ಮಳೆಗೆ ಬೆಳೆ ಹಾನಿ: ಸೂಕ್ತ ಪರಿಹಾರಕ್ಕೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಆಗ್ರಹ.

ಸತ್ಯಕಾಮ ವಾರ್ತೆ ವಡಗೇರಾ:
ವರುಣನ ಅವಾಂತರಕ್ಕೆ ವಡಗೇರಾ ತಾಲೂಕು ಮತ್ತು ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಆಗ್ರಹಿಸಿದ್ದಾರೆ.

 

ಯಾದಗಿರಿ ಜಿಲ್ಲೆಯಲ್ಲಿ ಮಳೆಯು ಮುಂದುವರೆದಿದ್ದು ಅಪಾರ ಪ್ರಮಾಣದ ಬೆಳೆಗಳು ಹಾನಿಯಾಗಿವೆ ಮಳೆ ಅವಾಂತರಿAದ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಭತ್ತ ಹಾಗೂ ಹತ್ತಿ ಬೆಳೆಯು ಹಾನಿಯಾಗಿದೆ. ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ,ನಾಯ್ಕಲ್, ಬೂದಿನಾಳ,ಬಿಳ್ಹಾರ ಸೇರಿದಂತೆ ಮೊದಲಾದ ಕಡೆ ಸಾವಿರಾರು ಎಕರೆ ಪ್ರದೇಶದ ಭತ್ತದ ಬೆಳೆ ನೆಲಕಚ್ಚಿ ಹಾನಿಯಾಗಿದೆ. ತೆನೆ ಕಟ್ಟಿರುವ ಭತ್ತವು ಈಗ ಹಾಸಿಗೆಯಂತೆ ನೆಲಕ್ಕೆ ಬಿದ್ದಿದೆ. ಇನ್ನೇನು 15 ದಿನಗಳಲ್ಲಿ ಹತ್ತಿ ಬಿಡಿಸುವುದು ಮತ್ತು ಭತ್ತ ಕಟಾವು ಮಾಡಬೇಕೆನ್ನುವಷ್ಟರಲ್ಲಿ ಭತ್ತ ಹಾನಿಯಾಗಿದೆ. ಅದೆ ರೀತಿ ಹತ್ತಿ ಬೆಳೆಯಲ್ಲಿ ನೀರು ಸಂಗ್ರಹವಾಗಿ ಹತ್ತಿ ಬೆಳೆಯು ಹೆಚ್ಚಿನ ಪ್ರಮಾಣದಲ್ಲಿ ನಷ್ಟವಾಗಿದೆ.ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಭತ್ತ,ಹತ್ತಿ, ಹಾನಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

 

ಬೆಳೆ ಹಾನಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ರೈತ ಸಂಗಾರೆಡ್ಡಿ ಗೋಡಿಹಾಳ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಮಳೆಗೆ ಹಾನಿಗೊಳಗಾದ ರೈತರ ಹೊಲಗಳ ಸಮೀಕ್ಷೆ ಮಾಡಿ ಜಿಲ್ಲಾಡಳಿತ ಮತ್ತು ಸರಕಾರ ಹೆಚ್ಚಿನ ಪರಿಹಾರ ನೀಡಬೇಕು ಒಂದು ವೇಳೆ ವಿಳಂಬ ಮಾಡಿದ್ದಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಉಗ್ರ ಹೋರಾಟ ಮಾಡುವದಾಗಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ, ಗುರುನಾಥ ರೆಡ್ಡಿ ಹದನೂರ, ನೂರ ಅಹ್ಮದ, ಶಿವಶರಣಪ್ಪ ಸಾಹುಕಾರ ತಡಿಬಿಡಿ, ವೆಂಕೂಬ್ ಕಟ್ಟಿಮನಿ, ವಿದ್ಯಾಧರ್ ಜಾಕ, ಶರಣು ಜಡಿ, ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

apvc-iconPost Views: 4

Comments

Leave a Reply

Your email address will not be published. Required fields are marked *