ತೀವ್ರ ಶೀತ ಗಾಳಿ ಹಿನ್ನೆಲೆ: ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಡಿ.ಸಿ. ಮನವಿ

ಕಲಬುರಗಿ: ಭಾರತೀಯ ಹವಾಮಾನ ಇಲಾಖೆಯು ಡಿ.18 ರಂದು ರೆಡ್ ಅಲರ್ಟ್ ಮತ್ತು ಡಿ.19 ರಂದು ಎಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ ಅವಧಿಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ 5-6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ತಾಪಮಾನ ಇರಲಿದೆ. ವಿಶೇಷವಾಗಿ ಸಾರ್ವಜನಿಕರು ಬೆಳಿಗ್ಗೆ ಸೂರ್ಯೋದಯಕ್ಕಿಂತ ಮುಂಚೆ ಹಾಗೂ ಸೂರ್ಯಾಸ್ತ್ರದ ನಂತರ ವಾಕಿಂಗ್ (ವಾಯುವಿಹಾರ) ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಮತ್ತು ರೈತರು ಅನಾವಶ್ಯಕವಾಗಿ ದ್ವಿಚಕ್ರ ವಾಹನಗಳಲ್ಲಿ ಹೊರಗಡೆ ಓಡಾಡಬಾರದೆಂದು ಅವರು ತಿಳಿಸಿದ್ದಾರೆ.

*ಮುನ್ನಚ್ಚರಿಕೆ ಕ್ರಮಗಳೇನು?*

ಸಾರ್ವಜನಿಕರು ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಸಾಧ್ಯವಾದಷ್ಟು ಮನೆ ಬಿಟ್ಟು ಹೊರಗಡೆ ಬಾರದಂತೆ ಎಚ್ಚರಿಕೆ ವಹಿಸುವುದು. ಒಂದು ವೇಳೆ ಅವಶ್ಯವಿದ್ದಲ್ಲಿ ಬೆಚ್ಚನೆಯ ಉಡುಪುಗಳಾದ ಸ್ವೆಟರ್, ಜಾಕೇಟ್, ಉಲನ್ ಟೋಪಿ, ಕಾಲು ಕುಬಸ, ಕೈ ಗ್ಲೌಸ್ ಗಳನ್ನು ಧರಿಸಬೇಕು. ವಿಶೇಷವಾಗಿ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಬಿಡಬಾರದು.

*ರೈತರಿಗೆ ಸಲಹೆ:*

ಇನ್ನು ರೈತ ಬಾಂದವರು ಈ ದಿವಸಗಳಲ್ಲಿ ವಿಶೇಷವಾಗಿ ರಾತ್ರಿ ಸಮಯದಲ್ಲಿ ಹೊಲಗಳಲ್ಲಿ ತಂಗುವುದು ಮತ್ತು ಹಗಲಿನಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳದಿರಲು ತಿಳಿಸಿದೆ. ಅವಶ್ಯವಿದ್ದಲ್ಲಿ ಮಾತ್ರ ಬೆಚ್ಚನೆಯ ಉಡುಪುಗಳನ್ನು ಧರಿಸಲು ತಿಳಿಸಿದೆ. ಮುನ್ಮೆಚ್ಚರಿಕೆ ಕ್ರಮವಾಗಿ ರೈತರು ಹಿಂಗಾರು ಬೆಳೆಗಳಿಗೆ ಶೀತ ಗಾಳಿಯ ಪ್ರಭಾವವನ್ನು ಪ್ರತಿರೋಧಿಸಲು ಪ್ಲ್ಯಾನೋಫಿಕ್ಸ್ 0.5 ಎಂ.ಎಲ್. ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಗೆ ಸಿಂಪಡಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ರೈತರಿಗೆ ಸಲಹೆ ನೀಡಿದ್ದಾರೆ.

apvc-iconPost Views: 170

Comments

Leave a Reply

Your email address will not be published. Required fields are marked *