ಸತ್ಯಕಾಮ ವಾರ್ತೆ ಗುರುಮಠಕಲ್:
ಪಟ್ಟಣದ ಪೊಲೀಸ್ ಠಾಣೆಯಿಂದ ಪಥ ಸಂಚಲನ ಆರಂಭವಾಗಿ ಗಂಗಾ ಪರಮೇಶ್ವರಿ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಮಲ್ಲಯ್ಯ ಕಟ್ಟ, ನಗರೇಶ್ವರ ದೇವಸ್ಥಾನ, ಚೌಡಿ ಕಟ್ಟ ಮಾರ್ಗವಾಗಿ ಬೀಡಿಕೆ ಕಟ್ಟದಿಂದ ಪೊಲೀಸ್ ಠಾಣೆಗೆ ತಲುಪಿ ಮುಕ್ತಾಯಗೊಂಡಿತು.
ಬಳಿಕ ಮಾತನಾಡಿದ ಅವರು, ಪಟ್ಟಣದಲ್ಲಿ ಗೌರಿ ಗಣೇಶ ಹಬ್ಬವನ್ನು ಯಾವುದೇ ರೀತಿಯ ಅನಾಹುತಗಳು ಆಗದಂತೆ ಶಾಂತಿಯುತವಾಗಿ ಆಚರಿಸಬೇಕು. ಈ ಕಾರಣದಿಂದ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಥಸಂಚಲನ ನಡೆಸಲಾಯಿತು ಎಂದರು.
ಗಣೇಶ ಮೂರ್ತಿ ಮೆರವಣಿಗೆ ಮತ್ತು ಮೂರ್ತಿ ವಿಸರ್ಜಿಸುವ ಸಮಯದಲ್ಲಿ ಸಾರ್ವಜನಿಕರು ಎಚ್ಚರ ವಹಿಸಬೇಕು. ಶಾಂತಿ ಕದಡುವ ಕೆಲಸವನ್ನು ಯಾರಾದರೂ ಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಇದೇ ಸಂಧರ್ಭದಲ್ಲಿ ಇತ್ತೀಚೆಗೆ ತೆಲಂಗಾಣ ರಾಜ್ಯದ ಕರೀಂ ನಗರದಲ್ಲಿ ಗಣಪತಿ ತರುವ ವೇಳೆ 10ಕ್ಕೂ ಹೆಚ್ಚು ಗಣೇಶ ಮಂಡಳಿಯವರು ವಿದ್ಯುತ್ ಶಾಕ್ ನಿಂದ ಮೃತ ಪಟ್ಟ ಘಟನೆ ನೆನೆದ ಅವರು, ಸುರಕ್ಷತೆ ಕಾಪಾಡಿಕೊಂಡು ಹಬ್ಬ ಆಚರಿಸಿ ಎಂದರು.

