ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್
Latest News

ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

Satyakam NewsDesk
Last updated: 2024/06/24 at 10:18 PM
Satyakam NewsDesk
Share
4 Min Read
SHARE

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಸೋಮವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದಕ್ಕೂ ಮೊದಲು ಕಾರ್ಯಕ್ರಮದ ಉದ್ದೇಶ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಕ್ರಿಯೆ ಕುರಿತು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಎಂಎಲ್ಸಿ ರವಿ, ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಸಿಇಓ ದಿಗ್ವಿಜಯ್ ಸಿಂಗ್ ಬೋಡಕೆ, ಎಸ್ಪಿ ಕಾರ್ತಿಕ್ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

ಭೂಮಿ, ಮನೆ, ನಿವೇಶನ ರಹಿತರು, ರೈತರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ; ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

ಚನ್ನಪಟ್ಟಣ, ಜೂನ್ 24: 

“ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ” – ಇದು ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಒಟ್ಟು ಚಿತ್ರಣ.

ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ವ್ಯಕ್ತವಾದ ಪ್ರಮುಖ ಸಮಸ್ಯೆಗಳಿಗೆ ಶಿವಕುಮಾರ್ ಅವರು ಸ್ಪಂದಿಸಿದ ರೀತಿ ಹೀಗಿತ್ತು:

ಜೆ. ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ ಅವರು ದೂರು ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು “ಲಂಚ ಪಡೆಯುವ ಪಿಡಿಓ, ಗ್ರಾಮ ಲೆಕ್ಕಿಗರು ಬೇರೆ ಜಾಗ ಹುಡುಕಿಕೊಳ್ಳಿ. ನನ್ನ ಕ್ಷೇತ್ರದ ಜನರಿಗೆ ತೊಂದರೆ ಆಗಬಾರದು” ಎಂದರು.

ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

“ಮುಂದಿನ 15 ದಿನಗಳಲ್ಲಿ ಲಂಚ ಪಡೆಯುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಈ ಬಗ್ಗೆ ದೂರುಗಳು ಬರಬಾರದು” ಎಂದು ಜಿಲ್ಲಾ ಪಂಚಾಯತಿ ಸಿಇಓ ದಿಗ್ವಿಜಯ ಬೋಡಕೆ ಅವರಿಗೆ ಖಡಕ್ ಸೂಚನೆ ನೀಡಿದರು.

ಶ್ರವಣಯ್ಯನ ತೋಪಿನ ಸುಶೀಲ, ರತ್ನಮ್ಮ, ರಾಜಮ್ಮ, ಚಿಕ್ಕತಾಯಮ್ಮ ಸೇರಿದಂತೆ 21 ಕ್ಕೂ ಹೆಚ್ಚು ಜನ ಕಳೆದ 10 ವರ್ಷಗಳಿಂದ ಮನೆಗಳಿಗೆ ಹಕ್ಕುಪತ್ರ ನೀಡುತ್ತಿಲ್ಲ ಎಂದು ದೂರಿದಾಗ, “ಮುಂದಿನವಾರದೊಳಗೆ ಇವರಿಗೆ ಹಕ್ಕುಪತ್ರಗಳನ್ನು ನೀಡಬೇಕು” ಎಂದು ಹೇಳಿದರು. ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಮುಂದಿನವಾರ ಖುದ್ದಾಗಿ ನಾನೇ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದರು.

ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ

“ಅರ್ಜಿ ಎಲ್ಲಿ, ಏನು ಸಮಸ್ಯೆ” ಎಂದು ಡಿಸಿಎಂ ಅವರ ಪ್ರಶ್ನೆಗೆ ಉತ್ತರಿಸಿದ ಚನ್ನಪಟ್ಟಣದ ನಿವಾಸಿ ಶಿವಗಂಗಮ್ಮ, “ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಯಿಂದ ನನಗೆ ತುಂಬಾ ಒಳ್ಳೆಯದಾಗಿದೆ, ನನ್ನದು ಏನೂ ಸಮಸ್ಯೆ ಇಲ್ಲ. ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ” ಎಂದಾಗ ಡಿಸಿಎಂ ನಕ್ಕು ಹಿರಿಯ ಜೀವದ ಆಶೀರ್ವಾದ ಪಡೆದು “ನಿನ್ನಂತೆ ಎಲ್ಲರ ಸಮಸ್ಯೆಯು ಇಲ್ಲದಂತೆ ಆಗಲಿ ಕಣವ್ವ” ಎಂದರು.

ಹುಣಸನಹಳ್ಳಿಯ ಬಿಸಿಲಮ್ಮ ದೇವಿ ದೇವಸ್ಥಾನದ ಮಾಳಿಗೆ ಸೋರುತ್ತಿದೆ, ಸೇವಾ ಸಮಿತಿಯನ್ನು ಅಭಿವೃದ್ಧಿ ಸಮಿತಿಯನ್ನಾಗಿ ಪರಿವರ್ತಿಸಲು ಅನುವು ಮಾಡಿಕೊಡಬೇಕು ಎನ್ನುವ ಮನವಿಗೆ, ” ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನಿನಲ್ಲಿ ಕಟ್ಟಿರುವ ತೆಂಗಿನ ನಾರಿನ ಕಾರ್ಖಾನೆಗೆ ಪರ್ಯಾಯ ಜಾಗ ಕಲ್ಪಿಸಿ ಅಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಹಾಗೂ ನಿಮ್ಮ ಎಲ್ಲಾ ಮನವಿಗಳಿಗೆ ಪರಿಹಾರ ನೀಡಲಾಗುವುದು” ಎಂದು ಭರವಸೆ ನೀಡಿದರು.

ಕಾಲಿನ ಸ್ವಾಧೀನ ಕಳೆದುಕೊಂಡಿರುವ ಕರಲಹಳ್ಳಿಯ ವಿಕಲಚೇತನ ಪುಟ್ಟರಾಜು ಅವರಿಗೆ “ಸ್ವಂತ ಉದ್ಯೋಗ ಮಾಡಲು 1 ಲಕ್ಷ ಹಣ ಬರುವಂತೆ ಮಾಡುತ್ತೇನೆ. ಜಿಲ್ಲಾ ಕಾಂಗ್ರೆಸ್ ಪಕ್ಷದ ನಾಯಕರನ್ನು ಭೇಟಿಯಾಗು, ಅವರು ನನ್ನ ಪರವಾಗಿ ನಿನಗೆ ಸಹಾಯ ಮಾಡುತ್ತಾರೆ” ಎಂದರು. ಪುಟ್ಟರಾಜುವಿಗೆ ಸಹಾಯ ಮಾಡಬೇಕು ಎಂದು ಜಿಲ್ಲಾ ನಾಯಕರಿಗೆ ಸೂಚನೆ ನೀಡಿದರು.

ಸರ್ಕಾರಿ ಕೆಲಸ ಕೊಡಿಸಲು ಆಗುವುದಿಲ್ಲ

ಸರ್ಕಾರಿ ಕೆಲಸ ಕೊಡಿಸಿ ಎಂಬ ವೈ.ಟಿ. ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜು ಮನವಿಗೆ, “ಸರ್ಕಾರಿ ಕೆಲಸ ಕೊಡಿಸಲು ಆಗುವುದಿಲ್ಲ. ಏನಾದರೂ ಸ್ವಯಂ ಉದ್ಯೋಗ ಮಾಡು” ಎಂದು ಹೇಳಿದರು.

ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಕರೆ ಮಾಡಿ ಪರಿಹಾರ ಸೂಚನೆ

ಕೊಂಡಾಪುರ ಕೃಷ್ಣ, ಜಮೀನು ನನ್ನ ಹೆಸರಿಗೆ ಆಗಿ 5 ವರ್ಷಗಳು ಕಳೆದರೂ ಖಾತೆ ನೀಡುತ್ತಿಲ್ಲ ಎಂದು ಹೇಳಿದಾಗ, ಪಕ್ಕದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಡಿಸಿಎಂ ಸೂಚನೆ ಮೇರೆಗೆ ತಕ್ಷಣ ಕಂದಾಯ ಅಧಿಕಾರಿಗೆ ಕರೆ ಮಾಡಿ ಕೂಡಲೇ ದಾಖಲೆ ನೀಡುವಂತೆ ತಿಳಿಸಿದರು.

ಚನ್ನಪಟ್ಟಣ ತಾಲ್ಲೂಕಿನ ಅಂಗನವಾಡಿ ಕಾರ್ಯಕಾರ್ಯಕರ್ತೆಯರು ಎಲ್ ಕೆಜಿ, ಯುಕೆಜಿ ಶಿಕ್ಷಕರಾಗಿ ನಮ್ಮನ್ನೇ ಮುಂದುವರೆಸಿ ಎಂದು ಮನವಿ ಮಾಡಿದಾಗ, “ಇದು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು” ಎಂದರು.

ಅಂಬಾಡಳ್ಳಿಯ ರೇಣುಕಮ್ಮ, ಮಾದಾಪುರ ಗ್ರಾಮದ ಚಿಕ್ಕಮ್ಮ ಒಂದು ವರ್ಷ ಕಳೆದರೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಾಗ “ಮುಂದಿನ ತಿಂಗಳು ಬರುವಂತೆ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಪೋಡಿ, ಪಹಣಿ, ಬಗರ್ ಹುಕುಂ, ವಸತಿ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮನವಿಗಳು ಸಲ್ಲಿಕೆಯಾದವು.

apvc-iconTotal Visits: 21
apvc-iconAll time total visits: 25265

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

TAGGED: Channapatna, Congress, Dk shivakumar
Satyakam NewsDesk June 24, 2024 June 24, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನ
Next Article ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube