ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಗ್ಯಾರಂಟಿ ಯೋಜನೆಗಳಿಂದ ಬೇರೆ ಅನುದಾನಗಳಿಗೆ ಅಡ್ಡಿಯಾಗುತ್ತಿದೆ- ಜಮೀರ್ ಅಹ್ಮದ್
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಗ್ಯಾರಂಟಿ ಯೋಜನೆಗಳಿಂದ ಬೇರೆ ಅನುದಾನಗಳಿಗೆ ಅಡ್ಡಿಯಾಗುತ್ತಿದೆ- ಜಮೀರ್ ಅಹ್ಮದ್
Latest NewsPolitics

ಗ್ಯಾರಂಟಿ ಯೋಜನೆಗಳಿಂದ ಬೇರೆ ಅನುದಾನಗಳಿಗೆ ಅಡ್ಡಿಯಾಗುತ್ತಿದೆ- ಜಮೀರ್ ಅಹ್ಮದ್

Satyakam NewsDesk
Last updated: 2025/11/01 at 7:49 PM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ವಿಜಯನಗರ:

ವಿಜಯನಗರದ ಕೂಡ್ಲಿಗಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಸಾರಿಗೆ ಸಚಿವ ಜಮೀರ್ ಅಹಮದ್ ಖಾನ್ ಮಾಡಿದ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಜನರಿಗೆ ನೇರ ಲಾಭವಾಗುತ್ತಿದ್ದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಕಷ್ಟವಾಗುತ್ತಿದೆ ಎಂಬ ಮಾತುಗಳನ್ನು ಈಗ ಸಚಿವರೇ ಬಾಯ್ಬಿಟ್ಟಿದ್ದಾರೆ.

ಸಭೆಯಲ್ಲಿ ಮಾತನಾಡಿದ ಜಮೀರ್‌ ಅಹಮದ್‌ ಖಾನ್ ಅವರು, ಪ್ರತಿ ವರ್ಷ ಗ್ಯಾರಂಟಿ ಯೋಜನೆಗಳಿಗೆ ಸುಮಾರು ₹55 ಸಾವಿರ ಕೋಟಿಯಿಂದ ₹60 ಸಾವಿರ ಕೋಟಿವರೆಗೆ ಅನುದಾನ ಬೇಕಾಗುತ್ತದೆ ಎಂದರು. ಈ ಮಹತ್ತರ ಮೊತ್ತವನ್ನು ಪೂರೈಸುವಲ್ಲಿ ಸರ್ಕಾರಕ್ಕೆ ಬರುವ ಒತ್ತಡವೇ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ತೊಂದರೆ ಉಂಟುಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ, ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸರನ್ನು ಹೊಗಳಿದ ಸಚಿವರು, “ನಮ್ಮ ಶಾಸಕರು ತಮ್ಮ ಕ್ಷೇತ್ರದ ಜನರಿಗಾಗಿ ಯಾವ ಮಟ್ಟಕ್ಕೂ ಹೋಗ್ತಾರೆ. ಅನುದಾನಕ್ಕಾಗಿ ಕಾಲಿಗೆ ಬಿದ್ದು ಕೇಳ್ತಾರೆ. ಅಣ್ಣ, ನಮ್ಮ ಕ್ಷೇತ್ರದ ಸಮಸ್ಯೆ ಪರಿಹರಿಸ್ಬೇಕು ಅಂತ ಮನವಿ ಮಾಡ್ತಾರೆ” ಎಂದು ಹೇಳಿದರು. ಆದರೆ ಇದೇ ಮಾತಿನ ಮಧ್ಯೆ ಗ್ಯಾರಂಟಿ ಯೋಜನೆಗಳಿಂದ ಅನುದಾನ ತಡೆಯಾಗುತ್ತಿದೆ ಎಂಬ ಅಂಶವನ್ನೂ ಅವರು ಅನಿವಾರ್ಯವಾಗಿ ಒಪ್ಪಿಕೊಂಡರು.

ಸಚಿವರ ಈ ಹೇಳಿಕೆ, ವಿಪಕ್ಷಗಳು ಹಲವು ದಿನಗಳಿಂದ ಮಾಡುತ್ತಿದ್ದ “ಗ್ಯಾರಂಟಿ ಯೋಜನೆಗಳ ಭಾರದಿಂದ ರಾಜ್ಯದ ಖಜಾನೆ ಬತ್ತಿದೆ, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ” ಎಂಬ ಆರೋಪಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಪಟುತೆ ಕುರಿತು ನಡೆಯುತ್ತಿದ್ದ ವಾದ ವಿವಾದಕ್ಕೆ ಇದೀಗ ಸರ್ಕಾರದ ಮಂತ್ರಿಯೇ ಬಲಪಡೆಯುವಂತಹ ಹೇಳಿಕೆ ಕೊಟ್ಟಿರುವುದು ವಿಶೇಷ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಜನಸಾಮಾನ್ಯರಲ್ಲಿ ಯೋಜನೆಗಳು ಜನಪ್ರಿಯವಾದರೂ, ಆಡಳಿತಾತ್ಮಕವಾಗಿ ಹಾಗೂ ಹಣಕಾಸು ನಿರ್ವಹಣೆಯ ದೃಷ್ಟಿಯಿಂದ ಹೊಸ ಸವಾಲುಗಳು ಎದುರಾದಂತಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಗಳು ರಾಜ್ಯದ ಅಭಿವೃದ್ಧಿ ಗತಿಯ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಅನ್ನುವುದನ್ನು ಕಾದು ನೋಡಬೇಕಿದೆ.

apvc-iconTotal Visits: 26
apvc-iconAll time total visits: 31921

You Might Also Like

“ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ

ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ

ಜಿಲ್ಲಾಧಿಕಾರಿಯ ಹೆಸರಿನಲ್ಲಿ ವಾಟ್ಸಪ್ ಮೂಲಕ ₹50 ಸಾವಿರ ವಂಚನೆ!

ಐಎಎಸ್, ಐಪಿಎಸ್ ಗುರಿ ಇಟ್ಟುಕೊಂಡು ಮುನ್ನಡೆಯಲು ಸಲಹೆ

TAGGED: Congress, Guarantee schemes, Kudlagi, Vijayanagar, Zameer Ahmed
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ
Next Article Jio–Google Offer:Gemini Pro AI Plan ಉಚಿತ!

Stay Connected

Facebook Like
Twitter Follow
Instagram Follow
Youtube Subscribe

Latest News

“ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ
Latest News Politics November 1, 2025
Jio–Google Offer:Gemini Pro AI Plan ಉಚಿತ!
Technology November 1, 2025
ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ
Entertainment October 31, 2025
ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ
ಯಾದಗಿರಿ October 31, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube