ಸತ್ಯಕಾಮ ವಾರ್ತೆ ಯಾದಗಿರಿ:
ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ
ಸಮರ್ಪಕವಾಗಿ ತಲುಪಿಸಬೇಕು ಹಾಗೂ ಸೌಲಭ್ಯ ವಂಚಿತ ಫಲಾನುಭವಿಗಳ ಮನೆ ಮನೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು
ಮುಂದಿನದಿನಗಳಲ್ಲಿ ಬಡ ಜನರ ಮನೆಯ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲೂಕು ಮಟ್ಟದ ಅಧಿಕಾರಿಗಳು
ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ
ಬಸವರಾಜ ಭಾಗ್ಲಿ ಅವರು ಹೇಳಿದರು.
ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜು.16 ರಂದು ಯಾದಗಿರಿ ತಾಲೂಕ ಪಂಚಾಯತ
ಸಭಾಂಗಣದಲ್ಲಿ ನಡೆದ ತಾಲೂಕ ಮಟ್ಟದ ಪ್ರಗತಿ ಪರಿಶೀಲನ ಸಭೆಯ ಅಧ್ಕಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅಧಿಕಾರಿಗಳಲ್ಲಿ ಸೇವಾ
ಮನೋಭಾವ ಇರಬೇಕು. ಸಮಾಜದಲ್ಲಿ ಇನ್ನು ಅನೇಕರು ಅಗತ್ಯ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂಬುದನ್ನು
ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ
ಸೂಚಿಸಿದರು.
ಸರಕಾರ ಗೃಹಜ್ಯೋತಿ ಯೋಜನೆಯಡಿ ನೀಡಿದ 200 ಯುನಿಟ್ ಮಿತಿಯೋಳಗೆ ವಿದ್ಯುತ್ ಬಳಕೆ ಮಾಡುವ ಗ್ರಾಹಕರ ಸಂಖ್ಯೆ
ಹೆಚ್ಚಿರುವದರಿಂದ, ಪ್ರತಿ ಮನೆಗೂ ಮೀಟರ್ ಅಳವಡಿಕೆ ಮಾಡಿಕೊಳ್ಳುವಂತೆ ಗ್ರಾಹಕರಿಗೆ ಮನವರಿಕೆ ಮಾಡುವ ಮೂಲಕ ವಿದ್ಯುತ್
ಸೋರಿಕೆಯನ್ನು ತಡೆಯಬಹುದು ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
- Advertisement -
ಪಡಿತರ ಚೀಟಿ ನೋಂದಣಿ ನಿಯಮಾನುಸಾರ ನೋಂದಣಿಯಾಗಬೇಕು ಮತ್ತು ಪಾರದರ್ಶಕವಾಗಿ ನೋಂದಣಿ ಮಾಡಿಕೋಳ್ಳಬೇಕು
ಎಕೆಂದರೆ ಸರ್ಕಾರದ ಬೇರೆ ಯೋಜನೆಗಳ ಸೌಲಭ್ಯ ಪಡೆದುಕೋಳ್ಳಲು ಈ ಪಡಿತರ ಚೀಟಿಯನ್ನೆ ಕುಟುಂಬ ಎಂದು ಗುರುತಿಸಿ
ಸೌಲಭ್ಯ ಪಡೆಯಲಾಗುವುದು.ಎಲ್ಲಾ ಪಡಿತರ ಚೀಟಿ ಹೊಂದಿದ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿಯ ಪಡಿಯುತ್ತಿದಾರೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದರು.
ಅಧ್ಯಕ್ಷರು ಕೆಲವು ನ್ಯಾಯಾಬೇಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳು ಕಡಿತ ಮಾಡಿಕೊಳ್ಳುತ್ತಿದ್ದು ತಾವುಗಳು ಪ್ರತಿ ನ್ಯಾಯಾಬೆಲೆ
ಅಂಗಡಿಗಳಿಗೆ ಬೇಟಿ ನೀಡಿ ಪರಿಶೀಲಿಸಿ ಇನ್ನುಳಿದ ಫಲಾನುಭವಿಗಳ ಮನೆಗೆ ಭೆಟಿ ನೀಡಿ ದಾಖಲಾತಿಗಳನ್ನಿ ಸರಿಪಡಿಸಿಕೋಂಡು
ಮುಂದಿನ ತಿಂಗಳಿನಿAದ ಅವರಿಗೆ ಸೌಲಭ್ಯ ದೊರಕುವಂತೆ ಮಾಡಬೇಕೆಂದು ಹೇಳಿದರು.
ಯುವನಿಧಿ 2022-23 ಮತ್ತು 2023-24 ನೇ ಸಾಳಿನಲ್ಲಿ ಉತ್ತಿರ್ಣರಾದ ಡಿಪ್ಲೋಮೊ ಹಾಗೂ ಪದವಿದರರಿಗೆ ಆರು ತಿಂಗಳವರೆಗೆ
ಯಾವುದೇ ಸರ್ಕಾರಿ ಅರೇ ಅರ್ಕಾರಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ವ್ಯಾಪಾರ ವಹಿವಾಟು ಮಾಡದೆ ಇರುವ ಪದವಿದರರಿಗೆ ಡಿಪ್ಲೋಮೊ ೧೫೦೦ ಹಾಗೂ ಪದವಿದರರಿಗೆ ೩೦೦೦ ರೂ. ನೀಡಲಾಗುವುದು. ಪ್ರಸ್ತುತ ಜಿಲ್ಲೆಯಲ್ಲಿ1652 ಜನರಿಗೆ ಈ ಸೌಲಭ್ಯ ಪಡೆಯುತ್ತಿದ್ದಾರೆ.
ಮಹಿಳೆಯರು ರಾಜ್ಯದ ಮೂಲೆ-ಮೂಲೆಗಳಿಗೆ ಉಚಿತ ಪ್ರವಾಸ ಮಾಡುತಿದ್ದಾರೆ. ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ
ಮಹಿಳೆಯರಿಗೆ ಅಂತರ್ ರಾಜ್ಯ ಸಾರಿಗೆ ಬಸ್, ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್ಗಳಲ್ಲಿ
ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದು, ಆದಾರ್ ಕಾರ್ಡ್ ತೋರಿಸಿ ಮಹಿಳಾ ಪ್ರಯಾಣಿಕರು ಬಸ್ಗಳಲ್ಲಿ
ಉಚಿತವಾಗಿ ಪ್ರಯಾಣಿಸಲು ಕ್ರಮವಹಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗೆ ನಿರ್ದೇಶಿಸಿದರು.
ಅಧ್ಯಕ್ಷರು ಹಾಗೂ ಸದಸ್ಯರು ನಿರ್ವಾಹಕರು ಹಾಗೂ ಚಾಲಕರು ಮಹಿಳಾ ಪ್ರಯಾಣಿಕರನ್ನು ಗೌರವದಿಂದ ನೋಡಿಕೊಳ್ಳಲು
ಅಧಿಕಾರಿಗೆ ಸೂಚಿಸಿದರು.
- Advertisement -
ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ,
ಯಾವ ಕಾರಣಕ್ಕಾಗಿ ಸೌಲಭ್ಯ ದಕ್ಕುತ್ತಿಲ್ಲದ ಫಲಾನುಭವಿಗಳ ಮನೆಗೆ ಭೇಟಿ ನೀಡಿ ದಾಖಲಾತಿಗಳನ್ನು ತೆಗೆದುಕೊಂಡು ಮುಂದಿನ
ದಿನಗಳಲ್ಲಿ ಸೌಲಭ್ಯಗಳು ಸಿಗುವಂತೆ ಮಾಡಬೇಕು. ಎಂದು ಸಭೆಯಾಲ್ಲಿ ಪ್ರಾಸ್ತಾಪ ಆಗಿರುವ ಎಲ್ಲ ಸಮಸ್ಯೆಗಳಿಗೆ ಮುಂದಿನ ಸಭೆ
ಹೊತ್ತಿಗೆ ಸಂಪೂರ್ಣ ಮಾಹಿತಿಯೊಂದಿಗೆ ಪ್ರತಿ ಇಲಾಖಾ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಿದರು.
ಈ ವೇಳೆ ಯಾದಗಿರಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾದೇವ ಬಾಬಳಗಿ, ವ್ಯವಸ್ಥಾಪಕರು ಶಿವರಾಯ ಗುಂಡಗುರ್ತಿ, ಐದು ಗ್ಯಾರಂಟಿ ಯೋಜನೆಗಳ ತಾಲೂಕ ಸಮಿತಿ ಸದಸ್ಯರುಗಳು ಹಾಗೂ ಐದು ಇಲಾಖೆಯ
ಅಧಿಕಾರಿಗಳು ಭಾಗವಹಿಸಿದ್ದರು.

