ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ : ಕಲಿಕಾ ಸಲಕರಣೆ ವಿತರಣೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ : ಕಲಿಕಾ ಸಲಕರಣೆ ವಿತರಣೆ
Latest News

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ : ಕಲಿಕಾ ಸಲಕರಣೆ ವಿತರಣೆ

Satyakam NewsDesk
Last updated: 2025/01/23 at 9:30 AM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಗುರುಮಠಕಲ್:

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ 58 ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಅಭಿಮಾನಿಗಳ ಬಳಗದ ಅಧ್ಯಕ್ಷ ನರಸಿಂಹಲು ಗಂಗನೋಳ್ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷಾ ಪ್ಯಾಡ್ ವಿತರಣೆ ಮಾಡಲಾಯಿತು.

ಇಲ್ಲಿನ ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ) ವಿಭಾಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಭೀಮಶಪ್ಪ ಮನ್ನೆ ಮಾತನಾಡಿ, ವಿದ್ಯಾರ್ಥಿಗಳ ಪರೀಕ್ಷೆಗೆ ಅನುಕೂಲವಾಗಲು ಪ್ಯಾಡ್ ವಿತರಣೆ ಕಾರ್ಯ ಶ್ಲಾಘಿಸಿದರು.

ಸಾಕಷ್ಟು ಜನರಲ್ಲಿ ಸಾಕಷ್ಟು ಇದೆ. ಆದರೆ ಕೊಡುವ ಮನಸ್ಸು ದೊಡ್ಡದು. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದರು.

ಉಪನ್ಯಾಸಕ ನವಾಜರೆಡ್ಡಿ ಮಾತನಾಡಿ, ಒಳ್ಳೆ ಕೆಲಸ ಮಾಡುವ ಮನಸ್ಸು ಇರಬೇಕು. ಸಮಾಜ, ದೇಶ ಸೇವೆ ಮಾಡಿದವರ ಹೆಸರು ಇತಿಹಾಸ ಪುಟದಲ್ಲಿರುತ್ತದೆ. ಇಂತಹ ಆದರ್ಶ ಯುವ ಮುಖಂಡರಿಗೆ ನಾವೆಲ್ಲ ಪ್ರೋತ್ಸಾಹ ನೀಡಬೇಕು. ಸಾಮಾಜಿಕ ಕಾರ್ಯಗಳಿಗೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಯಾದಗಿರಿಧ್ವನಿ.ಕಾಮ್ ಸಂಪಾದಕ ಅನೀಲ ಎನ್. ಬಸೂದೆ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗಾಗಿ ಗುರುಗಳು ಕೆಲವೊಮ್ಮೆ ಬೈದು ಹೇಳಬಹುದು ಹಾಗಾಗಿ ಅನ್ಯಥಾ ಭಾವಿಸಬಾರದು.

ತಪ್ಪು ತಿದ್ದಿಕೊಂಡು ಉತ್ತಮ ವ್ಯಾಸಾಂಗ ಮಾಡಿ ಪಾಲಕರು, ಶಾಲೆಗೆ ಕೀರ್ತಿ ತರಬೇಕು. ತಂತ್ರಜ್ಞಾನವನ್ನು ಶೈಕ್ಷಣಿಕವಾಗಿ ಯಶಸ್ಸು ಸಾಧಿಸಲು ಬಳಕೆ ಮಾಡಿಕೊಂಡು ಸಫಲರಾಗಲು ಸಲಹೆ ನೀಡಿದರು.

ಜನಾರ್ಧನ ರೆಡ್ಡಿ ಅಭಿಮಾನಿಗಳ ಸಂಘದ ಅಧ್ಯಕ್ಷ ನರಸಿಂಹಲು ಗಂಗನೋಳ್ ಮಾತನಾಡಿ. ಕಲಿಕ ಸಲಕರಣೆಗಳು ಉಪಯೋಗ ಪಡಿಸಿಕೊಂಡು, ಕೀರ್ತಿ ತರಬೇಕು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ತೇರ್ಗಡೆಯಾದವರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದರು.

ಅಧ್ಯಕ್ಷತೆವಹಿಸಿದ್ದ ಪ್ರ.ಪ್ರಾಂಶುಪಾಲರಾದ ಈರಮ್ಮ ಮಾತನಾಡಿ, ಒಬ್ಬೊಬ್ಬರಲ್ಲಿ ಒಂದೊಂದು ಪ್ರತಿಭೆ ಅಡಗಿದೆ. ಇಂದು ಶಿಷ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದು, ತಮ್ಮ ಕೈಯಲ್ಲಿ ಕಲಿತವರು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆ ಪಡುವ ಸಂಗತಿ. ಮಕ್ಕಳು ಜೀವನದಲ್ಲಿ ಗುರಿ ಸಾಧಿಸಲು ಶ್ರಮಿಸಲು ಕರೆ ನೀಡಿದರು.

ವೇದಿಕೆ ಮೇಲೆ ಚನಬಸರೆಡ್ಡಿ, ಶಿಕ್ಷಕ ಲಿಂಗಾನಂದ ಗೋಗಿ ನಿರೂಪಿಸಿದರು. ಶರಣಪ್ಪ ಚಿಂತಕುಂಟಾ, ಆಂಜನೇಯ, ಭಾಗ್ಯಲಕ್ಷ್ಮೀ, ಹೇಮಲತಾ, ರಾಮಲಿಂಗಮ್ಮ, ಬಾಲಮಣಿ, ಅಲಿ ಮೌಲಾನಾ ಇದ್ದರು.

apvc-iconTotal Visits: 39
apvc-iconAll time total visits: 25876

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk January 23, 2025 January 23, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಜೆಡಿಎಸ್ ಮುಖಂಡ ವೀರೇಶ ವಿಶ್ವಕರ್ಮ ಸಂಗಡಿಗರಿಂದ ಮುಗಳಖೋಡಕ್ಕೆ ಪಾದಯಾತ್ರೆ.
Next Article ನಾಳೆ ಯಾದಗಿರಿ ಜಿಲ್ಲಾ ಕಛೇರಿಗೆ ಮುತ್ತಿಗೆ ಹಾಕುವುದರ ಮೂಲಕ ಪ್ರತಿಭಟನೆ MRPS ಅಧ್ಯಕ್ಷ ರವಿ ಬುರನ್ನೊಳ್

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube