ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News

ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ

Shivu
Last updated: 2026/01/17 at 1:46 PM
Shivu
Share
2 Min Read
SHARE

 


ರಾಜ್ಯ ಕಾಂಗ್ರೆಸ್‌ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ಗೊಂದಲಕ್ಕೆ ಸ್ಪಷ್ಟತೆ ಸಿಗಬೇಕೆಂಬ ಆಶಯದೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಡಿಕೆಶಿ, ಇದೀಗ ಅನಿವಾರ್ಯ ಕಾರಣಕ್ಕಾಗಿ ಬೀದರ್‌ಗೆ ತೆರಳಿ ಮತ್ತೆ ದೆಹಲಿಯತ್ತ ವಾಪಸ್ ಆಗಲಿದ್ದಾರೆ.

ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಹೈದರಾಬಾದ್ ಮೂಲಕ ಬೀದರ್‌ಗೆ ಆಗಮಿಸಲಿದ್ದು, ಅಂತಿಮ ವಿಧಿವಿಧಾನಗಳಲ್ಲಿ ಭಾಗವಹಿಸಿದ ನಂತರ ಮತ್ತೆ ದೆಹಲಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ ಹೈಕಮಾಂಡ್ ಪ್ರಮುಖ ನಾಯಕರನ್ನು ಭೇಟಿಯಾಗುವ ಉದ್ದೇಶ ಅವರದ್ದಾಗಿದೆ.

ಇದಕ್ಕೂ ಮೊದಲು ಅಸ್ಸಾಂ ವಿಧಾನಸಭೆ ಚುನಾವಣೆಯ ಸಿದ್ಧತೆ ಹಿನ್ನೆಲೆಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಭಾಗವಹಿಸಲು ಡಿಕೆಶಿ ದೆಹಲಿಗೆ ತೆರಳಿದ್ದರು. ಅಸ್ಸಾಂ ವೀಕ್ಷಕರಾಗಿ ನೇಮಕಗೊಂಡಿರುವ ಕಾರಣ ಈ ಸಭೆ ಅವರಿಗೆ ರಾಜಕೀಯವಾಗಿ ಮಹತ್ವದ್ದಾಗಿತ್ತು. ಸಭೆಯ ವೇಳೆ ರಾಹುಲ್ ಗಾಂಧಿ ಅವರನ್ನು ಮುಖಾಮುಖಿಯಾಗಿ ಭೇಟಿಯಾದರೂ, ಒನ್ ಟು ಒನ್ ಮಾತುಕತೆಗೆ ಅವಕಾಶ ಸಿಗಲಿಲ್ಲ. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಖರ್ಗೆ ಮೂಲಕ ರಾಹುಲ್ ಗಾಂಧಿ ಭೇಟಿ ಸಾಧ್ಯವಾಗಬಹುದು ಎಂಬ ನಿರೀಕ್ಷೆಯಲ್ಲಿ ಡಿಕೆಶಿ ಇದ್ದಾರೆ.

ಇದೇ ವೇಳೆ ಕೇರಳ ವೀಕ್ಷಕರಾಗಿ ನೇಮಕಗೊಂಡಿರುವ ಸಚಿವ ಕೆ.ಜೆ. ಜಾರ್ಜ್ ದೆಹಲಿಗೆ ತೆರಳುತ್ತಿದ್ದಂತೆಯೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದು ಕಾಂಗ್ರೆಸ್‌ ವಲಯದಲ್ಲಿ ಗಮನ ಸೆಳೆದಿದೆ. ದೆಹಲಿಯಲ್ಲಿ ಕೆಲ ದಿನಗಳಿಂದ ವಾಸ್ತವ್ಯ ಹೂಡಿದ್ದರೂ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ನೇರ ಮಾತುಕತೆ ಅವಕಾಶ ಸಿಗದಿರುವುದು ಚರ್ಚೆಗೆ ಕಾರಣವಾಗಿದೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಹಾಕಿದ್ದ ಟ್ವೀಟ್‌ಗಳು ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಇನ್ನಷ್ಟು ಇಂಧನ ಹಾಕಿದ್ದವು. ಈ ಕುರಿತು ಸ್ವತಃ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಟ್ವೀಟ್‌ಗೆ ನಾಯಕತ್ವ ರಾಜಕೀಯದೊಂದಿಗೆ ಯಾವುದೇ ಸಂಬಂಧ ಇಲ್ಲ, ಅದು ಮೇಕೆದಾಟು ವಿಚಾರಕ್ಕೆ ಸಂಬಂಧಪಟ್ಟದ್ದು ಎಂದು ಹೇಳಿದ್ದಾರೆ. ಆದರೂ ಕಾಂಗ್ರೆಸ್‌ ಒಳವಲಯದಲ್ಲಿ ನಡೆಯುತ್ತಿರುವ ಚರ್ಚೆಗಳು ತಣ್ಣಗಾಗಿಲ್ಲ.

ಒಟ್ಟಾರೆ, ನಾಯಕತ್ವ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲದಿದ್ದರೂ, ದೆಹಲಿಯ ರಾಜಕೀಯ ಚಲನವಲನಗಳು ಮತ್ತು ಡಿಕೆ ಶಿವಕುಮಾರ್ ಅವರ ನಿರಂತರ ಪ್ರಯತ್ನಗಳು ರಾಜ್ಯ ಕಾಂಗ್ರೆಸ್‌ ರಾಜಕಾರಣವನ್ನು ಮತ್ತೆ ಕುತೂಹಲದ ಹಂತಕ್ಕೆ ತಂದು ನಿಲ್ಲಿಸಿವೆ. ಮುಂದಿನ ಕೆಲ ದಿನಗಳಲ್ಲಿ ಹೈಕಮಾಂಡ್ ಭೇಟಿಗಳು ಯಾವ ಸಂದೇಶ ನೀಡಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.

apvc-iconPost Views: 14

You Might Also Like

‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು

ಸೂರ್ಯಕುಮಾರ್ ವಿವಾದ: ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ

ಶಿವಣ್ಣ ಭವಿಷ್ಯ ನಿಜವಾಗುತ್ತಾ? ʻಬಿಗ್‌ ಬಾಸ್‌ 12ʼ ಫಿನಾಲೆಗೆ ಮುನ್ನ ಗಿಲ್ಲಿ ಅಲೆ ಜೋರು

ಬಳ್ಳಾರಿ ಬ್ಯಾನರ್‌ ಗಲಭೆ ಖಂಡಿಸಿ BJP–JDS ಪಾದಯಾತ್ರೆ; ಫೆ.5ಕ್ಕೆ ಬೆಂಗಳೂರಿನಲ್ಲಿ ಅಂತ್ಯ

ರಾಜ್ಯ ರಾಜಕೀಯದಿಂದ ದೂರ ಸರಿಯಲ್ಲ: ಮರಳುವ ಸುಳಿವು ನೀಡಿದ ಎಚ್‌ಡಿಕೆ

Shivu January 17, 2026 January 17, 2026
Share This Article
Facebook Twitter Whatsapp Whatsapp Telegram Copy Link Print
Share
Previous Article ‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು
Next Article ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ

Stay Connected

Facebook Like
Twitter Follow
Instagram Follow
Youtube Subscribe

Latest News

ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು
Entertainment Latest News January 16, 2026
ಸೂರ್ಯಕುಮಾರ್ ವಿವಾದ: ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ
Latest News Sports January 16, 2026
ಶಿವಣ್ಣ ಭವಿಷ್ಯ ನಿಜವಾಗುತ್ತಾ? ʻಬಿಗ್‌ ಬಾಸ್‌ 12ʼ ಫಿನಾಲೆಗೆ ಮುನ್ನ ಗಿಲ್ಲಿ ಅಲೆ ಜೋರು
Entertainment Latest News January 16, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube