚ್ಚುವಂತೆ ಜಿಲ್ಲಾಧಿಕಾರಿಗಳ ಮನವಿ

    ಮನೆಯ ಮುಂದೆ ರಂಗೋಲಿ, ದೀಪ ಹಚ್ಚುವಂತೆ ಜಿಲ್ಲಾಧಿಕಾರಿಗಳ ಮನವಿ

    ಕಲಬುರಗಿ,ಅ.30: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬರುವ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಮನೆಯ ಮುಂದೆ ರಂಗೋಲಿ, ಹಣತೆಯ ದೀಪ ಹಚ್ಚುವ ಮೂಲಕ ಕನ್ನಡ ಪ್ರೇಮ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

    ಅಂದು ಬೆಳಿಗ್ಗೆ ಮನೆಯ ಮುಂದೆ
    ಕೆಂಪು-ಹಳದಿ ಬಣ್ಣದ ರಂಗೋಲಿಯಲ್ಲಿ
    “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂದು ವಾಕ್ಯವನ್ನು ಬಿಡಿಸಬೇಕು. ಇನ್ನು ಸಂಜೆ 7 ಗಂಟೆಗೆ ಮನೆ, ಕಚೇರಿ, ಅಂಗಡಿ-ಮುಂಗಟ್ಟುಗಳ ಮುಂದೆ ಹಣತೆ ದೀಪ ಹಚ್ಚಿ ಕನ್ನಡದ ಜ್ಯೋತಿ ಬೆಳಗಿಸಬೇಕೆಂದು ಅವರು ಕೋರಿದ್ದಾರೆ.

    ಇನ್ನು ರಾಜ್ಯೋತ್ಸವ ದಿನ ಸಂಜೆ 5 ಗಂಟೆಗೆ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವವನ್ನು ಆಚರಿಸಬೇಕು ಎಂದು ಡಿ.ಸಿ. ಅವರು ಜಿಲ್ಲೆಯ ಜನತೆಗೆ ಕರೆ ನೀಡಿದ್ದಾರೆ.

    ಕರ್ನಾಟಕ ನಾಮಕರಣದ‌ ಸುವರ್ಣ ಸಂದರ್ಭ ಇದಾಗಿರುವುದರಿಂದ ರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಅಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳು, ಸಂಘ-ಸಂಸ್ಥೆಗಳು ರಾಜ್ಯೋತ್ಸವ ದಿನಾಚರಣೆ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಜರುಗುವಂತೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

    *ನಾಡಗೀತೆಗೆ ಗೌರವ ಸಲ್ಲಿಸಿ:*

    ರಾಜ್ಯೋತ್ಸವ ದಿನದಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುತ್ತಿದೆ. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

  • ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್  ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ

    ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್ ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ

    ವರದಿ: ಕುದಾನ್ ಸಾಬ್
    ಯಾದಗಿರಿ: ಜನಸಾಮಾನ್ಯರಿಗೆ ಒಂದು ಕಾನೂನು, ಸರ್ಕಾರಿ ಅಧಿಕಾರಿಗಳಿಗೆ ಮತ್ತೊಂದು ಕಾನೂನು ಎನ್ನುವ ಪ್ರಶ್ನೆ ಇದೀಗ ಜಿಲ್ಲೆಯಲ್ಲಿ ಉದ್ಭವಿಸಿದೆ. ವಿಮೆ ಮಾಡಿಸಿ ಅಂತ ಸಾರ್ವಜನಿಕರಿಗೆ ತಿಳಿಹೇಳುವ ಸರ್ಕಾರಿ ಅಧಿಕಾರಿಗಳೇ ತಾವು ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ವಾಹನಗಳಿಗೆ ವಿಮೆ ಮಾಡಿಸದೇ ನಿರ್ಲಕ್ಷ ತೋರುತ್ತಿದ್ದಾರೆ.

    ಜನಸಾಮಾನ್ಯರಿಗಾದ್ರೆ ಹೆಲ್ಮೆಟ್ ಇಲ್ಲ. ಸೀಟ್ ಬೆಲ್ಟ್ ಹಾಕಿಲ್ಲ. ಇನ್ಸುರೆನ್ಸ್ ಇಲ್ಲ, ಎಮಿಷನ್ ಟೆಸ್ಟ್ ಇಲ್ಲ, ಮಿರರ್ ಇಲ್ಲ ಅದಿಲ್ಲ-ಇದಿಲ್ಲ ಅಂತೆಲ್ಲಾ ಪೊಲೀಸರು ಕೇಸ್ ಮೇಲೆ ಕೇಸ್ ಹಾಕಿ ಜನ ಸಾಮಾನ್ಯರ ಬಳಿ ದಂಡದ ರೂಪದಲ್ಲಿ ಪೊಲೀಸರು ಸಾವಿರಾರು ರೂಪಾಯಿ ಹಣ ವಸೂಲಿ ಮಾಡ್ತಾರೆ. ಆದರೆ, ಯಾದಗಿರಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಹಲವು ಸರ್ಕಾರಿ ವಾಹನಗಳ ಇನ್ಸೂರೆನ್ಸ್ ಮುಗಿದು ಹಲವು ವರ್ಷಗಳೇ ಕಳೆದರೂ ಅಂತಹ ಅಧಿಕಾರಿಗಳ ವಿರುದ್ದ ಆರ್. ಟಿ. ಓ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಮೌನವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಜಿಲ್ಲೆಯಲ್ಲಿರುವ ಹಲವು ಸರ್ಕಾರಿ ವಾಹನಗಳು ವಿಮೆರಹಿತವಾಗಿದ್ದೂ, ಪಶು ಸಂಗೋಪನಾ ಇಲಾಖೆಯ ವಾಹನದ ಇನ್ಶೂರೆನ್ಸ್ ಮುಗಿದು ಒಂದೆರಡು ತಿಂಗಳಲ್ಲ ಬರೋಬ್ಬರಿ ಹನ್ನೆರಡು ವರ್ಷವಾಗಿದೆ. ಪೊಲೀಸ್ ಇಲಾಖೆಯ ಹಲವು ವಾಹನಗಳಿಗೆ ನಾಲ್ಕೈದು ವರ್ಷಗಳ ಹಿಂದೆಯೇ ಇನ್ಶೂರೆನ್ಸ್ ಮುಗಿದಿದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಸುತ್ತಿರುವ ವಾಹನದ ಇನ್ಶೂರೆನ್ಸ್ ಎರಡು ವರ್ಷಗಳ ಹಿಂದೆಯೇ ಮುಗಿದಿದೆ. ಇನ್ನೂ ಹಲವು ಇಲಾಖೆಯ ಅದೆಷ್ಟೋ ಸರ್ಕಾರಿ ವಾಹನಗಳಿಗೆ ಇದುವರೆಗೂ ವಿಮೆ ಮಾಡಿಸಿಲ್ಲ. ಹೀಗಾಗಿ ಸಾರ್ವಜನಿಕರು ಕಾನೂನು ಪಾಲಿಸಿ ಸಾರ್ವಜನಿಕರಿಗೆ ಮಾದರಿಯಾಗಿರಬೇಕಿದ್ದ ಅಧಿಕಾರಿಗಳೇ ಕಾನೂನು ಉಲ್ಲಂಘಿಸುತ್ತಿದ್ದು ಬೆಕ್ಕಿನ ಕೊರಳಿಗೆ ಘಂಟೆ ಕಟ್ಟುವವರು ಯಾರು ಎಂದು ಸರ್ಕಾರಕ್ಕೆ ಪ್ರಶ್ನಿಸುವಂತಾಗಿದೆ.

    ವಾಹನಗಳ ತಪಾಸಣೆಗಾಗಿ ದಾರಿಯುದ್ಧಕ್ಕೂ ನಿಲ್ಲುವ ಅಧಿಕಾರಿಗಳು ಜನಸಾಮಾನ್ಯರ ವಾಹನಗಳ ದಾಖಲೆ ಕೇಳುವುದಕ್ಕೂ ಮೊದಲು, ಸರ್ಕಾರಿ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರಿ ಅಧಿಕಾರಿಗಳ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಬಹುದಿತ್ತಲ್ಲವೇ ಎಂಬ ಪ್ರಶ್ನೆ ಜಿಲ್ಲೆಯ ಜನಸಾಮಾನ್ಯರಲ್ಲಿ ಮೂಡಿದೆ.

    ಒಟ್ಟಿನಲ್ಲಿ ಸರ್ಕಾರಿ ವಾಹನಗಳಿಗೆ ಇನ್ಸುರೆನ್ಸ್ ತುಂಬುವ ಮೂಲಕ ಜವಾಬ್ದಾರಿ ಮೆರೆಯಬೇಕಾಗಿದ್ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು. ಸಾರ್ವಜನಿಕರು ಕೂಡ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುವಂತಾಗಿದೆ. ಇನ್ನಾದ್ರೂ ಆರ್.ಟಿ.ಓ ಅಧಿಕಾರಿಗಳು ಎಚ್ಚೆತ್ತುಕೊಂಡು ಸರ್ಕಾರಿ ವಾಹನಗಳಿಗೆ ವಿಮೆ ಮಾಡಿಸುವ ಎಚ್ಚರಿಕೆ ನೀಡುವ ಮೂಲಕ ನಿಯಮ ಉಲ್ಲಂಘಿಸುತ್ತಿರುವ
    ಅಧಿಕಾರಿಗಳಿಗೆ ಬ್ರೇಕ್ ಹಾಕುತ್ತಾರೋ ಇಲ್ಲವೋ ಅನ್ನುವುದನ್ನು ಕಾದು ನೋಡಬೇಕಾಗಿದೆ.

    ಸತ್ಯಕಾಮ ರಿಯಾಲಿಟಿ ಚೆಕ್ ನಲ್ಲಿ ಕಂಡುಬಂದ ಇನ್ಶೂರೆನ್ಸ್ ಇಲ್ಲದ ವಾಹನಗಳು

    ಕೆಎ33ಜಿ0264
    ಕೆಎ33ಜಿ8008
    ಕೆಎ33ಜಿ0108
    ಕೆಎ33ಜಿ0182
    ಕೆಎ33ಜಿ0184
    ಕೆಎ33ಜಿ0134
    ಕೆಎ33ಜಿ0252
    ಕೆಎ33ಜಿ0067
    ಕೆಎ33ಜಿ0104 ಇದಲ್ಲದೇ ಇನ್ನೂ ಹಲವು ಇಲಾಖೆಯಲ್ಲಿನ ವಾಹನಗಳ ಇನ್ಶೂರೆನ್ಸ್ ಮುಗಿದೂ ಹಲವು ವರ್ಷಗಳಾಗಿವೆ.

  • ಮಹಿಪಾಲರೆಡ್ಡಿ ಸೇರಿ ಐವರಿಗೆ `ಕನ್ನಡ ನಿತ್ಯೋತ್ಸವ’ ಪ್ರಶಸ್ತಿ

    ಮಹಿಪಾಲರೆಡ್ಡಿ ಸೇರಿ ಐವರಿಗೆ `ಕನ್ನಡ ನಿತ್ಯೋತ್ಸವ’ ಪ್ರಶಸ್ತಿ

    ಬೆಂಗಳೂರು, ಸೆ.7- ಸುಗಮ ಸಂಗೀತ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿರುವ ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿಯು 2023 ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ `ಕನ್ನಡ ನಿತ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
    ಕಲ್ಯಾಣ ಕರ್ನಾಟಕದ ಕಲಬುರಗಿಯ ಕವಿ, ಲೇಖಕರಾದ ಮಹಿಪಾಲರೆಡ್ಡಿ ಮುನ್ನೂರ್, ಖ್ಯಾತ ಗಾಯಕಿ ಶಶಿಕಲಾ ಸುನೀಲ್, ಪ್ರತಿಷ್ಠಿತ ಸಂಸ್ಥೆ ವೀಣಾ ಮ್ಯೂಸಿಕಲ್‌ನ ಮಾಲೀಕರಾದ ಪಿ.ನಾಗರಾಜ್, ಕನ್ನಡ ಕಾರ್ಯಕರ್ತ, ಸಂಘಟಕ ಜಾವಗಲ್ ಪ್ರಸನ್ನಕುಮಾರ, ರಂಗಕರ್ಮಿ, ನಟ ಬೆಳ್ಳಿಚುಕ್ಕಿ ವೀರೇಂದ್ರ ಅವರುಗಳಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
    ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಉದಯಭಾನು ಕಲಾ ಸಂಘದಲ್ಲಿ ಸೆ.10 ರಂದು ಸಂಜೆ 6 ಕ್ಕೆ ಆಯೋಜಿಸಲಾಗಿದೆ. ಮಾಜಿ ವಿಧಾನಸಭಾಧ್ಯಕ್ಷರಾದ ಪ್ರೊ.ಬಿ.ಕೆ.ಚಂದ್ರಶೇಖರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ಬಸವನಗುಡಿ ಶಾಸಕರಾದದ ಎಲ್.ಎ.ರವಿ ಸುಬ್ರಮಣ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು. ಹಿರಿಯ ಸಾಹಿತಿ ಮತ್ತು ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಭೈರಮಂಗಲ ರಾಮೇಗೌಡ ಅವರು ಸಮಾರೋಪ ನುಡಿಗಳಾಡುವರು. ನಾಡಿನ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಗಾಯನ, ಹೆಚ್.ಬಿ.ಜಯರಾಂ, ರಾಘವೇಂದ್ರ ಜೋಶಿ, ಜೈಕುಮಾರ ತಂಡದವರಿಂದ ವಾದ್ಯ ವೈಭವ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

  • ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮ

    ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮ

     


    ಕಮಲಾನಗರ-

    ಇಂದು ಆಳಂದ ತಾಲೂಕಿನ ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಿಲ್ಲಾ ಕೀಟ ಶಾಸ್ತ್ರಜ್ಞ ಚಾಮರಾಜ ದೊಡಮನಿ ಮಾತನಾಡಿ ಡೆಂಗ್ಯ ಮತ್ತು ಚಿಕೂನ್ ಗುನ್ಯಾ ರೋಗಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ ರೋಗ ಬಂದ ಮೇಲೆ ಆಸ್ಪತ್ರೆಗಳಿಗೆ ಪರದಾಡುವುದಕ್ಕಿಂತ ರೋಗದ ಕುರಿತು ತಿಳಿದುಕೊಂಡು ನಮ್ಮ ಮನೆ ಒಳಗೆ ಹೊರಗೆ ಸುತ್ತ ಮುತ್ತ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದರ ಮೂಲಕ ರೋಗ ಬರದಂತೆ ನಾವು ನಮ್ಮನ್ನು ಸಂರಕ್ಷಿಸಿಕೊಳ್ಳ ಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡುವುದರು.ಹಾಗೂ ಸೊಳ್ಳೆಗಳಿಂದ ಸಂರಕಗಷಣೆ ಮಾಡಿಕೊಳ್ಳುವ ಸರಳ ವಿಧಾನಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು.
    ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಹಾಸ್ಯ ಕಲಾವಿದರಾದ ಗುಂಡಣ್ಣ ಡಿಗ್ಗಿ ತಮ್ಮ ಹಾಸ್ಯಚಟಾಕೆಗಳನ್ನು ಹಾರಿಸುವುದರ ಜೊತೆಗೆ ಮಕ್ಕಳಿಗೆ ಸಾಮಾನ್ಯದ ಆರೋಗ್ಯದ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಮೇಲ್ವಿಚಾರಕರಾದ ಸಂಜೀವ ಅರಳೆ,ಶಫಿ ಪಟೇಲ್,ಆರೋಗ್ಯ ಅಧಿಕಾರಿ ಅಮಿತಕುಮಾರ,ಆರೋಗ್ಯ ಸುರಕ್ಷತಾ ಅಧಿಕಾರಿ ಸುನಿತಾ ಶಿಕ್ಷಕರಾದ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ , ವಹಿಸಿಕೊಂಡಿದ್ದರು.ಶಿಕ್ಷಕರಾದ ಮಡಿವಾಳಪ್ಪ. ಬಿರಾದಾರ,ಜೈಪ್ರಕಾಶ ಸ್ವಾಗತಿಸಿ ನಿರೂಪಣೆ ಮಾಡಿದರು.

  • ಆಧಾರ್ ಗೆ ಮೊಬೈಲ್ ಲಿಂಕ್ ಮಾಡಲು ಡಿ.ಸಿ. ಸೂಚನೆ

    ಆಧಾರ್ ಗೆ ಮೊಬೈಲ್ ಲಿಂಕ್ ಮಾಡಲು ಡಿ.ಸಿ. ಸೂಚನೆ

     

    ಕಲಬುರಗಿ,ಆ.2- ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ 30,05,090 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 7,74,644 ಜನರ ಆಧಾರ್ ಗೆ ಮೋಬೈಲ್ ಲಿಂಕ್ ಮಾಡಿಲ್ಲ. ಸರ್ಕಾರದ ಹಲವಾರು ಯೋಜನೆಗಳು ಆಧಾರ್, ಡಿ.ಬಿ.ಟಿ ಮೂಲಕ ಜಾರಿಗೆ ತರಲಾಗುತ್ತಿರುವುದರಿಂದ ಆಧಾರ್ ಗೆ ಮೋಬೈಲ್ ಲಿಂಕ್ ಅನಿವಾರ್ಯವಾಗಿದೆ. ಆಧಾರ್ ಗೆ ಇದೂವರೆಗೆ ಮೋಬೈಲ್ ಲಿಂಕ್ ಮಾಡಿಸದವರು ಕೂಡಲೇ ಲಿಂಕ್ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

    ಮಂಗಳವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಆಧಾರ್ ನೋಂದಣಿ ಮೇಲುಸ್ತುವಾರಿ ಸಮಿತಿ ಸಭೆ ನಡೆಸಿ ಅವರು ಮಾತನಾಡಿದ್ದರು.

    ಇದಲ್ಲದೆ 5 ವರ್ಷ ಮತ್ತು ಮೇಲ್ಪಟ್ಟ 1,66,849 ಜನರು ಮತ್ತು 15 ವರ್ಷ ಮತ್ತು ಮೇಲ್ಪಟ್ಟ 6,03,331 ಜನರ ಆಧಾರ್ ಕಾರ್ಡ್ ಗೆ ಬಯೋಮೆಟ್ರಿಕ್ ಅಪ್ಲೋಡ್ ಆಗಿಲ್ಲ. ಕೂಡಲೆ ಇವರೆಲ್ಲರು ಬಯೋಮೆಟ್ರಿಕ್ ನೀಡಬೇಕು. ಅದೇ ರೀತಿ 9,80,037 ಜನರು ಗುರುತಿನ‌ ಚೀಟಿ ಮತ್ತು ವಾಸಸ್ಥಳ‌ ಕುರಿತು ಡಾಕೂಮೆಂಟ್ ಅಪಲೋಡ್ ಮಾಡಬೇಕಿದೆ ಎಂದರು.

    *199 ಆಧಾರ್ ನೋಂದಣಿ ಕೇಂದ್ರಗಳು:*

    ಕಲಬುರಗಿ-40, ಅಫಜಲಪೂರ-38, ಆಳಂದ-29, ಚಿಂಚೋಳಿ-19, ಚಿತ್ತಾಪೂರ-29, ಜೇವರ್ಗಿ-18 ಹಾಗೂ ಸೇಡಂ-26 ಸೇರಿದಂತೆ ಜಿಲ್ಲೆಯಾದ್ಯಂತ 199 ಆಧಾರ್ ನೋಂದಣಿ ಕೆಂದ್ರಗಳನ್ನು ತೆರಯಲಾಗಿದೆ. ಬಿ.ಎಸ್.ಎನ್.ಎಲ್, ಬ್ಯಾಂಕ್, ಅಂಚೆ ಕಚೇರಿ, ನಾಡ ತಹಶೀಲ ಕಚೇರಿ, ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಗಳು ಆಧಾರ್ ನೋಂದಣಿ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಸಮೀಪದ ಕೇಂದ್ರಕ್ಕೆ ಹೋಗಿ ಡಾಕೂಮೆಂಟ್, ಬಯೋಮೆಟ್ರಿಕ್ ಅಪಲೋಡ್ ಮತ್ತು ಮೋಬೈಲ್ ಲಿಂಕ್ ಮಾಡಿಸಬಹುದಾಗಿದೆ ಎಂದು ಡಿ.ಸಿ. ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಬೆಂಗಳೂರು ಪ್ರಾದೇಶಿಕ ಕಚೇರಿಯ ಯೋಜನಾ ವ್ಯವಸ್ಥಾಪಕ ವಿಜಯ, ಜಿಲ್ಲಾ ಆಧಾರ್ ಕನ್ಸಲಟೆಂಟ್ ಆನಂದ ಗಢಾಳೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

  • ಮಳೆಯಿಂದ 283 ಮನೆಗಳು ಭಾಗಶಃ ಹಾನಿ -ಡಿ.ಸಿ. ಬಿ.ಫೌಜಿಯಾ ತರನ್ನುಮ್

    ಮಳೆಯಿಂದ 283 ಮನೆಗಳು ಭಾಗಶಃ ಹಾನಿ -ಡಿ.ಸಿ. ಬಿ.ಫೌಜಿಯಾ ತರನ್ನುಮ್

    ಕಲಬುರಗಿ-ಕಳೆದ ಜೂನ್ 1 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ 283 ಮನೆಗಳು ಭಾಗಶ: ಹಾನಿಗೊಂಡಿದ್ದು, ಹಾನಿಯಾದ ಮನೆಗಳ ಕುರಿತು ಜಂಟಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

    ಇದಲ್ಲದೇ 20 ಕಿ.ಮೀ. ರಾಜ್ಯ ಹೆದ್ದಾರಿ, 27.50 ಕಿ.ಮೀ. ಜಿಲ್ಲಾ ಹೆದ್ದಾರಿ, 100 ಕಿ.ಮೀ. ಗ್ರಾಮೀಣ ರಸ್ತೆಗಳು ಸೇರಿದಂತೆ ಒಟ್ಟು 147.50 ಕಿ.ಮೀ. ರಸ್ತೆ, 84 ಸೇತುವೆಗಳು, 89 ಶಾಲಾ ಕೊಠಡಿಗಳು ಹಾಗೂ 38 ಅಂಗನವಾಡಿ ಕೇಂದ್ರಗಳು ಸಹ ಹಾನಿಗೊಳಗಾಗಿವೆ ಎಂದು ಅವರು ತಿಳಿಸಿದ್ದಾರೆ.

    ತೀವ್ರ ಮಳೆಯಿಂದ ಜಿಲ್ಲೆಯಾದ್ಯಂತ 281 ವಿದ್ಯುತ್ ಕಂಬ್‌ಗಳು, 35 ಟ್ರಾನ್ಸ್ಫಾರ್ಮರ್‌ಗಳು ಹಾನಿಗೊಂಡಿದ್ದು, ಈ ಪೈಕಿ ಕ್ರಮವಾಗಿ 203 ವಿದ್ಯುತ್ ಕಂಬಗಳು ಮತ್ತು 31 ಟ್ರಾನ್ಸ್ಫಾರ್ಮರ್‌ಗಳನ್ನು ದುರಸ್ತಿಗೊಳಿಸಿ ವಿದ್ಯುತ್ ಪ್ರಸರಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

    ಇನ್ನೂ ಜಿಲ್ಲೆಯಾದ್ಯಂತ ಮಳೆಯಿಂದ ಯಾವುದೇ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿನ ಮಳೆಯ ಪರಿಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ್ದು, ಅವರು ಅಗತ್ಯ ಸಲಹೆ ಸೂಚನೆ ನೀಡಿದ್ದು, ಅದನ್ನು ಪಾಲಿಸಲಾಗುತ್ತಿದೆ ಎಂದಿದ್ದಾರೆ.

    *5 ಲಕ್ಷ ರೂ. ಪರಿಹಾರ ವಿತರಣೆ:*

    ಕಳೆದ ಜುಲೈ 24 ರಂದು ಜೇವರ್ಗಿ ತಾಲೂಕಿನ ಬಿರಾಳ (ಬಿ) ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿತ ಪರಿಣಾಮ ಗ್ರಾಮದ 38 ವರ್ಷದ ಬಸಮ್ಮ ಗಂಡ ಬಸವರಾಜ ಬಳಗಾರ ಅವರು ಮೃತಪಟ್ಟಿದ್ದು, ಮೃತರ ವಾರಸುದಾರರಿಗೆ ಸರ್ಕಾರದ ಮಾರ್ಗಸೂಚಿಯಂತೆ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಯಾವುದೇ ಜಾನುವಾರುಗಳ ಪ್ರಾಣ ಹಾನಿ ಕುರಿತು ವರದಿಯಾಗಿಲ್ಲ ಎಂದು ಡಿ.ಸಿ. ಬಿ. ಫೌಜಿಯಾ ತರನ್ನುಮ್ ಅವರು ಸ್ಪಷ್ಟಪಡಿಸಿದ್ದಾರೆ.

    *ಸಹಾಯವಾಣಿ ಸ್ಥಾಪನೆ:*

    ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದ ಸಾರ್ವಜನಿಕರಿಗೆ ಏನಾದರೂ ತೊಂದರೆಯಾದಲ್ಲಿ ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 08472-278677, ಟೋಲ್ ಫ್ರೀ ಸಂಖ್ಯೆ 1077ಗೆ ಸಂಪರ್ಕಿಸಲು ಕೋರಿದೆ.

    ಇದಲ್ಲದೇ ತಾಲೂಕು ಹಂತದಲ್ಲಿ ಅಫಜಲಪುರ 08470-282020, ಆಳಂದ-08477-202428, ಚಿಂಚೋಳಿ-8475200113, ಚಿತ್ತಾಪುರ-08474-236250, ಜೇವರ್ಗಿ 08442-236024, ಕಲಬುರಗಿ-08472-278657/ 278636, ಕಾಳಗಿ 9741680444, ಕಮಲಾಪುರ-7411843393, ಸೇಡಂ 08441-276184, ಶಹಾಬಾದ-08477-202428 ಹಾಗೂ ಯಡ್ರಾಮಿ 8147003348ಗೆ ಸಂಪರ್ಕಿಸಬಹುದಾಗಿದೆ.