ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಅತಿವೃಷ್ಠಿಯಿಂದ ಆದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಸಚಿವ ಶರಣಬಸಪ್ಪ ದರ್ಶನಾಪುರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಅತಿವೃಷ್ಠಿಯಿಂದ ಆದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಸಚಿವ ಶರಣಬಸಪ್ಪ ದರ್ಶನಾಪುರ
Latest News

ಅತಿವೃಷ್ಠಿಯಿಂದ ಆದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಸಚಿವ ಶರಣಬಸಪ್ಪ ದರ್ಶನಾಪುರ

Satyakam NewsDesk
Last updated: 2024/09/03 at 2:42 PM
Satyakam NewsDesk
Share
2 Min Read
SHARE

ಅತಿವೃಷ್ಠಿಯಿಂದ ಆದ ಹಾನಿಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ; ಬಾಕಿ ಮನೆ ಹಾನಿ ಪರಿಹಾರ ಶೀಘ್ರ ವಿತರಿಸಿ: ಸಚಿವ ಶರಣಬಸಪ್ಪ ದರ್ಶನಾಪುರ

ಸತ್ಯಕಾಮ ವಾರ್ತೆ ಯಾದಗಿರಿ;

ಅತಿವೃಷ್ಠಿಯಿಂದಾದ ಬೆಳೆ ಹಾನಿ ಮತ್ತು ಮನೆ ಹಾನಿ ಕುರಿತಂತೆ ಪರಿಶೀಲನೆ ನಡೆಸಿ ಶೀಘ್ರ ವರದಿ ಸಲ್ಲಿಸುವುದರ ಜೊತೆಗೆ ಈ ಹಿಂದೆ ಮನೆ ಹಾನಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪರಿಹಾರವನ್ನು ಆಧ್ಯತೆ ಮೇಲೆ ವಿತರಿಸುವಂತೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಪ್ರಕೃತಿ ವಿಕೋಪದ ಅಡಿಯಲ್ಲಿ ಬೆಳೆ,ರಸ್ತೆ, ಮೂಲಸೌಕರ್ಯ ಹಾನಿಯಾದ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು. ಅದರಂತೆ ಮನೆ ಹಾನಿ,ರಸ್ತೆ ಮೂಲಸೌಕರ್ಯಗಳ ಹಾನಿ ಕುರಿತು ಶೀಘ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲೆಯ ಸಿರವಾಳದಿಂದ ಅಣಬಿ ವರೆಗೆ ಹಾಗೂ ಶಹಾಪುರದಿಂದ ಶಿರವಾಳದವರೆಗೆ ಹಾಗೂ ಇಬ್ರಾಹಿಂಪುರದಿಂದ ಚಟ್ನಳ್ಳಿ ವರೆಗೆ ರಸ್ತೆ ಹಾನಿಯಾಗಿದೆ. ಈ ರಸ್ತೆಗಳ ಮಧ್ಯೆ ಭಾರತಮಾಲಾ, ರೈಲ್ವೆ ಕಾಮಗಾರಿ ನಡೆಯುತ್ತಿರುವುದರಿಂದ ಈ ಕುರಿತಂತೆ ಜಂಟಿ ಸಹಯೋಗದೊಂದಿಗೆ ಸಾಧ್ಯತೆ ಇದ್ದಲ್ಲಿ ರಸ್ತೆ ದುರಸ್ತಿ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ, ಅವಶ್ಯಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಚಿವರು ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಆಗಿರುವ ಬಿತ್ತನೆ, ಬೆಳೆ ಹಾನಿ, ಭೀಮಾ, ಕೃಷ್ಣ ನದಿ ವ್ಯಾಪ್ತಿಯಲ್ಲಿ ಬೆಳೆ ಪರಿಸ್ಥಿತಿ, ರಸಗೊಬ್ಬರದ ಅವಶ್ಯಕತೆ, ಬೆಳೆವಿಮೆ ಪರಿಹಾರ ವಿತರಣೆ, ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿ ಆದ ಬೆಳೆ ಹಾನಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿ ಕುರಿತಂತೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರು ಸೇರಿದಂತೆ ಎಲ್ಲಾ ತಾಲೂಕಿನ ತಹಶೀಲ್ದಾರರ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

apvc-iconTotal Visits: 95
apvc-iconAll time total visits: 25759

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

TAGGED: ಶರಣಬಸಪ್ಪ ದರ್ಶನಾಪುರ, ಸಚಿವ ಶರಣಬಸಪ್ಪ ದರ್ಶನಾಪುರ
Satyakam NewsDesk September 3, 2024 September 3, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು
Next Article ಟ್ರಾನ್ಸ್ಫರ್ ಗೆ ಲಂಚ ತೋಗುತ್ತಾರ ಡಿಡಿಪಿಐ..? ಚರ್ಚೆಗೆ ಗ್ರಾಸವಾದ ಕೇಂದ್ರ ಸಚಿವರ ಭಾಷಣ

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube