ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್ ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್ ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ
Latest News

ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್ ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ

Satyakam NewsDesk
Last updated: 2023/10/17 at 11:47 PM
Satyakam NewsDesk
Share
2 Min Read
SHARE

ವರದಿ: ಕುದಾನ್ ಸಾಬ್
ಯಾದಗಿರಿ: ಜನಸಾಮಾನ್ಯರಿಗೆ ಒಂದು ಕಾನೂನು, ಸರ್ಕಾರಿ ಅಧಿಕಾರಿಗಳಿಗೆ ಮತ್ತೊಂದು ಕಾನೂನು ಎನ್ನುವ ಪ್ರಶ್ನೆ ಇದೀಗ ಜಿಲ್ಲೆಯಲ್ಲಿ ಉದ್ಭವಿಸಿದೆ. ವಿಮೆ ಮಾಡಿಸಿ ಅಂತ ಸಾರ್ವಜನಿಕರಿಗೆ ತಿಳಿಹೇಳುವ ಸರ್ಕಾರಿ ಅಧಿಕಾರಿಗಳೇ ತಾವು ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ವಾಹನಗಳಿಗೆ ವಿಮೆ ಮಾಡಿಸದೇ ನಿರ್ಲಕ್ಷ ತೋರುತ್ತಿದ್ದಾರೆ.

ಜನಸಾಮಾನ್ಯರಿಗಾದ್ರೆ ಹೆಲ್ಮೆಟ್ ಇಲ್ಲ. ಸೀಟ್ ಬೆಲ್ಟ್ ಹಾಕಿಲ್ಲ. ಇನ್ಸುರೆನ್ಸ್ ಇಲ್ಲ, ಎಮಿಷನ್ ಟೆಸ್ಟ್ ಇಲ್ಲ, ಮಿರರ್ ಇಲ್ಲ ಅದಿಲ್ಲ-ಇದಿಲ್ಲ ಅಂತೆಲ್ಲಾ ಪೊಲೀಸರು ಕೇಸ್ ಮೇಲೆ ಕೇಸ್ ಹಾಕಿ ಜನ ಸಾಮಾನ್ಯರ ಬಳಿ ದಂಡದ ರೂಪದಲ್ಲಿ ಪೊಲೀಸರು ಸಾವಿರಾರು ರೂಪಾಯಿ ಹಣ ವಸೂಲಿ ಮಾಡ್ತಾರೆ. ಆದರೆ, ಯಾದಗಿರಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಹಲವು ಸರ್ಕಾರಿ ವಾಹನಗಳ ಇನ್ಸೂರೆನ್ಸ್ ಮುಗಿದು ಹಲವು ವರ್ಷಗಳೇ ಕಳೆದರೂ ಅಂತಹ ಅಧಿಕಾರಿಗಳ ವಿರುದ್ದ ಆರ್. ಟಿ. ಓ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಮೌನವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿರುವ ಹಲವು ಸರ್ಕಾರಿ ವಾಹನಗಳು ವಿಮೆರಹಿತವಾಗಿದ್ದೂ, ಪಶು ಸಂಗೋಪನಾ ಇಲಾಖೆಯ ವಾಹನದ ಇನ್ಶೂರೆನ್ಸ್ ಮುಗಿದು ಒಂದೆರಡು ತಿಂಗಳಲ್ಲ ಬರೋಬ್ಬರಿ ಹನ್ನೆರಡು ವರ್ಷವಾಗಿದೆ. ಪೊಲೀಸ್ ಇಲಾಖೆಯ ಹಲವು ವಾಹನಗಳಿಗೆ ನಾಲ್ಕೈದು ವರ್ಷಗಳ ಹಿಂದೆಯೇ ಇನ್ಶೂರೆನ್ಸ್ ಮುಗಿದಿದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಸುತ್ತಿರುವ ವಾಹನದ ಇನ್ಶೂರೆನ್ಸ್ ಎರಡು ವರ್ಷಗಳ ಹಿಂದೆಯೇ ಮುಗಿದಿದೆ. ಇನ್ನೂ ಹಲವು ಇಲಾಖೆಯ ಅದೆಷ್ಟೋ ಸರ್ಕಾರಿ ವಾಹನಗಳಿಗೆ ಇದುವರೆಗೂ ವಿಮೆ ಮಾಡಿಸಿಲ್ಲ. ಹೀಗಾಗಿ ಸಾರ್ವಜನಿಕರು ಕಾನೂನು ಪಾಲಿಸಿ ಸಾರ್ವಜನಿಕರಿಗೆ ಮಾದರಿಯಾಗಿರಬೇಕಿದ್ದ ಅಧಿಕಾರಿಗಳೇ ಕಾನೂನು ಉಲ್ಲಂಘಿಸುತ್ತಿದ್ದು ಬೆಕ್ಕಿನ ಕೊರಳಿಗೆ ಘಂಟೆ ಕಟ್ಟುವವರು ಯಾರು ಎಂದು ಸರ್ಕಾರಕ್ಕೆ ಪ್ರಶ್ನಿಸುವಂತಾಗಿದೆ.

ವಾಹನಗಳ ತಪಾಸಣೆಗಾಗಿ ದಾರಿಯುದ್ಧಕ್ಕೂ ನಿಲ್ಲುವ ಅಧಿಕಾರಿಗಳು ಜನಸಾಮಾನ್ಯರ ವಾಹನಗಳ ದಾಖಲೆ ಕೇಳುವುದಕ್ಕೂ ಮೊದಲು, ಸರ್ಕಾರಿ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರಿ ಅಧಿಕಾರಿಗಳ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಬಹುದಿತ್ತಲ್ಲವೇ ಎಂಬ ಪ್ರಶ್ನೆ ಜಿಲ್ಲೆಯ ಜನಸಾಮಾನ್ಯರಲ್ಲಿ ಮೂಡಿದೆ.

ಒಟ್ಟಿನಲ್ಲಿ ಸರ್ಕಾರಿ ವಾಹನಗಳಿಗೆ ಇನ್ಸುರೆನ್ಸ್ ತುಂಬುವ ಮೂಲಕ ಜವಾಬ್ದಾರಿ ಮೆರೆಯಬೇಕಾಗಿದ್ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು. ಸಾರ್ವಜನಿಕರು ಕೂಡ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುವಂತಾಗಿದೆ. ಇನ್ನಾದ್ರೂ ಆರ್.ಟಿ.ಓ ಅಧಿಕಾರಿಗಳು ಎಚ್ಚೆತ್ತುಕೊಂಡು ಸರ್ಕಾರಿ ವಾಹನಗಳಿಗೆ ವಿಮೆ ಮಾಡಿಸುವ ಎಚ್ಚರಿಕೆ ನೀಡುವ ಮೂಲಕ ನಿಯಮ ಉಲ್ಲಂಘಿಸುತ್ತಿರುವ
ಅಧಿಕಾರಿಗಳಿಗೆ ಬ್ರೇಕ್ ಹಾಕುತ್ತಾರೋ ಇಲ್ಲವೋ ಅನ್ನುವುದನ್ನು ಕಾದು ನೋಡಬೇಕಾಗಿದೆ.

ಸತ್ಯಕಾಮ ರಿಯಾಲಿಟಿ ಚೆಕ್ ನಲ್ಲಿ ಕಂಡುಬಂದ ಇನ್ಶೂರೆನ್ಸ್ ಇಲ್ಲದ ವಾಹನಗಳು

ಕೆಎ33ಜಿ0264
ಕೆಎ33ಜಿ8008
ಕೆಎ33ಜಿ0108
ಕೆಎ33ಜಿ0182
ಕೆಎ33ಜಿ0184
ಕೆಎ33ಜಿ0134
ಕೆಎ33ಜಿ0252
ಕೆಎ33ಜಿ0067
ಕೆಎ33ಜಿ0104 ಇದಲ್ಲದೇ ಇನ್ನೂ ಹಲವು ಇಲಾಖೆಯಲ್ಲಿನ ವಾಹನಗಳ ಇನ್ಶೂರೆನ್ಸ್ ಮುಗಿದೂ ಹಲವು ವರ್ಷಗಳಾಗಿವೆ.

apvc-iconTotal Visits: 7
apvc-iconAll time total visits: 25358

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk October 17, 2023 October 17, 2023
Share This Article
Facebook Twitter Whatsapp Whatsapp Telegram Copy Link Print
Share
Previous Article ಅಕ್ರಮ ಸರಾಯಿ ಮಾರಾಟ ಮಾಲು ಜಪ್ತಿ ಪ್ರಕರಣ ದಾಖಲು
Next Article ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ | ಪರೀಕ್ಷಾರ್ಥಿಗಳು ಅಸಮಾಧಾನ

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube