ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ 
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ 
ಯಾದಗಿರಿ

ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ 

ಕನ್ನಡ ನಾಡು ನುಡಿ ನೆಲ ಜಲದ ಭಾಷೆ ವಿಷಯಕ್ಕಾಗಿ ಎಲ್ಲರೂ ಹೋರಾಟ ಮಾಡಬೇಕು ಎಂದು ಲಕ್ಷ್ಮಿಪುರ ಶ್ರೀಗಿರಿ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

Satyakam NewsDesk
Last updated: 2025/10/21 at 8:30 PM
By Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಸುರಪುರ:

ಕನ್ನಡ ನಾಡು ನುಡಿ ನೆಲ ಜಲದ ಭಾಷೆ ವಿಷಯಕ್ಕಾಗಿ ಎಲ್ಲರೂ ಹೋರಾಟ ಮಾಡಬೇಕು ಎಂದು ಲಕ್ಷ್ಮಿಪುರ ಶ್ರೀಗಿರಿ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ನಗರದ ಟೈಲರ್ ಮಂಜಿಲ್‌ನಲ್ಲಿ ನಡೆದ ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಭೀಮು ನಾಯಕ ಕಳೆದ ಅನೇಕ ವರ್ಷಗಳಿಂದ ಕನ್ನಡಪರ ಹೋರಾಟಗಾರನಾಗಿದ್ದು ಮುಂದೆಯೂ ಉತ್ತಮವಾದ ಸಂಘಟನೆಯನ್ನು ಜಿಲ್ಲೆಯಲ್ಲಿ ಬೆಳೆಸಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮಿತಿಯ ರಾಜ್ಯಾಧ್ಯಕ್ಷ ಗುರುದೇವ ನಾರಾಯಣ ಕುಮಾರ ಮಾತನಾಡಿ, ಕನ್ನಡ ನಾಡು ನುಡಿ ಇಂದು ತುಂಬಾ ಅಪಾಯದಲ್ಲಿದೆ ಇದನ್ನು ರಕ್ಷಣೆ ಮಾಡುವ ಜವಾಬ್ದಾರಿ ಕನ್ನಡಿಗರಿಗೆ ಇದ್ದು, ಮ.ರಾ.ಮೂರ್ತಿ, ವಿ.ಕೃ ಗೋಕಾಕ ಡಾ.ರಾಜಕುಮಾರ್,ವಾಟಾಳ

ನಾಗರಾಜ್, ಜಿ ನಾರಾಯಣ ಕುಮಾರ್ ಸೇರಿದಂತೆ ಹಲವು ಮಹನೀಯರು ಕನ್ನಡಕ್ಕಾಗಿ ದುಡಿದಿದ್ದಾರೆ ಅಂತವರಿಂದ ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿ ಆರಂಭಗೊಂಡಿದೆ ಎಂದರು.

ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡ ಭೀಮು ನಾಯಕ ಮಲ್ಲಿಬಾವಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲರ ಸಹಕಾರದೊಂದಿಗೆ ಸಂಘಟನೆಯನ್ನು ಬೆಳೆಸುವುದಾಗಿ ತಿಳಿಸಿದರು.

ಪ್ರಸ್ತಾವಿಕವಾಗಿ ಸಾಹಿತಿ ಅಶೋಕ ಚೌಧರಿ ಮಾತನಾಡಿ, 80ರ ದಶಕದಲ್ಲಿ ಕನ್ನಡಕ್ಕೆ ಪಕ್ಕದ ರಾಜ್ಯಗಳ ಭಾಷೆಗಳು ಏರಿಕೆಯಾಗುತ್ತಿದ್ದ ಸಂದರ್ಭದಲ್ಲಿ ಜಿ ನಾರಾಯಣ ಕುಮಾರ್ ಅವರು ರಾಜ್ಯದಲ್ಲಿ ಕನ್ನಡಿಗರನ್ನು ಸಂಘಟಿಸುವ ಜೊತೆಗೆ ದೊಡ್ಡಮಟ್ಟದಲ್ಲಿ ಹೋರಾಟವನ್ನು ನಡೆಸಿ ಕನ್ನಡ ಕಾಯುವ ಕೆಲಸವನ್ನು ಮಾಡಿದ್ದಾರೆ ಎಂದರು.

ರಾಜ್ಯಾಧ್ಯಕ್ಷ ಗುರುದೇವ ನಾರಾಯಣ ಕುಮಾರ್ ಆಗಮಿಸುತ್ತಿದ್ದಂತೆ ನಗರದಲ್ಲಿ ಅದ್ದೂರಿ ಬೈಕ್ ರ್ಯಾಲಿ ಮೂಲಕ ಸ್ವಾಗತಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕರವೇ ತಾಲೂಕಾಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ, ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಕೊಟ್ರೇಶ ಚೌಧರಿ ಮಾತನಾಡಿದರು.ಯಲ್ಲಪ್ಪ ನಾಯಕ ಮಲ್ಲಿಬಾವಿ ನೇತೃತ್ವ ವಹಿಸಿದ್ದರು. ವಾಲ್ಮೀಕಿ ನಾಯಕ ಸಂಘದ ತಾಲೂಕ ಅಧ್ಯಕ್ಷ ಭೀಮನಗೌಡ ಲಕ್ಷ್ಮಿ, ಸಮಿತಿಯ ಮುಖಂಡ ರಾಜಣ್ಣ ಉಪಸ್ಥಿತರಿದ್ದರು.ಮಹೇಶ ಗಂಜಿ ಸ್ವಾಗತಿಸಿ ನಿರೂಪಿಸಿದರು, ಪತ್ರಕರ್ತ ಪರಶುರಾಮ ಮಲ್ಲಿಬಾವಿ ವಂದಿಸಿದರು. ಸಂಘಟನೆಯ ಅನೇಕ ಮುಖಂಡರು ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು.

ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ಭೀಮು ಹೆಚ್.ನಾಯಕ ಅವರನ್ನು ನೇಮಕಗೊಳಿಸಿ ನೇಮಕಾತಿ ಪತ್ರವನ್ನು ಸ್ವಾಮೀಜಿಗಳ ಮೂಲಕ ನೀಡಿ ಗೌರವಿಸಲಾಯಿತು.
apvc-iconTotal Visits: 11
apvc-iconAll time total visits: 33203

You Might Also Like

ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು

ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

ಐಎಎಸ್, ಐಪಿಎಸ್ ಗುರಿ ಇಟ್ಟುಕೊಂಡು ಮುನ್ನಡೆಯಲು ಸಲಹೆ

ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ದಿನೇಶ್, ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Satyakam NewsDesk October 21, 2025 October 21, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ – ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ 
Next Article ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು

Stay Connected

Facebook Like
Twitter Follow
Instagram Follow
Youtube Subscribe

Latest News

ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು
Crime ಯಾದಗಿರಿ December 4, 2025
ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್! ಪ್ರಯಾಣದ ವೇಳೆ ಫೋನ್‌ ಮೂಲಕ ಅಪಾಯಕಾರಿ ಪ್ರದೇಶಗಳ ಬಗ್ಗೆ ಎಚ್ಚರಿಕೆ!
Technology December 4, 2025
ಸಂಚಾರ್ ಸಾಥಿ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
Technology December 3, 2025
ಆರ್‌ಎಸ್‌ಎಸ್ ವಿರೋಧಿಸಿ, ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನ.25ರಂದು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
Latest News November 20, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube