Category: State

  • ವಾಲಿಬಾಲ್: ಕ್ಯಾತನಾಳ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    ವಾಲಿಬಾಲ್: ಕ್ಯಾತನಾಳ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    ಸತ್ಯಕಾಮ ವಾರ್ತೆ ವಡಗೇರಾ:
    ಆಗಸ್ಟ್ 5 ರಂದು ಶಹಾಪುರ ನಗರದಲ್ಲಿ ನಡೆದ ಹೋಬಳಿ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ವಡಗೇರಾ ತಾಲೂಕಿನ ಕ್ಯಾತನಾಳ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

     
    ಮಕ್ಕಳ ಸಾಧನೆ ಕುರಿತು ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಬಾಗ್ಲಿ ಮಾತನಾಡಿದರು.ಗ್ರಾಮೀಣ  ಪ್ರತಿಭೆಗಳಿಗೆ ಕ್ರೀಡೆಯಲ್ಲಿ ಅತಿ ಹೆಚ್ಚು ಸಾಧನೆ ಮಾಡುತ್ತಿದ್ದು ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಇಲಾಖೆಯ ಅಧಿಕಾರಿಗಳು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಮುಂದೆ ನಡೆಯುವ  ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಯಶಾಲಿಯಾಗಿ ಎಂದು ಹಾರೈಸಿದರು.
     
    ಈ ಮಕ್ಕಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಶರಣಪ್ಪ ಬಾಗ್ಲಿ ,ಶಿಕ್ಷಕ ಸಿಬ್ಬಂದಿ ವರ್ಗದವರು ಗ್ರಾಮಸ್ಥರು ಗ್ರಾ ಪಂ ಸದಸ್ಯರಾದ ಮಂಜುಳಾ ಎಚ್. ಬಿ ಪಾಟೀಲ, ಮಲ್ಲಿಕಾರ್ಜುನ್ ಠಾಣಗುಂದಿ , ವಿದ್ಯಾಧರ್ ಜಾಕಾ, ದೇವೇಂದ್ರಪ್ಪ ಗುಡ್ಡೆನೂರು, ಸಿದ್ದಮ್ಮ, ದೇವೇಂದ್ರಪ್ಪ ಮಲ್ಲಳ್ಳಿ, ಸೋಫಿಯಾ ಬೇಗಂ, ಹಾಗೂ ಇನ್ನಿತರರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
  • ಜಿಲ್ಲಾ ಆಸ್ಪತ್ರೆಗೆ ಶಾಸಕ ಪಾಟೀಲ್ ಭೇಟಿ

    ಜಿಲ್ಲಾ ಆಸ್ಪತ್ರೆಗೆ ಶಾಸಕ ಪಾಟೀಲ್ ಭೇಟಿ

    ಯಾದಗಿರಿ: ಇಲ್ಲಿನ‌ ಜಿಲ್ಲಾ ಆಸ್ಪತ್ರೆಗೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಗುರುವಾರ ಭೇಟಿ ನೀಡಿ ಅಲ್ಲಿ ನಡೆದಿರುವ ವಿವಿಧ ಕಾಮಗಾರಿಗಳನ್ನು ಮತ್ತು ಆಸ್ಪತ್ರೆ ಕೋಣೆಗಳನ್ನು ಪರಿಶೀಲಿಸಿದರು.

    ಈ ವೇಳೆ ಹಾಜರಿದ್ದ ಮೆಡಿಕಲ್ ಕಾಲೇಜಿನ ಡಿನ್ ಡಾ.ಸಂದೀಪ್ ಅವರು, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಒಳಚರಂಡಿ ಕೆಲಸ, ಕೋಣೆಗಳ ದುರಸ್ತಿ ಸೇರಿದಂತೆಯೇ ವಿವಿಧ ಕೆಲಸಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು.

    ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವ ಮೂಲಕ, ಅವಶ್ಯವಾಗಿ ಬೇಕಾದ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂದು ಡಿನ್ ಸಂದೀಪ್ ಶಾಸಕರಿಗೆ ಹೇಳಿದರು.

    ರೋಗಿಗಳಿಗೆ ತೊಂದರೆಯಾಗದಂತೆಯೇ ಚಿಕಿತ್ಸೆ ನೀಡಬೇಕು. ಇನ್ನೂ ಏನಾದರೂ ಅವಶ್ಯ ಕೆಲಸಗಳು ಆಗಬೇಕಾದರೇ ತಿಳಿಸಿದರೇ ಸೂಕ್ತಕ್ರಮ ತೆಗೆದುಕೊಳ್ಳಲಾಗುವುದೆಂದು ಶಾಸಕರು ಹೇಳಿದರು.

    ಕ್ಯಾಂಟಿನ್ ಉದ್ಘಾಟನೆ: ಇದೇ ವೇಳೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಕ್ಯಾಂಟಿನ್ ಉದ್ಘಾಟಿಸಿದರು.
    ರುಚಿಯಾದ ಮತ್ತು ಗುಣಮಟ್ಟದ ಉಪಹಾರ ನೀಡಬೇಕೆಂದರು.


    ಡಿಎಸ್ ಡಾ. ರೀಜ್ವಾನ್ ಆಫ್ರಿನ್, ವಿವಿಧ ವಿಭಾಗಳ ವೈದ್ಯರು ಮತ್ತು ಸಿಬ್ಬಂದಿ ಇದ್ದರು.

  • ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ, ಮದ್ಯಪಾನ, ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೆ ಸೂಚನೆ

    ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ, ಮದ್ಯಪಾನ, ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೆ ಸೂಚನೆ

    ಯಾದಗಿರಿ : ಜಿಲ್ಲೆಯ ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ 2025ರ ಆಗಸ್ಟ್ 9 ರಿಂದ 13ರ ಮಧ್ಯರಾತ್ರಿ ವರೆಗೆ ನಿಷೇಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ.

    ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ 2025ರ ಆಗಸ್ಟ್ 9 ರಿಂದ 13ರ ವರೆಗೆ ನಡೆಯಲಿರುವ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ದೇವರ ಹೆಸರಲ್ಲಿ ಪ್ರಾಣಿ ಬಲಿ ಅಂದರೆ ಕುರಿ ಮತ್ತು ಕೋಣ ಬಲಿ ಕೊಡುವುದನ್ನು 2025ರ ಆಗಸ್ಟ್ 9 ರಿಂದ 13ರ ವರೆಗೆ ಶ್ರೀ ಹೈಯ್ಯಾಳಲಿಂಗೇಶ್ವರ ದೇವಸ್ಥಾನದ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿ ಈ ಕೆಳಗಿನ ಅಂಶಗಳನ್ನು ಅನುಸರಿಸಲು ಆದೇಶಿಸಿದೆ.

    ಯಾವುದೇ ಕಾರಣಕ್ಕೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ, 2020ರ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ 2025ರ ಆಗಸ್ಟ್ 9 ರಿಂದ 13ರ ವರೆಗೆ ಶ್ರೀ ಹ್ಯೆಯ್ಯಾಳಲಿಂಗೇಶ್ವರ ದೇವಸ್ಥಾನದ 5 ಕಿ.ಮೀ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಶ್ರೀ ಹೈಯ್ಯಾಳಲಿಂಗೇಶ್ವರರ ಜಾತ್ರೆಯಲ್ಲಿ ದೇವರ ಹೆಸರಲ್ಲಿ ಪ್ರಾಣಿ ಬಲಿ ಕೊಡುವುದನ್ನು ನಿಷೇಧಿಸುವ ಸಂಬAಧವಾಗಿ ಈ ಗ್ರಾಮದ ಸುತ್ತಲೂ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಯಾರೂ ಪ್ರಾಣಿಗಳನ್ನು ಗ್ರಾಮದ ಒಳಗಡೆ ತೆಗೆದುಕೊಂಡು ಬರದಂತೆ ತಡೆಹಿಡಿಯಲು ಹಾಗೂ ಬಲಿ ಕೊಡುವುದನ್ನು ಕಡ್ಡಾಯವಾಗಿ ತಡೆಹಿಡಿಯುವಂತೆ ಕ್ರಮ ವಹಿಸಬೇಕು. ಈ ಗ್ರಾಮದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಸಂಬAಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಹೈಯ್ಯಾಳ (ಬಿ) ಇವರಿಗೆ ವಹಿಸಿಕೊಡಲಾಗಿದೆ. ಗ್ರಾಮದಲ್ಲಿ ಸೂಕ್ತ ಪೊಲೀಸ್ ಬಂದೊಬಸ್ತ್ ಒದಗಿಸಲು ಹಾಗೂ ಮುಂಜಾಗೃತ ಕ್ರಮಕೈಗೊಳ್ಳಬೇಕು, ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಯಾದಗಿರಿ ಸಹಾಯಕ ಆಯಕ್ತರು, ಯಾದಗಿರಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕರು, ವಡಗೇರಾ ತಹಸೀಲ್ದಾರರು, ವಡಗೇರಾ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಇವರಿಗೆ ನಿರ್ದೇಶಿಸಿ ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ

    ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ

    ಗುರುಮಠಕಲ್ : ಮತಕ್ಷೇತ್ರದ ಮಾಧ್ವಾರದಂತಹ ಗ್ರಾಮೀಣ ಭಾಗದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ತನ್ನ ಶಾಖೆಯನ್ನು ಆರಂಭಿಸಿದ್ದು, ಸ್ವಾಗತಾರ್ಹ ಈ ಭಾಗದ ಜನರು ಬ್ಯಾಂಕ್ ನ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅವರು ತಿಳಿಸಿದರು.

    ಸಮೀಪದ ಮಾಧ್ವಾರ ಗ್ರಾಮದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನವಾಗಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.

    ಗುರುಮಠಕಲ್ ತಾಲೂಕು ಕೇಂದ್ರದಲ್ಲೇ ಹೆಚ್ ಡಿಎಫ್ ಸಿ ಬ್ಯಾಂಕ್ ಬ್ಯಾಂಕ್ ಶಾಖೆ ಇಲ್ಲ ಅದರಲ್ಲಿ ಮಾಧವಾರ ಗ್ರಾಮದಲ್ಲಿ ಸ್ಥಾಪನೆ ಮಾಡಿದ್ದು ಸಂತಸದ ಸುದ್ದಿ. ಬ್ಯಾಂಕ್ ನ ಸ್ಥಾಪನೆಗೆ ಕಾರಣೀಭೂತರಾದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ನಮ್ಮ ಭಾಗದ ಜನರು ಮುಗ್ಧರು, ಅದರಲ್ಲಿ ಅನಕ್ಷರಸ್ಥರು ಇದ್ದಾರೆ ಅವರಿಗೆ ಬ್ಯಾಂಕ್ ನ ವ್ಯವಹಾರಗಳ ಬಗ್ಗೆ ಮಾಹಿತಿ ಕಡಿಮೆ. ಬ್ಯಾಂಕ್ ಸಿಬ್ಬಂದಿಯವರು ತಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿವರವಾಗಿ ಮಾಹಿತಿ ನೀಡುವ ಮೂಲಕ ಅವರನ್ನು ತಮ್ಮ ಗ್ರಾಹಕರನ್ನಾಗಿ ಮಾಡಿಕೊಳ್ಳಬೇಕು ಇದರಿಂದ ಇಬ್ಬರಿಗೂ ಲಾಭವಾಗುತ್ತದೆ. ಬ್ಯಾಂಕ್ ನ ಸಿಬ್ಬಂದಿ ಗ್ರಾಮೀಣ ಜನರೊಂದಿಗೆ ಉತ್ತಮ ಒಡನಾಟವನ್ನು ಇಟ್ಟುಕೊಂಡು ಜನರಿಗೆ ಸಹಕಾರ ಕೊಡಿ ಎಂದು ಸೂಚಿಸಿದರು. ಎಚ್ ಡಿ ಎಫ್ ಸಿ ಬ್ಯಾಂಕ್ ನ ಅಧಿಕಾರಿಗಳು ಪ್ರತಿ ತಾಲೂಕು ಕೇಂದ್ರಗಳಲ್ಲಿ ತಮ್ಮ ಬ್ಯಾಂಕ್ ಶಾಖೆ ಪ್ರಾರಂಭಿಸುವಂತೆ ಕ್ಲಸ್ಟರ್ ಮುಖ್ಯಸ್ಥರಾದ ರವಿ ಸುರಪುರ ಅವರಿಗೆ ಹೇಳಿದರು.

    ಇದಕ್ಕೂ ಮುನ್ನ ಯಾದಗಿರಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ ಅವರು ಮಾತನಾಡಿ ಮಾಧವಾರ ಗ್ರಾಮದಲ್ಲಿ ಶಾಖೆ ಸ್ಥಾಪನೆ ಮಾಡುವ ಬಗ್ಗೆ ಆರ್ಥಿಕ ವಿಭಾಗದಿಂದಲೇ ಸೂಚನೆ ಬಂದಿತ್ತು. ಹೀಗಾಗಿ ಹೆಚ್ ಡಿಎಫ್ ಸಿ ಅವರು ಕೇವಲ ಒಂದು ತಿಂಗಳ ಕಾಲಾವಧಿಯಲ್ಲೇ ಶಾಖೆ ಸ್ಥಾಪನೆ ಮಾಡಿದ್ದಾರೆ. ಈ ಭಾಗದ ಪ್ರತಿಯೊಬ್ಬರೂ ಖಾತೆ ತೆಗೆದು ಬ್ಯಾಂಕ್ ನ ಲಾಭ ಪಡೆಕೊಳ್ಳುವಂತೆ ಸಲಹೆ ನೀಡಿದರು.

    ಹೆಚ್ ಡಿಎಫ್ ಸಿ ಬ್ಯಾಂಕ್ ನ ಕ್ಲಸ್ಟರ್ ಹೆಡ್ ರವಿ ಸುರಪುರ ಅವರು ಮಾತನಾಡಿ ನಮ್ಮ ಬ್ಯಾಂಕ್ ಭಾರತ ಮಾತ್ರವಲ್ಲ ಪ್ರಪಂಚದಾದ್ಯಂತ ಕಾರ್ಯನಿರ್ವಹಿಸುತ್ತಿದ್ದು ಅಂತರ ರಾಷ್ಟ್ರೀಯ ಬ್ಯಾಂಕ್ ಆಗಿದೆ. ಇತರ ಸೇವೆಗಳಿಗಿಂತ ಗುಣಮಟ್ಟದ ಸೇವೆಯನ್ನು ನೀಡುತ್ತಿದ್ದೇವೆ. ರಾಷ್ಟ್ರ, ರಾಜಧಾನಿ, ಜಿಲ್ಲಾ, ತಾಲೂಕು ಮಾತ್ರವಲ್ಲದೆ ಗ್ರಾಮೀಣ ಭಾಗದಲ್ಲೂ ಶಾಖೆಯನ್ನು ಪ್ರಾರಂಭಿಸಿ ಜನರಿಗೆ ಸೇವೆ ನೀಡುತ್ತಿದ್ದೇವೆ. ಇಲ್ಲಿ ಮನೆ, ಆಸ್ತಿ, ಬೆಳೆ, ವ್ಯಾಪಾರ, ಸೇರಿದಂತೆ ಇತ್ಯಾದಿ ಸೇವೆಗಳನ್ನು ಗ್ರಾಹಕರು ಪಡೆಕೊಳ್ಳಬಹುದು. ಯಾದಗಿರಿ ಜಿಲ್ಲೆಯಲ್ಲಿ ನಮ್ಮ ಬ್ಯಾಂಕ್ ವ್ಯವಹಾರ ಉತ್ತಮವಾಗಿದೆ ಎಂದು ಹೇಳಿದರು.

    ಈ ವೇಳೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷ್ ಕಟಕಟಿ, ಗ್ರಾಪಂ ಅಧ್ಯಕ್ಷ ಶಂಕ್ರಪ್ಪ, ಪಿಡಿಓ ಗಿರಿಮಲ್ಲಣ್ಣ, ವಲಯ ಮುಖ್ಯಸ್ಥರಾದ ರಾಮನಾರಾಯಣ, ಪ್ರಾದೇಶಿಕ ಮುಖ್ಯಸ್ಥರದ ಜಾರ್ಜ ಡಾ.ಕೋಸ್ಟಾ, ಶಾಖಾ ಮುಖ್ಯಸ್ಥರಾದ ಸಂತೋಷ ಕುಮಾರ ಸೇರಿದಂತೆ ಮುಂತಾದವರಿದ್ದರು.

    • ಶಾಸಕ ಕಂದಕೂರ ಜನಪರ ಕಾಳಜಿ ಶ್ಲಾಘನೀಯ

    ಸರಕಾರದ ವಿವಿಧ ಯೋಜನಗಳ ಅಡಿಯಲ್ಲಿ ಜನರಿಗೆ ಮಂಜೂರಾದ ಸಾಲ, ಮತ್ತಿತರ ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬವಾದರೆ ಕೂಡಲೇ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರ ಕರೆ ಬರುತ್ತೆ, ಕೆಲಸ ಆಗುವವರೆಗೂ ಅವರು ನಮ್ಮನ್ನು ಸುಮ್ಮನಿರಲು ಬಿಡುವುದಿಲ್ಲ, ಇಡೀ ಜಿಲ್ಲೆಯ ಎಲ್ಲಾ ಶಾಸಕರಿಗಿಂತಲೂ ಗುರುಮಠಕಲ್ ಶಾಸಕರ ಕರೆಗಳು ಹೆಚ್ಚಿರುತ್ತವೆ. ಇಲ್ಲಿನ ಜನರ ಬಗ್ಗೆ ಅವರಿಗಿರುವ ಕಾಳಜಿ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ ಅವರು ತಿಳಿಸಿದರು.

  • ಗೃಹ ಸಚಿವರಾಗಿ ಅಮಿತ್ ಶಾ ಹೊಸ ದಾಖಲೆ ಸೃಷ್ಟಿ: ಕು.ಲಲಿತಾ ಅನಪುರ.

    ಗೃಹ ಸಚಿವರಾಗಿ ಅಮಿತ್ ಶಾ ಹೊಸ ದಾಖಲೆ ಸೃಷ್ಟಿ: ಕು.ಲಲಿತಾ ಅನಪುರ.

    ಯಾದಗಿರಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ ಹೇಳಿದರು.

    ಅಮಿತ್ ಶಾ ಅವರು ಮೇ 30, 2019 ರಿಂದ ಭಾರತದ ಗೃಹ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗೋವಿಂದ ವಲ್ಲಭ ಪಂತ್ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರ ದಾಖಲೆಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿ ಅವರ 6 ವರ್ಷ 64 ದಿನಗಳ ಹಾಗೂ ಗೋವಿಂದ ವಲ್ಲಭ ಪಂತ್ ಅವರ 6 ವರ್ಷ 56 ದಿನಗಳ ದಾಖಲೆಯನ್ನು ಮುರಿದಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನ ಅವರ ಕೆಲವು ಗಮನಾರ್ಹ ಉಪಕ್ರಮಗಳಾಗಿವೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವಲ್ಲಿ ಶಾ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅಮಿತ್ ಶಾ ಅವರ ನಾಯಕತ್ವದಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಗಮನಾರ್ಹ ಇಳಿಕೆ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಹೆಚ್ಚಳ ಕಂಡುಬಂದಿದೆ.

  • ಸರ್ಕಾರದ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಟಾನಗೊಳಿಸಿ : ಶಾಸಕ ಚೆನ್ನಾರಡ್ಡಿ ಪಾಟೀಲ್

    ಸರ್ಕಾರದ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಟಾನಗೊಳಿಸಿ : ಶಾಸಕ ಚೆನ್ನಾರಡ್ಡಿ ಪಾಟೀಲ್

    ಯಾದಗಿರಿ: ಸರ್ಕಾರದ ಯೋಜನೆಗಳು ವಿವಿಧ ಇಲಾಖೆಗಳಿಂದ ಅನುಷ್ಟಾನಗೊಳ್ಳುತ್ತಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಯಾದಗಿರಿ ಮತಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು, ಶೌಚಾಲಯಗಳು, ಅಡಿಗೆ ಕೋಣೆಗಳು, ಆಟದ ಮೈದಾನ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೂಡ ನೀಡಬೇಕಾಗುತ್ತದೆ  ಎಂದು ಹೇಳಿದರು.

    ಅದಷ್ಟೇ ಅಲ್ಲದೆ, ದುರಸ್ತಿ ಅಥವಾ ಇನ್ನಿತರ ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದ ಶಾಲೆಗಳ ಪಟ್ಟಿ ತಯಾರಿಸಿ, ಶೀಘ್ರದಲ್ಲಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂಬ ಸೂಚನೆಯನ್ನು ಕೂಡ ನೀಡಿದರು.

    ಈ ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿಗಳು  ಮಹಾದೇವ ಬಾಬಳಗಿ,  ಬಸವರಾಜ್ ಶರಬೈ, ಮಲ್ಲಿಕಾರ್ಜುನ ಸಂಗವಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ್ ಐರಡ್ಡಿ ಹಾಗೂ ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಭಾಗವಹಿಸಿದ್ದರು.

  • ಸಮಾಜದ ಶಾಂತಿಗೆ ಪೊಲೀಸರೊಂದಿಗೆ ಸಹಕಾರ ಅಗತ್ಯ : ಎಸ್.ಪಿ ಪೃಥ್ವಿಕ್ ಶಂಕರ್

    ಸಮಾಜದ ಶಾಂತಿಗೆ ಪೊಲೀಸರೊಂದಿಗೆ ಸಹಕಾರ ಅಗತ್ಯ : ಎಸ್.ಪಿ ಪೃಥ್ವಿಕ್ ಶಂಕರ್

    ಸತ್ಯಕಾಮ ವಾರ್ತೆ ಗುರುಮಠಕಲ್:
    ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಪೃಥ್ವಿ‌ಕ್‌  ಶಂಕರ್ ಹೇಳಿದರು.

    ಪಟ್ಟಣದ ಹರಿಜನವಾಡದ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಭೆಯಲ್ಲಿ ಅವರು ಅಧ್ಯಕ್ಷತೆವಹಿಸಿ ಮಾತನಾಡಿದರು.‌  “ರಸ್ತೆ ಸುರಕ್ಷತೆಗಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಮನೆ ಕಳ್ಳತನ ತಪ್ಪಿಸಲು ಸಿಸಿ ಟಿವಿ ಅಳವಡಿಸುವುದು ಉತ್ತಮ. ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಇರಬೇಕಾಗಿದೆ,” ಎಂದು ಅವರು ತಿಳಿಸಿದರು.

    ಅಪರಾಧಗಳನ್ನು ತಡೆಯಲು ಜನರ ಸಹಕಾರ ಅತ್ಯಗತ್ಯವಾಗಿದ್ದು, ದಲಿತ ಸಮುದಾಯದ ಯಾರಿಗಾದರೂ ತೊಂದರೆ ಆಗಿದ್ದರೆ, ಪೊಲೀಸ್ ಇಲಾಖೆ ಅವರ ಪಕ್ಕದಲ್ಲೇ ಇರುತ್ತದೆ. ಕಾನೂನು ಅವರನ್ನು ರಕ್ಷಿಸುವ ಶಕ್ತಿ ಹೊಂದಿದೆ ಎಂದರು.

    ಈ ಸಂಧರ್ಭದಲ್ಲಿ ಪಿ. ಐ. ಈರಣ್ಣ ದೊಡ್ಡಮನಿ, ತಾಲೂಕ ಪಂಚಾಯತ್ ಇ. ಓ. ಅಂಬರೀಷ್ ಪಾಟೀಲ್, ಗ್ರೇಡ್ 2 ತಹಸೀಲ್ದಾರ್ ನರಸಿಂಹಸ್ವಾಮಿ, ಎ.ಎಸ್. ಐ ಭೀಮಶಪ್ಪ ಖಾನಾಗಡ್ಡ, ಶರಣಪ್ಪ ಪಸರ್, ಶಿವರಾಮರೆಡ್ಡಿ, ಶ್ರೀಶೈಲ, ರಾಜುಗೌಡ, ಸೇರಿದಂತೆ ಯುವಕರು ಮುಖಂಡರುಗಳು ಉಪಸ್ಥಿತರಿದ್ದರು.

  • ರಸ್ತೆ ದುರಸ್ಥಿಗೆ ಅಧಿಕಾರಿಗಳ ಮೀನಾಮೇಷ!

    ರಸ್ತೆ ದುರಸ್ಥಿಗೆ ಅಧಿಕಾರಿಗಳ ಮೀನಾಮೇಷ!

    ಲಿಂಗಸುಗೂರು: ಕಳೆದ ಮೂರು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಜಮೀನಿಗೆ ಹೋಗುವ ದಾರಿಗಳು ಸಂಪೂರ್ಣ ಹದಗೆಟ್ಟಿವೆ. ಈ ಹಿನ್ನೆಲೆ ‘ನಮ್ಮ ಹೊಲ, ನಮ್ಮ ದಾರಿ’ ಎಂಬ ರಾಜ್ಯ ಸರ್ಕಾರದ ಯೋಜನೆ ಹೆಸರಿಗಷ್ಟೇ ಉಳಿದಿದೆಯೆಂಬ ಆರೋಪ ರೈತ ಸಮುದಾಯದಿಂದ ಕೇಳಿಬರುತ್ತಿದೆ.

    ನಾಗರಹಾಳ ಗ್ರಾಮದ ಲ್ಯಾಟ್ರಲ್ 8ರ ಸಬ್ ಲ್ಯಾಟ್ರಲ್ 1 ಕಾಲುವೆ ಪಕ್ಕದ ದಾರಿಯಲ್ಲಿ ಸ್ಥಳೀಯ ರೈತರು ಹಾಗೂ ಕೂಲಿಕಾರ್ಮಿಕರು ಪ್ರತಿದಿನವೂ ಪರದಾಡುವಂತಾಗಿದೆ. ಈ ರಸ್ತೆಗೆ ಮರಂ ಹಾಕಿ ದುರಸ್ತಿಗೆ 10 ತಿಂಗಳ ಹಿಂದೆ ಗ್ರಾಮ ಪಂಚಾಯಿತಿಗೆ ಮನವಿ ನೀಡಲಾಗಿದ್ದರೂ ಕಾರ್ಯವಿಲ್ಲ.

    ಗ್ರಾ.ಪಂ ಪಿಡಿಒ ಪ್ರವೀಣ್ ಪಾಟೀಲ ಅವರ ಮಾತಿನಂತೆ, ಈ ರಸ್ತೆಗಾಗಿ ₹5 ಲಕ್ಷ ರೂ. ಯೋಜನೆ ರೂಪಿಸಲಾಗಿತ್ತು, ಆದರೆ ಕಾಮಗಾರಿ ಕೋಲಾಪ್ಸ್ ಆಗಿದೆ ಎಂಬ ಉತ್ತರ ಕೇಳಿಬಂದಿದೆ.

    ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಿಂಗಸುಗೂರು ತಾಲೂಕ ಉಪಾಧ್ಯಕ್ಷ ಭೀಮಪ್ಪ ಎನ್. ಪವಾರ್, ಅಧಿಕಾರಿಗಳು ರಸ್ತೆ ದುರಸ್ಥಿಗೆ ಮುಂದಾಗದಿದ್ದರೆ ನಾವು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ನಕಲಿ ಜಾತಿ ಪ್ರಮಾಣ ಪತ್ರಗಳು ತಡೆಯಲು ಸರ್ಕಾರದ ವಿರುದ್ದ ಹೋರಾಟ- ಮಗ್ದಂಪುರ

    ನಕಲಿ ಜಾತಿ ಪ್ರಮಾಣ ಪತ್ರಗಳು ತಡೆಯಲು ಸರ್ಕಾರದ ವಿರುದ್ದ ಹೋರಾಟ- ಮಗ್ದಂಪುರ

    ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚೆ

    ಯಾದಗಿರಿ: ಮುಂಬರುವ ವಿಧಾನ ಸಭೆ ಅಧಿವೇಶನ ಪ್ರಾರಂಭವಾಗುತ್ತಿದ್ದು ಆ ಅಧಿವೇಶನದಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳು ತೆಗೆದುಕೊಂಡವರ ವಿರುದ್ದ ಕಾನೂನು ಕ್ರಮ ಆಗಬೇಕು ಪರಿಶಿಷ್ಟ ಪಂಗಡ ಮೀಸಲಾತಿಯಿಂದ ಆಯ್ಕೆ ಆದ ಶಾಸಕರು ಅಧಿವೇಶನದಲ್ಲಿ ದ್ವನಿ ಎತ್ತಬೇಕು ಎಂದು ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರಾದ ಮಾರೆಪ್ಪ ನಾಯಕ ಮಗ್ದಂಪುರ ಹೇಳಿದರು.

    ನಗರದ ಜಿಲ್ಲಾ ವಾಲ್ಮೀಕಿ ಭವನದಲ್ಲಿ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪರಿಶಿಷ್ಟ ಪಂಗಡ ಮೀಸಲಾತಿಯಿಂದ ಆಯ್ಕೆಯಾದ ಶಾಸಕರು ವಾಲ್ಮೀಕಿ ಸಮಾಜದ ಬೇಡಿಕೆಗಳಿಗೆ ಸ್ಪಂದನೆ ನೀಡದೆ ತಮ್ಮ ಮುಂದಿನ ರಾಜಕೀಯ ಬಹುಶಃ ಸಲುವಾಗಿ ನಮ್ಮ ಸಮಾಜಕ್ಕೆ ಅನ್ಯಾಯ ಎಸುಗುತ್ತಿದ್ದಾರೆ ಎಂದು ಸಚಿವರು ಹಾಗೂ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ವಾಲ್ಮೀಕಿ ಸಮಾಜದ ವಿವಿಧ ಬೇಡಿಕೆಗಳಾದ ಯಾದಗಿರಿ ನಗರದ ಸರಕಾರಿ ಪದವಿ ಮಹಾವಿದ್ಯಾಲಯ ಹತ್ತಿರ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಸ್ಥಳಕ್ಕೆ ಸಂಬಂಧಿಸಿದ ದಾಖಲಾತಿ ಇದ್ದರೂ ಕೂಡ ಎ ಖಾತಾ ಕೊಡಲು ಸಂಬಂಧಿಸಿದ‌ ನಗರ ಸಭೆ ಅಧಿಕಾರಿಗಳು ನೀಡದೆ ಇರುವುದು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸಚಿವರನ್ನು ನೇಮಿಸದೆ ನಮ್ಮ ಸಮಾಜಕ್ಕೆ ಬರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಆಕಿ ತುಳಿತಕ್ಕೆ ಓಳಗಾದ ಸಮಾಜವನ್ನು ಮೂಲೆ ಗುಂಪು ಮಾಡುತ್ತಿದೆ ಎಂದು ಆರೋಪಿಸಿದರು.

    ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾ ಅಧ್ಯಕ್ಷ ಗೌಡಪ್ಪ ಗೌಡ ಆಲ್ದಾಳ ಮಾತನಾಡಿ ಯಾದಗಿರಿ ನಗರದಲ್ಲಿ ರಾಜ್ಯಾದ್ಯಂತ ನಕಲಿ ಪ್ರಮಾಣ ಪತ್ರಗಳು ವಿತರಣೆ ಆಗುತ್ತಿದ್ದು ಅದನ್ನು ಕೂಡಲೇ ತಡೆಯುವಂತೆ ಅಗಸ್ಟ್ ೧೩ ರಂದು ಯಾದಗಿರಿ ನಗರದಲ್ಲಿ ಬೃಹತ್ ಪ್ರಮಾಣದ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

    ಮುಂಬರುವ ವಿಧಾನ ಸಭೆ ಅಧಿವೇಶನದಲ್ಲಿ ವಾಲ್ಮೀಕಿ ಸಮಾಜದ ಬೇಡಿಕೆಗಳ ಬಗ್ಗೆ ಚರ್ಚೆ ಆಗಬೇಕು ನಕಲಿ ಜಾತಿ ಪ್ರಮಾಣ ಪತ್ರಗಳು ತಡೆಗಟ್ಟಲು ಸೂಕ್ತವಾದ ಕ್ರಮಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾ ಮುಖಂಡರಾದ ಸಿದ್ದಲಿಂಗಪ್ಪ ನಾಯಕ. ಚಂದ್ರಕಾಂತ ಹತ್ತಿಕುಣಿ. ಶರಣಪ್ಪ ಜಾಕನಹಳ್ಳಿ. ಗಂಗಾಧರ ನಾಯಕ. ದೊಡ್ಡಯ್ಯ ನಾಯಕ. ಅಂಬು ನಾಯಕ. ವಾಲ್ಮೀಕಿ ನಾಯಕ ಸಮಾಜದ ತಾಲೂಕ ಅಧ್ಯಕ್ಷರಾದ ಸಾಹೇಬ ಗೌಡ ನಾಯಕ ಗೌಡಗೇರ. ಶಹಪೂರ ತಾಲೂಕ ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ಮರೆಪ್ಪ ಪ್ಯಾಟಿ. ಸುರಪುರ ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಭೀಮನಗೌಡ. ಗುರಮಿಠಕಲ್ ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕಾಶಪ್ಪ ನಾಯಕ. ಶೇಖರ ದೊರೆ. ಮಲ್ಲಿಕಾರ್ಜುನ ಕಟಕಟಿ. ಮಲ್ಲಿಕಾರ್ಜುನ ನಿಲಹಳ್ಳಿ. ಮೋನಪ್ಪ ಹಳಿಗೇರ. ಬಸವರಾಜ ಗೊಂದೆನೂರ. ನಾಗರಾಜ ಪ್ಯಾಪ್ಲಿ. ಚಂದಪ್ಪ ರಾಮಸಮುದ್ರ. ಬಸವರಾಜ ಹತ್ತಿಕುಣಿ. ಭೀಮರಾಯ ರಾಮಸಮುದ್ರ. ಸಿದ್ದಪ್ಪ ಕ್ಯಾಸಪನಳ್ಳಿ. ಲಕ್ಷ್ಮಣ ಜೀನಕೇರಿ. ಸಾಬು ನಿಲಹಳ್ಳಿ. ಪೋಲಪ್ಪ ನಿಲಹಳ್ಳಿ. ಈಶಪ್ಪ ಹೆಡಗಿಮದ್ರಿ. ರವಿ ಜಮಾದಾರ. ಕಾಶಿನಾಥ ನಾನೆಕ್. ಮಲ್ಲೇಶ ನಾಯಕ. ಮೋನಪ್ಪ ಯಾದಗಿರಿ. ಶಿವರಾಜ ಹವಲ್ದಾರ. ಬಂದಪ್ಪ ನಾಯಕ. ರವಿ ಹೊಸ್ಸಳ್ಳಿ. ರಮೇಶ ಯಾದಗಿರಿ‌. ಶ್ರೀನಿವಾಸ ಯಕ್ಷಂತಿ. ದೊಡ್ಡಪ್ಪ ನಾಯಕ. ರವಿಕುಮಾರ. ಅಂಬಣ್ಣ ಗೌಡಗೇರ. ಮಂಜುನಾಥ ಬಳಿಚಕ್ರ. ವಾಲ್ಮೀಕಿ ನಾಯಕ ಸಮಾಜದ ಪದಾಧಿಕಾರಿಗಳು ಇದ್ದರೂ.

  • ರಸಗೊಬ್ಬರ ಇದ್ದರು ಅಂಗಡಿ ಮಾಲೀಕರು ನೀಡುತ್ತಿಲ್ಲ-ರವಿ ನಾಯಕ

    ರಸಗೊಬ್ಬರ ಇದ್ದರು ಅಂಗಡಿ ಮಾಲೀಕರು ನೀಡುತ್ತಿಲ್ಲ-ರವಿ ನಾಯಕ

    ಸುರಪುರ:ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರವಿದ್ದರು ರೈತರಿಗೆ ನೀಡುತ್ತಿಲ್ಲ.ರಸಗೊಬ್ಬರ ಅಂಗಡಿಗಳ ಮಾಲೀಕರು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ.ಆದ್ದರಿಂದ ಇಲಾಖೆಯಿಂದ ಸರಿಯಾದ ತನಿಖೆ ನಡೆಸಿ ತಪ್ಪಿತಸ್ಥ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಆಗ್ರಹಿಸಿದರು.

    ಜಯಕರ್ನಾಟಕ ಜನಪರ ವೇದಿಕೆ ಸಂಘಟನೆ ವತಿಯಿಂದ ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಈಗಾಗಲೇ ರೈತರು ರಸಗೊಬ್ಬರ ಸಿಗದೆ ತುಂಬಾ ತೊಂದರೆ ಪಡುತ್ತಿದ್ದು ಕೃಷಿ ಇಲಾಖೆ ರೈತರ ಸಮಸ್ಯೆಗೆ ಸ್ಪಂದಿಸುವAತೆ ಆಗ್ರಹಿಸಿದರು.

    ಮನವಿ ಸ್ವೀಕರಿಸಿದ ಸಹಾಯಕ ಕೃಷಿ ನಿರ್ದೇಶಕ ಮಾತನಾಡಿ,ರೈತರು ರಸಗೊಬ್ಬರದ ಬದಲಾಗಿ ನ್ಯಾನೋ ರಸಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.ಅಲ್ಲದೆ,ತಾವು ಸಲ್ಲಿಸಿರುವ ಬೇಡಿಕೆಯಂತೆ ರಸಗೊಬ್ಬರ ಮಾರಾಟ ಅಂಗಡಿಗಳಲ್ಲಿ ಏನಾದರು ಅಕ್ರಮ ನಡೆದಿದ್ದರೆ ಅಂತಹ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಸಂಘದ ತಾಲ್ಲೂಕ ಅಧ್ಯಕ್ಷ ಗೋಪಾಲ ನಾಯಕ ಸತ್ಯಂಪೇಟೆ, ಶಿವರಾಜ ಮೊಕಾಸಿ ಸತ್ಯಂಪೇಟೆ,ವಾಸುದೇವ ನಾಯಕ,ಮೌನೇಶ ದಳಪತಿ,ರಾಘವೇಂದ್ರ ಸಗರ,ಬಸವರಾಜ ಪಾಟೀಲ್,ರವಿ ಹುಲಕಲ್,ಮಲ್ಲು ನಾಯಕ,ರವಿಕಿರಣ್ ಹೊಸ ಸಿದ್ದಾಪುರ,ದ್ಯಾವಪ್ಪ ದೇವಿಕೇರಾ,ನಿಂಗಣ್ಣ ದುಸ್ತಾರಿ,ಭೀಮಣ್ಣ ಗಡ್ಡಿಮನಿ, ದೇವು ನಾಯಕ,ಕೃಷ್ಣಾ ನಾಯಕ,ಶಿವಮೂರ್ತಿ ದೀವಳಗುಡ್ಡ,ಬಸಪ್ಪ ಹೆಳವರ,ಮರೆಪ್ಪ ಕೋಮಾರಿ,ಹುಲಿರಾಜ್ ಹುಲಕಲ್,ರಾಘವೇಂದ್ರ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.