Category: State

  • ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಸತ್ಯಕಾಮ ವಾರ್ತೆ ಸುರಪುರ: 

    ಸೇನೆ, ಅರೆ ಸೇನಾಪಡೆ ಮತ್ತು ಮಾಜಿ ಸೈನಿಕರ ಸಂಘ ಸುರಪುರ ವತಿಯಿಂದ ಏರ್ಪಡಿಸಿದ್ದ 26ನೇ ಕಾರ್ಗಿಲ್ ವಿಜಯೋತ್ಸವ ಮತ್ತು ಆಪರೇಷನ್ ಸಿಂಧೂರ ಯಶಸ್ವಿ ಸಮಾರಂಭದಲ್ಲಿ ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಹಾಗೂ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮಿನಾರಾಯಣ ನಾಯಕ ಅವರು ಭಾಗಿಯಾಗಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಗರುಡಾದ್ರಿ ಕಲಾ ಮಂದಿರದ ವರೆಗೆ ನಡೆದ ವಿಜಯೋತ್ಸವ ಯಾತ್ರೆಗೆ ಚಾಲನೆ ನೀಡಿದರು.

    ನಂತರ ಗರುಡಾದ್ರಿ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸೈನಿಕರಿಗೆ ಸನ್ಮಾನಿಸಿ ಗೌರವಿಸಿ ವಿಜಯೋತ್ಸವ ಉದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಾಜಿ ಸೈನಿಕರುಗಳು ಹಾಗೂ ತಾಲೂಕು ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಗ್ಯಾರಂಟಿ ಯೋಜನೆ ಅಧ್ಯಕ್ಷರು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು

  • ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ- ಎಚ್. ಆಂಜಿನೇಯ ವಿರುದ್ಧ ಕ್ರಮಕ್ಕೆ ಕುಳುವ ಮಹಾಸಂಘ ಆಗ್ರಹ

    ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ- ಎಚ್. ಆಂಜಿನೇಯ ವಿರುದ್ಧ ಕ್ರಮಕ್ಕೆ ಕುಳುವ ಮಹಾಸಂಘ ಆಗ್ರಹ

     ಸತ್ಯಕಾಮ ವಾರ್ತೆ ಯಾದಗಿರಿ:

    ಅಲೆಮಾರಿ ಸಮುದಾಯಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಅವರಿಗೆ ರಾಜ್ಯಮಟ್ಟದ ಸಭೆಯಲ್ಲಿ ಉಂಟಾದ ಅವಮಾನ ಹಾಗೂ ಹಲ್ಲೆ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ಮಾಜಿ ಸಚಿವ ಹೆಚ್. ಆಂಜಿನೇಯ ಸೇರಿದಂತೆ ಕೆಲ ರಾಜಕೀಯ ನಾಯಕರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾಸಂಘದ ಜಿಲ್ಲಾಧ್ಯಕ್ಷ ಬಸವರಾಜ ಭಜಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾದ್ಯಕ್ಷ  ಜುಲೈ 5ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ೪೯ ಅಲೆಮಾರಿ ಜಾತಿಗಳ ಸಭೆಯಲ್ಲಿ, ಸಮಾವೇಶಕ್ಕೆ ಆಹ್ವಾನವಿಲ್ಲದೆ ಬಂದಿದ್ದೀರಿ ಎಂದು ಪಲ್ಲವಿ ಅವರನ್ನು ವಾಗ್ದಾಳಿ ನಡೆಸಿ, ಬಳಿಕ ಶಾರೀರಿಕವಾಗಿ ದೌರ್ಜನ್ಯ ನಡೆಸಲಾಗಿದೆ. ಇದೇ ವೇಳೆ ಹೆಣ್ಣು ನಾಯಕರಾಗಿ ಉಪಸ್ಥಿತರಿದ್ದ ಜಿಲ್ಲಾಧ್ಯಕ್ಷೆ ಪ್ರಭಾವತಿ ಕೂಡ ಹಲ್ಲೆಗೆ ಒಳಗಾಗಿದ್ದು, ಅವರ ಮೇಲೆ ದಲ್ಲಾಳಿಗಳು ಮಾಡಿದ ಗುಂಡಾ ಕೃತ್ಯ ಸಮುದಾಯದ ಗೌರವಕ್ಕೆ ಪೆಟ್ಟು ತಂದುಕೊಟ್ಟಿದೆ ಎಂದರು.

    ಅಲೆಮಾರಿ ನಿಗಮದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಾದ್ಯಂತ ಶ್ರಮಿಸಿ, ಎಲ್ಲಾ ೫೧ ಅಲೆಮಾರಿ/ಅರೆ ಅಲೆಮಾರಿ ಜಾತಿಗಳನ್ನು ಸಮಾನವಾಗಿ ಒಗ್ಗಟ್ಟಿಗೆ ತರಲು ಪ್ರಯತ್ನಿಸುತ್ತಿರುವ ಪಲ್ಲವಿ ಅವರ ಬೆಳವಣಿಗೆ ಸಹಿಸದವರ ತಂಡವೇ ಈ ದೌರ್ಜನ್ಯಕ್ಕೆ ಕಾರಣ ಎಂದು ಸಂಘದ ಮುಖಂಡರು ಆರೋಪಿಸಿದ್ದಾರೆ.

    ಈ ಘಟನೆ ಪೂರ್ವನಿಯೋಜಿತ ಪಿತೂರಿಯಾಗಿದ್ದು, ಬೆಂಬಲಿಗರು, ಬಿಜೆಪಿ ಪಕ್ಷದ ಕೆಲವು ಮುಖಂಡರು, ದಲ್ಲಾಳಿಗಳಿಂದ ಇದು ನಡೆದಿರುವುದಾಗಿ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹೈಗ್ರೌಂಡ್ ಠಾಣೆಯಲ್ಲಿ ಏಳ ಮಂದಿ ವಿರುದ್ಧ ಪ್ರಕರಣ ದಾಖಲಾಗಿರುವ ಸಂದರ್ಭದಲ್ಲೂ, ಪ್ರಮುಖ ಆರೋಪಿಗಳನ್ನು ಬಂಧಿಸಲು ಹಿಂಜರಿಯುತ್ತಿರುವ ಸರಕಾರದ ನಿರ್ಲಕ್ಷ್ಯತೆಯನ್ನು ಸಂಘದ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

    ಇನ್ನೂ ಸಂಘದ ಮನವಿಯಲ್ಲಿ, ಹೆಚ್. ಆಂಜಿನೇಯ ಅವರನ್ನು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಿ, ಪಕ್ಷದಿಂದಲೇ ಶಿಸ್ತು ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಲಾಗಿದೆ. ಇಲ್ಲವಾದರೆ ರಾಜ್ಯದಾದ್ಯಂತ ಆಕ್ರೋಶಾತ್ಮಕ ಹೋರಾಟ ಆರಂಭಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

    ಈ ಘಟನೆ, ಅಲೆಮಾರಿ ಸಮುದಾಯದ ಹೆಮ್ಮೆಯ ಮೇಲಿನ ದಾಳಿಯಾಗಿ ಪರಿಗಣಿಸಲ್ಪಡುತ್ತಿದ್ದು, ಅಧಿಕಾರ, ರಾಜಕೀಯ ಮತ್ತು ಸಮುದಾಯ ಆಳವಾದ ಸಂಘರ್ಷದ ಚಿಹ್ನೆಯಾಗಿ ಪರಿಣಮಿಸಿದೆ. ಪಲ್ಲವಿ ವಿರುದ್ಧ ನಡೆದ ಕೃತ್ಯ ಕೇವಲ ರಾಜಕೀಯ ಆರೋಪವಲ್ಲ, ಇದು ಸಮುದಾಯದ ಅವಮಾನವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತಕ್ಷಣ ಸ್ಪಷ್ಟ ಮತ್ತು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಕರ್ನಾಟಕ ಕುಳುವ ಮಹಾಸಂಘ ಆಗ್ರಹಿಸಿದೆ.

    ಈ ಸಂದರ್ಭದಲ್ಲಿ ರಾಜ್ಯ  ಮುಖಂಡ ಭೀಮರಾಯ ರಂಗAಪೇಠ, ಶಿವಪ್ಪ ಭಜಂತ್ರಿ, ಯಲಸತ್ತಿ, ಆಂಜನೇಯ ಭಜಂತ್ರಿ ಮಸ್ಕನಳ್ಳಿ, ಖಂಡಪ್ಪ ಭಜಂತ್ರಿ ಸುರಪುರ, ಹಣಮಂತ ಭಜಂತ್ರಿ ಗೋಗಿ, ಬಸವರಾಜ ಭಜಂತ್ರಿ ಶಿವಪುರ,   ಆನಂದ ಭಜಂತ್ರಿ ಗೋಪಳಾಪುರ,  ಸಾಬಣ್ಣ ಭಜಂತ್ರಿ ಗಣಪುರ, ಸಂತೋಷ ಭಜಂತ್ರಿ ಮದ್ರಿಕಿ, ರಮೇಶ ಭಜಂತ್ರಿ ಗೋಗಿ, ಗಂಗಪ್ಪ ಭಜಂತ್ರಿ ಅರಕೇರಾ, ಬಸವರಾಜ ಚಟ್ನಳ್ಳಿ,   ಶಂಕರ್ ಭಜಂತ್ರಿ ಹೊಸಕೇರಾ, ಆಶಪ್ಪ ಭಜಂತ್ರಿ ಅರಕೇರಾ ಸೇರಿ ಅನೇಕರಿದ್ದರು.

  • ಕಾಣೆಯಾದ ಯುವಕನ ಪತ್ತೆಗೆ ಮನವಿ

    ಕಾಣೆಯಾದ ಯುವಕನ ಪತ್ತೆಗೆ ಮನವಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಯಾದಗಿರಿ ನಗರದ ಮದನಪೂರಗಲ್ಲಿ 19 ವರ್ಷದ ಮಹ್ಮದ ಫರೀದ 2025ರ ಜುಲೈ 20 ರಂದು ಕಾಣೆಯಾದ ಹಿನ್ನೆಲೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ ಎಂದು ಯಾದಗಿರಿ ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕರು (ಕಾ.ಸು) ಮಂಜನಗೌಡ ಅವರು ತಿಳಿಸಿದ್ದಾರೆ.

    ಕಾಣೆಯಾದ ಪುರುಷ ನಾವು ಎಲ್ಲರು ಮನೆಯಲ್ಲಿದ್ದಾಗ ಮಧ್ಯಾಹ್ನ 12 ಗಂಟೆಗೆ ಮನೆಯಿಂದ ಹೇಳದೆ ಕೇಳದೇ ಮನೆಯಿಂದ ಹೊರಟು ಹೋದವ ಸಂಜೆ ಮನೆಗೆ ಬರದ ಹಿನ್ನೆಲೆ ಅಂದು ಯಾದಗಿರಿ ನಗರದಲ್ಲಿ ಎಲ್ಲಾ ಕಡೆ ಹುಡಿಕಾಡಲಾಯಿತು ಯಾವುದೇ ಇರುವಿಕೆ ಮಾಹಿತಿ ಸಿಕ್ಕಿರುವುದಿಲ್ಲ, ನಂತರ ನಮ್ಮ ಸಂಬಂಧಿಕರ ಮನೆ ಮೊಬೈಲ್ ಕರೆ ಮಾಡಿ ವಿಚಾರಿಸಲಾಯಿತ್ತು, ಯಾವುದೇ ಇರುವಿಕೆ ಮಾಹಿತಿ ಬಗ್ಗೆ ಮಾಹಿತಿ ಸಿಕ್ಕಿರುವುದಿಲ್ಲ ಪುರುಷ ಪತ್ತೆಯಾದಲ್ಲಿ ದೂ.ಸಂ.8147067300ಗೆ ಯಾದಗಿರಿ ಕಂಟ್ರೋಲ್ ರೂಂ.ದೂ.ಸಂ. 98480803600, ಯಾದಗಿರಿ ದೂ.ಸಂ.08473 253738 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ರಫ್ತು ಉತ್ತೇಜನೆಗೆ MSME ಕಾರ್ಯಾಗಾರ ಜು.29 ರಂದು

    ರಫ್ತು ಉತ್ತೇಜನೆಗೆ MSME ಕಾರ್ಯಾಗಾರ ಜು.29 ರಂದು

    • ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ : ಕಾಸಿಯಾ

    ಸತ್ಯಕಾಮ ವಾರ್ತೆ ಯಾದಗಿರಿ:

    ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಮತ್ತು ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರದ ಸಹಯೋಗದಲ್ಲಿ, “ರಫ್ತು, ಲೀನ್ ಯೋಜನೆ ಮತ್ತು ಝಡ್ ಪ್ರಮಾಣೀಕರಣ” ಕುರಿತ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇದೇ 29 ರಂದು ನಗರದ ಎಸ್.ಡಿ.ಎನ್. ರೆಸಿಡೆನ್ಸಿ (ಸರ್ಕಾರಿ ಪದವಿ ಕಾಲೇಜು ಹತ್ತಿರ)ನಲ್ಲಿ ಬೆಳಿಗ್ಗೆ 10.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಸಿಯಾ ಅಧ್ಯಕ್ಷ ಬಿ.ಆರ್. ಗಣೇಶ್ ರಾವ್ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಕಾರ್ಯಕ್ರಮವು ಎಂ.ಎಸ್.ಎಂ.ಇ.ಗಳ ಸ್ಪರ್ಧಾತ್ಮಕತೆ, ಉತ್ಪಾದನಾ ದಕ್ಷತೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಸ್ಥಿರತೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಭಾರತ ಸರ್ಕಾರದ ವಾಣಿಜ್ಯ ಇಲಾಖೆ ಪ್ರೇರಿತ ಡಿಸ್ಟ್ರಿಕ್ಟ್ಸ್ ಅಸ್ ಎಕ್ಸ್ಪೋರ್ಟ್ ಹಬ್ಸ್ (DEH) ಉಪಕ್ರಮವು ಜಿಲ್ಲೆಯ ಮಟ್ಟದಲ್ಲಿ ರಫ್ತು ಉತ್ತೇಜನ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಚಟುವಟಿಕೆ ಬೆಳೆಸುವ ಗುರಿ ಹೊಂದಿದ್ದು, ಈ ಕಾರ್ಯಗಾರವೂ ಅದಕ್ಕೆ ಅನುಗುಣವಾಗಿದೆ ಎಂದರು.

    ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಉದ್ಘಾಟನೆ ನೆರವೇರಿಸಲಿದ್ದು, ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

    ಅತಿಥಿಗಳಾಗಿ ವಿ.ಟಿ.ಪಿ.ಸಿ. ಕಲಬುರಗಿ ಶಾಖಾ ಕಛೇರಿ ಸಹಾಯಕ ನಿರ್ದೇಶಕ ಜಾಫರ್ ಖಾಸಿಂ ಅನ್ಸಾರಿ, ಯಾದಗಿರಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೆಶಕ ಬಿ. ಸತೀಶ್‌ಕುಮಾ‌ರ್, ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ದಿನೇಶ್ ಕುಮಾರ್ ಜೈನ್, ರೈಸ್ ಮಿಲ್ ಅಸೋಸಿಯೇಶನ್ ಯಾದಗಿರಿ ಅಧ್ಯಕ್ಷ ಹನುಮದಾಸ್ ಮುಂದಡಾ, ಸುರಪುರ ಕೈಗಾರಿಕೆಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಚೆಟ್ಟಿ, ಯಾದಗಿರಿ ಜಿಲ್ಲಾ ಹತ್ತಿ ಜಿನ್ನಿಂಗ್ ಮಿಲ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಗುರು ಮಣಿಕಂಟ ಭಾಗವಹಿಸಲಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಎಂ.ಎಸ್.ಎಂ.ಇ.ಗಳಿಗೆ ಉತ್ಪಾದನಾ ವೆಚ್ಚ ಕಡಿತ, ಗುಣಮಟ್ಟ ಸುಧಾರಣೆ ಮತ್ತು ಸಾಮರ್ಥ್ಯ ವೃದ್ಧಿಗೆ ನೆರವಾಗುವಂತೆ ರೂಪಿಸಲಾದ ಲೀನ್ ತಂತ್ರಗಳ ಕುರಿತು. ಹಾಗೂ ಶೂನ್ಯ ದೋಷ, ಶೂನ್ಯ ಪರಿಸರ ಹಾನಿಯತ್ತ ಎಂ.ಎಸ್.ಎಂ.ಇ.ಗಳನ್ನು ಒತ್ತಾಯಿಸುವ ಚಟುವಟಿಕೆ. ಮೌಲ್ಯಮಾಪನ, ತಾಂತ್ರಿಕ ಸಹಾಯ ಹಾಗೂ ಉತ್ತಮ ತಂತ್ರಗಳನ್ನು ಅಳವಡಿಸಲು ಝಡ್ ಪ್ರಮಾಣೀಕರಣ ಬಗ್ಗೆ ಮಾಹಿತಿ ಹಾಗೂ ಸ್ಥಳದಲ್ಲೇ ನೋಂದಣಿ ಸೌಲಭ್ಯವೂ ಲಭ್ಯವಿರುತ್ತದೆ. ಹೀಗಾಗಿ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.

  • ಕಾರ್ಯನಿರತ ಪತ್ರಕರ್ತ ಸಂಘದಿಂದ ಜಿಲ್ಲಾಧಿಕಾರಿಗೆ ಸನ್ಮಾನ.

    ಕಾರ್ಯನಿರತ ಪತ್ರಕರ್ತ ಸಂಘದಿಂದ ಜಿಲ್ಲಾಧಿಕಾರಿಗೆ ಸನ್ಮಾನ.

    ಸತ್ಯಕಾಮ ವಾರ್ತೆ ಯಾದಗಿರಿ : 

    ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಹರ್ಷಲ್ ಬೋಯರ್ ಅವರನ್ನು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಇಂಧುದರ ಸಿನ್ನೂರ್ ಅವರ ನೇತೃತ್ವದಲ್ಲಿ ಕಚೇರಿಗೆ ಭೇಟಿ ನೀಡಿ ಸನ್ಮಾನಿಸಲಾಯಿತು.

    ಜಿಲ್ಲೆಯ ಹಲವು ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಇನ್ನಿತರ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಿಸಿ ಸಾರ್ವಜನಿಕರ ಅನುಕೂಲತೆಗೆ ಪರಿಹಾರ ನೀಡುವ ಭರವಸೆ ಜಿಲ್ಲಾಧಿಕಾರಿ ನೀಡಿದರು. ಈ ಸಂಧರ್ಭದಲ್ಲಿ ವಾರ್ತಾಧಿಕಾರಿ ಸುಲೇಮಾನ್ ನಾಧಾಫ್ ಹಿರಿಯ ಪತ್ರಕರ್ತರಾದ ಸಂಜೀವ್ ರಾವ್ ಕುಲಕರ್ಣಿ,ಶರಣು ಗೊಬ್ಬುರ್,ಎಸ್.ಎಸ್ ಮಠ್, ಆನಂದ್ ಎಮ್ ಸೌದಿ, ಹಣಮಂತು ಪಿ,ಅಂಬರೀಷ್ ಬಿಳಾರ್, ಆನಂದ ಗೊರ್ಕಲ್, ಎಸ್ ಎಸ್ ನಾಯಕ್, ಡಾ, ಭೀಮರಾಯ ಲಿಂಗೇರಿ, ನಾಗಪ್ಪ ಮಾಲಿ ಪಾಟೀಲ್, ರಫೀಕ್ ಸಾಬ್, ಅಮೀನ್ ಹೊಸೂರ್, ವಿಜಯಭಾಸ್ಕರ್ ರಡ್ಡಿ, ಸಾಗರ ದೇಸಾಯಿ, ರವಿರಾಜ್ ಕಂದಳ್ಳಿ, ರಾಜು ನಳ್ಳಿಕರ್, ಕುದಾನ್ ಸಾಬ್, ಶಿವಕುಮಾರ್, ಪರಶುರಾಮ್, ರೂಪೇಶ್ ಹುಲಿಕರ್, ಲಕ್ಷ್ಮಿ ಕಾಂತ್ ಲಿಂಗೇರಿ, ಎಮ್ ಡಿ ರಫೀಕ್, ಮಹೇಶ್ ಗಣೇರ್, ಶರಬು ನಾಟೆಕರ್, ಆಂಜನೇಯ ದೇವರಮನಿ, ಮಲ್ಲು ಕಾಮರಡ್ಡಿ,ಅರುಣ್ ಮಾಸ್ತರ್, ನಾಗರಾಜ, ಸುಧೀರ್ ಕೋಟೆ, ಸೇರಿದಂತೆ ಇನ್ನಿತರ ಪತ್ರಕರ್ತರು ಭಾಗವಹಿಸಿದ್ದರು.

  • ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ

    ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ

    ಸತ್ಯಕಾಮ ವಾರ್ತೆ ಯಾದಗಿರಿ : 

    ವಿಶೇಷ ಚೇತನರಲ್ಲಿರುವ ಆತ್ಮಶಕ್ತಿ ಅತ್ಯಂತ ಮಹತ್ವದ್ದಾಗಿದ್ದು, ಅದರಿಂದಲೇ ಅವರು ಸಮಾಜದಲ್ಲಿ ಅತ್ಯಂತ ಗೌರವದಿಂದ ಬದುಕುವಂತಾಗಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

    ಗುರುಮಠಕಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆರ್‌ಪಿಡಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಗ್ರಾಮೀಣ ಹಾಗೂ ನಗರ ಅಂಗವಿಕಲರ ಪುನರ್ವಸ್ಥಿತಿ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ೨೦೧೬ ಅರಿವು ವಿಕಲಚೇತನ ಹಾಕುತ್ತಾಯಿ ಸಮಾವೇಶ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ಅವರಲ್ಲಿ ಆತ್ಮಸ್ಥೆರ್ಯ ತುಂಬುವ ಕೆಲಸವಾಗಬೇಕಿದೆ ಎಂದು ತಿಳಿಸಿದರು.

    ಅಂಗವೈಕಲ್ಯ ಶಾಪವಲ್ಲ. ಅದು ಆಕಸ್ಮಿಕವಾಗಿ ಹುಟ್ಟಿನಿಂದ ಬರುತ್ತದೆ. ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ವಿಶ್ವಾಸ ಹಾಗೂ ಅತ್ಮಸ್ಥೆöÊರ್ಯ ತುಂಬಿ ಇತರರಂತೆ ಬದುಕಲು ಅವಕಾಶ ನೀಡಬೇಕು ಎಂದರು.

    ಗುರುಮಠಕಲ್ ಖಾಸಮಠದ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಜಿಗಳು, ಸಾನ್ನಿಧ್ಯವಹಿಸಿದ್ದರು. ಆರ್.ಪಿ.ಡಿ ಕಾಯ್ದೆ ಕುರಿತು ನಾಗಪ್ಪಜಿ ಅವಟಿ ಉಪನ್ಯಾಸ ನೀಡಿದರು.

    ಎಲೇರಿಯ ವಿಕಲಚೇತನ ಸಂಘಕ್ಕೆ ೧೫೦೦೦೦ ಸಾವಿರ ಚೆಕ್ ವಿತರಣೆ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಗುರುಮಠಕಲ್ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ್ ನಜರಾಪುರ್ ಉಪಾಧ್ಯಕ್ಷರಾದ ರೇಣುಕಾ ಪಡಿಗೆ, ಭಾರತಿ ದಂಡೋತಿ ತಹಸೀಲ್ದಾರ ಶಾಂತಗೌಡ ಬಿರಾದಾರ್, ಇಒ ಅಮರೇಶ್ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಹನುಮಂತರೆಡ್ಡಿ ಎಪಿಡಿ ಸಂಸ್ಥೆ ಯಾದಗಿರಿ ವ್ಯವಸ್ಥಾಪಕರಾದ ಸಂಪ್ರಿತ ದೇವಪುತ್ರ ಸಂತೋಷ್ ನಿರೇಟಿ ತಾಲೂಕ ನೌಕರ ಸಂಘದ ಅಧ್ಯಕ್ಷರು ಗುರುಮಟ್ಕಲ್, ಉಮಾ ನಾಯಕ್ ಅಧ್ಯಕ್ಷರು ಆರ್ ಪಿ ಡಿ ಟಾಸ್ಕ್ ಪೋರ್ಸ್ ಯಾದಗಿರಿ ಸೇರಿದಂತೆ ಇತರರಿದ್ದರು.

  • ಸ್ವಚ್ಛತಾ ಅಭಿಯಾನಕ್ಕೇ ಸಾರ್ವಜನಿಕರು ಕೈಜೋಡಿಸಬೇಕು: ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ

    ಸ್ವಚ್ಛತಾ ಅಭಿಯಾನಕ್ಕೇ ಸಾರ್ವಜನಿಕರು ಕೈಜೋಡಿಸಬೇಕು: ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ

    ಸತ್ಯಕಾಮ ವಾರ್ತೆ ಯಾದಗಿರಿ:
    ನಗರ ಸ್ವಚ್ಛ ಇದ್ದರೇ ಪರಿಸರ ಚೆನ್ನಾಗಿ ಇರುತ್ತದೆ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸ್ವಚ್ಛತೆ ಮೊದಲ ಆದ್ಯತೆ ನೀಡಿ, ಪ್ಲಾಸ್ಟಿಕ್ ಬಳಕೆ ನಿಷೇದಿಸಿ ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು.

    ನಗರಸಭೆ ವತಿಯಿಂದ ಮಂಗಳವಾರ ನಗರದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಅಭಿಯಾನ ಹಾಗೂ ಪ್ಲಾಸ್ಟಿಕ್ ನಿಷೇಧದ  ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ‌ ಮಾತನಾಡಿದರು. 
    ಸಾರ್ವಜನಿಕರು ಈ ಕೆಲಸಕ್ಕೆ ಕೈಜೋಡಿಸಿದಾಗ ಇದು ಯಶಸ್ಸಿಯಾಗುತ್ತದೆ. ಕೇವಲ ನಗರಸಭೆಯಿಂದ ಮಾತ್ರ ಸಾಧ್ಯವಿಲ್ಲ. ಸ್ವಯಃ ಪ್ರೇರಿತರಾಗಿ ಜನರು ಇದಕ್ಕೆ ಮುಂದಾಗಬೇಕೆಂದರು.

    ಪ್ರತಿಯೊಬ್ಬರು ತಮ್ಮ ಮನೆ ಮತ್ತು ಮನೆ ಮುಂದಿನ ಸ್ಥಳ ಶುಚಿ ಇಟ್ಟುಕೊಳ್ಳಬೇಕೆಂದರು. 
    ಕಸ ವಿಲೇವಾರಿಗೆ ಮನೆ ಬಾಗಿಲಿಗೆ ವಾಹನ ಬರುತ್ತವೆ. ಆಗ ಮಾತ್ರ ಕಸ ಅದರಲ್ಲಿ ಹಾಕಿ. ಎಲ್ಲೆಂದರಲ್ಲಿ ಕಸ ಹಾಕುವುದರಿಂದಲೇ ಪರಿಸರ ಹಾಳಾಗುತ್ತಿದೆ ಎಂದು ಅನಪುರ ವಿಷಾದ ವ್ಯಕ್ಯಪಡಿಸಿದರು. ಜನರೊಂದಿಗೆ ನಗರಸಭೆ ಇದೆ. ನೀವು ಅಷ್ಠೆ, ನಮ್ಮೊಂದಿಗೆ ಈ ಕೆಲಸಕ್ಕೇ ಕೈ ಜೋಡಿಸಿರಿ ಎಂದರು.
    ನಗರಸಭೆ ಸದಸ್ಯರಾದ ಮಂಜುನಾಥ್ ದಾಸನಕೇರಿ, ಹನುಮಂತ ನಾಯಕ್, ಪೌರಾಯುಕ್ತಾರು ಉಮೇಶ್ ಚವ್ಹಾಣ್, ಪರಿಸರ ಅಭಿಯಂತರ ಪ್ರಶಾಂತ, ಕಂದಾಯ ಅಧಿಕಾರಿ ಮಲ್ಲಿಕಾರ್ಜುನ, ಆರೋಗ್ಯ ನಿರಿಕ್ಷಕ ಪ್ರಶಾಂತ, ಸಿದ್ದಾರ್ಥ, ರಮೇಶ, ಶಂಭುಲಿಂಗ ಸೇರಿದಂತೆ ಮತ್ತಿತರರು ಇದ್ದರು
    —-
  • ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

    ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

    ಸತ್ಯಕಾಮ ವಾರ್ತೆ ವಡಗೇರಾ:

    ಡಾ. ಮಲ್ಲಿಕಾರ್ಜುನ್ ಖರ್ಗೆ ಜಿ ರವರು ದೇಶ ಕಂಡ ಧೀಮಂತ ನಾಯಕ ಕಲ್ಯಾಣ ಕರ್ನಾಟಕ ಭಾಗಕ್ಕೆ  ಜೆ 371  ಕಲಾಂ ಜಾರಿಗೆ ತರುವ ಮೂಲಕ ಈ ಭಾಗದ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಸಾಬಣ್ಣ ಹಂಚಿನಾಳ ಹೇಳಿದರು.
    ತಾಲೂಕಿನ ಕಾಡಮಗೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ. ಮಲ್ಲಿಕಾರ್ಜುನ್ ಖರ್ಗೆ ರವರ  83 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಾಖಲೆಯ ಹತ್ತು ಬಾರಿ ಶಾಸಕರಾಗಿ, ಮೂರು ಬಾರಿ ಸಂಸದರಾಗಿ, ಕೇಂದ್ರ, ರಾಜ್ಯ ಸಚಿವರಾಗಿ, ರಾಜ್ಯಸಭೆ, ಲೋಕಸಭೆ, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕರಾಗಿ ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿದ ಏಕೈಕ ವ್ಯಕ್ತಿ ಅಂದರೆ ತಪ್ಪಾಗಲಾಗದು ದೇವರು ಅವರಿಗೆ ಇನ್ನಷ್ಟು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಈ ಸಮಯದಲ್ಲಿ ಹಾರೈಸಿದರು.
    ಅವರ ಅಭಿಮಾನಿಗಳು  ಕೇಕ್ ಕತ್ತರಿಸಿ. ಮಲ್ಲಿಕಾರ್ಜುನ್ ಖರ್ಗೆ ಜಿ ರವರ ಬ್ಯಾನರ್ ಗೆ ಹಾಲಿನ ಅಭಿಷೇಕ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
    ಈ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್  ಮುಖಂಡರುಗಳಾದ ಚಂದ್ರಶೇಖರ್ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ, ದೊಡ್ಡಪ್ಪ ಕಾಡಮಗೇರಾ, ನಾಗಪ್ಪ ಉಲ್ಟಿ ,ಮಲ್ಲು ಯಾದವ್, ರೆಡ್ಡಿ ಆನೂರ, ಹಣಮಂತ ನಾಟೇಕಾರ,  ದೇವೇಂದ್ರಪ್ಪ ದೊರೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು​.
  • ರಕ್ತದಾನ ಮಾಡಿ ಜೀವ ಉಳಿಸಿ : ಪಂಪನಗೌಡ ಕರೆ

    ರಕ್ತದಾನ ಮಾಡಿ ಜೀವ ಉಳಿಸಿ : ಪಂಪನಗೌಡ ಕರೆ

    ಸತ್ಯಕಾಮ ವಾರ್ತೆ ಯಾದಗಿರಿ:

    ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬೇಕೆಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಪಂಪನಗೌಡ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

    ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನುಮ ದಿನವನ್ನು ಆಚರಿಸಿ, ರಕ್ತದಾನ ಶಿಬಿರಕ್ಕೆ‌ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ರಕ್ತಹಿನತೆಯಿಂದ ಬಳಲುವವರ ಸಂಖ್ಯೆ ಅಧಿಕವಾಗಿದೆ. ಅನಾರೋಗ್ಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೂ ರಕ್ತದ ಕೊರತೆ ಇದ್ದು, ಈ ಮೂಲಕ ರಕ್ತದಾನ ಶಿಬಿರ ಆಯೋಜಿಸಿ ಅನುಕೂಲ ಮಾಡಿಕೊಡಲಾಗುವುದೆಂದರು.
    ರಕ್ತ ನೀಡುವುದರಿಂದ ಹೊಸ ರಕ್ತ ಉತ್ಪತ್ತಿಯಾಗಿ ಮನುಷ್ಯನಿಗೆ ಹೊಸ ಚೈತನ್ಯ ಬರುತ್ತದೆ. ಹೀಗಾಗಿ ರಕ್ತ ನೀಡಲು ಹಿಂಜರಿಕೆ ಮಾಡಬಾರದೆಂದು ಪಂಪನಗೌಡ ಹೇಳಿದರು.

    ಈ‌ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಬಸ್ಸುಗೌಡ ಬಿಳ್ಹಾರ್, ಮಲ್ಲಣ್ಣ ದಾಸನಕೇರಿ, ಅನೀಲ್ ಹೆಡಗಿಮದ್ರಿ, ಮರೆಪ್ಪ ಬಿಳ್ಹಾರ್, ಮಲ್ಲಿಕಾರ್ಜುನ ಈಟೆ,ಸುರೇಶ ಮಡ್ಡಿ, ತಿಮ್ಮಣ್ಣ ನಾಯಕ, ಸಾಬಣ್ಣ ಬಾಡಿಯಾಳ್,ಮಲ್ಲಯ್ಯ ಕಸಬಿ, ಬಸವರಾಜ ಬುಡಯಿ,ಗುರುನಾಥ ರೆಡ್ಡಿ,ಬಾಪು ಗೌಡ ಮಾಚನೂರ್, ಮೈನುದ್ದೀನ್ ಮಿರ್ಚಿ, ಸೋಮಶೇಖರ ಮಸಕನಳ್ಳಿ ಶರಣಗೌಡ ಮಾಲಿಪಾಟೀಲ್. ಅಮರೇಶ ಜಾಕಾ, ಜಿಲ್ಲಾ‌ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸಂಜೀವಕುಮಾರ ರಾಯಚೂರಕರ್, ತಾಲೂಕು‌ ಆರೋಗ್ಯ ಅಧಿಕಾರಿ ಡಾ. ಹಣಮಂತರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು‌.
    ಸುಮಾರು 25 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

  • ಸಂಭ್ರಮದಿಂದ ಹೈಯ್ಯಾಳಲಿಂಗೇಶ್ವರ ಹಾಲಂಬಲಿ ಹಬ್ಬ ಆಚರಣೆ

    ಸಂಭ್ರಮದಿಂದ ಹೈಯ್ಯಾಳಲಿಂಗೇಶ್ವರ ಹಾಲಂಬಲಿ ಹಬ್ಬ ಆಚರಣೆ

    ಸತ್ಯಕಾಮ ವಾರ್ತೆ ವಡಗೇರಾ:

    ತಾಲೂಕಿನ ಹೈಯ್ಯಾಳ .ಬಿ ಗ್ರಾಮದ ಸಗರನಾಡಿನ ಆರಾಧ್ಯ ದೈವ ಶ್ರೀ ಹೈಯ್ಯಾಳಲಿಂಗೇಶ್ವರ ಹಾಲಂಬಲಿ ಹಬ್ಬದ ಕಾರ್ಯಕ್ರಮ ರವಿವಾರ ಸಂಜೆ ದೇವಸ್ಥಾನದ ಆವರಣದಲ್ಲಿ ಅತ್ಯಂತ ಸಂಭ್ರಮದಿಂದ ಜರುಗಿತು.

    ನೂಲ ಹುಣ್ಣಿಮೆಯ ಮುಂಚಿತವಾಗಿ ಹಾಲಂಬಲಿ ಹಬ್ಬ ಆಚರಿಸಿದ ದಿನದಿಂದಲೇ ಭಕ್ತರು 21 ದಿನಗಳ ಕಾಲ ವ್ರತ ಆರಂಭಿಸುವುದು ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬಂದಿರುವ ಪದ್ಧತಿಯಾಗಿದೆ ವೃತ ಹಿಡಿಯುವ ಭಕ್ತರು ದಿನನಿತ್ಯ ಸಾಯಂಕಾಲ ಹೈಯ್ಯಾಳ ಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಿಸುವ ಸಂಪ್ರದಾಯವನ್ನು ಮಹಿಳೆಯರು ಮುಂದುವರಿಸಿಕೊಂಡು ಬರುತ್ತಿದ್ದಾರೆ.

    ಊರಿನ ಮತ್ತು ಸುತ್ತಮುತ್ತಲು ಗ್ರಾಮದ ಕುರಿಗಾಯಿಗಳು ತಮ್ಮ ಕುರಿಗಳನ್ನು ದೇವಸ್ಥಾನದ ಮುಂದೆ ಕರೆತರುವುದರ ಜೊತೆಗೆ ಕುರಿ ಕಾಯುವವರು ಪ್ರತಿ ವರ್ಷ ಹೊಸದಾದ ಕೋಲುಗಳನ್ನು ತಂದು ಹೊಸ ಮಣ್ಣಿನ ಗಡಿಗೆಯಲ್ಲಿ ಕುರಿ ಹಾಗೂ ಆಕಳು ಹಾಲು ತುಂಬಿಸಿ ಗರ್ಭಗುಡಿಯ ಮುಂದೆ ಕೋಲುಗಳನ್ನು ಇಟ್ಟು ಪೂಜೆ ಸಲ್ಲಿಸಿ ಕುರಿಗಳಿಗೆ ಯಾವುದೇ ರೀತಿಯ ರೋಗ ರುಜಿನೆ ಬಾರದಿರಲಿ ಕುರಿಗಳ ಸಂತತಿಯು ಸಮೃದದ್ಧಿಯಾಗಿರಲಿ ನಾಡಿನಾದ್ಯಂತ ಉತ್ತಮ ಮಳೆ ಬೆಳೆಯಾಗಲಿ ಎಂದು ಹೈಯಾಳಲಿಂಗೇಶ್ವರರಲ್ಲಿ ಬೇಡಿಕೊಂಡು ಏಳು ಕೋಟಿಗೆ ಏಳು ಕೋಟಿಗೆ ಅಂತಾ ಘೋಷಣೆ ಕೂಗಿ ಹಾಲು ಭಂಡಾರವನ್ನು ಮಿಶ್ರಣ ಮಾಡಿ ಗುಡಿಯ ಸುತ್ತಲೂ ಕುರಿಗಳ ಮೇಲೆ ಚರಗ ಚೆಲ್ಲಿ ಚಿಕ್ಕ ಮಕ್ಕಳನ್ನು ಬೆಕ್ಕುಗಳಾಗಿ ಮಾಡಿ ಅವರಿಗೆ ಹಾಲು ಕುಡಿಸುವುದು ತುಂಬಾ ವಿಶೇಷವಾಗಿದೆ ಮೂಲಕ ಈ ಹಾಲು ಹಬ್ಬವನ್ನು ಭಕ್ತರೆಲ್ಲರೂ ಸೇರಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ .ಭಂಡಾರ ಹಾಲು, ಪ್ರಕೃತಿ ಸಮೃದ್ಧಿಯ ಸಂಕೇತವಾಗಿವೆ ನಾಡಿನ ತುಂಬಾ ಉತ್ತಮ ಮಳೆ ಬೆಳೆ ಆರೋಗ್ಯ ಸಮೃದ್ಧಿಗಾಗಿ ಪ್ರತಿವರ್ಷ ಆಚರಿಸುವ ಹಬ್ಬವೇ ಹಾಲಹಬ್ಬ ಎಂದು ಹಿರಿಯರು ಹೇಳುತ್ತಾರೆ.

    ಹೈಯ್ಯಾಳ ಲಿಂಗೇಶ್ವರ ಜಾತ್ರೆಯು ನೂಲು ಹುಣ್ಣಿಮೆಯ ದಿನ ಜರಗುವ ಜಾತ್ರೆಯೆಂದು 21 ದಿನಗಳ ವ್ರತ ಮುಕ್ತಾಯಗೊಳಿಸಿ ಅಂದು ಮಹಿಳೆಯರು ಮನೆಯಲ್ಲಿ ನೈವೇದ್ಯ ರೂಪದಲ್ಲಿ ಹೋಳಿಗೆ ಕರ್ಜಿಕಾಯಿ ಕಡಬು ಇನ್ನಿತರ ಖ್ಯಾಧ್ಯಗಳನ್ನು ಮಾಡಿ ಬುಟ್ಟಿಯಲ್ಲಿ ತುಂಬಿಕೊಂಡು ದೇವರಿಗೆ ಅರ್ಪಿಸುವ ಪದ್ಧತಿ ಮೊದಲಿನಿಂದಲೂ ಇದೆ ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಪೂಜಾರಿಗಳು ಸುತ್ತಮುತ್ತಲು ಗ್ರಾಮದ ಭಕ್ತರು ಗ್ರಾಮಸ್ಥರು ಹಾಗೂ ಇನ್ನಿತರರು ಭಾಗವಹಿಸಿದ್ದರು