ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ 
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ 
Sports

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ 

Satyakam NewsDesk
Last updated: 2025/11/02 at 7:14 PM
By Satyakam NewsDesk
Share
2 Min Read
SHARE

ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಸೋಲಿನ ಕಹಿ ಅನುಭವಿಸಿದ ಭಾರತ ತಂಡ ಹೋಬರ್ಟ್‌ನಲ್ಲಿ ಅದ್ಭುತ ತಿರುಗೇಟು ನೀಡಿದೆ. ಐದು ಪಂದ್ಯಗಳ ಟಿ20 ಐ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಸರಣಿಯನ್ನು 1-1 ಸಮಬಲಕ್ಕೆ ತಂದಿದೆ. ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆಸ್ಟ್ರೇಲಿಯಾದ ಬಲಿಷ್ಠ ಬ್ಯಾಟಿಂಗ್ ಶಕ್ತಿಯನ್ನು 186 ರನ್‌ಗಳೊಳಗೆ ಕಟ್ಟಿಹಾಕುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಯಿತು.

ಹರ್ಷಿತ್ ರಾಣಾ ಅವರ ಬದಲಿಗೆ ತಂಡದಲ್ಲಿ ಅವಕಾಶ ಪಡೆದುಕೊಂಡ ಅರ್ಶದೀಪ್ ಸಿಂಗ್ ತಮ್ಮ ಆಯ್ಕೆಯೇ ಶತಪಾಲು ಲೇಸೆಂದು ಸಾಬೀತುಪಡಿಸಿದರು. ಆರಂಭದಲ್ಲೇ  ವೇಗ ಮತ್ತು  ಸ್ವಿಂಗ್‌ನಿಂದ ಆಸ್ಟ್ರೇಲಿಯಾ ಟಾಪ್ ಆರ್ಡರ್‌ನ್ನು ಪೆವಿಲಿಯನ್ ಸೇರುವಂತೆ ಮಾಡಿದರು. ತಮ್ಮ 4 ಓವರ್‌ಗಳಲ್ಲಿ ಕೇವಲ 27 ರನ್ ನೀಡಿ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಟಿಂ ಡೇವಿಡ್ (38 ಎಸೆತಗಳಲ್ಲಿ 74) ಹಾಗೂ ಮಾರ್ಕಸ್ ಸ್ಟೋಯ್ನಿಸ್ (42 ರನ್) ಮಾತ್ರ ಆಸ್ಟ್ರೇಲಿಯಾ ಪರ ಬ್ಯಾಟ್ ಬೀಸಿದರು ಇತರರು ಯಾವುದೇ ಪ್ರಭಾವ ಬೀರಲಿಲ್ಲ. ಆಸ್ಟ್ರೇಲಿಯಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿತು.

187 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ನೀಡಿದರು. ಕೇವಲ 16 ಎಸೆತಗಳಲ್ಲಿ 25 ರನ್ (2 ಬೌಂಡರಿ, 2 ಸಿಕ್ಸರ್) ಬಾರಿಸಿದ ಅವರು ಆಸ್ಟ್ರೇಲಿಯಾ ತಂಡದ ಬೌಲಿಂಗ್‌ನ್ನು ಮೊದಲ ಕ್ಷಣದಿಂದಲೇ ಒತ್ತಡಕ್ಕೆ ಸಿಲುಕಿಸಿದರು. ಆದರೆ ನೇಥನ್ ಎಲ್ಲಿಸ್ ಬೌಲಿಂಗ್‌ನಲ್ಲಿ ಕ್ಯಾಚ್ ನೀಡಿ ಪೆವಿಲಿಯನ್ ಕಡೆಗೆ ಸೇರಿದರು. ಆ ಬಳಿಕ ಶುಭಮನ್ ಗಿಲ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಪವರ್ ಪ್ಲೇನಲ್ಲಿ ಸ್ಕೋರ್‌ಬೋರ್ಡ್‌ನಲ್ಲಿ ಮೊತ್ತವನ್ನು ಹೆಚ್ಚಿಸಿದರು. ಸೂರ್ಯಕುಮಾರ್ ಕೇವಲ 11 ಎಸೆತಗಳಲ್ಲಿ 24 ರನ್ ಗಳಿಸಿ ತಂಡಕ್ಕೆ ಹಿನ್ನಡೆ ಆಗದಂತೆ ನೋಡಿಕೊಂಡರು.

ಮಧ್ಯ ಕ್ರಮಾಂಕದಲ್ಲಿ ತಿಲಕ್ ವರ್ಮಾ (26 ಎಸೆತಗಳಲ್ಲಿ 29) ಮತ್ತು ಅಕ್ಷರ್ ಪಟೇಲ್ (12 ಎಸೆತಗಳಲ್ಲಿ 17) ಇಬ್ಬರೂ ಕೂಡ ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡರು. ಭಾರತ ತಂಡ ಮಧ್ಯದ ಹಂತದಲ್ಲಿ ಸ್ವಲ್ಪ ಸಂಕಷ್ಟಕ್ಕೆ ಸಿಲುಕಿದರೂ, ಆ ವೇಳೆ ವಾಶಿಂಗ್ಟನ್ ಸುಂದರ್ ತಂಡದ ನಂಬಿಗಸ್ತರಾಗಿ ಆಟವಡಿದರು. 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಸುಂದರ್ ತಮ್ಮ ಸಮತೋಲನ ಮತ್ತು ಶಾಂತ ಬ್ಯಾಟಿಂಗ್‌ನಿಂದ ಪಂದ್ಯದ ಗತಿ ಸಂಪೂರ್ಣವಾಗಿ ಭಾರತ ಪರ ತಿರುಗಿಸಿದರು. ಅವರಿಗೆ ಜಿತೇಶ್ ಶರ್ಮಾ ತಕ್ಕ ಬೆಂಬಲ ನೀಡಿದರು. ಈ ಜೋಡಿ ಆಸ್ಟ್ರೇಲಿಯಾದ ಗೆಲುವಿನಾಸೆಗೆ ತಣ್ಣೀರೆರಚಿ 9 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ತಲುಪಿಸಿತು.

ಆಸ್ಟ್ರೇಲಿಯಾದ ಬೌಲರ್‌ಗಳಲ್ಲಿ ಎಲ್ಲಿಸ್ ಮತ್ತು ಸ್ಟೋಯ್ನಿಸ್ ತಲಾ ಎರಡು ವಿಕೆಟ್ ಪಡೆದರೂ, ಭಾರತದ ದೃಢ ಮನೋಭಾವದ ಮುಂದೆ ಅವರು ಅಸಹಾಯಕರಾದರು. ಪಂದ್ಯದಲ್ಲಿನ ಅತೀ ಪ್ರಮುಖ ಪಾತ್ರ ವಹಿಸಿದ ಅರ್ಶದೀಪ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

 

ಈ ಜಯದೊಂದಿಗೆ ಹೋಬರ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಅಪರೂಪದ ಸಾಧನೆ ಭಾರತ ಮಾಡಿದೆ. ಹೋಬರ್ಟ್ ಕ್ರೀಡಾಂಗಣದಲ್ಲಿ ಕಳೆದ ಐದು ಪಂದ್ಯಗಳಲ್ಲೂ ಗೆಲುವು ಕಂಡಿದ್ದ ಆಸ್ಟ್ರೇಲಿಯಾ ಈ ಬಾರಿ ಸೋಲಿನ ರುಚಿ ಕಂಡಿದೆ.

apvc-iconTotal Visits: 3
apvc-iconAll time total visits: 32009

You Might Also Like

ಭಾರತದ ಮಹಿಳಾ ತಂಡ ಫೈನಲ್‌ಗೆ; ಆಸ್ಟ್ರೇಲಿಯಾ ಮಣಿಸಿ ಇತಿಹಾಸಿಕ ಗೆಲುವು

“ಮೇಡಂ, ನಿಮ್ಮ ಹಸ್ಬೆಂಡ್ ತುಂಬಾ ಒರಟ” – ಕೆಎಲ್ ರಾಹುಲ್

Asia Cup trophy controversy: ಬಿಸಿಸಿಐನಿಂದ ಮೊಹ್ಸಿನ್ ನಖ್ವಿಗೆ ಕಠಿಣ ಎಚ್ಚರಿಕೆ!

ಅಡಿಲೇಡ್‌ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿರುವ ಕಿಂಗ್ ಕೊಹ್ಲಿ!

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!

TAGGED: Arshdeep singh, India beat Australia, India vs Australia, Washington Sundar
Satyakam NewsDesk November 2, 2025 November 2, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ನಿಯಮ ಮೀರಿ ಕಟ್ಟಿದ ಕಟ್ಟಡಗಳಿಗೆ ದೊಡ್ಡ ರಿಲೀಫ್
Next Article ತೆಂಗಿನಕಾಯಿ ಚಿಪ್ಪಿಗೂ ಹೆಚ್ಚಿದ ಬೇಡಿಕೆ!

Stay Connected

Facebook Like
Twitter Follow
Instagram Follow
Youtube Subscribe

Latest News

Karnataka Examinations Authority Recruitment: ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಅವಕಾಶ!
JOBS November 2, 2025
ಸಕ್ಕರೆ ಹೆಚ್ಚಾದಾಗ ದೇಹ ನೀಡುವ ಎಚ್ಚರಿಕೆ ಲಕ್ಷಣಗಳು
Health November 2, 2025
ತೆಂಗಿನಕಾಯಿ ಚಿಪ್ಪಿಗೂ ಹೆಚ್ಚಿದ ಬೇಡಿಕೆ!
Special News November 2, 2025
ನಿಯಮ ಮೀರಿ ಕಟ್ಟಿದ ಕಟ್ಟಡಗಳಿಗೆ ದೊಡ್ಡ ರಿಲೀಫ್
Govt Schemes November 2, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube